Subscribe to Updates
Get the latest creative news from FooBar about art, design and business.
- ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
- ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
- ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
- ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್ ಗೌಡ
- ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
- ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
Author: admin
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಾಲ್ಕನೇ ಅಲೆಯ ಭೀತಿಯ ನಡುವೆ ಸಾರ್ವಜನಿಕ ಪ್ರದೇಶಗಳಲ್ಲಿ “ಮಾಸ್ಕ್” ಧರಿಸುವಿಕೆಯನ್ನು ಬಿಬಿಎಂಪಿ ಕಡ್ಡಾಯಗೊಳಿಸಿದೆ. ಹೊರಾಂಗಣ ಚಟುವಟಿಕೆ, ಶಾಪಿಂಗ್ ಮಾಲ್,ವಾಣಿಜ್ಯ ಸಂಕೀರ್ಣ, ಬಸ್, ರೈಲ್ವೆ ನಿಲ್ದಾಣಗಳು, ಆಸ್ಪತ್ರೆ, ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದರ ಮೇಲೆ ನಿಗಾ ಇರಿಸಲು ಬಿಬಿಎಂಪಿ ಮಾರ್ಷಲ್ಗಳು ಇಂದಿನಿಂದ ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ. ಈ ಕುರಿತು ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ವಿಶೇಷ ಆಯುಕ್ತ ಹರೀಶ್ಕುಮಾರ್, ನಾಲ್ಕನೇ ಅಲೆ ಬರುವ ಮುನ್ಸೂಚನೆ ಹಿನ್ನೆಲೆ ಬಿಬಿಎಂಪಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಇಂದಿನಿಂದ ಮಾರ್ಷಲ್ಗಳು ಮಾಸ್ಕ್ ಧರಿಸುವ ಕುರಿತು ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ ಎಂದರು. ಸದ್ಯ ಸರ್ಕಾರದ ನಿರ್ದೇಶನ ಅನ್ವಯ ಮಾಸ್ಕ್ ಸಂಬಂಧ ಯಾವುದೇ ದಂಡವನ್ನು ಪಾಲಿಕೆ ಹಾಕುತ್ತಿಲ್ಲ.ಆದರೆ, ಸಾರ್ವಜನಿಕರು ನಿರ್ಲಕ್ಷ್ಯ ತೋರದೆ, ಮಾಸ್ಕ್ ಧರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು. ಇನ್ನೂ, ನಗರದಲ್ಲಿ ಜನಸಂಖ್ಯೆ ಪ್ರಮಾಣ ಹೆಚ್ಚು ಕಡೆಗಳಲ್ಲಿ ಕೋವಿಡ್…
ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗಿದ್ದ ಕೊರೊನಾ ಸೋಂಕು ಸಂಖ್ಯೆ ಮತ್ತೆ ಏರಿಕೆಯಾಗಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆತಂಕಕ್ಕೆ ಗುರಿಮಾಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 4,518 ಸೋಂಕು ಪ್ರಕರಣಗಳು ಕಾಣಿಸಿಕೊಂಡಿದೆ. 