Subscribe to Updates
Get the latest creative news from FooBar about art, design and business.
- ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
- ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
- ಕ್ವಿಂಟಾಲ್ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
- ಬೆಂಗಳೂರು ರೇಸ್ ಕೋರ್ಸ್ ತುಮಕೂರಿನ ಕುಣಿಗಲ್ ಗೆ ಸ್ಥಳಾಂತರ: ಸಂಪುಟ ನಿರ್ಣಯ
- ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
- ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
- ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
Author: admin
ಥಾಣೆ: ಪತಸಂಚಲನದ ವೇಳೆ ಕುಸಿದು ಬಿದ್ದು ಪೋಲಿಸ್ ಕಾನ್ ಸ್ಟೇಬಲ್ ಸಾವನ್ನಪ್ಪಿದ್ದಾರೆ ಘಟನೆ ಇಲ್ಲಿ ನಡೆದಿದೆ ನಡೆದಿದೆ. ನಗರ ಪೊಲೀಸ್ ಕ್ವಿಕ್ ರೆಸ್ಪಾನ್ಸ್ ಟೀಮ್ ನಲ್ಲಿ ಕಾರ್ಯನಿರ್ವಹಿಸುತ್ತದ್ದ ಮಹೇಶ ಮೋರೆ ಮೃತಪಟ್ಟ ಪೇದೆ. ಇಂದು ಬೆಳಗ್ಗೆ 7:30ರ ಸುಮಾರಿಗೆ ಪರೇಡ್ ನಡೆಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನ ಥಾಣೆ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಸಾವಿನ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ. ದಿನನಿತ್ಯ ಬೆಳಗಿನ ಪರೇಡ್ ನಡೆಯುವುದು ವಾಡಿಕೆ ಆದರಂತೆ ಇಂದು 7 ಗಂಟೆಗೆ ಸಿಬ್ಬಂ ಬಂದಿದ್ದರು. ಕೆಲ ಹೊತ್ತಿನಲ್ಲೇ ಈ ಘಟನೆ ನಡೆದಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ನಾಲ್ಕು ಡಿಜಿಟ್ ಗೆ ತಲುಪಿರುವುದಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ದಿನದಿಂದ ದಿನಕ್ಕೆ ರೇಷ್ಮೆಗೂಡಿನ ದರ ಏರಿಕೆಯಾಗುತ್ತಲ್ಲಿದ್ದು, ಒಂದು ಕೆಜಿ ರೇಷ್ಮೆಗೂಡಿನ ಒಂದು ಸಾವಿರ ರೂಪಾಯಿ ಗಡಿದಾಟಿದೆ. ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಇಂದು ದಾಖಲೆ ಮಟ್ಟದಲ್ಲಿ ರೇಷ್ಮೆ ಗೂಡ ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ 1043 ರೂಪಾಯಿಗೆ ಮಾರಾಟವಾಗಿದೆ. ರೇಷ್ಮೆ ಮಾರುಕಟ್ಟೆಗಳಲ್ಲಿ ರೇಷ್ಮೆ ಗೂಡಿಗೆ ಹೆಚ್ಚಿನ ದರ ಸಿಗದಂತೆ ನಿಯಂತ್ರಿಸುತ್ತಿದ್ದ ದಲ್ಲಾಳಿಗಳಿಗೆ ಕಡಿವಾಣ, ಮಾರುಕಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ, ರೇಷ್ಮೆ ಬೆಳೆಗಾರರಿಗೆ ಆಗುತ್ತಿದ್ದ ಕಿರುಕುಳಕ್ಕೆ ಬ್ರೇಕ್, ರೇಷ್ಮೆಗೂಡು ಕದಿಯುತ್ತಿದ್ದವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ, ಇ- ಪೆಮೆಂಟ್ ವ್ಯವಸ್ಥೆ ಜಾರಿ ಸೇರಿದಂತೆ ಸಚಿವ ಡಾ.ನಾರಾಯಣಗೌಡ ಅವರು ತೆಗೆದುಕೊಂಡ ಹಲವು ದಿಟ್ಟ ಕ್ರಮಗಳ ಪರಿಣಾಮವಾಗಿ ಇಂದು ದಾಖಲೆ ದರಕ್ಕೆ ರೇಷ್ಮೆ ಗೂಡು ಮಾರಾಟವಾಗುವ ಮೂಲಕ ರೈತರಿಗೆ ನೈಜ ಬೆಲೆ ಸಿಗಲು ಕಾರಣವಾಗಿದೆ.ರೇಷ್ಮೆ…
ಮೈಸೂರು: ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಅಗೌರವ ತೋರಿದ ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ, ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಮೈಸೂರು ವಿಶ್ವ ವಿದ್ಯಾಲಯದ ಸಂಶೋಧಕ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಗರದ ಮಾನಸಗಂಗೋತ್ರಿಯಲ್ಲಿರುವ ಶತಮಾನೋತ್ಸವ ಗಡಿಯಾರ ಆವರಣದಲ್ಲಿ ಸಮಾವೇಶಗೊಂಡ ವಿದ್ಯಾರ್ಥಿಗಳು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಗೌರವ ತೋರಿರುವುದು ಖಂಡನೀಯ. ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಮತ್ತು ಸೇವೆಯಿಂದ ವಜಾಗೊಳಿಸಬೇಕು ಎಂದು ಘೋಷಣೆ ಕೂಗಿದರು. ವಿವಿ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷ ಎಸ್.ಮರಿದೇವಯ್ಯ ಮಾತನಾಡಿ, ನ್ಯಾ ಮಲ್ಲಿಕಾರ್ಜುನ ಗೌಡ ಸಂವಿಧಾನ ವಿರೋಧಿ ಕೃತ್ಯ ಎಸಗಿದ್ದಾರೆ. ಅಂಬೇಡ್ಕರ್ ರವರ ಭಾವಚಿತ್ರವಿದ್ದಲ್ಲಿ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳುವ ಮೂಲಕ ಉದ್ಥಟತನದಿಂದ ವರ್ತಿಸಿದ್ದಾನೆ ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹೋರಾಟ ನಿರತ ಸಂಶೋಧನಾ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಕಾರ್ಯಕರ್ತರು ದಾಳಿ ಮಾಡಿ ಹೋರಾಟ ಹತ್ತಿಕ್ಕಲು ಹುನ್ನಾರ ಮಾಡಿರುವುದು ಖಂಡನೀಯ. ಪ್ರತಿಭಟನೆ…
ಕೇಂದ್ರ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ 1967ರ ಅನುಸಾರ ದೇಶದಲ್ಲಿ 42 ಭಯೋತ್ಪಾದಕ ಸಂಘಟನೆಗಳನ್ನು ಗುರುತಿಸಲಾಗಿದ್ದು, 31 ಮಂದಿಯನ್ನು ವೈಯಕ್ತಿಕವಾಗಿ ಭಯೋತ್ಪಾದಕರು ಎಂದು ಘೋಷಿಸಿರುವುದಾಗಿ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಸದಸ್ಯರಾದ ಎ.ವಿಜಯಕುಮಾರ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರ ನೀಡಿರುವ ಅವರು, ಭಯೋತ್ಪಾದಕ ಸಂಘಟನೆಗಳ ಜೊತೆ 13 ಕಾನೂನು ಬಾಹಿರ ಸಂಘಟನೆಗಳನ್ನು ಗುರಿತಿಸಿ ನಿಷೇಸಲಾಗಿದೆ ಎಂದು ಹೇಳಿದ್ದಾರೆ. ಗುರುತಿಸಲಾದ ವ್ಯಕ್ತಿಗಳು ಮತ್ತು ಸಂಘಟನೆಗಳ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಕಾರಿಗಳು ನಿಗಾ ವಹಿಸಿದ್ದಾರೆ. ಸದರಿ ಸಂಘಟನೆಗಳು ಬೇರೆ ಹೆಸರಿನಲ್ಲಿ ಮತ್ತೆ ಸಂಘಟನೆ ಮಾಡಲು ಅಥವಾ ತಮ್ಮ ಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.2019ರಲ್ಲಿ ಕಾನೂನಿಗೆ ತಿದ್ದುಪಡಿ ತಂದು ಭಯೋತ್ಪಾದಕರನ್ನು ಬಂಸುವ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಭಯೋತ್ಪಾದಕ ಸಂಘಟನೆಗಳ ನಾಯಕತ್ವ ಮತ್ತು ಮರುಸೇರ್ಪಡೆ ನಿಯಂತ್ರಣವಾಗಿದೆ ಎಂದು ತಿಳಿಸಿದ್ದಾರೆ. ಇದೇ ಸದಸ್ಯರ ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿರುವ ಸಚಿವ ನಿತ್ಯಾನಂದ…
ತುಮಕೂರು: ಪವತಿ ಖಾತೆಯ ಆಧಾರದಲ್ಲಿ ಪಹಣಿ, ಎಂ.ಆರ್ ಗಳು ಸಕ್ರಮವಾಗಿದ್ದರು, ಪ್ರತ್ಯೇಕ ಪೋಡಿ ಮಾಡಿಕೊಡದೇ ವಿನಾ ಕಾರಣ ಕಾಲಹರಣ ಮಾಡುತ್ತಿರುವ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಂಡು ನೊಂದ ಮಹಿಳೆಗೆ ನ್ಯಾಯದೊರಕಿಸಿ ಕೊಡಬೇಕೆಂದು ಶೂದ್ರಸೇನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಸಿ.ರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು. ನಿರ್ಮಲ ಕೆ.ಎನ್ ಕೋಂ ಲೇಟ್ ರಾಜಕುಮಾರ್ ಬಿನ್, ಕಮಲಮ್ಮ ತುಮಕೂರು ನಗರ ನಿವಾಸಿಯಾದ ಇವರ ಪತಿಯವರಾದ ಲೇಟ್ ರಾಜ್ ಕುಮಾರ್ ಬಿನ್ ಕಮಲಮ್ಮರವರಿಗೆ ಭೂ ನ್ಯಾಯ ಮಂಡಳಿಯಿಂದ 10 ಗುಂಟೆ ವಿಸ್ತೀರ್ಣದ ಜಮೀನು ಸರ್ವೇ ನಂ.3.3ರ ಚನ್ನನದಿಣ್ಣೆ ಪ್ರದೇಶದಲ್ಲಿ ಮಂಜೂರಾಗಿದ್ದು ನ್ಯಾಯಯುತವಾಗಿದೆ. ಹಾಗೂ ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳು ಸತ್ಯವಾಗಿವೆ. ತದನಂತರ ಇವರ ಪತಿಯಾದ ರಾಜ್ಕುಮಾರ್ ರವರು ಮರಣ ಹೊಂದಿದ್ದು, ಪವತಿ ಆಧಾರದಲ್ಲಿ ಇವರ ಹೆಸರಿಗೆ 10ಗುಂಟೆ ವಿಸ್ತೀರ್ಣದಲ್ಲಿ 02ಗುಂಟೆ ಸಾರ್ವಜನಿಕ ರಸ್ತೆಗೆ ಮಿಸಲಾಗಿದ್ದು, ಉಳಿದ 08 ಗುಂಟೆ ಇವರ ಹೆಸರಿಗೆ ಪಹಣಿ, ಎಂ.ಆರ್ , ದಾಖಲಾತಿಗಳಿವೆ, ಆದರೆ ಇದೇ ಸರ್ವೆ ನಂಬರ್…
ತುಮಕೂರು: ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಬಿ.ತೇಜಸ್ವಿನಿ ವಿರುದ್ಧ ಎಸ್ ಸಿ, ಎಸ್ ಟಿ ದೌರ್ಜನ್ಯ ಕಾಯ್ದೆಯಡಿ ನೀಡಿರುವ ದೂರು ಪ್ರಚೋದನೆಯಿಂದ ನೀಡಿರುವ ದೂರಾಗಿದೆ. ಈ ದೂರನ್ನು ರದ್ದು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾಧಿಕಾರಿಗೆ ಒತ್ತಾಯಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿರುವ ಮನವಿಯಲ್ಲಿ, ತಹಶೀಲ್ದಾರ್ ಮೇಲೆ ಕೆ.ವಿ.ಪರಮೇಶ್ವರಯ್ಯ ಬಿನ್ ವೆಂಕಟೇಶಯ್ಯನವರು ಎಸ್ ಸಿ ಎಸ್ ಟಿ ಕಾಯ್ದೆಯಡಿಯಲ್ಲಿ ದೂರು ನೀಡಿದ್ದಾರೆ. ಇವರು ಬೇರೆಯವರ ಪ್ರಚೋದನೆಯಿಂದ ದೂರು ನೀಡಿದ್ದಾರೆ. ಕೆಲವರು ತಮ್ಮ ವೈಯಕ್ತಿಕ ದ್ವೇಷ ಸಾಧಿಸಿಕೊಳ್ಳಲು ಅಮಾಯಕರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದ್ದಾರೆ. ತಹಶೀಲ್ದಾರ್ ತೇಜಸ್ವಿನಿಯವರು ಜಾತಿನಿಂದನೆ ಮಾಡಿರುವುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ. ೧೨ ಕುಟುಂಬಗಳಿರುವ ಗುಂಡುತೋಪಿನ ಪರಮೇಶ ಮತ್ತು ಅವರ ಕುಟುಂಬಸ್ಥರಿಗೆ ಗಂಜಿ ಕೇಂದ್ರವನ್ನು ತೆರೆಯುವ ಮೂಲಕ ತಹಶೀಲ್ದಾರ್ ಮಾನವೀಯ ಕ್ರಮಕೈಗೊಂಡಿದ್ದರು. ಮಳೆ ಬಿಟ್ಟಾಗ ಸಾರ್ವಜನಿಕ ಬಳಕೆ ಉದ್ದೇಶಕ್ಕಾಗಿ ಸ್ತ್ರಿ ಶಕ್ತಿ ಭವನ ತೆರವುಗೊಳಿಸಿ ಎಂದು ಹೇಳಿದ್ದಾರೆ ಎಂದು ತಹಶೀಲ್ದಾರ್ ಅವರನ್ನು ಸಮರ್ಥಿಸಿಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಪಾವಗಡ: ತಾಲ್ಲೂಕು ನಿಡಗಲ್ಲು ಹೋಬಳಿಯ ಚನ್ನಕೇಶವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ. ಎಸ್. ಡಿ.ಎಂ.ಸಿ.ಕಾರ್ಯಾಗಾರ ತರಬೇತಿ ಸಭೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ.ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ರಾಮಪ್ಪ ಹಾಗೂ ಮುಖ್ಯ ಶಿಕ್ಷಕ ವಿಶ್ವೇಶ್ವರಯ್ಯ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು. ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ರಾಮಪ್ಪ ಮಾತನಾಡಿ, ಎಸ್ .ಡಿ.ಎಂ.ಸಿ ಕಾರ್ಯಾಗಾರ ತರಬೇತಿ ಮೂರನೇ ಸಭೆ ಹಮ್ಮಿಕೊಂಡಿದ್ದೇವೆ. ಕಾರ್ಯಾಗಾರವಾದರೆ, ಒಂದು ದಿನ ಮುಂಚಿತವಾಗಿ ನಮ್ಮ ಸದಸ್ಯರಿಗೆ ಮಾಹಿತಿ ತಿಳಿಸಬೇಕು. ಯಾಕೆಂದರೆ ಇಲ್ಲಿನ ಜನರು ಕೂಲಿನಾಲಿ ಮಾಡಿಕೊಂಡು ಜೀವನ ನಡೆಸಿಕೊಂಡು ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಕಳಿಸುತ್ತಾರೆ ಅಂತದರಲ್ಲಿ ನಮಗೆ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸಭೆ ನಡೆಸುವುದಕ್ಕೆ ಕಷ್ಟವಾಗುತ್ತದೆ. ಈ ಶಾಲೆಗೆ ಯಾರು ಶ್ರೀಮಂತರ ಮಕ್ಕಳು ಬರುವುದಿಲ್ಲ ಇಲ್ಲಿಗೆ ಎಲ್ಲಾ ಬಡವರ ಮಕ್ಕಳು ಬರುತ್ತಾರೆ ಎಂದರು. ದೈಹಿಕ ಶಿಕ್ಷಕ ಲಕ್ಷ್ಮಿನಾರಾಯಣ್ ಸ್ವಾಗತ ಭಾಷಣ ಮಾಡಿದರು. ಶಾಲೆಯ ಮುಖ್ಯ ಶಿಕ್ಷಕರಾದ ವಿಶ್ವೇಶ್ವರಯ್ಯ, ಸಹ ಶಿಕ್ಷಕರು ಶ್ರೀನಿವಾಸ್, ಪೃಥ್ವಿರಾಜ್, ಊರಿನ ಗ್ರಾಮಸ್ಥ ರಾಮಕೃಷ್ಣಪ್ಪ, ಹಾಗೂ ಎಷ್ಟು ಎಸ್.ಡಿ.ಎಂ.ಸಿ ಸದಸ್ಯರು,…
ಮಧುಗಿರಿ: ‘ನಾಕುತಂತಿ’ ‘ಮೀಟಿದ’ ‘ನಾದಲೀಲೆ’ಯ ಗಾರುಡಿಗ ಯುಗದ ದನಿ ಬೇಂದ್ರೆ ಎಂದು ಹಿರಿಯ ಸಾಹಿತಿ ಪ್ರೊಪೆಸರ್ ಮೊ .ಲ.ನ.ಮೂರ್ತಿ ತಿಳಿಸಿದರು. ಪಟ್ಟಣದ ಟಿ.ವಿ.ವೆಂಕಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಏರ್ಪಡಿಸಿದ್ದ ದ.ರಾ.ಬೇಂದ್ರೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಸಿ ಕಾವ್ಯಪರಂಪರೆ ಮುಂದುವರೆಸಿಕೊಂಡು ಸ್ವಂತಿಕೆಯನ್ನು ತೋರಿದ ಕವಿ ನೋವನ್ನು ಅರಗಿಸಿಕೊಂಡು ಪಟ್ಟಪಾಡನ್ನೆಲ್ಲ ಹುಟ್ಟುಹಾಡನ್ನಾಗಿ ಜನಕೆ ನೀಡಿದರು. ನಂತರ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದರು ಎಂದರು. ಬೇಂದ್ರೆ ಕುರಿತು ಮಾತನಾಡಿದ ಉಪನ್ಯಾಸಕ ಎಚ್.ನರಸಿಂಹರಾಜು ನೆಲಮೂಲ ಸಂಸ್ಕೃತಿಯ ಕಸುವನ್ನು ಕನ್ನಡಕಾವ್ಯಕ್ಕೆ ತಂದಿತ್ತ ಕವಿ ಜನಸಾಮಾನ್ಯರ ಭಾಷೆಯನ್ನು ಕಾವ್ಯಕ್ಕೆ ಕೊಟ್ಟ ಕೀರ್ತಿ ಅವರದು, ತಿಳಿದು ಬದುಕಿರಿ, ತುಳಿದು ಬದುಕದಿರಿ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಿ.ಕೃಷ್ಣಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಂದ್ರೆ ಕನ್ನಡ ಕಾವ್ಯಕ್ಕೆ ಹೊಸ ರೂಪರೇಖೆಗಳನ್ನು ತಂದುಕೊಟ್ಟ ವರಕವಿ. ಅವರ ಕಾವ್ಯ ಪ್ರಭಾವ ಮುಂದಿನ ಕವಿಗಳ ಮೇಲೆ ಆಗಿರುವುದನ್ನು ಅಲ್ಲಲ್ಲಿ ಕಾಣಬಹುದಾಗಿದೆ ಎಂದರು. ಉಪನ್ಯಾಸಕರಾದ ಗೋವಿಂದರಾಜು, ಮಣಿಕಂಠ, ವಿನುಕುಮಾರ್ ಬೇಂದ್ರೆಯ ‘ಮೇಘಧೂತ’ ಅನುವಾದ ಕುರಿತು ಮಾತನಾಡಿದರು.…
