Subscribe to Updates
Get the latest creative news from FooBar about art, design and business.
- ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
- ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
- ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
- ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
- ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
- ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
- ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
Author: admin
ತುಮಕೂರು: ಜಿಲ್ಲೆಯಲ್ಲಿ ಎರಡು ತಲೆಮಾರುಗಳಿಂದ ಭೂಮಿ ವಸತಿಗಳ ಸಮಸ್ಯೆಗಳನ್ನು ತಾಲ್ಲೂಕು ಮತ್ತು ತುಮಕೂರು ಜಿಲ್ಲಾಡಳಿತ ಬಗೆಹರಿಸಿರುವುದಿಲ್ಲ ಈ ಹಿನ್ನೆಲೆಯಲ್ಲಿ ಹಂದ್ರಾಳ್ ನಾಗಭೂಷನ್ ಅವರ ನೇತೃತ್ವದಲ್ಲಿ ನಿನ್ನೆಯಿಂದ ಆಹೋರಾತ್ರಿ ಧರಣಿ ಆರಂಭವಾಗಿದೆ. ಮೊದಲ ದಿನದ ಧರಣಿಗೆ ಚಾಲನೆ ನೀಡಿದ ಸಂದರ್ಭ, ರಾಜ್ಯ ಸಮಿತಿ ಉಪಾಧ್ಯಕ್ಷರಾದ ಸಿರಿಮನೆ ನಾಗರಾಜು, ಬೆಂಗಳೂರು ನಗರ ಅಧ್ಯಕ್ಷರಾದ ಮರಿಯಪ್ಪ, ಚಿಂತಕರಾದ ಸಿ.ಯತಿರಾಜು, ದೊರೈರಾಜು, ಬೀದಿಬದಿ ವ್ಯಾಪಾರಿಗಳ ಜಿಲ್ಲಾದ್ಯಕ್ಷರಾದ ಭದ್ರೇಗೌಡ್ರು, ಉಪಾಧ್ಯಕ್ಷರಾದ ಮಂಜುನಾಥ್, ದಯಾನಂದ್, ಲಂ,ಕ,ನಿ,ವೇ ತುಮಕೂರು ಮಲ್ಲಿಕಾರ್ಜುನಯ್ಯ, ಉಪಾಧ್ಯಕ್ಷರಾದ ಕುಣಿಗಲ್ ನರಸಿಂಹಮೂರ್ತಿ ಇತರರುಗಳು ಹಾಜರಿದ್ದರು. ಧರಣಿ ವೇಳೆ ಮಳೆಯಾಗಿದ್ದು, ಈ ವೇಳೆ ಮಹಾನಗರ ಪಾಲಿಕೆಯು ಧರಣಿ ಸ್ಥಳದ ಪಕ್ಕದ ಗಾಜಿನ ಮನೆಯಲ್ಲಿ ಆಶ್ರಯ ನೀಡಿದರು. ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಿಗೆ ಮತ್ತು ಸಿಬ್ಬಂದಿಗೆ ಧರಣಿ ನಿರತರು ಧನ್ಯವಾದಗಳನ್ನು ತಿಳಿಸಿದ್ದಾರೆ. ತುಮಕೂರು ಜಿಲ್ಲೆಯ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಪರವಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸ್ಥಳದಲ್ಲಿ ಜಿಲ್ಲಾ ಸಂಚಾಲಕ ಹಂದ್ರಾಳ್ ನಾಗಭೂಷಣ್, ಯತಿರಾಜ್, ಸಿರಿಮನೆ ನಾಗರಾಜು,…
ಬೆಂಗಳೂರು: ಬೆಂಗಳೂರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಂಎಲ್ ಎ ಸತೀಶ್ ರೆಡ್ಡಿ ಅವರ ಭಾಗದಲ್ಲಿ ರಸ್ತೆಯ ಸ್ಥಿತಿ ತೀವ್ರ ಹದಗೆಟ್ಟಿದೆ, ಬಾಲಾಜಿ ಲೇಔಟ್ ಹೊಂಗಸಂದ್ರ ಹನುಮಾನ್ ದೇವಸ್ಥಾನ ಹತ್ತಿರ ಸರ್ಕಾರಿ ಪ್ರಾಥಮಿಕ ಶಾಲೆ ಆರನೇಯ ರಸ್ತೆ ಮುಖ್ಯ ರಸ್ತೆ ಮೊದಲನೇ ಅಡ್ಡರಸ್ತೆ 1 ವಾರದ ಹಿಂದೆ ಈ ರಸ್ತೆಯನ್ನು ಅಗೆದು ಬಿಬಿಎಂಪಿ ಅಧಿಕಾರಿಗಳು ಈ ಸ್ಥಿತಿಗೆ ತಂದಿದ್ದಾರೆ. ಇಲ್ಲಿನ ಜನರು ಪ್ರತಿದಿನ ಕೆಲಸ ಕಾರ್ಯಗಳಿಗೆ ಹೋಗಲು ಬಹಳ ಕಷ್ಟಪಟ್ಟು ಹೋಗುತ್ತಿದ್ದಾರೆ. ಈ ಭಾಗದಲ್ಲಿ ಕಳೆದ ಎರಡು ದಿನಗಳ ಹಿಂದೆ ಸಾಕಷ್ಟು ಅಪಘಾತಗಳು ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬಿದ್ದು ಅನೇಕರಿಗೆ ಗಾಯಗಳು ಸಂಭವಿಸಿದೆ. ಈ ರಸ್ತೆಯಲ್ಲಿ ಪ್ರಯಾಣಿಸಲು ವಾಹನ ಸವಾರರು, ಸ್ಥಳೀಯರು ಹರಸಾಹಸಪಡುವಂತಾಗಿದೆ. ಸಾಕಷ್ಟು ಸಂಖ್ಯೆಯ ಜನರು ಇಲ್ಲಿ ವಾಹನ ಚಲಾಯಿಸಲು ಸಾಧ್ಯವಾಗದೇ, ವಾಹನದಲ್ಲಿ ಪ್ರಯಾಣಿಸುವುದನ್ನು ನಿಲ್ಲಿಸುವಂತಾಗಿದೆ. ಇನ್ನೂ ರಸ್ತೆ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳು ಕೂಡ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಇಲ್ಲಿನ ಶಾಸಕರು ಸತೀಶ್ ರೆಡ್ಡಿ ಹಾಗೂ ಮಾಜಿ ಬಿಬಿಎಂಪಿ ಸದಸ್ಯ ಭಾರತೀಯವರು ಸಂಬಂಧಪಟ್ಟ ಅಧಿಕಾರಿಗಳ…
ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀದಿಬದಿ ವ್ಯಾಪಾರಿಗಳಿಗೆ ಆಹಾರ ಯಾವ ರೀತಿ ತಯಾರು ಮಾಡಬೇಕು ಶುಚಿತ್ವದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಮುದಾಯ ಸಂಘಟನಾ ಅಧಿಕಾರಿ ರಾಮಾಂಜಿನಪ್ಪ ಹಾಗೂ ಕೌಶಲ್ಯ ಅಭಿವೃದ್ಧಿ ಇಲಾಖೆಯ ಅಭಿಯಾನ ವ್ಯವಸ್ಥಾಪಕರಾದ ದೊಡ್ಡವಲ್ಲಪ ಹಾಗೂ ಡೇ-ನಲ್ಮ ಶಾಖೆಯ ಸಹಾಯಕರು ಆಂಜನಪ್ಪ ಎನ್.ಹೆಚ್. ಹಾಗೂ ಡೇ-ನಲ್ಮ ಶಾಖೆಯ ವ್ಯವಸ್ಥಾಪಕರು ರೇವಣ್ಣ ಅವರು ವಾರ್ಡ್ ಗೆ ಸಂಬಂಧ ಪಟ್ಟಂತೆ ಪಟ್ಟಣ ವ್ಯಾಪಾರ ಸಮಿತಿಯ ಸದಸ್ಯರುಗಳಾದ ಶ್ರೀಧರ್, ರವಿ ಕುಮಾರ್, ವಸಿಮ್ ಅಕ್ರಂ, ಟಿ.ಎಸ್.ರಾಜಶೇಖರ್. ಮುತ್ತರಾಜು, ಜಿ.ಜಗದೀಶ್ ಅವರು ಹಾಗೂ ನಾರಾಯಣ, ತರಬೇತಿ ಸಂಸ್ಥೆಯ ತರಬೇತಿ ಆಯೋಜಕರು ಅಂಬರೀಷ್ ನಾರಾಯಣ್ ಹಾಗೂ ವ್ಯವಸ್ಥಾಪಕರು ಚಿದಾನಂದ ಗೌಡ ಮತ್ತು ಆಹಾರ ಪದಾರ್ಥ ಮಾರಾಟ ಮಾಡುವ ಬೀದಿಬದಿ ವ್ಯಾಪಾರಿಗಳು ಹಾಜರಿದ್ದರು. “ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ವಸಿಮ್ ಅಕ್ರಂ ಮಾತನಾಡಿ, ಭಾರತ ದೇಶದಲ್ಲಿ ಶೇ.50 ರಷ್ಟು ಜನ ರಸ್ತೆ ಬದಿಗಳಲ್ಲಿ ಆಹಾರ ಸೇವನೆ ಮಾಡುತ್ತಿದ್ದಾರೆ. ದೇಶದ ಜನರ ಆರೋಗ್ಯದ ದೃಷ್ಟಿಯಿಂದ …
ತುಮಕೂರು: ಕೋವಿಡ್ -19 ರ ತುರ್ತು ಪರಿಸ್ಥಿತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಅರೇ- ವೈದ್ಯಕೀಯ ಸಿಬ್ಬಂದಿಯನ್ನು 2022 ಮಾರ್ಚ್ 31 ನಂತರವು ಸೇವೆಯಿಂದ ಮುಂದುವರೆಸುವಂತೆ ಒತ್ತಾಯ ಕೊರೊನಾ ವಾರಿಯರ್ಸ್ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕೊರೊನಾ ವಾರಿಯರ್ಸ್, ಕೋವಿಡ್ -19ರ ತುರ್ತು ಪರಿಸ್ಥಿತಿಯಲ್ಲಿ ನಮ್ಮನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ನಾವು ನಮ್ಮ ಕುಟುಂಬ, ಮನೆ-ಮಠ ಬಿಟ್ಟು, ನಮ್ಮ ಪ್ರಾಣದ ಹಂಗನ್ನು ತೊರೆದು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಜೊತೆಯಲ್ಲಿಯೇ ಸೇರಿದ ಕೆಲವು ಆರೋಗ್ಯ ಸಿಬ್ಬಂದಿಗಳು ಪ್ರಾಣಭಯದಿಂದ ಹಾಗೂ ಕೊರೊನ ಮಹಾ ಮಾರಿಗೆ ಹೆದರಿ ಅರ್ಧಕ್ಕೆ ಕೆಲಸವನ್ನು ಬಿಟ್ಟು ಹೋದರು. ಆದರೆ ನಮ್ಮಲ್ಲಿ ಹಲವರಿಗೆ ಹಲವು ಬಾರಿ ಕೊರೂನಾ ಪಾಸಿಟಿವ್ ಬಂದು ಸಾವಿನ ಕದ ತಟ್ಟಿ ಸಾವಿನ ಸೋಲನ್ನು ಒಪ್ಪದೆ ಪುನಃ ಕರ್ತವ್ಯಕ್ಕೆ ಮರಳಿ ಕರ್ತವ್ಯವನ್ನು ಸಲ್ಲಿಸುತ್ತಿದ್ದೇವೆ. ಜೊತೆಗೆ ಕೂರೊನಾ ಲಸಿಕಾ ಅಭಿಯಾನದಲ್ಲಿ ಭಾರತದ ಐತಿಹಾಸಿಕ ಮೈಲುಗಲ್ಲಿನ ಸಾಧನೆಯಲ್ಲಿ…
ತುಮಕೂರು: ಉಕ್ರೇನ್ ನಿಂದ ವಾಪಸಾಗಿರುವ ವಿದ್ಯಾರ್ಥಿಗಳು ರಾಜ್ಯದಲ್ಲಿಯೇ ವಿದ್ಯಾಭ್ಯಾಸ ಮುಂದುವರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಉಕ್ರೇನ್ ನಿಂದ ವಾಪಸಾಗಿರುವ ವಿದ್ಯಾರ್ಥಿಗಳು ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ರವರಿಗೆ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಭೇಟಿ ಮಾಡಿದ ವಿದ್ಯಾರ್ಥಿಗಳು ಉಕ್ರೇನ್ ನಿಂದ ವಾಪಸಾಗಲು ಸಹಕರಿಸಿದ ಜಿಲ್ಲಾಧಿಕಾರಿಗಳಿಗೆ ಗುಲಾಬಿಯನ್ನು ನೀಡುವ ಮೂಲಕ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಉಕ್ರೇನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಏಕಾಏಕಿ ಯುದ್ಧದಿಂದ ಸ್ವದೇಶಕ್ಕೆ ಆಗಮಿಸಿದ್ದು, ಈಗ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಹಾಗಾಗಿ ನಮ್ಮ ವೈದ್ಯಕೀಯ ಶಿಕ್ಷಣವನ್ನು ಮುಂದುವರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ನಮ್ಮ ರಾಜ್ಯದಲ್ಲಿಯೇ ವೈದ್ಯಕೀಯ ಶಿಕ್ಷಣ ಮುಂದುವರಿಸಲು ಅಗತ್ಯ ಕ್ರಮ ಕೈಗೊಂಡು ವಿದ್ಯಾರ್ಥಿಗಳ ರಕ್ಷಣೆಗೆ ಮುಂದಾಗಬೇಕು ಎಂದು ಉಕ್ರೇನ್ ನಿಂದ ವಾಪಸಾಗಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಮನವಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ರೂಪಶ್ರೀ, ಅಮೃತ, ಅಜಯ್ ಕುಮಾರ್, ಗಣೇಶ್, ಗೋಕುಲ್, ಮೇಘ ರವಿತೇಜ, ರಾಮಚಂದ್ರ ಸೇರಿದಂತೆ ಹಲವು ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು. ವರದಿ:…
ತುರುವೇಕೆರೆ: ಕಳೆದೆರಡು ದಿನಗಳಿಂದ ಮಾಯಸಂದ್ರ ಗ್ರಾಮದಲ್ಲಿ ಹಾಗೂ ಮಾಯಸಂದ್ರ ಹೋಬಳಿಯಾದ್ಯಂತ ಸರಣಿ ಕಳ್ಳತನಗಳು ಹೆಚ್ಚಾಗಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಶನಿವಾರ ರಾತ್ರಿ ಮಾಯಸಂದ್ರ ಗ್ರಾಮದಲ್ಲಿ ಬಸ್ ಸ್ಟ್ಯಾಂಡ್ ಆವರಣದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಮತ್ತು ಈಶ್ವರ ದೇವಸ್ಥಾನಕ್ಕೆ ಬಾಗಿಲು ಮುರಿದು ದೇವಾಲಯಕ್ಕೆ ಒಳನುಗ್ಗಿದ ಕಳ್ಳರು, ದೇವಾಲಯದ ಹುಂಡಿ ಸೇರಿದಂತೆ ಮುಂತಾದ ವಸ್ತುಗಳನ್ನು ಕಳವು ಮಾಡಿದ್ದಾರೆ. ಗ್ರಾಮದ ನಾಗರಾಜ ನಾಯಕ ಮಾಲಿಕತ್ವದ ವೀರಭದ್ರ ಮೆಡಿಕಲ್ ಸ್ಟೋರ್ ನ ಕಬ್ಬಿಣದ ಬಾಗಿಲು ಮುರಿದು ಹಣವನ್ನು ಕಳವು ಮಾಡಲಾಗಿದೆ. ಗ್ರಾಮದ ಕೆಲವು ಅಂಗಡಿ, ಟೀ ಅಂಗಡಿ ಸೇರಿದಂತೆ ಚಿಲ್ಲರೆ ಅಂಗಡಿಗಳಿಗೆ ನುಗ್ಗಿ ಹಣ ಮತ್ತು ಹಲವು ವಸ್ತುಗಳನ್ನು ಕದ್ದೊಯ್ದಿದ್ದಾರೆ ಎಂದು ಪಟ್ಟಣದ ಪೊಲೀಸ್ ಠಾಣೆಗೆ ಕೆಲವರು ದೂರು ನೀಡಿದ್ದಾರೆ. ಇಂದು ಸೋಮವಾರ ಬೆಳಗಿನ ಜಾವ ಮಾಯಸಂದ್ರ ಹೋಬಳಿಯ ಮಾವಿನಕೆರೆ ಗ್ರಾಮದ ಕೆಂಪಮ್ಮ ದೇವಿಯ ದೇವಾಲಯ ಹಾಗೂ ಚಿಲ್ಲರೆ ಅಂಗಡಿಗೆ ನುಗ್ಗಿ ಹಣವನ್ನು ದೋಚಿದ್ದಾರೆ. ಒಟ್ಟಾರೆ ತಾಲೂಕಿನಾದ್ಯಂತ ಹಾಗೂ ಮಾಯಸಂದ್ರ ಹೋಬಳಿಯಾದ್ಯಂತ…
ತುಮಕೂರು: ಶನಿವಾರ ಪಾವಗಡದಲ್ಲಿ ಸಂಭವಿಸಿದ ಬಸ್ ದುರಂತ ಬಹಳ ದುರದೃಷ್ಟಕರ ಇಂತಹ ಘಟನೆ ನಡೆಯಬಾರದಿತ್ತು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ. ಸೋಮವಾರ ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು, ಪಾವಗಡ ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಆರೋಗ್ಯ ಸಚಿವರು, ಪಾವಗಡ ಬಸ್ ದುರಂತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಬೇಸರದ ಸಂಗತಿ ಎಂದರು. ಇನ್ನು ಅಪಘಾತಕ್ಕೀಡಾಗಿರುವ ಬಸ್ ನಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ದಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಲಭ್ಯವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ 18 ಜನ ರೋಗಿಗಳು ದಾಖಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಕೆಲವರಿಗೆ ಮೂಳೆಮುರಿತಗಳು ಕಂಡುಬಂದಿದ್ದು ಇದಕ್ಕೆ ಸಂಬಂಧಿಸಿದಂತೆ ನಮ್ಮ ಆರೋಗ್ಯ ಸಿಬ್ಬಂದಿಗಳು ಚಿಕಿತ್ಸೆ ನೀಡಲಿದ್ದಾರೆ. ಆ ಭಾಗದಲ್ಲಿ ಬಸ್ ನ ಸಮಸ್ಯೆ ಕೂಡ ಇತ್ತು ಎಂದು…
ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವಕ್ಕೆ ಭಾನುವಾರ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು. ಶಿಷ್ಟ ಹಾಗೂ ಬುಡಕಟ್ಟು ಸಂಸ್ಕೃತಿ ಮೇಳೈಸಿರುವ ನಾಡಿನ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಕರ್ನಾಟಕ ಮಾತ್ರವಲ್ಲ ಆಂಧ್ರ ಪ್ರದೇಶದಿಂದಲೂ ಸಾವಿರಾರು ಭಕ್ತರು ಆಗಮಿಸಿದರು. ಚಿತ್ರದುರ್ಗ ಜಿಲ್ಲಾಡಳಿತ ಜಾತ್ರೆಗಾಗಿ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಿತು. ಕಳೆದ ಮಾರ್ಚ್ 16ರಂದು ರಥಕ್ಕೆ ಕಳಸ ಸ್ಥಾಪನೆ ಮತ್ತು ರಾತ್ರಿ ಗಜವಾಹನೋತ್ಸವ ನಡೆಯಿತು. ಗುರುವಾರ ಸಿಂಹ ವಾಹನೋತ್ಸವ, ಶುಕ್ರವಾರ ಅಶ್ವವಾಹನೋತ್ಸವ ನಡೆಯಿತು. ಮಾರ್ಚ್ 19ರಂದು ರಥಕ್ಕೆ ತೈಲಾಭಿಷೇಕ ನಡೆಯಿತು. ಮಾರ್ಚ್ 20ರಂದು ಪ್ರಾತಃ ಕಾಲದಲ್ಲಿ ವೃಷಭ ವಾಹನದೊಂದಿಗೆ ಚಿಕ್ಕ ರಥೋತ್ಸವ ಭಾನುವಾರದಂದು ನಡೆಯಿತು. ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ ರವರ ಆದೇಶದ ಪ್ರಕಾರ “ರಥೋತ್ಸವಕ್ಕೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ದೇವಾಲಯದ ಇಒ ಹಾಗೂ ಇನ್ನಿತರೆ ಇಲಾಖೆ ಅಧಿಕಾರಿಗಳು ಕೈಗೊಂಡರು. ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ…
ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಕೋಟೆ ನಾಯಕನಹಳ್ಳಿಯಲ್ಲಿ ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ರಾಜರತ್ನ ಪುನೀತ್ ರಾಜ್ ಕುಮಾರ್ ಮತ್ತು ಸಂಘಟನೆಯ ಸಂಸ್ಥಾಪಕ ಯುವ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ರವರ ಹುಟ್ಟುಹಬ್ಬದ ಅಂಗವಾಗಿ ವಿಭಾಗೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಕುಮಾರ್ ಆಸ್ಪತ್ರೆಯ ವೈದ್ಯ ಡಾ.ಜಿ.ಎಸ್.ಶ್ರೀಧರ್, ಸಮಾಜ ಸೇವಕ ಬಿ.ಆರ್.ಶಶಿಧರ್ ಮತ್ತು ನಿವೃತ್ತ ಶಿಕ್ಷಕ ಎಂ.ಆರ್.ಸೋಮಶೇಖರ್ ಬ್ಯಾಟ್ ಬೀಸುವುದರ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ. ಕುಮಾರ್, ಕಾಂಗ್ರೆಸ್ ಯುವ ಮುಖಂಡ ನಿಖಿಲ್ ರಾಜು,ಸಂಘಟನೆ ಯುವ ಘಟಕದ ಜಿಲ್ಲಾಧ್ಯಕ್ಷ ಶ್ರೀಧರ್ ,ಉಪಾಧ್ಯಕ್ಷ ಬಿ.ಬಿ. ಬಸವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್, ತಾಲ್ಲೂಕು ಕಾರ್ಯದರ್ಶಿ ರವಿ ಹಿಂಡಿಸ್ಕೆರೆ, ನಗರ ಕಾರ್ಯದರ್ಶಿ ಲೋಕೇಶ್, ಕಾರ್ಮಿಕ ಘಟಕದ ಉಪಾಧ್ಯಕ್ಷ ಉಮಾಶಂಕರ್, ಕಾರ್ಯದರ್ಶಿ ಭರತ್, ಗ್ರಾಮ ಪಂಚಾಯತ್ ಸದಸ್ಯರಾದ ಜಗನ್ನಾಥ,ಕಲ್ಯಾಣಮ್ಮ, ಬನಶಂಕ್ರಮ್ಮ,ಓಂಕಾರ ಸ್ವಾಮಿ ಮತ್ತು ನರಸಿಂಹಯ್ಯ ಮುಖಂಡರಾದ ಗಂಗಾಧರ್,ಡಾ.ಬಸವಪ್ರಸಾದ್, ಪ್ರಶಾಂತ್ ಸಂಘಟನೆ ಜಿಲ್ಲಾ ಪದಾಧಿಕಾರಿಗಳಾದ ಇಮ್ರಾನ್, ಯೂನಸ್ ಮತ್ತು ಯುವ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ರವರ ನೇತೃತ್ವದಲ್ಲಿ ಧರ್ಮಪುರ ಹೋಬಳಿಯ ಪಿ.ಡಿ.ಕೋಟೆ ಗ್ರಾಮ ಪಂಚಾಯತಿಗೆ ಅಧ್ಯಕ್ಷರಾಗಿ ಪಂಚಲಿಂಗೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಪುಟ್ಟಸ್ವಾಮಿಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುಟ್ಟಸ್ವಾಮಿಗೌಡ, ಡಿ ಸುಧಾಕರ್ ರವರ ನೇತೃತ್ವದಲ್ಲಿ ನನ್ನನ್ನು ಆಯ್ಕೆ ಮಾಡಲಾಗಿದೆ. 2023ರಲ್ಲಿ ಸುಧಾಕರ್ ಅವರು ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಸ್ಪಷ್ಟವಾಗುತ್ತಿದೆ. ಪಕ್ಷ ಹಾಗೂ ಜನರೊಂದಿಗೆ ಕೆಲಸ ಮಾಡುವುದಾಗಿ ಅವರು ಇದೇ ವೇಳೆ ತಿಳಿಸಿದರು. ಈ ಸಂದರ್ಭದಲ್ಲಿ ಪಿ.ಡಿ.ಕೋಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪುಟ್ಟಸ್ವಾಮಿಗೌಡ, ಅಭಿಮತ ಪತ್ರಿಕೆಯ ಸಂಪಾದಕರಾದ ಜಿ.ಎಲ್.ಮೂರ್ತಿ, ಗಾಂಧಿನಗರ ಮಹಂತೇಶ್, ಸಿದ್ಧಾರ್ಥ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಭಾಗವಹಿಸಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…