9 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 25,782 ಕ್ಕೆ ಏರಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಒಟ್ಟು ಶೇಕಡವಾರು ಪ್ರಕರಣ ಶೇ. 0.06 ಪ್ರತಿಶತಕ್ಕೆ ಇಳಿದಿದೆ. ಅಲ್ಲದೇ ಚೇತರಿಕೆ ಒಟ್ಟು ದರ ಶೇ.98.73ಕ್ಕೆ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿತರ ಸಂಖ್ಯೆ 4,31,81,335ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಇದುವರೆಗೆ 4,26,30,852 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ, ಸಾವನ್ನಪ್ಪಿದವರ ಸಂಖ್ಯೆ 5,24,701ಕ್ಕೆ ಹೆಚ್ಚಳವಾಗಿದೆ ಎಂದು ಅಧಿಕೃತ ಮಾಹಿತಿಯಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಗಳ ಸಂಖ್ಯೆ 25,782 ಮಂದಿಯಲ್ಲಿ ಇದೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಕೇಂದ್ರ ಸರ್ಕಾರ ಮತ್ತು…
ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬ ಶಂಕಿತನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇವೇಂದ್ರ ಅಲಿಯಾಸ್ ಕಾಲಾ ಎಂದು ಗುರುತಿಸಲಾಗಿದ್ದು, ಮೇ ೨೯ ರಂದು ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಪಂಜಾಬಿ ಗಾಯಕನನ್ನು ಕೊಂದ ಶೂಟರ್ಗಳಿಗೆ ವಾಹನವನ್ನು ಒದಗಿಸಿದ ಶಂಕೆ ಇದೆ. ಮೂಸೆವಾಲಾ ಹತ್ಯೆಗೂ ಮುನ್ನ ದೇವೇಂದ್ರ ಎರಡು ಶಂಕಿತ ಕೊಲೆಗಾರರಾದ ಕೇಶವ್ ಮತ್ತು ಚರಂಜೀತ್ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಸದ್ಯ ದೇವೇಂದ್ರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಫತೇಪುರ್ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆದಿದೆ. ಮತ್ತೊಂದೆಡೆ, ಪಂಜಾಬ್ ಪೊಲೀಸ್ ಮತ್ತು ಫತೇಹಾಬಾದ್ ಪೊಲೀಸರ ಜಂಟಿ ತಂಡವು ದಾಳಿಯ ಸಂದರ್ಭದಲ್ಲಿ ಪವನ್ ಬಿಷ್ಣೋಯ್ ಮತ್ತು ನಸೀಬ್ ಖಾನ್ ಎಂಬ ಯವಕರರನ್ನು ಭಿರ್ದಾನದಿಂದ ಜೂನ್ ೨ ರಂದು ಬಂಧಿಸಿತ್ತು. ಇನ್ನೂ, ಪಂಜಾಬ್ ಪೊಲೀಸ್ ಮತ್ತು ದೆಹಲಿ ಪೊಲೀಸರ ಜಂಟಿ ತಂಡವು ಲಾರೆನ್ಸ್ ಗ್ಯಾಂಗ್ನ ೮ ಶೂಟರ್ಗಳಿಗಾಗಿ ಲುಕ್ಔಟ್ ಹೊರಡಿಸಿದೆ.…
