Subscribe to Updates
Get the latest creative news from FooBar about art, design and business.
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
- ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
- ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
- ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
Author: admin
ಗುಬ್ಬಿ: ತಾಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿಯಲ್ಲಿ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ನಟರಾಜು ಎಂಬವರ ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ ಎನ್ನಲಾಗಿದೆ. ವಿಡಿಯೋದಲ್ಲಿ ಕಂಡು ಬಂದಂತೆ ಮನೆಯ ಮುಂದೆ ಪ್ರತ್ಯಕ್ಷವಾದ ಚಿರತೆ ಕೆಲಕಾಲ ಹೊಂಚು ಹಾಕಿ ನಿಂತಿದ್ದು, ನಾಯಿಯನ್ನು ಹೊತ್ತುಕೊಂಡು ಸಾಗಿದೆ. ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಚಿರತೆಯನ್ನು ಹಿಡಿಯುವಂತೆ ಒತ್ತಾಯಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ತಾಲ್ಲೂಕಿನ ಬಾಣಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿಯ ಪ್ರಯುಕ್ತ ‘ಅಂಬೇಡ್ಕರ್ ಚಿಂತನ – ಮಂಥನ’ ಹಮ್ಮಿಕೊಳ್ಳಲಾಗಿತ್ತು. ಅಂಬೇಡ್ಕರ್ ರಥವು ಜೈ ಭೀಮ್ ಘೋಷಣೆಯೊಂದಿಗೆ ದಲಿತ ಕೇರಿಯಿಂದ ಹೊರಟು ಊರಿನ ಪ್ರಮುಖ ಬೀದಿಗಳಲ್ಲಿ ಸಾಗುತ್ತಾ ಜನತೆಯನ್ನು ಆಕರ್ಷಿಸಿತು. ಮುಸ್ಲಿಮರು ಕೂಡ ಕೂಡಾ ಜೈ ಭೀಮ್ ಮೆರವಣಿಗೆಯಲ್ಲಿ ಪಾಲ್ಗೊಂಡು ಅಂಬೇಡ್ಕರ್ ರಥಕ್ಕೆ ಗೌರವ ಸಲ್ಲಿಸಿದರು. ಚಿಂತನ – ಮಂಥನ ವೇದಿಕೆಯಲ್ಲಿ ಶಾಖ್ಯಗೌತಮ್ ರವರು ಮಾತನಾಡಿ, ಅಂಬೇಡ್ಕರ್ ಚಿಂತನೆಯ ಜೊತೆ ಜೊತೆಗೆ ಆದಿ ಕರ್ನಾಟಕ ಮತ್ತು ಆದಿದ್ರಾವಿಡ ಮತ್ತು ಮುಸಾಲ್ಮಾನ್ ಬಾಂಧವರ ಇತಿಹಾಸವನ್ನು ತೆರದಿಟ್ಟರು. ಭಾರತವನ್ನು ಆಳಿದ ಮೊದಲಿಗರು ನಾವು. ರಾಜವಂಶಸ್ಥರು ಇಂದು ಈ ಮನುವಾದಿಗಳ ಸೃಷ್ಟಿಸಿದ ಶಾಸ್ತ್ರ ಪುರಾಣಗಳಿಂದ ನಾವು ಅಸ್ಪೃಶ್ಯರಾದೆವು. ಇಂದು ನಾವುಗಳು ನಮ್ಮ ಇತಿಹಾಸವನ್ನು ಮರು ಕಟ್ಟಬೇಕಾಗಿದೆ. ಮತ್ತೆ ನಾವು ರಾಜರಾಗಬೇಕಿದೆ. ಅದಕ್ಕಾಗಿ ನಾವು ಎಲ್ಲಾರು ಅಂಬೇಡ್ಕರ್ ಕೊಟ್ಟ ಚಿಂತನೆಯನ್ನು ನಮ್ಮದಾಗಿಸಿಕೊಳ್ಳಬೇಕಿದೆ. ಶತಮಾನದಿಂದ ಅಕ್ಷರವಂಚಿತರಾದ ನಮಗೆ ಶಿಕ್ಷಣವನ್ನು ಕೊಟ್ಟಿದ್ ಬ್ರಿಟಿಷರು. ಮೂರನೇ ಮಾರಾಠ್-ಆಂಗ್ಲೋ ಯುದ್ಧದಲ್ಲಿ ಮಹರ್ ಜನಾಂಗದ 500 ಸೈನಿಕರು ವೀರವೇಶದಿಂದ…
ಮಧುಗಿರಿ: ತಾಲೂಕಿನ ಬಂದ್ರೆ ಹಳ್ಳಿ ಗ್ರಾಮದ ಪಕ್ಕದ ಹೊಲಬಿನಲ್ಲಿ ರುವ ಶ್ರೀ ಮೀನಗೊಂದಿ ಮಲೆ ರಂಗನಾಥ ಸ್ವಾಮಿ ಜಾತ್ರೆಯು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷ ಇಲ್ಲಿ ಬ್ರಹ್ಮ ರಥೋತ್ಸವ ಬಹಳ ಅದ್ದೂರಿಯಾಗಿ ನಡೆಯುತ್ತದೆ. ಭಕ್ತಾದಿಗಳು ತೇರಿನ ಮೇಲೆ ಹೂವು ಹಣ್ಣು ಭಕ್ತಿಯಿಂದ ಎಸೆಯುವ ಮೂಲಕ ತಮ್ಮ ಪ್ರಾರ್ಥನೆ ಸಲ್ಲಿಸಿದರು. ಜಾತ್ರೆಯಲ್ಲಿ ಎಲ್ಲಾ ಕಡೆ ಮಜ್ಜಿಗೆ ಪಾನಕ ಹೆಸರುಬೇಳೆ ವ್ಯವಸ್ಥೆ ಮಾಡಲಾಗಿತ್ತು. ಇಲ್ಲಿನ ವಿಶೇಷ ಏನೆಂದರೆ ತುಂಬಾ ದೂರದ ಊರುಗಳಿಂದ ಬಂದು ಕೊಪ್ಪಲು ಕಟ್ಟಿಕೊಂಡು ಭೋಜನ ವ್ಯವಸ್ಥೆ ಮಾಡಲಾಗುತ್ತದೆ. ನೋಡಲು ಮನಮೋಹಕವಿದ್ದು , ಬೆಟ್ಟದ ಮೇಲೆ ಮೀನಗೋಂದಿ ಮಲೇರಂಗನಾಥ ಸ್ವಾಮಿಯ ವಿಶೇಷ ಪೂಜೆ ಇರುತ್ತದೆ. ಈ ಪ್ರದೇಶ ಟ್ರಕ್ಕಿಂಗ್ ಗೆ ಕೂಡ ಹೆಸರುವಾಸಿಯಾಗಿದೆ. ವರದಿ: ತಿಪ್ಪೇಸ್ವಾಮಿ ಎಂ ಕೆ, ಮುದ್ದೇನೆರಳೆಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದ ಕಾಲಭೈರವೇಶ್ವರ ಯಾನೆ ಸಿದ್ದೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸೋಮವಾರ ಭಕ್ತರ ಸಾಗರದ ನಡುವೆ ಬಹಳ ಅದ್ಧೂರಿಯಾಗಿ ನಡೆಯಿತು. ಈ ಜಾತ್ರಾ ಮಹೋತ್ಸವಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸೋಮಶೇಖರ್ ಬಿ. ಅವರು ಬೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊಂಡು ದೇವರ ಕೃಪೆಗೆ ಪಾತ್ರರಾದರು. ಇದೇ ಸಂದರ್ಭದಲ್ಲಿ ದೇವಾಲಯದ ಅರ್ಚಕರು ದೇವಾಲಯದ ಆಡಳಿತ ಮಂಡಳಿಯ ಅಧಿಕಾರಿಗಳು ಸಹ ಸೋಮಶೇಖರ್ ಬಿ. ಅವರಿಗೆ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಸೋಮಶೇಖರ್ ಬಿ., ಈ ಶಕ್ತಿಯುಳ್ಳ ಕಾಲಭೈರವೇಶ್ವರ ಸ್ವಾಮಿ ದರ್ಶನ ಪಡೆದುಕೊಂಡಿದ್ದು ನಿಜಕ್ಕೂ ಸಹ ನನ್ನ ಒಂದು ಸೌಭಾಗ್ಯ ಎಂದು ತಿಳಿಸಿದರು. ಇದೇ ವೇಳೆ ಚಿತ್ರದುರ್ಗ ಜಿಲ್ಲೆಯ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಸಿ.ಬಿ.ಪಾಪಣ್ಣ ನವರು ಮಾತನಾಡಿ, ಈ ವದ್ದಿಕೆರೆ ಕಾಲಭೈರವೇಶ್ವರ ಸ್ವಾಮಿಯ ಜಾತ್ರೆಯು ಚಿತ್ರದುರ್ಗ ಜಿಲ್ಲೆಯಲ್ಲೇ ಬಹಳ ವೈಶಿಷ್ಟ್ಯವಾದ ಜಾತ್ರೆಯಾಗಿದ್ದು, ಈ ಜಾತ್ರೆಗೆ ನಾನಾ ರಾಜ್ಯಗಳಿಂದ ಲಕ್ಷಾಂತರ ಜನ…
ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ತಾಲೂಕಿನ ಮಾಜಿ ಜೆಡಿಎಸ್ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ಜೆಡಿಎಸ್ ಪಕ್ಷದ ಜನತಾ ಜಲಧಾರೆ ರಥಯಾತ್ರೆ ಕುರಿತು ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಇದೇ ತಿಂಗಳು 25ನೇ ತಾರೀಕು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗಮಿಸಲಿದ್ದು, ತಾಲೂಕಿಗೆ ಜನತಾ ಜಲಧಾರೆ ರಥಯಾತ್ರೆ ಬರಲಿದ್ದು, ಪಕ್ಷಕ್ಕೆ ಹೊಸ ಮೆರುಗನ್ನು ಕೊಡುವ ನಿಟ್ಟಿನಲ್ಲಿ.ಜೊತೆಗೆ ಮುಂದಿನ ಚುನಾವಣೆಯಲ್ಲಿ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರ ನಡುವೆ ಈ ಸಭೆಯನ್ನು ಮಾಡಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ, ಈ ಕಾರ್ಯಕ್ರಮಕ್ಕೆ ಸುಮಾರು 500 ಮುತ್ತೈದೆಯರು ಕುಂಭಮೇಳ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಅದ್ದೂರಿ ಯಶಸ್ವಿಗೊಳಿಸಬೇಕು. ಜೊತೆಗೆ ಕಾರ್ಯಕರ್ತರನ್ನು ಒಗ್ಗೂಡಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ರಮೇಶಗೌಡ, ಜೆಡಿಎಸ್ ಮುಖಂಡ ಚಂದ್ರೇಶ್, ಎಸ್ಸಿ ಘಟಕದ ಅಧ್ಯಕ್ಷ ತಿಮ್ಮೇಶ್, ಎಸ್ ಟಿ ಘಟಕದ ಅಧ್ಯಕ್ಷ ಶಿವಣ್ಣ ಇನ್ನು ನೂರಾರು ಕಾರ್ಯಕರ್ತರು ಈ ಪೂರ್ವಭಾವಿ ಸಭೆಯಲ್ಲಿ…
