Subscribe to Updates
Get the latest creative news from FooBar about art, design and business.
- ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
- ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
- ಕ್ವಿಂಟಾಲ್ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
- ಬೆಂಗಳೂರು ರೇಸ್ ಕೋರ್ಸ್ ತುಮಕೂರಿನ ಕುಣಿಗಲ್ ಗೆ ಸ್ಥಳಾಂತರ: ಸಂಪುಟ ನಿರ್ಣಯ
- ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
- ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
- ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
Author: admin
ಪಾವಗಡ: ಪಾವಗಡ ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಮೂಳೆ ತಜ್ಞ ರಮೇಶ್ ರವರನ್ನು ಮರು ನೇಮಕ ಮಾಡುವಂತೆ ಸಂಘ ಸಂಸ್ಥೆಗಳ ಮುಖಂಡರು ತುಮಕೂರು ಜಿಲ್ಲಾಧಿಕಾರಿಗಳಿಗೆ ಪಾವಗಡ ತಹಸೀಲ್ದಾರ್ ಕೆ. ಆರ್.ನಾಗರಾಜ ಮೂಲಕ ಮನವಿ ಪತ್ರ ಸಲ್ಲಿಸಿದರು. ಪಾವಗಡ ತಾಲ್ಲೂಕು ಅತೀ ಹಿಂದುಳಿದ ಬರಪೀಡಿತ ತಾಲೂಕಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಡು ಬಡವರು ವಾಸವಾಗಿದ್ದಾರೆ. ಆಕಸ್ಮಿಕ ಅಪಘಾತ ಅಥವಾ ಕೂಲಿ ಕೆಲಸ ಮಾಡುವ ಸಂದರ್ಭದಲ್ಲಿ ಕೈ ಕಾಲುಗಳಿಗೆ ಗಾಯಗಳಾದಾಗ ಜಿಲ್ಲಾ ಆಸ್ಪತೆಗೆ ಹೋಗಬೇಕಾದ ಅನಿವಾರ್ಯತೆ ಇದೆ ಎಂದು ಮನವಿಯಲ್ಲಿ ಗಮನ ಸೆಳೆಯಲಾಯಿತು. ಈ ಹಿಂದೆ ನೇಮಕವಾಗಿರುವ ಮೂಳೆ ತಜ್ಞ ರಮೇಶ್ ರವರು ರೋಗಿಗಳನ್ನು ಗುಣಪಡಿಸಲು ನಿಪಕ್ಷಪಾತವಾಗಿ ಕೆಲಸ ನಿರ್ವಹಿಸುತಿದ್ದು, ಈ ತಾಲ್ಲೂಕಿನ ಜನತೆಗೆ ಇಂತಹ ದಕ್ಷ ತಜ್ಞ ವೈದ್ಯರೆ ಬೇಕಾಗಿರುವುದರಿಂದ ಕೂಡಲೇ ಡಾ.ರಮೇಶ್ ರವರನ್ನು ಮರುನೇಮಕ ಮಾಡುವಂತೆ ಸಂಘ ಸಂಸ್ಥೆಗಳ ಮುಖಂಡರು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಂ.ಕೆ.ನಾರಾಯಣಪ್ಪ, ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ವೆಟರ್ನರಿ ಉಗ್ರಪ್ಪ ಬಿ.ಎಸ್.ಪಿ. ಮಂಜುನಾಥ್, ಕಣ್ಣಮೇಡಿ ಕೃಷ್ಣ…
ಕೊರಟಗೆರೆ: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರಿಗೆ ಅಗೌರವ ತೋರಿಸಿರುವುದರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ವಕೀಲರು ಕಾರ್ಯ ಕಲಾಪಗಳಿಗೆ ಹಾಜರಾಗದೆ ಕಾರ್ಯ ಕಲಾಪವನ್ನು ಬಹಿಷ್ಕರಿಸಿದರು. ಈ ವೇಳೆ ವಕೀಲರ ಸಂಘದ ಉಪಾದ್ಯಕ್ಷ ಟಿ.ಕೃಷ್ಣಮೂರ್ತಿ ಮಾತನಾಡಿ, ಜನವರಿ 26 ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರು ಬಾಬಾ ಸಾಹೇಬರ ಭಾವಚಿತ್ರ ತೆಗೆಸಿ ಒಂದು ಗಂಟೆ ತಡವಾಗಿ ಧ್ವಜಾರೋಹಣ ಮಾಡಿದ್ದಾರೆ. ಇದು ಸಂವಿಧಾನಕ್ಕೆ ಅಗೌರವ ತೋರಿಸಿದಂತಾಗಿದೆ. ಉಚ್ಚ ನ್ಯಾಯಾಲಯದ ಆದೇಶ ಏನೇ ಇರಲಿ ವಿಶ್ವ ನಾಯಕನಿಗೆ ಅಗೌರವ ತೋರಿಸಿರುವುದು ನಮ್ಮ ರಾಷ್ಟ್ರವೇ ತಲೆತಗ್ಗಿಸುವಂತಾಗಿದೆ ಎಂದರು. ಪುಟ್ಟರಾಜಯ್ಯ ಮಾತನಾಡಿ, ಸಂವಿಧಾನದ ಅಡಿಯಲ್ಲಿ ಮಲ್ಲಿಕಾರ್ಜುನ ಗೌಡರು, ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಡಾ.ಬಿ.ಆರ್ ಅಂಬೇಡ್ಕರ್ ರಚಿಸಿ ದೇಶಕ್ಕೆ ನೀಡಿದಂತಹ ಸಂವಿಧಾನದಡಿ ಬರುವಂತಹ ನ್ಯಾಯಾಂಗದಲ್ಲಿ ಇಂತಹ ಘಟನೆಗಳು ನೆಡೆಯುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಭಾವುಕರಾದರು. ಪ್ರತಿಭಟನಾ ಕಾರ್ಯಕ್ರಮದಲ್ಲಿ ವಕೀಲ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಲ್. ಸಂತೋಷ್,…
ಮಧುಗಿರಿ: ಪಟ್ಟಣದಲ್ಲಿ ಸ್ಮಾರ್ಟ್ ಸಿಟಿಯ ಹೆಸರಲ್ಲಿ ಯುಜಿಡಿ ಕಾಮಗಾರಿ ನಡೆಯುತ್ತಿದ್ದು, ಅಗೆದ ಗುಂಡಿಗಳನ್ನು ಕಾಮಗಾರಿ ಪೂರ್ಣಗೊಂಡ ನಂತರ ಸರಿಯಾಗಿ ಮುಚ್ಚದೆ ಹಾಗೆಯೇ ಬಿಡಲಾಗಿದೆ. ರಸ್ತೆಯನ್ನು ಅಗೆದ ಗುಂಡಿಯಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ಕಿರಿಕಿರಿ ಉಂಟಾಗುತ್ತಿದ್ದು, ಮುಖ್ಯವಾಗಿ ಜನದಟ್ಟನೆ ಇರುವ ಟಿವಿವಿ ಸರ್ಕಲ್ ಬಳಿಯಲ್ಲಿಯೇ ರಸ್ತೆ ಬದಿಯಲ್ಲಿ ಅಲ್ಲಲ್ಲಿ ಗುಂಡಿಗಳಿದ್ದವು. ಇದನ್ನು ಗಮನಿಸಿದ ಶಿಕ್ಷಕ ದಂಪತಿ ಫಣೀಂದ್ರನಾಥ್ ಮತ್ತು ಇಂದ್ರಮ್ಮ ರಜೆ ದಿನ ಭಾನುವಾರ ರಸ್ತೆ ಗುಂಡಿ ಸರಿಪಡಿಸಿ, ಸ್ವಚ್ಛತಾ ಕಾರ್ಯ ನಡೆಸಿದರು. ಇವರಿಗೆ ದಂಪತಿಗಳ ಮಕ್ಕಳಾದ ಸಿರಿ, ಕಲ್ಯಾಣ ಹಾಗೂ ಕಾಲೇಜು ವಿದ್ಯಾರ್ಥಿ ಪ್ರಸನ್ನ ಸಾಥ್ ನೀಡಿದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಇತ್ತೀಚೆಗೆ ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದ ದಕ್ಷ ಮತ್ತು ಪ್ರಾಮಾಣಿಕ ಐಪಿಎಸ್ ಅಧಿಕಾರಿ ಎಂದೇ ಗುರುತಿಸಿಕೊಂಡಿರುವ ರವಿ ಡಿ. ಚನ್ನಣ್ಣನವರ್ ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಮಾಧ್ಯಮ ಹೇಳಿಕೆ ಯನ್ನು ಬಿಡುಗಡೆ ಮಾಡಿದ್ದಾರೆ. ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ. ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ. ಇವುಗಳು ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇವುಗಳನ್ನು ನಾನು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ವಾರ್ಡ್ ನಂ 19ರಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬಿ ಇ ಓ ಕಚೇರಿ ಕಟ್ಟಲು ಹೊರಟಿರುವ ಆದೇಶವನ್ನು ಹಿಂಪಡೆಯಲು ಒತ್ತಾಯಿಸಿ ಹೋರಾಟ ನಡೆಸಲು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಮಿತಿ ಪೂರ್ವಸಭೆ ನಡೆಸಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ., ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ವಿ., ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್., ಉಪಾಧ್ಯಕ್ಷರುಗಳಾದ ಶ್ರೀನಿವಾಸ್, ವಿಜಯಕುಮಾರ್, ಶಿವರಾಜ್, ಶಾಲೆಯ ಮಕ್ಕಳ ಪೋಷಕರಾದ ಓಂಕಾರಪ್ಪ, ಪಯಾಜ್, ವೆಂಕಟೇಶ್, ರೂಪ , ಮಂಜುಳ, ರೇಖಾ, ಪಾತಿಮ, ಜಬಿವುಲ್ಲಾ, ಅನಿಫ್, ಲಕ್ಷ್ಮಿ, ಕರಿಯಮ್ಮ, ತೀವ್ರೆಣಿ, ನಿಂಗಮ್ಮ, ವಿದ್ಯಾ, ಅಮ್ಮುಜುಮ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ). ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಜಿಲ್ಲೆಯ ತಿಪಟೂರು ತಾಲ್ಲೋಕಿನ ಗಡಿ ಗ್ರಾಮ ಕಾರೇ ಕುರ್ಚಿ ಶಿವಶರಣ ಶ್ರೀ ಗುರುಸಿದ್ದರಾಮೇಶ್ವರರ ತಪೋಭೂಮಿ ದೊಣೆಗಂಗಾಕ್ಷೇತ್ರ ಮೂಲಸೌಕರ್ಯಗಳಿಲ್ಲದೇ ಭಕ್ತರು ಪರದಾಡುವಂತಾಗಿದೆ. ಕರ್ನಾಟಕ ಸೇರಿದಂತೆ ದೇಶಾದಾಧ್ಯಂತ ಅಸಂಖ್ಯಾತ ಭಕ್ತರನ್ನ ಹೊಂದಿರುವ ಕಾಯಕ ಯೋಗಿ ಶಿವಶರಣ ಶ್ರೀ ಗುರುಸಿದ್ದರಾಮೇಶ್ವರರು ಲೋಕ ಕಲ್ಯಾಣಕ್ಕಾಗಿ 12ವರ್ಷಗಳ ಹಠಯೋಗದ ಮೂಲಕ ತಪಸ್ಸು ಗೈದ ಪೂಣ್ಯಭೂಮಿ ನಾಡಿನ ಕಲ್ಯಾಣಕ್ಕಾಗಿ ಗಂಗೋದ್ಬವವಾಗಿರು ಈ ಕ್ಷೇತ್ರಕ್ಕೆ ಪ್ರತಿನಿತ್ಯ ಸಾವಿರಾರು ಜನ ಭಕ್ತಾಧಿಗಳು ಭೇಟಿ ನೀಡುತ್ತಾರೆ. ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕಾರೇಕುರ್ಚಿ ದೊಣೆಗಂಗಾಕ್ಷೇತ್ರ ತಾಲ್ಲೂಕಿನ ಗಡಿ ಗ್ರಾಮವಾಗಿದ್ದು, ತಿಪಟೂರು ಹಾಗೂ ಗುಬ್ಬಿ ತಾಲ್ಲೂಕಿನ ಗಡಿಗೆ ಹೊಂದಿಕೊಂಡಂತಿರುವ ಕಾರಣ ರಾಜಕೀಯ ನಾಯಕರ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಾಡಿನಾದ್ಯಂತ ಅಸಂಖ್ಯಾತ ಭಕ್ತರನ್ನ ಹೊಂದಿರುವ ಶ್ರೀ ಸಿದ್ದರಾಮೇಶ್ವರರ ತಪೋ ಭೂಮಿಗೆ ಸಂಪರ್ಕಿಸಲು ಸರಿಯಾದ ರಸ್ತೆ ಸಂಪರ್ಕವಿಲ್ಲ. ರಾಷ್ಟ್ರೀಯ ಹೆದ್ದಾರಿ 206 ಕೇವಲ 3 ಕಿಲೋಮೀಟ್ ಅಂತರದಲ್ಲಿ ಶ್ರೀಕ್ಷೇತ್ರವಿದ್ದು, ದೊಣೆಗಂಗಾಕ್ಷೇತ್ರಕ್ಕೆ ಸರಿಯಾದ ಸಂಪರ್ಕವಿಲ್ಲದಂತಾಗಿದೆ. ಶ್ರೀಕ್ಷೇತ್ರಕ್ಕೆ ಮಣ್ಣಿನ ರಸ್ತೆಯಲ್ಲಿ ಸಾಗಬೇಕಿದ್ದು ಮಳೆಗಾಲದಲ್ಲಿ ಕೆಸರುಮಯವಾದರೇ ಬೇಸಿಗೆಯಲ್ಲಿ ಧೂಳುಮಯವಾಗುತ್ತದೆ. ಗುಂಡುಗೊಟರುಗಳಿಂದ ಕೂಡಿರುವ…
ಬೆಂಗಳೂರು : ಆಡಿ ಕಾರು ಮಾಲೀಕನೊಬ್ಬ ಮಲಗಿದ್ದ ಬೀದಿ ನಾಯಿಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.. ಆಡಿ ಕಾರ್ ಮಾಲೀಕನ ದರ್ಪಕ್ಕೆ ಸಿಲುಕಿದ ನಾಯಿ ನೋವಿನಿಂದ ವಿಲಿ ವಿಲಿ ಒದ್ದಾಡಿರುವಂತಹ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಬೇಕಂತಲೇ ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.. ರಸ್ತೆ ಬದಿ ನಾಯಿ ತನ್ನ ಪಾಡಿಗೆ ತಾನು ಮಲಗಿತ್ತು.. ಆದ್ರೆ ಕಾರು ಚಲಾಯಿಸುತ್ತಿದ್ದವ ಉದ್ದೇಶಪೂರ್ವಕವಾಗೇ ಕಾರನ್ನ ರಿವರ್ಸ್ ತೆಗೆದುಕೊಂಡು ನಾಯಿ ಮೇಲೆ ಹತ್ತಿಸಿ ವಿಕೃತಿ ಮೆರೆದಿದ್ದಾನೆ.. ಜಯನಗರ1st ಬ್ಲಾಕ್ 10th ಬಿ ಮೈನ್ ನಲ್ಲಿ ಈ ಘಟನೆ ನಡೆದಿದೆ.. ಘಟನೆಯ ವಿಡಿಯೋ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ನವದೆಹಲಿ: ಫೆಬ್ರವರಿಯಿಂದ ಬ್ಯಾಂಕ್ ಆಫ್ ಬರೋಡಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿವಿಧ ಸೇವೆಗಳಿಗೆ ಹೊಸ ನಿಯಮಗಳನ್ನು ಜಾರಿಗೆ ತರಲಿವೆ. ಇದು ದೇಶದ ಜನರ ಜೇಬಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. SBI ನಿಂದ ದೊಡ್ಡ ಬದಲಾವಣೆಯಾಗುವ ಸಾಧ್ಯತೆಗಳಿವೆ. ಇದು ಹಣ ವರ್ಗಾವಣೆಯ ನಿಯಮಗಳನ್ನು ಬದಲಾಯಿಸುತ್ತಿದೆ. IMPS ಮೂಲಕ 2 ಲಕ್ಷದಿಂದ 5 ಲಕ್ಷದವರೆಗೆ ಹಣವನ್ನು ವರ್ಗಾಯಿಸಲು ಬ್ಯಾಂಕ್ ಈಗ 20ರೂ ಜೊತೆಗೆ GST ಶುಲ್ಕವನ್ನು ವಿಧಿಸುತ್ತದೆ. ಇದು ಜನರ ಆರ್ಥಿಕತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ನೂ ಬ್ಯಾಂಕ್ ಆಫ್ ಬರೋಡಾ ನಿಯಮಗಳು ಫೆಬ್ರವರಿ 1 ರಿಂದ ಬದಲಾಗಲಿದ್ದು ಬ್ಯಾಂಕ್ ಆಫ್ ಬರೋಡಾ ಗ್ರಾಹಕರು ಫೆಬ್ರವರಿ 1 ರಿಂದ ಚೆಕ್ ಪಾವತಿಗೆ ಧನಾತ್ಮಕ ಪಾವತಿ ವ್ಯವಸ್ಥೆಯನ್ನು ಅನುಸರಿಸಬೇಕಾಗುತ್ತದೆ. ಅಂದರೆ ಚೆಕ್ಗೆ ಸಂಬಂಧಿಸಿದ ಮಾಹಿತಿಯನ್ನು ಕಳುಹಿಸಬೇಕಾಗುತ್ತದೆ, ಆಗ ಮಾತ್ರ ನಿಮ್ಮ ಚೆಕ್ ಕ್ಲಿಯರ್ ಆಗುತ್ತದೆ ಎನ್ನಲಾಗುತ್ತಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ನ…
ಬೆಂಗಳೂರು: 24 ದಿನಗಳ ಬಳಿಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಶಾಲಾ – ಕಾಲೇಜುಗಳು ಪುನರ್ ಆರಂಭವಾಗಿವೆ. ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನಲ್ಲಿ ಜನವರಿ ಆರರಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಅಲ್ಲದೇ ಭೌತಿಕ ತರಗತಿಗಳನ್ನು ಬಿಟ್ಟು ಆನ್ ಲೈನ್ ತರಗತಿಗೆ ಮಹತ್ವ ನೀಡಲಾಗಿತ್ತು. ಇದೀಗ ಮೂರನೇ ಅಲೆಯಲ್ಲಿ ಕೊರೊನಾ ಸೋಂಕಿತರು, ಮನೆಯಲ್ಲಿಯೇ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿರುವ ಕಾರಣ ಮತ್ತೆ ಶಾಲೆಗಳ ಆರಂಭಕ್ಕೆ ಸರ್ಕಾರ ಗ್ರೀಸ್ ಸಿಗ್ನಲ್ ಕೊಟ್ಟಿದೆ. ಅದರಂತೆ ಇಂದಿನಿಂದ ಬೆಂಗಳೂರಿನಲ್ಲಿ ಶಾಲೆಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಇನ್ನು ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಶಾಲಾ ಆವರಣದಲ್ಲೇ ಮೊದಲಿಗೆ ತಾಪಮಾನ ಪರೀಕ್ಷಿಸಿ ಕೊಠಡಿಯೊಳಗೆ ಬಿಡಲಾಗುತ್ತಿದೆ. ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಮಕ್ಕಳು ಸಾಮಾಜಿಕ ಅಂತರ ಪಾಲನೆಯೊಂದಿಗೆ ತರಗತಿಗಳು ನಡೆಯುತ್ತಿವೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ನವದೆಹಲಿ : ಭಾರತದಲ್ಲಿ ಕೊರೊನ ಸೋಂಕಿನ ಮೂರನೇ ಅಲೆಯ ಏರಿಳಿತ ಮುಂದುವರೆದಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,09,918 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 959 ಮಂದಿ ಕಿಲ್ಲರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ನಿನ್ನೆ 959 ಮಂದಿಯ ಸಾವಿನೊಂದಿಗೆ ಈವರೆಗೆ ದೇಶದಲ್ಲಿ ಸುಮಾರು 4,95,050 ಮಂದಿ ಮೃತಪಟ್ಟಿದ್ದಾರೆ. ಇಂದಿನ ಪ್ರಕರಣಗೊಂದಿಗೆ ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 18,31,268 ಬಂದು ನಿಂತಿದೆ. ಒಟ್ಟು ಸೋಂಕಿತರಲ್ಲಿ ಶೇಕಡಾ 4.43 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಇತ್ತ ದೇಶದಲ್ಲಿ ಈವರೆಗೆ ಸುಮಾರು 1,66,03,96,227 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ವರದಿ: ಆಂಟೋನಿ ಬೇಗೂರು