Subscribe to Updates
Get the latest creative news from FooBar about art, design and business.
- ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
- ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
- ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ
- “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ
- ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕೊನೆಗೂ ಲಾಕ್
- ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
- ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ
- ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
Author: admin
ಪಾವಗಡ: ತಾಲೂಕಿನ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ಹಾಗೂ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ನೇತೃತ್ವದಲ್ಲಿ ತಾಲ್ಲೂಕಿನಿಂದ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ನೂರಾರು ವಾಹನಗಳಲ್ಲಿ ಮೇಕೆದಾಟು ಪಾದಯಾತ್ರೆಗೆ ತೆರಳಿದರು. ಈ ಸಂದರ್ಭದಲ್ಲಿ ಪಾವಗಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ H V V ವೆಂಕಟೇಶ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಕೋಟೆ ಪ್ರಭಾಕರ. ಸಿ.ಕೆ.ಪುರ.ಗ್ರಾಮದ ಬಿಂದು ಮಾಧವ ರಾವ್ ಹಾಗೂ ಪಾವಗಡ ತಾಲ್ಲೂಕಿನ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು ವರದಿ: ರಾಮಪ್ಪ ಸಿ.ಕೆ.ಪುರ., ಪಾವಗಡ ತಾಲ್ಲೂಕು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ನಾಡಿನಲ್ಲೆಡೆ ಶಿವರಾತ್ರಿ ಹಬ್ಬದ ಸಡಗರ ಗರಿಗೆದರಿದ್ದು ಹಿನ್ನೆಲೆಯಲ್ಲಿ ತುಮಕೂರು ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷವಾದ ಪೂಜಾ ಕೈಂಕರ್ಯಗಳು ನಡೆಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇರುವ ಕೋಟೆ ಆಂಜನೇಯ ಸ್ವಾಮಿಗೆ ಬೆಳಗ್ಗೆಯಿಂದ ವಿಶೇಷವಾದ ಪೂಜಾಕೈಂಕರ್ಯಗಳು ಜರುಗಿದವು. ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಆಂಜನೇಯಸ್ವಾಮಿಗೆ ವಿಶೇಷವಾದ ಅಲಂಕಾರವನ್ನು ಏರ್ಪಡಿಸಲಾಗಿತ್ತು. ಶಿವರಾತ್ರಿ ಹಬ್ಬದ ಪ್ರಯುಕ್ತ ಚಿಕ್ಕಪೇಟೆಯಲ್ಲಿರುವ ಪಾರ್ವತಿ ಸಮೇತ ಗಂಗಾಧರೇಶ್ವರ ದೇವಾಲಯದಲ್ಲಿ ಕೂಡ ವಿಶೇಷವಾದ ಪೂಜಾಕೈಂಕರ್ಯಗಳು ನಡೆದವು.ಸುಮಾರು 700 ವರ್ಷಗಳ ಇತಿಹಾಸವಿರುವ ಚಿಕ್ಕಪೇಟೆಯ ಪ್ರಸನ್ನ ಗಂಗಾಧರೇಶ್ವರ ದೇವಾಲಯವು ಮುಜರಾಯಿ ಇಲಾಖೆಯ ಅಡಿಯಲ್ಲಿದ್ದು, ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷವಾದ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದ ಗಂಗಾಧರೇಶ್ವರಸ್ವಾಮಿ ವಿಶೇಷವಾದ ಅಭಿಷೇಕಗಳು ವಿವಿಧ ಅಲಂಕಾರಗಳು ನಡೆದವು ಪಾರ್ವತಿ ಸಮೇತ ಗಂಗಾಧರೇಶ್ವರಸ್ವಾಮಿ ದೇವಾಲಯಕ್ಕೆ ಅನೇಕ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು. ವರದಿ: ಎ.ಎನ್.ಪೀರ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಇತ್ತೀಚೆಗೆ ನಗರದಲ್ಲಿ ನಡೆದ ಪತ್ರಕರ್ತ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಪರಮೇಶ್ವರ್ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರದ ಛಲವಾದಿ ಗ್ರಾಮೀಣ ಅಭಿವೃದ್ಧಿ ಸಂಘಟನೆಯವರು ಇಂದುನಗರದ ಅಂಬೇಡ್ಕರ್ ಭವನದಲ್ಲಿ ಪರಮೇಶ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭ ಅಧ್ಯಕ್ಷ ಕೆ.ಕುಮಾರ್ , ಗೌರವಾಧ್ಯಕ್ಷ ಎಂ.ಸಂಪತ್ ಕುಮಾರ್ , ಉಪಾಧ್ಯಕ್ಷ ಯಲ್ಲಯ್ಯ ಸೇರಿದಂತೆ ಸಂಘದ ನಿರ್ದೇಶಕರುಗಳು ಸನ್ಮಾನದ ವೇಳೆ ಹಾಜರಿದ್ದರು. ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪಾವಗಡ: ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಿಲಾರ್ಲಹಳ್ಳಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದ ನಿರೂಪಣೆಯನ್ನು ವಿಜ್ಞಾನ ಶಿಕ್ಷಕರಾದ ರಾಜಾನಾಯ್ಕ ಎಸ್.ಹೆಚ್. ನೆರವೇರಿಸಿದರು. ಸರ್ ಸಿ.ವಿ.ರಾಮನ್ ಫೋಟೋ ಪೂಜೆ ಮತ್ತು ಪ್ರಾರ್ಥನೆಯನ್ನು 7ನೇ ತರಗತಿ ಲಾವಣ್ಯ ಮತ್ತು ತಂಡ ನೆರವೇರಿಸಿದರು, ಮುಖ್ಯ ಶಿಕ್ಷಕರಾದ ಚಂದ್ರಪ್ಪ ಸ್ವಾಗತ ಮಾಡಿದರು. ಕ್ಷೇತ್ರಶಿಕ್ಷಣಾಧಿಕಾರಿಗಳಾದ ಅಶ್ವತ್ಥ ನಾರಾಯಣರವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಕ್ಕಳು ಉತ್ತಮ ಕಡಿಮೆ ವೆಚ್ಚದ ಮಾದರಿಗಳನ್ನು ತಯಾರಿಸಲು ವಿಜ್ಞಾನ ಶಿಕ್ಷಕರು ಮತ್ತು ಇತರ ಶಿಕ್ಷಕರು ಪ್ರೋತ್ಸಾಹಿಸಬೇಕು. ಪೋಷಕರು ಮಕ್ಕಳಿಗೆ 1 ರಿಂದ 10 ನೇ ತರಗತಿವರೆಗೆ ಹೆಚ್ಚು ಗಮನ ಕೊಟ್ಟರೆ ಅವರ ಭವಿಷ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು. ತಾಲ್ಲೂಕು ಅಕ್ಷರ ದಾಸೋಹ ಅಧಿಕಾರಿಗಳಾದ ಹನುಮಂತರಾಯಪ್ಪ ಮಾತನಾಡಿ, ಈ ದಿನ ಸಿ.ವಿ. ರಾಮನ್ ರವರಿಗೆ ನೋಬಲ್ ಪ್ರಶಸ್ತಿ ಬಂದ ದಿನ. ಅವರು ಭೌತಶಾಸ್ತ್ರ ವಿಷಯದಲ್ಲಿ ಬೆಳಕಿನ ಚದುರುವಿಕೆಯ ಬಗ್ಗೆ ಕೊಡುಗೆ ಅಪಾರ ಎಂದು ತಿಳಿಸಿದರು. ಅದೇ ರೀತಿ…
ಗುಬ್ಬಿ: ತಾಲೂಕಿನ ಕೋಡಿ ನಾಗೇನಹಳ್ಳಿ ಗ್ರಾಮದಲ್ಲಿ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆಯನ್ನು ಮಾರ್ಚ್ 6ರಂದು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಸಭೆಯನ್ನು ನಡೆಸಲಾಯಿತು. ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೋಡಿ ನಾಗೇನಹಳ್ಳಿ ಗ್ರಾಮದ ಪ್ರಸಾದ್ ಪಟೇಲ್ ರವರ ತೋಟದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಂ.ಎನ್.ಕೋಟೆ ವಲಯದ ಒಕ್ಕೂಟದ ಗೌರವಾಧ್ಯಕ್ಷರಾದ ಕಿಡಿಗಣ್ಣಪ್ಪ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿಕೊಂಡರು ಸುಮಾರು ಎರಡು ಸಾವಿರ ಸದಸ್ಯರು 500 ಜೋಡಿಗಳು ಸತ್ಯ ನಾರಾಯಣ ಸ್ವಾಮಿ ಪೂಜೆಗೆ ಭಾಗವಹಿಸಲಿದ್ದು, ಈ ಭಾಗದ ಸರ್ವ ಸದಸ್ಯರು ಈ ಧಾರ್ಮಿಕ ಕಾರ್ಯಕ್ರಮ ದಲ್ಲಿ ಭಾಗವಹಿಸುವ ಮೂಲಕ ಕಾರ್ಯ ಕ್ರಮದ ಅಭೂತಪೂರ್ವ ಸಂಗಮ ಯಶಸ್ವಿ ಗೆ ಸಹಕರಿಸಬೇಕು ಎಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಹರೀಶ್, ಮಾಜಿ ತಾ.ಪಂ.ಸದಸ್ಯ ಅ.ನಾ.ಲಿಂಗಪ್ಪ, ಮೇಲ್ವಿಚಾರಕ ವಿಶ್ವನಾಥ್ ಪೂಜಾರಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಇದ್ದರು. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ…
ಚಿತ್ರದುರ್ಗ: ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಬಿಡದ ಕಾಂಗ್ರೆಸ್ ಶಾಸಕರು ಕಲಾಪ ವ್ಯರ್ಥವಾಗಲು ಕಾರಣರಾಗಿದ್ದು, ಈಶ್ವರಪ್ಪನವರ ಹೇಳಿಕೆಯನ್ನು ತಿರುಚಿ, ಸದನ ನಡೆಯಲು ಬಿಡದೇ ಜನರ ತೆರಿಗೆ ವ್ಯರ್ಥವಾಗುವಂತೆ ಮಾಡಿದ್ದಾರೆ ಎಂದು ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾಶ್ರೀನಿವಾಸ್ ಆರೋಪಿಸಿದರು. ಬಿಜೆಪಿ ಮಂಡಲ ಅಧ್ಯಕ್ಷರಾದ ವಿ.ವಿಶ್ವನಾಥ್ ರವರ ನೇತೃತ್ವದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು. ಡಿ . ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಧರ್ಮ – ಧರ್ಮಗಳ ನಡುವೆ ಸಂಘರ್ಷ ಉಂಟುಮಾಡುವಂತ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಶಿವಮೊಗ್ಗದ ಬಜರಂಗದಳದ ನಿಷ್ಠಾವಂತ ಕಾರ್ಯಕರ್ತ ಹರ್ಷನ ಹತ್ಯೆಗೆ ಪರೋಕ್ಷವಾಗಿ ಕಾರಣವಾಗಿದ್ದಾರೆ. ಅಧಿಕಾರ ಕಳೆದು ಕೊಂಡಾಗ ಪಾದಯಾತ್ರೆ ನೆಪದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕಪಟನಾಟಕದ ಎರಡನೇ ಭಾಗ ಪ್ರಾರಂಭಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಕೇಂದ್ರ ಸರ್ಕಾರ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಹಾಗೂ ಪ್ರಜೆಗಳನ್ನು ಸುರಕ್ಷಿತವಾಗಿ ದೇಶಕ್ಕೆ ಮರಳಿ ಕರೆತರುತ್ತಿದ್ದು…
