Subscribe to Updates
Get the latest creative news from FooBar about art, design and business.
- ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
- ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
- ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
- ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
- ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
- SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
- ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
Author: admin
ಧಾರವಾಡ: ನಿಶ್ಚಿತಾರ್ಥ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾದ ಘಟನೆ ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ 6 ಜನರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗಾಯಗೊಂಡಿದ್ದ ಬಾಲಕಿ ಮನುಶ್ರೀ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಚಾಲಕನ ಅಜಾಕರೋಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಬೆನಕಟ್ಟಿ ಗ್ರಾಮದ ಅನನ್ಯಾ (14), ಹರೀಶ್ (13), ಶಿಲ್ಪಾ (34), ನೀಲವ್ವ (60), ಮಧುಶ್ರೀ (20) ಮಹೇಶ್ವರಯ್ಯ (11), ಶಂಭುಲಿಂಗಯ್ಯ (35) ಹಾಗೂ ಮನುಶ್ರೀ (16) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಮೈಸೂರು: ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ತಯಾರಿಯ ಅಧ್ಯಕ್ಷರಾಗಿರುವುದು ದುರಂತ. ನಾವೆಲ್ಲ ಸೇರಿ ಶಿಕ್ಷಣ ಹಾಳು ಮಾಡುತ್ತಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ ಪಠ್ಯ ಯಾವುದೇ ಕಾರಣಕ್ಕೂ ಬೇಡ. ಯಜ್ಞ ಕುಂಡ ಯಾವ ಕಡೆ ಇರಬೇಕು ಎಂದು ಪಠ್ಯ ಬೋಧನೆ ಮಾಡುವುದು ಯಾರಿಗೆ ಬೇಕು? ನಾರಾಯಣ ಗುರು ಸಾಮಾಜಿಕ ಕ್ರಾಂತಿಯ ಹರಿಕಾರ. ಅವರ ಪಠ್ಯ ತೆಗೆಯುವುದು ತಪ್ಪು ಎಂದರು. ಹೆಡ್ಗೆವಾರ್ ಯಾರು ಎನ್ನುವುದೇ ನಮಗೆ ಗೊತ್ತಿಲ್ಲ. ಬಾಯಿಗೆ ಬಂದಂಗೆ ಯಾರು ಯಾರ್ಯಾರೋ ಪಾಠ ಸೇರಿಸಿದರೆ ಹೇಗೆ? ಹೆಡ್ಗೆವಾರ್ ಗೂ ಟಿಪ್ಪುಗೆ ಹೋಲಿಕೆ ಮಾಡುತ್ತೀರಾ ನೀವು? ಇದು ಸರಿನಾ? ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಡಿದ ವೀರ ಚರಿತೆ ಗೊತ್ತಿಲ್ವಾ? ಹೆಡ್ಗೆವಾರ್ ಏನೂ ಮಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ. ಬ್ರಿಟಿಷರ ಮುಂದೆ ಮಂಡಿಯೂರಿದ್ದು ಯಾರು ವಿಶ್ವನಾಥ್ ಎಂದು ಪ್ರಶ್ನಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಬಾಗಲಕೋಟ: ಜಿಲ್ಲೆಯ ಜಮಖಂಡಿ ನಗರದ ಬಸ್ ನಿಲ್ದಾಣ ಮಳೆಯ ಪರಿಣಾಮ ನದಿಯಂತಾದ ಘಟನೆ ನಡೆದಿದ್ದು, ರಸ್ತೆಯಲ್ಲೇ ನೀರು ಹರಿದು ವಾಹನ ಸವಾರರು, ಸಾರ್ವಜನಿಕರು ಪರದಾಡುವಂತಾಗಿದೆ. ದಿವಂಗತ ಶಾಸಕ ಸಿದ್ದು ನ್ಯಾಮಗೌಡ ಅವರ ಕಾಲದಲ್ಲಿ ನಿರ್ಮಾಣವಾದ ಜಮಖಂಡಿ ಬಸ್ ನಿಲ್ದಾಣದಲ್ಲಿ ಪ್ರತೀ ವರ್ಷ ನೀರು ರಸ್ತೆಯಲ್ಲೇ ಹರಿಯುವುದು ಮತ್ತು ರಸ್ತೆಯಲ್ಲಿ ನೀರು ನಿಂತು ಈಜುಕೊಳದಂತೆ ಮಾರ್ಪಡುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಸತತವಾಗಿ ಮಳೆ ಸುರಿದರೆ ಸಾಕು, ಈ ರಸ್ತೆ ನದಿಯಂತಾಗಿ ಬಿಡುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರವೇ ಇಲ್ಲವೇ ಎನ್ನುವ ಪ್ರಶ್ನೆಗಳು ಕೂಡ ಇದೀಗ ಕೇಳಿ ಬಂದಿದೆ. ಬಸ್ ನಿಲ್ದಾಣದೊಳಗೆ ಇಂತಹದ್ದೊಂದು ಸಮಸ್ಯೆ ಇದ್ದರೂ ಬಸ್ ನಿಲ್ದಾಣ ನಿರ್ವಹಣೆ ಮಾಡುವವರು ಈ ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ. ಇದಕ್ಕೆ ಯಾರು ಜವಾಬ್ದಾರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ವರದಿ: ಬಂದೇನವಾಜ ನದಾಪ , ಜಮಖಂಡಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿ ಸಮೀಪ ಯಡಿಯೂರು ಕಲ್ಲೂರು ಮುಖ್ಯರಸ್ತೆಯಲ್ಲಿ ಏಕಕಾಲದಲ್ಲಿ ಮೂರು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಜಲಧಿಗೆರೆ ಕಡೆಯಿಂದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕಲ್ಲೂರು ಕಡೆಗೆ ಡಿಸ್ ಕವರ್ ಮತ್ತು ಪಲ್ಸರ್ ಬೈಕ್ ಗಳಲ್ಲಿ ತೆರಳುತ್ತಿದ್ದ ನಾಲ್ವರು ತೆರಳುತ್ತಿದ್ದರು ಎನ್ನಲಾಗಿದ್ದು, ಇತ್ತ ಕಲ್ಲೂರು ಕಡೆಯಿಂದ ಸ್ಪೆಂಡರ್ ಬೈಕಿನಲ್ಲಿ ಇಬ್ಬರು ಬರುತ್ತಿದ್ದರು ಎನ್ನಲಾಗಿದೆ. ಈ ಮೂರು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ಕು ಸಾವನ್ನಪ್ಪಿದ್ದಾರೆ. ಇನ್ನು ಓರ್ವನ ಸ್ಥಿತಿ ಗಂಬೀರವಾಗಿದ್ದು ಸ್ಥಳೀಯರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಒಬ್ಬ ಅಪಾಯದಿಂದ ಪಾರಾಗಿದ್ದಾನೆ. ಮಾಯಸಂದ್ರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಗುಬ್ಬಿ: ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್ ನಾಗಮೋಹನ್ ದಾಸ್ ಆಯೋಗದ ವರದಿ ತಕ್ಷಣವೇ ಜಾರಿಗೊಳಿಸಿ ಎಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಾಲ್ಮೀಕಿ ಸಮಾಜದ ಗುರುಗಳಾದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ನಿವೃತ್ತ ನ್ಯಾಯಮೂರ್ತಿ ಹೆಚ್ .ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಇಂದಿಗೆ ಮೂರು ದಿವಸಗಳು ಕಳೆದರೂ ಇದುವರೆಗೂ ಸರ್ಕಾರ ನಮ್ಮ ಸಮುದಾಯದ ಬೇಡಿಕೆ ಈಡೇರಿಸುವಲ್ಲಿ ಮುಂದಾಗದಿರುವುದು ದುರಂತವೇ ಸರಿ ಎಂದು ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ನರಸಿಂಹಮೂರ್ತಿ ಬೇಸರ ವ್ಯಕ್ತಪಡಿಸಿದರು. ನಮ್ಮ ರಾಜ್ಯದಲ್ಲಿ ಸುಮಾರು ಪರಿಶಿಷ್ಟ ಪಂಗಡಕ್ಕೆ ಸೇರಿದ ನಾವುಗಳು ಸುಮಾರು 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದ್ದರೂ ಪ್ರಸ್ತುತ ದಿನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಿದ್ದೇವೆ. ಸರ್ಕಾರಗಳು ಚುನಾವಣೆ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಹಿತ ಕಾಯುವ ಆಶ್ವಾಸನೆ ನೀಡಿ…
ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಪರಿಶಿಷ್ಟ,ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದವರ ಕಲ್ಯಾಣಕ್ಕಾಗಿ ಆರ್ಥಿಕ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಸಬಲಿಕರಣವಾಗಲು ನ್ಯಾಯಮೂರ್ತಿ ಎಚ್.ನಾಗಮೋಹನದಾಸ್ ಅವರ ವರದಿಯನ್ನು ಕೂಡಲೇ ಜಾರಿಗೊಳಿಸುವಂತೆ ತುರುವೇಕೆರೆ ತಾಲೂಕು, ವಾಲ್ಮೀಕಿ ಸಮಾಜದ ವತಿಯಿಂದ ಹಾಗೂ ಪ್ರಗತಿಪರ ದಲಿತ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಪ್ರವಾಸಿ ಮಂದಿರದ ಹತ್ತಿರ ಜಮಾವಣೆಗೊಂಡ, ಪ್ರತಿಭಟನಾಕಾರರು ಮೊದಲು ಮುಖ್ಯ ರಸ್ತೆಯ ಮೂಲಕ ಸಂಚರಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನ್ಯಾಯಮೂರ್ತಿ, ನಾಗಮೋಹನ್ ದಾಸ್ ಅವರ , ವರದಿಯನ್ನು ಜಾರಿಗೊಳಿಸುವಂತೆ ಘೋಷಣೆಗಳನ್ನು ಕೂಗುತ್ತಾ, ತುರುವೇಕೆರೆ ತಾಲೂಕು ಕಚೇರಿ ಕಚೇರಿ ಮುಂಭಾಗ ಮಾನವ ಸರಪಳಿ ನಿರ್ಮಿಸಿ ,ಪ್ರತಿಭಟನೆ ನಡೆಸಿದರು. ನಂತರ ತಾಲೂಕು ಕಚೇರಿಯ ಬಳಿಬಂದು ತಹಶೀಲ್ದಾರ್ ನಯೀಮ್ ಉನ್ನಿಸಾ ಅವರಿಗೆ ಮನವಿ ಪತ್ರ ನೀಡಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಚಿದಾನಂದ, ಕರ್ನಾಟಕ ರಾಜ್ಯ ಸರ್ಕಾರವು ಪರಿಶಿಷ್ಟ ವರ್ಗದವರಿಗೆ ಮೀಸಲಾತಿಯನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ವರದಿಯನ್ನು ಕೈಗೆತ್ತಿಕೊಂಡು ಸಂವಿಧಾನಬದ್ಧವಾಗಿ ನೀಡಬೇಕಾಗಿರುವ ಪರಿಶಿಷ್ಟ…
ಸರಗೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವಂತೆ, ಹಾಗೂ ಪರಿಶಿಷ್ಟರು, ಹಿಂದುಳಿದವರ ಕಲ್ಯಾಣಕ್ಕಾಗಿ ನ್ಯಾ.ಎಚ್.ಎನ್.ನಾಗಮೋಹನ್ದಾ ಸ್ ವರದಿಯನ್ನು ಕೂಡಲೇ ಜಾರಿಗೊಳಿಸುವಂತೆ ನಾಯಕ ಸಮಾಜದ ಸ್ವಾಮೀಜಿಗಳು ನಡೆಸುತ್ತಿರುವ ಧರಣಿ ಸತ್ಯಗ್ರಹವನ್ನು ಬೆಂಬಲಿಸಿ ಪಟ್ಟಣದಲ್ಲಿ ತಾಲ್ಲೂಕಿನ ನಾಯಕ ಸಂಘಟನೆಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಮೊದಲ ಮುಖ್ಯರಸ್ತೆ, ಎರಡನೇ ಮುಖ್ಯರಸ್ತೆ ನಂತರ ಸಂತೇಮಾಳದಿಂದ ಮುಖ್ಯ ರಸ್ತೆಯಲ್ಲಿ ಸಾಗಿ ಬಳಿಕ ಬಸ್ನಿಲ್ದಾಣದ ಎದುರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ನಂತರ ತಾಲ್ಲೂಕು ಕಚೇರಿಗೆ ಆಗಮಿಸಿ ತಾಹಸೀಲ್ದಾರ್ ಚಲುವರಾಜು ರವರು ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ನಾಯಕ ಸಂಘದ ಅಧ್ಯಕ್ಷ ಪುರದಕಟ್ಟೆ ಬಸವರಾಜು, ಬಿಜೆಪಿ ಸರಕಾರ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸಂವಿಧಾನ ಬದ್ಧವಾಗಿ ಸರಕಾರ ನೀಡಬೇಕಾಗಿರುವ ಪರಿಶಿಷ್ಟರ ಶೇ.7.5, ಪರಿಶಿಷ್ಟ ಜಾತಿಗೆ ಶೇ.17 ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು. ಪಪಂ…
ತಿಪಟೂರು: ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಮೀಸಲಾತಿ ಹೆಚ್ಚಳ ಮಾಡಬೇಕು ಸಂವಿಧಾನ ಬದ್ದವಾಗಿ ದೊರೆಯಬೇಕಾದ ಮೀಸಲಾತಿಯನ್ನ ಸರ್ಕಾರ ಕೂಡಲೇ ಜಾರಿಗೊಳಿಸಬೇಕು ಎಂದು ತಿಪಟೂರಿನಲ್ಲಿ ಮಹಶ್ರೀವಾಲ್ಮೀಕಿ ಸಂಘ ಹಾಗೂ ಮದಕರಿ ನಾಯಕ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ನಗರಸಭಾ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಬಿ.ಹೆಚ್.ರಸ್ತೆ ಮೂಲಕ ಸಾಗಿ ತಿಪಟೂರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು ಪತ್ರಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮದಕರಿ ನಾಯಕ ಸಂಘದ ಅಧ್ಯಕ್ಷ ಮಹೇಶ್, ರಾಜ್ಯದಲ್ಲಿ ವಾಲ್ಮೀಕಿ ನಾಯಕ ಸಮುದಾಯ ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಸಾಮಾಜಿಕವಾಗಿ ಹಿಂದುಳಿದಿದ್ದು ಪರಿಶಿಷ್ಠ ಪಂಗಡಗಳಲ್ಲಿಯೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ವಾಲ್ಮೀಕಿನಾಯಕ ಸಮುದಾಯಕ್ಕೆ ಜನಸಂಖ್ಯೆ ಆಧಾರದಲ್ಲಿ 3% ಮೀಸಲಾತಿಯನ್ನು 7.5%ಕ್ಕೆ ಹೆಚ್ಚಳ ಮಾಡಬೇಕು ಹಾಗೂ ಪರಿಶಿಷ್ಟ ಜಾತಿ ಮೀಸಲಾಯಿಯನ್ನ ಶೇಕಡ 15ರಿಂದ 17ಕ್ಕೆ ಹೆಚ್ಚಿಸಬೇಕು ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಯಥವತ್ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಮೀಸಲು ಹಣ ಕಾಯ್ದೆ 2017 ಕಲಂ 7ಡಿ ಯನ್ನು…
