Subscribe to Updates
Get the latest creative news from FooBar about art, design and business.
- ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
- ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
- ಶಾಸಕ ಭೈರತಿ ಬಸವರಾಜ್ ಗೆ ಸುಪ್ರೀಂ ಕೋರ್ಟ್ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
- ಶಾಲೆಯ ಆವರಣದಲ್ಲೇ ಸಂತೆ: ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
- ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
Author: admin
ಮಧುಗಿರಿ : ತಾಲ್ಲೂಕಿನಲ್ಲಿ ಅತೀ ಹೆಚ್ಚು ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಅದನ್ನು ತಪ್ಪಿಸುವಂತೆ ಅನೇಕ ಬಾರಿ ಕರ್ನಾಟಕ ರಣಧೀರರ ವೇದಿಕೆ ಮನವಿಯನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ನೀಡಿದ್ದರು. ಆದರೆ ಆರೋಗ್ಯಾಧಿಕಾರಿಗಳು ನೆಪ ಮಾತ್ರಕ್ಕೆ 4-5 ನಕಲಿ ವೈದ್ಯರನ್ನು ಭೇಟಿ ಮಾಡಿ ನೋಟಿಸ್ ಕೊಟ್ಟು ಕಾನೂನು ಕ್ರಮ ಜರುಗಿಸಿದ್ದಾರೆ. ಇನ್ನುಳಿದ ನಕಲಿ ವೈದ್ಯರಿಗೆ ಅಭಯ ನೀಡಿ ಪೋಷಿಸುತ್ತಿರುವ ತಾಲ್ಲೂಕು ಆರೋಗ್ಯಾಧಿಕಾರಿಗಳು ಎಂದು ಸಾರ್ವಜನಿಕರೂ ಆರೋಪಿಸುತ್ತಿದ್ದಾರೆ. ಈ ವಿಚಾರವಾಗಿ ಮೇಲ್ನೋಟಕ್ಕೆ ನಮ್ಮಗಳಿಗೂ ಇದು ಸತ್ಯವೆನಿಸುತ್ತಿದೆ ಆದ ಕಾರಣ ಇಂದು ಮಧುಗಿರಿ ತಾಲ್ಲೂಕು ತಹಸೀಲ್ದಾರ್ ರವರು ರಜೆಯಲ್ಲಿ ಇರುವ ಕಾರಣ ಗ್ರೇಡ್ 2 ತಹಸೀಲ್ದಾರ್ ರಾದ ಪಿ.ಎಂ ಕಮಲಮ್ಮ ರವರನ್ನು ಭೇಟಿ ಮಾಡಿ ತಾಲ್ಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಹಾಗೂ ನಕಲಿ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದೇವೆ ಹಾಗೂ ಮುಂದಿನ ದಿನದಲ್ಲಿ ರಾಜ್ಯಾದ್ಯಂತ ನಕಲಿ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಬೃಹತ್ ಮಟ್ಟದ ಹೋರಾಟ ಮಾಡುತ್ತೇವೆ ಎಂದು…
ಪಾವಗಡ: ಯ ನಾ ಹೊಸಕೋಟೆ ಹೋಬಳಿಯ ದೊಡ್ಡಲಂಬಾಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಶಾಲೆಯ ಮುಖ್ಯಶಿಕ್ಷಕ ಆಂಜನೇಯಲು ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ, ಭಾರತದಲ್ಲಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯ ದಿನವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಂವಿಧಾನ ಜಾರಿಗೆ ಬಂದ ಈ ದಿನ ಬಹಳ ವಿಶೇಷವಾಗಿದ್ದು, ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಹಲವು ಪ್ರಮುಖ ನಾಯಕರನ್ನು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿದಂತಹ ಪ್ರತಿಯೊಬ್ಬರು ನಮಗೆ ಸ್ಪೂರ್ತಿಯಾಗಿದ್ದಾರೆ. ಈ ದಿನ ಧ್ವಜಾರೋಹಣ ಮಾಡಿದ ನನಗೆ ಹೆಮ್ಮೆಯಿದೆ ಎಂದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕರಾದ ಆಂಜನೇಯಲು, SDMC ಅಧ್ಯಕ್ಷ ಸೀನ ನಾಯ್ಕ, ಅಂಗವಾಡಿ ಶಿಕ್ಷಕಿ ಶಾನಮ್ಮ, ಊರಿನ ಗ್ರಾಮಸ್ಥರಾದ ಹನುಮಂತ ನಾಯ್ಕ, ಲಾಲ ನಾಯ್ಕ, ಹಳೆಯ ವಿದ್ಯಾರ್ಥಿಗಳಾದ ಹರೀಶ್ ನಾಯ್ಕ, ನಾರಾಯಣ ನಾಯ್ಕ, ಚೇತನ್, ನಂದೀಶ್ ನಾಯ್ಕ, ಶ್ರೀಕಾಂತ್ ನಾಯ್ಕ, ಹಾಜರಿದ್ದರು, ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ತುಮಕೂರು: ಪಟ್ಟಣದ ಅಶೋಕ ನಗರದಲ್ಲಿರುವ ಮಹೇಶ್ ಪಿ.ಯು ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಹಾಗೂ ಸಂಭ್ರಮದಿಂದ ಕಾಲೇಜಿನ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಆಚರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ವಿದ್ಯಾ ಪಾಟೀಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದಲ್ಲಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯ ದಿನವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಂವಿಧಾನ ಜಾರಿಗೆ ಬಂದ ಈ ದಿನ ಬಹಳ ವಿಶೇಷವಾಗಿದ್ದು, ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಹಲವು ಪ್ರಮುಖ ನಾಯಕರನ್ನು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿದಂತಹ ಪ್ರತಿಯೊಬ್ಬರು ನಮಗೆ ಸ್ಪೂರ್ತಿಯಾಗಿದ್ದಾರೆ. ಈ ದಿನ ಪ್ರಾಂಶುಪಾಲರಾಗಿ ಧ್ವಜಾರೋಹಣ ಮಾಡಿದ ನನಗೆ ಹೆಮ್ಮೆಯಿದೆ ಎಂದರು. ಉಪನ್ಯಾಸಕ ಶ್ರೀನಿವಾಸ್ ಕಲ್ಲೂರು ಮಾತನಾಡಿ, ಗಣರಾಜ್ಯೋತ್ಸವ ದಿನವನ್ನು ಭಾರತದ ಪ್ರತಿ ಸರ್ಕಾರಿ ಕಚೇರಿಗಳು, ಇಲಾಖೆಗಳು ಮತ್ತು ಸಂಸ್ಥೆಗಳು, ಹಾಗೂ ಎಲ್ಲಾ ಶಾಲಾ, ಕಾಲೇಜುಗಳು ಸೇರಿದಂತೆ ವಿಶ್ವವಿದ್ಯಾಲಯಗಳಲ್ಲಿ ಅತ್ಯಂತ ವಿಶೇಷವಾಗಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಭಾರತದ ಸರ್ವ ಪ್ರಜೆಗೂ ಸಮಾನ ಶಿಕ್ಷಣ, ಸರ್ವರಿಗೂ ಹಕ್ಕುಗಳನ್ನು ನೀಡಿರುವ ಸಂವಿಧಾನ ಜಾರಿಗೆ ತಂದ ಈ ದಿನವನ್ನು…
ತಿಪಟೂರು: ತುಮಕೂರು ಜಿಲ್ಲೆ ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಸರಳ ಹಾಗೂ ಸಂಭ್ರಮದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ತಿಪಟೂರು ಉಪವಿಭಾಗಾಧಿಕಾರಿ ದಿಗ್ವಿಜಯ್ ಬೋಡ್ಕೆ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಎನ್.ಸಿ.