Subscribe to Updates
Get the latest creative news from FooBar about art, design and business.
- ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
- ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
- SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
- ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
- ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ
- ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
- ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
- ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
Author: admin
ಪಶ್ಚಿಮ ಬಂಗಾಳ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಕೇಂದ್ರ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಗಳ ವಿಚಾರದಲ್ಲಿ ಮಧ್ಯಪ್ರವೇಶಿಸುವುದನ್ನು ಖಂಡಿಸಿರುವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯು ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುತ್ತಿದೆ ಎಂದು ಅವರು ಹೇಳಿದರು. ಬಿಜೆಪಿ ಆಡಳಿತದಲ್ಲಿ ಸರ್ವಾಧಿಕಾರಿಗಳಾದ ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸ್ಸೊಲಿನಿ ಆಳ್ವಿಕೆಗಿಂತಲೂ ಹೀನಾಯ ಸ್ಥಿತಿ ನಿರ್ಮಾಣವಾಗಿದೆ . ಕೇಂದ್ರ ಸಂಸ್ಥೆಗಳಿಗೆ ಕೆಲಸ ಮಾಡಲಾಗುತ್ತಿಲ್ಲ. ಯಾಕೆಂದರೆ ಅವುಗಳಿಗೆ ಸ್ವಾಯತ್ತೆ ಇಲ್ಲ. ಸ್ವಾಯತ್ತೆ ಎಂಬುದು ಇಬ್ಬರು ವ್ಯಕ್ತಿಗಳು ಹಾಗೂ ಬಿಜೆಪಿ ಕೈಯಲ್ಲಿದೆ. ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಭೋಪಾಲ್: ಹೊಟೇಲ್ ನಲ್ಲಿ ಬಾಲಕಿಗೆ ತಾಳಿ ಕಟ್ಟಿ, ಬಳಿಕ ಅದೇ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಭೋಪಾಲ್ ನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಹನುಮಗಂಜ್ ಪೊಲೀಸರು, ಬಾಲಕಿ 9ನೇ ತರಗತಿಯ ವಿದ್ಯಾರ್ಥಿನಿ. ಆಕೆಯನ್ನು ಹೋಟೆಲ್ ಗೆ ಕರೆತರುವಾಗ ಆ ವ್ಯಕ್ತಿ ಆಕೆಯ ಹಣೆಗೆ ಸಿಂಧೂರ ಇಟ್ಟು ಕರೆತಂದಿದ್ದ. ಹೋಟೆಲ್ ಕೊಠಡಿಯಲ್ಲಿ ಸಾಂಕೇತಿಕ ವಿವಾಹವಾದ ಬಳಿಕ, ದೈಹಿಕ ಸಂಬಂಧ ಬೆಳೆಸಿದ್ದ. ಇದಾಗಿ ಕೆಲ ದಿನಗಳ ಅವಧಿಯಲ್ಲಿ ಮತ್ತೆ ಎರಡು ಬಾರಿ ದೈಹಿಕ ಸಂಪರ್ಕ ಮಾಡಿದ್ದ ಎಂದು ತಿಳಿಸಿದ್ದಾರೆ. ಇನ್ನು ತಾನೂ ಸಾಂಕೇತಿಕ ವಿವಾಹವಾಗಿರುವ ವಿಚಾರ ಬಾಲಕಿ ತನ್ನ ಮನೆಯವರಿಗೆ ಕೆಲ ದಿನಗಳ ಬಳಿಕ ತಿಳಿಸಿದ್ದಳು. ಕೂಡಲೇ ಅವರು ಯುವಕನ ಮನೆಯವರನ್ನು ಸಂಪರ್ಕಿಸಿದ್ದರು. ಆದರೆ, ಅವರು ಆಕೆಯನ್ನು ಸೊಸೆಯನ್ನಾಗಿ ಸ್ವೀಕರಿಸಲು ನಿರಾಕರಿಸಿದರು. ಹೀಗಾಗಿ ಯುವಕ ಕೂಡ ಬಾಲಕಿ ಜತೆಗಿನ ಸಂಪರ್ಕ ಕಡಿದುಕೊಂಡಿದ್ದಾನೆ. ಇದರಿಂದಾಗಿ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ…