ಹಿರಿಯೂರು: ಹಾವುಗಳು ಎಂದಾಕ್ಷಣ ಮಾರುದ್ದ ಓಡುವವರೇ ಹೆಚ್ಚು. ಇಂತಹವರ ಮಧ್ಯೆ ಚಿತ್ರದುರ್ಗ ನಗರದಲ್ಲಿ ಮಹಾನಾಯಕ ವಾರಪತ್ರಿಕೆ ಸಂಪಾದಕರಾಗಿ ಪತ್ರಿಕೆ ನಡೆಸುತ್ತಿರುವ ವ್ಯಕ್ತಿಯೊಬ್ಬರು ಯಾವ ಭಯವೂ ಇಲ್ಲದೆ 100ಕ್ಕೂ ಅಧಿಕ ವಿಷದ ಹಾವನ್ನು ಹಿಡಿದು ರಕ್ಷಣೆ ಮಾಡಿದ್ದಾರೆ.. ಚಾಕಚಕ್ಯತೆಯಿಂದ ಹಾವುಗಳನ್ನು ಹಿಡಿಯುವ ಇವರ ಧೈರ್ಯ, ಸಾಹಸಕ್ಕೆ ನಿಬ್ಬೆರಗಾಗಲೇಬೇಕು. ಚಿತ್ರದುರ್ಗ ನಗರದಲ್ಲಿ ವಾರಪತ್ರಿಕೆ ನಡೆಸುತ್ತಿರುವಂತಹ ಶಿವಕುಮಾರ್ ಅವರೇ ಈ ರೀತಿ ಸಾಧನೆ ಮಾಡುತ್ತಿರುವವರು. ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಪುರ ಸೇರಿದಂತೆ ಎಲ್ಲೇ ವಿಷದ ಹಾವು ಇರುವ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ಆ ಪ್ರದೇಶಕ್ಕೆ ತೆರಳಿ ಹಾವನ್ನು ರಕ್ಷಿಸಿ ಕಾಡಿಗೆ ಬಿಡುತ್ತಾರೆ. ಕನ್ನಡಿ ಹಾವು, ಹೆಬ್ಬಾವು, ಕೆರೆ ಹಾವು, ನೀರು ಹಾವು ಸೇರಿದಂತೆ ನಾನಾ ಜಾತಿಯ ಹಾವುಗಳನ್ನು ಪಳಗಿಸಿದ ಹೆಗ್ಗಳಿಕೆ ಇವರದು. ವಾಣಿವಿಲಾಸಪುರ ಗ್ರಾಮದ ಜಮೀನಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಸುಮಾರು ಆರು ಅಡಿ ಉದ್ದದ ಕೆರೆ ಹಾವನ್ನು ರಕ್ಷಣೆ ಮಾಡಿದ ಶಿವಕುಮಾರ್ ಅವರು, ಹಾವನ್ನು ರಕ್ಷಿಸಿ ಎಂಬ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಶಿವಕುಮಾರ್ ಅವರಿಗೆ …
ಕೆನಡಾ ದೇಶದ ಸಂಸತ್ತಿನಲ್ಲಿ ತುಮಕೂರು ಮೂಲದ ಸಂಸದ ಚಂದ್ರ ಆರ್ಯ ಅವರು ತಮ್ಮ ಮಾತೃ ಭಾಷೆ ಕನ್ನಡದಲ್ಲೇ ಮಾತನಾಡುವ ಮೂಲಕ ಗಮನ ಸೆಳೆದಿದ್ದು, ಕನ್ನಡದಲ್ಲಿ ಮಾತನಾಡಲು ಕೆನಡಾ ಸಂಸತ್ ನಲ್ಲಿ ಅವಕಾಶ ದೊರಕಿದ್ದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. “ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ, ಮತ್ತು ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ” ಎಂದು ಅವರು ತಮ್ಮ ಭಾಷಣದಲ್ಲಿ ತಿಳಿಸಿದರು. ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ರಾಷ್ಟ್ರ ಕವಿ ಕುವೆಂಪು ಬರೆದಿರುವ ಮತ್ತು ನಟ ಸರ್ವಭೌಮ ಡಾ.ರಾಜ್ ಕುಮಾರ್ ಹಾಡಿರುವ ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು ಎನ್ನುವ ಸಾಲುಗಳನ್ನು ಅವರು ಓದಿ ಹೇಳಿದರು. ಇನ್ನೂ ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಚಂದ್ರ ಆರ್ಯ ಅವರು, ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ…