Subscribe to Updates
Get the latest creative news from FooBar about art, design and business.
- ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
- ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
- ಶಾಸಕ ಭೈರತಿ ಬಸವರಾಜ್ ಗೆ ಸುಪ್ರೀಂ ಕೋರ್ಟ್ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
- ಶಾಲೆಯ ಆವರಣದಲ್ಲೇ ಸಂತೆ: ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
- ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
Author: admin
ಗುಡಿಸಿಲಿನ ಮೆಲೆ ಕಲ್ಲಿದಲು ಸಾಗಿಸುತ್ತಿದ್ದ ಟ್ರಕ್ ನಿಯಮತ್ರಣ ತಪ್ಪಿ ಬಿದ್ದ ಕಾರಣ ಮೂವರು ಅಪ್ರಾಪ್ತ ಸೋದರಿಯರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಕಲ್ಲಿದ್ದಲು ಇಳಿಸುತ್ತಿದ್ದಾಗ ಕಂಟೈನರ್ ಟ್ರಕ್ ವಾಲಿ ಸ್ಥಳದಲದಲಿ ಮಲಗಿದ್ದ ಮೂವರು ಸೋದರಿಯರ ಮೇಲೆ ಬಿದ್ದಿದ್ದೆ. ಪರಿಣಾಮ ಮೂವರೂ ಬಾಲಕಿಯರೂ ಸ್ಥಳದಲೆ ಸಾವನ್ನಪ್ಪಿದ್ದಾರೆ. ಬಾಲಕೀಯರ ಪೋಷಕರು ಇಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇಟ್ಟಿಗೆ ಬಟ್ಟಿ ಸುಡಲು ಕಲ್ಲಿದ್ದಲನ್ನ ಇಳಿಸಲಾಗುತ್ತಿತ್ತು. ಮೃತ ಬಾಲಕಿಯರು 3 ರಿಮದ 7 ವರ್ಷದವರಾಗಿದ್ದಾರೆ. ಇಟ್ಟಿಗೆ ಭಟ್ಟಿ ಮಾಲಿಕರಾದ ಗೋಪಿನಾಥ್ ಟ್ರಕ್ ಚಾಲಕ ತೌಫಿಕ್ ಶೇಖ್ ಎಂಬುವವರನ್ನ ಬಂದಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತಿದ್ದ ದಂಪತಿಗಳಿಗೆ ನಾಲ್ವರು ಮಕ್ಕಳಿದ್ದು ಮೂರು ಮಕ್ಕಳು ಗುಡಿಸಿಲಿನಲ್ಲಿ ಮಲಗಿದ್ದರು. 2 ವರ್ಷದ ಮಗುವನ್ನ ಗುಡಿಸಿಲಿನಿಂದ ದೂರದ ಮರಕ್ಕೆ ತೊಟ್ಟಿಲು ಕಟ್ಟಿ ಮಲಗಿಸಿದ್ದರು. ಈ ಮಗು ದೂರ ಇದ್ದ ಕಾರಣ ಬದುಕುಳಿದಿದೆ.. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ…
ಬೆಂಗಳೂರು: ಕುಡಿದ ಮತ್ತಿನಲ್ಲಿ ಧಾರವಾಡದ ಮಾಜಿ ಸಂಸದನ ಪುತ್ರನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಧಾರವಾಡ ಮಾಜಿ ಎಂಪಿ ಮಂಜುನಾಥ್ ಪುತ್ರ ಚಂದ್ರಶೇಖರ್ ಕುನ್ನೂರ್ ಮೇಲೆ ಹಲ್ಲೆ ನಡೆಸಲಾಗಿದೆ. ಊಟಕ್ಕೆ ಕರೆದು ಬೆಂಗಳೂರಿನ ಸೂಜಿ ಕ್ಯೂ ಕ್ಲಬ್ ನಲ್ಲಿ ಹಲ್ಲೆ ಮಾಡಲಾಗಿದೆ ಎಂದು ಚಂದ್ರಶೇಖರ್, ಚೇತನ್ ಹೆಗಡೆ ,ಪ್ರಶಾಂತ್ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ. ಜನವರಿ 23 ರಂದು ಚಂದ್ರಶೇಖರ್ ಅವರನ್ನು ಚೇತನ್ ಹೆಗಡೆ, ಪ್ರಶಾಂತ್ ರೆಡ್ಡಿ, ಶಿವಾಜಿನಗರದ ಸೂಜಿ ಕ್ಯೂ ಕ್ಲಬ್ಗೆ ಊಟಕ್ಕೆ ಆಹ್ವಾನಿಸಿದ್ದರಂತೆ. ಅಲ್ಲಿಗೆ ಹೋದ ನಂತರ ಊಟಕ್ಕೆ ಆರ್ಡರ್ ಮಾಡುವ ವೇಳೆ ಚಂದ್ರಶೇಖರ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರಂತೆ. ಬಳಿಕ ಚಂದ್ರಶೇಖರ್ ಗೆ ಕಾಪಾಳಕ್ಕೆ ಹೊಡೆದು ನಾನು ಊಟ ಹಾಕಿದ್ದೀನಿ ತಿನ್ನೋ ಎಂದು ಧಮ್ಕಿ ಹಾಕಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖವಾಗಿದೆ. ಅಲ್ಲಿಂದ ತಪ್ಪಿಸಿಕೊಳ್ಳಲು ಚಂದ್ರಶೇಖರ್ ಹೊಯ್ಸಳಕ್ಕೆ ಕರೆ ಮಾಡಿದ್ದು, ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ…
ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ… 3ನೇ ಅಲೆ ಆತಂಕದ ನಡುವೆ ಜನರು ಹೆಚ್ಚು ಹೈಜಿನಿಕ್ ಆಗಿ ಇರುತ್ತಾ , ಆರೋಗ್ಯಕರ , ಮುಖ್ಯವಾಗಿ ರೋಗ ನಿರೋಧಕ ಪದಾರ್ಥಗಳ ಸೇವನೆಯೇ ಉತ್ತಮ ದು ಉತ್ತಮ ಜೀವನ ಶೈಲಿಗೆ ಹೊಂದುಕೊಳ್ಳುವ ಪ್ರಯತ್ನದಲ್ಲಿದ್ದಾರೆ.. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುವ ಮತ್ತು ದೇಹವನ್ನು ಸೋಂಕಿನಿಂದ ರಕ್ಷಿಸುವ ಆರೋಗ್ಯಕರ ಆಹಾರವನ್ನು ಸೇವಿಸುವುದು ಬಹಳ ಮುಖ್ಯವಾಗಿದೆ. ಪೋಷಕಾಂಶಗಳಿಂದ ಕೂಡಿದ ಆಹಾರವನ್ನು ಸೇವಿಸುವ ಮೂಲಕ ನಾವು ಆರೋಗ್ಯಕರವಾಗಿ ಇರಬಹುದು. ಮಶ್ರೂಮ್ಸ್ (ಅಣಬೆ): ನಮ್ಮಲ್ಲಿ ಹೆಚ್ಚಿನವರು ಅಣಬೆಗಳ ಪ್ರಯೋಜನಗಳನ್ನು ತಿಳಿಯದೆ ಇದ್ದರೂ ಅದನ್ನು ಸೇವಿಸುವುದನ್ನು ಇಷ್ಟಪಡುತ್ತಾರೆ. ಸೂರ್ಯನ ಕಿರಣಗಳಲ್ಲಿ ಇರುವಂತೆ ಮಶ್ರೂಮ್ ಸಹ ವಿಟಮಿನ್ ಡಿ ಯ ಉತ್ತಮ ಮೂಲವಾಗಿದೆ ಮತ್ತು ಆದ್ದರಿಂದ ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ಮೂಳೆಗೆ ಆರೋಗ್ಯಕರವಾಗಿರುತ್ತದೆ ಮತ್ತು ಕೆಲವು ಕ್ಯಾನ್ಸರ್ ಮತ್ತು ಉಸಿರಾಟ ಸಂಬಂಧಿತ ಕಾಯಿಲೆಗಳ ವಿರುದ್ಧವೂ ಗುರಾಣಿಯಾಗಿ ಕಾರ್ಯನಿರ್ವಹಿಸುತ್ತದೆ. ಮೊಸರು: ಪ್ರೋಬಯಾಟಿಕ್ಗಳು ಉತ್ತಮವಾಗಿರುವುದರಿಂದ ಮೊಸರು ಆರೋಗ್ಯಕರ ಮತ್ತು ರೋಗ ನಿರೋಧಕ ಶಕ್ತಿಯನ್ನು…
ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಹೋಬಳಿ ಕೇಂದ್ರದಲ್ಲಿರುವ ಶ್ರೀವಿನಾಯಕ ಗ್ರಾಮಾಂತರ ಪ್ರೌಢಶಾಲೆಯು 1963ರಲ್ಲಿ ಪ್ರಾರಂಭವಾಗಿದ್ದು, 1983ರಲ್ಲಿ ಈ ಶಾಲೆಗೆ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧ್ಯಕ್ಷರ 9ಜನ ಆಯ್ಕೆಯಾಗಿದ್ದರು. ಅಂದಿನಿಂದ ಇಂದಿನವರೆಗೂ ಅದೇ ಕಮಿಟಿ ಮುಂದುವರಿದಿದ್ದು, ಕಮಿಟಿ ಸದಸ್ಯರೆಲ್ಲರೂ ತೀರಿಹೋಗಿದ್ದು ಕೇವಲ ಅಧ್ಯಕ್ಷರು ಮಾತ್ರ ಇದ್ದು, ಹೊಸದಾಗಿ ಸಮಿತಿ ರಚಿಸಲು ಗ್ರಾಮಸ್ಥರ ಒಪ್ಪಿಗೆ ಇಲ್ಲದೆ ತಮಗೆ ಬೇಕಾದವರನ್ನು ಹಿರಿಯ ಶಿಕ್ಷಕ ಮಹೇಶ್ ರವರು ನೇಮಿಸಿಕೊಂಡಿರುವುದರ ವಿರುದ್ಧ ಗ್ರಾಮಸ್ಥರು ಪ್ರತಿಭಟಿಸಿದರು. ಗ್ರಾಮಸ್ಥರು ಸುಮಾರು ಬಾರಿ ಶಾಲೆಯಲ್ಲಿ ಸದಸ್ಯ ಮಂಡಳಿ ಇಲ್ಲದಿರುವ ಬಗ್ಗೆ ಪ್ರಶ್ನಿಸಿದರೆ ಹಾರಿಕೆ ಉತ್ತರ ನೀಡಿ ಕಳಿಸುತ್ತಿದ್ದ ಮಹೇಶ್ ಅವರು, ಜಿಲ್ಲಾ ನೋಂದಣಾಧಿಕಾರಿಗಳಿಗೆ ತಿಳಿಸದಂತೆ ಗ್ರಾಮಸ್ಥರ ಸಭೆಯನ್ನು ಕರೆಯದೆ ಸರ್ವಾಧಿಕಾರಿಯಂತೆ ಏಕಾಏಕಿ ತಮಗೆ ಬೇಕಾದ ಸದಸ್ಯರುಗಳನ್ನು ಆಯ್ಕೆ ಮಾಡಿಕೊಂಡು ಶಾಲೆಯ ಅಭಿವೃದ್ಧಿಯಲ್ಲಿ ಹಿಂದೆ ಬೀಳುವಂತೆಮಾಡಿದ್ದು, ಇವರ ವಿರುದ್ಧ ಗ್ರಾಮಸ್ಥರು ಒಗ್ಗೂಡಿ ಪ್ರತಿಭಟಿಸಿದ ನಂತರ ಗ್ರಾಮಸ್ಥರ ಒಪ್ಪಿಗೆಯಂತೆ ಮುಂದಿನ ಮಂಡಳಿಯನ್ನು ರಚಿಸುವುದಾಗಿ ಭರವಸೆ ನೀಡಿದ್ದಾರೆಂದು ಎಂದು ಗ್ರಾಮಸ್ಥ ಜಗದೀಶ್ ಬಾಬು ತಿಳಿಸಿದರು. ಈ ಸಂಬಂಧ…
ಬೆಂಗಳೂರು: ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕೆಲಸದ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಬಾರಿ ಮಳೆ ಬಂದಾಗಲೂ ರಸ್ತೆಗಳಲ್ಲಿ ಗುಂಡಿಗಳು ಪ್ರತ್ಯಕ್ಷವಾಗುತ್ತವೆ. ಈ ಗುಂಡಿಗಳಿಂದ ಸಾರ್ವಜನಿಕರಿಗೆ ಮಳೆಗಾಲದಲ್ಲಿ ಸಾಕಷ್ಟು ತೊಂದರೆ ಯಾಗುತ್ತಿತ್ತು, ಇಂತಹ ಗುಂಡಿಗಳನ್ನು ಬಿಬಿಎಂಪಿ ಮುಚ್ಚಿದರು ಮತ್ತೆ ಮಳೆಗಾಲದಲ್ಲಿ ಪ್ರತ್ಯಕ್ಷವಾಗುತ್ತಿದ್ದವು. ಈ ಕುರಿತು ಹೈಕೋರ್ಟ್ ದುರಸ್ತಿಪಡಿಸಿದ ರಸ್ತೆಗಳು ದೀರ್ಘಾವಧಿ ಬಾಳಿಕೆ ಏಕೆ ಬರುವುದಿಲ್ಲ ಪ್ರಶ್ನಿಸಿದೆ. ಗುಂಡಿಗಳನ್ನು ಮುಚ್ಚಲು ಯಾವ ತಂತ್ರಜ್ಞಾನ, ಯಾವ ಕಾರ್ಯವಿಧಾನ ಅನುಸರಿಸಲಾಗುತ್ತದೆ..? ಇದಕ್ಕೆಲ್ಲ ಪಾಲಿಕೆ ಮುಖ್ಯ ಇಂಜಿನಿಯರ್ ಹೊಣೆಯಾಗುತ್ತಾರೆ. ಅವರನ್ನು ಕಂಬಿ ಹಿಂದೆ ಕಳುಹಿಸಿದರೆ ಸರಿ ಹೋಗುತ್ತದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರ್.ಆರ್. ಅವಸ್ಥಿ ಎಚ್ಚರಿಕೆ ನೀಡಿದ್ದಾರೆ. ಇನ್ನೂ ಬೆಸ್ಕಾಂ ಮತ್ತು ಜಲಮಂಡಳಿ ಸೇರಿ ಕಾಮಗಾರಿ ನೆಪದಲ್ಲಿ ರಸ್ತೆ ಅಗೆದು, ನಿಗದಿತ ವೇಳೆಗೆ ಕಾಮಗಾರಿ ಮುಗಿಸುವುದಿಲ್ಲ. ಈ ನಿಗದಿತ ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಮುಗಿಸದ ಪ್ರಾದಿಕಾರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು. ಮುಂದಿನ ವಿಚಾರಣೆಗೆ…
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,51,209 ಲಕ್ಷ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಟ್ವೀಟ್ ಮಾಡಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,06,22,709 ಕ್ಕೆ ತಲುಪಿದೆ. ನಿನ್ನೆಗಿಂತ ಶೇ 12 ಪ್ರತಿಶತದಷ್ಟು ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 627 ಜನ ಸಾವನ್ನಪಿದ್ದಾರೆ. ಸೋಂಕಿತರ ಪ್ರಮಾಣವು 15.88ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದೆ. ದೇಶದಲ್ಲಿ ಪ್ರಸ್ತುತ 21, 05,611 ಲಕ್ಷ ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳು ಶೇ 5.18 ರಷ್ಟಿದೆ. ಕಳೆದ 24 ಗಂಟೆಯಲ್ಲಿ 3,47,443 ಜನ ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣವು ಶೇ 93.6 ರಷ್ಟಿದೆ. ಸಾಪ್ತಾಹಿಕ ಧನಾತ್ಮಕ ದರವು 17.47 ಪ್ರತಿಷದಷ್ಟಿದೆ. ದೇಶದಲ್ಲಿ 164.44 ಕೊರೊನಾ ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಮಧುಗಿರಿ: ಅಂಬೇಡ್ಕರ್ ಭವನದಲ್ಲಿ ಮಾದಿಗ ದಂಡೋರ ಸಂಘಟನೆ ವತಿಯಿಂದ ಸಂವಿಧಾನ ಜಾರಿ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಮಾದಿಗ ದಂಡೋರ ಸಂಘಟನೆಯ ರಾಜ್ಯ ವಕ್ತಾರರಾದ ರಾಘವೇಂದ್ರ ಸ್ವಾಮಿ ಉದ್ಗಾಟಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾದ್ಯಕ್ಷರಾದ ಡಿ.ಸಿ. ರಾಜಣ್ಣವಹಿಸಿದ್ದರು. ಸಿದ್ದಾಪುರ ರಂಗಶ್ಯಾಮಣ್ಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮ ದಲ್ಲಿ ದಂಡೋರದ ದೊಡ್ಡೇರಿ ಮಹಾಲಿಂಗಯ್ಯ, ಜೀವಿಕ ಮಂಜುನಾಥ್, ದಿಲೀಪ್ ಯುಕ್ತ ಪೌಂಡೇಶನ್, ಜೀವಿಕ, ಚಿಕ್ಕಮ್ಮ ದೊಡ್ಡೇರಿ ,ಕಣಿಮಯ್ಯ , ತಿಪ್ಪೇಸ್ವಾಮಿ ಬೇಡತೂರು, ಸಣ್ಣರಾಮಣ್ಣ, ಮಾದಿಗ ದಂಡೋರ ಹೋಬಳಿ ಅಧ್ಯಕ್ಷರುಗಳಾದ ದೇವರಾಜು, ಕಿರಣ್, ರಾಮಾಂಜಿನಪ್ಪ, ಪಾಂಡುರಂಗಯ್ಯ, ಕಸಾಪುರ ರಮೇಶ್, ನೀರಕಲ್ಲು ನಾಗೇಶ್ ಬಾಬು, ಅಂಜನ್, ಐಡಿಹಳ್ಳಿ ರವಿ, ಯುವರಾಜು ಇನ್ನೂ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಕಟ್ಟಡದ ನವೀಕರಣ ಕಾರ್ಯಕ್ಕೆ ಮುಂದಾದ ಆಸರೆ ಫೌಂಡೇಶನ್ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ತುಂಬಾ ಹಳೆಯದಾದ ಶಾಲಾ ಕಟ್ಟಡ ಸುಣ್ಣ ಬಣ್ಣ ಇಲ್ಲದೆ ಹಾಗೂ ಒಡೆದು ಹೋಗಿದ್ದ ಗಾಜುಗಳಿಂದ ಕಳೆಗುಂದಿತ್ತು. ಇದನ್ನು ಕಂಡ ಆಸರೆ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ತಮ್ಮ ದುಡಿಮೆಯ ಸ್ವಂತ ಹಣವನ್ನು ಕೈಲಾದಷ್ಟು ವ್ಯಯಿಸಿ ಸುಣ್ಣ ಬಣ್ಣ ಬಳಿಸಿ ಹಾಗೂ ಗಾಜುಗಳನ್ನು ಪುನರ್ ಸ್ಥಾಪಿಸಿ ಶಾಲೆಯನ್ನು ಕಂಗೊಳಿಸುವಂತೆ ಮಾಡಿದ್ದಾರೆ. ಈ ಕಾರ್ಯ ನಾಗರೀಕರ ಶ್ಲಾಘನೆಗೆ ಕಾರಣವಾಗಿದೆ. ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್, ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿಕೊಂಡು ಶಾಲೆಯ ಅಭಿವೃದ್ಧಿಗೆ ಮನಸ್ಸು ಮಾಡಿರುವುದು ಸಂತಸದ ವಿಚಾರ. ಪ್ರತಿಯೊಬ್ಬರು ತಾನು ಓದಿದ ಶಾಲೆಗೆ ಅಳಿಲು ಸೇವೆ ಮಾಡಬೇಕೆಂಬ ಮನಸ್ಸು ಮಾಡಿದರೆ ಎಲ್ಲ ಶಾಲೆಗಳು ಸುಸಜ್ಜಿತಗೊಂಡು ಮುಂದಿನ ಯುವ ಪೀಳಿಗೆಗೆ ವಿದ್ಯಾಭ್ಯಾಸ ಮಾಡಲು ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದು ಹೇಳಿದರು. ಆಸರೆ…
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆ (ರಿ)ವತಿಯಿಂದ ಕೇಂದ್ರ ಸರಕಾರದ ಸಾಮಾನ್ಯ ಸೇವಾ ಕೇಂದ್ರ(ಸಿ.ಎಸ್.ಸಿ) ಸೆಂಟರ್ ರನ್ನು ಸಿದ್ಧರಬೆಟ್ಟದ ಶ್ರೀ ಶ್ರೀ ವೀರಭದ್ರ ಶಿವಚಾರ್ಯ ಮಹಾ ಸ್ವಾಮೀಜಿರವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೂಜ್ಯ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ, ಸುಮಾರು 40 ವರ್ಷಗಳ ಹಿಂದೆ ಧರ್ಮಸ್ಥಳದ ಧರ್ಮಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆರವರು ರೈತಸಂಕುಲಕ್ಕೆ ಮಹಿಳೆವರ್ಗಕ್ಕೆ ಮತ್ತು ಅಂಗವಿಕಲರ ಏಳಿಗೆಗಾಗಿ ಹಾಗೂ ಜನರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಚನೆಯನ್ನು ಸ್ಥಾಪಿಸಿ ನೂರಾರು ಜನೋಪಾಕಾರಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದು, ಈಗ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಯಿಂದ ಆಯುಷ್ಮಾನ್ ಕಾರ್ಡ್ ನೋಂದಣಿ ಮಾಡುವುದರ ಜೊತೆಗೆ ಸುಮಾರು 700 ಸೇವೆಗಳನ್ನು ಈ ಸಿ ಎಸ್ ಸಿ ಕೇಂದ್ರದಲ್ಲಿ ಸದುಪಯೋಗವನ್ನು ಪಡೆದುಕೊಳ್ಳಲು ನೂತನವಾಗಿ ರಾಜ್ಯಾದ್ಯಂತ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಾಪಿಸುತ್ತಿದ್ದಾರೆ ಎಂದು ತಿಳಿಸಿದರು.…
ಸರಗೂರು: ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ, ದೇಶದಿಂದ ಗಡೀಪಾರು ಮಾಡುವಂತೆ ಸಂವಿಧಾನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ ತಾಲ್ಲೂಕು ಕಚೇರಿಯಲ್ಲಿ ಮುಂಭಾಗದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ಮಲ್ಲಿಕಾರ್ಜುನ ಗೌಡ ಅವರಿಗೆ ಧಿಕ್ಕಾರ ಕೂಗಿ ಪ್ರತಿಭಟಿಸಿದ ಪ್ರತಿಭಟನಾಕಾರರು, ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಲಕ್ಷಣ್ ಲಂಕೆ, ನಮ್ಮ ದೇಶಕ್ಕೆ ಸಂವಿಧಾನವನ್ನು ರಚಿಸಿ, ಜನವರಿ 26, 1950 ರಂದು ನಾವು ನಮಗಾಗಿ ಅರ್ಪಣೆ ಮಾಡಿಕೊಂಡು ದಿನದ ಅಂಗವಾಗಿ ನೆನಪಿಗಾಗಿ ಮತ್ತು ಗೌರವಕ್ಕಾಗಿ ಪ್ರತಿ ವರ್ಷ ಜನವರಿ 26 ರಂದು ಸಂವಿಧಾನ ದಿನಾಚರಣೆ ಅಚರಿಸಿಕೊಂಡು ಬರುತ್ತಿದ್ದೇವೆ. ಇಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಿ ಇಡೀ ದೇಶ ಸಂವಿಧಾನ ದಿನಾಚರಣೆವನ್ನು ಆಚರಿಸಿದೆ ಆದರೆ ನ್ಯಾಯಾಧೀಶರು ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಅವರಿಗೆ ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಿಣ ಮಹೇಶ್ ಮಾತನಾಡಿ ರಾಯಚೂರು ಜಿಲ್ಲಾ ನ್ಯಾಯದೀಶರಾಧ ಮಲ್ಲಿಕಾರ್ಜುನ ಗೌಡ ಅವರು, ಸಂವಿಧಾನಾತ್ಸೋವ ಆಚರಣೆ…