Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ತುಮಕೂರು: ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಸರ್ಕಾರವನ್ನು ಒತ್ತಾಯಿಸಿದರು. ತಾಲ್ಲೂಕಿನ ನಾಗವಲ್ಲಿಯಲ್ಲಿ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಪಂಪು ಮೋಟಾರುಗಳನ್ನು ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ವಿವಿಧ ನಿಗಮಗಳ ಅಡಿಯಲ್ಲಿ ಗಂಗಾಕಲ್ಯಾಣ ಯೋಜನೆಗೆ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು, ಆಗ ಮಾತ್ರ ನಿಜವಾಗಿಯೂ ರೈತರಿಗೆ ಅನುಕೂಲವಾಗುತ್ತದೆ. ಕೇವಲ ಕೆಲವೇ ಮಂದಿ ಫಲಾನುಭವಿಗಳನ್ನು ಆಯ್ಕೆ ಮಾಡಿದರೆ ರೈತರಿಗೆ ನ್ಯಾಯ ದೊರೆಕಿಸಿಕೊಡಲು ಸಾಧ್ಯವಾಗುವುದಿಲ್ಲ. ಅಂಬೇಡ್ಕರ್ ಅಭಿವುದ್ಧಿ ನಿಗಮ ವಾಲ್ಮೀಕಿ ಅಭಿವೃದ್ಧಿ ನಿಗಮ ದೇವರಾಜ ಅರಸು ಅಭಿವೃದ್ಧಿ ನಿಗಮ ಹೀಗೆ ವಿವಿಧ ನಿಗಮಗಳ ಅಡಿಯಲ್ಲಿ ವರ್ಷಕ್ಕೆ ಕನಿಷ್ಟ 50 ಮಂದಿ ರೈತರಿಗೆ ಅವಕಾಶ ನೀಡಿದರೆ ಒಂದು ತಾಲ್ಲೋಕಿನ ಸುಮಾರು 250 ರಿಂದ 300 ಮಂದಿ ರೈತರಿಗೆ ಅನುಕೂಲವಾಗುತ್ತದೆ ಎಂದರು. ಇನ್ನು ಸಕಾಲಕ್ಕೆ ಮೋಟಾರು ಪಂಪ್ ವಿತರಣೆಯ ಕುರಿತು ಮಾತನಾಡಿದ ಶಾಸಕರು ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಬೋರ್ ಕೊರೆದ ಮೂರು ತಿಂಗಳೊಳಗಾಗಿ ಮೋಟರ್ ಪಂಪ್ ಸೆಟ್ ಗಳನ್ನು ರೈತರಿಗೆ ವಿತರಿಸಿದರೆ…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಜೈನ ಸಮಾಜದ ವತಿಯಿಂದ 2621 ನೇ ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆಯನ್ನು ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಬೆಳ್ಳಿ ರಥದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ, ತಮ್ಮ ಧರ್ಮದ ತತ್ವ ಸಿದ್ಧಾಂತಗಳ ಘೋಷಣೆಯೊಂದಿಗೆ, ಅಹಿಂಸಾ ಪರಮೋಧರ್ಮ, ಬದುಕಿ ಬದುಕಲು ಬಿಡಿ, ಎಂಬ ಸಂದೇಶವನ್ನು ಸಾರುತ್ತ, ಮಹಿಳಾ ಸಮಾಜದ ಪದಾಧಿಕಾರಿಗಳು, ವಿಶೇಷವಾದ ಉಡುಗೆಗಳನ್ನು ಧರಿಸಿ ಬಹಳ ವಿಶೇಷವಾಗಿ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಮಾಯಸಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ, ಮಜ್ಜಿಗೆ, ಕೋಸಂಬರಿ, ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜೈನ ಸಮಾಜದ ಅಧ್ಯಕ್ಷರಾದ ಚಂದ್ರಪ್ರಭು. ಕಾರ್ಯದರ್ಶಿ ಎಂ.