Author: admin

ಮಧುಗಿರಿ: ತಾಲ್ಲೂಕಿನ ಐ.ಡಿ.ಹಳ್ಳಿ ಗ್ರಾಮದಲ್ಲಿ  ರಾತ್ರೋರಾತ್ರಿ ರೈತನ ಮೇಲೆ ಕರಡಿ ದಾಳಿ ಮಾಡಿದ ಘಟನೆ ಶನಿವಾರ ರಾತ್ರಿ 9 ಗಂಟೆ ಸಮಯದಲ್ಲಿ ನಡೆದಿದೆ. ಮಲ್ಲೇರಂಗಪ್ಪ(57) ಕರಡಿಯ ದಾಳಿಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಇವರು  ಕಡು ಬಡತನ ಹೊಂದಿದ ಕುಟುಂಬದ ರೈತರಾಗಿದ್ದು, ವ್ಯವಸಾಯದಿಂದ ಜೀವನ ನಡೆಸುತ್ತಿದ್ದಾರೆ. ಕರಡಿಯ ದಾಳಿಯಿಂದಾಗಿ ಇವರ ತಲೆಯ ಮೇಲ್ಭಾಗ ಹಾಗೂ ಕೈ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುವನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು  ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ಸುತ್ತಮುತ್ತ ಹಳ್ಳಿಗಳಲ್ಲಿ ಈ ಹಿಂದೆ ಕುರಿಗಳ ಮೇಲೆ ದಾಳಿ ಮಾಡಿದ್ದು, ಹಾಗೆ ರಸ್ತೆಯಲ್ಲಿ ಹೋಗುವಾಗ ವಾಹನ ಸವಾರರಿಗೂ ಸಹ ಕಾಣಿಸಿಕೊಂಡಿದೆ  ಈ ಭಾಗದ ಜನರಲ್ಲಿ ಆತಂಕ ಹೆಚ್ಚಾಗಿದ್ದು ಅರಣ್ಯಾಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು  ಸಾಮಾಜಿಕ ಕಾರ್ಯಕರ್ತ ಜಲಾಲ್ ಭಾಷಾ ಐಡಿಹಳ್ಳಿ ಮನವಿ ಮಾಡಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು:  ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಾ ತ್ಮಕ ಕಾನೂನುಗಳನ್ನು ಭಾರತ ದೇಶದ ಪ್ರತಿಯೊಬ್ಬರೂ ಗೌರವಿಸಬೇಕು. ಕಾನೂನಿಗೆ ಗೌರವ ಕೊಡದವರು ದೇಶ ಬಿಟ್ಟು ಹೊರಗಡೆ ಹೋಗ ಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಅಭಿಪ್ರಾಯ ಪಟ್ಟರು. ನಗರದಲ್ಲಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಅವರು, ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಡಿ ದೇಶಕ್ಕೆ ಅನ್ವಯ ವಾಗುವಂತೆ ಏಕರೂಪ ನಾಗರಿಕ ಕಾನೂನನ್ನು ಜಾರಿಗೆ ತರಲು ಮುಂದಾಗಿದ್ದು, ಇದಕ್ಕೆ ಹಿಂದೂಗಳು, ಮುಸ ಲ್ಮಾನರು, ಕ್ರೈಸ್ತರು  ಸೇರಿದಂತೆ ಎಲ್ಲ ಸಮುದಾಯದವರು ಸಹಕಾರ ನೀಡಬೇಕು ಎಂದು ವಿನಂತಿಸಿಕೊoಡರು. ಶಿವಮೊಗ್ಗದಲ್ಲಿ ಭಜ ರಂಗದಳದ ಕಾರ್ಯಕರ್ತ ಹರ್ಷ ಅವರ ಕೊಲೆಯಾಗಿದ್ದು, ಅಲ್ಲಿನ ಸ್ಥಿತಿಗತಿಯ ವೀಕ್ಷಣೆಗೆ ನಮ್ಮ ನಾಲ್ಕೈದು  ಜನ ಸ್ನೇಹಿತರು ಭೇಟಿ ನೀಡಿ, ಪರಿಶೀಲಿಸಿ, ಮೃತನ ಕುಟುಂ ಬಕ್ಕೆ ನೆರವಿನ ಮಹಾಪೂರ ಹರಿದು ಬರುತ್ತಿದ್ದು, ಇದು ಶ್ಲಾಘನೀಯ ಎಂದರು. ನಮ್ಮ ಒಂದು ತಿಂಗಳ ಗೌರವಧನವನ್ನು ಮೃತನ ಕುಟುಂಬದ ಖಾತೆಗೆ ಜಮಾ ಮಾಡುತ್ತಿದ್ದು ನಮ್ಮ ಸ್ನೇಹಿ…

Read More

ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಮದಲೂರು ಕೆರೆಯಲ್ಲೊಂದು ಹೃದಯವಿದ್ರಾವಕ ಘಟನೆ  ನಡೆದಿದ್ದು,  ಜಾನುವಾರು ತೊಳೆಯಲು ಕೆರೆಗೆ ಇಳಿದಿದ್ದ ಅಣ್ಣ ತಮ್ಮ ನೀರಲ್ಲಿ ಮುಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಗಂಗಾಧರ(28), ಹನುಮಂತ (23)  ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಣ್ಣ ತಮ್ಮ ಇಬ್ಬರು  ಜಾನುವಾರುಗಳನ್ನು ಸ್ನಾನ ಮಾಡಿಸಲೆಂದು ಮದಲೂರು ಕೆರೆ ಬಳಿಗೆ ಬಂದಿದ್ದಾರೆ. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.   ಜಾನುವಾರಗಳನ್ನು ಸ್ನಾನ ಮಾಡಿಸುತ್ತಿದ್ದ ವೇಳೆ ತಮ್ಮ ಆಯತಪ್ಪಿ ನೀರಿಗೆ ಬಿದ್ದಿದ್ದು, ಈ ವೇಳೆ ತಮ್ಮನನ್ನು ಕಾಪಾಡಲು  ಅಣ್ಣ ನೀರಿಗೆ ಜಿಗಿದ್ದಿದ್ದಾನೆ. ಈ ವೇಳೆ ಸೆಳೆಗೆ ಸಿಲುಕಿ ಇಬ್ಬರೂ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಸಿರಾ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರಗಿಸಿದ್ದಾರೆ. ವರದಿ: ಎ.ಎನ್. ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಮಸ್ಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂದು ಪಲ್ಸ್  ಪೋಲಿಯೊ ಕಾರ್ಯಕ್ರಮ ನಡೆಯಿತು. ಮಸ್ಕಲ್ ಗ್ರಾಮದಲ್ಲಿನ ಮಸ್ಕಲ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುಳ ವೀರೇಶ್  ಹಾಗೂ ಉಪಾಧ್ಯಕ್ಷರಾದ ವೈ ನಾಗರಾಜು ಅವರ ನೇತೃತ್ವದಲ್ಲಿ  ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳ ವೀರೇಶ್ ,  ಉಪಾಧ್ಯಕ್ಷರಾದ ವೈ.ನಾಗರಾಜ್,  ಆಶಾ,  ಕಾರ್ಯಕರ್ತರಾದ ಶಿವಮ್ಮ, ಅಂಗನವಾಡಿ ಕಾರ್ಯಕರ್ತರಾದ ಕರಿಯಮ್ಮ, ನಳಿನ, ಪವಿತ್ರ, ವನಜಾಕ್ಷ, ವಸಂತಮ್ಮ, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವರದಿ:  ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ- ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಶೆಟ್ಟಿಗೊಂಡನಹಳ್ಳಿ: ರಾಜ್ಯದ ವಿವಿಧೆಡೆ ಇಂದು ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ನಡೆಯುತ್ತಿದ್ದು,  ಶೆಟ್ಟಿಗೊಂಡನಹಳ್ಳಿಯಲ್ಲಿ  ಕೂಡ ಲಸಿಕೆಗೆ ಚಾಲನೆ ನೀಡಲಾಯಿತು. ಬೆಳಗಿನ ಜಾವ 7ಕ್ಕೆ ಶೆಟ್ಟಿಗೊಂಡನಹಳ್ಳಿ ಗ್ರಾಮ ಪಂಚಾಯತ್ ನ  ಅಧ್ಯಕ್ಷ  ಶಶಿಧರ್ ಅವರು  ಸರ್ಕಾರಿ ಪ್ರಾಥಮಿಕ  ಆರೋಗ್ಯ ಕೇಂದ್ರದಲ್ಲಿ ಜ್ಯೋತಿ ಬೆಳಗುವುದರ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆಸ್ಪತ್ರೆ ಸಿಬ್ಬಂದಿಗಳು  ಹಾಜರಿದ್ದರು. ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಪುಟ್ಟಸಂದ್ರ ಗ್ರಾಮದಲ್ಲಿ ಶ್ರೀ ಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ರಂಗಸಜ್ಜಿಕೆ ವರ್ಣ ವಸ್ತ್ರಾಲಂಕಾರ ಕೊಡಿಗೇನಹಳ್ಳಿ ನಾಗರಾಜಕೊಡಿಗೇನಹಳ್ಳಿ ನಾಗರಾಜುರವರ ಶ್ರೀಲಕ್ಷ್ಮೀನರಸಿಂಹಸ್ವಾಮಿ ಡ್ರಾಮಾ ಸೀನ್ಸ್ ಮತ್ತು ಶ್ರೀ ವಿಷ್ಣು ಸಾಯಿ ಕಲಾವಿದರ ಸಂಘ ತುಮಕೂರು ಇವರ ಕಲಾ ತಂಡದ ವತಿಯಿಂದ ಪುಟ್ಟ ಸಂಗ್ರಾಮದಲ್ಲಿ ಶ್ರೀ ಕುರುಕ್ಷೇತ್ರ ನಾಟಕವನ್ನು ಪ್ರದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ದಿವಂಗತ ಚನ್ನಿಗಪ್ಪ ರವರ ಹಿರಿಯ ಪುತ್ರ ಅರುಣ್ ಕುಮಾರ್ ,  ಕೊರಟಗೆರೆ ವಿಧಾನಸಭಾ ಕ್ಷೇತ್ರವು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕರಾದ ಡಾ.ಜಿ.ಪರಮೇಶ್ವರ್ ರವರ ಶ್ರಮವಹಿಸಿ ಪ್ರಸ್ತುತ ಸರ್ಕಾರದಿಂದ  ನೂರಾರು ಕೋಟಿ ಅನುದಾನತಂದು ಕ್ಷೇತ್ರವನ್ನು ಸಾಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಡಾ.ಜಿ ಪರಮೇಶ್ವರ್ ಅವರನ್ನು ಗೆಲ್ಲಿಸಿ, ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ. ಹಾಗೆಯೇ ತುಮಕೂರು ಜಿಲ್ಲೆಯ ಹೆಸರಾಂತ ರಾಜಕಾರಣಿಯಾದ ಕೆ.ಎನ್ .ರಾಜಣ್ಣ ರವರನ್ನು ಮಧುಗಿರಿ ಕ್ಷೇತ್ರದಿಂದ…

Read More

