Author: admin

ಚಿತ್ರದುರ್ಗ: ಹಿರಿಯೂರು  ತಾಲ್ಲೂಕಿನ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ಜಾತ್ರೆಯು ಪ್ರತಿ ವರ್ಷವೂ  ಸಹ  ಬಹಳ  ವಿಜೃಂಭಣೆಯಿಂದ ನಡೆಯುತ್ತಿತ್ತು. ಆದರೆ ಈ ಬಾರಿ, ಕೊವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ. ನಗರದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಫೆಬ್ರವರಿ 17ರಂದು ನೆರವೇರಲಿದೆ.   ಫೆ.5ರಂದು ಕಂಕಣಧಾರಣೆ, 19ರಂದು ಕರ್ಪೂರದಾರತಿ, 21ರಂದು ಕಂಕಣ ವಿಸರ್ಜನೆ ನಡೆಯಲಿದೆ. ಪಾಳೇಗಾರ ವಂಶಸ್ಥ ರಾಜ ಕೆಂಚಪ್ಪ ನಾಯಕ 1446ರಲ್ಲಿ ನಿರ್ಮಿಸಿರುವ ತೇರುಮಲ್ಲೇಶ್ವರ ಸ್ವಾಮಿ ದೇಗುಲದ ಮೂಲವಿಗ್ರಹ ಕಾಶಿಯಲ್ಲಿ ಇರುವಂತೆ ದಕ್ಷಿಣ ದಿಕ್ಕಿಗೆ ಮುಖ ಮಾಡಿದ ಕಾರಣಕ್ಕೆ ದೇಗುಲವನ್ನು ದಕ್ಷಿಣ ಕಾಶಿ ಎಂದು ಕರೆಯಲಾಗುತ್ತದೆ. ಶ್ರೀಶೈಲ ಮಲ್ಲಿಕಾರ್ಜುನ ಪರಮ ಭಕ್ತೆಯಾಗಿದ್ದ ಹೇಮರೆಡ್ಡಿ ಮಲ್ಲಮ್ಮ ತನ್ನ ಇಳಿ ವಯಸ್ಸಿನಲ್ಲಿ ಶ್ರೀ ಶೈಲಕ್ಕೆ ನಡೆದುಕೊಂಡು ಹೋಗಿ ದರ್ಶನ ಮಾಡಿ ಬರುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಆಕೆಯ ಕನಸಿನಲ್ಲಿ ಕಾಣಿಸಿಕೊಂಡ ಮಲ್ಲಿಕಾರ್ಜುನ ಸ್ವಾಮಿ ಮಾತು ಕೊಟ್ಟಿದ್ದರ ಪರಿಣಾಮವಾಗಿ ಮಲ್ಲೇಶ್ವರ ಸ್ವಾಮಿ ದೇಗುಲ ನಿರ್ಮಾಣವಾಗಿದೆ ಎಂಬುದು ನಂಬಿಕೆಯಾಗಿದೆ. ಹಿರಿಯೂರಿನಲ್ಲಿ ನೆಲೆಸಿದ್ದ ಮಲ್ಲಮ್ಮ…

Read More

ಪಾವಗಡ: ತಾಲ್ಲೂಕಿನ ಕಸಬಾ ಹೋಬಳಿ ಗಡಿ ಭಾಗದ ಕನ್ನಮೆಡಿ  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರಪಾಳ್ಯ ಮತ್ತು ಹನುಮಯ್ಯಪಾಳ್ಯ ದಿಂದ ಹೊನ್ನಮೆಡಿ ಮತ್ತು ಕನ್ನಮೆಡಿಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕ ಸಂಚಾರಕ್ಕೆ ಯೋಗ್ಯವಲ್ಲದ ರಸ್ತೆಯಾಗಿ ಮಾರ್ಪಟ್ಟಿದೆ. ರಸ್ತೆಗಳು ಸಂಪೂರ್ಣ ಹೊಂಡಮಯವಾಗಿದ್ದು, ರಸ್ತೆಗೆ ಹಾಕಲಾಗಿರುವ ಜಲ್ಲಿಗಳು ಎದ್ದು, ಜಲ್ಲಿಕಲ್ಲಿನ ರಸ್ತೆಯಂತೆ ಕಂಡು ಬಂದಿದೆ. ರಸ್ತೆ ಸಂಪೂರ್ಣವಾಗಿ ಧೂಳುಮಯವಾಗಿದ್ದು, ಈ  ರಸ್ತೆಯಲ್ಲಿ ಪ್ರಯಾಣಿಕರು ಹಾಗೂ ಇಲ್ಲಿನ ಗ್ರಾಮಸ್ಥರು ದಿನನಿತ್ಯ ಧೂಳಿನಿಂದ ಕಂಗೆಡುವಂತಾಗಿದೆ. ರಸ್ತೆ ಅವ್ಯವಸ್ಥೆಯಿಂದ ಈ ಭಾಗದಲ್ಲಿ ಬಸ್ ಗಳ ಕೊರತೆ ಕೂಡ ಆಗಿದೆ. ಇದರಿಂದ ಶಾಲೆಗೆ ಹೋಗಲು ಕೂಡ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿನಿಯೊಬ್ಬರು ಮಾಧ್ಯಮದ ಜೊತೆಗೆ ಮಾತನಾಡುತ್ತಾ ದೂರಿದರು. ಹೊನ್ನಮೆಡಿ  ಮಧ್ಯದಲ್ಲಿ ಇರುವ ಹಳ್ಳದ ಮೋರಿಯೊಂದು  ಬಿದ್ದು ಸುಮಾರು  ಎರಡು ಮೂರು ವರ್ಷಗಳು ಕಳೆದರೂ ಇಲ್ಲಿನ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಸ್ಥಳೀಯ ಶಾಸಕರಂತೂ ಈ ಸಮಸ್ಯೆಯ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು. ಈ ರಸ್ತೆಯಲ್ಲಿ ನಿರಂತರವಾಗಿ ಟಿಪ್ಪರ್ ಗಳು ಹೋಗುತ್ತಿದೆ. ಇದರಿಂದಾಗಿ…

Read More

ಚಿಕ್ಕನಾಯಕನ ಹಳ್ಳಿ: ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ತೇಜಸ್ವಿನಿ ಅವರ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿದ್ದರೂ, ಈವರೆಗೆ ಅವರನ್ನು ಬಂಧಿಸಲಾಗಿಲ್ಲ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಜಿಲ್ಲಾಧ್ಯಕ್ಷ ಹಂದ್ರಾಳ್ ನಾಗಭೂಷಣ್ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಹಾಗು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕನಾಯಕನ ಹಳ್ಳಿ ತಹಸೀಲ್ದಾರ್ ವಿರುದ್ದ ಅಟ್ರಾಸಿಟಿ ದೂರು ದಾಖಲಾಗಿ ನಾಲ್ಕು ದಿನಗಳು ಕಳೆದವು. ಆದರೆ ಆರೋಪಿತೆ ತಹಸೀಲ್ದಾರ್ ರನ್ನು ಇದುವರೆಗೂ ಬಂಧಿಸಿಲ್ಲ. ಗಂಭೀರ ಆರೋಪ ಹೊತ್ತಿರುವ ತಹಸೀಲ್ದಾರ್ ರನ್ನು  KCSR ನಿಯಮದಂತೆ ಕೂಡಲೇ ಅಮಾನುತುಗೊಳಿಸುವಂತೆ ಎರಡು ಬಾರಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ಇದುವರೆಗೂ ಅಮಾನತ್ತು, ವರ್ಗಾವಣೆ ಮಾಡಿರುವುದಿಲ್ಲ ಎಂದು ಅವರು ಹೇಳಿದರು. ತುರ್ತಾಗಿ ಸಂಬಂಧಿಸಿದ ಪೊಲೀಸ್ ಆಡಳಿತ ಆರೋಪಿತೆ ತಹಸೀಲ್ದಾರ್ ಅವರನ್ನು ಬಂಧಿಸದಿದ್ದರೆ , ಅಮಾನತ್ತುಗೊಳಿಸದಿದ್ದರೆ ಮುಂದಿನ ಕಾನೂನು ಹೋರಾಟ ಮುಂದಾಗಲಾಗುವುದು ಎಂದು ಜಿಲ್ಲಾಡಳಿತವನ್ನು ಅವರು ಒತ್ತಾಯಿಸಿದರು. ಇದೇ ವೇಳೆ ಮಾತನಾಡಿದ ವೇದಿಕೆ…

Read More

ಮಧುಗಿರಿ:  ಪುರಸಭೆ ವ್ಯಾಪ್ತಿಯಲ್ಲಿ ಕಂದಾಯ, ಟ್ರೇಡ್ ಲೈಸನ್ಸ್ ಮತ್ತು ಬೀದಿಬದಿ ವ್ಯಾಪಾರಿಗಳು ಪರವಾನಿಗೆ ಪಡೆಯದೆ ವ್ಯಾಪಾರ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿಗಳು ಮತ್ತು ತಂಡ ಪಟ್ಟಣದ ಪ್ರತಿಯೊಂದು ಅಂಗಡಿಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ, ಸ್ಥಳದಲ್ಲೇ ಪರವಾನಿಗೆ ನವೀಕರಣ ಮಾಡಿದ ಘಟನೆ ಮಂಗಳವಾರ ನಡೆಯಿತು.  ಕೊರೊನಾ ಕಾರಣದಿಂದಾಗಿ ಟ್ರೇಡ್ ಲೈಸೆನ್ಸ್ ನವೀಕರಣವನ್ನು ಕೆಲವು ಅಂಗಡಿಗಳ ಮಾಲೀಕರು ಮಾಡಿಸಿಕೊಂಡಿರದ ಕಾರಣ ಸ್ಥಳದಲ್ಲೇ ಪರಿಶೀಲನೆ ನಡೆಸಿ ಪರವಾನಿಗೆ ಆದೇಶವನ್ನು ಮುಖ್ಯಾಧಿಕಾರಿ  ನೀಡಿದರು.  ದಿನಸಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಸ್ಥಳದಲ್ಲೇ ಕ್ರಮ ಕೈಗೊಂಡು ದಂಡವನ್ನು ಹಾಕಲಾಯಿತು.  ಪಟ್ಟಣದಲ್ಲಿರುವ ಬಹುತೇಕ ಮೊಬೈಲ್ ಅಂಗಡಿಯವರು ಟ್ರೇಡ್ ಲೈಸೆನ್ಸ್ ಪಡೆಯುವಂತೆ ಸಾಕಷ್ಟು ಬಾರಿ ಸೂಚನೆ ನೀಡಿದರೂ ಲೈಸೆನ್ಸ್ ಪಡೆದಿಲ್ಲ ಅಂದಾಗ ಮುಖ್ಯಾಧಿಕಾರಿಗಳು ಅಂತಹ ಅಂಗಡಿಗಳನ್ನು ಮುಚ್ಚಿಸಿ ಎಂದರು. ರಿಯಲ್ ಮಿ, ಸಂಗೀತ ಮೊಬೈಲ್ಸ್ ಮಾಲಿಕರುಗಳಿಗೆ ನೋಟಿಸ್ ನೀಡಿದೆ ಅವರು ಟ್ರೇಡ್ ಲೈಸೆನ್ಸ್ ಪಡೆದಿಲ್ಲ ಎಂದು ತಿಳಿಸಿದರು.  ಈ ವೇಳೆ ಕಂದಾಯ ತನಿಖಾಧಿಕಾರಿಗಳು, ಆರೋಗ್ಯ…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ  ಚಳ್ಳಕೆರೆ ರಸ್ತೆಯಲ್ಲಿರುವ ಕೃಷಿ ಇಲಾಖೆಯಲ್ಲಿ ಕೃಷಿ ಉಪಕರಣಗಳನ್ನು ಪಡೆದುಕೊಳ್ಳಲು ಆಗಮಿಸುತ್ತಿರುವ ರೈತರನ್ನು ಎನ್ ಒ ಸಿ ಮೊದಲಾದ ಕಾರಣಗಳನ್ನು ಮುಂದಿಟ್ಟು ಸತಾಯಿಸುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿ ಬಂದಿವೆ. 50ರಿಂದ ನೂರು ಕಿ.ಮೀ. ದೂರದಿಂದ ಆಗಮಿಸುತ್ತಿರುವ ರೈತರು ಕೃಷಿ ಇಲಾಖೆಗೆ ಆಗಮಿಸಿದ ವೇ, ಎನ್ ಒ ಸಿ ಮೊದಲಾದ ಕಾರಣಗಳನ್ನು ನೀಡಿ ವಾಪಸ್ ಕಳುಹಿಸುತ್ತಿದ್ದಾರೆ. ಇದರಿಂದಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವುದೇ ನಮಗೆ ಕೆಲಸವಾಗಿದೆ ಎಂದು ಧರ್ಮಪುರ ಹೋಬಳಿ‌ ಸಕ್ಕರ ಗ್ರಾಮದ ವಾಸಿ ರೈತ ರಂಗಸ್ವಾಮಿ ಅಳಲು ತೋಡಿಕೊಂಡಿದ್ದಾರೆ. ಕೃಷಿ ಇಲಾಖೆಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳು ಸಹ ರೈತರ ಬಳಿ ನಿರ್ಲಕ್ಷ್ಯ ತನ ತೋರುತ್ತಿದ್ದು, ರೈತರ ಜೊತೆಗೆ ಅಗೌರವದಿಂದ, ತಿರಸ್ಕಾರ ಭಾವದಿಂದ ನಡೆದುಕೊಳ್ಳುತ್ತಿದ್ದಾರೆ   ರಂಗಸ್ವಾಮಿ ಇದೇ ವೇಳೆ ಬೇಸರ ವ್ಯಕ್ತಪಡಿಸಿದರು. ನನಗೆ ಮಾತ್ರವಲ್ಲ, ಕೃಷಿ ಇಲಾಖೆಗೆ ಬರುತ್ತಿರುವ ಪ್ರತಿಯೊಬ್ಬರಿಗೂ ಇಂತಹ ಅನುಭವವಾಗುತ್ತಿದೆ.  ಇಲ್ಲಿನ ಅಧಿಕಾರಿಗಳು ರೈತರನ್ನು ಗದರಿ ದರ್ಪದಿಂದ ನಡೆದುಕೊಳ್ಳುವಂತಹ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಅವರು…

Read More

ತಿಪಟೂರು: ತಾಲ್ಲೂಕು ಆಡಳಿತದ ವತಿಯಿಂದ 12ನೇ ಶತಮಾನದ ಬಸವಾದಿ ಶಿವಶರಣರಲ್ಲಿ ಅಗ್ರಗಣ್ಯರಾದ ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಸರಳ ಹಾಗೂ  ಸಾಂಕೇತಿಕವಾಗಿ ಗ್ರೇಡ್ 2 ತಹಸೀಲ್ದಾರ್   ಜಗನ್ನಾಥರವರು  ಉದ್ಘಾಟಿಸಿದರು. ಮಾಚಿದೇವರು ಸಾಕ್ಷಾತ್ ವೀರಭದ್ರನ ಅಪರಾವತಾರ ನೇರ ನಿಸ್ಟೂರ ನಡೆ ನುಡಿ ಕಾಯಕ ಸಂಪನ್ನರಾಗಿದ್ದ ಮಾಚಿದೇವರು ವಚನ ಸಾಹಿತ್ಯ ರಕ್ಷಣೆಯಲ್ಲಿ  ಇತಿಹಾಸ ಸೃಷ್ಟಿಸಿದ ಮಹಾನ್ ಚೇತನ ಎಂದು ತಾಲ್ಲೂಕು ಮಡಿವಾಳ ಸಂಘದ ಅದ್ಯಕ್ಷರಾದ ಆರ್.ನಿಜಲಿಂಗಪ್ಪನವರು ತಮ್ಮ ಅಧ್ಯಕ್ಷಿಯ ಭಾಷಣದಲ್ಲಿ ನುಡಿನಮನ ಸಲ್ಲಿಸಿದರು. ಮಡಿವಾಳ ಮಾಚಯ್ಯ ಪುರಾಣ ಪ್ರಸಿದ್ಧಿ ಒಮ್ಮೆದಕ್ಷ ಬ್ರಹ್ಮನು ಶಿವನನ್ನು ಹೊರತುಪಡಿಸಿ ಎಲ್ಲಾ ಮಹಾಗಣಂಗಳ ಆಹ್ವಾನಿಸಿ ಮಹಾರುದ್ರಯಾಗ ಮಾಡುತ್ತಿರುತ್ತಾನೆ. ಶಿವನ ಪತ್ನಿ ದಾಕ್ಷಾಯಿಣಿ ತನ್ನ ತಂದೆಯಾದ ದಕ್ಷಬ್ರಹ್ಮ  ಕರೆಯದಿದ್ದರೂ, ಯಾಗಕ್ಕೆಶಿವನ ಮಾತು ಮೀರಿ ಹೊಗುತ್ತಾಳೆ. ಅವಮಾನ ತಾಳಲಾರದೆ ಯಜ್ಞಕುಂಡಕ್ಕೆ ಬಿದ್ದು ಆಹುತಿಯಾತ್ತಾಳೆ. ಇದರಿಂದ ಕುಪಿತಗೊಂಡ ಶಿವನ ಆದೇಶದಂತೆ ವೀರಭದ್ರ  ದಕ್ಷನ ಸಂಹಾರ ಮಾಡುತ್ತಾನೆ. ದಕ್ಷನ ಸಂಹರಿಸಿ ವಿಜಯ ಸಂತಸದಲಿ ವೀರಭದ್ರ ಶಿವನ ಒಡ್ಡೋಲಗಕೆ ಆಗಮಿಸುವಾಗ ರಕ್ತಸಿಕ್ತ ಖಡ್ಗದ ಅಲಗು ಶಿವಶರಣ ವಸ್ತ್ರಗಳಿಗೆ…

Read More

ನಂಜನಗೂಡು: ಜೀವನಕ್ಕೆ ಆಧಾರವಾಗಿದ್ದ ಎರಡು ಹಸುಗಳನ್ನು  ಹುಲಿಯೊಂದು ಕೊಂದು ಹಾಕಿದ್ದು, ಇದರಿಂದ ತಾಲ್ಲೂಕಿನ ಹೆಡಿಯಾಲ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಮಹದೇವನಗರ ಗ್ರಾಮದ ಸಾಕಮ್ಮ ಕೊಂ ಪಾಪಣ್ಣ ಎಂಬವರಿಗೆ ತೀವ್ರ ನಷ್ಟವಾಗಿದೆ. ಅಂದಾಜು 150000 ರೂ. ಬೆಲೆ ಬಾಳುವ ಹಾಲು ಕರೆಯುವ ಹಿಲಾತಿ ಹಸುಗಳನ್ನು ಬಂಡೀಪುರ ರಾಷ್ಟ್ರೀಯ ಹುಲಿ ಸುರಕ್ಷಿತ ಅರಣ್ಯದಿಂದ ಬಂದ ಹುಲಿಯೊಂದು ಕೊಂದು ತಿಂದು ಹಾಕಿದೆ. ಹಸುಗಳನ್ನೇ ನಂಬಿ ಬದುಕುತ್ತಿದ್ದ ಕುಟುಂಬ ಇದೀಗ, ಹಸುಗಳನ್ನು ಕಳೆದುಕೊಂಡು ಕಂಗಾಲಾಗಿದೆ. ಈ ಕುರಿತು ಅರಣ್ಯ ಇಲಾಖಾಧಿಕಾರಿಗಳಿಗೆ ದೂರು ನೀಡಿದರೆ, ಈ ಜಮೀನು ಅರಣ್ಯ ಪ್ರದೇಶದ ಭಾಗದಲ್ಲಿರುವುದರಿಂದ ಯಾವುದೇ ಪರಿಹಾರ ನೀಡಲು ಬರುವುದಿಲ್ಲವೆಂದು ನಿರ್ಲಕ್ಷಿಸುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯತನದ ಉತ್ತರದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದು, ಆದರೆ ಸ್ಥಳೀಯರ ನೆರವಿನಿಂದ ಅವರನ್ನು ರಕ್ಷಿಸಲಾಗಿದೆ ಎನ್ನಲಾಗಿದೆ. ಕುಟುಂಬದ ಸದಸ್ಯರು ಮಾನಸಿಕವಾಗಿ ತೀವ್ರ ನೊಂದಿದ್ದು, ಅವರಿಗೆ ತಕ್ಷಣವೇ ಪರಿಹಾರ ನೀಡುವ ಮೂಲಕ ಮಾನಸಿಕ ಸ್ಥೈರ್ಯವನ್ನು ತುಂಬುವ ಕೆಲಸವನ್ನು ಇಲಾಖಾಧಿಕಾರಿಗಳು ಮಾಡಬೇಕು. ಆ ಕುಟುಂಬಕ್ಕೆ ಏನಾದರೂ…

Read More

ವಿದ್ಯಾಭ್ಯಾಸಕ್ಕೆ ಪೋಷಕರು ಮಕ್ಕಳ ಮೇಲೆ ಒತ್ತಡ ಹೇರುವುದರಿಂದ ಕಠಿಣ ಕ್ರಮಗಳನ್ನ ಕೈಗೊಳ್ಳುವುದರಿಂದ ಮಕ್ಕಳು ಮತ್ತಷ್ಟು ಮಾನಸಿಕವಾಗಿ ಕುಗ್ಗುವುದು ಅಲ್ಲದೇ ಮೆದುಳಿನ ಶಕ್ತಿ ಮತ್ತಷ್ಟು ದುರ್ಬಲಗೊಳ್ಳುತ್ತದೆ ಎಂಬುದು ಅಧ್ಯಯನದಿಂದ ಸಾಬೀತಾಗಿದೆ. ಮನೋವಿಜ್ಞಾನ ಮತ್ತು ಅಭಿವೃದ್ಧಿ ತಜ್ಞರು ನೀಡಿರುವ ವರದಿಯಲ್ಲಿ ಈ ಆತಂಕಕಾರಿ ಅಂಶವನ್ನ ಬಹಿರಂಗಪಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಮಾನಸಿಕವಾಗಿ ಹಾಗೂ ಓದುವಂತೆ ಹೆಚ್ಚಿನ ಒತ್ತಡವನ್ನಹೇರಲಾಗ್ತಿದೆ. ಕಠಿಣ ಕ್ರಮಗಳನ್ನ ಅನುಸರಿಸಲಾಗ್ತಿದೆ. ಹೆಚ್ಚಿಕ ಅಂಕಗಳನ್ನ ಪಡೆಯಲೇ ಬೇಕೆಂಬ ಪೋಷಕರ ಒತ್ತಾಯದಿಂದ ಅನೇಕ ಮಕ್ಕಳು ಮಾನಸಿಕವಾಗಿ ಕುಗ್ಗಿ ಹೋಗ್ತಿದ್ದಾರೆ. ಈ ರೀತಿಯ ಬೆಳವಣಿಯಲ್ಲಿ ಅವರ ಮೆದುಳಿನ ಶಕ್ತಿ ಮತ್ತಷ್ಠು ಕುಂಠಿತಗೊಳ್ಳುತ್ತಿದೆ ಎನ್ನಲಾಗಿದೆ. ಮಕ್ಕಳ ಬೆಳವಣಿಗೆಯ ಮೇಲೆ, ಅವರ ನಡತೆ, ಜೀವನದಲ್ಲಿ ಅವರ ಆಯ್ಕೆ ( ಸಕಾರಾತ್ಮಕವಾಗಿಯೂ ಇರಬಹುದು, ಅಥವ ನಕಾರಾತ್ಮಕವಾಗಿಯೂ ಇರಬಹುದು) ಎಲ್ಲವೂ ಕೂಡ ಇದರ ಭಾಗವಾಗಿರುತ್ತದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ತುಮಕೂರು: ಗ್ರಾಮಾಂತರ ಕ್ಷೇತ್ರದ ಹರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐನಾಪುರ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶಿವಪ್ರಸಾದ್ ಎಂಬುವವರು ಜೀವಂತವಿರುವಾಗಲೇ ಮೃತಪಟ್ಟಿದ್ದಾರೆ ಎಂದು ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ ತುಮಕೂರಿನ ತಾಲೂಕು ಕಚೇರಿ ಆವರಣದಲ್ಲಿ ಮಾಹಿತಿ ನೀಡಿದ ಐನಾಪುರ ಗ್ರಾ.ಪಂ. ಮಾಜಿ ಸದಸ್ಯ ಶಿವಕುಮಾರ್, ನಾನು ಜೀವಂತವಾಗಿರುವಾಗಲೇ , ನಾನು ಮೃತಪಟ್ಟಿದ್ದೇನೆ ಎಂಬ ಕಾರಣ ನೀಡಿ, ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ ಸಂದೇಶ ತಮ್ಮ ಮೊಬೈಲ್ ಸಂಖ್ಯೆಗೆ ಬಂದಿದ್ದು , ಈ ಮೂಲಕ ಗ್ರಾಮಾಂತರ ಭಾಗದಲ್ಲಿ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿರುವ ಕಾರ್ಯಕರ್ತರನ್ನು ನೇರವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಈ ಮೂಲಕ ತಮ್ಮನ್ನು ತಮ್ಮ ಕಾರ್ಯಚಟುವಟಿಕೆಗಳನ್ನು ಕಟ್ಟಿಹಾಕುವ ಪ್ರಯತ್ನವನ್ನು ರಾಜಕೀಯ ವಿರೋಧಿಗಳು ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳು ಹಾಗೂ ತಹಸಿಲ್ದಾರ್ ಅವರ ಗಮನಕ್ಕೆ ತಂದಿದ್ದು , ಈ ವಿಷಯಕ್ಕೆ ಸಂಬಂಧಿಸಿದಂತೆ ತಹಸಿಲ್ದಾರ್ ಅವರು ಆನ್ಲೈನ್ ಮೂಲಕ ಅಪ್ಡೇಟ್ ಆಗಿದೆ ಎಂದು ಮಾಹಿತಿ ನೀಡಿದ್ದು, ಇದಕ್ಕೆ…

