Author: admin

ಪಾವಗಡ: ತಾಲೂಕು ನಿಡಿಗಲ್ ಹೋಬಳಿ ಕೊತ್ತೂರು ಗ್ರಾಮದಲ್ಲಿ ಶಾಲೆಯ  ಹಿಂಭಾಗದಿಂದ ಗೋಪಾಲ್ ರೆಡ್ಡಿ  ಮನೆಯವರೆಗೂ ಕೆಲವು ಮನೆಗಳ ಮೇಲೆ ವಿದ್ಯುತ್ ತಂತಿ ಸಂಪರ್ಕವಿದ್ದು, ಮನೆಯ ತಾರಸಿಯ ಮೇಲೆ ನಿಂತರೆ ಕೈಗೆಟುಕುವ ಅಂತರದಲ್ಲಿ ವಿದ್ಯುತ್ ತಂತಿಗಳು ಜೋತಾಡುತ್ತಿವೆ. ಇಲ್ಲಿ ವಿದ್ಯುತ್ ತಂತಿಗಳ ಅವ್ಯವಸ್ಥೆಗಳ ಬಗ್ಗೆ ಹಲವಾರು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳ ಗಮಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು   ಬೇಸರ ವ್ಯಕ್ತಪಡಿಸಿದ್ದಾರೆ. ಮನೆಯ ತಾರಸಿ ಮೇಲೆ ಯಾರಾದರೂ ಮಕ್ಕಳು ಹತ್ತಿ, ವಿದ್ಯುತ್ ತಂತಿ ಸ್ಪರ್ಶಿಸಿ ಅನಾಹುತವಾದರೆ ಯಾರು ಹೊಣೆ ಎಂದು  ಅವರು ಪ್ರಶ್ನಿಸಿದ್ದಾರೆ. ಗ್ರಾಮಸ್ಥರಾದ ಗೋಪಾಲಪ್ಪ, ರಮೇಶ್, ರಾಮಕೃಷ್ಣಪ್ಪ ಮತ್ತಿತರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ:  ನಂದೀಶ್ ಕೊತ್ತೂರು ನಿಡಿಗಲ್ಲು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಗುಬ್ಬಿ: ರಾಯಚೂರು ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ಗಣರಾಜ್ಯೋತ್ಸವ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಫೊಟೋ ತೆರವುಗೊಳಿಸಿ, ಉದ್ಧಟತನ ತೋರಿರುವುದನ್ನು ವಿರೋಧಿಸಿ ಗುಬ್ಬಿ ತಾಲೂಕು ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.  ನಗರದ ಚನ್ನಬಸವೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಗುಬ್ಬಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ, ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ವಿರುದ್ಧ ಘೋಷಣೆ ಕೂಗುವ ಮೂಲಕ ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡ ಪ್ರತಿಕೃತಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.  ಈ ಸಂದರ್ಭದಲ್ಲಿ  ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ, ಕಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎಲ್.ರವಿಕುಮಾರ್, ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ, ಕಡಬ ಶಂಕರ್, ಕೋಡಿಯಾಲ ಮಹದೇವ್, ಕುಂದರನಹಳ್ಳಿ ನಟರಾಜ್, ಗಿರೀಶ್, ಲಕ್ಕೇನಹಳ್ಳಿ ನರಸೀಯಪ್ಪ, ಹಾಗಲವಾಡಿ ಚಿರಂಜೀವಿ, ಮಂಜೇಶ್, ಯಲಚಿಹಳ್ಳಿ ನಾರಾಯಣ್, ಇಡಗೂರು ಮಂಜುನಾಥ್, ಮಂಚಿಹಳ್ಳಿ ಶಿವಸ್ವಾಮಿ ಇತರ ದಲಿತ ಮುಖಂಡರು ಹಾಜರಿದ್ದರು.  ವರದಿ: ಮಂಜುನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ರ ಸಾಲಿನ ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು. ಸಂಪ್ರದಾಯದ ಪ್ರಕಾರ, ಹಣಕಾಸು ಸಚಿವೆ ಸಂಸತ್‍ಗೆ ತೆರಳುವ ಮುನ್ನ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಖಾತೆ ರಾಜ್ಯ ಸಚಿವರಾದ ಡಾ.ಭಾಗವತ್ ಕಿಶನ್‍ರಾವ್ ಕರಾಡ್, ಪಂಕಜ್‍ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ 2022-23ರ ಕೇಂದ್ರ ಬಜೆಟ್ ಮಂಡನೆಗೆ ಮೊದಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು ಎಂದು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದೆ.ತರುವಾಯ ಬಜೆಟ್‍ನ ಅನುಮೋದನೆಗಾಗಿ ಕೇಂದ್ರ ಸಚಿವ ಸಂಪುಟದ ಸಭೆ ನಡೆಯಿತು. ಬಜೆಟ್‍ನ ವಾಸ್ತವಿಕ ಮಂಡನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸಚಿವ ಸಂಪುಟ 2022-23ರ ಹಣಕಾಸು ವರ್ಷದ ಬಜೆಟ್‍ಗೆ ಅನುಮೋದನೆ ನೀಡುತ್ತದೆ.ಸಾಂಪ್ರದಾಯಿಕವಾಗಿ ಹಣಕಾಸು ಸಚಿವರು ಆಗಮಿಸುವ ಮುನ್ನ ಬಜೆಟ್‍ನ ಪ್ರತಿಗಳನ್ನು ಸಂಸತ್ ಸಮುಚ್ಚಯಕ್ಕೆ…

Read More

2022 ರ ಕೇಂದ್ರ ಬಜೆಟ್ ಅನ್ನು ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದು ಸರ್ಕಾರದ ಮುಂದಿನ ಗುರಿಯಾಗಿದೆ ಎಂದು ಹೇಳಿದರು. “ಪಿಎಂ ಗತಿ ಶಕ್ತಿಯು ಆರ್ಥಿಕತೆಯನ್ನು ಮುಂದಕ್ಕೆ ಎಳೆಯುತ್ತದೆ ಮತ್ತು ಯುವಕರಿಗೆ ಹೆಚ್ಚಿನ ಉದ್ಯೋಗಗಳು ಮತ್ತು ಅವಕಾಶಗಳಿಗೆ ಕಾರಣವಾಗುತ್ತದೆ” ಎಂದು ಅವರು ಹೇಳಿದರು. ದೇಶದಲ್ಲಿ ಯುವಕರು, ಮಹಿಳೆಯರು ಮತ್ತು ಬಡವರ ಸಬಲೀಕರಣಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಅವರು ಹೇಳಿದರು. “ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯು ಆತ್ಮನಿರ್ಭರ ಭಾರತವನ್ನು ಸಾಧಿಸಲು ಅತ್ಯುತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ, ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ರಚಿಸುವ ಸಾಮರ್ಥ್ಯವಿದೆ” ಎಂದು ಅವರು ಹೇಳಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ನಾಲ್ಕನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ, ಇದು ಭಾರತಕ್ಕೆ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ಟ್ಯಾಗ್  ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿದೆ. ಉತ್ತರ ಪ್ರದೇಶದಲ್ಲಿ…

Read More

ನಿನ್ನೆ ಒಂದು ದಿನದಲ್ಲಿ ದೇಶದಲ್ಲಿ ಹೊಸದಾಗಿ 1,67,059 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಭಾರತದ ಒಟ್ಟಾರೆ ಕೋವಿಡ್-19 ಸೋಂಕಿನ ಪ್ರಮಾಣ 4.14 ಕೋಟಿಗೂ ಅಧಿಕ ಸಂಖ್ಯೆಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ತಿಳಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,192 ಜನರು ಕೊರೊನಾದಿಂದ ಮರಣಿಸುವುದರೊಂದಿಗೆ ಒಟ್ಟಾರೆ ಕೋವಿಡ್-19 ಮರಣ ಪ್ರಮಾಣ 4,96,242ಕ್ಕೇರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 88,209ರಷ್ಟು ಇಳಿಕೆ ಕಂಡಿದ್ದು, 17,43,059ಕ್ಕೆ ತಲುಪಿದೆ. ಇದು ಒಟ್ಟಾರೆ ಸೋಂಕುಗಳ 4.20 ಪ್ರತಿಶತದಷ್ಟಿದೆ. ದೇಶದಲ್ಲಿ ಸಮಗ್ರ ಚೇತರಿಕೆ ಪ್ರಮಾಣ ಶೇ.94.60ರಷ್ಟಿದೆ ಎಂದು ಸಚಿವಾಲಯ ಹೇಳಿದೆ.ದೈನಿಕ ಪಾಸಿಟಿವಿಟಿ ದರ ಶೇ.11.69ರಷ್ಟು ದಾಖಲಾಗಿದೆ. ವಾರದ ಪಾಸಿಟಿವಿಟಿ ದರ ಶೇ.15.25ರಷ್ಟಿದೆ. ಕೊವಿಡ್‍ನಿಂದ ಚೇತರಿಸಿಕೊಂಡವರ ಸಂಖ್ಯೆ 3,92,30,198ಕ್ಕೇರಿದೆ. ಕೋವಿಡ್‍ನಿಂದ ಆದ ಸಾವಿನ ಸಂಖ್ಯೆ 1.20 ಪ್ರತಿಶತದಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ 8 ಗಂಟೆಗೆ ತಾಜಾ ಮಾಹಿತಿ ನೀಡಿದೆ. ಹೊಸ ಪ್ರಕರಣಗಳೊಂದಿಗೆ ಒಟ್ಟಾರೆ ಸೋಂಕಿನ ಪ್ರಮಾಣ 4,14,69,499ಕ್ಕೆ ತಲುಪಿದೆ. ಕೋವಿಡ್ ಲಸಿಕೆ…

Read More

ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿಯೇ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‍ಗಳ ಬೆಲೆಯನ್ನು ತೈಲ ಕಂಪೆನಿಗಳು ಇಳಿಕೆ ಮಾಡಿವೆ. ಇಂದಿನಿಂದ 19 ಕೆಜಿ ತೂಕದ ವಾಣಿಜ್ಯಸಿಲಿಂಡರ್ ಬೆಲೆಯನ್ನು 91.50 ರೂ. ನಷ್ಟು ಇಳಿಕೆ ಮಾಡಲಾಗಿದೆ. ಹೊಸ ವರ್ಷದ ಮೊದಲ ದಿನದಂದು ವಾಣಿಜ್ಯ ಸಿಲಿಂಡರ್ ಬೆಲೆಯನ್ನು ನೂರು ರೂ.ಗಳಷ್ಟು ಇಳಿಕೆ ಮಾಡಲಾಗಿತ್ತು. ಈಗ 91ರೂ. ಕಡಿತಗೊಳಿಸಲಾಗಿದ್ದು, ಒಟ್ಟಾರೆ 191 ರೂ.ಗಳಷ್ಟು ಬೆಲೆ ಇಳಿಕೆಯಾದಂತಾಗಿದೆ. 14.2 ಕೆಜಿ ತೂಕದ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಪಾವಗಡ: ಮಂಡಲ ಕಾರ್ಯಾಲಯದಲ್ಲಿ ನೂತನ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ಅಧ್ಯಕ್ಷರಾದ ಬಿ.ಕೆ. ಮಂಜುನಾಥ್ ಅವರ ಸಮ್ಮುಖದಲ್ಲಿ ಕಾರ್ಯಕರ್ತರ ಸಂಘಟನಾತ್ಮಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಂಡಲ ಅಧ್ಯಕ್ಷರಾದ  ರವಿಶಂಕರ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ,  ತಿಮ್ಮಜ್ಜ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್, ಜಿಲ್ಲಾ ಉಪಾಧ್ಯಕ್ಷರು ಲಕ್ಷ್ಮೀಪತಿ, ಗಾಯಿತ್ರಿದೇವಿ, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಸಾಖೇಲ್, ಹನುಮಂತರಾಯಪ್ಪ, ಜಿಲ್ಲಾ ಒ.ಬಿ.ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರು ಮಾರುತಿ ಗಂಗ ಹನುಮಯ್ಯ, ಜಿಲ್ಲಾ ಎಸ್.ಟಿ.ಮೋರ್ಚಾ ಅಧ್ಯಕ್ಷರು ಬ್ಯಾಡನೂರು ಶಿವು, ಜಿಲ್ಲಾ ಯುವಮೋರ್ಚಾ ಅಧ್ಯಕ್ಷರು ಮಾಲಿ ಭರತ್, ಜಿಲ್ಲಾ ಯುವಮೋರ್ಚಾ ಪ್ರದಾನ ಕಾರ್ಯದರ್ಶಿ ದೀಕ್ಷಿತ್ ಎಂ ಈ, ಜಿಲ್ಲಾ ಒ.ಬಿ.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ದುಗ್ಗಿ ವೆಂಕಟೇಶ್, ಹಿರಿಯ ಮುಖಂಡರು ವೆಂಕಟರಾಮಯ್ಯ, ಕೃಷ್ಣನಾಯ್ಕ್ ಹಾಗೂ ವಿವಿಧ ಮೋರ್ಚಾ ಅಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಮುಖಂಡರುಗಳು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಿ.  ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ತಿಪಟೂರು: ನಗರದ ಪ್ರವಾಸಿ  ಮಂದಿರದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿ (ರಿ) ತಿಪಟೂರು ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ವೆಂಕಟೇಶ್ ವೈ.ವಿ, ಉಪಾಧ್ಯಕ್ಷರಾಗಿ ಫೈರೋಜ್ ಅವರು ಆಯ್ಕೆ ಮಾಡಲಾಯಿತು.  ಪ್ರಧಾನ ಕಾರ್ಯದರ್ಶಿಯಾಗಿ ಶಾಬುದ್ದೀನ್ ಮತ್ತು  ಕಾರ್ಯದರ್ಶಿಯಾಗಿ ಚಿದಾನಂದಮೂರ್ತಿ ರವರನ್ನು ರಾಷ್ಟ್ರೀಯ ಅಧ್ಯಕ್ಷ ಸಂತೋಷ್  ಆದೇಶದಂತೆ, ಸಂಸ್ಥಾಪಕ ಅಧ್ಯಕ್ಷ ರಘು, ರಾಜ್ಯ ಕಾರ್ಯಾಧ್ಯಕ್ಷ ನವೀನ್ ಕುಮಾರ್, ಜಿಲ್ಲಾಧ್ಯಕ್ಷ ಶ್ರೀಧರ್ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತಿಪಟೂರು: ತಾಲ್ಲೂಕಿನ ಚಿಕ್ಕರಂಗಾಪುರ ಭೋವಿಕಾಲೊನಿಯ ಗೊಲ್ಲರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ 73 ನೇ ಗಣರಾಜ್ಯೋತ್ಸದ ಅಂಗವಾಗಿ ಗ್ರಾಮ ಪಂಚಾಯ್ತಿ ಸದಸ್ಯೆ ರೂಪ ಹರೀಶ್ ರವರು ಉಚಿತವಾಗಿ ಸಮವಸ್ತ್ರ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಉಳ್ಳವರು ಕೈಲಾದ ಸಹಾಯ ಮಾಡಿ ಮಕ್ಕಳನ್ನು ಪ್ರೋತ್ಸಾಹಿಸಿದರೆ,ನಮ್ಮ ಹಳ್ಳಿಯ ಮಕ್ಕಳು ಕೂಡ ಪಟ್ಟಣದ ಮಕ್ಕಳಿಗಿಂತ ಮುಂದೆ ಬರುತ್ತಾರೆ. ಮುಂದೊಂದು ದಿನ ಇದೆ ಮಕ್ಕಳು ದೇಶ ಮೆಚ್ಚುವ ಸತ್ಪ್ರೇಜೆಗಳಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಜೊತೆಗೆ ಉತ್ತಮ ಸಂಸ್ಕಾರವಂತರಾದಲ್ಲಿ ತಮ್ಮ ಕುಟುಂಬಕ್ಕೆ,ಸಮಾಜಕ್ಕೆ ಹೆಸರು ತರುವಂತ ಶ್ರೇಷ್ಠ ವ್ಯಕ್ತಿಗಳಾಗುವರು ಈ ನಿಟ್ಟಿಯಲ್ಲಿ ನಾವು ನಮ್ಮ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಿರುವುದು ಸಂತೋಷ ತಂದಿದೆ ಎಂದರು. ಇನ್ನೊರ್ವ ಗ್ರಾಮ ಪಂಚಾಯ್ತಿ ಸದಸ್ಯ ಶೇಖರಣ್ಣ ಮಕ್ಕಳಿಗೆ ಸಿಹಿ ವಿತರಿಸಿದರು. ಇದೆ ಸಂದರ್ಭದಲ್ಲಿ ನೂತನ ಧ್ವಜಸ್ತಂಭವನ್ನು ಕೂಡ ಶಾಲೆಗೆ ಕೊಡುಗೆಯಾಗಿ ನಿರ್ಮಾಣ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು ಮುಖ್ಯ ಶಿಕ್ಷಕಿ ಹೇಮಲತಾ ಮಾತನಾಡಿ, ನಮ್ಮ ಶಾಲೆಯ ಮಕ್ಕಳಿಗೆ ಕಲಿಕೆ…

Read More

ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರು ರಾಮಚಂದ್ರ ಬೇಂದ್ರೆ-ಅಂಬವ್ವನವರ ಪುತ್ರರಾಗಿ ೩೧-೧-೧೮೯೬ರಲ್ಲಿ ಧಾರವಾಡದಲ್ಲಿ ಜನಿಸಿದರು. ಧಾರವಾಡದಲ್ಲಿ ೧೯೧೩ರಲ್ಲಿ ಮೆಟ್ರಿಕ್ ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ೧೯೧೮ರಲ್ಲಿ ಬಿ.ಎ. ಮಾಡಿದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ೧೯೩೫ರಲ್ಲಿ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿ ಆಮೇಲೆ ೧೯೪೨ರಲ್ಲಿ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲಿನಲ್ಲಿ ಒಪ್ಪೊತ್ತಿನ ಶಿಕ್ಷಕರಾದರು. ೧೯೪೪ರಲ್ಲಿ ಸೊಲ್ಲಾಪುರದ ಡಿಎವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ೧೯೪೪ರಲ್ಲಿ ನೇಮಕಗೊಂಡರು. ೧೯೫೬ರಲ್ಲಿ ನಿವೃತ್ತರಾದ ಮೇಲೆ ಧಾರವಾಡದ ಆಕಾಶವಾಣಿ ಕೇಂದ್ರದಲ್ಲಿ ಸಲಹೆಗಾರರಾಗಿ ಕೆಲಸ ಮಾಡಿದರು. ಮುಂಬಯಿಯಲ್ಲಿ ನಡೆದ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಅಧ್ಯಕ್ಷರಾಗಿದ್ದರು. ೧೯೩೦ ರಲ್ಲಿ ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೇಖಕ ಗೋಷ್ಠಿಯನ್ನು ನಿರ್ವಹಿಸಿದರು. ಕೆಲವು ಕಾಲ ಜೀವನ ಮಾಸಪತ್ರಿಕೆ ಮತ್ತು ಜಯಕರ್ನಾಟಕ ಪತ್ರಿಕೆ ಸಂಪಾದಕರಾಗಿ ಸೇವೆ ಸಲ್ಲಿಸಿದರು. ಬೇಂದ್ರೆ ಅವರಿಗೆ ೧೯೬೮ರಲ್ಲಿ…

Read More