ಹೆಚ್.ಡಿ.ಕೋಟೆ/ಸರಗೂರು: ಸಾರ್ವಜನಿಕರಿಂದ ಲಂಚ ಸ್ವೀಕರಿಸುವ ಅಧಿಕಾರಿಗಳನ್ನು ಶಾಸಕ ಅನಿಲ್ ಚಿಕ್ಕಮಾದು ತರಾಟೆಗೆತ್ತಿಕೊಂಡಿದ್ದು, ಎಚ್ಚರಿಕೆಯನ್ನು ನೀಡಿದರು. ಹೆಚ್.ಡಿ.ಕೋಟೆ ತಾಲ್ಲೂಕಿನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಸಲಾದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ನ್ಯಾಯುತವಾಗಿ ಮಾನವೀಯತೆಯ ಗುಣದಿಂದ ಸಾರ್ವಜನಿಕರಿಗೆ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕೋಟೆ ಮತ್ತು ಸರಗೂರು ತಹಶೀಲ್ದಾರ್ ಎಸ್ .ನರಗುಂದ, ಚಲುವರಾಜು, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಧಿಕಾರಿ ರಾಜೇಶ್, ಪುರಸಭೆ ಅಧ್ಯಕ್ಷೆ ನಾಗಮ್ಮ, ಸರಗೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್. ಸಿ.ನರಸಿಂಹಮೂರ್ತಿ ವಿವಿಧ ಅಧಿಕಾರಿಗಳು ಭಾಗಿಯಾಗಿದ್ದರು . ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಮಧುಗಿರಿ: ಪುರಾತನ ಕಾಲದ ಬಾವಿಯನ್ನು ಕಿಡಿಗೇಡಿಗಳು ರಾತ್ರೋ ರಾತ್ರಿ ಕೆಡವಿದ ಘಟನೆ ಇಲ್ಲಿನ ಸಿದ್ಧಾಪುರ ಗ್ರಾಮದಲ್ಲಿ ನಡೆದಿದ್ದು, ಊರ ಹೊರಗಿನ ಕೋಟೆಗಳನ್ನು ಧ್ವಂಸ ಮಾಡಿದ ಬಳಿಕ ಇದೀಗ ಜನ ವಸತಿ ಪ್ರದೇಶದಲ್ಲಿರುವ ಸ್ಥಳಗಳನ್ನೂ ನಾಶ ಮಾಡಲು ಆರಂಭಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪುರಾತನ ಕಾಲದ ಈ ಬಾವಿ ಇಲ್ಲಿನ ಜನರ ಹೆಮ್ಮೆಯ ಸಂಕೇತವಾಗಿತ್ತು. ಆದರೆ, ರಾತ್ರೋ ರಾತ್ರಿ ಕಳ್ಳರಂತೆ ಬಂದ ಕಿಡಿಗೇಡಿಗಳು ಈ ಪ್ರದೇಶದ ಬೀದಿ ಲೈಟ್ ಗಳನ್ನು ಆಫ್ ಮಾಡಿದ ಬಳಿಕ ಕೃತ್ಯ ನಡೆಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಘಟನಾ ಸ್ಥಳದಲ್ಲಿ ಬೀದಿ ಬಾವಿ ಲಕ್ಷ್ಮಿಕಾಂತ, ದ್ವಾರಕೀಶ್ ಬಾಲಾಜಿ, ಮಂಜುನಾಥ್, ರಮೇಶ್, ಶರತ್, ಬಾಬು, ನಾಗೇಶ್, ರಮೇಶ್ ಎಂ, ಆರ್. ಮಂಜುನಾಥ್, ವೆಂಕಟೇಶ್, ಶ್ರೀರಂಗ, ಡಾ.ಶ್ರೀನಿವಾಸ್, ಧನಂಜಯ ಶೆಟ್ಟರು, ಮಾದೇವಯ್ಯ, ರಂಗ, ಶಾಮಣ್ಣ, ವೆಂಕಟೇಶ್ ಪಂಚಾಕ್ಷರಯ್ಯ, ದಿನೇಶ್, ನಾಗಭೂಷಣ್ ಮೊದಲಾದ ಗ್ರಾಮಸ್ಥರು ಘಟನೆಯನ್ನು ಖಂಡಿಸಿ, ಕಿಡಿಗೇಡಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಹಿರಿಯೂರು ತಾಲ್ಲೂಕು ಮಹಿಳಾ ಕಾಂಗ್ರೆಸ್ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಯನ್ನುದ್ದೇಶಿಸಿ ಮಾತನಾಡಿದ ಡಿ.