ಕೆ.ಆರ್.ಪೇಟೆ: ದ್ವಿತೀಯ ಪಿಯುಸಿ ವ್ಯಾಸಂಗವು ವಿದ್ಯಾರ್ಥಿ ಜೀವನದ ನಿರ್ಣಾಯಕ ಘಟ್ಟವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಹಬ್ಬದಂತೆ ಎದುರಿಸಿ ಸರ್ವಶ್ರೇಷ್ಠ ಸಾಧನೆ ಮಾಡಬೇಕು ಎಂದು ಸಚಿವ ಡಾ.ನಾರಾಯಣಗೌಡ ಹೇಳಿದರು. ಕೆ.ಆರ್.ಪೇಟೆ ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಹಾಗೂ ಶಾರದಾ ಪೂಜಾ ಸಮಾರಂಭದಲ್ಲಿ ಭಾಗವಹಿಸಿದ್ದ ಸಚಿವ ಡಾ.ನಾರಾಯಣಗೌಡ ಮಾತನಾಡಿದರು. ಯುವಶಕ್ತಿ ಬಲಿಷ್ಠ ಶಕ್ತಿಯಾಗಿದೆ. ಯುವಜನರು ಏಕಾಗ್ರತೆ ಹಾಗೂ ಆತ್ಮವಿಶ್ವಾಸದಿಂದ ಮುನ್ನಡೆದರೆ ಯಾವುದೇ ಕೆಲಸವನ್ನು ಮಾಡಿ ಗುರಿಯನ್ನು ತಲುಪಬಹುದಾಗಿದೆ. ಆದ್ದರಿಂದ ತಾವುಗಳು ತರಗತಿಗಳಲ್ಲಿ ಕಲಿತ ಪಾಠಪ್ರವಚನಗಳನ್ನು ನೆನಪು ಮಾಡಿಕೊಂಡು ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಯ ಪ್ರಶ್ನೆಗಳನ್ನು ಚೆನ್ನಾಗಿ ಓದಿ ಪ್ರಶ್ನೆಗೆ ಸರಿಯಾದ ನಿಖರ ಉತ್ತರವನ್ನು ಬರೆಯಬೇಕು. ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ಸಾಧನೆ ಮಾಡಲು ಧೃಡವಾದ ಸಂಕಲ್ಪವನ್ನು ಮಾಡಿ ತಲೆ ಬಗ್ಗಿಸಿ ಪುಸ್ತಕಗಳನ್ನು ಓದಿ ಮನನ ಮಾಡಿಕೊಂಡರೆ. ಮುಂದೆ ಜೀವನದಲ್ಲಿ ತಲೆ ಎತ್ತಿ ಬದುಕು ನಡೆಸಬಹುದಾಗಿದೆ ಎಂದು ಸಚಿವ ನಾರಾಯಣಗೌಡ ಹೇಳಿದರು. ಬಿಜಿಎಸ್ ಶಿಕ್ಷಣ…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆ ಸಂದರ್ಭದಲ್ಲಿ, ಗ್ರಾಮದ ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದರು. ಗ್ರಾಮದಲ್ಲಿ ಆಯೋಜಿಸಿದ್ದ ಜಯಂತಿ ಕಾರ್ಯಕ್ರಮದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವು ಬೆಳ್ಳಿಯ ರಥದಲ್ಲಿ ನೂರಾರು ಜನರ ಸಮ್ಮುಖದಲ್ಲಿ, ಮಧ್ಯಾಹ್ನದ ವೇಳೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಮಾವಿನಕೆರೆ ಮುಖ್ಯರಸ್ತೆಯಲ್ಲಿ ಸುಡುಬಿಸಿಲಿನಲ್ಲಿ ನೆರೆದಿದ್ದ ನೂರಾರು ಹಿಂದೂ ಕಾರ್ಯಕರ್ತರಿಗೆ ಗ್ರಾಮದ ಮುಸ್ಲಿಂ ಬಾಂಧವರು ಕುಡಿಯಲು ತಂಪು ಪಾನೀಯಗಳನ್ನು ವಿತರಿಸಿ ಭಾವೈಕ್ಯತೆ ಮೆರೆದರು. ಜೈ ಭೀಮ್ ಘೋಷಣೆಯನ್ನು ಕೂಗುತ್ತಾ, ನಮ್ಮ ಗ್ರಾಮದಲ್ಲಿ ಯಾವುದೇ ಭೇದ ಭಾವಗಳಿಲ್ಲ, ಸಮಾನತೆಯ ಭಾವೈಕ್ಯತೆ, ಎಂದಿಗೂ ಸಹ ಇರಲಿದೆ ನಮ್ಮ ಗ್ರಾಮ ನಮ್ಮ ಹೆಮ್ಮೆ ಎಂದರು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮುಖಂಡರಾದ ಮಹಮದ್ ಆರೂನ್. ಕಲೀಲ್ ಪಾಷಾ. ಯುವ ಮುಖಂಡರಾದ ರಹಮತ್ ಉಲ್ಲಾ. ಇಬ್ರಾತ್. ಹರ್ಷದ್. ದಿಲ್ಲು.