Subscribe to Updates
Get the latest creative news from FooBar about art, design and business.
- ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
- ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
- ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
- ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
- ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
- ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
- ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
Author: admin
ಕೊರಟಗೆರೆ : ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂದೆ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ವಿವಿಧ ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಹಾಗೂ ಮುಖಂಡರ ನೇತೃತ್ವದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಚಾಲನೆ. 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಿ ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನೂ ಮಾಡಿ ಕೊರಟಗೆರೆ ಪಟ್ಟಣದ ಮುಖ್ಯರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿ ತಾಯಿ ಭುವನೇಶ್ವರಿಗೆ ಜೈಕಾರ ವನ್ನು ಕೂಗಿ ವೈಭವ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಹಾಗೂ ಕೊರಟಗೆರೆ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಟರಾಜ್,ಕರ್ನಾಟಕ ರಣಧೀರರ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್ ದೇವರಾಜ್, ಕರ್ನಾಟಕ ರಣಧೀರರ ವೇದಿಕೆ ತಾಲ್ಲೂಕು ಅಧ್ಯಕ್ಷರು ಹಾಗೂ ಪತ್ರಕರ್ತರಾದ ಮಂಜುಸ್ವಾಮಿ.ಎಂ. ಎನ್. ಕನ್ನಡ ಪರ ಸಂಘಟನೆಯ ಮುಖಂಡರುಗಳಾದ ದಿನೇಶ್,ರವಿಕುಮಾರ್, ಉಮೇಶ್, ಮಾರುತಿ,ಕಲೀಮ್, ಪುನೀತ್, ಇತರೇ ಮುಖಂಡರುಗಳು ಹಾಜರಿದ್ದರು. ವರದಿ :…
‘ಜೈ ಭೀಮ್’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪರಮೇಶ್ವರಪ್ಪ IPS (ಪ್ರಕಾಶ್ ರಾಜ್) ಹಿಂದಿಯಲ್ಲಿ ಮಾತಾಡುತ್ತಿದ್ದ ಮಾರ್ವಾಡಿಯೊಬ್ಬನಿಗೆ ‘ಕನ್ನಡದಲ್ಲಿ (ತಮಿಳು, ತೆಲುಗು, ಮಲಯಾಳಂ) ಮಾತಾಡು’ ಎಂದು ಕೆನ್ನೆಗೆ ಬಾರಿಸಿರುವ ದೃಶ್ಯವು ಅನೇಕ ರೀತಿಯ ವಾಗ್ವಾದಗಳಿಗೆ ಕಾರಣವಾಗಿದೆ. ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ಬಂದು ಅನೇಕ ವರ್ಷಗಳ ಕಾಲ ಇಲ್ಲಿಯ ಸ್ಥಳೀಯರಾಗಿಯೇ ನೆಲೆ ಕಂಡುಕೊಂಡಿರುವ ಮಾರ್ವಾಡಿಗಳಿಗೆ ಹೀಗೆ ಸ್ಥಳೀಯ ಭಾಷೆಯಲ್ಲಿ ವ್ಯವಹರಿಸುವಂತೆ ಹೊಡೆದು ಬುದ್ಧಿ ಕಲಿಸಬೇಕಾದ ಅಗತ್ಯವಿದೆ ಎಂದು ‘ಜೈ ಭೀಮ್’ ಸಿನಿಮಾ ನೋಡಿದ ಬಳಿಕ ದಕ್ಷಿಣದ ಜನರಲ್ಲಿ ಜನಾಭಿಪ್ರಾಯ ಮೂಡುತ್ತಿದೆ. ಪರಮೇಶ್ವರಪ್ಪ IPS (ಪ್ರಕಾಶ್ ರಾಜ್) ಜಿಗುಟು ಹಿಂದಿ ಭಾಷಿಕ ಮಾರ್ವಾಡಿಗೆ ಹೊಡೆದಿರುವುದು ಸಿನಿಮಾದಲ್ಲಿ ನಟನೆಗಾಗಿ. ಉತ್ತರ ಭಾರತದ ಮಾರ್ವಾಡಿಗಳು ದಕ್ಷಿಣ ಭಾರತೀಯರ ಆರ್ಥಿಕ ಉತ್ಪಾದನಾ ನೆಲೆಗಳನ್ನು ಕಬ್ಜಾ ಮಾಡಿಕೊಂಡಿರುವುದಲ್ಲದೆ ಸ್ಥಳೀಯ ಭಾಷೆಗಳ ಮೇಲೆ ಹಿಂದಿ ಭಾಷೆಯನ್ನು ಹೇರುತ್ತಾ ದಕ್ಷಿಣ ಭಾರತೀಯರ ಬದುಕಿನ ಮೇಲೆಯೇ ಹೊಡೆದಿದ್ದಾರೆ. ಇದಕ್ಕೆ ಯಾರು ಹೊಣೆ? ಉತ್ತರ ಭಾರತದ ಮಾರ್ವಾಡಿಗಳು ಹಿಂದಿ ಭಾಷೆಯನ್ನು ದಕ್ಷಿಣ ಭಾರತದ ದ್ರಾವಿಡ ದೇಶಭಾಷಿಕರ…
ಗುಬ್ಬಿ: ಕೆಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಅಂತರ್ಜಲ ಚೇತನ ಎಂಬ ಯೋಜನೆಯಿಂದ ಗ್ರಾಮೀಣ ಪ್ರದೇಶಗಳ ರೈತರ ಜಮೀನಿನಲ್ಲಿ ಅಂತರ್ಜಲ ಹೆಚ್ಚಿಸುವ ಕಾಮಗಾರಿ ಮಾಡುವುದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಗುಬ್ಬಿ ತಾಲ್ಲೂಕಿನ ಕ್ವಾರ್ಡಿನೇಟರ್ ಜನಾರ್ದನ್ ತಿಳಿಸಿದರು. ಗುಬ್ಬಿ ನಗರದ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಡಾ ಶ್ರೀ ಶ್ರೀ ರವಿಶಂಕರ್ ಗುರೂಜಿ ಯವರ ಆರ್ಟ್ ಆಫ್ ಲಿವಿಂಗ್ ಸೆಂಟರ್ ನ ಸಹಯೋಗದಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅಂತರ್ಜಲ ಚೇತನ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆ ಸಂಪೂರ್ಣ ಕೆಂದ್ರ ಸರ್ಕಾರದ ಯೋಜನೆಯಾಗಿದ್ದು ಗುಬ್ಬಿ ತಾಲ್ಲೂಕಿನ 34 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಗ್ರಾಮಗಳಿಗೆ ಒಳಪಟ್ಟಿದ್ದು ಗ್ರಾಮ ಪಂಚಾಯ್ತಿಗೆ ಒಬ್ಬರು ಆಸಕ್ತಿಯುಳ್ಳ ಯುವಕರನ್ನು C P O ಗಳನ್ನು (ಗ್ರಾಮ ಪಂಚಾಯ್ತಿ ಕ್ವಾರ್ಡಿನೇಟರ್)ಆಗಿ ಆಯ್ಕೆ ಮಾಡುವ ಮೂಲಕ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದರು. ಈ ಯೋಜನೆಯ ಅಡಿಯಲ್ಲಿ ಗ್ರಾಮೀಣ ಭಾಗದ ರೈತರ ಜಮೀನಿನಲ್ಲಿ ಯಾವ…
ಸರಗೂರು. ಥ್ರೋಬಲ್ ನಲ್ಲಿ ಚಿನ್ನದ ಪದಕ ಪಡೆದ ಇಬ್ಬರು ಹೆಣ್ಣು ಶಾಲೆಯ ಮಕ್ಕಳಿಗೆ ಸರ್ವೇ ರಾಜಣ್ಣ ಟ್ರಸ್ಟ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮತ್ತು ಸಮಾಜ ಸೇವಕ ಎಸ್.ವಿ.ವೆಂಕಟೇಶ್ ಸನ್ಮಾನಿಸಿದರು. ತಾಲ್ಲೂಕಿನ ಪಟ್ಟಣದ ಸರಗೂರು ಸರ್ವೇ ರಾಜಣ್ಣ ಟ್ರಸ್ಟ್ ಅಧ್ಯಕ್ಷ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡ ಎಸ್ ವಿ ವೆಂಕಟೇಶ್ ಥ್ರೋಬಾಲ್ ನಲ್ಲಿ ಚಿನ್ನದ ಪದಕ ಗೆದ್ದ ಇಟ್ನಾ ಗ್ರಾಮದ ಕುಮಾರಿ ವಿದ್ಯಾ ಮತ್ತು ಸಹನ ಅವರಿಗೆ ಸನ್ಮಾನ ಮಾಡಿದರು. ಕುಮಾರಿ ವಿದ್ಯಾ ಮತ್ತು ಸಹನ ಅವರು ಥ್ರೋಬಾಲ್ ನಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ತಾಲ್ಲೂಕಿಗೆ ಸಂತೋಷದ ವಿಷಯವಾಗಿದೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿ ಹಾಗೂ ಓದಿನಲ್ಲಿ ಆಸಕ್ತಿ ತೋರಿಸಬೇಕು ಎಂದು ಅವರು ಪ್ರೋತ್ಸಾಹಿಸಿದರು. ಜೊತೆಗೆ ನಮ್ಮ ತಾಲ್ಲೂಕಿನ ಮಕ್ಕಳು ಓದಿನ ಗಮನನಲ್ಲಿ ಇಟ್ಟುಕೊಂಡು ಕ್ರೀಡೆ ಮತ್ತು ಸ್ಪರ್ಧೆ ಯಲ್ಲಿ ಭಾಗಿಯಾಗುವಂತೆ ಅವರು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಸರ್ವೇ ರಾಜಣ್ಣ…
ಕೂಲಿನಾಲಿ ಮಾಡಿಕೊಂಡು ಹೊಟ್ಟೆಪಾಡಿಗಾಗಿ ಹೊಲಗದ್ದೆಯ ಇಲಿ-ತೋಡ-ಉಡ-ಅಳಿಲುಗಳನ್ನು ಬೇಟೆಯಾಡಿ ಬದುಕುವ ಕೊರಚ(ಮ)- ಇರುಳಿಗ ಮುಂತಾದ ಬುಡಕಟ್ಟು ಸಮುದಾಯಗಳ ಜನರನ್ನು ಅಪರಾಧಿಗಳೆಂದು ಬಂಧಿಸುವ, ‘ಉತ್ತಮರು’ ಎಂದು ಕರೆಸಿಕೊಳ್ಳುತ್ತಿರುವ ಸಾಮಾಜಿಕ ಮುಖ್ಯವಾಹಿನಿಯ ಸಮುದಾಯಗಳ ಪೊಲೀಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳು, ಬುಡಕಟ್ಟು ಅಲೆಮಾರಿ ಸಮುದಾಯಗಳನಿರುಪದ್ರವಿ ಮುಗ್ಧ ಜನರನ್ನು ಇಲಿ-ತೋಡಗಳಂತೆಯೇ ಬೇಟೆಯಾಡುವ ಕಿರಾತಕ ವ್ಯವಸ್ಥೆಯನ್ನು ‘ಜೈ ಭೀಮ್’ ಸಿನಿಮಾ ವಾಸ್ತವವಾದಿ ನೆಲೆಯಲ್ಲಿ ಚಿತ್ರಿಸುತ್ತದೆ. ‘ಒಬ್ಬನ ಮೇಲೆ ಒಂದೇ ಒಂದು ಕೇಸು ಹಾಕಬೇಕಂತಾ ಏನು ಕಾನೂನಿದೆಯಾ? ತಲೆಗೆ ಎರಡ್ಮೂರು ಕೇಸು ಹಾಕಿ ಒದ್ದು ಒಳಕ್ಕೆ ಹಾಕಿರಿ’ ಎಂದು ಶೋಷಿತ ಬುಡಕಟ್ಟು ಸಮುದಾಯಗಳ ಜನರ ಮೇಲೆ ಕಲ್ಪಿತ ಅಪರಾಧಗಳನ್ನು ಹೊರಿಸಿ ಜೈಲಿಗೆ ನೂಕುವ ಮೂಲಕ ಮಾನವ ಹಕ್ಕುಗಳನ್ನು ಉಲ್ಲಂಘಿಸುವ ಆಳುವ ವರ್ಗಗಳ ಪಾರಂಪರಿಕ ರೂಢಿಗತ ವ್ಯವಸ್ಥೆಯ ವಿರುದ್ಧ ಸಂವಿಧಾನದತ್ತವಾದ ಆಧುನಿಕ ಕಾನೂನಿನ ಅಸ್ತ್ರದ ಮೂಲಕ ಹೋರಾಡುವ ನ್ಯಾಯವಾದಿಯ ಪಾತ್ರದಲ್ಲಿ ಕಲಾವಿದ ಸೂರ್ಯ ನಮ್ಮ ಗಮನ ಸೆಳೆಯುತ್ತಾರೆ. ಬುಡಕಟ್ಟು ಸಮುದಾಯಗಳ ಮಾದರಿ ವ್ಯಕ್ತಿತ್ವಗಳಾಗಿ ಕೆಂಚರಾಜ- ಸಣ್ಣಮ್ಮ- ಈರಪ್ಪ – ಮಂಜಪ್ಪ – ಸಣ್ಣಮ್ಮನ…
ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರವು VAT ಇಳಿಕೆ ಮಾಡಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬುಧವಾರ ತಿಳಿಸಿದ್ದು, ನವೆಂಬರ್ 4ರ ಸಂಜೆ ಪೆಟ್ರೋಲ್ ಹಾಗೂ ಡೀಸೆಲ್ ಎರಡರ ಮೇಲೆ ಕೂಡ 7 ರೂಪಾಯಿ ಇಳಿಕೆ ಮಾಡುತ್ತಿದ್ದೇವೆ ಎಂದು ಅವರು ಘೋಷಿಸಿದ್ದಾರೆ. ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂಧನದ ದರದ ಹೊರೆ ಇಳಿಸುವ ಮೂಲಕವಾಗಿ ದೀಪಾವಳಿಗೆ ಅದ್ಭುತವಾದ ಉಡುಗೊರೆ ನೀಡಿದ್ದಾರೆ. ಈ ಹಬ್ಬಕ್ಕೆ ಸ್ಫೂರ್ತಿ ತುಂಬುವುದಕ್ಕೆ ಕರ್ನಾಟಕ ಸರ್ಕಾರ ಕೂಡ ಬೆಲೆ ಇಳಿಕೆ ಮಾಡಿದೆ ಎಂದು ಅವರು ಹೇಳಿದರು. ಇದರಿಂದ ನಮ್ಮ ಬೊಕ್ಕಸಕ್ಕೆ 2100 ಕೋಟಿ ರೂಪಾಯಿ ಹೊರೆಯಾದರೂ ನಮ್ಮ ನಾಗರಿಕರಿಗೆ 95.90 ಮತ್ತು 81.50 ಪೆಟ್ರೋಲ್ ಮತ್ತು ಡೀಸೆಲ್ ಗೆ ಕ್ರಮವಾಗಿ ದರವಾಗಲಿದೆ ಎಂದು ಸಿಎಂ ಹೇಳಿದ್ದಾರೆ.
ಸರಗೂರು: ದಲಿತರು ದೇವಸ್ಥಾನಕ್ಕೆ ಪ್ರವೇಶಿಸ ಬಾರದು ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ 3 ವರ್ಷಗಳಿಂದ ಬೀಗ ಜಡಿಯಲಾಗಿದ್ದ ತಾಲ್ಲೂಕಿನ ಸಾಗರೆ ಗ್ರಾಪಂ ಸಾಗರೆ ಗ್ರಾಮದ ಮಾರಮ್ಮನ ದೇವಸ್ಥಾನದ ಬಾಗಿಲು ಕೊನೆಗೂ ತೆರೆಯಲಾಗಿದೆ. ಜಾತಿ ಶ್ರೇಷ್ಠತೆ ಎಂಬ ಕಾಯಿಲೆಯಿಂದಾಗಿ ಭಕ್ತಿಯ ಕೇಂದ್ರವಾಗಿರುವ ದೇವಸ್ಥಾನಕ್ಕೆ ಬೀಗ ಜಡಿಯಲು ಜಿಲ್ಲಾಧಿಕಾರಿಗಳು ಅನಿವಾರ್ಯವಾಗಿ ಆದೇಶ ನೀಡಿದ್ದರು. ಇದೀಗ ಮೂರು ವರ್ಷಗಳ ಬಳಿಕ ಇಂದು ಸರ್ಕಲ್ ಇನ್ಸ್ ಪೆಕ್ಟರ್ ಆನಂದ್ ಹಾಗೂ ಇನ್ಸ್ ಪೆಕ್ಟರ್ ಶ್ರಾವಣ ದಾಸ ರೆಡ್ಡಿ ಸಮ್ಮುಖದಲ್ಲಿ ನಡೆದ ಸಭೆಯ ಬಳಿಕ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಇದೇ ಸಂದರ್ಭದಲ್ಲಿ ಗ್ರಾಮದ 12 ವಿವಿಧ ಜಾತಿ, ಜನಾಂಗಗಳ ಯಜಮಾನರು ಹಾಗೂ ಮುಖಂಡರನ್ನು ಕರೆದು ಶಾಂತಿ ಸಭೆ ನಡೆಸಲಾಗಿದ್ದು, ಎಲ್ಲರು ಕೂಡ ಒಗ್ಗೂಡಿ ದೇವಸ್ಥಾನ ಕಾರ್ಯಗಳಲ್ಲಿ ಭಾಗವಹಿಸುವ ನಿರ್ಧಾರದೊಂದಿಗೆ ಕೊನೆಗೂ ದೇವಸ್ಥಾನ ತೆರೆಯಲಾಗಿದೆ. ದಲಿತರು ದೇವಸ್ಥಾನಕ್ಕೆ ಪ್ರವೇಶಿಸಬಾರದು, ಜಾತ್ರೆಯಲ್ಲಿ ಪಾಲ್ಗೊಳ್ಳಬಾರದು ಎಂಬ ಕೆಲವು ಜಾತಿವಾದಿ ಮನಸ್ಥಿತಿಗಳಿಂದಾಗಿ ಈ ದೇವಸ್ಥಾನಕ್ಕೆ ಮೂರು ವರ್ಷಗಳ ಕಾಲ ಬೀಗ ಜಡಿಯಲಾಗಿತ್ತು. ಇದೀಗ ಕೊನೆಗೂ…
ತಿಪಟೂರು: ದೀಪಾವಳಿ ಹಬ್ಬದ ಪ್ರಯುಕ್ತ ನಗರದಲ್ಲಿ ಪಟಾಕಿ ಹಣತೆಗಳ ಖರೀದಿ ಜೋರಾಗಿ ನಡೆಯುತ್ತಿದೆ. ಕೊವಿಡ್ ಸಂಕಷ್ಟಗಳೆಲ್ಲವನ್ನೂ ಮೀರಿ ಎಲ್ಲ ಮನೆಗಳಲ್ಲಿಯೂ ಈ ಬಾರಿ ಸಂತಸ ಸಡಗರ ಕಂಡು ಬಂದಿದೆ. ಇಂದು ಬೆಳಗ್ಗಿನಿಂದಲೇ ಮನೆ ಮನೆಗಳಲ್ಲಿ ದೀಪಾವಳಿ ಸಂಭ್ರಮ ಕಾಣಿಸಿತು. ಇನ್ನೂ ಪಟಾಕಿ ಖರೀದಿಗೆ ಜನರು ಮುಗಿ ಬಿದ್ದಿದ್ದು, ಈ ಬಾರಿ ಪಟಾಕಿ ಬೆಲೆ ಏರಿಕೆಯಾಗಿದ್ದರೂ ಕೂಡ ಪಟಾಕಿ ಖರೀದಿ ಕಡಿಮೆಯಾಗಿಲ್ಲ. ಕಳೆದ ವರ್ಷವೂ ಕೊವಿಡ್ ನಿಂದಾಗಿ ದೀಪಾವಳಿ ಸಂಭ್ರಮ ಇರಲಿಲ್ಲ. ಹೀಗಾಗಿ ಈ ಬಾರಿ ಜನರು ಹಬ್ಬವನ್ನು ಭರ್ಜರಿಯಾಗಿ ಆಚರಿಸಲು ಮುಂದಾಗಿದ್ದಾರೆ. ನಗರದ ಕಳೆ ತ್ರಿಮೂರ್ತಿ ಥಿಯೇಟರ್ ಬಳಿಯ ಅಂಗಡಿಗಳಲ್ಲಿ ಪಟಾಕಿ ಅಂಗಡಿಗಳು ರಾರಾಜಿಸುತ್ತಿದ್ದು, ಸಾರ್ವಜನಿಕರು ಪಟಾಕಿ ಖರೀದಿಗೆ ಮುಗಿ ಬಿದ್ದಿರುವುದು ಕಂಡು ಬಂದಿದೆ. ಏನೇ ಆಗಲಿ ಸಾರ್ವಜನಿಕರು ಪಟಾಕಿ ಹಚ್ಚುವ ವೇಳೆ ಎಚ್ಚರಿಕೆಯಿಂದ ಇರುವುದು ಉತ್ತಮ. ಪ್ರತೀ ವರ್ಷವೂ ಪಟಾಕಿಯಿಂದ ನಾನಾ ರೀತಿಯ ಅನಾಹುತಗಳು ಸಂಭವಿಸುತ್ತಿವೆ. ಹೀಗಾಗಿ ಪಟಾಕಿ ಹಚ್ಚುವ ವೇಳೆ ಎಚ್ಚರದಿಂದಿರುವುದು ಅಗತ್ಯವಾಗಿದೆ. ವರದಿ: ಮಂಜು ಗುರುಗದಹಳ್ಳಿ.
