Author: admin

ಜನಪ್ರಿಯ ಪ್ರವಾಸಿ ತಾಣ ನಂದಿ ಗಿರಿಧಾಮವನ್ನು ಪ್ರವಾಸೋದ್ಯಮ ತಾಣವಾಗಿ ಬೆಳೆಸುವ ಉದ್ದೇಶದೊಂದಿಗೆ ರೂಪಿಸಿರುವ ರೋಪ್-ವೇ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.ನಂದಿ ಬೆಟ್ಟ ಕೆಲವೇ ವರ್ಷಗಳಲ್ಲಿ ಅತ್ಯಂತ ಆಕರ್ಷಣೀಯ ಪ್ರವಾಸಿ ಸ್ಥಳವಾಗಿ ಅಭಿವೃದ್ಧಿಯಾಗಲಿದೆ. ಇದು ಜಿಲ್ಲೆಯ ಆರ್ಥಿಕಾಭಿವೃದ್ಧಿಯಲ್ಲಿ ಮಹತ್ವದ ಮೈಲುಗಲ್ಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಿಂದ 60 ಕಿ.ಮೀ. ದೂರದಲ್ಲಿರುವ ನಂದಿ ಗಿರಿಧಾಮ ಆಕರ್ಷಣೀಯ ಪ್ರವಾಸಿ ತಾಣವಾಗಿದ್ದು, ಪ್ರವಾಸಿಗರಿಗೆ ವಾರಾಂತ್ಯದಲ್ಲಿ ಭೇಟಿ ನೀಡಲು ಸೂಕ್ತ ಸ್ಥಳವಾಗಿದೆ. ಪಾರಂಪರಿಕ ಸ್ಮಾರಕ, ಕೋಟೆ, ಮನಸ್ಸಿಗೆ ಮುದ ನೀಡುವ ಪರಿಸರದಿಂದಾಗಿ ಇದು ಪ್ರವಾಸಿಗರ ಆಕರ್ಷಣೆ ಕೇಂದ್ರಬಿಂದುವಾಗಿದೆ. ಈ ಭಾಗದಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಿದರೆ ಬೇರೆ ದೇಶಗಳಿಂದಲೂ ಪ್ರವಾಸಿಗರನ್ನು ಸೆಳೆಯಬಹುದು ಎಂಬ ಅಂಶ ಗಮನಕ್ಕೆ ಬಂದಿತ್ತು. ಈ ನಿಟ್ಟಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ DBFOT ಮಾದರಿಯಲ್ಲಿ ರೋಪ್-ವೇ ನಿರ್ಮಿಸುವ ಯೋಜನೆಯನ್ನು ರೂಪಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 93.40 ಕೋಟಿ ರೂ. ವೆಚ್ಚದ ಪ್ರವಾಸೋದ್ಯಮ…

Read More

ವಿದೇಶದಿಂದ ಕೊರಿಯರ್ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪಾರ್ಸಲ್ ತಪಾಸಣೆ ನಡೆಸಿದ ಕಸ್ಟಮ್ಸ್‍ನ ಕೇಂದ್ರೀಯ ಗುಪ್ತಚರ ಘಟಕದ ಅಧಿಕಾರಿಗಳು ಬರೋಬ್ಬರಿ 9.82 ಕೋಟಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ಮತ್ತು ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ತೀವ್ರ ವಿಚಾರ ಣೆಗೊಳಪಡಿಸಲಾಗಿದೆ. ವಿದೇಶದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೊರಿಯಲ್ ಮೂಲಕ ಎರಡು ಪಾರ್ಸಲ್ ಬಂದಿದೆ. ಕಸ್ಟಮ್ಸ್ ಅಧಿಕಾರಿಗಳಿಗೆ ಈ ಬಗ್ಗೆ ಅನುಮಾನ ಬಂದಿದೆ. ತಕ್ಷಣ ಪಾರ್ಸಲ್ ತೆಗೆದು ತಪಾಸಣೆ ನಡೆಸಿದಾಗ 7 ಕೋಟಿ ಮೌಲ್ಯದ ಮಾದಕ ವಸ್ತು ಹೆರಾಯಿನ್ ಮತ್ತು 2.82 ಕೋಟಿ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಈ ಪಾರ್ಸಲ್‍ಗಳು ಬೆಲ್ಜಿಯಂ ಮತ್ತು ಜಾಂಬಿಯಾದಿಂದ ದುಬೈಗೆ ಬಂದು ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿರುವ ಮಾಹಿತಿ ಲಭ್ಯವಾಗಿದ್ದು, ತನಿಖೆ ಮುಂದುವರೆದಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು ರಸ್ತೆ ಫ್ಲೈ ಓವರ್ ಕಳಪೆ ಕಾಮಗಾರಿಯಿಂದ ಶಿಥಿಲಗೊಂಡು ದುರಸ್ತಿಯಾಗುತ್ತಿರುವ ಬೆನ್ನಲ್ಲೇ ಗೊರಗುಂಟೆಪಾಳ್ಯ ಬಳಿಯ ಎಂಇಎಸ್ ಫ್ಲೈ ಓವರ್‍ನಲ್ಲಿ ಬೇರಿಂಗ್ ಬಿರುಕು ಕಾಣಿಸಿಕೊಂಡಿದೆ. ಕಳೆದ ಐದು ವರ್ಷಗಳ ಹಿಂದಷ್ಟೇ ನಿರ್ಮಿಸಿರುವ ಈ ಮೇಲ್ಸೇತುವೆ ಬೇರಿಂಗ್‍ನಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರಲ್ಲಿ ಆತಂಕ ಎದುರಾಗಿದೆ. 2017ರಲ್ಲಿ ರೈಲ್ವೆ ಇಲಾಖೆಯಿಂದ ಎಂಇಎಸ್ ಫ್ಲೈ ಓವರ್ ನಿರ್ಮಿಸಲಾಗಿತ್ತು. 2020ರಲ್ಲಿ ನಿರ್ವಹಣೆಗೆಂದು ಸೇತುವೆಯನ್ನು ಬಿಬಿಎಂಪಿಗೆ ರೈಲ್ವೆ ಇಲಾಖೆ ಹಸ್ತಾಂತರಿಸಿತ್ತು. 2021ರಲ್ಲಿ ಬೇರಿಂಗ್‍ನಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿತ್ತು. ಬೇರಿಂಗ್ ಸವೆದಿರುವುದು ಮತ್ತು ಕಾಂಕ್ರಿಟ್ ಎಕ್ಸ್‍ಪೆನ್ಷನ್ ಜೋಡಣೆಯಲ್ಲಿ ಬಿರುಕು ಉಂಟಾಗಿರುವುದು ಕಂಡುಬಂದಿದೆ. ಕೂಡಲೇ ಈ ಎರಡೂ ದೋಷಗಳನ್ನು ಸರಿಪಡಿಸದಿದ್ದರೆ ಅಪಾರ ಪ್ರಮಾಣದ ಹಾನಿ ಎದುರಿಸಬೇಕಾಗುತ್ತದೆ ಎಂದು ವರದಿ ನೀಡಲಾಗಿದೆ.ಬಿಬಿಎಂಪಿ ನಡೆಸಿದ ಗುಣಮಟ್ಟದ ಮೌಲ್ಯಮಾಪನದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಗುಣಮಟ್ಟ ಮೌಲ್ಯಮಾಪನದಲ್ಲಿ ವಾಹನಗಳ ಓಡಾಟಕ್ಕೆ ಈ ಫ್ಲೈ ಓವರ್ ಯೋಗ್ಯವಿಲ್ಲ ಎಂದು ತಿಳಿದುಬಂದಿದೆ. ತಕ್ಷಣವೇ ವರದಿ ತಯಾರಿಸಿ ದುರಸ್ತಿ ನಡೆಸುವಂತೆ ರೈಲ್ವೆ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿದೆ.…

Read More

ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂಬ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ಸಮಿತಿಗೆ ನಿರ್ದೇಶನ ನೀಡಲಾಗಿದೆ. ಸಮಿತಿಯಲ್ಲಿ ಗೃಹ ಸಚಿವಾಲಯದ ಕಾರ್ಯದರ್ಶಿಗಳು, ಡಿ.ಪಿ.ಎ.ಆರ್. ಕಾರ್ಯದರ್ಶಿ ಹಾಗೂ ಡಿ.ಜಿ.ಪಿ ಅವರು ಸಹ ಇರಲಿದ್ದಾರೆ ಎಂದರು. ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸ್ವಚ್ಛತೆ ಮತ್ತು ಶೌಚಾಲಯ ನಿರ್ವಹಣೆಗೆ ಗುತ್ತಿಗೆ ಅಧಾರದ ಮೇಲೆ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.ಹಿಜಾಬ್ ಪ್ರಕರಣ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಕುರಿತು ರಾಜ್ಯದ ಉಚ್ಛ ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶವನ್ನು ಪಾಲನೆ ಮಾಡಲಾಗುತ್ತಿದೆ. ಮಕ್ಕಳ ನಡುವೆ ವಿಷ…

Read More

ಕೊಪ್ಪಳ: ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ್ ಯೋಜನೆ (3.0) ಅಡಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ವತಿಯಿಂದ ಕೊಪ್ಪಳ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಶಾಲೆ ಬಿಟ್ಟ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಉಚಿತ ಕೌಶಲ್ಯ ತರಬೇತಿಗಳನ್ನು ನೀಡಲು ಸ್ಕಿಲ್ ಹಬ್ ಸೆಂಟರ್ ತೆರೆಯಲಾಗುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು. ಐಟಿ/ಐಟಿಇಎಸ್ ಹಾಗೂ ಆಟೋಮೊಬೈಲ್ಸ್ ಸೆಕ್ಟರ್‌ಗಳಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸರಕಾರಿ ಪದವಿ ಪೂರ್ವ ಕಾಲೇಜು, ಯಲಬುರ್ಗಾದಲ್ಲಿ ಹಾಗೂ ಬ್ಯೂಟಿ ಮತ್ತು ವೆಲ್‌ನೆಸ್ ಹಾಗೂ ಐಟಿ/ಐಟಿಇಎಸ್ ಸೆಕ್ಟರ್‌ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕೊಪ್ಪಳದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ಯಲಬುರ್ಗಾ ಮೊ.ಸಂ: 9964221446, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕೊಪ್ಪಳ, ಮೊ.ಸಂ: 8548016504. ಜಿಲ್ಲಾ ಕೌಶಲ್ಯ…

Read More

ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಯಸಂದ್ರ ಗ್ರಾಮದಲ್ಲಿ “ಗ್ರಾಮಒನ್” ನೂತನ ನಾಗರಿಕ ಸೇವಾ ಕೇಂದ್ರಕ್ಕೆ, ಗ್ರಾಮ ಪಂಚಾಯಿತಿ ‌ಅಧ್ಯಕ್ಷರಾದ ಶ್ರೀಮತಿ ಮಂಗಳಗೌರಮ್ಮಹೊನ್ನಪ್ಪನವರ, ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಸತೀಶ್ ಕುಮಾರ್, ನಾಡಕಚೇರಿ ಉಪತಹಶೀಲ್ದಾರ್ ಗಿರೀಶ್ ರವರ ಅಮೃತಹಸ್ತದಿಂದ ಚಾಲನೆ ನೀಡಲಾಯಿತು. ಈ ವೇಳೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್ ಮಾತನಾಡಿ, ದೇಶದಲ್ಲಿ ಯಾವುದೇ ಪಕ್ಷದ ಸರ್ಕಾರಗಳು ಇರಲಿ, ಜನಪರ ಯೋಜನೆಗಳನ್ನು ಜಾರಿಗೆ ತರುತ್ತೀವೆ. ಎಲ್ಲಾ ಸರ್ಕಾರಗಳು ಸಹ ದೇಶದ ಕ್ರಿಯಾಶೀಲತೆ ಸರ್ಕಾರಗಳಾಗಿದ್ದು, ಗ್ರಾಮೀಣ ಪ್ರದೇಶಗಳಿಗೆ ಹಲವು ರೀತಿಯ ಅಭಿವೃದ್ಧಿ ಯೋಜನೆಗಳನ್ನು ರೂಪಿಸುತ್ತೀವೆ. ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ ತೆರೆದು, ಇದೀಗ ಕಂದಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಗ್ರಾಮ ಒನ್ ನಾಗರೀಕ ಸೇವಾ ಕೇಂದ್ರವನ್ನು ಪ್ರಾರಂಭಿಸಿದೆ. ಈಗಾಗಲೇ ನೆಮ್ಮದಿ ಕೇಂದ್ರವನ್ನು ಸ್ಥಾಪಿಸಿ 35 ಸರ್ಕಾರಿ ಸೇವೆಗಳನ್ನು ನೀಡುತ್ತಿದ್ದು, ಇದೀಗ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ‌ಒನ್ ಕೇಂದ್ರಗಳನ್ನು ನೀಡುವುದರ 56 ಇಲಾಖೆಯ 750ಕ್ಕೂ ಹೆಚ್ಚಿನ ಸರ್ಕಾರಿ  ಸೇವೆಗಳನ್ನು ನೀಡುವುದರ ಮೂಲಕ…

Read More

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆ ಧಾರಣೆಯಲ್ಲಿ ಭಾನುವಾರ ಭಾರೀ ಕುಸಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 51,509 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌(Market)ಗಳಲ್ಲಿ ಇತ್ತೀಚಿನ(19-04-2022)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಅಡಿಕೆ ಗರಿಷ್ಠ ಬೆಲೆ (ಫೆಬ್ರವರಿ 19, 2022) ಕೊಪ್ಪ (ಚಿಕ್ಕಮಗಳೂರು ಜಿಲ್ಲೆ) ರಾಶಿ ಅಡಿಕೆ 45,899 ರೂ. ಚನ್ನಗಿರಿ (ದಾವಣಗೆರೆ ಜಿಲ್ಲೆ) ರಾಶಿ ಅಡಿಕೆ 46,299 ರೂ. ದಾವಣಗೆರೆ (ದಾವಣಗೆರೆ ಜಿಲ್ಲೆ) ರಾಶಿ ಅಡಿಕೆ 46,033…

Read More

ಕೊರಟಗೆರೆ: ಅದೊಂದು ಆಕಸ್ಮಿಕ  ಸಾವು ಅಂತ ಎಲ್ರು ಅಂದುಕೊಂಡಿದ್ರು… ಆದ್ರೆ ಪೊಲೀಸರ ತನಿಖೆಯಲ್ಲಿ ಅಣ್ಣ- ತಂಗಿಯ ಅಸಲಿ ಕಳ್ಳಾಟ ಬಯಲಾಗಿದೆ… ಅಷ್ಟಕ್ಕೂ ಆ ಸ್ಟೋರಿ ನೋಡಿದ್ರೆ  ಛೇ ಇವರೆಂತಾ ಅಣ್ಣ ತಂಗಿ ಅಂತ ಬಾಯಿಗೆ ಬಂದಾಗೆ ನೀವು ಕೂಡಾ ಬೈತಿರಾ…ಅದರ ಡಿಟೈಲ್ಸ್ ಸ್ಟೋರಿ ಇಲ್ಲಿದೆ. ಅವತ್ತು ಜನವರಿ 30 ಬೆಳ್ಳಂಬೆಳಗ್ಗೆ ಕಲ್ಪತರು ನಾಡು ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಸಜ್ಜನರಾವ್  ಬೀದಿಯ ನಿವಾಸಿ 43 ವರ್ಷದ ಸುಮಿತ್ರಮ್ಮ ಸಾವನ್ನಪ್ಪಿದ್ರು… ಏರಿಯಾ ಜನರೆಲ್ಲಾ ಸಾವಿತ್ರಮ್ಮ ಮನೆಯಲ್ಲಿದ್ದ ಸಂಪ್ ಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಅಂದು ಕೊಂಡಿದ್ರು… ಈ ಸಂಬಂಧ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ರು… ಸುಮಿತ್ರಮ್ಮನ ತಿಥಿ ಕಾರ್ಯವು ಸಹ ಮುಗಿದು ಹೋಗಿತ್ತು.. ಆದರೆ ದಿನ ಕಳೆದಂತೆ ಸುಮಿತ್ರಮ್ಮನ ಸಾವಿನ ಬಗ್ಗೆ ಪೊಲೀಸರಿಗೆ ಅನುಮಾನ ಬರೋಕೆ ಶುರುವಾಗಿತ್ತು.. ಅನುಮಾನದ ಬೆನ್ನತ್ತಿದ ಪೊಲೀಸರಿಗೆ ಸಾವಿತ್ರಮ್ಮ ನದು ಆಕಸ್ಮಿಕ ಸಾವಲ್ಲ ಕೊಲೆ ಅನ್ನೋದು ತನಿಖೆ ವೇಳೆ ಕನ್ಪಮ್ ಆಗಿತ್ತು.. ಅಣ್ಣ ತಂಗಿಯಂತಿದ್ದ ಇಬ್ಬರನ್ನ…

Read More

ಬೆಂಗಳೂರು: ಜನವರಿ 26ರಂದು ರಾಯಚೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ  ಬಾಬಾ ಸಾಹೇಬ್ ಅಂಬೇಡ್ಕರರ ಭಾವಚಿತ್ರಕ್ಕೆ ಅಪಮಾನ ಮಾಡಿದ ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ್ ಗೌಡ ನನ್ನು ಕೂಡಲೇ ಕರ್ತವ್ಯ ದಿಂದ ವಜಾಗೊಳಿಸಿ , ಕಾನೂನು ಕ್ರಮ ಕ್ರಮಕ್ಕೆ ಒತ್ತಾಯಿಸಿ, ಜನಾಂದೋಲನ ಜಾಥಾ ನಡೆಸಲಾಯಿತು. ದಲಿತಪರ ಸಂಘಟನೆಗಳು ಹಾಗೂ ಬಹುಜನ ಸಮಾಜ ಪಾರ್ಟಿ ಸೇರಿದಂತೆ ಹಲವು ಸಂವಿಧಾನ ಪರ ಸಂಘಟನೆಗಳು, ಬೆಂಗಳೂರು ನಗರದ ಕೆಂಪೇಗೌಡ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ನಡೆದ ಜನಾಂದೋಲನ ಜಾಥಾದಲ್ಲಿ ಪಾಲ್ಗೊಂಡರು.  ವರದಿ: ರಾಮಪ್ಪ ಸಿ.ಕೆ.ಪುರ., ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ:  ಪಾವಗಡ ಪಟ್ಟಣದ ಸರಿಹದ್ದುಗಳಲ್ಲಿ ಶ್ರೀ ಶನಿಮಹಾತ್ಮಾ ಶ್ರೀ ಕ್ಷೇತ್ರ ಸುಸ್ವಾಗತ ಎಂಬ ಸ್ವಾಗತ ಕಮಾನುಗಳನ್ನು ನಿರ್ಮಿಸುವಂತೆ ಎಸ್.ಎಸ್. ಕೆ. ಆಡಳಿತ ಮಂಡಳಿ ಅಧ್ಯಕ್ಷರಾದ ಕೆ.ವಿ. ಶ್ರೀನಿವಾಸ್ ಹಾಗೂ ಕಾರ್ಯದರ್ಶಿ ಸುಬ್ಬ ನರಸಿಂಹ ರವರಿಗೆ ಹೆಲ್ಪ್ ಸೊಸೈಟಿ ಮನವಿ ಪತ್ರ ವನ್ನು ಸಲ್ಲಿಸಿತು. ಕಲ್ಪತರು ನಾಡು ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಸುಪ್ರಸಿದ್ದ ಶ್ರೀ ಶನಿಮಹಾತ್ಮಾ ಶ್ರೀ ಕ್ಷೇತ್ರಕ್ಕೆ ಪ್ರತಿನಿತ್ಯ ಹಾಗೂ ಶ್ರಾವಣ ಮಾಸಗಳಲ್ಲಿ ಲಕ್ಷಾಂತರ ಭಕ್ತಾ ದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದೂ ಪುಣ್ಯ ಕ್ಷೇತ್ರವಾಗಿ ಪ್ರಸಿದ್ದಿ ಹೊಂದಲಾಗಿದ್ದು,  ಶನಿಮಹಾತ್ಮಾ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳನ್ನು ಸ್ವಾಗತಿಸುವ ಕೆಲಸ ತಾಲ್ಲೂಕಿನ ಸಮಸ್ತ ಜನತೆಯ ಒತ್ತಾಸೆ ಹಾಗೂ ಶಿಷ್ಯಚಾರ ಆಗಿರುವುದರಿಂದ ಪಟ್ಟಣದ ಸರಹದ್ದಿನ ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಶನಿಮಹಾತ್ಮಾ ಶ್ರೀ ಕ್ಷೇತ್ರ ಪಾವಗಡ ಸುಸ್ವಾಗತ ಎಂಬ ಕಮಾನುಗಳನ್ನು ನಿರ್ಮಿಸುವಂತೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ನೇತೃತ್ವದಲ್ಲಿ ಮನವಿ ಮಾಡಲಾಯಿತು ಮನವಿ ಪತ್ರ ಸ್ವೀಕರಿಸಿದ ಎಸ್ ಎಸ್. ಕೆ ಆಡಳಿತ ಮಂಡಳಿ…

Read More