ತುಮಕೂರು: ಉಕ್ರೇನ್ ನಲ್ಲಿ ಸಿಲುಕಿರುವ ತುಮಕೂರಿನ ವಿದ್ಯಾರ್ಥಿಗಳ ಪೋಷಕರ ಮನೆಗಳಿಗೆ ಶಾಸಕ ಜ್ಯೋತಿ ಗಣೇಶ್ ಅವರು ಭೇಟಿ ನೀಡಿ ಪೋಷಕರಿಗೆ ಧೈರ್ಯ ತುಂಬಿದರು. ವಿದ್ಯಾರ್ಥಿನಿ ರೂಪಶ್ರೀ ಹಾಗೂ ಸಮಂತ್ ಪೋಷಕರ ಮನೆಗೆ ಭೇಟಿ ನೀಡಿದ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ಧೈರ್ಯವಾಗಿರುವಂತೆ ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸಿದ್ದಾರೆ. ತುಮಕೂರಿನ ಕ್ಯಾತಸಂದ್ರ ಬಳಿ ಬಸವಪಟ್ಟಣದಲ್ಲಿ ರೂಪಶ್ರೀ ಹಾಗೂ ಸಮಂತ್ ಪೋಷಕರ ಮನೆ ಇದೆ. ಇವರ ಮನೆಗೆ ಭೇಟಿ ನೀಡಿದ ಶಾಸಕರು,  ತುಮಕೂರು ನಗರದಿಂದ ತೆರಳಿರುವ ವಿದ್ಯಾರ್ಥಿಗಳ ರಕ್ಷಣೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಧೈರ್ಯ ತುಂಬಿದರು. ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು :ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ತಂದೆ-ತಾಯಿ ಹಾಗೂ ಗುರು-ಹಿರಿಯರನ್ನು ಗೌರವಿಸುವ ಪರಿಪಾಠ ಬೆಳೆಸಿಕೊಳ್ಳಬೇಕೆಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಪದ್ಮಶ್ರೀ ಮಂಜಮ್ಮ ಜೋಗತಿ ಕರೆ ನೀಡಿದರು ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಜಾನಪದ ವಿಚಾರಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ವಿದ್ಯಾರ್ಥಿ ಜೀವನವು ಅತ್ಯಂತ ಅಮೂಲ್ಯವಾದದ್ದು ಉತ್ತಮ ಸಂಸ್ಕಾರಯುತ ಬದುಕನ್ನು ವಿದ್ಯಾರ್ಥಿದೆಸೆಯಲ್ಲಿ ಅಳವಡಿಸಿಕೊಳ್ಳಬೇಕು. ಗುರು ಹಿರಿಯರು ಮತ್ತು ತಂದೆ-ತಾಯಿ ಗಳಲ್ಲಿ ಅತ್ಯಂತ ಶ್ರದ್ಧೆಯನ್ನು ಹೊಂದಿದವರಾಗಿ ವಿದ್ಯಾಭ್ಯಾಸ ಮಾಡಿದಾಗ ಜೀವನದಲ್ಲಿ ಉತ್ತಮ ಸ್ಥಿತಿಯನ್ನು ತಲುಪಲು ಸಹಕಾರಿಯಾಗುತ್ತದೆ ಎಂದರು. ಹರ ಮುನಿದರೆ ಗುರು ಕಾಯುವನು ಆದರೆ ಗುರು ಮುನಿದರೆ ಹರ ಕಾಯುವನೇ? ಎಂಬ ಪ್ರಶ್ನೆಯನ್ನು ದಾಸ ಶ್ರೇಷ್ಠರು ಹಾಗೂ ಯತಿವರೇಣ್ಯರೇ ಕೇಳಿರುವಾಗ ಸಾಮಾನ್ಯ ಜನರಾದ ನಾವು ಗುರುಗಳನ್ನು ಗೌರವಿಸದಿದ್ದರೆ, ಬದುಕಿನಲ್ಲಿ ಉನ್ನತಿ ಕಾಣಲು ಸಾಧ್ಯವಿಲ್ಲ. ಇಂದಿನ ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳ ಮುಂದೆ ಹಲವಾರು ಆಕರ್ಷಣೆಗಳಿದ್ದು ಅವುಗಳು ಅವರ ವ್ಯಕ್ತಿತ್ವವನ್ನು ರಚಿಸಬಹುದು ಅಥವಾ ನಿರ್ಣಾಮ ಮಾಡಬಹುದು, ಬಹಳ ಎಚ್ಛರಿಕೆಯಿಂದ ಆಯ್ಕೆಯನ್ನು ಮಾಡಿಕೊಳ್ಳಬೇಕಾಗುತ್ತದೆ…

Read More

ಬೇಗೂರು: ಡಿಎಸ್ ಎಸ್ ಅಲ್ಪಸಂಖ್ಯಾತರ ಅಧ್ಯಕ್ಷರು ಬೆಂಗಳೂರು ಇವರ ನೇತೃತ್ವದಲ್ಲಿ  ರವಿ ಸಿಂಗ್ ಹಾಗೂ ನಿಧಿ ಆಹುಜ, ಜಗನ್, ವಾಹಿದ್, ಜಗನ್ ಹಾಗೂ ಶಾಲಾ ಸಿಬ್ಬಂದಿಯ ಉಪಸ್ಥಿತಿಯಲ್ಲಿ ಹುಳಿಮಾವಿನ ಸಮರ್ಥನಂ ವಿಕಲಚೇತನ ಮಕ್ಕಳ ಶಾಲೆ’ಯಲ್ಲಿ ಮಕ್ಕಳಿಗೆ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಅಬ್ದುಲ್ ಬೇಗೂರು ಈಗಾಗಲೇ ಅನೇಕ ರೀತಿಯಲ್ಲಿ ಸಾಮಾಜಿಕ ಸೇವೆಗಳಲ್ಲಿ ತೊಡಗಿದ್ದು, ಕೋವಿಡ್ ಸಮಯದಲ್ಲಿ  ಅನೇಕರಿಗೆ ನಾನಾ ವಿಧದಲ್ಲಿ ಸಹಾಯವನ್ನು ಮಾಡಿದ್ದಾರೆ. ಅಬ್ದುಲ್ ಬೇಗೂರು, ರವಿ ಸಿಂಗ್, ನಿಧಿ ಅಹುಜ ಈ ಮೂವರು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ಮಾನವೀಯತೆ ಮೆರೆಯುತ್ತಿದ್ದಾರೆ. ರವಿ ಸಿಂಗ್ ಅವರ ಧರ್ಮಪತ್ನಿ ನಿಧಿ ಆಹುಜ ಅವರು ಕೂಡ ಈ ಸಾಮಾಜಿಕ ಕೆಲಸಗಳಿಗೆ ಕೈ ಜೋಡಿಸಿದ್ದಾರೆ. ಎಲ್ಲರೂ ನಮ್ಮ ಹೊಟ್ಟೆ ತುಂಬಿದರೆ ಸಾಕು ಎಂದು ಸುಮ್ಮನಿರುತ್ತಾರೆ. ಆದರೆ ಈ ಸಾಮಾಜಿಕ ಸೇವೆಯನ್ನು ಮಾಡುತ್ತಿರುವ ಕೈಗಳು ಹಸಿದವರ ಹೊಟ್ಟೆ ತುಂಬಿಸುವ ಕಾರ್ಯವನ್ನು ಮಾಡುತ್ತಿದ್ದು, ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು:  ಫ್ರೀಡಂಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಸೂಕ್ತ ಪೋಲಿಸ್  ಬಂದೋಬಸ್ತ್ ನೀಡುವಂತೆ  ಉಪ್ಪಾರ್ ಪೇಟೆ ಪೊಲೀಸ್ ಠಾಣೆ ಡಿಸಿಪಿ ಅವರಿಗೆ ಹಿರಿಯೂರು ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ ಮನವಿ ಮಾಡಲಾಯಿತು. ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ ಮಾರ್ಚ್ 15ರಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಪ್ರತಿಭಟನೆಗೆ ಸೂಕ್ತ ಭದ್ರತೆ ಒದಗಿಸುವಂತೆ ಉಪ್ಪಾರ್ ಪೇಟೆ ಪೊಲೀಸ್ ಠಾಣೆ ಡಿಸಿಪಿಗೆ ಮನವಿ ಮಾಡಲಾಯಿತು. ಸಮಾಜ ಸೇವಾ ರತ್ನ ಡಾ.ಹೆಚ್.ಎಸ್. ಬಿರಾವರ್ ರವರ ನೇತೃತ್ವದಲ್ಲಿ ಹಿರಿಯೂರು ತಾಲ್ಲೂಕಿನ ಭಾರತೀಯ ದಲಿತ ಸಂಘರ್ಷ ಸಮಿತಿ ಮನವಿ ಸಲ್ಲಿಸಿತು.  ಹಿರಿಯೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಿಪಿಐ ರವಿ ಅವರು ಪ್ರಸ್ತುತ ಉಪ್ಪಾರ್ ಪೇಟೆ ಎಸಿಪಿ ಆಗಿದ್ದು, ಇದೇ ವೇಳೆ ರವಿ ಅವರಿಗೆ  ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಸನ್ಮಾನಿಸಲಾಯಿತು. ವರದಿ: ಮುರುಳಿಧರನ್ ಆರ್.,  (  ಚಿತ್ರದುರ್ಗ-…

Read More