Subscribe to Updates
Get the latest creative news from FooBar about art, design and business.
- ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
- ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
- ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
- ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
- ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
- ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
- ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
- ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
Author: admin
ತುರುವೇಕೆರೆಯ ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ತುರುವೇಕೆರೆಯ ನಟರಾಜ್ ರವರು ಆಯ್ಕೆಯಾಗಿದ್ದು, ಅವರನ್ನು ಪಟ್ಟಣದ A.V.S. S. ಕಚೇರಿಯಲ್ಲಿ ತುರುವೇಕೆರೆ ಛಲವಾದಿ ಮಹಾ ಸಭಾದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲ ನಟರಾಜ್, ನನ್ನ ವೃತ್ತಿಯಲ್ಲಿ ಈಗ ಹೆಚ್ಚಿನ ಜವಾಬ್ದಾರಿ ನನ್ನ ಹೆಗಲಿಗಿದೆ. ನ್ಯಾಯಯುತವಾದ ಕೇಸುಗಳನ್ನು ತೆಗೆದುಕೊಂಡು ವಾದ ಮಾಡುತ್ತೇನೆ. ಬಡವರ ಹಾಗೂ ಅಶಕ್ತರಿಗೆ ನನ್ನ ಕೈಲಾದ ಸೇವೆ ಮಾಡುತ್ತೇನೆ ಎಂದರು. ಈ ಕಾರ್ಯಕ್ರಮದಲ್ಲಿ ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷ ಡೊಂಕಿಹಳ್ಳಿ ರಾಮಯ್ಯ, ಉಪಾಧ್ಯಕ್ಷರಾದ ಬೀಚನಹಳ್ಳಿ ಮಹಾದೇವಯ್ಯ, ಡಿ.ಎಸ್.ಎಸ್.ತಾಲೂಕು ಸಂಚಾಲಕ ಕುಣಿಕೆನಹಳ್ಳಿ ಜಗದೀಶ್, ಪು ರಾಮಚಂದ್ರು, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾದ ಕೊಡಗಿಹಳ್ಳಿ ಹನುಮಂತಯ್ಯ, ಕಿರಣ್ ಕುಮಾರ್ ಮುಂತಾದ ಸಮಾಜದ ಬಾಂಧವರು ಹಾಜರಿದ್ದು ಅಭಿನಂದಿಸಿದರು. ವರದಿ: ಸುರೇಶ್ ಬಾಬು. ತುರುವೇಕೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು : ತಾಲ್ಲೂಕು ಕಸಬಾ ಹೋಬಳಿ ಮಾದಿಹಳ್ಳಿ ಗ್ರಾಮದಲ್ಲಿ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ 273 ನೇ ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾ ನಿರ್ದೇಶ ಕೆ ದಯಾಶೀಲ, ಕ್ಷೇತ್ರದ ವತಿಯಿಂದ 1143838 ರೂ. ಮತ್ತು ಗ್ರಾಮಸ್ಥರ ಸಹಕಾರ 5,50,000 ರೂ.ಗಳು ಒಟ್ಟು 16 ಲಕ್ಷದ 93000 238 ರೂಗಳು ಕೆರೆಯ ಜೀರ್ಣೋದ್ದಾರ ಮಾಡಲಾಗಿದೆ ಎಂದು ತಿಳಿಸಿದರು . ಯೋಜನಾಧಿಕಾರಿ ಪ್ರವೀಣ್ ಕೆರೆಯನ್ನು ಅಭಿವೃದ್ಧಿಪಡಿಸಿ ಈ ಸಮುದಾಯದ ವಿಭಾಗದಿಂದ ಜೀರ್ಣೋದ್ಧಾರ ಮಾಡಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಧುಸ್ವಾಮಿ ನಿರ್ದೇಶಕ ಪ್ರಕಾಶ್ ಗ್ರಾಮದ ಸಿದ್ದರಾಮಯ್ಯ ಸಂಘದ ಸದಸ್ಯರು ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ಸುರೇಶ್ ಬಾಬು, ತುರುವೇಕೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಾಯಸಂದ್ರ: ಜನವರಿ 7 ರಿಂದ 10 ರಂದು ರಂಗಶಾಲಾ ಕ್ರೀಡಾಂಗಣ ಪೊಕಾರ ನೇಪಾಳದಲ್ಲಿ TAFTYGAS-5 ನೇ ಅಂತರಾಷ್ಟ್ರೀಯ ಕ್ರೀಡಾಕೂಟ 2021-22 ಜರುಗಿತು. ಈ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಮಾಯಸಂದ್ರ ಶಾಖೆಯ ಎಸ್ ಬಿ ಜಿ ವಿದ್ಯಾಲಯದ ವಿದ್ಯಾರ್ಥಿಗಳು 17 ವರ್ಷದ ಬಾಲಕಿಯರ ವಿಭಾಗದಲ್ಲಿ ಅಂತಿಮ ಪಂದ್ಯಾವಳಿಯಲ್ಲಿ ನೇಪಾಳ ವಿರುದ್ಧ ಭಾರತ ತಂಡವು ಮೂರು ಗೋಲಿನ ಅಂತರದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. 19 ವರ್ಷದ ಬಾಲಕರ ವಿಭಾಗದಲ್ಲಿ ಒಂದು ಗೋಲಿನ ಅಂತರದಲ್ಲಿ ನೇಪಾಳದ ವಿರುದ್ಧ ಭಾರತ ತಂಡವು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತಂದಿದ್ದಾರೆ. ವಿದೇಶಿ ನೆಲದಲ್ಲಿ ಸಾಧನೆ ಮಾಡಿ ಬಂದ ವಿದ್ಯಾರ್ಥಿಗಳಿಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದ ನಾಥ ಮಹಾಸ್ವಾಮಿಜಿ ಮತ್ತು ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಆಶೀರ್ವದಿಸಿ ಶುಭಾ ಹಾರೈಸಿದ್ದಾರೆ. TAFTYGAS ಭಾರತದ ಕಾರ್ಯದರ್ಶಿಗಳಾದ…
ತುಮಕೂರು: ದಲಿತ ಸಂಘಟನೆಗಳ ಒಕ್ಕೂಟ ಮತ್ತು ಭೀಮಬಾಯಿ ಮಹಿಳಾ ಸ್ವಸಹಾಯ ಅರಕೆರೆ, ಕಸಬಾ ಹೋಬಳಿ ಇವರ ಸಹಯೋಗದೊಂದಿಗೆ ಭೀಮಬಾಯಿ ಮಹಿಳಾ ಸ್ವ-ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ಅರಕೆರೆ ಗ್ರಾಮದ ತೋವಿನಕೆರೆ ರಸ್ತೆ ಬಳಿ ನಡೆಯಿತು. ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಅವರು ಭೀಮಬಾಯಿ ಮಹಿಳಾ ಸ್ವ-ಸಹಾಯ ಸಂಘವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ರಾಮಯ್ಯ, ಸಾಮಾಜಿಕ ಹೋರಾಟಗಾರ ರವಿ ತೊಂಡಗೆರೆ, ಆರ್ ಪಿ ಐ ಪ್ರಧಾನ ಕಾರ್ಯದರ್ಶಿ ಕೆಂಚರಾಯ ಕಲಾಕಾರ್ ಹುಲಿಕುಂಟೆ ಭಾಗವಹಿಸಿದ್ದರು. ಆರ್ ಪಿಐ ತುಮಕೂರು ಜಿಲ್ಲಾಧ್ಯಕ್ಷ ನಟರಾಜ್ ಜಿ.ಎಲ್., ಆರ್ ಪಿಐ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ಎನ್.ಮಂಜುಳ ಹಾಗೂ ರೂಪಾ, ನರಸಿಂಹ ಮೂರ್ತಿ, ಶಿವಣ್ಣ, ರವೀಶ್, ಅನಿಲ್ ಪಟೇಲ್, ವನಜಾಕ್ಷಿ ಚಂದ್ರಶೇಖರ್ ಪ್ರೇಮಕುಮಾರಿ ಮೊದಲಾದವರು ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದರು. ನರಸಿಂಹ ಮೂರ್ತಿ ಸಮಾಜ ಸೇವಕರು ಮತ್ತು ಶಿವಣ್ಣ ಹೊಸಹಳ್ಳಿ ಕಾರ್ಯಾಧ್ಯಕ್ಷರು ಮತ್ತು ಗೋಪಾಲ್ ಹಾಗೂ ರವೀಶ್ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು…
ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಅನಧಿಕೃತವಾಗಿ ಇಟ್ಟಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಹಿರಿಯೂರು ತಾಲ್ಲೂಕಿನ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಿರಿಯೂರು ತಹಶೀಲ್ದಾರವರಿಗೆ ಮನವಿ ಸಲ್ಲಿಸಿತು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ತಾಲ್ಲೂಕು ಕಚೇರಿಯ ಆವರಣದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದ ಆವರಣದಲ್ಲಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟಿದ್ದು, ಇದು ಕಾನೂನು ಬಾಹಿರವಾಗಿರುತ್ತದೆ ಎಂದು ಸಂಘಟನೆ ದೂರಿದೆ. ಈಗಾಗಲೇ ಸದರಿ ಕಟ್ಟಡದಲ್ಲಿ ಮೂರು ಕೊಠಡಿಗಳು, ಒಂದು ಪೆಟ್ಟಿಗೆ ಅಂಗಡಿ ಹಾಗೂ ಟೀ ಹೋಟೆಲ್ ಗಳು , ಇವರಿಂದ ಪ್ರತಿ ತಿಂಗಳು ನೌಕರರ ಸಂಘದ ಭವನದವರು ಬಾಡಿಗೆ ಪಡೆಯುತ್ತಿದ್ದಾರೆ. ಹಿರಿಯೂರು ತಾಲ್ಲೂಕಿನಲ್ಲಿ ಸುಮಾರು ಎರಡು ಸಾವಿರ ಸರ್ಕಾರಿ ನೌಕರರು ಇದ್ದು, ಇವರಿಂದ ಪ್ರತಿ ವರ್ಷಕ್ಕೆ ರೂ 200 ರೂ. ಪಡೆದರೂ ಇವರಿಂದಲೇ ವರ್ಷಕ್ಕೆ ನಾಲ್ಕು ಲಕ್ಷ ಹಣ ಸಂಘಕ್ಕೆ ಹೋಗುತ್ತಿದೆ. ಆದರೂ ಅತಿಯಾಸೆಯಿಂದ ಇರುವ ಸ್ವಲ್ಪ ಜಾಗದಲ್ಲಿ ಮತ್ತೆ ಮೂರು ಪೆಟ್ಟಿಗೆ ಅಂಗಡಿಗಳನ್ನು ಇಟ್ಟುಕೊಳ್ಳಲು ನೀಡಲಾಗಿದೆ ಎಂದು ಸಂಘಟನೆಯ…
DLF ನಂತರ ಇಷ್ಟು ವರ್ಷಗಳ ಕಾಲ ನಡೆದ IPL ಪಂದ್ಯವಳಿಯ ಟೈಟಲ್ ಪ್ರಾಯೋಜಕತ್ವದಿಂದ ಚೀನಾ ಮೂಲದ ಸ್ಮಾರ್ಟ್ ಫೋನ್ ತಯಾರಿಕ ಸಂಸ್ಥೆ ವಿವೋ ಹಿಂದೆ ಸರಿದಿದೆ. ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ’ರವರ ಒಡೆತನದ ” ಟಾಟಾ ” ಗ್ರೂಪ್’ಗೆ IPL ಟೈಟಲ್ ಪ್ರಾಯೋಜಕತ್ವ ದೊರೆತಿದೆ. ವಿವೋ IPL ಟೈಟಲ್ ಪ್ರಾಯೋಜಕತ್ವವನ್ನು ” TATA “ಗೆ ವರ್ಗಾಯಿಸಲು ಸಲ್ಲಿಸಿದ ಅರ್ಜಿಗೆ BCCI ಸಮ್ಮತಿಸಿದೆ. ಈ ಬಗ್ಗೆ ಇಂದು ಬೆಳಗ್ಗೆ IPL ಚೇರ್ಮನ್ ಆದಂತಹ ಬೃಜೇಶ್ ಪಟೇಲ್’ರವರು ಸ್ಪಷ್ಟ ಪಡಿಸಿದ್ದಾರೆ. ಏನೇ ಆಗಲಿ IPLನ ಟೈಟಲ್ ಪ್ರಾಯೋಜಕತ್ವ ನಮ್ಮ ದೇಶದ ಸಹೃದಯಿ, ಸರಳ ಮತ್ತು ಸಮಾಜ ಸೇವಕ ” ಟಾಟಾ ” ಗ್ರೂಪ್’ಗೆ ದೊರೆತಿರುವುದು ದೇಶದ ಕೋಟ್ಯಾಂತರ ಜನರಿಗೆ ಖುಷಿ ತಂದಿದೆ. ಇನ್ನು ಮುಂದೆ Vivo IPL ಇರುವುದಿಲ್ಲ, TATA IPL ಮಾತ್ರ ಇರುತ್ತದೆ. ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಗುಬ್ಬಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಗುಬ್ಬಿ ತಾಲೂಕಿನ MN ಕೋಟೆ ವಲಯ ಎಂ.ಎನ್. ಕೋಟೆ ಕಾರ್ಯಕ್ಷೇತ್ರದ ಅದಲಗೆರೆ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನು ನಿರ್ದೇಶಕಿ ದಯಾಶೀಲ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಮಾತೃ ಶ್ರೀ ಅಮ್ಮನವರ ಆಶಯದಂತೆ ಜ್ಞಾನ ವಿಕಾಸ ಕೇಂದ್ರ ವು ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಹಾಗೂ ಸ್ವ ಉದ್ಯೋಗ ನಡೆಸುವ ಹಲವು ಯೋಜನೆ ರೂಪಿಸುವ ಕುರಿತು ಸಂಕ್ಷಿಪ್ತವಾಗಿ ಮಹಿಳೆಯರಿಗೆ ಮಾಹಿತಿ ನೀಡುತ್ತಿದ್ದು, ಶ್ರೀ ಕ್ಷೇತ್ರವು ಮಹಿಳೆಯರ ಅಭಿವೃದ್ಧಿಗೆ ಸಾಕಷ್ಟು ಆರ್ಥಿಕ ಸಹಾಯ ತರಬೇತಿ ನೀಡುವಲ್ಲಿ ಮುಂದಾಗಿದೆ. ಅದರಂತೆ ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಮಹಿಳೆಯರಿಗೆ ಸಲಹೆ ನೀಡಿದರು. ಜ್ಞಾನ ವಿಕಾಸ ಕೇಂದ್ರದ ಸದಸ್ಯರು , ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಚಟುವಟಿಕೆ ನಡೆಸಿದರು. ಕಾರ್ಯ ಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ದಯಾಶೀಲ ಹಾಗೂ…
ಗುಬ್ಬಿ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತವರು ಕ್ಷೇತ್ರ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸರ್ಕಾರಿ ಶಾಲೆ ವಿದ್ಯಾರ್ಥಿ ಗಳಿಗೆ ಉತ್ತಮ ಗುಣಮಟ್ಟದ ಬಿಸಿಯೂಟದ ಆಹಾರ ಸಾಮಗ್ರಿಗಳು ಸಿಗುತ್ತಿಲ್ಲ. ಸದ್ಯ ಹುಳು ಹಿಡಿದಿರುವ ಆಹಾರ ಸಾಮಗ್ರಿಗಳನ್ನು ಸರ್ಕಾರ ಪೂರೈಸುತ್ತಿದ್ದು, ಈ ಹುಳು ಹಿಡಿದ ಆಹಾರ ವಸ್ತುಗಳನ್ನೇ ಬಳಸಿ ಆಹಾರ ತಯಾರಿಸುವ ಅನಿವಾರ್ಯ ಸ್ಥಿತಿ ಶಾಲಾ ಅಡುಗೆ ಸಿಬ್ಬಂದಿಯದ್ದಾಗಿದೆ. ಗುಬ್ಬಿ ತಾಲ್ಲೂಕಿನ ಲ್ಲಿ ಒಟ್ಟು 441 ಸರ್ಕಾರಿ ಶಾಲೆಗಳಿದ್ದು, ಪ್ರತಿ ತಿಂಗಳು ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ 750 ಕೆ.ಜಿ.ಅಕ್ಕಿ ಸರಬರಾಜು ಆಗುತ್ತಿದೆ. 130 ಕ್ವಿಂಟಾಲ್ ಗೋದಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಒಬ್ಬ ವಿದ್ಯಾರ್ಥಿಗೆ ತಲಾ 100 ಗ್ರಾಂ ನಷ್ಟು ಲೆಕ್ಕದಲ್ಲಿ 5 ತಿಂಗಳ ಬಾಕಿ ಸೇರಿ 730 ಕ್ವಿಂಟಾಲ್ ಆಹಾರ ಸಾಮಗ್ರಿ ನೀಡಲಾಗಿದೆ ಎಂದು ಗುಬ್ಬಿ ತಾಲೂಕು ಅಕ್ಷರ ದಾಸೋಹ ನಿರ್ದೇಶಕ ಯೋಗಾನಂದ್ ತಿಳಿಸಿದರು. ಪ್ರತಿ ಶಾಲೆಯಲ್ಲಿ ಆಹಾರ ತಯಾರಿಸಲು ಅಡುಗೆಯವರು ಹಾಗೂ ಸಹಾಯಕರು ಕೆಲಸ ಮಾಡುತ್ತಿದ್ದು ಕಳೆದ 6 ತಿಂಗಳಿಂದ ಇವರಿಗೆ…
ಮಾಯಸಂದ್ರ: ಕಳೆದ ಕೆಲವು ದಿನಗಳಿಂದ ಖಾಲಿ ಇದ್ದ ಮಾಯಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ “ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ” ( SDMC )ಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸರ್ವ ಸದಸ್ಯರು ಸರ್ವಾನುಮತದಿಂದ ಅವಿರೋಧವಾಗಿ ಕರಿಬಸವಪ್ಪನವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆಮಾಡಿದ್ದಾರೆ. ಉಪಾಧ್ಯಕ್ಷರಾಗಿ ಕಲಾವತಿಯವರು ಆಯ್ಕೆಯಾಗಿದ್ದಾರೆ. ಈ ವೇಳೆ ಮುಖ್ಯೋಪಾಧ್ಯಾಯರಾದ ಶಿವಲಿಂಗೇಗೌಡರು ಮತ್ತಿತರರು ಉಪಸ್ಥಿತರಿದ್ದರು. ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಿರಿಯೂರು: ಭಾರತದಾದ್ಯಂತ ನಿರ್ಗತಿಕರನ್ನು ಸಂಕಷ್ಟಕ್ಕೆ ಸಿಲುಕುತ್ತಿರುವ ಮಾರಕ ಕೊರೊನಾ ರೋಗದ ಸಂಕಷ್ಟ ಪರಿಸ್ಥಿತಿಯ ಎರಡೂ ಅಲೆಗಳ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದು, ಕೊರೊನಾ 3ನೇ ಅಲೆಯು ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದ್ದು ಈ ಬಾರಿ ತಾಲ್ಲೂಕಿನ ಮಕ್ಕಳ ಕಡೆ ಹೆಚ್ಚು ಗಮನ ಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗಭೂಷಣ್ ಹೇಳಿದರು. ಹಿರಿಯೂರು ನಗರದ ರೋಟರಿ ಸಭಾಭವನದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ 48 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಚಿಕಿತ್ಸೆ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರೋಟರಿ, ರೆಡ್ ಕ್ರಾಸ್ ಸಂಸ್ಥೆಗಳು ಸಮನ್ವಯ ಸಾಧಿಸಿ, ಜನತೆಗೆ ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದ್ದು, ರೆಡ್ ಕ್ರಾಸ್ ಸಂಸ್ಥೆಗೆ ತಾಲ್ಲೂಕು ಆಡಳಿತದಿಂದ ನಿವೇಶನಕ್ಕೆ ಶಿಫಾರಸ್ಸು ಮಾಡಲಾಗಿದ್ದು, ನಮ್ಮ ಇಲಾಖೆಯಿಂದ ಎಲ್ಲಾ ತರಹದ ಸಹಕಾರ ನೀಡಲಾಗುವುದು ಎಂಬುದಾಗಿ ಹೇಳಿದರು. ತಾಲ್ಲೂಕು…