ಮಧುಗಿರಿ: ದಲಿತರು ದುಡ್ಡಿನ ಆಮಿಷಕ್ಕೆ ಬಿಜೆಪಿಗೆ ಸೇರುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ವಿರೋಧಿಸಿ ಮಧುಗಿರಿ ತಾಲೂಕು ಭಾರತೀಯ ಜನತಾ ಪಾರ್ಟಿಯ ಮುಖಂಡರು ಹಾಗೂ ಮಧುಗಿರಿ ಎಸ್ ಸಿ ಮೋರ್ಚಾ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಧುಗಿರಿಯ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ರವಿ ಕುಮಾರ್, ದುಡ್ಡಿನ ಆಮಿಷಕ್ಕೆ ದಲಿತರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ಹೇಳಿಕೆ ನೀಡಿದರೆ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಅವರು ಎಚ್ಚರಿಕೆ ನೀಡಿದರು. ಸಿದ್ದರಾಮಯ್ಯನವರು ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯಬೇಕು. ಇಲ್ಲವಾದರೆ, ಅವರ ಕ್ಷೇತ್ರದಲ್ಲಿ ಕೂಡ ದಲಿತರು ಪ್ರತಿಭಟನೆ ನಡೆಸಲಿದ್ದಾರೆ. ನೀವು ಸ್ಪರ್ಧಿಸುವ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯಲ್ಲಿ ನಿಮಗೆ ದಲಿತರು ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಧುಗಿರಿ ತಾಲೂಕು ಬಿಜೆಪಿ ಅಧ್ಯಕ್ಷರಾದ ನರಸಿಂಹಮೂರ್ತಿ ಹಾಗೂ ಜಿಲ್ಲಾ ಬಿಜೆಪಿ ಪಕ್ಷದ ಉಪಾಧ್ಯಕ್ಷರಾದ ಸುರೇಶ್ ಹಾಗೂ ಮಧುಗಿರಿಯ…
ಗುಬ್ಬಿ: ತಾಲೂಕು ಸಿ.ಎಸ್.ಪುರ ಠಾಣೆಯ ಪಿ.ಎಸ್.ಐ ಸೋಮಶೇಖರ್.ಎಸ್ ಮತ್ತು ಮುಖ್ಯ ಪೇದೆ ನಯಾಜ್ ಅಹಮ್ಮದ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಳೆದ 22ರಂದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಿ.ಎಸ್.ಪುರ ಠಾಣೆಯಲ್ಲಿ ಚಂದ್ರಣ್ಣ ಅವರ ಮೇಲೆ ದೂರು ದಾಖಲಾಗಿದ್ದು, ಇದರ ವಿಚಾರವಾಗಿ ಚಂದ್ರಣ್ಣ ಅವರ ಕ್ವಿಡ್ ಕಾರ್ ಅನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ಚಂದ್ರಣ್ಣ ಅವರು ಕೋರ್ಟ್ ನಲ್ಲಿ ಜಾಮೀನು ಪಡೆದಿದ್ದರು. ನಂತರ ಕಾರ್ ಅನ್ನು ಬಿಡುಗಡೆ ಮಾಡಲು ಪಿ.ಎಸ್.ಐ ಸೋಮಶೇಖರ್ ಅವರು ಮುಖ್ಯ ಪೇದೆ ನಯಾಜ್ ಅಹಮ್ಮದ್ ಅವರ ಮಧ್ಯಸ್ಥಿಕೆಯಲ್ಲಿ 28 ಸಾವಿರಕ್ಕೆ ವಶ ಪಡಿಸಿಕೊಂಡಿದ್ದ ಕಾರು ಬಿಡುಗಡೆ ಮಾಡಲು ಒಪ್ಪಂದ ಮಾಡಿ 12 ಸಾವಿರ ಮುಂಗಡ ಹಣ ಪಡೆಯಲಾಗಿತ್ತು. ಬುಧವಾರವಾದ ಇಂದು ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಬಾಕಿ ಉಳಿಕೆ ಹಣ 16 ಸಾವಿರ ಪಡೆಯುವ ವೇಳೆ ತುಮಕೂರಿನ ಎಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಸಿ ಎಸ್ ಪುರ ಪೋಲಿಸ್ ಠಾಣೆಯಲ್ಲಿ ಇದು ಎರಡನೇ ಪ್ರಕರಣವಾಗಿದ್ದು ಈ…