ಮುಬಾರಕ್ (ಬನ್ನ). ಮತ್ತು ಗ್ರಾ.ಪಂ. ಸದಸ್ಯರಾದ ಖದೀರ್ ಪಾಷ. ತಬ್ರೇಜ್. ಸೇರಿದಂತೆ ಮುಂತಾದ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ವರದಿ: ಸಚಿನ್…
ತುಮಕೂರು: ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಸರ್ಕಾರವನ್ನು ಒತ್ತಾಯಿಸಿದರು. ತಾಲ್ಲೂಕಿನ ನಾಗವಲ್ಲಿಯಲ್ಲಿ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಪಂಪು ಮೋಟಾರುಗಳನ್ನು ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ವಿವಿಧ ನಿಗಮಗಳ ಅಡಿಯಲ್ಲಿ ಗಂಗಾಕಲ್ಯಾಣ ಯೋಜನೆಗೆ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು, ಆಗ ಮಾತ್ರ ನಿಜವಾಗಿಯೂ ರೈತರಿಗೆ ಅನುಕೂಲವಾಗುತ್ತದೆ. ಕೇವಲ ಕೆಲವೇ ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಿದರೆ ರೈತರಿಗೆ ನ್ಯಾಯ ದೊರೆಕಿಸಿಕೊಡಲು ಸಾಧ್ಯವಾಗುವುದಿಲ್ಲ. ಅಂಬೇಡ್ಕರ್ ಅಭಿವುದ್ಧಿ ನಿಗಮ ವಾಲ್ಮೀಕಿ ಅಭಿವೃದ್ಧಿ ನಿಗಮ ದೇವರಾಜ ಅರಸು ಅಭಿವೃದ್ಧಿ ನಿಗಮ ಹೀಗೆ ವಿವಿಧ ನಿಗಮಗಳ ಅಡಿಯಲ್ಲಿ ವರ್ಷಕ್ಕೆ ಕನಿಷ್ಟ 50 ಮಂದಿ ರೈತರಿಗೆ ಅವಕಾಶ ನೀಡಿದರೆ ಒಂದು ತಾಲ್ಲೋಕಿನ ಸುಮಾರು 250 ರಿಂದ 300 ಮಂದಿ ರೈತರಿಗೆ ಅನುಕೂಲವಾಗುತ್ತದೆ ಎಂದರು. ಇನ್ನು ಸಕಾಲಕ್ಕೆ ಮೋಟಾರು ಪಂಪ್ ವಿತರಣೆಯ ಕುರಿತು ಮಾತನಾಡಿದ ಶಾಸಕರು ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಬೋರ್ ಕೊರೆದ ಮೂರು ತಿಂಗಳೊಳಗಾಗಿ ಮೋಟರ್ ಪಂಪ್ ಸೆಟ್ ಗಳನ್ನು ರೈತರಿಗೆ ವಿತರಿಸಿದರೆ…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಜೈನ ಸಮಾಜದ ವತಿಯಿಂದ 2621 ನೇ ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆಯನ್ನು ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಬೆಳ್ಳಿ ರಥದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ, ತಮ್ಮ ಧರ್ಮದ ತತ್ವ ಸಿದ್ಧಾಂತಗಳ ಘೋಷಣೆಯೊಂದಿಗೆ, ಅಹಿಂಸಾ ಪರಮೋಧರ್ಮ, ಬದುಕಿ ಬದುಕಲು ಬಿಡಿ, ಎಂಬ ಸಂದೇಶವನ್ನು ಸಾರುತ್ತ, ಮಹಿಳಾ ಸಮಾಜದ ಪದಾಧಿಕಾರಿಗಳು, ವಿಶೇಷವಾದ ಉಡುಗೆಗಳನ್ನು ಧರಿಸಿ ಬಹಳ ವಿಶೇಷವಾಗಿ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಮಾಯಸಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ, ಮಜ್ಜಿಗೆ, ಕೋಸಂಬರಿ, ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜೈನ ಸಮಾಜದ ಅಧ್ಯಕ್ಷರಾದ ಚಂದ್ರಪ್ರಭು. ಕಾರ್ಯದರ್ಶಿ ಎಂ.ಪಿ.ಮದನ್ ಕುಮಾರ್. ಉಪಾಧ್ಯಕ್ಷ ಮಹಾವೀರ ಬಾಬು. ಮುಖಂಡರಾದ ವಿಪುಲ್ ಜೈನ್. ಎಂ.ಬಿ.ಪ್ರಕಾಶ್ ಮತ್ತು ಮಹಿಳಾ ಸಮಾಜದ ಅಧ್ಯಕ್ಷರಾದ ಸುಮತಿ ಪ್ರಕಾಶ್, ಶಾಂತಲಾ ಪ್ರಭು, ಆಶಾ ಚಂದು, ಆನಂದ ಮದನ್ ಕುಮಾರ್, ಶೈಲ ಪ್ರಸಾದ್ ಜೈನ್, ಸೇರಿದಂತೆ ಇನ್ನೂ…
ಸರಗೂರು: ಪಟ್ಟಣದ 4 ನೇ ವಾರ್ಡಿನಲ್ಲಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ನಡೆಸಲಾಯಿತು. ವಾರ್ಡ್ ನ ಮನೆ ಮನೆಗಳ ಮುಂದೆ ಹಸಿರು ತೋರಣ, ರಂಗೋಲಿ ಬಿಡಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ್ದವರಿಗೆ ಮಜ್ಜಿಗೆ, ಪಾನಕ ವಿತರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೆಳ್ಳಿರಥೋತ್ಸವ ವಾದ್ಯ., ನಗಾರಿ, ಸ್ವಾಂಡ್ಸ್ ಮೂಲಕ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಅಕ್ಕಪಕ್ಕದ ಗ್ರಾಮಗಳ ನಿವಾಸಿಗಳು ಕೂಡ ಭಾಗವಹಿಸಿರುವುದು ವಿಶೇಷವಾಗಿತ್ತು. ಸಭೆಯಲ್ಲಿ ವಾರ್ಡಿನ ಯಜಮಾನರು.ಪಪಂ ಸದಸ್ಯ ಎಸ್ ಎಲ್ ರಾಜಣ್ಣ., ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವಣ್ಣ, ಬೀಮಯ್ಯ, ಪ.ಪಂ. ಮಾಜಿ ಸದಸ್ಯ ಬಿಲ್ಲಯ್ಯ, ಬೋಗಪ್ಪ, ಸರಗೂರು ಕೃಷ್ಣ, ಪುಟ್ಟರಾಜು, ಮಧು, ಇಟ್ಪರಾಜಣ್ಣ, ಬಿಡುಗಲು ಶಿವಣ್ಣ, ಕೂಡಿಗಿಗೊವಿಂದರಾಜು, ಶಿವಕುಮಾರ್ ಬಿ ಮಟಕೇರಿ,ಕ ಮಹೇಂದ್ರ ಹೂವಿನಕೊಳ, ಮೋಹನ್ ಲಿಂಗೇನಹಳ್ಳಿ ಇನ್ನೂ ಅಕ್ಕ ಪಕ್ಕದ ಗ್ರಾಮಸ್ಥರು ಭಾಗಿಯಾಗಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5