ಭಾರತದಲ್ಲಿ ಬಹಳ ರಾಜ್ಯಗಳಲ್ಲಿ ಹೈಲಿ ಎಜುಕೇಟೆಡ್, ಸಾಕ್ಷರತಾ ಪ್ರಮಾಣ ಬಹಳ ಹೆಚ್ಚಿರುವ ರಾಜ್ಯಗಳಿವೆ. ಹಾಗೆಯೇ ಈ ರಾಜ್ಯಗಳು ತುಂಬಾ ಸುರಕ್ಷಿತ ಅಂತಾನೂ ಹೇಳಲಾಗಿದೆ. ಭಾರತದಲ್ಲಿ ಮತ್ತೊಂದೆಡೆ ಉತ್ತರಪ್ರದೇಶ, ಹರಿಯಾಣ, ದೆಹಲಿ, ಜಾರ್ಖಂಡ್ ಹೀಗೆ ಕೆಲ ರಾಜ್ಯಗಳಲ್ಲಿ ಕ್ರೈಂ ರೇಟ್ ಕೇಳಿದ್ರೆ ಇಡೀ ದೇಶದ ಜನರನ್ನ ಬೆಚ್ಚಿ ಬೀಳಿಸುತ್ತೆ. ಆದ್ರೆ ಕ್ರೈಂ ರೇಟ್ ಬಹಳ ಕಡಿಮೆ ಇರುವಂತಹ ಭಾರತದ ಟಾಪ್ 9 ರಾಜ್ಯಗಳ ಬಗ್ಗೆ ತಿಳಿಯೋಣ. ಜಿವಿಐ ಇಂಡೆಕ್ಸ್ ನ ವರದಿಯ ಆದಾರದಲ್ಲಿ ಸುರಕ್ಷಿತ ರಾಜ್ಯಗಳ ಪಟ್ಟಿ ನೋಡೋದಾದ್ರೆ ( ಜಿವಿಐ ಇಂಡೆಕ್ಸ್ ಪ್ರತಿ ವರ್ಷ ಅಪರಾಧಗಳ ಪ್ರಮಾಣ , ಪ್ರಮುಖವಾಗಿ ಮಹಿಳೆಯರ ಮೇಲಿನ ದೌರ್ಜನ್ಯದ ಆಧಾರದ ಮೇಲೆ ನಡೆಸಲಾಗುವ ಸಮೀಕ್ಷೆಯ ವರದಿ) – ಈ ವರದಿಯಲ್ಲಿ ಹಿಂದಿನ ವರ್ಷಗಳ ಅಪರಾಧಗಳು ಹಾಗೂ ಈಗಿನ ಅಪರಾಧ ಪ್ರಮಾಗಳನ್ನೂ ತಾಳೆ ಹಾಕಿ ಬಳಿಕವೇ ರಿಪೋರ್ಟ್ ರಿಲೀಸ್ ಮಾಡಲಾಗುತ್ತದೆ. ಅಂದ್ರೆ ಜಿವಿಐ ರೇಟ್ ಹೆಚ್ಚಿದ್ದಷ್ಟು ಸುರಕ್ಷತಾ ಪ್ರಮಾಣ ಹೆಚ್ಚಾಗಿರುತ್ತೆ ಅನ್ನೋದನ್ನ ಅರ್ಥ ಮಾಡಿಕೊಳ್ಳಬಹುದು. 09. ತಮಿಳುನಾಡು…
ಪ್ರಪಂಚದ ಶ್ರೀಮಂತ ಟೂರ್ನಿ ಎಂದೇ ಹೆಸರಾಗಿರುವ IPL ಟೂರ್ನಿಯ 15ನೇ ಆವೃತ್ತಿಗಾಗಿ ದಿನಾಂಕ ಘೋಷಿಸಿದ BCCI , ಇದೇ ತಿಂಗಳು ಅಂದರೆ ಫೆಬ್ರವರಿ 12 & 13 ರಂದು ಬೆಂಗಳೂರಿನಲ್ಲಿ ಹರಾಜು ಪ್ರಕ್ರಿಯೇ ನಡೆಯಲಿದ್ದು ಅದಕ್ಕಾಗಿ 590 ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. 590 ಆಟಗಾರರಲ್ಲಿ 228 ಕ್ಯಾಪ್ಡ್ ಮತ್ತು 355 ಅನ್ ಕ್ಯಾಪ್ಡ್ ಮತ್ತು 7 ಅಸೋಸಿಯೇಟ್ ನೇಷನ್ಸ್’ಗೆ ಸೇರಿದವರಾಗಿದ್ದಾರೆ. ಎರಡು ಹೊಸ IPL ತಂಡಗಳಾದ ಲಕ್ನೋ ಸೂಪರ್ ಜೈಂಟ್ಸ್ & ಟೀಮ್ ಅಹ್ಮದಾಬಾದ್ ಕೂಡಾ ಭಾಗವಹಿಸಲಿವೆ. ಈ ಹರಾಜಿನಲ್ಲಿ ಎಲ್ಲಾ ತಂಡದ ಮಾಲೀಕರು ಮತ್ತು ಮುಖ್ಯ ಕೋಚ್’ಗಳು ಭಾಗವಹಿಸಿ ತಮ್ಮ ತಂಡಕ್ಕೆ ಬೇಕಾದಂತಹ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB