Subscribe to Updates
Get the latest creative news from FooBar about art, design and business.
- ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
- ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ
- ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ
- ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
- ಎಲ್ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
- ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
- ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
Author: admin
ಪಾವಗಡ: ತಾಲೂಕು ನಿಡಗಲ್ಲು ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೊತ್ತೂರು ಗ್ರಾಮದಲ್ಲಿ ಸಮಾಜಸೇವಕ ನೆರಳೆಕುಂಟೆ ನಾಗೇಂದ್ರಪ್ಪ ಈ ಗ್ರಾಮಗಳ ಅಭಿವೃದ್ಧಿಯ ಸ್ಥಿತಿಗತಿಗಳ ಬಗ್ಗೆ ವೀಕ್ಷಣೆಯನ್ನು ಮಾಡಿದರು. ಬಳಿಕ ಕೊತ್ತೂರು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿನ ಗ್ರಾ. ಪಂ.ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಗ್ರಾಮದ ಅಭಿವೃದ್ಧಿಯ ಜೊತೆಗೆ ಸ್ವಚ್ಛತೆಗೂ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು. ಇದೇ ವೇಳೆ ಮಾತನಾಡಿದ ಮಾಜಿ ಅಧ್ಯಕ್ಷ ಕರಿಬಸಪ್ಪ ಮಾತನಾಡಿ, ತಾಲೂಕಿನ ನಾಗೇಂದ್ರಪ್ಪನವರು ಸಮಾಜ ಸೇವೆಯಲ್ಲಿ ತಾಲೂಕಿನ ಎಲ್ಲಾ ಜನರಿಗೂ ಚಿರಪರಿಚಿತರಾಗಿದ್ದಾರೆ. ಇವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಅವರಿಗೆ ಎಲ್ಲ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಗ್ರಾಮದ ಪಂಚಾಯಿತಿ ಉಪಾಧ್ಯಕ್ಷರಾದ ಜೈರಾಮ್ ಮಾತನಾಡಿ, ಸಮಾಜಸೇವಕರಾದ ನೇರಳೆಕುಂಟೆ ನಾಗೇಂದ್ರಪ್ಪನವರ ಗುರುತು ಯಾವುದೇ ಆಗಿರಲಿ. ಕೊತ್ತೂರಿನ ನಮ್ಮ ಅಣ್ಣತಮ್ಮಂದಿರು ಅಕ್ಕ ತಂಗಿಯರು ನಾವು ಎಲ್ಲಾ ಸೇರಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡರು. ವರದಿ: ನಂದೀಶ್ ಕೊತ್ತೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಮಧುಗಿರಿ: ರಾಯಚೂರು ಕೋರ್ಟ್ ಆವರಣದಲ್ಲಿ ಸಂವಿಧಾನ ದಿನಾಚರಣೆ ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸಿ ಅವಮಾನಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ, ವೃತ್ತಿ ಗೌರವಕ್ಕೆ ಧಕ್ಕೆ ತಂದಿರುವುದಲ್ಲದೆ ಸಂವಿಧಾನಕ್ಕೆ ಮತ್ತು ಭಾರತ ರತ್ನ, ಮಹಾನಾಯಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ನ್ಯಾಯಾಧೀಶರನ್ನು ಕೂಡಲೇ ವಜಾ ಮಾಡಬೇಕೆಂದು ಎಂದು ಅಖಿಲ ಕರ್ನಾಟಕ ಶ್ರೀ ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ಸಂಘದ ಅಧ್ಯಕ್ಷ ಶ್ರೀಹರಿ ಗಣೇಶ್ ಒತ್ತಾಯಿಸಿದ್ದಾರೆ. ಪಟ್ಟಣದ ಉಪವಿಭಾಗಾಧಿಕಾರಿಗಳು ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರು ನ್ಯಾಯಾಧೀಶ ಸ್ಥಾನದಲ್ಲಿ ಕೂರಲು ಅರ್ಹತೆಯುಳ್ಳವರಲ್ಲ . ಇವರ ಹಿನ್ನೆಲೆ ತಿಳಿಯದೇ ಇವರಿಗೆ ನ್ಯಾಯಾಧೀಶರ ಹುದ್ದೆ ನೀಡಿರಬಹುದು. ಈ ಕೂಡಲೇ ಇವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣವನ್ನು ದಾಖಲಿಸಬೇಕು . ತನಿಖೆ ನಡೆಸಿ ನ್ಯಾಯಾಧೀಶ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು. ಈ…
ಕೊರಟಗೆರೆ: ತಾಲ್ಲೂಕಿನ ಕೊಳಾಲ ಹೋಬಳಿಯ ಕೋಳಾಲ ವಲಯದ ವಜ್ಜನಕುರಿಕೆ ವ್ಯಾಪ್ತಿಯ ಕಾರ್ಯಕ್ಷೇತ್ರದ ವಿಜಯವೀರ ಆಂಜನೇಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 1.50 ಲಕ್ಷ ರೂ.ಗಳ ಡಿಡಿ ವಿತರಣೆ ಮಾಡಲಾಯಿತು. ಜಿಲ್ಲಾ ನಿರ್ದೇಶಕ ದಿನೇಶ್ ಮಾತನಾಡಿ, ಈ ಗ್ರಾಮದಲ್ಲಿ ಅಲ್ಪ ಪ್ರಮಾಣದ ಗ್ರಾಮಸ್ಥರಿದ್ದರು ಸಹ ಈಭಾಗದಲ್ಲಿ ಎರಡು ದೇವಾಲಗಳನ್ನು ಜೀರ್ಣೊದ್ದಾರ ಮಾಡುತ್ತಿರುವುದು ನೋಡಿದರೆ ನಿಜವಾಗಿಯೂ ಉನ್ನತ ಶಿಕ್ಷಣವಿದ್ದಂತೆ, ನಿಮ್ಮ ಈ ಒಳ್ಳೆಯ ಕಾರ್ಯಕ್ಕೆ ಶ್ರೀ ಕ್ಷೇತ್ರದ ಪೂಜ್ಯರಾದ ಡಾ.ವೀರೇಂದ್ರ ಹೆಗ್ಗೆಡೆ ರವರು ಈ ಒಂದು ಮೊತ್ತದ ಡಿಡಿಯನ್ನು ನೀಡಿರುತ್ತಾರೆ ಎಂದರು. ನಂತರ ತಾಲ್ಲುಕು ಯೋಜನಾಧಿಕಾರಿ ಬಾಲಕೃಷ್ಣ ಮಾತನಾಡಿ, ಪ್ರತಿ ಗ್ರಾಮಗಳಿಗೂ ಏಳಿಗೆ ಆಗಬೇಕಾದರೆ ಅಂತ ಕಡೆ ಇಂತಹ ವೀರಾಂಜನೇಯ ಸ್ವಾಮಿ ದೇವಸ್ಥಾನಗಳು ಇರಬೇಕು. ಇಂತಹ ದೇವಾಲಯಗಳನ್ನು ನಿರ್ಮಿಸಿ ಅವುಗಳನ್ನು ಜೀರ್ಣೋದ್ಧಾರ ಮಾಡಬೇಕು. ದೇವಾಲಯಗಳು ಇರುವ ಕಡೆ ಸಂಸ್ಕೃತಿ ಬೆಳೆಯುತ್ತದೆ. ಒಳ್ಳೆಯ ಸಂಸ್ಕಾರ ಇರುತ್ತದೆ. ನಮ್ಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಸಹ ಗ್ರಾಮಗಳ ಅಭಿವೃದ್ದಿಗಾಗಿ ಶ್ರಮಿಸುತ್ತಿದೆ.…
ತುಮಕೂರು: ಸಿರಾ ತಾಲೂಕಿನ ಮಿನಿವಿಧಾನ ಸೌಧದಲ್ಲಿ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ಹಾಗೂ ಬಗರ್ಹುಕುಂ ಸಾಗುವಳಿ ಚೀಟಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿರಾ ತಾಲೂಕಿನ ಶಾಸಕರಾದ ಸಿ.ಎಂ. ರಾಜೇಶ್ ಗೌಡ ಹಕ್ಕುಪತ್ರ ಹಾಗೂ ಸಾಗುವಳಿ ಪತ್ರ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಹಿಂದೆ ಇದ್ದ ಸರ್ಕಾರಗಳು ಗೋಮಾಳ ಪ್ರದೇಶಗಳು ಕಡಿಮೆಯಾಗುತ್ತಿವೆ, ಆದ್ದರಿಂದ ಸಾಗುವಳಿ ಚೀಟಿ ವಿತರಣೆ ಮಾಡಬಾರದು ಎಂದು ನಿರ್ಧಾರ ಮಾಡಿದ್ದರು. ಈಗ ನಮ್ಮ ಸರ್ಕಾರ ಗೋಮಾಳದಲ್ಲಿ ಸಾಗುವಳಿ ಕೊಡಬೇಕು ಎಂದು ನಿರ್ಧಾರ ಮಾಡಿತ್ತು. ನಮ್ಮ ಕಂದಾಯ ಸಚಿವರಾದ ಆರ್.ಅಶೋಕ್ ರವರ ನೇತೃತ್ವದಲ್ಲಿ, ಸಚಿವ ಮಾಧುಸ್ವಾಮಿ ಅವರ ಸದಸ್ಯತ್ವದಲ್ಲಿ ಸಮಿತಿ ರಚನೆ ಮಾಡಿದೆ. ರೈತರು ಸಾಗುವಳಿ ಮಾಡುತ್ತಿದ್ದಾರೆ ಅಲ್ಲಿ ಇರುವಂತಹ ಹಸುಕರುಗಳು ಸಂಖ್ಯೆಯ ಅನುಗುಣವಾಗಿ ಗೋಮಾಳ ಜಮೀನನ್ನು ರೈತರಿಗೆ ಸಾಗುವಳಿ ಮಾಡುವುದಕ್ಕೆ ಕೊಡಬೇಕು ಎಂದು ಶೀಘ್ರದಲ್ಲಿ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದರು. ತಮ್ಮ ಮನೆ ಬಾಗಿಲಿಗೆ ಪಿಂಚಣಿ, ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ನಿಮ್ಮ ಮನೆ ಬಾಗಿಲಿಗೆ…
ಪಾವಗಡ: ದೇಶ ರಕ್ಷಣೆ ನಿರತರಾಗಿದ್ದ ವೀರ ಯೋಧರು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾಗಿ 3 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಪಟ್ಟಣದ ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಅಶ್ರುತರ್ಪಣಾ ಕಾರ್ಯಕ್ರಮದ ಮೂಲಕ ಅಗಲಿದ ಯೋಧರಿಗೆ ಗೌರವ ಸಮರ್ಪಣೆ ನಡೆಸಲಾಯಿತು. ವೀರ ಯೋಧರನ್ನು ನೆನಪಿಸಿಕೊಂಡು ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, 3 ವರ್ಷಗಳ ಹಿಂದೆ ಪುಲ್ವಾಮ ದಾಳಿಯಲ್ಲಿ 40 ಜನ ಸೈನಿಕರು ವೀರ ಮರಣ ಹೊಂದಿದ್ದರು. ಈ ಬಲಿದಾನದ ನೆನಪು ಎಲ್ಲಾ ಭಾರತೀಯರಲ್ಲೂ ಶಾಶ್ವತವಾಗಿ ಉಳಿಯಲಿದೆ ಎಂದು ಯೋಧರ ತ್ಯಾಗಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ, ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಸಾಯಿ, ಮಂಜುನಾಥ, ಅನಿಲ್ ಕುಮಾರ್, ವಿಶಾಲ್ ಪ್ರಜ್ವಲ್, ಗೋಪಿನಾಥ್ ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪಾವಗಡ: ತಾಲೂಕಿನ ಸಿ ಕೆ ಪುರ ಪಂಚಾಯ್ತಿ ವ್ಯಾಪ್ತಿಯ 3 ಹಳ್ಳಿಗಳಲ್ಲಿ ನೇರಳೆ ಕುಂಟೆ ನಾಗೇಂದ್ರ ಕುಮಾರ್ ಅವರ ಮಿಂಚಿನ ಸಂಚಾರ ನಡೆಸಿ, ಗ್ರಾಮದ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಯುವ ಮುಖಂಡರು, ಸಮಾಜ ಸೇವಕರಾಗಿರುವ ನೇರಳೆ ಕುಂಟೆ ನಾಗೇಂದ್ರ ಕುಮಾರ್ ಅವರಿಗೆ ಗ್ರಾಮಸ್ಥರು ಅದ್ದೂರಿಯಾದ ಸ್ವಾಗತವನ್ನು ಕೋರಿದ್ದಾರೆ ಮತ್ತು ಯುವಕರು ಎಲ್ಲಾರು ಸೇರಿ ನೇರಳೆ ಕುಂಟೆ ನಾಗೇಂದ್ರ ಕುಮಾರ್ ಅವರೊಂದಿಗೆ ಪಕ್ಷಾತೀತವಾಗಿ ಜೊತೆಗಿರುತ್ತೇವೆ ಎಂದು ಭರವಸೆ ನೀಡಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಈ ಪಂಚಾಯಿತಿ ವ್ಯಾಪ್ತಿಯ ಹರಿಹರಪುರ ಗ್ರಾಮದಲ್ಲಿ ಇರುವ ಮೂಲಭೂತ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ನೇರಳೆ ಕುಂಟೆ ನಾಗೇಂದ್ರ ಕುಮಾರ್, ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಕರೆಸಿ, ಸ್ಥಳದಲ್ಲೇ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ಆದಷ್ಟು ಬೇಗ ಈ ಸಮಸ್ಯೆ ಬಗೆಹರಿಸಿಕೊಡುವುದಾಗಿ ಪಿಡಿಒ ಭರವಸೆ ನೀಡಿದರು. ಬಳಿಕ ಪಂಚಾಯಿತಿ ವ್ಯಾಪ್ತಿಯ ಕೊತ್ತೂರು ಗ್ರಾಮಕ್ಕೆ ಭೇಟಿ ನೀಡಿದ ಗ್ರಾಮಸ್ಥರು…
ತುಮಕೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಕಾರು ಸುಟ್ಟು ಕರಕಲಾದ ಘಟನೆ ತುಮಕೂರಿನಲ್ಲಿ ನಡೆದಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಟಾಟಾ ಪಂಚ್ ಕಾರು ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ತುಮಕೂರಿನ ಗುಬ್ಬಿ ಗೇಟ್ ನಲ್ಲಿ ಘಟನೆ ನಡೆದಿದ್ದು, ಕಾರು ತುಮಕೂರಿನಿಂದ ಗುಬ್ಬಿ ಕಡೆ ಚಲಿಸುತ್ತಿತ್ತು ಎನ್ನಲಾಗಿದೆ. ಘಟನೆ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ವರದಿ: ಮಾರುತಿ ಪ್ರಸಾದ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಕೊರಟಗೆರೆ: ಗ್ರಾಹಕರಿಂದ ತೆರಿಗೆ ಪಡೆಯದೇ ವಹಿವಾಟು ಮಾಡ್ತಾರಂತೆ.. ಅದಕ್ಕಾಗಿ ಸರಕಾರಕ್ಕೆ ಚಿನ್ನದ ಅಂಗಡಿ ಮಾಲೀಕರು ತೆರಿಗೆ ಕಟ್ಟಲ್ವಂತೆ.. ಜ್ಯುವೆಲರಿ , ಬ್ಯಾಂಕರ್ ಹಾಗೂ ಗೋಲ್ಡ್ ಲೋನ್ ಅಂಗಡಿಯ ಮಾಲೀಕರು ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಶೇ.30ರಷ್ಟು ಮಾತ್ರ ಜಿಎಸ್ಟಿ ರಸೀದಿ ಕೋಡ್ತಾರಂತೆ.. ಇನ್ನೂಳಿದ ಶೇ.70ರಷ್ಟು ವಹಿವಾಟಿನ ಲೆಕ್ಕಕ್ಕೆ ನಕಲಿ ರಸೀದಿಯೇ ನೀಡ್ತಾರಂತೆ.. ತೆರಿಗೆಮುಕ್ತ ಆಗಿರುವ ಕೊರಟಗೆರೆ ಕ್ಷೇತ್ರದ ಬಲಿಷ್ಟ ಚಿನ್ನದ ಅಂಗಡಿಗಳ ವಹಿವಾಟಿನ ತನಿಖೆಗೆ ಆದಾಯ ಇಲಾಖೆಯ ಮೌನವೇಕೆ ಎಂಬುದೇ ಯಕ್ಷಪ್ರಶ್ನೆ. ಕೊರಟಗೆರೆ ಪಟ್ಟಣದ ಮತ್ತು ಗ್ರಾಮೀಣ ಪ್ರದೇಶದಲ್ಲಿ 30ಜ್ಯುವೆಲರ್ಸ್ , ಐದಾರು ಬ್ಯಾಂಕರ್ಸ್ ಮತ್ತು ನಕಲಿ ಗೋಲ್ಡ್ ಲೋನ್ ಅಂಗಡಿಗಳಿವೆ. ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಆದಾಯದ ಲೆಕ್ಕ ನೀಡಲು ಶೇ.30ರಷ್ಟು ಜಿಎಸ್ಟಿ ರಸೀದಿ ನೀಡ್ತಾರಂತೆ. ಆದಾಯ ಮರೆಮಾಚಲು ಶೇ.70ರಷ್ಟು ನಕಲಿ ರಸೀದಿ ನೀಡಿ ಸರಕಾರಕ್ಕೆ ತೆರಿಗೆ ಕಟ್ಟದೇ ವಂಚನೆ ಮಾಡ್ತಾರೇ. ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಬಂದಾಕ್ಷಣ ಅಂಗಡಿಗಳಿಗೆ ವಾರಪೂರ್ತಿ ರಜೆ ಘೋಷಣೆ ಮಾಡಿ ಕೇಂದ್ರ ಮತ್ತು ರಾಜ್ಯ…
ಚಿತ್ರದುರ್ಗ: ಡಿಜಿಟಲ್ ಕಾಂಗ್ರೆಸ್ ಸದಸ್ಯತ್ವ ನೋಂದಾವಣಿ ಅಭಿಯಾನಕ್ಕೆ ಜಿಲ್ಲೆಯ ಹಿರಿಯೂರು ನಗರದ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು. ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಹೆಚ್ಚು ಒತ್ತು ನೀಡಬೇಕು, 2023ರ ವಿಧಾನಸಭಾ ಚುನಾವಣೆ ಅಗ್ನಿ ಪರೀಕ್ಷೆಯಾಗಿದ್ದು, ಈ ಅಗ್ನಿ ಪರೀಕ್ಷೆಯಲ್ಲಿ ಗೆಲ್ಲಲೇ ಬೇಕು. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಹೇಳಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ .ಶಿವಕುಮಾರ್ ಹಾಗೂ ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಝಕ್ಕಪ್ಪ ಸೂಚನೆಯ ಮೇರೆಗೆ ಅಧ್ಯಕ್ಷರು, ಉಪಾಧ್ಯಕ್ಷರಿಗೆ ನೇಮಕಾತಿ ಆದೇಶ ಪತ್ರವನ್ನು ಹಾಗೂ ಯುವ ಕಾಂಗ್ರೆಸ್ ನ ಪಂಚಾಯಿತಿ ಹಾಗೂ ಇದೇ ಸಂದರ್ಭದಲ್ಲಿ ವಾರ್ಡ್ ಗಳ ಯೂಥ್ ಅಧ್ಯಕ್ಷರ ನೇಮಕಾತಿಯ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ನೀಡಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಖಾದಿರಮೇಶ್, ಡಾ.ಸುಜಾತ, ಕೆ ಪಿ ಸಿ ಸಿ ಕಾರ್ಮಿಕ ವಿಭಾಗದ …
ಕುಟುಂಬ ಪಿಂಚಣಿ ಲಭ್ಯವಿಲ್ಲದ ಕಾರಣ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಕ್ಕಳು ತಮ್ಮನ್ನು ತಾವು ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಪಾಲನೆ ಮತ್ತು ಜೀವನಶೈಲಿಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ಕುಟುಂಬ ಪಿಂಚಣಿಗೆ ಸಂಬಂಧಿಸಿದಂತೆ ಸರ್ಕಾರ ಹೊಸ ನಿಯಮವನ್ನು ಹೊರಡಿಸಿದೆ. ಹೊಸ ನಿಯಮಗಳ ಪ್ರಕಾರ, ಮರಣ ಹೊಂದಿದ ಸರ್ಕಾರಿ ನೌಕರರ, ಮಾನಸಿಕ ವಿಕಲಾಂಗ ಮಕ್ಕಳಿಗೂ ಕುಟುಂಬ ಪಿಂಚಣಿಯ (Family pension) ಪ್ರಯೋಜನ ಸಿಗಲಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಕ್ಕಳು ಕೂಡ ಕುಟುಂಬ ಪಿಂಚಣಿಗೆ ಅರ್ಹರಾಗಿರುತ್ತಾರೆ (Deceased Government Employee). ಕುಟುಂಬ ಪಿಂಚಣಿ (Family pension) ಲಭ್ಯವಿಲ್ಲದ ಕಾರಣ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಕ್ಕಳು ತಮ್ಮನ್ನು ತಾವು ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಪಾಲನೆ ಮತ್ತು ಜೀವನಶೈಲಿಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಕ್ಕಳು ಇತರರನ್ನು ಅವಲಂಬಿಸಬೇಕಾಗಿರುತ್ತದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ (Jithendra Sing) ಮಾತನಾಡಿ, ಮಾನಸಿಕ ಅಸ್ವಸ್ಥರಾಗಿರುವ ಮಕ್ಕಳಿಗೆ ಕುಟುಂಬ ಪಿಂಚಣಿಯ ಲಾಭವನ್ನು ಬ್ಯಾಂಕ್ಗಳು (Bank) ನೀಡುತ್ತಿಲ್ಲ ಎಂಬುದು ಪಿಂಚಣಿ ಮತ್ತು…