Author: admin

ತಿಪಟೂರು: ನಗರದ ಹೊರವಲಯದ ಗಾಂಧಿನಗರದ ಬಳಿ ಇರುವ ಕೃಷ್ಣಮೂರ್ತಿ ಎಂಬುವವರಿಗೆ ಸೇರಿದ ತೋಟದ ಬಾವಿಯೊಂದಕ್ಕೆ ಇಂದು ಬೆಳಗ್ಗೆ ಚಿರತೆ ಬಿದ್ದಿರುವ ಘಟನೆ ನಡೆದಿದೆ. ಶನಿವಾರ ಬೆಳಿಗ್ಗೆ ತೋಟದ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾವಿಯೊಳಗೆ ಚಿರತೆ ಬಿದ್ದಿರುವುದು ಪತ್ತೆಯಾಗಿದೆ. ಬಾವಿಯೊಳಗೆ ಬಿದ್ದಿರುವ ಚಿರತೆಯನ್ನು ಕಂಡು ಸ್ಥಳೀಯರು ಮತ್ತು ತೋಟದ ಮಾಲೀಕರು ಆತಂಕಕ್ಕೊಳಗಾಗಿದ್ದಾರೆ. ಚಿರತೆಯನ್ನು ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಚಿರತೆ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ, ಮಾಹಿತಿ ನೀಡಿ ಹಲವು ಗಂಟೆಗಳಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಮಧ್ಯಾಹ್ನವಾದರೂ ಚಿರತೆಯನ್ನು ರಕ್ಷಿಸುವ ಅಥವಾ ಹಿಡಿಯುವ ಕಾರ್ಯಾಚರಣೆ ಆರಂಭಿಸದ ಕಾರಣ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿರತೆ ಬಾವಿಯಿಂದ ಮೇಲೆ ಬಂದರೆ ಅಪಾಯ ಸಂಭವಿಸಬಹುದು ಎಂಬ ಭೀತಿಯಲ್ಲಿರುವ ಜನರು, ಕೂಡಲೇ ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ…

Read More

ಬಹಳ ಹಿಂದೆ ಸೂರ್ಯಕೇತು ಎಂಬ ವ್ಯಕ್ತಿಯಿದ್ದ. ಇವನು ತುಂಬಾ ಬಡವ ಮತ್ತು ಮಹಾನ್ ದೈವಭಕ್ತ. ದೇವರ ಧ್ಯಾನಕ್ಕೆ ಕುಳಿತು ಬಹಳ ಹೊತ್ತು ಧ್ಯಾನ ಮಾಡಿ ನಂತರ ಸಿಕ್ಕ ಕೆಲಸ ಮಾಡಿಕೊಂಡು ಬಂದ ಹಣದಿಂದ ಜೀವನ ನಡೆಸುತ್ತಿದ್ದ. ಒಂದು ದಿನ ಅವನಿಗೆ ತಾನೂ ಕೂಡ ಶ್ರೀಮಂತನಾಗಬೇಕು ಎಂದು ಆಸೆ ಪಟ್ಟ ಅದಕ್ಕಾಗಿ ಯೋಚಿಸಿದ ದೇವರಲ್ಲಿ ಬೇಡಿದರೆ ತಾನೇ ದೇವರು ನಮಗೆ ಬೇಡಿದ್ದು ನೀಡುವುದು, ನಾವು ಏನನ್ನೂ ಕೇಳಿಕೊಳ್ಳದಿದ್ದರೆ ನಮ್ಮ ಮೊರೆ ಅವನಿಗೆ ಹೇಗೆ ತಿಳಿಯುತ್ತದೆ ಎಂದು ಕೊಂಡು ಅಂದು ಬೆಳಗ್ಗೆ ಬೇಗ ಎದ್ದವನು ಬೇಗ ಸ್ನಾನ ಮುಗಿಸಿ ಧ್ಯಾನ ಮಾಡುತ್ತಾ ಅಮ್ಮಾ ದೇವಿ ಇಂದು ನನಗೆ ನಿಧಿ ಸಿಗುವಂತೆ ಮಾಡು ಎಂದು ಕೇಳಿಕೊಂಡು ಅಂದು ಕೆಲಸ ಹುಡುಕಿಕೊಂಡು ಹೊರಟ, ಅವನ ಮುಗ್ದ ಬೇಡಿಕೆಗೆ ಮನ ಸೋತ ದೇವಿ ತನ್ನ ಸೇವಕರಾದ ಭವ ಮತ್ತು ವಿಭ ಎಂಬುವರನ್ನು ಕಳುಹಿಸಿ ಸೂರ್ಯ ಕೇತುವಿಗೆ ನಿಧಿ ಸಿಗುವಂತೆ ಮಾಡಿಬನ್ನಿ ಎಂದು ಕಳುಹಿಸಿದರು. ಭವನು ಸೂರ್ಯಕೇತು ಬರವು ಜಾಗದಲ್ಲಿ…

Read More

ತುರುವೇಕೆರೆ: ಮುಂಬರುವ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ನಾನೇ ಅಭ್ಯರ್ಥಿ ಇದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು  ತುರುವೇಕೆರೆ ಮಾಜಿ ಶಾಸಕ ಮಸಾಲ ಜಯರಾಮ್ ಹೇಳಿದ್ದಾರೆ. ತುರುವೇಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಮುಂಬರುವ ವಿಧಾನ ಸಭಾ ಕ್ಷೇತ್ರ ಚುನಾವಣೆ ಟಿಕೆಟ್ ಗಾಗಿ ಈಗಲೇ ಸ್ಪರ್ಧೆ ಆರಂಭಗೊಂಡಿದೆ. ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಜೆಡಿಎಸ್  ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೊಡ್ಡಘಟ್ಟ ಚಂದ್ರೇಶ್ ನಡುವೆ ಬಿಜೆಪಿ –ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸ್ಪರ್ಧೆ ಸೃಷ್ಟಿಯಾದ ಬೆನ್ನಲ್ಲೇ ತುರುವೇಕೆರೆ ಮಾಜಿ ಶಾಸಕ ಮಸಾಲ ಜಯರಾಮ್ ಕೂಡ ಅಖಾಡಕ್ಕಿಳಿದಿದ್ದು,  ತುರುವೇಕೆರೆ ತಾಲೂಕಿನ ಮಾಯಸಂದ್ರ ರಸ್ತೆಯಲ್ಲಿರುವ ಚಿಕ್ಕೋನಹಳ್ಳಿ ಗೇಟ್ ಬಳಿಯಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಎಲ್ಲರಿಗೂ ತಿಳಿದಿರುವ ವಿಚಾರ, ಆದರೆ ಕೆಲವರು ತಾಲೂಕಿನಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಸ್ವಯಂ ಘೋಷಿತ ಹೇಳಿಕೆಯನ್ನು…

Read More

ತುಮಕೂರು: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪ ಅವೈಜ್ಞಾನಿಕವಾಗಿ ನಿರ್ಮಿಸಲಾಗಿರುವ ರಸ್ತೆ ಉಬ್ಬುಗಳು (ಹಂಪ್‌ ಗಳು) ಸಾರ್ವಜನಿಕರ ಪಾಲಿಗೆ ಮೃತ್ಯುಕೂಪಗಳಾಗಿ ಪರಿಣಮಿಸಿವೆ. ನಿನ್ನೆ ರಾತ್ರಿ ಸಂಭವಿಸಿದ ಅಪಘಾತವೊಂದರಲ್ಲಿ, ಅತಿಯಾದ ಎತ್ತರದ ಹಂಪ್ ಮೇಲೆ ಆಟೋ ರಿಕ್ಷಾ ಹಾರಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಮತ್ತು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮಸ್ಯೆಗಳ ಸರಮಾಲೆ: ಈ ಭಾಗದಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸುವಾಗ ಯಾವುದೇ ವೈಜ್ಞಾನಿಕ ಮಾನದಂಡಗಳನ್ನು ಅನುಸರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಂಪ್‌ಗಳಿಗೆ ಎಚ್ಚರಿಕೆ ನೀಡುವ ಬಣ್ಣದ ಪಟ್ಟಿಗಳನ್ನು (Reflective paint) ಬಳಿದಿಲ್ಲ ಮತ್ತು ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರ ಜೊತೆಗೆ, ಬೀದಿ ದೀಪಗಳ ವ್ಯವಸ್ಥೆ ಇಲ್ಲದಿರುವುದು ರಾತ್ರಿಯ ಸಂಚಾರವನ್ನು ಇನ್ನಷ್ಟು ದುಸ್ತರಗೊಳಿಸಿದೆ. ಹಗಲಿನಲ್ಲಿ ರಸ್ತೆ ಬದಿಯ ಮರದ ನೆರಳು ಹಂಪ್‌ಗಳ ಮೇಲೆ ಬೀಳುವುದರಿಂದ ವಾಹನ ಸವಾರರಿಗೆ ರಸ್ತೆ ಉಬ್ಬುಗಳು ಗೋಚರಿಸದೆ ಸರಣಿ ಅಪಘಾತಗಳು ಸಂಭವಿಸುತ್ತಿವೆ. ಸರಿಯಾದ ಡಿವೈಡರ್ ಇಲ್ಲದಿರುವುದು ಸಂಚಾರ ದಟ್ಟಣೆ ಮತ್ತು ಗೊಂದಲಕ್ಕೆ…

Read More

ತುಮಕೂರು: ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಗ್ರಾಣಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ಭೇಟಿ ನೀಡಿ, ಆಹಾರ ಪದಾರ್ಥಗಳ ಸಂರಕ್ಷಣೆ ಮತ್ತು ಗುಣಮಟ್ಟವನ್ನು ಪರಿಶೀಲಿಸಿದರು. ಪರಿಶೀಲನೆಯ ಬಳಿಕ ಮಾತನಾಡಿದ ಅವರು, “ಮಕ್ಕಳ ಆರೋಗ್ಯ ಮತ್ತು ಭವಿಷ್ಯ ಉಗ್ರಾಣದಲ್ಲಿರುವ ಪ್ರತಿಯೊಂದು ಧಾನ್ಯದ ಚೀಲದ ಮೇಲೂ ಅವಲಂಬಿತವಾಗಿದೆ. ಆದ್ದರಿಂದ ಗುಣಮಟ್ಟದ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಬಾರದು,” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತೀ ಸೂಕ್ಷ್ಮ ವರ್ಗ (Sensitive Category): ಶಾಲಾ ಮತ್ತು ಅಂಗನವಾಡಿ ಮಕ್ಕಳಿಗೆ ಸರಬರಾಜು ಮಾಡುವ ಆಹಾರವನ್ನು ‘ಅತೀ ಸೂಕ್ಷ್ಮ ವರ್ಗ’ ಎಂದು ಪರಿಗಣಿಸಬೇಕು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 (FSSAI) ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಆಶಯದಂತೆ ಈ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಅವರು ತಿಳಿಸಿದರು. ಸರ್ಕಾರದ ಕರ್ತವ್ಯ: ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಪ್ಪಂದಕ್ಕೆ (UNCRC) ಭಾರತ ಬದ್ಧವಾಗಿದೆ. ಅದರಂತೆ ಮಕ್ಕಳಿಗೆ ಸುರಕ್ಷಿತ ಮತ್ತು…

Read More

ತುರುವೇಕೆರೆ: ಕಂದಾಯ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ತುರುವೇಕೆರೆ ತಾಲೂಕಿನ ತಹಶೀಲ್ದಾರ್ ಕುಂಞಿ ಅಹಮದ್ ಹಾಗೂ ಭೂ ದಾಖಲೆಗಳ ಸಹಾಯಕ ನಿರ್ದೇಶಕ (ADLR) ಸಿ. ಜಗದೀಶ್ ಅವರು ರಾಜ್ಯ ಸರ್ಕಾರದ ಅಭಿನಂದನಾ ಪತ್ರಕ್ಕೆ ಭಾಜನರಾಗಿದ್ದಾರೆ. ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಣೆ, ದರಖಾಸ್ತು ಪೋಡಿ (1.5) ತಂತ್ರಾಂಶದ ಬಳಕೆ ಹಾಗೂ ಇ-ಪೌತಿ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಈ ಗೌರವವನ್ನು ನೀಡಿದೆ. ರಾಜ್ಯಾದ್ಯಂತ ಆಯ್ದ ಅಧಿಕಾರಿಗಳ ಪಟ್ಟಿಯಲ್ಲಿ ತುರುವೇಕೆರೆ ತಾಲೂಕಿನ ಈ ಇಬ್ಬರು ಅಧಿಕಾರಿಗಳ ಹೆಸರು ಪ್ರಕಟವಾಗಿರುವುದು ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ. ಅಧಿಕಾರಿಗಳ ಈ ಸಾಧನೆಗೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರುದ್ರೇಶ್ ಎಚ್.ಡಿ. ಹಾಗೂ ತುರುವೇಕೆರೆ ತಾಲೂಕು ಅಧ್ಯಕ್ಷ ದೊರೆಸ್ವಾಮಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಅಭಿನಂದನಾ ಪತ್ರಕ್ಕೆ ಆಯ್ಕೆಯಾದ ತಹಶೀಲ್ದಾರ್ ಕುಂಞಿ ಅಹಮದ್ ಮತ್ತು ಭೂ…

