Subscribe to Updates
Get the latest creative news from FooBar about art, design and business.
- ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
- ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
- ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
- ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
- ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
- ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
- ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
Author: admin
ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಆನಡುಗು ಗ್ರಾಮದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕರಾದ ಎಂ.ಜಿ. ಶಿವಶಂಕರ್ ರವರ ಮಾಯಸಂದ್ರ ಗ್ರಾಮದಲ್ಲಿನ ತಮ್ಮ ಸ್ವಗೃಹದ ಅಂಗಳದಲ್ಲಿ 7 ಅಡಿ ಎತ್ತರದ, ಎರಡೂವರೆ ವರ್ಷದ, ಅಪರೂಪದ “ತುಳಸಿ ಗಿಡ” ಬೆಳೆದಿದ್ದು, ಗ್ರಾಮದ ಸಾರ್ವಜನಿಕರಲ್ಲಿ ಆಕರ್ಷಣೀಯವಾಗಿದೆ. ಸುಮಾರು ಎರಡೂವರೆ ವರ್ಷ ಪೂರೈಸಿರುವ ತುಳಸಿ ಗಿಡವು ದಿನೇ-ದಿನೇ ಅತಿ ಉದ್ದವಾಗಿ ಬೆಳೆಯುತ್ತಿರುವುದು, ಆಶ್ಚರ್ಯಕರ ಸಂಗತಿಯಾಗಿದೆ. ತುಳಸಿ ಗಿಡದ ಪಾಲನೆ -ಪೋಷಣೆಗಾಗಿ ಯಾವುದೇ ಗೊಬ್ಬರಗಳು ಅಥಾವ ಕೆಮಿಕಲ್ ಗಳನ್ನು ಬಳಸದೆ, ನೈಸರ್ಗಿಕವಾಗಿ ತುಳಸಿ ಗಿಡವು ಬೆಳೆಯುತ್ತಿದೆ ಎಂದು ಶಿಕ್ಷಕರಾದ ಎಂ.ಜಿ.ಶಿವಶಂಕರ್ ಅವರ ಪತ್ನಿ ಶ್ರೀಮತಿ ನೇತ್ರಾವತಿ ತಿಳಿಸಿದ್ದಾರೆ. ಶ್ರೀ ಕಾಲಭೈರವೇಶ್ವರ ಸ್ವಾಮಿಯನ್ನು ಸದಾ ನೆನೆಯುತ್ತ, ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಅವರ, ಸ್ಮರಣೆಯೊಂದಿಗೆ, ಸರ್ವೇ ಜನ: ಸುಖಿನೋ ಭವಂತು, ಎಂದು ಮನೆಯ ಅಂಗಳದಲ್ಲಿರುವ ತುಳಸಿ ಗಿಡಕ್ಕೆ ಹಾಗೂ ಭಗವಂತನಿಗೆ ಪ್ರತಿನಿತ್ಯ ಪೂಜೆ ಸಲ್ಲಿಸಿ ಪ್ರಾರ್ಥಿಸುವುದಾಗಿ, ಮೂಲತಃ ಮಾವಿನಕೆರೆಯ ಲಕ್ಷ್ಮಮ್ಮ ಗಂಗಾಧರಯ್ಯ ನವರ ಪುತ್ರ ಶಿಕ್ಷಕರಾದ ಎಂ.ಜಿ. ಶಿವಶಂಕರ್…
ನರಸೀಪುರ: ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಪಟ್ಟಣದ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ತಾಲ್ಲೂಕಿನ ಅಕ್ಕೂರು ಗ್ರಾಮದ ಕೆಂಪರಾಜು ಎಂಬುವರ ಪುತ್ರಿ ಅನುಶ್ರೀ(16) ಎಂಬಾಕೆಯೇ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದು ಸಾವನ್ನಪ್ಪಿದ ವಿದ್ಯಾರ್ಥಿನಿ. ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಇಂದು ಪಟ್ಟಣದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದಳು. ತಾನು ಪರೀಕ್ಷೆ ಬರೆಯಬೇಕಾಗಿದ್ದ ಕೇಂದ್ರಕ್ಕೆ ಹಾಜರಾಗಬೇಕಾದ ಆಕೆ ಗೊಂದಲ ಮಾಡಿಕೊಂಡು ಪಕ್ಕದಲ್ಲೇ ಇದ್ದ ಶಿವಾನಂದ ಶರ್ಮ ಆಂಗ್ಲ ಮಾಧ್ಯಮ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಮುಂದಾಗಿ ಸುಮಾರು ಹದಿನೈದು ನಿಮಿಷಗಳ ಕಾಲ ಪರೀಕ್ಷೆ ಬರೆದಿದ್ದಳು ಎನ್ನಲಾಗಿದೆ. ಆದರೆ ಆಕೆ ಕುಳಿತು ಪರೀಕ್ಷೆ ಬರೆಯುತ್ತಿದ್ದ ಹಾಲ್ ಟಿಕೆಟ್ ನಂಬರ್ ವಿದ್ಯಾರ್ಥಿಯೊಬ್ಬರದ್ದಾಗಿದ್ದು, ಇದನ್ನು ಗಮನಿಸಿದ ಪರೀಕ್ಷಾ ಮೇಲ್ವಿಚಾರಕರು ಆಕೆಗೆ ಮನವರಿಕೆ ಮಾಡಿ ಪಕ್ಕದ ಸೆಂಟರ್ ಕರೆದೊಯ್ಯುತ್ತಿದ್ದ ಸಂಧರ್ಭ…
ಮುಂಬೈ: ಇಲ್ಲಿನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಐಪಿಎಲ್ (Indian Premier League 2022) ಟೂರ್ನಿಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಪಂಜಾಬ್ ಕಿಂಗ್ಸ್ ತಂಡವು ಬೆಂಗಳೂರು ತಂಡವನ್ನು 20 ಓವರ್ ಗಳಲ್ಲಿ ಕೇವಲ ಎರಡು ವಿಕೆಟ್ ಪಡೆಯುವ ಮೂಲಕ 205 ರನ್ ಗಳಿಗೆ ನಿಯಂತ್ರಿಸಿತು. ಬೆಂಗಳೂರು ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ ದುಫ್ಲೆಸಿಸ್ ನಾಯಕನ ಆಟವನ್ನು ಆಡಿದರು.ಕೇವಲ 57 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಏಳು ಸಿಕ್ಸರ್ ಗಳ ನೆರವಿನಿಂದ 88 ರನ್ ಗಳನ್ನು ಗಳಿಸಿದರು. ಇದಾದ ನಂತರ ಅನುಜ್ ರಾವತ್ 21 ರನ್ ಗಳಿಸಿ ಔಟಾದಾಗ ಕ್ರೀಸ್ ಗೆ ಬಂದಂತಹ ಕೊಹ್ಲಿ ಹಾಗೂ ಕಾರ್ತಿಕ್ ಕ್ರಮವಾಗಿ 41 ಹಾಗೂ 32 ರನ್ ಗಳಿಸುವ ಮೂಲಕ ತಂಡದ ಮೊತ್ತವು 200 ರ ಗಡಿಯನ್ನು ದಾಟಲು ನೆರವಾದರು. ರಾಯಲ್ ಚಾಲೆಂಜರ್ಸ್…
ಬೆಂಗಳೂರು: 1970 ಮತ್ತು 80ರ ದಶಕದಲ್ಲಿ ಕನ್ನಡ ಚಿತ್ರರಂಗವನ್ನು ಆಳಿದ ನಟಿ ಮಂಜುಳ ಬದುಕಿದ್ದು ಕೇವಲ 34 ವರ್ಷ ಮಾತ್ರ. ಪ್ರತಿಭಾವಂತ ನಟಿ ಮಂಜುಳ ಇಲ್ಲ ಅನ್ನೋದನ್ನಇಂದಿಗೂ ನಂಬೋದಕ್ಕೆ ಆಗುತ್ತಿಲ್ಲ. ಅವರ ಸಾವು ಆಕಸ್ಮಿಕ ಅಲ್ಲ, ಆತ್ಮಹತ್ಯೆ ಅನ್ನೋ ಮಾತು ಮತ್ತೇ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಇಂಟ್ರಸ್ಟಿಂಗ್ ವಿಚಾರ ನಿಮ್ಮ ಮುಂದೆ. ‘ಸಂಪತ್ತಿಗೆ ಸವಾಲ್’, ‘ಎರಡು ಕನಸು’, ‘ಬೆಸುಗೆ’, ‘ಭಕ್ತ ಕುಂಬಾರ’, ‘ಮೂರೂವರೆ ವಜ್ರಗಳು’, ‘ಮಯೂರ’, ‘ದಾರಿ ತಪ್ಪಿದ ಮಗ’, ‘ನೀ ನನ್ನ ಗೆಲ್ಲಲಾರೆ’, ‘ತಾಯಿಗಿಂತ ದೇವರಿಲ್ಲ’, ‘ಎರಡು ಮುಖ’, ‘ಯಾರ ಸಾಕ್ಷಿ?’ ಈ ಸಿನಿಮಾಗಳನ್ನು ಯಾರು ನೋಡಿಲ್ಲ ಹೇಳಿ. ಪ್ರತಿಯೊಬ್ಬರೂ ಕೂಡ ಹಂಡ್ರೆಡ್ ಪರ್ಸೆಂಟ್ ನೋಡರ್ತೀರಿ. ಯಾಕಂದ್ರೆ ಇವೆಲ್ಲವೂ ನಟಿ ಮಂಜುಳ ಅವರು ಮುಖ್ಯಭೂಮಿಕೆಯಲ್ಲಿ ಅಭಿನಯಿರೋ ಆಗಿನ ಸೂಪರ್ ಡೂಪರ್ ಹಿಟ್ ಸಿನಿಮಾಗಳು. ಸುಮಾರು 54ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ನಟಿ ಮಂಜುಳ ಅವರ ಜೀವನವೇ ರೋಚಕ. ಏಕೆಂದರೆ ಸಣ್ಣ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ನಟಿ ಮಂಜುಳ…
ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಇನ್ನು ಕಳೆದ 7 ದಿನಗಳಲ್ಲಿ 6 ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳವಾಗಿದ್ದು, ಒಟ್ಟು 4 ರೂಪಾಯಿ 10 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಪೆಟ್ರೋಲ್ ಡೀಸೆಲ್ ದರ ನೂರರ ಗಡಿ ಮುಟ್ಟುತ್ತಿದೆ. ಸೋಮವಾರ ಬೆಳಗ್ಗೆಯಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 30 ಪೈಸೆ ಹಾಗೂ ಡೀಸೆಲ್ ಬೆಲೆ 35 ಪೈಸೆ ಏರಿಕೆಯಾಗಿದೆ. ಈ ಏರಿಕೆ ಇಂದು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬಂದಿದೆ. ಇದಾದ ಬಳಿಕ ಇಂದು ಪೆಟ್ರೋಲ್ ಬೆಲೆ ಲೀಟರ್ ಗೆ 99.41 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 90.77 ರೂ.ಗೆ ಏರಿಕೆಯಾಗಿದೆ. ದೇಶದಲ್ಲಿ ಮಾರ್ಚ್ 22 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಒಂದು ವಾರದಲ್ಲಿ ತೈಲ ಬೆಲೆ 4.10 ರೂ. ಹೆಚ್ಚಳಗೊಂಡಿದೆ. ಆರ್ಥಿಕ ತಜ್ಞರ ಪ್ರಕಾರ ರಷ್ಯಾ-ಉಕ್ರೇನ್ ಯುದ್ಧವು ಕೊನೆಗೊಳ್ಳುವವರೆಗೆ, ಈ ಬೆಳವಣಿಗೆಯು ಇದೇ ರೀತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ನಂಬಲಾಗಿದೆ. ಸಾರ್ವಜನಿಕ…
ತಿಪಟೂರು: ಅತಿ ಹೆಚ್ಚು ವಿದ್ಯಾಭ್ಯಾಸ ಮಾಡಿದವರು ತಂದೆ ತಾಯಂದಿರ ನಿರ್ಲಕ್ಷ ಮಾಡಿ ಪಾಲನೆ-ಪೋಷಣೆ ಮಾಡುವುದನ್ನು ಬಿಟ್ಟು ದುಬಾರಿ ನಾಯಿಗಳ ಪಾಲನೆ-ಪೋಷಣೆ ಮಾಡುವತ್ತ ಜಗತ್ತು ಮಾರ್ಪಾಡು ಆಗುತ್ತಿದೆ ಎಂದು ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ ಅವರು ಕಳವಳ ವ್ಯಕ್ತಪಡಿಸಿದರು. ನಗರದ ಗೊರಗೊಂಡನಹಳ್ಳಿ ಕುಪ್ಪೂರು ತಮ್ಮಡಿಹಳ್ಳಿ ಅಭಿನವ ಮಲ್ಲಿಕಾರ್ಜುನಾ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡ ಅಭಿನವ ಸದನ ಕಟ್ಟಡದ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಜಗತ್ತಿನಲ್ಲಿ ಅಶಾಂತಿ ಅಧರ್ಮ ತಾಂಡವಾಡುತ್ತಿದ್ದು, ಒಂದು ಅಣುಬಾಂಬ್ ಹಾಕಿದರೆ ಇಡೀ ವಿಶ್ವವೇ ಸರ್ವನಾಶ ಆಗುತ್ತದೆ. ಇಡೀ ವಿಶ್ವವೇ ಮನುಕುಲ ಜಗತ್ತು ಶಾಂತಿ ನೆಮ್ಮದಿಯಿಂದ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾವಂತರು ಯುವಕರು ತಮ್ಮ ತಂದೆ-ತಾಯಿ ನಿರ್ಲಕ್ಷ ಮಾಡುತ್ತಿದ್ದು, ವಿದ್ಯೆಯ ಜೊತೆಗೆ ಅವರಿಗೆ ಸಂಸ್ಕಾರವನ್ನೂ ಕೊಡಬೇಕು. ಸಂಸ್ಕಾರ ಕೊರತೆಯಿಂದಾಗಿ ಮಕ್ಕಳು ತಂದೆತಾಯಿಯನ್ನು ನಿರ್ಲಕ್ಷ ಮಾಡುತ್ತಿದ್ದಾರೆ. ಮಠ ಮಾನ್ಯಗಳಿಗಿಂತ ಹೆತ್ತ ತಂದೆ-ತಾಯಿಗಳೇ ದೇವರು. ತಂದೆ ತಾಯಿಯವರನ್ನು ಅನಾಥಾಶ್ರಮಗಳಿಗೆ ಕಳುಹಿಸಿ ಮಠಮಾನ್ಯಗಳಿಗೆ ಬಂದು ಕಾಲಿಗೆ ಬೀಳುವುದು ಬಿಟ್ಟು ತಂದೆ ತಾಯಿಯವರನ್ನು ಪತಿ ಜಾಗೃತೆಯಿಂದ…
ಹಿಜಾಬ್ ಟೆನ್ಶನ್ ನಡುವೆ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ರಾಜ್ಯದಲ್ಲಿ ಒಟ್ಟು 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಜ್ಜಾಗಿದ್ದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾವೈರಸ್ (Coronavirus) ಭಯದ ನಡುವೆ ಕೇವಲ ಮೂರು ದಿನ ಮಾತ್ರ ಪರೀಕ್ಷೆ ನಡೆದಿತ್ತು. ಆದರೆ ಈ ವರ್ಷ ಯಾವುದೇ ಭಯವಿಲ್ಲದೆ ಪರೀಕ್ಷೆ ನಡೆಯಲಿದೆ. ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ, ಬೆಳಗ್ಗೆ 10:30ಕರಿಂದ ಮಧ್ಯಾಹ್ನ 01:45ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ವೇಳಾಪಟ್ಟಿ: 28-3-2022- ಪ್ರಥಮ ಭಾಷೆ 30-3-2022- ದ್ವಿತೀಯ ಭಾಷೆ 1-4-2022- ಅರ್ಥ ಶಾಸ್ತ್ರ, ಕೋರ್ ಸುಬ್ಜೆಕ್ಟ್ಸ್ 4-4-2022- ಗಣಿತ, ಸಮಾಜಶಾಸ್ತ್ರ 6-4-2022- ಸಮಾಜ ವಿಜ್ಞಾನ 8-4-2022- ತೃತೀಯ ಭಾಷೆ 11-4-2022- ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ. ಪರೀಕ್ಷೆಗೆ ತಯಾರಿ: ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ನಡೆಯಲಿರುವ ಪರೀಕ್ಷೆ * ಪರೀಕ್ಷೆ ಬರೆಯಲಿರುವ 8,73,846 ವಿದ್ಯಾರ್ಥಿಗಳು * ಗಂಡು ಮಕ್ಕಳು -…
ಮಧುಗಿರಿ: ಮಧುಗಿರಿ ತಾಲೂಕಿನ ಕೆರಗಳಪಾಳ್ಯ ಬಳಿ ಇರುವ ಬೈಲಾಂಜನೇಯ ದೇವಾಲಯ ತಾವರೆಕೊಳದ ಸಮೀಪ ಭಾನುವಾರ ಬೆಳಗ್ಗೆ ಕೆ ಎಸ್ ಆ ರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು , ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ . ಮಧುಗಿರಿ ಕಡೆಯಿಂದ ಬೆಂಗಳೂರಿಗೆ ಹೊಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ದ್ವಿಚಕ್ರ ವಾಹನದಲ್ಲಿ ಕುಳಿತಿದ್ದ ದಂಪತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರು ಮಧುಗಿರಿ ತಾಲೂಕಿನ ಗೊಂದಿಹಳ್ಳಿ ಮೂಲದ ಸಾಂಬಶಿವಯ್ಯ(73) ಶಂಕ್ರಮ್ಮ(66)ನಿವಾಸಿಗಳು ಎನ್ನಲಾಗಿದ್ದು, ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆ ಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ವಿದೇಶಿ ವಿನಿಮಯ ಸಂಕಷ್ಟ ಮತ್ತು ಮುದ್ರಣ ಕಾಗದದ ದರ ಏರಿಕೆಯಿಂದ ಜರ್ಝರಿತವಾದ ಸುದ್ದಿ ಸಂಸ್ಥೆಗಳ ಪೈಕಿ ಎರಡು ಪ್ರಮುಖ ಪತ್ರಿಕೆಗಳು ತಮ್ಮ ದೈನಂದಿನ ಸಂಚಿಕೆ ಮುದ್ರಣವನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿವೆ. ದ್ವೀಪ ರಾಷ್ಟ್ರ ಶ್ರೀಲಂಕ ಹಿಂದೆಂದು ಕಾಣದಷ್ಟು ವಿದೇಶಿ ವಿನಿಮಯ ಕೊರತೆಯನ್ನು ಅನುಭವಿಸುತ್ತಿದೆ. ಇದರಿಂದಾಗಿ ಮುದ್ರಣ ಕಾಗದ ಆಮದು ದರ ಏರಿಕೆ ಏರಿಕೆಯಾಗಿದ್ದು, ಕೊರತೆಯು ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ದಿ ಐಲ್ಯಾಂಡ್ ಇಂಗ್ಲಿಷ್ ದೈನಿಕ ಮತ್ತು ಅದರ ಸಹೋದರ ಸಂಸ್ಥೆ ಸಿಂಹಳಿ ಭಾಷೆಯ ದಿವಾಯಿನಾ ಮುಂದಿನ ಆದೇಶದವರೆಗೂ ಸಂಚಿಕೆ ಮುದ್ರಣವನ್ನು ಸ್ಥಗಿತಗೊಳಿಸಿರುವುದಾಗಿ ಘೋಷಿಸಿವೆ. ಈ ಪ್ರಕಟಣೆಗಳ ಮಾತೃ ಸಂಸ್ಥೆ ಉಪಾಲಿ ನ್ಯೂಸ್ ಪೆಪರ್ ಲಿಮಿಟೆಡ್, ಶನಿವಾರ ತಮ್ಮ ಓದುಗರ ಬಳಿ ವಿಷಾದ ವ್ಯಕ್ತ ಪಡಿಸಿದ್ದು, ಶನಿವಾರದಿಂದ ಮುಂದಿನ ಸೂಚನೆಯವರೆಗೆ ಮುದ್ರಣವನ್ನು ನಿಲ್ಲಿಸುತ್ತಿದ್ದೇವೆ ಎಂದು ತಿಳಿಸಿದೆ. ಪ್ರವಾಸೋದ್ಯಮ ಆಧಾರಿತ ಆದಾಯವನ್ನೇ ಅವಲಂಬಿಸಿದ ಶ್ರೀಲಂಕ ಕೋವಿಡ್ ನಿಂದಾಗಿ ಪ್ರವಾಸಿಗರ ಕೊರತೆಯಿಂದ ತೀವ್ರ ಆರ್ಥಿಕ ಹಿನ್ನೆಡೆ ಅನುಭವಿಸುತ್ತಿದೆ. ಹಿಂದೆಂದು ಕಾಣದಷ್ಟು ವಿದೇಶಿ ವಿನಿಮಯದ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದ…
ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಶ್ರೀಗಳು ಜಗತ್ತಿಗೆ ಮಾದರಿ ಪುರುಷರು ಮಾಜಿ ಸಚಿವ ಎಂ ಬಿ ಪಾಟೀಲ್ ತಿಳಿಸಿದರು. ಶನಿವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಎಂ.ಬಿ ಪಾಟೀಲ್, ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದು, ಅದರ ಸಲುವಾಗಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲು ಮಠಕೆ ಆಗಮಿಸಿ ರುವುದಾಗಿ ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠದ ಸೇವೆ ಇಡೀ ಜಗತ್ತಿಗೆ ಮಾದರಿಯಾದ ಸೇವೆ ಮಠದಿಂದ ಲಕ್ಷಾಂತರ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿದ್ದು, ತಾವು ಕೂಡ ಹಲವು ಬಾರಿ ಶ್ರೀ ಮಠಕ್ಕೆ ಬೇಡಿ ಭೇಟಿಕೊಟ್ಟು ಹಲವು ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದರು. ಇನ್ನು ಶ್ರೀ ಶಿವಕುಮಾರ ಶ್ರೀಗಳು ಲಿಂಗೈಕ್ಯರಾದ ಸಂದರ್ಭದಲ್ಲಿ ತಾವು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ತಾವು ಕೂಡ ಶ್ರೀಗಳ ಸೇವೆ ಮಾಡುವ…