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾಗೆ ಭಾರತ ಅಕ್ಕಿ, ಔಷಧ, ಹಾಲಿನ ಪುಡಿ ಹೀಗೆ ಅಗತ್ಯ ವಸ್ತುಗಳನ್ನು ಕಳುಹಿಸಿದೆ. ಭಾನುವಾರ ದ್ವೀಪರಾಷ್ಟ್ರದ ರಾಜಧಾನಿ ಕೊಲಂಬೋ ತಲುಪಿದ ಹಡಗು, ಅಗತ್ಯ ವಸ್ತುಗಳನ್ನು ಶ್ರೀಲಂಕಾ ಸರ್ಕಾರಕ್ಕೆ ಹಸ್ತಾಂತರಿಸಿದ್ದು, 9,000 ಮೆಟ್ರಿಕ್ ಟನ್ ಅಕ್ಕಿ, 50 ಮೆಟ್ರಿಕ್ ಟನ್ ಹಾಲಿನ ಪುಡಿ ಹಾಗೂ 25 ಮೆಟ್ರಿಕ್ ಟನ್ ಗಿಂತ ಹೆಚ್ಚು ಔಷಧಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಭಾರತೀಯ ಹೈಕಮಿಷನರ್ ಗೋಪಾಲ್ ಬಾಗ್ಲೆ ಲಂಕಾದ ವಿದೇಶಾಂಗ ಸಚಿವ ಜಿಎಲ್ ಪೀರಿಸ್ ಅವರಿಗೆ ಹಸ್ತಾಂತರಿಸಿದರು. ಹಾಲಿನ ಪುಡಿ, ಅಕ್ಕಿ ಹಾಗೂ ಔಷಧ ಸೇರಿದಂತೆ 200 ಕೋಟಿ ರೂ. ಮೌಲ್ಯದ ಮಾನವೀಯ ನೆರವು ನೀಡಲಾಗಿದೆ. ಈ ಸಹಾಯಕ್ಕೆ ತಮಿಳುನಾಡು ಮುಖ್ಯಮಂತ್ರಿಗೂ ಹಾಗೂ ಭಾರತಕ್ಕೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಟ್ವೀಟ್ನಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಪಂಜಾಬ್: 6 ವರ್ಷದ ಮಗು ಕೊಳವೆ ಬಾವಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಹೋಷಿಯಾರ್ ಪುರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ರಿತಿಕ್ ರೋಷನ್ ಎಂಬ 6 ವರ್ಷ ವಯಸ್ಸಿನ ಬಾಲಕ ಆಟವಾಡುತ್ತಿದ್ದ ವೇಳೆ 300 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದು, ಘಟನೆ ಸಂಬಂಧ ಸಂಬಂಧ ಹೊಲದ ಮಾಲೀಕನ ವಿರುದ್ಧ ವಿವಿಧ ಐಪಿಸಿ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ. ಭಾನುವಾರ ಹೊಲದಲ್ಲಿ ಆಟವಾಡುತ್ತಿದ್ದ ರಿತಿಕ್ ನನ್ನು ನಾಯಿಗಳು ಅಟ್ಟಿಸಿಕೊಂಡು ಬಂದಿದೆ. ಈ ವೇಳೆ ಆತ ಹೆದರಿ, ಸೆಣಬಿನ ಚೀಲ ಮುಚ್ಚಲಾಗಿದ್ದ 9 ಇಂಚಿನ ಅಗಲ ಇರುವ ಕೊಳವೆ ಬಾವಿಯನ್ನು ಹತ್ತಿದ್ದು, ಈ ವೇಳೆ ಮಗು ಕೊಳವೆ ಬಾವಿಯೊಳಗೆ ಕುಸಿದು ಬಿದ್ದಿದ್ದಾನೆ. 7 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ, ಮಗುವನ್ನು ಬಾವಿಯಿಂದ ಹೊರಗೆ ತರಲಾಗಿತ್ತು. ಆದರೆ, ಮಗುವಿನ ಶ್ವಾಸಕೋಶದಲ್ಲಿ ಹೆಚ್ಚು ನೀರು ಪ್ರವೇಶಿಸಿದ್ದರಿಂದ ಮಗು ಉಳಿಯಲಿಲ್ಲ ಎಂದು ಹಿರಿಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಕೋಲಾರ: ಒಂದೂವರೆ ವರ್ಷದ ಮಗುವಿನೊಂದಿಗೆ ತಾಯಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ನಡೆದಿದೆ. ತಾಯಿ ಕೀರ್ತಿ (23), ಹಾಗೂ ಮಗಳು ಯೋಗಾಶ್ರೀ ಮೃತಪಟ್ಟವರಾಗಿದ್ದಾರೆ. ಈ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಆರಂಭಿಸಿದ್ದಾರೆ. ಈ ಮಧ್ಯೆ ಕೌಟುಂಬಿಕ ಕಲಹವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರು ಕೀರ್ತಿಯ ಪತಿ ಸುಧಾಕರ್ ಎಂಬವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯ ಬಳಿಕ ಹೆಚ್ಚಿನ ವಿವರಗಳು ತಿಳಿದು ಬರಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಗುಬ್ಬಿ: ಪೆದ್ದನಹಳ್ಳಿ ದಲಿತ ಯುವಕರ ಹತ್ಯೆಯ ಮುಖ್ಯ ಆರೋಪಿಗಳನ್ನು ರಕ್ಷಣೆ ಮಾಡುವಲ್ಲಿ ಸ್ಥಳೀಯ ಶಾಸಕರು ಮುಂದಾಗಿದ್ದಾರೆ ಹೆಣ್ಣೂರು ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ಪೆದ್ದನಹಳ್ಳಿ ಯಲ್ಲಿ ನಡೆದ ಇಬ್ಬರು ದಲಿತ ಯುವಕನ ದಾರುಣ ಹತ್ಯೆಯಲ್ಲಿ ಶಾಮೀಲಾಗಿರುವ ಮುಖ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತಾಳಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಆರೋಪಿಸಿದರು. ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದ ದಲಿತ ಯುವಕರ ಹತ್ಯೆಯನ್ನು ಖಂಡಿಸಿ ಇಂದು ನಗರದ ಪ್ರವಾಸಿ ಮಂದಿರದಿಂದ ಹೊರಟಂತಹ ಕಾಲ್ನಡಿಗೆ ಜಾಥಾ ಹಾಗೂ ತುಮಕೂರು ಚಾಲೋ ಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ ನಡೆಯುತ್ತಿದ್ದರೂ ಸರ್ಕಾರ ದಲಿತರ ರಕ್ಷಣೆ ಮಾಡಲು ಮುಂದಾಗುತ್ತಿಲ್ಲ ಪೆದ್ದನಹಳ್ಳಿ ಪ್ರಕರಣಗಳು ಗಂಭೀರವಾಗಿ ನಡೆದರೂ ಸಹ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಸಾಕಷ್ಟು ನಿರ್ಲಕ್ಷ ತಾಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿ ಬಿಡಿಸುವಂತಹ ಘಟನೆ ಆಗಿದ್ದರು ಸಹ…
ಪಟ್ನಾ: ರಾಜ್ಯದಲ್ಲಿನ ಸರ್ವಪಕ್ಷಗಳ ಅಭಿಪ್ರಾಯ ಪಡೆದ ಬಳಿಕ ‘ಜಾತಿ’ ಸಮೀಕ್ಷೆ ಕಾರ್ಯವನ್ನು ತಮ್ಮ ಸರ್ಕಾರ ಶೀಘ್ರವೇ ಕೈಗೊಳ್ಳಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೇಳಿದ್ದಾರೆ. ಜಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ಮೇ 27ರಂದು ಸರ್ವಪಕ್ಷಗಳ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ. ರಾಜ್ಯದಲ್ಲಿ ಜಾತಿ ಆಧಾರಿತ ಸಮೀಕ್ಷೆ ಕುರಿತು ಸರ್ವಪಕ್ಷಗಳ ಸಭೆಯಲ್ಲಿ ಎಲ್ಲರ ಅಭಿಪ್ರಾಯಗಳನ್ನು ಕ್ರೋಡೀಕರಿಸುತ್ತೇವೆ. ಬಳಿಕ ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸಂಪುಟದ ಮುಂದಿಡಲಾಗುತ್ತದೆ ಎಂದು ತಿಳಿಸಿದರು. ಮೇ 27ರಂದು ಉದ್ದೇಶಿಸಿರುವ ಸರ್ವಪಕ್ಷಗಳ ಸಭೆಗೆ ಕೆಲವು ಪಕ್ಷಗಳು ಸಮ್ಮತಿಸಿವೆ. ಕೆಲವು ಪಕ್ಷಗಳು ಇನ್ನಷ್ಟೇ ಉತ್ತರ ನೀಡಬೇಕಿದೆ. ಈ ಕುರಿತ ಪ್ರಸ್ತಾವನೆಯನ್ನು ಸಂಪುಟದ ಮುಂದಿಟ್ಟ ಬಳಿಕ, ಜಾತಿ ಆಧಾರಿತ ಸಮೀಕ್ಷೆ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: ಶಾಲಾ ಹಾಗೂ ಕಾಲೇಜು ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಬಿ.ಸಿ.ನಾಗೇಶ್, ನಮ್ಮ ಸರ್ಕಾರದ ಕೆಲಸಗಳನ್ನು ಸಹಿಸಿಕೊಳ್ಳದೇ ಅನಾವಶ್ಯಕವಾಗಿ ಸುಳ್ಳು ಪ್ರಚಾರ ಮಾಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ. ದ್ವಿತೀಯ ಪಿಯುಸಿ ಇತಿಹಾಸ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದರು. ಕಳೆದ ವರ್ಷ ಹಲವರು ಕಾರಣಗಳಿಂದ ಶಾಲೆ ಆರಂಭವಾಗಲ್ಲ ಎಂದಿದ್ದರು. ಶಾಲೆ ಪ್ರಾರಂಭ ಎಂದಾಗಲೂ ಕೋವಿಡ್ ನೆಪ ಹೇಳಿದ್ದರು. ಬಡವರ ಪ್ರಾಣದ ಜತೆ ಚೆಲ್ಲಾಟ ಎಂದಿದ್ದರು. ಶಾಲೆಯಲ್ಲಿನ ಬಡ ವಿದ್ಯಾರ್ಥಿಗಳ ವ್ಯಾಸಂಗ ಗಮನಿಸಿ ಸರ್ಕಾರ ಶಾಲೆ ಪ್ರಾರಂಭಿಸಿತು. ಹಿಜಾಬ್ ವಿಚಾರದಲ್ಲಿ ತಗಾದೆ ತೆಗೆದರು. ಅದು ಸರಿಯಾಗಲಿಲ್ಲ. ಕೋರ್ಟ್ ಆದೇಶ ಬಂದಾಗ ಅದನ್ನೂ ಸಹಿಸಲಿಲ್ಲ. ಬೊಮ್ಮಾಯಿ ಸರ್ಕಾರದ ಕೆಲಸಗಳನ್ನು ಸಹಿಸದೇ ವಿರೋಧ ಪಕ್ಷದವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹಿತ 29 ಮಂದಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆ ನಡೆಸುವ ಮೂಲಕ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಹಿತ 29 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಈ ಸಂಬಂಧ ಮೇ 24ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಬೇಕು ಎಂದು 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ನಿಂದ ಸಮನ್ಸ್ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಟಿಯಾಲ: 1988 ರ ರೋಡ್ ರೇಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಸೋಮವಾರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸಿಧು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಸೋಮವಾರ ಬೆಳಗ್ಗೆ ಭಾರೀ ಭದ್ರತೆಯಲ್ಲಿ ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ನವಜೋತ್ ಸಿಧು ಜೈಲಿನಲ್ಲಿ ವಿಶೇಷ ಆಹಾರಕ್ರಮವನ್ನು ಬಯಸಿದ್ದಾರೆ ಎಂದು ಕ್ರಿಕೆಟಿಗ-ರಾಜಕಾರಣಿಯ ವಕೀಲ ಎಚ್ ಪಿಎಸ್ ವರ್ಮಾ ಅವರು ಹೇಳಿದ್ದಾರೆ. ವೈದ್ಯರ ತಂಡ ಆಸ್ಪತ್ರೆಯಲ್ಲಿ ನವಜೋತ್ ಸಿಧು ಅವರ ವಿವರವಾದ ವೈದ್ಯಕೀಯ ಪರೀಕ್ಷೆಯನ್ನು ನಡೆಸುತ್ತದೆ ಎಂದು ಅವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5