ಮಾದಕ ವಸ್ತು ಗಾಂಜಾ ಹಾಗೂ ಚಿರತೆ ಚರ್ಮ ಮಾರಾಟ ದಂಧೆಯಲ್ಲಿ ತೊಡಗಿದ್ದ ಕುಖ್ಯಾತ ರೌಡಿ ಧನ್ ರಾಜ್ ನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಭಾರತೀನಗರ ಪೊಲೀಸ್ ಠಾಣೆಯ ರೌಡಿಶೀಟರ್ ಧನ್ ರಾಜ್ (30)ನಿಂದ 10 ಲಕ್ಷ ಮೌಲ್ಯದ ಚಿರತೆ ಚರ್ಮ ಹಾಗೂ 8 ಸಾವಿರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಅವರು ತಿಳಿಸಿದ್ದಾರೆ. ಭಾರತೀನಗರ ಪ್ರದೇಶವೊಂದರಲ್ಲಿ ಆರೋಪಿಯು ಚಿರತೆಯ ಚರ್ಮದ ಜೊತೆಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ಕೈಗೊಂಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯ ವಿರುದ್ಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಅಲ್ಲದೇ ವೈಲ್ಡ್ ಲೈಫ್ ಪ್ರೊಟೆಕ್ಷನ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಹಿರಿಯೂರು: ಭಾನುವಾರ ಸುರಿದ ಮಳೆಯಿಂದಾಗಿ ನಗರದಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಮಳೆಗೆ ಕೆಲವರು ಸೂರು ಕಳೆದುಕೊಂಡಿದ್ದು, ರೈತರ ದವಸ ಧಾನ್ಯ ಹಾಗೂ ಅಂಗಡಿಗಳ ಒಳಗಡೆ ಸಹ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಇಲ್ಲಿನ ಸಾರ್ವಜನಿಕರು ತಿಳಿಸಿದ್ದಾರೆ. ಹಿರಿಯೂರು ತಾಲ್ಲೂಕಿನಾದ್ಯಾಂತ ಭಾನುವಾರ ಮಧ್ಯರಾತ್ರಿ ಸುರಿದ ಮಳೆ ಜನರ ನಿದ್ರೆಗೆಡಿಸಿದೆ. ಮಳೆ ನೀರು ಆಯಕಟ್ಟಿನ ಪ್ರದೇಶಗಳಲ್ಲಿ ಮನೆ ಒಳಗೆ ನುಗ್ಗಿದ ಪರಿಣಾಮ ರಾತ್ರಿ ಪೂರ್ತಿ ನಿದ್ದೆ ಮಾಡದೆ ನೀರನ್ನು ಹೊರ ಹಾಕುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ಕೆಲವೆಡೆ ಎಲ್ಲಿ ಮನೆಗಳು ಬೀಳಲಿವೆ ಎಂಬ ಆತಂಕ ಜನರಲ್ಲಿ ಮನೆಮಾಡಿತ್ತು. ಅದೇ ರೀತಿ ನಗರದ ಕೆ.ಎಮ್.ಕೊಟ್ಟಿಗೆ, ನಂಜಯ್ಯನ ಕೊಟ್ಟಿಗೆಗಳಲ್ಲಿ ಹಾಗೂ ವಿವಿಧೆಡೆ ಚರಂಡಿ ಒಡೆದು ಮನೆಗಳ ಒಳಗಡೆ ನೀರು ನುಗ್ಗಿದೆ. ಮಳೆಯ ನೀರು ತಗ್ಗು ಪ್ರದೇಶಕ್ಕೆ ನುಗ್ಗಿದ್ದರಿಂದ ವಾಹನಗಳು ನೀರಿನಲ್ಲಿ ಮುಳುಗಿದ್ದು, ಸಿ.ಎಮ್.ಲೇಔಟ್ ನಲ್ಲಿರುವ ಅಂಗನವಾಡಿ ಕೇಂದ್ರ ನೀರಿನಲ್ಲಿ ಮುಳುಗಿದೆ. ಘಟನೆ ಸಂಬಂಧ ನಮ್ಮತುಮಕೂರು ಜೊತೆಗೆ ಮಾತನಾಡಿದ ಸಾರ್ವಜನಿಕರು, ರಾತ್ರಿಯಿಡೀ ಮಳೆ…
ಗುಬ್ಬಿ: ತಾಲ್ಲೂಕಿನ ದೊಡ್ಡ ಕಟ್ಟೀಗೆನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ ಪರಿಣಾಮ 8 ಕುರಿಗಳ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಶಿವಣ್ಣ ಎಂಬವರಿಗೆ ಸೇರಿದ ರೊಪ್ಪದಲ್ಲಿ ಇದ್ದ ಒಟ್ಟು 10 ಕುರಿಗಳ ಮೇಲೆ ಚಿರತೆ ದಾಳಿ ಮಾಡಿದ್ದು, 8 ಕುರಿಗಳನ್ನು ಕೊಂದು ಹಾಕಿದೆ. ಘಟನೆಯಲ್ಲಿ ಎರಡು ಕುರಿಗಳು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದೆ. ಈ ಭಾಗದಲ್ಲಿ ಹಲವು ಬಾರಿ ಚಿರತೆ ದಾಳಿ ನಡೆದರೂ, ಅರಣ್ಯ ಇಲಾಖೆ ಕ್ರಮವಹಿಸುತ್ತಿಲ್ಲ. ಹೀಗಾಗಿ ಮತ್ತೆ ಮತ್ತೆ ಇಂತಹ ಘಟನೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಮಧುಗಿರಿ: ರಾಜೀವ್ ಗಾಂಧಿ ಕ್ರೀಡಾಂಗಣದ ಹಿಂಭಾಗದ ಜಮೀನಿನಲ್ಲಿ ಸುಮಾರು 30 ಕೋತಿಗಳನ್ನು ಜಮೀನಿನ ಮಾಲಿಕ ಕುಮಾರ್ ಅವರು ಹಿಡಿದು ತೆಂಗಿನ ತೋಟದಲ್ಲಿ ಬೋನ್ ನಲ್ಲಿ ಕೂಡಿ ಹಾಕಿರುವ ಘಟನೆ ನಡೆದಿದೆ. ಬೋನಿನಲ್ಲಿ ಕೋತಿಗಳು ಹಿಂಸೆಗೆ ತಾಳಲಾರದೆ ಒಂದಕ್ಕೊಂದು ಕಿತ್ತಾಡಿಕೊಂಡು ಪರಸ್ಪರ ಗಾಯ ಮಾಡಿಕೊಂಡು ಬೋನಿನಲ್ಲಿ ನರಳುತ್ತಿದ್ದ ದೃಶ್ಯ ಕಂಡುಬಂದಿದ್ದು, ಈ ದೃಶ್ಯವನ್ನು ಕಂಡ ವಾಲ್ಮೀಕಿ ನಗರದ ನಿವಾಸಿಯಾದ ಯುವಕರು ಜನರ ಸಹಯೋಗದಿಂದ ರಮೇಶ್ ಸಾರ್ ಇಂದು ಮುಖಂಡ ಚಂದ್ರಶೇಖರ್, ಮಂಜುನಾಥ್ ಶಿವರಾಜ್ ಅವರಿಗೆ ತಿಳಿಸಿದ್ದು, ಅವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಕೋತಿಗಳನ್ನು ಬೋನಿನ ಮೂಲಕ ಬೇರೆ ಕಡೆಗೆ ರವಾನಿಸಿದ್ದು, ಬೋನಿನಿಂದ ಬಿಡುಗಡೆ ಮಾಡಿದ್ದಾರೆ. ಇನ್ನೂ ಜಮೀನಿನ ಮಾಲಿಕ ಕುಮಾರ್ ಕೋತಿಗಳನ್ನು ಬೋನಿನಲ್ಲಿ ಕೂಡಿ ಹಾಕಿ ಹಿಂಸಿಸುತ್ತಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೊರಟಗೆರೆ ತಾಲ್ಲೂಕಿನ ವೆಂಗಳಮ್ಮನಹಳ್ಳಿಯಲ್ಲಿ ರಸ್ತೆ ಬದಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಎಲೆರಾಂಪುರ ಮಠದ ಶ್ರೀ ಹನುಮಂತನಾಥ ಸ್ವಾಮಿಗಳು, ಕಾಂಗ್ರೆಸ್ ಪಕ್ಷದ ವಕ್ತಾರರಾದ ಮುರಳೀಧರ ಹಾಲಪ್ಪ, ಶ್ರೀರಾಮ ಸೇವಾ ಟ್ರಸ್ಟ್ ಮುಖ್ಯಸ್ಥರು, ವಲಯ ಅರಣ್ಯಾಧಿಕಾರಿ ಸುರೇಶ್ ಹಾಜರಿದ್ದರು. ಬೀಜ ಬಿತ್ತನೆ ಕಾರ್ಯಕ್ರಮವನ್ನು ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಗೊಂದಿಹಳ್ಳಿ ಗ್ರಾಮದ ಅರಣ್ಯ ಸಮಿತಿಯ ಸಹಕಾರದಿಂದ ಹೀರೆಬೆಟ್ಟ ರಕ್ಷಿತ ಅರಣ್ಯ ಪ್ರದೇಶದಲ್ಲಿ ವಿವಿಧ ಜಾತಿಯ ಬೀಜಗಳನ್ನು ಬಿತ್ತನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಗೊಂದಿಹಳ್ಳಿ ರಂಗರಾಜ್, ಅರಣ್ಯಾಧಿಕಾರಿ ನಾಗರಾಜ್, ಗ್ರಾಮಸ್ಥರು, ಅರಣ್ಯ ಸಿಬ್ಬಂದಿ ಹಾಜರಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಮಧುಗಿರಿ: ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಮುದ್ದೇನೇರಳೆಕೆರೆ ಗ್ರಾಮದಲ್ಲಿ ಎನ್.ಗಂಗಪ್ಪ ಎಜುಕೇಶನಲ್ ಅಂಡ್ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ವತಿಯಿಂದ 2021-22 ನೇ ಶೈಕ್ಷಣೀಕ ಸಾಲಿನಲ್ಲಿ ಎಸೆಸೆಲ್ಸಿಯಲ್ಲಿ ಅತ್ಯುತ್ತಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನಿವೃತ್ತ ಅಪರ ಕೃಷಿ ನಿರ್ದೇಶಕರಾದ ಎನ್ ಗಂಗಪ್ಪ, ವಿದ್ಯಾರ್ಥಿಗಳಿಗೆ ಬೆಂಬಲ ಮತ್ತು ಪ್ರೋತ್ಸಾಹ ನೀಡಬೇಕು. ಮಕ್ಕಳಿಗೆ ಆಸ್ತಿ ಮಾಡದೇ, ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಬೇಕು ಎಂದರು. ವಿದ್ಯಾರ್ಥಿಗಳ ಬೆನ್ನು ತಟ್ಟುವ ಕಾರ್ಯವನ್ನು ಸಂಘಸಂಸ್ಥೆಗಳು ಮಾಡಿದಾಗ ವಿದ್ಯಾರ್ಥಿಗಳಿಗೆ ಸಾಧನೆ ಮಾಡುವಲ್ಲಿ ಶಕ್ತಿದಾಯಕವಾಗಿ ಬೆಳೆಯುತ್ತದೆ ಎಂದರು. ಮಾತ್ರವಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರಗಳಲ್ಲೂ ಬೆಳೆಯುತ್ತಿದ್ದು, ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿ ಇರುತ್ತದೆ ಎಂದರು. ಸೊಸೈಟಿಯ ಕಾರ್ಯದರ್ಶಿ ತಿಪ್ಪೇಸ್ವಾಮಿ ಎಂ.ಕೆ. ಮಾತನಾಡಿ, ಶಿಕ್ಷಣದ ಹಾದಿಯಲ್ಲಿ ವಿದ್ಯಾರ್ಥಿಗಳು ಮೇರು ಶಿಖರ ಮುಟ್ಟಬೇಕು. ವಿದ್ಯಾರ್ಥಿಗಳಲ್ಲಿ ಅದಮ್ಯ ಶಕ್ತಿಯಿದ್ದ ಪ್ರತಿಭೆಗಳು ಪ್ರತಿಮೆಗಳಾಗಿ ಹೊರಹೊಮ್ಮಬೇಕು ಪೋಷಕರು ಉತ್ತಮ ಪೋಷಣೆ ಕೊಟ್ಟಾಗ ವಿದ್ಯಾರ್ಥಿಗಳು ಹೆಮ್ಮರವಾಗಿ ಬೆಳೆಯುತ್ತಾರೆ ಎಂದರು. ಈ…
ತಿಪಟೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿವಾಸದ ಎದುರು ಪ್ರತಿಭಟನೆ ನಡೆಸಿದ ಎನ್.ಎಸ್.ಯು.ಐ. ಕಾರ್ಯಕರ್ತರ ಬಂಧನಕ್ಕೆ ವಿವಿಧ ಸಂಘಟನೆಗಳು, ತಿಪಟೂರು ತಾಲ್ಲೂಕು ನಾಗರಿಕ ಬಳಗ ಹಾಗೂ ಕಾಂಗ್ರೆಸ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಬಿ.ಸಿ.ನಾಗೇಶ್ ರಾಜೀನಾಮೆಗೆ ಆಗ್ರಹಿಸಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಲೋಕೇಶ್ವರ್ ಮಾತನಾಡಿ, ಬಿ.ಸಿ.ನಾಗೇಶ್ ವಿರುದ್ಧ ಹರಿಹಾಯ್ದಿದ್ದಾರೆ. ಶಿಕ್ಷಣ ಸಚಿವರ ವರ್ತನೆಯಿಂದ ವಿದ್ಯಾರ್ಥಿಗಳು ತೊಂದರೆಗೆ ಒಳಪಟ್ಟಿದ್ದಾರೆ. ಕುವೆಂಪು, ಬಸವಣ್ಣ, ನಾರಾಯಣಗುರು, ಅಂಬೇಡ್ಕರ್, ಭಗತ್ ಸಿಂಗ್, ಅವರ ಮೂಲ ಇತಿಹಾಸವನ್ನು ತಿರುಚಲು ಹೊರಟಿದ್ದಾರೆ. 10 ಮಂದಿ ಕಮಿಟಿಯಲ್ಲಿ 9 ಮಂದಿ ಬ್ರಾಹ್ಮಣರೇ ಕೂತು ಮನು ತತ್ವಗಳನ್ನು ತುರುಕಬೇಕೆಂದು ಹೊರಟಿದ್ದಾರೆ. ರಾಜ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ. ಇದರ ವಿರುದ್ಧ ಪ್ರತಿಭಟನೆಗೆ ಬಂದ ವಿದ್ಯಾರ್ಥಿಗಳ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ ರಾಜ್ಯದಲ್ಲಿ ಶಾಂತಿ ಕದಡುವ ಕಾರ್ಯ ಮಾಡಿದ್ದಾರೆ ಎಂದು ಆರೋಪಿಸಿದರು. ಇಂತಹ ಮಂತ್ರಿಯನ್ನು ಬೊಮ್ಮಾಯಿ ಅವರ ಮಂತ್ರಿಮಂಡಲದಲ್ಲಿ ಮುಂದುವರಿದರೆ, ಇನ್ನಷ್ಟು ಅನಾಹುತ ಉಂಟಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಹಾಗಾಗಿ ಬಿ.ಸಿ.ನಾಗೇಶ್…