Author: admin

ರಾಯಣ್ಣನ ಭಾವಚಿತ್ರ ಹಾಕಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದರು. ನಗರದ ಮೆಜೆಸ್ಟಿಕ್‍ನಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ರಾಯಣ್ಣನ ಶೌರ್ಯ, ದೇಶಭಕ್ತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಅವರ ಭಾವಚಿತ್ರವನ್ನು ಅಳವಡಿಸಲಾಗುವುದು . ಇಂದೇ ಇದಕ್ಕೆ ಅದೇಶ ಹೊರಡಿಸುವುದಾಗಿ ಹೇಳಿದರು. ಇಷ್ಟು ವರ್ಷಗಳಿಂದ ಸಂಗೊಳ್ಳಿ ರಾಯಣ್ಣನ ಸ್ಮರಣೋತ್ತರ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಲಾಗುತ್ತಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ರಾಯಣ್ಣ ಅವರ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿದ ವೀರರಾಣಿ ಕಿತ್ತೂರು ಚನ್ಮಮ್ಮ ಹಾಗೂ ರಾಯಣ್ಣನವರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುವುದು ಎಂದರು. ಈ ಎರಡು ಪ್ರತಿಮೆಗಳನ್ನು ಮಾಡುವವರ ಜೊತೆ ಒಂದು ಸುತ್ತಿನ ಮಾತುಕತೆಯನ್ನು ನಡೆಸಲಾಗಿದೆ. ಸುವರ್ಣ ಸೌಧದ ಮುಂಭಾಗ ಕಿತ್ತೂರು ರಾಣಿ ಚನ್ನಮ್ಮ, ಬಲಗೈ ಭಂಟ ರಾಯಣ್ಣನ ಪ್ರತಿಮೆಯನ್ನು ಅನಾವರಣ ಮಾಡಿದರೆ ಹೆಚ್ಚು ಅರ್ಥ…

Read More

ತಿಪಟೂರು: ಜಿಲ್ಲೆಯಲ್ಲಿ ಜಾತ್ಯತೀತವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ನಿಷ್ಠಾವಂತ, ಸಮರ್ಥ ನಾಯಕ ಸಚಿವ ಜೆ.ಸಿ.ಮಾಧುಸ್ವಾಮಿರನ್ನು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ತೆಗೆದು ಹಾಕಿದ್ದು ಜಿಲ್ಲೆಯ ಜನತೆಗೆ ನೋವು ತಂದಿದೆ ಎಂದು ಜೆ.ಸಿ.ಮಾಧುಸ್ವಾಮಿ ಅಭಿಮಾನಿ ಲಕ್ಮಗೊಂಡನಹಳ್ಳಿ ರವೀಂದ್ರ ಕುಮಾರ್ ಬೇಸರ ಹೊರಹಾಕಿದ್ದಾರೆ. ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ಪ್ರವಾಸಿ ಮಂದಿರದಲ್ಲಿ ಬುಧವಾರ ಜೆ.ಸಿ.ಮಾಧುಸ್ವಾಮಿ ಅಭಿಮಾನಿಗಳು ಸುದ್ದಿಗೋಷ್ಠಿ ನಡೆಸಿದರು. ಸಚಿವ ಜೆ.ಸಿ.ಮಾಧುಸ್ವಾಮಿ ತುಮಕೂರು ಜಿಲ್ಲೆಯ ಆಳ, ಅಗಲ, ವಿಚಾರವನ್ನು ತಿಳಿದುಕೊಂಡಿದ್ದು ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ ರಾಜ್ಯಸರ್ಕಾರದ ಮುಖ್ಯಮಂತ್ರಿಗಳು ದಿಢೀರ್ ತುಮಕೂರು ಜಿಲ್ಲಾ ಉಸ್ತುವಾರಿಯಿಂದ ತೆಗೆದು ಜಿಲ್ಲೆಯಿಂದ ಹೊರಗಿನವರಿಗೆ ನೀಡಿರುವುದು ನಿಜಕ್ಕೂ ನೋವು ತಂದಿದೆ. ಜಿಲ್ಲಾ ಉಸ್ತುವಾರಿ ಸ್ಥಾನದಿಂದ ತೆಗೆಯಲು ಸೂಕ್ತ ಕಾರಣ ನೀಡದೇ ತೆಗೆದು ಹಾಕಿರುವುದು ಅಭಿವೃದ್ಧಿಗೆ ಕುಂಠಿತಕ್ಕೆ ಕಾರಣವಾಗುತ್ತದೆ. ಜಿಲ್ಲೆಯ ವಿರೋಧ ಪಕ್ಷದಿಂದ ಹಿಡಿದು ಅನೇಕ ಮುಖಂಡರು, ನಾಯಕರುಗಳು ಬದಲಾವಣೆಯನ್ನು ವಿರೋಧಿಸಿದ್ದಾರೆ. ಸಣ್ಣ ನೀರಾವರಿ ಖಾತೆಯನ್ನು ತೆಗೆದುಕೊಂಡು ರಾಜ್ಯದ ರೈತರಿಗೆ, ಜಿಲ್ಲೆಯ, ತಾಲ್ಲೂಕಿನ ರೈತರಿಗೆ ಅಗತ್ಯವಿರುವ ಸೌಕರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಅಲ್ಲದೇ…

