Subscribe to Updates
Get the latest creative news from FooBar about art, design and business.
- ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
- ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
- ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
- ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
- ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
- ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
- ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
- ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
Author: admin
ಮಧುಗಿರಿ : ಜಿಲ್ಲೆಯ ಎಲ್ಲಾ ಹಿರಿಯ ಸಹಕಾರಿಗಳ ಸಹಕಾರದಿಂದ ವಿಧಾನಪರಿಷತ್ ಚುನಾವಣೆಯಲ್ಲಿ ನನ್ನ ಗೆಲುವು ಸಾಧ್ಯವಾಯಿತು ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು. ಪಟ್ಟಣದ ತುಮುಲ್ ಉಪ ಕೇಂದ್ರದ ಕ್ಷೀರಭವನದಲ್ಲಿ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್ ಗೆ ಆಯ್ಕೆಯಾದ ಆರ್.ರಾಜೇಂದ್ರ ರವರಿಗೆ ಅಭಿನಂದನಾ ಕಾರ್ಯಕ್ರಮ, ಡೈರಿ-ಕ್ಯಾಲೆಂಡರ್ ಬಿಡುಗಡೆ ಹಾಗೂ ಫಲಾನುಭವಿಗಳಿಗೆ ಪರಿಹಾರ ಚೆಕ್ ವಿತರಣೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರಿಗಳ ಮೂಲಕ ಯುವ ಸಹಕಾರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿರುವುದು ಖುಷಿ ತಂದಿದೆ ಎಂದರು. ನಮ್ಮ ತಾಲೂಕು ಉಪವಿಭಾಗವಾಗಿದ್ದು, ತುಮುಲ್ ವತಿಯಿಂದ ವಿದ್ಯಾರ್ಥಿನಿಯರ ಹಾಸ್ಟೆಲ್ ನ್ನು ಮಧುಗಿರಿಯಲ್ಲಿ ನಿರ್ಮಿಸಿ ವಿದ್ಯಾಭ್ಯಾಸಕ್ಕೆ ಅನೂಕೂಲ ಮಾಡಿಕೊಡಬೇಕಾಗಿದೆ ಎಂದ ಅವರು, ತಾಲ್ಲೂಕಿನ ಸಮಗ್ರ ಅಭಿವೃದ್ದಿಗೆ ಬದ್ಧವಾಗಿದ್ದೇನೆ. ಜಿಲ್ಲಾ ಬ್ಯಾಂಕ್ ನ ವತಿಯಿಂದ ಹಸು ಸಾಕಾಣಿಕೆಗಾಗಿ 32 ಜನರಿಗೆ 1ಕೋಟಿ 75 ಲಕ್ಷ ರೂ. ಗಳ ಸಾಲ ಮಂಜೂರು ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ನಲ್ಲಿ ಸಾಲ ಪಡೆದು ಮೃತಪಟ್ಟವರಿಗೆ ನೀಡಲಾಗುತ್ತಿದ್ದ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಜ. 11 ರಂದು ಬೆಳಗ್ಗೆ ಶಾಸಕರ ಉಪಸ್ಥಿತಿಯಲ್ಲಿ 73ನೇ ಗಣರಾಜ್ಯೋತ್ಸವ ಆಚರಿಸುವ ಕುರಿತಂತೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ತಾಲ್ಲೂಕು ಮಟ್ಟದ ಅಧಿಕಾರಿಗಳು ತಪ್ಪದೇ ಅಧೀನ ಸಿಬ್ಬಂದಿಯನ್ನು ನಿಯೋಜಿಸದೇ ತಾವುಗಳು ಖುದ್ದು, ಈ ಸಭೆಗೆ ಆಗಮಿಸಿ, ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ ಸೂಚಿಸಿದ್ದಾರೆ. ರಾಷ್ಟ್ರೀಯ ಹಬ್ಬಗಳ ಕಾರ್ಯಕ್ರಮಗಳಲ್ಲಿ ಹಾಗೂ ಪೂರ್ವಭಾವಿ ಸಭೆಗಳಿಗೆ ಹಲವಾರು ಅಧಿಕಾರಿಗಳು ಭಾಗವಹಿಸದಿರುವುದು ಕಂಡು ಬಂದಿದ್ದು, ಜನಪ್ರತಿನಿಧಿಗಳು, ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಈ ಅಧಿಕಾರಿಗಳ ಗೈರು ಹಾಜರಿ ಬಗ್ಗೆ ತುಂಬಾ ಆಕ್ರೋಶ ವ್ಯಕ್ತಪಡಿಸುತ್ತಿರುವುದರಿಂದ ಇನ್ನು ಮುಂದೆ ಇಂತಹ ಪ್ರಸಂಗಗಳಿಗೆ ಅವಕಾಶ ನೀಡದೇ ಅಧಿಕಾರಿಗಳೇ ಖುದ್ದಾಗಿ ಪೂರ್ವಭಾವಿ ಸಭೆಯಲ್ಲಿ ಬಾಗವಹಿಸಬೇಕು ಎಂಬುದಾಗಿ ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕೆ ತಪ್ಪಿದಲ್ಲಿ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮಕ್ಕೆ ಅನಿವಾರ್ಯವಾಗಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು. ಹಾಗೆಯೇ ಈ ಪೂರ್ವಭಾವಿ…
ಚಿತ್ರದುರ್ಗ:ಐತಿಹಾಸಿಕ ಮೇಕೆದಾಟು ಪಾದಯಾತ್ರೆಯ ಎರಡನೇಯ ದಿನದ ಪಾದಯಾತ್ರೆಯಲ್ಲಿ ಕಾಂಗ್ರೆಸ್ ವಕ್ತರಾರು ಹಾಗೂ ಚಿತ್ರದುರ್ಗ ಜಿಲ್ಲೆಯ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ ಭಾಗವಹಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಚಳ್ಳಕೆರೆ ತಾಲೂಕಿನ ಶಾಸಕರಾದ ಟಿ. ರಘುಮೂರ್ತಿ, ವೆಂಕಟರಮಣಪ್ಪ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡರು. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾವೇರಿ: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾಗಿದ್ದಾರೆ. ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು, ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮದ ಕಲಿಕೆಗೆ ಬಹಳಷ್ಟು ಒತ್ತು ನೀಡಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಚಿತ್ರದುರ್ಗ: ಹೊಂಡಗುಂಡಿಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ದಂಪತಿ ರಸ್ತೆಗೆಸೆಯಲ್ಪಟ್ಟ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೈಸೂರು ಪ್ರಧಾನ ರಸ್ತೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಮೈಸೂರು ಹಾಗೂಬಳ್ಳಾರಿ , ಬಾಂಬೆಗೆಹೋಗುವ ಮುಖ್ಯರಸ್ತೆ ಇದಾಗಿದ್ದು, ಈ ರಸ್ತೆ ದುರಸ್ತಿಗೊಂಡು ಸುಮಾರು ವರ್ಷಗಳೇ ಕಳೆದಿದ್ದು, ಹೊಂಡಹೊಂಡಿಗಳಿಂದ ತುಂಬಿದೆ. ಈ ಬಗ್ಗೆ ಸಾಕಷ್ಟು ಬಾರಿ ಸಾರ್ವಜನಿಕರು ದೂರು ನೀಡಿದರೂ ಸಂಬಂಧ ಪಟ್ಟ ಇಲಾಖೆಯಅಧಿಕಾರಿಗಳು ನಮಗೂಇದಕ್ಕೂ ಯಾವುದೇ ತರಹದ ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ ಎಂದು ಹಿರಿಯೂರು ತಾಲ್ಲೂಕಿನ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರಸ್ತೆಯು ಬಹಳ ಕಿರಿದಾಗಿದ್ದು, ಈ ರಸ್ತೆಯ ಮುಖಾಂತರವೇದಿನನಿತ್ಯ ಓಡಾಡುವ ವಾಹನಗಳ ಸಂಖ್ಯೆಯು ಸಹ ಹೆಚ್ಚಾಗುತ್ತಿದ್ದು ಹಾಗೂಶಾಲಾ- ಕಾಲೇಜುಗಳಿಗೆ ಹೋಗುವಂತಹವಿದ್ಯಾರ್ಥಿ/ ವಿದ್ಯಾರ್ಥಿನಿಯರೂ ಸಹ ವಾಹನಗಳ ಓಡಾಡುವಿಕೆಯಿಂದ ರಸ್ತೆಗಳನ್ನು ದಾಟಲು ತುಂಬಾ ಹರಸಾಹಸ ಪಡುವಂತಹ ಪರಸ್ಥಿತಿಗಳು, ಉಂಟಾಗಿದೆ,. ಒಂದಿನಲ್ಲ ಎರಡು ದಿನ ಅಲ್ಲಾ ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯ ವರೆಗೂ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಹ ತೀವ್ರ ಹೆಚ್ಚುತ್ತಿದ್ದು ಈ ಟ್ರಾಫಿಕ್…
ತಿಪಟೂರು: ನಗರದ ಹಾಸನ ವೃತ್ತದ ನಂದಿನಿ ಹಾಲಿನ ಮಳಿಗೆಯ ಆವರಣದಲ್ಲಿ ತಾಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಕನ್ನಡ ನಾಡಿನ ಕವಿಗಳು, ನಾಟಕಕಾರರು, ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್ ಪಾಟೀಲ್ ( ಚಂಪಾ ) ರವರಿಗೆ ನುಡಿನಮನ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರಸಭಾ ಸದಸ್ಯ ಮಹೇಶ್, ಜಯಕರ್ನಾಟಕ ಜನಪರ ವೇದಿಕೆ ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್ ಮತ್ತು ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್ ಮಾತನಾಡಿದರು. ಕಸಾಪ ಕಾರ್ಯದರ್ಶಿ ಮಂಜುನಾಥ್, ಹಿರಿಯ ಮುಖಂಡ ರಾಜಣ್ಣ, ವಿಶ್ವನಾಥ್ ನಿವೃತ್ತ ನೌಕರ ಜಯದೇವಪ್ಪ ಮತ್ತು ತುರುವೇಕೆರೆ ಪತ್ರಕರ್ತ ಪಾರ್ಥಸಾರಥಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಬಹುದಿನಗಳಿಂದ ಅಭಿವೃದ್ಧಿ ಕಾಣದೆ ಹಾಗೆಯೇ ಉಳಿದಿದ್ದ ಸುರಂಗ ಮಾರ್ಗ, ನಗರದ ಉಪ್ಪಾರಹಳ್ಳಿ ಗೇಟ್ ರೈಲ್ವೇ ಅಂಡರ್ ಪಾಸ್ ಇದೀಗ ಉದ್ಘಾಟನೆಗೊಂಡಿತು. ಶಾಸಕ ಜ್ಯೋತಿ ಗಣೇಶ್ ಅವರು ಉಪ್ಪಾರಹಳ್ಳಿ ಗೇಟ್ ರೈಲ್ವೇ ಅಂಡರ್ ಪಾಸ್ ಉದ್ಘಾಟನೆ ನೆರವೇರಿಸಿದರು. ಮೇಯರ್ ಬಿ.ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು. ಪಾಲಿಕೆ ಸದಸ್ಯರಾದ ಗಿರಿಜಾ ಧನಿಯಾಕುಮಾರ್ ರವರ ಅವಿರತ ಶ್ರಮದ ಫಲವಾಗಿ ಅಂಡರ್ ಪಾಸ್ ಸಾರ್ವಜನಿಕ ಸೇವೆ ಮುಕ್ತವಾಗಿದೆ. ಈ ಅಂಡರ್ ಪಾಸ್ ನಿಂದ ಎಸ್.ಎಸ್.ಪುರಂ, ಉಪ್ಪಾರಹಳ್ಳಿ, ವಿಜಯನಗರ ಶಿವಮೂಕಾಂಬಿಕಾ ನಗರ, ಮೊದಲಾದ ಬಡಾವಣೆಗಳ ನಾಗರಿಕರಿಗೆ ಅನುಕೂಲವಾಗಲಿದೆ. ವರದಿ: ರಾಜೇಶ್ ರಂಗನಾಥ್, ವಿಶೇಷ ಪ್ರತಿನಿಧಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ನಲಿ ಕಲಿ ಎಂಬ ನುಡಿಯನ್ನು ಪ್ರತಿಯೊಂದು ಶಾಲೆಗಳ ಮೇಲೂ ಬರೆದಿರುವುದನ್ನು ನಾವೆಲ್ಲರೂ ನೋಡಿರುತ್ತೇವೆ. ವಿಷಯ ಏನಪ್ಪ ಅಂದರೆ, ಇಂದಿನ ಈ ವ್ಯವಸ್ಥೆಯಲ್ಲಿ ಕಲಿಯಲು ಸರಿಯಾದ ಕಟ್ಟಡಗಳಿಲ್ಲ ಮತ್ತು ನಲಿಯಲು ಇರುವ ಆಟದ ಮೈದಾನವನ್ನು ಉಳಿಸಿಕೊಂಡು ಸುಸಜ್ಜಿತವಾಗಿ ಇಟ್ಟುಕೊಳ್ಳುವ ಬಗ್ಗೆ ಯಾವೊಬ್ಬ ಜನಪ್ರತಿನಿದಿಯೂ ತಲೆಕೆಡಿಸಿಕೊಂಡಿಲ್ಲ. ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದ ಸರ್ಕಾರಿ ಶಾಲಾ ಮೈದಾನವು ಸರಿಯಾದ ವ್ಯವಸ್ಥೆ ಇಲ್ಲದೇ ಮಕ್ಕಳ ಆಟೋಟಗಳಿಗೆ ತಡೆಯಾಗಿದೆ. ಕಾಲಕಾಲಕ್ಕೆ ಸರಿಯಾದ ನಿರ್ವಹಣೆ ಇಲ್ಲದೇ ಮೈದಾನದ ತುಂಬಾ ಗಿಡಗಂಟೆಗಳು ಬೆಳೆದುಕೊಂಡ ಕಾರಣ ಮೈದಾನವು ಆಡಲು ಯೋಗ್ಯವಲ್ಲದಂತಾಗಿದೆ. ಕಳೆದ ವರ್ಷ ಜನವರಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಗೆ ಆಗಮಿಸಿದ್ದ ಇಲ್ಲಿನ ಸ್ಥಳೀಯ ಶಾಸಕರಾದ ಮಸಾಲ ಜಯರಾಮ್’ರವರು ಈ ಕ್ರೀಡಾಂಗಣಕ್ಕೆ ಇನ್ನು 6 ತಿಂಗಳಿನಲ್ಲಿ ಈ ಮೈದಾನಕ್ಕೆ ಫೆಡ್ ಲೈಟ್ ವ್ಯವಸ್ಥೆ ಮಾಡಿಸಿಕೊಡುವ ಆಶ್ವಾಸನೆ ನೀಡಿದ್ದರು. ಆದರೆ, ಒಂದು ವರ್ಷ ಕಳೆದರೂ ಆ ಮಾತು ಕೇವಲ ಆಶ್ವಾಸನೆಯಾಗಿಯೇ ಉಳಿದುಕೊಂಡಿದೆ. ಇನ್ನಾದರೂ ಜನಪ್ರತಿನಿದಿಗಳು ಎಚ್ಚೆತ್ತುಕೊಂಡು ಈ ಕ್ರೀಡಾಂಗಣವನ್ನು ದುರಸ್ತಿಗೊಳಿಸಿ ಮಕ್ಕಳಿಗೆ ಆಡಲು ಅನುವು ಮಾಡಿಕೊಡಬೇಕಾಗಿದೆ…
ಬೆಂಗಳೂರು: ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆ್ಯಕ್ಟ್ (ವಿಪತ್ತು ನಿರ್ವಹಣಾ ಕಾಯ್ದೆ) 2005ರ ಐಪಿಸಿ ಸೆಕ್ಷನ್ 141, 143, 290, 336ರ ಅಡಿ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಈ ವೇಳೆ ಕಾಂಗ್ರೆಸ್ ನವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಾಗಲಕೋಟೆಯಲ್ಲಿ ಸಚಿವ ಗೋವಿಂದ ಕಾರಜೋಳ ಗರಂ ಆಗಿದ್ದಾರೆ. ಬಾಗಲಕೋಟೆಯಲ್ಲಿ ಈ ಸಂಬಂಧ ಹೇಳಿಕೆ ನೀಡಿದ ಸಚಿವ ಗೋವಿಂದ ಕಾರಜೋಳ, ಜನರ ಹಿತದೃಷ್ಟಿಯಿಂದ ನಡೆಯುತ್ತಿರುವ ಪಾದಯಾತ್ರೆ ಅಲ್ಲ. ಪಾದಯಾತ್ರೆಯಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಿ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಎಲ್ಲರ ಹಕ್ಕು. ಅದನ್ನು ಮೊಟಕುಗೊಳಿಸಬಾರದೆಂದು ತೊಂದರೆ ಕೊಟ್ಟಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy