Author: admin

ಪಾವಗಡ:  ಭಾನುವಾರ ಬೆಳಿಗ್ಗೆ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಪಾವಗಡ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳದಿಂದ ಪ್ರತಿಷ್ಠಾಪನೆ ಮಾಡಿದ್ದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಶೋಭಾಯಾತ್ರೆ ಅದ್ದೂರಿಯಾಗಿ ನಡೆಯಿತು. ಶೋಭಾಯಾತ್ರೆಗೆ ರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ಚಾಲನೆ ನೀಡಿದರು. ಯಕ್ಷಗಾನ, ಕಾಳಿತಂಡವ, ಚೆಕ್ಕ ಭಜನೆ, ಕೋಲಾಟ, ನಾಸಿಕ್ ಬ್ಯಾಂಡ್, ಡ್ರಮ್ಸ್ ಸೆಟ್, ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಶಿರಾ ರಸ್ತೆಯ ಶ್ರೀನಿವಾಸ್ ಚಿತ್ರ ಮಂದಿರದ ವರೆಗೂ ನಂತರ ನಾಗರಕಟ್ಟೆ ಮಾರ್ಗವಾಗಿ ಶನಿಮಹಾತ್ಮ ವೃತ್ತ ಬಳ್ಳಾರಿ ರಸ್ತೆ ಹಾದಿಯಾಗಿ ಅಂಬೇಡ್ಕರ್ ಸರ್ಕಲ್ ಗೆ ತೇರಳಿ ನಂತರ ತುಮಕೂರು ರಸ್ತೆಯ ಪುರಸಭಾ ವಿಸರ್ಜನಾ ಸ್ಥಳದಲ್ಲಿ ಗಣಪತಿಯನ್ನು ವಿಸರ್ಜಿಸಲಾಯಿತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮಧುಗಿರಿ ಡಿಎಸ್ಪಿ ಮಂಜುನಾಥ್ ಹಾಗೂ ಪಾವಗಡ ಸಿಪಿಐ ಸುರೇಶ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಜರಂಗದಳ, ವಿಶ್ವ ಹಿಂದೂ ಪರಿಷತ್, ಶ್ರೀರಾಮ ಸೇನೆ, ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗಿಯೊಂದಿಗೆ ಸಾವಿರಾರು ಸಂಖ್ಯೆಯಲ್ಲಿ…

Read More

ಬೀದರ್: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲ ಸೌಕರ್ಯಕ್ಕೂ ಹಾನಿಯಾಗಿದೆ. ಈ ಸಂಬಂಧ ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಮನವಿ ಮಾಡಿದ್ದಾರೆ. ಭಾನುವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಈಶ್ವರ್ ಖಂಡ್ರೆ ಮಾತನಾಡಿ, ತಮ್ಮ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸೆ.30ರಂದು ವೈಮಾನಿಕ ಸಮೀಕ್ಷೆ ನಡೆಸುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಜಿಲ್ಲಾ ಆಡಳಿತದಿಂದ ದಸರಾ ಪ್ರಯುಕ್ತ ನಗರದಲ್ಲಿ ಭಾನುವಾರ ಮ್ಯಾರಥಾನ್ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಪುರುಷರ ವಿಭಾಗದಲ್ಲಿ ಬೆಂಗಳೂರಿನ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ವೇಗದ ಓಟಗಾರರಾಗಿ ಹೊರ ಹೊಮ್ಮಿದರು. ಪುರುಷರಿಗೆ 10 ಕಿಲೊ ಮೀಟರ್, ಮಹಿಳೆಯರಿಗೆ 5 ಕಿಲೊ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು. ಜೂನಿಯರ್ ಕಾಲೇಜು ಮೈದಾನದಲ್ಲಿ ಓಟಕ್ಕೆ ಚಾಲನೆ ನೀಡಲಾಯಿತು. ಎರಡು ವಿಭಾಗದಲ್ಲಿ 480 ಕ್ರೀಡಾಪಟುಗಳು ಭಾಗವಹಿಸಿದ್ದರು. ಪುರುಷರ ವಿಭಾಗದಲ್ಲಿ ಬೆಂಗಳೂರಿನ ಅಬ್ದುಲ್ ಬಾರಿ ಮೊದಲ ಸ್ಥಾನ ಪಡೆದರೆ, ಜಯಾಷ್ ಪಾಟೀಲ್ ಎರಡು, ತುಮಕೂರಿನ ಟಿ.ಎಸ್‌.ಸಂದೀಪ್ ಮೂರು, ಬೆಂಗಳೂರಿನ ಗೋಪಿ ನಾಲ್ಕು, ಬಾಗಲಕೋಟೆಯ ಸಂಗಮೇಶ್‌ ಹಳ್ಳಿ ಐದು ಹಾಗೂ ಬಾದಾಮಿಯ ಪ್ರಭು ಲಮಾಣಿ ಆರನೇ ಸ್ಥಾನ ಪಡೆದರು. ಮಹಿಳೆಯರ ವಿಭಾಗದಲ್ಲಿ ಬೆಂಗಳೂರಿನ ಪ್ರಣತಿ ಪ್ರಥಮ, ಸೀಮಾ ದ್ವಿತೀಯ, ಶಿವಮೊಗ್ಗದ ಎಚ್.ವಿ.ದೀಕ್ಷಾ ತೃತೀಯ, ಕೋಲಾರದ ಎಂ.ಸಾಹಿತ್ಯ ನಾಲ್ಕು, ಬೆಂಗಳೂರಿನ ಲಾವಣ್ಯ ಐದು ಮತ್ತು ತುಮಕೂರಿನ ಎ.ಆರ್.ಜೀವಿತ ಆರನೇ ಸ್ಥಾನ ತಮ್ಮದಾಗಿಸಿಕೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು: ದಸರಾ ಅಂಗವಾಗಿ ಭಾನುವಾರ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿ ವೀಕ್ಷಕರಿಗೆ ರಸದೌತಣ ನೀಡಿತು. ಪೈಲ್ವಾನರ ಕಾಳಗ ರೋಚಕತೆಯಿಂದ ಕೂಡಿತ್ತು. ಪ್ರತಿ ಪಂದ್ಯವೂ ನೋಡುಗರಲ್ಲಿ ಕುತೂಹಲ ಮೂಡಿಸಿತು. ನಗರದ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಾಡ ಕುಸ್ತಿಗೆ ಅಖಾಡ ಸಿದ್ಧಪಡಿಸಲಾಗಿತ್ತು. ತಲೆ ತಗ್ಗಿಸಿ, ಎದೆ ಎತ್ತಿಕೊಂಡು ಕೆಮ್ಮಣ್ಣಲ್ಲಿ ಕಾದಾಡುವ ಕುಸ್ತಿ ಕಲೆ ಕಣ್ಣುಂಬಿಕೊಳ್ಳಲು ಹೆಚ್ಚಿನ ಜನ ಸಂದಣಿ ಸೇರಿತ್ತು. ಜಿಲ್ಲೆಯ ಎಲ್ಲ ತಾಲ್ಲೂಕಿನ ಕುಸ್ತಿಪಟುಗಳು ಭಾಗವಹಿಸಿದ್ದರು. ಮಹಿಳೆಯರು ಮತ್ತು ಪುರುಷರ ವಿಭಾಗದಲ್ಲಿ ಸ್ಪರ್ಧೆಗಳು ನಡೆದವು. 86 ಜನ ಗೆಲುವಿಗಾಗಿ ಕಾದಾಡಿದರು. ತಮ್ಮದೇ ಪಟ್ಟುಗಳನ್ನು ಸಾಧಿಸಿ ಎದುರಾಳಿಯನ್ನು ಮಕಾಡೆ ಮಲಗಿಸಿದರು. ರಟ್ಟೆ ತಟ್ಟಿ ಎದುರಾಳಿಯನ್ನು ಅಖಾಡಕ್ಕೆ ಆಹ್ವಾನಿಸುತ್ತಿದ್ದ ದೃಶ್ಯಗಳು ಗಮನ ಸೆಳೆದವು. ಕುಸ್ತಿಪಟುಗಳು ತಂತ್ರ- ಪ್ರತಿ ತಂತ್ರ ಹೂಡಿ ಪ್ರತಿ ಸ್ಪರ್ಧಿಗಳಿಗೆ ಸೋಲಿನ ರಚ ತೋರಿಸಿದರು. ನೆರೆದಿದ್ದವರ ಸಿಳ್ಳೆ, ಚಪ್ಪಾಳೆ ಸದ್ದು ಜೋರಾಗಿತ್ತು. ಫಲಿತಾಂಶ: ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರು. ಮಹಿಳೆಯರ ವಿಭಾಗ: 50 ಕೆ.ಜಿ ವಿಭಾಗ–ಹೇಮಲತಾ, ಆರ್.ಲೇಪಾಕ್ಷಿ, ಬಿ.ಆರ್.ನೇತ್ರಾವತಿ,…

Read More

ತುಮಕೂರು: ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ತುಮಕೂರು ದಸರಾ ಪ್ರಯುಕ್ತ ಆಯೋಜಿಸಿದ್ದ ‘ಪಂಜಿನ ಕವಾಯತು’ ದಸರಾದ ವೈಭವ ಹೆಚ್ಚಿಸಿತು. ಎನ್‌ಸಿಸಿ, ಎನ್‌ಎಸ್‌ಎಸ್, ಸೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಾಹಸಕ್ಕೆ ಸಾವಿರಾರು ಜನ ಸಾಕ್ಷಿಯಾದರು. ನೂರಾರು ವಿದ್ಯಾರ್ಥಿಗಳು ಸಾಲಾಗಿ ನಿಂತು ಬೆಂಕಿಯ ಜತೆಗೆ ಆಟವಾಡುತ್ತಿದ್ದಂತೆ ಭಾಸವಾಯಿತು. ನೂರಾರು ಬೆಂಕಿ ಪಂಜುಗಳನ್ನು ಬಳಸಿ ‘ತುಮಕೂರು’, ‘ದಸರಾ-2025’, ‘ಥ್ಯಾಂಕ್ಯೂ’, ‘ವೆಲ್‌ ಕಮ್ ಟು ಆಲ್’ ಎಂಬ ಇಂಗ್ಲಿಷ್ ಪದದ ಕಲಾಕೃತಿ ಅರಳಿಸಿದರು. ಬೆಂಕಿ ಹಿಡಿದು ಧೈರ್ಯದಿಂದ ಹೆಜ್ಜೆ ಹಾಕುತ್ತಿದ್ದ ವಿದ್ಯಾರ್ಥಿಗಳು ವೀಕ್ಷಕರಲ್ಲಿ ಬೆರಗು ಮೂಡಿಸಿದರು. ಜಿಲ್ಲೆಯ ಜನತೆಯ ಎದುರಿಗೆ ವಿಸ್ಮಯ ಲೋಕ ತೆರೆದಿಟ್ಟರು. ಇಡೀ ದಸರಾಗೆ ಮೆರುಗು ತಂದರು. ಸಂಜೆ 7 ಗಂಟೆಗೆ ಸರಿಯಾಗಿ ಶುರುವಾದ ಕವಾಯತು ಸುಮಾರು 25 ನಿಮಿಷಗಳ ಕಾಲ ನಡೆಯಿತು. 256 ಜನರಲ್ಲಿ 160 ಮಂದಿ ವಿದ್ಯಾರ್ಥಿನಿಯರೇ ಇದ್ದರು. ಯಾವುದೇ ಅಳುಕಿಲ್ಲದೆ, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಸಾಹಸ ದೃಶ್ಯಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಎರಡು ತಿಂಗಳ ನಿರಂತರ ತಯಾರಿ ಫಲ ನೀಡಿತು.…

Read More

ಕೊರಟಗೆರೆ: ತಾಲೂಕಿಗೆ ನೀಡಲಾಗಿರುವ ತುರ್ತು ಪೊಲೀಸ್ ವಾಹನ 112 ಪದೇ ಪದೇ ದಾರಿಯಲ್ಲಿ ಕೆಟ್ಟು ನಿಲ್ಲುತ್ತಿದ್ದು, ಇದು ಪೊಲೀಸರಿಗೆ ಮತ್ತು ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ರಾತ್ರಿ ತುರ್ತು ಕರೆ ಬಂದಾಗ ಪೊಲೀಸರು ತೆರಳುವ ವೇಳೆ ಪೊಲೀಸ್ ಜೀಪ್ ಕೆಟ್ಟು ನಿಂತಿರುವ ಹಲವು ಉದಾಹರಣೆಗಳಿವೆ. ಜೊತೆಗೆ ರಾತ್ರಿ ಯಾರಾದರೂ ತುರ್ತು ಕರೆ ಮಾಡಿದರೆ, ಜೀಪು ಸ್ಟಾರ್ಟ್ ಆಗುತ್ತೋ, ಇಲ್ಲವೋ ಎಂದು ಸಿಬ್ಬಂದಿ ಭಯಪಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ ಎಂದು ವರದಿಯಾಗಿದೆ. ಕೆಟ್ಟು ನಿಂತಾಗ ಸಿಬ್ಬಂದಿಯೇ ಸಾರ್ವಜನಿಕರ ಸಹಾಯದಿಂದ ವಾಹನ ತಳ್ಳಿಸಿಕೊಂಡು ಹೋಗಬೇಕಾದ ಸನ್ನಿವೇಶ ಸಾಮಾನ್ಯವಾಗಿದೆ, ಜನರು ನಮ್ಮ ಮೇಲೆ ಆರೋಪ ಮಾಡುತ್ತಾರೆ. ನಾವು ತುರ್ತಾಗಿ ಕರೆ ಬಂದ ಸ್ಥಳಕ್ಕೆ ತಲುಪುವಾಗಲೇ ಜೀಪ್ ಒಮ್ಮೊಮ್ಮೆ ಕೈಕೊಡುತ್ತದೆ. ಇದರಿಂದ ಸಮಸ್ಯೆಯಾಗುತ್ತಲೇ ಇದೆ  ಎಂದು ಪೊಲೀಸ್ ಸಿಬ್ಬಂದಿ ಹೇಳುತ್ತಿದ್ದಾರೆ. ಈ ವಾಹನಗಳನ್ನು ಸ್ಥಳೀಯ ವರ್ಕ್ ಷಾಪ್‌ ಗಳಲ್ಲಿ ದುರಸ್ತಿ ಮಾಡಲಾಗುತ್ತಿದೆಯೊ ತಿಳಿಯದು. ಆದರೆ ಮೆಕ್ಯಾನಿಕ್‌ ಗಳು ಬಂದು ಸರಿಪಡಿಸಿದರೂ ಈ ಜೀಪ್‌ ಗಳು ಸ್ಥಿರವಾಗಿ ಕೆಲಸ ಮಾಡುವುದಿಲ್ಲ ಎಂದು…

Read More

ತುಮಕೂರು: ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ತರಗತಿ ಬಹಿಷ್ಕಾರಿಸಿದರು. ಎಐಡಿಎಸ್‌ ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಸ್ವಯಂ ಪ್ರೇರಿತರಾಗಿ ತರಗತಿಯಿಂದ ದೂರ ಉಳಿದರು. ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಖಾಸಗಿ ಕಾಲೇಜುಗಳಲ್ಲಿ ತರಗತಿ ಪೂರ್ಣಗೊಳಿಸಿ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಕನಿಷ್ಠ ಉಪನ್ಯಾಸಕರ ನೇಮಕವಾಗಿಲ್ಲ. ವಿದ್ಯಾರ್ಥಿಗಳು 30ರಿಂದ 40 ಕಿ.ಮೀ ಪ್ರಯಾಣಿಸಿ ಕಾಲೇಜಿಗೆ ಬರುತ್ತಿದ್ದಾರೆ. ತರಗತಿಗಳು ನಡೆಯದೆ ಮನೆಗೆ ಮರಳುತ್ತಿದ್ದಾರೆ’ ಎಂದು ಎಐಡಿಎಸ್‌ ಒ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಲಕ್ಕಪ್ಪ ಹೇಳಿದರು. ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಒಂದೂ ತರಗತಿ ನಡೆಯದಿದ್ದರೂ ವಿ.ವಿಗಳು ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ, ಶುಲ್ಕ ಪಾವತಿಯ ಸುತ್ತೋಲೆ ಹೊರಡಿಸಿರುವುದು ಖಂಡನೀಯ. ತರಗತಿ ನಡೆಸದೆ ಪರೀಕ್ಷೆ ಮಾಡಬಾರದು ಎಂದು ಆಗ್ರಹಿಸಿದರು. ಎಐಡಿಎಸ್‌ ಒ ಸದಸ್ಯರಾದ ಭರತ್‌, ವೃಷಭ, ಸೈಯದ್, ಪುನೀತ್, ರೋಜಾ ಮತ್ತು ರಕ್ಷಿತಾ…

Read More

ತಿಪಟೂರು: ತಾಲ್ಲೂಕಿನ ಸಾರ್ಥವಳ್ಳಿ ವಲಯದ ಹಾಲೇನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾರತಾಂಬೆ ಸಂಘದ 5ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ವಾರ್ಷಿಕೋತ್ಸವವನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕು ಯೋಜನಾಧಿಕಾರಿ ಉದಯ್, ಭಾರತಾಂಬೆ ತಂಡವು ತಾಲ್ಲೂಕಿನಲ್ಲಿ ಯೋಜನೆಯ ನಿಯಮಾನುಸಾರ ಕ್ರಮವತ್ತಾಗಿ ಶಿಸ್ತಿನಿಂದ ಸಂಘಟನೆ ಮಾಡುತ್ತಿದ್ದು, ತಾಲ್ಲೂಕಿಗೆ ಮಾದರಿ ಸಂಘವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಕಳೆದ ಐದು ವರ್ಷದಲ್ಲಿ 64 ಸಾವಿರ ಉಳಿತಾಯ ಹಾಗೂ ರಾಷ್ಟ್ರೀಕೃತ ಬ್ಯಾಂಕಿನ ಮೂಲಕ ರೂ. 10 ಲಕ್ಷಕ್ಕೂ ಮೀರಿ ಆರ್ಥಿಕ ವ್ಯವಹಾರ ಮಾಡಿರುವುದು ಶ್ಲಾಘನೀಯ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕೇವಲ ರೂ. 107 ಶುಲ್ಕದೊಂದಿಗೆ ಪಾನ್ ಕಾರ್ಡ್ ಮಾಡಿಸುವುದು ವಿಶೇಷವಾಗಿ ಯೋಜನೆಯಿಂದ ಸಂಪೂರ್ಣ ಉಚಿತವಾಗಿ ಆಯುಷ್ಮಾನ್ ಕಾರ್ಡ್, ಈ–ಶ್ರಮ್, ವಿಶ್ವಕರ್ಮ ಯೋಜನೆಯಿದ್ದು ಜೊತೆಯಲ್ಲಿ ಪಾಲುದಾರರ ಮಕ್ಕಳು ವೃತ್ತಿಪರ ಕೋರ್ಸ್ ಮಾಡುತ್ತಿದ್ದರೆ ಸುಜ್ಞಾನ ನಿಧಿ ಶಿಷ್ಯವೇತನದ ಅವಕಾಶವಿದ್ದು ಪ್ರಯೋಜನವನ್ನು ಪಡೆದುಕೊಳ್ಳುವ ಬಗ್ಗೆ ಕರೆ ನೀಡಿದರು. ಭಾರತಾಂಬೆ ತಂಡವು ಭವಿಷ್ಯದ ಮುಂದಿನ ದಿನಗಳಲ್ಲಿ ತಾಲ್ಲೂಕಿಗೆ…

Read More

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ವಿಗ್ರಹ ಅನಾವರಣ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಜನಪ್ರತಿನಿಧಿಗಳು ಹಾಗೂ ವಾಲ್ಮೀಕಿ ಸಮುದಾಯದ ಗಣ್ಯರು ಭಾಗವಹಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ವಹಿಸಿದ್ದರು.  ಮಾಜಿ ಸಚಿವ ಬಳ್ಳಾರಿ ಶ್ರೀರಾಮುಲು ಅವರು ಮಾತನಾಡಿ, “ವಾಲ್ಮೀಕಿ ಸಮುದಾಯದವರು ಪಕ್ಷಾತೀತವಾಗಿ ಸಮಾಜದ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಅಭಿವೃದ್ಧಿಗೆ ಒತ್ತುಕೊಡಬೇಕು. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರೋತ್ಸಾಹಿಸಬೇಕು” ಎಂದು ಕರೆ ನೀಡಿದರು. ಮಾಜಿ ಸಚಿವ ಹಾಗೂ ಹಾಲಿ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಅವರು, “ವಾಲ್ಮೀಕಿ ಸಮಾಜದಲ್ಲಿ ನಾಯಕತ್ವ ಹುಟ್ಟಿನಿಂದಲೇ ಇದೆ. ಆದರೆ ಜನರನ್ನು ಆಳುವಂತಹ ನಾಯಕರಾಗಲು ಶಿಕ್ಷಣವೇ ಪ್ರಮುಖ ಆಯುಧ. ಪ್ರತಿಯೊಬ್ಬರೂ ವಿದ್ಯಾಭ್ಯಾಸದಲ್ಲಿ ಶ್ರಮಿಸಬೇಕು” ಎಂದು ಸಲಹೆ ನೀಡಿದರು. ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು, “ವಾಲ್ಮೀಕಿ ಸಮಾಜವು ಎಲ್ಲಾ ಸಮುದಾಯಗಳಂತೆ ಉತ್ತಮ ಸ್ಥಾನಕ್ಕೆ ಬೆಳೆಯಬೇಕು. ಯಾವುದೇ ದ್ವೇಷದ ಕೆಲಸಕ್ಕೆ ಮುಂದಾಗದೆ ಸಾಮರಸ್ಯದಿಂದ ನಡೆದುಕೊಳ್ಳಬೇಕು. ವಾಲ್ಮೀಕಿ…

Read More

ನಾನು ಈ ಲೇಖನವನ್ನು ಬರೆಯುತ್ತಿರುವ ಸಂದರ್ಭದಲ್ಲಿ ಈ ಹಿಂದೆ ಆತ್ಮಗಳಿಗೆ ಸಂಬಂಧಿಸಿದಂತೆ ಯಾವ ಲೇಖನವನ್ನೂ ಓದಿರುವುದಿಲ್ಲ ಎಂದು ಸ್ಪಷ್ಟೀಕರಣ ಮಾಡುತ್ತಾ ಪ್ರಾರಂಭಿಸುತ್ತೇನೆ. ಒಂದು ವೇಳೆ ನನ್ನ ಈ ಲೇಖನದ ಯಾವುದಾದರೂ ಒಂದು ಅಂಶ ಈ ಹಿಂದಿನ ಯಾರದಾದರೂ ಲೇಖನಕ್ಕೆ ಸಂಬಂಧಪಟ್ಟಿರುವುದು ಕಂಡುಬಂದರೆ ಅದು ಕಾಕತಾಳಿಯವಾಗಿರುತ್ತದೆ. ವೈಯಕ್ತಿಕವಾಗಿ ತಿಳಿದಿರುವಂತೆ ನಾನು ಆತ್ಮಗಳಿಗೆ ಸಂಬಂಧಿಸಿದಂತೆ ನಮ್ಮ ಹಿರಿಯರು ಕೆಲವು ಸಂದರ್ಭಗಳಲ್ಲಿ ದೆವ್ವ ಎಂತಲೂ ಕರೆದಿದ್ದಾರೆ, ಇದಕ್ಕೆ ಅವರು ಕೊಡುತ್ತಿದ್ದ ಕಾರಣ ಯಾರಾದರೂ ಬದುಕಿನಲ್ಲಿ ತಮ್ಮದೇ ಕೆಲವು/ಹಲವು ಆಸೆಗಳನ್ನು ಇಟ್ಟುಕೊಂಡು ಆಯಸ್ಸು ತುಂಬುವ ಮೊದಲು ಯಾವುದಾದರೂ ಕಾರಣಕ್ಕೆ, ಅದು ಆತ್ಮಹತ್ಯೆಯಾಗಿರಲೂ ಬಹುದು ಅಥವಾ ಯಾರಿಂದಲಾದರೂ ಸಾವು ಸಂಭವಿಸರಲೂ ಬಹುದು ಈ ಕಾರಣಗಳಿಂದ ಅಸುನೀಗಿದರೆ ಅವರು ಬದುಕಿ ಉಳಿದಿರುವಷ್ಟು ಕಾಲ ಅಸುನೀಗಿದ ಸಮಯದಿಂದ ದೆವ್ವವಾಗಿ (ಅಂತರ ಪಿಶಾಚಿ) ಉಳಿದ ಆಯಸ್ಸನ್ನು ಕಳೆಯಬೇಕಾಗುತ್ತದೆ ಎಂದು ಹೇಳುತ್ತಿದ್ದರು. ನಂತರ ಪುನರ್ಜನ್ಮೋ ಅಥವಾ ಅವರ ಪಾಪದ ಕರ್ಮದನಿಮಿತ್ತ ನರಕವಾಸ ಅಥವಾ ಬೇರೊಂದು ಜೀವಿಯಾಗಿ ಹುಟ್ಟಿ ಶಿಕ್ಷೆ ಅನುಭವಿಸಬೇಕು ಎಂದು ಹಲವು ಸಂದರ್ಭಗಳಲ್ಲಿ…

Read More