Read More

ಪುಣೆ : ಕುಡಿತದ ಚಟಕ್ಕೆ ಬಿದ್ದಿದ್ದ ಗಂಡನ ಕಿರುಕುಳದಿಂದ ಬೇಸತ್ತಿದ್ದ ಪತ್ನಿ ತನ್ನ ಸೋದರಮಾವನ ಸಹಾಯದಿಂದ ಆತನನ್ನ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.. ಪತಿಯ ಕುಡಿತದಿಂದ ಬೇಸತ್ತು ಪತ್ನಿ ಸೋದರಮಾವನ ಸಹಾಯದಿಂದ ಕೊಲೆ ಮಾಡಿದ ಘಟನೆಯೊಂದು ಪುಣೆಯಲ್ಲಿ ಬೆಳಕಿಗೆ ಬಂದಿದೆ. ಇನ್ನೂ ಮೃತನನ್ನ 37 ವರ್ಷದ ಕಪ್ತಾನ್ ಸಿಂಗ್ ನಾಯಕ್ ಎಂದು ಗುರುತಿಸಲಾಗಿದೆ. 32 ವರ್ಷದ ಅಂಜಲಿ ಚವ್ಹಾಣ್ ನಾಯಕ್ ಮತ್ತು 36 ವರ್ಷದ ಗಜೇಂದ್ರ ಚಿತ್ತಾರಸಿಂಗ್ ನಾಯಕ್ ಆರೋಪಿಗಳು.. ಸದ್ಯ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಪ್ತಾನ್‍ಸಿಂಗ್ ಮತ್ತು ಅವರ ಪತ್ನಿ ಅಂಜಲಿ ಚವ್ಹಾಣ್ ನಾಯಕ್ ಮುಂಡ್ವಾದ ಕೇಶವನಗರ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಕಪ್ತಾನ್‍ಸಿಂಗ್ ದಿನಗೂಲಿ ಕೆಲಸ ಮಾಡುತ್ತಿದ್ದ.. ಆದ್ರೀತ ಕುಡಿತದ ಚಟಕ್ಕೆ ಬಿದ್ದು , ಪ್ರತಿನಿತ್ಯ ಪತ್ನಿ ಅಂಜಲಿಗೆ ಕಿರುಕುಳ ನೀಡುವುದು ಹಲ್ಲೆ ಮಾಡುವುದನ್ನ ಖಾಯಂ ಮಾಡಿಕೊಂಡಿದ್ದ.. ಪತಿಯ ಕಿರುಕುಳದಿಂದ ಬೇಸತ್ತ ಅಂಜಲಿ ತನ್ನ ಸಹೋದರಿಯ ಪತಿಯಿಂದ ಸಹಾಯ ಕೇಳಿದ್ದಾಳೆ. ನಂತರ ಇಬ್ಬರು ಸೇರಿ…

Read More

ಛತ್ತೀಸ್ ಗಢ : ಬಾಲಕೊಬ್ಬ ಯುವಕನ ಜೊತೆಗೆ ಅಸಹಜ ಲೈಂಗಿಕ ಕ್ರಿಯೆಗೆ ವಿರೋಧಿಸಿದಕ್ಕೆ ಆತನನ್ನ 20 ವರ್ಷದ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಛತ್ತೀಸ್‍ ಗಢದ ಬೆಮೆತಾರಾದಲ್ಲಿ ನಡೆದಿದೆ. ಆರೋಪಿಯನ್ನು ಪಂಕಜ್ ವಿಶ್ವಕರ್ಮ ಎಂದು ಗುರುತಿಸಲಾಗಿದ್ದು, ಬಿಜಭಟ ಮುರುಮ್ ಗಣಿ ಸಮೀಪದ ಪ್ರತ್ಯೇಕ ಸ್ಥಳಕ್ಕೆ ಸೋಮವಾರ ಬಾಲಕನನ್ನು ಕರೆದೊಯ್ದು ಮೊದಲಿಗೆ ಲೈಂಗಿಕ ಕ್ರಿಯೆಗೆ ಪ್ರಯತ್ನಿಸಿ ಒಪ್ಪದೇ ಹೋದಾಗ ಆತನನ್ನ ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಬೆಮೆತಾರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕ ಕಾಣೆಯಾಗಿರುವುದಾಗಿ ಬಾಲಕನ ಪೋಷಕರು ದೂರು ದಾಖಲಿಸಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಮೀಣ ಭಾಗಗಳಲ್ಲಿ ಜನರಿಗೆ ತಲುಪಿಸುವ ಗ್ರಾಮ ಒನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ವರ್ಚುವಲ್ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಹಲವು ಸೇವೆಗಳನ್ನು ಒಂದೇ ಸೂರಿನಡಿ ನಗರ ಪ್ರದೇಶಗಳಲ್ಲಿ ಒದಗಿಸಲಾಗುತ್ತಿದೆ. ಅದೇ ರೀತಿ ಗ್ರಾಮೀಣ ಭಾಗದಲ್ಲೂ ಒದಗಿಸುವ ಉದ್ದೇಶದಿಂದ ಗ್ರಾಮ ಒನ್ ಜಾರಿಗೆ ತರಲಾಗಿದೆ. ಇದರಿಂದ ತಾಲ್ಲೂಕು ಕಚೇರಿಗಳಿಗೆ ಜನರು ಅಲೆದಾಡುವುದು ತಪ್ಪಲಿದೆ. ಸಮಯ ಉಳಿತಾಯವಾಗಲಿದೆ. ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ. ರಾಜ್ಯದ 326 ಗ್ರಾ.ಪಂ.ಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬಂದಿದೆ. ಇದಕ್ಕೂ ಮುನ್ನ ನಾಲ್ಕು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದು ಲೋಪದೋಷಗಳನ್ನು ಸರಿಪಡಿಸಲಾಗಿದೆ ಎಂದರು. ಸರ್ಕಾರದ ಸೇವೆಗಳನ್ನು ಸಮರ್ಪಕವಾಗಿ, ಸುಲಭವಾಗಿ ಜನರಿಗೆ ತಲುಪಿಸಿ ವಿಶ್ವಾಸ ಮೂಡಿಸಬೇಕು. ಮಹಾತ್ಮ ಗಾಂಧೀಜಿ ಯವರು ಹೇಳಿದಂತೆ ಗ್ರಾಮ ಸ್ವರಾಜ್ಯದಿಂದ, ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದಂತೆ…

Read More

ದೆಹಲಿ: 90ರ ಹರೆಯದ ಹಿರಿಯ ಗಾಯಕಿ singer ಸಂಧ್ಯಾ ಮುಖೋಪಾಧ್ಯಾಯ ಎಂದೇ ಚಿರಪರಿಚಿತರಾಗಿರುವ ಸಂಧ್ಯಾ ಮುಖರ್ಜಿ Sandhya Mukherjee ಅವರು ಮಂಗಳವಾರ ಪದ್ಮಶ್ರೀ ಪ್ರಶಸ್ತಿಯ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಗಣರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿಯಲ್ಲಿ ಪದ್ಮಶ್ರೀ Padma Shri ಎಂದು ಹೆಸರಿಸಲು ಒಪ್ಪಿಗೆ ಕೋರಿ ಅವರನ್ನು ಸಂಪರ್ಕಿಸಲಾಗಿತ್ತು ಆಗ ಸಂಧ್ಯಾ ಮುಖರ್ಜಿ ಪ್ರಶಸ್ತಿಯನ್ನು ತಿರಸ್ಕರಿಸುವುದನ್ನು ಅವರ ಪುತ್ರಿ ಸೆನ್​​ಗುಪ್ತಾ ಹೇಳಿದ್ದಾರೆ. ಸೇನ್ ಗುಪ್ತಾ ಅವರಿಗೆ ಕರೆ ಮಾಡಿದ ಹಿರಿಯ ಅಧಿಕಾರಿಗೆ ತನ್ನ ತಾಯಿ ಪದ್ಮಶ್ರೀ ಪುರಸ್ಕೃತೆ ಎಂದು ಹೆಸರಿಸಲು ಇಚ್ಛಿಸುವುದಿಲ್ಲ ಮತ್ತು ಇಳಿ ವಯಸ್ಸಿನಲ್ಲಿ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ “ಅವಮಾನ” ಅನುಭವಿಸಿದೆ. ಅಲ್ಲದೇ ಇದು ಕಿರಿಯ ಕಲಾವಿದರಿಗೆ ಹೆಚ್ಚು ಅರ್ಹವಾಗಿದೆ ಮತ್ತು ತಮ್ಮಂತವರಿಗೆ ಅಲ್ಲ. ತಮ್ಮ ತಾಯಿಯ ನಿರ್ಧಾರಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸೆನ್​​ಗುಪ್ತಾ ಎಂದು ಹೇಳಿದ್ದಾರೆ. ಇವರಿಗಿಂತ ಮೊದಲು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಮಂಗಳವಾರ ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದರು. ಪದ್ಮಭೂಷಣ ಎಂದು ಹೆಸರಿಸಿದ್ದು ನನಗೆ ತಿಳಿದಿಲ್ಲ, ಹಾಗಾಗಿ…

Read More

ಶಾಲೆಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ  ಧ್ವಜಾರೋಹಣ ಮಾಡುವಾಗ  ಭಾವುಟದ  ಕಂಬ  ದಿಢೀರ್​​ ಆಗಿ ವಿದ್ಯುತ್​ ತಂತಿ ಮೇಲೆ ಬಿದ್ದು  ಓರ್ವ ಮಗು ಸಾವನ್ನಪ್ಪಿರುವ ಘಟನೆ . ಬಿಹಾರದ ಬಕ್ಸಾರ್​​ನ ಇಟಾರ್ಹಿ ಬ್ಲಾಕ್​​ನ ನಾಥ್​ಪುರ ಶಾಲೆಯಲ್ಲಿ ಈ ಘಟನೆ ನಡೆದಿದೆ. ಓರ್ವ ಮಗು ಸಾವನ್ನಪ್ಪಿದ್ದು  ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ತಕ್ಷಣ ಮೂವರು ಮಕ್ಕಳನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ಮುಂದುವರೆದಿದ್ದು ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ. ಘಟನೆಯ ನಂತರ ಪರಿಸ್ಥಿತಿ  ಉದ್ವಿಘ್ನಗೊಂಡಿದೆ. ಇದರಿಂದ ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು  ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ.  ನಂತರ ಪೊಲಿಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತಂದಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ: ಅನಾರೋಗ್ಯಕ್ಕೆ ತುತ್ತಾಗಿದ್ದ ತಾಯಿಗೆ ಸಹಾಯಕ್ಕಾಗಿ ಕೋರಿದ ಬಾಲಕಿಯ ಮೇಲೆ ನೆರೆಮನೆಯಾತ ಅತ್ಯಾಚಾರವೆಸಗಿರುವ ಹೇಯ ಘಟನೆ ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ಜನವರಿ 22ರಂದು ಸಂಭವಿಸಿದ್ದು, ಮರುದಿನ ದೆಹಲಿಯ ಪಾಂಡವ್ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಬಾಲಕಿ ದೂರು ದಾಖಲಿಸಿದ್ದಾಳೆ. ಗ್ರಾಮಕ್ಕೆ ಹೋಗಿದ್ದ ಬಾಲಕಿ ತನ್ನ ಅಸ್ವಸ್ಥ ತಾಯಿಯೊಂದಿಗೆ ಮನೆಯಲ್ಲಿ ಒಬ್ಬಳೆ ಇದ್ದಳು. ತಾಯಿಯ ಆರೋಗ್ಯ ಹದಗೆಟ್ಟ ಹಿನ್ನೆಲೆ ಬಾಲಕಿ ನೆರೆಹೊರೆಯವರ ಬಳಿ ಸಹಾಯ ಕೇಳಿದ್ದಾಳೆ. ಈ ವೇಳೆ ಔಷಧಿ ಕೊಡಿಸಿ ಸಹಾಯ ಮಾಡುವ ನೆಪದಲ್ಲಿ ಆರೋಪಿ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ಆಕೆಗೆ ಜೀವ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಬಾಲಿಕಯು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ವರದಿ :ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಚಿತ್ರದುರ್ಗ:  ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿಯಲ್ಲಿರುವ ಪರಿಶಿಷ್ಠ ಜಾತಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಓಂ ಶೆಕ್ಯೂರಿಟಿ ಸರ್ವಿಸಸ್  ಹಾಗೂ ಚಿತ್ರದುರ್ಗ ಸಮಾಜ ಕಲ್ಯಾಣ  ಇಲಾಖೆಯ ಉಪನಿರ್ದೇಶಕರು ಅಸ್ಪೃಶ್ಯತೆ ಆಚರಣೆಗೆ ಬೆಂಬಲಿಸುತ್ತಿದ್ದಾರೆ, ಇವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ  ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ. ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬೊಮ್ಮಾಯಿಗೆ ಮನವಿ ಮಾಡಿರುವ ಅಂಬೇಡ್ಕರ್ ಸ್ವಾಭಿಮಾನಿ ಸೇನೆ,  ಆಸ್ಪೃಶ್ಯತೆ ಆಚರಣೆ ಕುಮ್ಮುಕ್ಕು ನೀಡುತ್ತಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರನ್ನು ಸೇವೆಯಿಂದ ವಜಾಗೊಳಿಸಬೇಕು, ಮುರಾರ್ಜಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸಮಾಜ ಕಲ್ಯಾಣ  ಇಲಾಖೆ ವಿಫಲವಾಗಿದ್ದು , ರೂಪ ಬಿ. ಅವರನ್ನು ಚಿತ್ರಹಳ್ಳಿ ವಸತಿ ಶಾಲೆಗೆ ಡಿ ಗ್ರೂಪ್ ಜವಾನರ ಹುದ್ದೆಗೆ ತೆಗೆದುಕೊಳ್ಳಬೇಕು  ಎಂದು ಒತ್ತಾಯಿಸಿದೆ. ಮೂರು –  ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿರುವ ಶ್ರಮ ಜೀವಿಗಳನ್ನು  ಖಾಯಂಗೊಳಿಸಿ ಹಾಗೂ ಇವರುಗಳಿಗೆ ತಿಂಗಳ  ವೇತನವು ಸಹ ನೇರವಾಗಿ ಅವರ ಕೈ…

Read More

ಮಾಯಸಂದ್ರದ ಕೃಷಿ ಇಲಾಖೆಯಲ್ಲಿ ರೈತರು ಬೆಳೆದ ರಾಗಿಯನ್ನು ಬೆಂಬಲ ಬೆಲೆಗೆ ಮಾರಲು FIDಯಲ್ಲಿ ದಾಖಲಾದ ತಪ್ಪು ಮಾಹಿತಿಯು ಇದೀಗ ತೊಂದರೆಯಾಗಿ ಪರಿಣಮಿಸಿದೆ. ಬೆಂಬಲ ಬೆಲೆಗೆ ಮಾರುವ ಪ್ರತಿಯೊಬ್ಬ ರೈತನು FID ಹೊಂದಿರಬೇಕೆಂದು ಸರ್ಕಾರ ಕಾನೂನು ಮಾಡಿತ್ತು. ಈ ಕಾನೂನೇ ರೈತರಿಗೆ ಮುಳುವಾಗಿದೆ. ಒಂದು ಎಕರೆ , ಒಂದೂವರೆ ಎಕರೆ ಇರುವ ರೈತರಿಗೆ ತಾವು ಮಾಡಿಸಿದ FIDಯಲ್ಲಿ 10 ಎಕರೆ , 12 ಎಕರೆ ಜಮೀನು ತೋರಿಸುತ್ತಿದೆ. ಇದರಿಂದ ಕೇವಲ ಒಂದು ಎಕರೆ ಹೊಂದಿರುವ ರೈತರನ್ನು ” BIG FORMER ” ಎಂದು ಕೃಷಿ ಇಲಾಖೆ‌ ಅವರಿಂದ ರಾಗಿ ಕೊಳ್ಳಲು ನಿರಾಕರಿಸಿದೆ. ಸ್ಥಳೀಯ ನಿವಾಸಿಯಾದ ಗಿರೀಶ್ ಎಂಬುವರ ಹೆಸರಿನಲ್ಲಿ ಯಾವುದೇ ಪಹಣಿ ಇಲ್ಲದಿದ್ದರೂ ಸಹ ಸುಮಾರು ಹತ್ತು ಜನರ ಪಹಣಿಯನ್ನು ಅವರ FID ಸೇರಿಸಲಾಗಿದೆ. ಮಾಯಸಂದ್ರದ ಅಂಬೇಡ್ಕರ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ  ” ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ( ರಿ )” ಸಂಘದ…

Read More