ಸುಧಾಕರ್, ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಸ್ಥಾನವನ್ನು ನೀಡುವ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ. ಮಾಜಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಮೊಟ್ಟಮ್ಮ ನವರು ಸ್ತ್ರೀ ಶಕ್ತಿ ಸಂಘಗಳಿಗೆ ಅನುದಾನವನ್ನು ಕೊಟ್ಟು ಮಹಿಳೆಯರ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾದರು. ನನ್ನ ಆಡಳಿತ ಅವಧಿಯಲ್ಲಿ ಸ್ತ್ರೀ ಶಕ್ತಿ ಭವನಗಳನ್ನು ಹಾಗೂ ಸ್ವ ಸಹಾಯ ಸಂಘಗಳಿಗೆ ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ಸಹಾಯ ಧನವನ್ನ ನೀಡಿದ್ದೆ ಎಂದು ಅವರು ತಿಳಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ನಂದಿನಿ ಗೌಡ ಮಾತನಾಡಿ, ಹೆಣ್ಣು ಮಕ್ಕಳು ರಾಜಕೀಯದಲ್ಲಿ ಗುರುತಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ತಿಳಿಸಿದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ಮಾತನಾಡಿ, ಹೆಣ್ಣು ಸಮಾಜದ ಕಣ್ಣು. ನಿಮ್ಮ ಕೆಲಸದ ನಡುವೆಯೂ ರಾಜಕೀಯವಾಗಿ ಮುಂದೆ ಬರಬೇಕು,. ಮುಂದೆ ಶೈಕ್ಷಣಿಕವಾಗಿ ನಡೆಯುವಂತಹ ಜಿಲ್ಲಾ…
ಕೊರಟಗೆರೆ: ಮಹಾ ಶಿವರಾತ್ರಿ ಪ್ರಯುಕ್ತ ಡಾ.ಜಿ.ಪರಮೇಶ್ವರ ಕಪ್ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗಳನ್ನು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ಬಿ.ಎಸ್.ದಿನೇಶ್ ತಿಳಿಸಿದರು. ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಕ್ರೀಡೆ ಉಳಿಸಲು ಮತ್ತು ಯುವ ಪ್ರತಿಭೆಗಳನ್ನು ಉತ್ತೇಜಿಸಲು ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕ್ಷೇತ್ರದ ಎಲ್ಲಾ 36 ಗ್ರಾಮ ಪಂಚಾಯಿತಿ ಮಟ್ಟದ ಯುವಕರಿಗೆ ಈ ಕ್ರೀಡೆ ನಡೆಯುತ್ತಿದ್ದು, ಯುವ ಮತ್ತು ವಿದ್ಯಾರ್ಥಿ ಕಾಂಗ್ರೆಸ್ ಘಟಕವು ಈ ಪಂದ್ಯಾವಳಿಗಳನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರರವರ ಮಾರ್ಗದರ್ಶನದಲ್ಲಿ ಹಾಗೂ ಪ್ರೋತ್ಸಾಹದಲ್ಲಿ ನಡೆಸಲಿದ್ದು ಸಾರ್ವಜನಿಕರು ಆಗಮಿಸುವಂತೆ ಕೋರಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್.ವಿನಯ್ಕುಮಾರ್ ಮಾತನಾಡಿ, ಈ ಪಂದ್ಯವಳಿಗಳು ಹಿಂದೆ ಮಳೆಯ ಕಾರಣ ರದ್ದಾಗಿತ್ತು, ಮಾರ್ಚ್ 1 ಶಿವರಾತ್ರಿಯೊಂದು ಈ ಪಂದ್ಯಾವಳಿಗಳು ಆರಂಭವಾಗಿ ಮೂರು ದಿನಗಳ ಕಾಲ ನಡೆಯಲಿದೆ. ಇದರಲ್ಲಿ 17 ತಂಡಗಳು ಭಾಗವಹಿಸಲಿವೆ. ಈಗಾಗಲೇ ಕ್ಷೇತ್ರದ 165 ತಂಡಗಳು ಆಯಾ ಹೋಬಳಿಗಳಲ್ಲಿ ಲೀಗ್ ಪಂದ್ಯಗಳನ್ನು…