ಸಿ ತುಕ್ಕಡಿಗಳಿಂದ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಅವರು, ದೇಶದ ಸಮಗ್ರ ಅಭಿವೃದ್ದಿ ಹಾಗೂ ಐಕ್ಯತೆಯ ವಿಷಯದಲ್ಲಿ ಪ್ರತಿಯೊಬ್ಬ ಭಾರತೀಯನು ಸ್ವಾಭಿಮಾನ ಬೆಳಸಿಕೊಳ್ಳಬೇಕು. ಭಾರತಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳು ಕಳೆಯುತ್ತಿದ್ದರೂ ನಮ್ಮ ನಡುವೆಯೇ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದೇವೆ ಎಂದರು. ಜಾತಿಯತೆ, ಮಾತಾಂಧತೆ, ಭಯೋತ್ವಾದನೆ, ಬಡತನದಂತೆ ಸಮಸ್ಯೆಗಳನ್ನು ದೇಶ ಎದುರಿಸುತ್ತಿದ್ದು, ಪ್ರತಿಯೊಬ್ಬ ಭಾರತೀಯ ತಮ್ಮ ಹಕ್ಕು ಕರ್ತವ್ಯಗಳ ಜವಾಬ್ದಾರಿ ಅರಿತು ದೇಶಕ್ಕಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು .ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸಿದರು. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಡಿವೈಎಸ್ಪಿ ಸಿದ್ದಾರ್ಥ್ ಗೋಯಲ್, ನಗರಸಭಾ ಅಧ್ಯಕ್ಷ ರಾಮ್ ಮೋಹನ್ ಪೌರಾಯುಕ್ತ ಉಮಾಕಾಂತ್, ಬಿಇಒ ಪ್ರಭುಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೃಷಿ ಇಲಾಖೆಗಳಲ್ಲಿ ರೈತರು ಸ್ಪ್ಲಿಂಕ್ಲರ್ ( Splinkler ) ಸೆಟ್ ಆಗಲಿ ಮತ್ತೊಂದುಕ್ಕಾಗಲಿ ದಿನನಿತ್ಯ ಅನಾವಶ್ಯಕವಾಗಿ ರೈತರನ್ನು ಅಲೆದಾಡಿಸುತ್ತಿದ್ದು , ಸಂಬಂಧಪಟ್ಟ ರೇಷ್ಮೆ ಇಲಾಖೆಯ ಅಧಿಕಾರಿಯನ್ನು ವಿಚಾರಿಸಿದಾಗ ರೇಷ್ಮೆ ಇಲಾಖೆಯ ಅಧಿಕಾರಿ ಸರ್ವೇಶ್ ಬಾವಿ ಕಟ್ಟಿ ಮಾಹಿತಿ ನೀಡಿದರು. ಈಗಾಗಲೇ ಸಂಬಂಧಪಟ್ಟ ಕೃಷಿ ಇಲಾಖೆಯ ಅಧಿಕಾರಿಯವರಿಗೆ ನಾವು ಈಗಾಗಲೇ ಕೃಷಿ ಇಲಾಖೆಯಲ್ಲಿ ಕೃಷಿ ಉಪಕರಣಗಳನ್ನು ಪಡೆದುಕೊಳ್ಳಲು ಬರುವಂತಹ ರೈತರ ಸಮಯವನ್ನು ವ್ಯರ್ಥ ಮಾಡಿಸಬೇಡಿ ಎಂದು ಹೇಳಿದ್ದೇವೆ ಎಂದು ಅವರು ಹೇಳಿದರು. ಕೋವಿಡ್ ೩ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ದೃಷ್ಟಿಯಿಂದ ರೈತರಿಗೆ ತಾವುಗಳು ಕೃಷಿ ಉಪಕರಣಗಳನ್ನು ನೀಡಬಹುದಾಗಿಯೂ ಸಹ ತಿಳಿಸಿದರು . ಹಾಗೂ ಅದಕ್ಕೆ ಸಂಬಂಧ ಪಟ್ಟಂತ ವಿತರಣ ನಿರಪೇಕ್ಷಣ ಪತ್ರವನ್ನು ಸಹ ಈಗಾಗಲೇ ಕೃಷಿ ಇಲಾಖೆಯ ಅಧಿಕಾರಿಗಳಿಗೆ ನೀಡಿದಾಗಿಯೂ ಸಹ ಸರ್ವೇಶ್ ಬಾವಿ ಕಟ್ಟಿ ಅವರು ತಿಳಿಸಿದ್ದಾರೆ. ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ)
1932 ಸೆಪ್ಟೆಂಬರ್ 17 ಇಂಗ್ಲೆಂಡ್ ನ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ನಡೆದ ವಾಗ್ವಾದ. ಅಂಬೇಡ್ಕರ್: ಭಾರತದಲ್ಲಿರುವ 18 ವರ್ಷ ತುಂಬಿದ ಗಂಡು ಮತ್ತು ಹೆಣ್ಣು, ಪ್ರತಿಯೊಬ್ಬರಿಗೆ ಓಟು ಹಾಕುವ ಹಕ್ಕು ಇರಲಿ. ಗಾಂಧೀಜಿ: ನಾನು ಒಪ್ಪುವುದಿಲ್ಲ. ಜಮೀನ್ದಾರರಿಗೆ, ಉದ್ಯಮಿದಾರರಿಗೆ, ಡಿಗ್ರಿ, ಎಂ ಎ ಓದಿರುವವರಿಗೆ ಗಿರಣಿ ಮಾಲಿಕರಿಗೆ, ಓಟ್ ಮಾಡುವ ಹಕ್ಕಿರಲಿ. ಅಸ್ಪೃಶ್ಯರಿಗೆ ಓಟ್ ಮಾಡುವ ತಿಳುವಳಿಕೆ ಇಲ್ಲಾ. ಅವರು ಅನಕ್ಷರಸ್ಥರು ಅವರಿಗೆ ಓಟ್ ಅಗತ್ಯವಿಲ್ಲ. ಬೇಕಾದರೆ ಅವರಿಗಾಗಿ ಶಾಲೆಗಳನ್ನ ತೆಗೆದು ಶಿಕ್ಷಣ ಕೊಡಿ ಮತ್ತು ಅಂಬೇಡ್ಕರ್, ಮಹಿಳೆಯರಿಗಾಗಿ ಓಟಿನಹಕ್ಕು ಕೇಳುತ್ತಿರುವುದು ಹಾಸ್ಯಾಸ್ಪದ. ನಾನು ಇದನ್ನ ಖಡಾಖಂಡಿತವಾಗಿ ವಿರೋಧಿಸುತ್ತೇನೆ. ಅಂಬೇಡ್ಕರ್ : ಓಟ್ ಹಾಕಲು ಸಾಮಾನ್ಯ ತಿಳಿವಳಿಕೆ ಇದ್ದರೆ ಸಾಕು. ಡಿಗ್ರಿ, ಎಂ.ಎ. ಓದಿರುವವರು ಇರಬೇಕೆಂದೆನಿಲ್ಲಾ. ಮೇಲಾಗಿ ಭಾರತದಲ್ಲಿ ಬಹುಸಂಖ್ಯಾತ ಎಸ್ ಸಿ, ಎಸ್ ಟಿ, ಮತ್ತು ಓ ಬಿ ಸಿ ಗಳು ಯಾರೂ ಶಿಕ್ಷಣ ಪಡೆದಿಲ್ಲ . ಇವರಿಗೆ ಧರ್ಮಶಾಸ್ತ್ರದ ಅನುಸಾರವಾಗಿ ಶಿಕ್ಷಣ ಮತ್ತು ಆಸ್ತಿ ಹೊಂದುವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ.…
ಕೊರಟಗೆರೆ : ಯುಕ್ತ ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ಕೊರಟಗೆರೆ ತಾಲ್ಲೂಕು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದ ಮಧುಗಿರಿ ದಿಲೀಪ್, ಗ್ರಾಮೀಣ ಭಾಗದ ವಿದ್ಯಾರ್ಥಿಗಳು msyep (Multi skill youth empowerment programme) ಪಡೆಯುವ ಮೂಲಕ ಉದ್ಯೋಗಕ್ಕೆ ಸಹಕಾರಿಯಾಗಿದೆ ಎಂದು msyep ತರಬೇತಿಯ ಬಗ್ಗೆ ಅರಿವು ಮೂಡಿಸಿದರು. ತರಬೇತಿಯನ್ನು ಪಡೆದುಕೊಳ್ಳಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಒಂದು ಸುವರ್ಣ ಅವಕಾಶ. ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಧರ್ ರವರು ವಿದ್ಯಾರ್ಥಿಗಳಿಗೆ msyep ತರಬೇತಿಯನ್ನು ನಮ್ಮ ಕಾಲೇಜಿನಲ್ಲಿ ನೀಡಬೇಕೆಂದು ಮನವಿ ಮಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮುಖ್ಯ ಕಾರ್ಯಕ್ರಮ ಅಯೋಜಕರಾದ ದೀಪಿಕಾ ವೆಂಕಟೇಶ್ ರವರು ತರಬೇತಿ ಯ ಅವಧಿ ಮತ್ತು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಉಪವಿಭಾಗ ಆಯೋಜಕರು ತನುಜ, ಪೂಜಾ ಸಹನಾ, ಲೀಲಾವತಿ ಹಾಜರಿದ್ದರು. ಪ್ರಾಥಮಿಕ ಕೃಷಿ ಪತ್ತಿನ ಸಂಘ ಸಹಕಾರ ಸಂಘದ ಅಧ್ಯಕ್ಷರಾದ…
ಕೊರಟಗೆರೆ: ತಾಲ್ಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ನಾಹೀದ ಜಮ್ ಜಮ್ ಮೊದಲ ಬಾರಿಗೆ ಮತ ಚಲಾಯಿಸುವ 18 ವರ್ಷ ತುಂಬಿದ ಮತದಾರರಿಗೆ ಗುರುತಿನ ಚೀಟಿ ವಿತರಿಸಿದರು. ಬಳಿಕ ಮಾತನಾಡಿದ ಅವರು, ನಾಡಿನ ಭವಿಷ್ಯವೇ ವಿದ್ಯಾರ್ಥಿಗಳು, ನೀವು ಹಾಕುವ ಮತಕ್ಕೆ ಅಮೂಲ್ಯವಾದ ಭವಿಷ್ಯವಿದೆ. ಆದ್ದರಿಂದ ಯಾವ ಅಭ್ಯರ್ಥಿ ನಿಮಗೆ ಸೂಕ್ತ ಎಂಬುದನ್ನು ಯೋಚಿಸಿ ಮತ ನೀಡಿ, ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವುದು ನಮ್ಮೆಲ್ಲರ ಗುರಿಯಾಗಿರಬೇಕು ಎಂದು ಅರಿವು ಮೂಡಿಸಿದರು. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಸುಮಾರು 30 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ನೆರವಿಗೆ ಕೂಡಲೇ ಸರ್ಕಾರ ಧಾವಿಸಬೇಕು ಎಂದು ನಗರದ ಮಾಜಿ ಶಾಸಕ ರಫೀಕ್ ಅಹಮದ್ ಸರ್ಕಾರವನ್ನು ಆಗ್ರಹಿಸಿದರು. ನಗರದ ಜಿಲ್ಲಾಧಿಕಾರಿಗಳ ಎದುರು ಕಚೇರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿ ಮಾತನಾಡಿ, ಅತಿಥಿ ಉಪನ್ಯಾಸಕರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿದ್ದು, ಕನಿಷ್ಠ ಮಟ್ಟದ ಜೀವನ ಕಟ್ಟಿಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಸರ್ಕಾರಕ್ಕೆ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಹಾಗೂ ಸೇವಾ ವಿಲೀನಿಕರಣಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರೂ, ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳದೆ, ಅವರ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದು, ಏಳೂವರೆ ಸಾವಿರ ಜನ ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳುವ ಪ್ರಯತ್ನ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಾವು ಸಾಯಬಾರದು, ಕೋಲು ಮುರಿಯಬಾರದು ಎಂಬ ಗಾದೆಯಂತೆ ಸರಕಾರ ಅತಿಥಿ ಉಪನ್ಯಾಸಕರ ಹಿತರಕ್ಷಣೆಯಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದ್ದು, ಕೂಡಲೇ ಸರ್ಕಾರ ಇವರಿಗೆ ಸೇವಾ…
ತುರುವೇಕೆರೆ: ಬೇರೆ ಬೇರೆ ಊರುಗಳಿಂದ ಪಟ್ಟಣಕ್ಕೆ ಬರುವ ಸೀಟ್ ಆಟೋಗಳ ಕಿರಿಕಿರಿ ತಪ್ಪಿಸುವಂತೆ ಹಾಗೂ ಬಸ್ ಹತ್ತುವ ಪಾದಚಾರಿಗಳು ಅನುಭವಿಸುವ ತೊಂದರೆ ಮತ್ತು ಬೀದಿಬದಿ ವ್ಯಾಪಾರಿಗಳ ವ್ಯಾಪಾರಕ್ಕೆ ತೊಂದರೆ ತಪ್ಪಿಸುವಂತೆ ವಿವಿಧ ಸಂಘಟನೆಗಳು ಜಂಟಿಯಾಗಿ ಪಟ್ಟಣ ಪಂಚಾಯಿತಿ, ಅಧ್ಯಕ್ಷರಿಗೆ ಮನವಿ ಸಲ್ಲಿಸಿತು. ಕಾರ್ಮಿಕ ಸಂಘಟನೆಗಳು, ಬೀದಿಬದಿ ಆಟೋ ಮಾಲೀಕರು ಹಾಗೂ ಚಾಲಕರ ಸಂಘ , ವ್ಯಾಪಾರಿಗಳ ಸಂಘ ನಿಯೋಗ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಪಟ್ಟಣ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ಮಾಯಸಂದ್ರ ವೃತ್ತ, ದಬ್ಬೆಘಟ್ಟ ವೃತ್ತ ,ಬಾಣಸಂದ್ರ ರಸ್ತೆ, ತಿಪಟೂರು ರಸ್ತೆಯಲ್ಲಿ, ನಿರಂತರವಾಗಿ ಪೊಲೀಸರನ್ನು ನಿಯೋಜನೆ ಮಾಡಿಸಿಕೊಡುವಂತೆ ಹಾಗೂ ಸಾಮಾನ್ಯ ಜನರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸುವಂತೆ ಆಗ್ರಹಿಸಿದರು. ಈ ಬಗ್ಗೆ ಪ್ರತಿಕ್ರಿಯೆಯೆ ನೀಡಿದ, ನೂತನ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಿದಾನಂದ್ ಈ ಬಗ್ಗೆ ಸಭೆ ಕರೆದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳು ವಂತೆ ಸೂಚನೆ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಸಿ. ಐ. ಟಿ. ಯು.…