Read More

ದೇಶದಲ್ಲಿ ಸಂಪರ್ಕ ಕ್ರಾಂತಿಯನ್ನು ಸೃಷ್ಟಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಪ್ರಸಕ್ತ ವರ್ಷದಲ್ಲಿ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ಸಂಸತ್‍ನಲ್ಲಿಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಂಡಿಸಿದ 2022-23ನೇ ಸಾಲಿನ ಬಜೆಟ್‍ನಲ್ಲಿ, ಪ್ರಸಕ್ತ ವರ್ಷ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಣೆ ಮಾಡುವುದಾಗಿ ಘೊಷಣೆ ಮಾಡಿದರು. ಸಂಸತ್‍ನಲ್ಲಿಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಂಡಿಸಿದ 2022-23ನೇ ಸಾಲಿನ ಬಜೆಟ್‍ನಲ್ಲಿ, ಪ್ರಸಕ್ತ ವರ್ಷ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ವಿಸ್ತರಣೆ ಮಾಡುವುದಾಗಿ ಘೊಷಣೆ ಮಾಡಿದರು.ಇದಕ್ಕಾಗಿ ಅಗತ್ಯವಾದ ಅನುದಾನವನ್ನು ಸಾರಿಗೆ ಇಲಾಖೆಗೆ ಒದಗಿಸುವುದಾಗಿಯೂ ಪ್ರಕಟಿಸಿದರು. ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದಿಂದ ಸಂಪರ್ಕ ಕ್ರಾಂತಿಯಾಗಲಿದ್ದು ಇದರಿಂದ ಕೈಗಾರಿಕೆಗಳ ಸ್ಥಾಪನೆ ಹಾಗೂ ಆರ್ಥಿಕ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More