Read More

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜೋಸೈಮನ್  ನಿಧನರಾಗಿದ್ದಾರೆ. ಹೃದಯಾಘಾತದಿಂದ  ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ  ಜೋಸೈಮನ್ ಕೊನೆಯುಸಿರೆಳೆದಿದ್ದಾರೆ. ಫಿಲ್ಮ್ ಚೇಂಬರ್‌ನಲ್ಲಿ ಇದ್ದಾಗಲೇ ಜೋಸೈಮನ್‌ ಗೆ ಹೃದಯಾಘಾತವಾಗಿದೆ. ಕೂಡಲೆೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಜೋಸೈಮನ್ ನಿಧನರಾಗಿದ್ದಾರೆ. ವಿಷ್ಣುವರ್ಧನ್‌ ಗೆ ‘ಸಾಹಸಸಿಂಹ’ ಬಿರುದು ನೀಡಿದ್ದ ಜೋಸೈಮನ್, ವಿಷ್ಣು, ಅಂಬರೀಶ್ ಸೇರಿದಂತೆ ಹಲವು ಖ್ಯಾತ ನಟರ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದರು. ನಿರ್ದೇಶಕ, ನಟ ಹಾಗೂ ಗೀತರಚನೆಕಾರರಾಗಿ ಅವರು ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸೇವೆ ಸಲ್ಲಿಸಿ, ತಮ್ಮದೇ ವಿಶಿಷ್ಟ ಛಾಪು ಮೂಡಿಸಿದ್ದರು. 1977ರಲ್ಲಿ ‘ಒಂದು ಪ್ರೇಮದ ಕತೆ’ ಚಿತ್ರದ ಮೂಲಕ ಜೋ ಸೈಮನ್ ನಿರ್ದೇಶನ ಕ್ಷೇತ್ರಕ್ಕೆ ಕಾಲಿಟ್ಟರು. ಮೊದಲ ಚಿತ್ರವೇ ಪ್ರೇಕ್ಷಕರ ಗಮನ ಸೆಳೆದಿದ್ದು, ನಂತರ ಅವರು ಆಕ್ಷನ್ ಹಾಗೂ ಪ್ರೇಮಕತೆಗಳ ಮೂಲಕ ಜನಪ್ರಿಯತೆ ಗಳಿಸಿದರು. ವಿಶೇಷವಾಗಿ ಆಕ್ಷನ್ ಶೈಲಿಯ ಚಿತ್ರಗಳಲ್ಲಿ ಅವರದೇ ಆದ ಸ್ಟೈಲ್ ಕಂಡುಬರುತ್ತಿತ್ತು. ಸಹೋದರರ ಸವಾಲ್(1977), ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ…

Read More

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ದಾಖಲೆಗಳು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಾವು ಸಕಾರಾತ್ಮಕ ಟೀಕೆಗಳಿಗೆ ಯಾವಾಗಲೂ ಮುಕ್ತರಾಗಿದ್ದೇವೆ, ಆದರೆ ಸುಳ್ಳು ಸುದ್ದಿಗಳ ಮೂಲಕ ನಡೆಯುವ ಅಪಪ್ರಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಅವರು ಕಡಕ್ ಎಚ್ಚರಿಕೆ ನೀಡಿದ್ದಾರೆ. ಘಟನೆಯ ಹಿನ್ನೆಲೆ: ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ. ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ ಎಂಬ ನಕಲಿ ಅಧಿಕೃತ ಟಿಪ್ಪಣಿಯೊಂದು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಮುಖ್ಯಮಂತ್ರಿಗಳ ಕಚೇರಿಯ ಹೆಸರಿನಲ್ಲೇ ಈ ನಕಲಿ ಪತ್ರವನ್ನು ಸೃಷ್ಟಿಸಲಾಗಿತ್ತು. ಸಿಎಂ ಪ್ರತಿಕ್ರಿಯೆ: ಈ ಕುರಿತು ಎಕ್ಸ್ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, “ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯನ್ನು ಸೃಷ್ಟಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ಈಗಾಗಲೇ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು,…

Read More

ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ ಗಡಿಗಳನ್ನು ಗುರುತಿಸುವುದಿಲ್ಲ, ಆದ್ದರಿಂದ ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ಕೂಡ ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು” ಎಂದು ಅವರು ಪ್ರತಿಪಾದಿಸಿದ್ದಾರೆ. ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (IISc) ಆಯೋಜಿಸಲಾಗಿದ್ದ ‘ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತೆ ಸಮ್ಮೇಳನ-2026’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಭದ್ರತೆಯ ಭಾಗ: ಅಣೆಕಟ್ಟುಗಳ ಸುರಕ್ಷತೆಯು ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ, ಅದು ರಾಷ್ಟ್ರೀಯ ಭದ್ರತೆಯ ಅವಿಭಾಜ್ಯ ಅಂಗವಾಗಿದೆ. ಹವಾಮಾನ ಬದಲಾವಣೆ, ಭೂಕಂಪನ ಮತ್ತು ಹೂಳು ತುಂಬುವಿಕೆಯಂತಹ ಸವಾಲುಗಳನ್ನು ನಾವು ಎದುರಿಸುತ್ತಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಹಳೆಯ ಅಣೆಕಟ್ಟುಗಳ ಸವಾಲು: ಭಾರತವು ವಿಶ್ವದ ಮೂರನೇ ಅತಿದೊಡ್ಡ ಅಣೆಕಟ್ಟುಗಳನ್ನು ಹೊಂದಿರುವ ದೇಶವಾಗಿದ್ದು, ಒಟ್ಟು 6,628 ಅಣೆಕಟ್ಟುಗಳಿವೆ. ಕರ್ನಾಟಕದಲ್ಲಿ 231 ಅಣೆಕಟ್ಟುಗಳಿದ್ದು, ದೇಶದಲ್ಲೇ 6ನೇ ಸ್ಥಾನದಲ್ಲಿದೆ. ವಿಶೇಷವೆಂದರೆ, ಈ ಪೈಕಿ ಶೇ. 70 ರಷ್ಟು ಅಣೆಕಟ್ಟುಗಳು 25 ವರ್ಷಗಳಿಗಿಂತ ಹಳೆಯದಾಗಿದ್ದು, ಇವುಗಳ ಆಧುನೀಕರಣ ಮತ್ತು…

Read More

ಸರಗೂರು:  ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸ್ವಾಮಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದುರವರ 38 ನೇ ಹುಟ್ಟುಹಬ್ಬದ ಅಂಗವಾಗಿ ವೀರಶೈವ ಲಿಂಗಾಯತ ಕಾಂಗ್ರೆಸ್ ಬಳಗ ಸರಗೂರು ಘಟಕದ ವತಿಯಿಂದ ಗುರುವಾರದಂದು ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ, ಅಣ್ಣಯ್ಯ ಸ್ವಾಮಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಪ್ರಭುಸ್ವಾಮಿ ಮಾತನಾಡಿದರು. ಮುಖಂಡರಾದ ಅಣ್ಣಯ್ಯ ಸ್ವಾಮಿ, ಡಿ.ಸಿ.ಸಿದ್ದಪ್ಪ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಾದಪ್ಪ, ಗುರುಸ್ವಾಮಿ, ನಂಜಪ್ಪ, ಜಯಕುಮಾರ್, ಪ್ರಭುಸ್ವಾಮಿ, ಬಸವರಾಜು, ಚನ್ನಮಲಪ್ಪ, ಮಹೇಶ್, ಮಣಿ, ಕೆಂಡಗಣ್ಣಸ್ವಾಮಿ, ಮಾದಪ್ಪ ಬಿ., ಗುರುಸ್ವಾಮಿ ಎಂ., ಯೋಗೇಶ, ಮಂಜುನಾಥ್, ಮಂಜಣ್ಣ, ಎಂ.ಮುತ್ತಣ್ಣ, ಬ್ರಮಣ್ಣ,  ನೀಲಕಂಠ, ಸಿದ್ದಪ್ಪ, ಮಹೇಶ್, ಸುರೇಶ್, ನಂದೀಶ್, ಬಸವರಾಜ್ ಎಂ.ಎನ್., ವಿಕೇಶ್, ಗಿರೀಶ್, ಷಬೇಂದ್ರಪ್ಪ, ಪ್ರತಾಪ್, ಮಲ್ಲು, ಮಹೇಶ್, ರಾಜಶೇಖರ್, ಸ್ವಾಮಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More