ಪಿ.ಮದನ್ ಕುಮಾರ್. ಉಪಾಧ್ಯಕ್ಷ ಮಹಾವೀರ ಬಾಬು. ಮುಖಂಡರಾದ ವಿಪುಲ್ ಜೈನ್. ಎಂ.ಬಿ.ಪ್ರಕಾಶ್ ಮತ್ತು ಮಹಿಳಾ ಸಮಾಜದ ಅಧ್ಯಕ್ಷರಾದ ಸುಮತಿ ಪ್ರಕಾಶ್, ಶಾಂತಲಾ ಪ್ರಭು, ಆಶಾ ಚಂದು, ಆನಂದ ಮದನ್ ಕುಮಾರ್, ಶೈಲ ಪ್ರಸಾದ್ ಜೈನ್, ಸೇರಿದಂತೆ ಇನ್ನೂ…
ಸರಗೂರು: ಪಟ್ಟಣದ 4 ನೇ ವಾರ್ಡಿನಲ್ಲಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ನಡೆಸಲಾಯಿತು. ವಾರ್ಡ್ ನ ಮನೆ ಮನೆಗಳ ಮುಂದೆ ಹಸಿರು ತೋರಣ, ರಂಗೋಲಿ ಬಿಡಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ್ದವರಿಗೆ ಮಜ್ಜಿಗೆ, ಪಾನಕ ವಿತರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೆಳ್ಳಿರಥೋತ್ಸವ ವಾದ್ಯ., ನಗಾರಿ, ಸ್ವಾಂಡ್ಸ್ ಮೂಲಕ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಅಕ್ಕಪಕ್ಕದ ಗ್ರಾಮಗಳ ನಿವಾಸಿಗಳು ಕೂಡ ಭಾಗವಹಿಸಿರುವುದು ವಿಶೇಷವಾಗಿತ್ತು. ಸಭೆಯಲ್ಲಿ ವಾರ್ಡಿನ ಯಜಮಾನರು.ಪಪಂ ಸದಸ್ಯ ಎಸ್ ಎಲ್ ರಾಜಣ್ಣ., ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವಣ್ಣ, ಬೀಮಯ್ಯ, ಪ.ಪಂ. ಮಾಜಿ ಸದಸ್ಯ ಬಿಲ್ಲಯ್ಯ, ಬೋಗಪ್ಪ, ಸರಗೂರು ಕೃಷ್ಣ, ಪುಟ್ಟರಾಜು, ಮಧು, ಇಟ್ಪರಾಜಣ್ಣ, ಬಿಡುಗಲು ಶಿವಣ್ಣ, ಕೂಡಿಗಿಗೊವಿಂದರಾಜು, ಶಿವಕುಮಾರ್ ಬಿ ಮಟಕೇರಿ,ಕ ಮಹೇಂದ್ರ ಹೂವಿನಕೊಳ, ಮೋಹನ್ ಲಿಂಗೇನಹಳ್ಳಿ ಇನ್ನೂ ಅಕ್ಕ ಪಕ್ಕದ ಗ್ರಾಮಸ್ಥರು ಭಾಗಿಯಾಗಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಮಧುಗಿರಿ: ತಾಲೂಕು ದೊಡ್ಡೇರಿ ಹೋಬಳಿ ತಿಪ್ಪನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷರಾದ ಜಯಲಕ್ಷ್ಮಿ ಮಾದಿಗ ದಂಡೋರ ತಾಲೂಕು ಅಧ್ಯಕ್ಷರಾದ ಡಾ. ಸಿದ್ದಾಪುರ ಶಾಮಣ್ಣ ಡಾ. ಕ ಣಿ ಮಯ್ಯ ಆದಿಜಾಂಬವದ ಅಧ್ಯಕ್ಷರಾದ ಸಣ್ಣ ರಾಮಯ್ಯ ಭಾರತೀಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ದೊಡ್ಡೇರಿ ಮಹಾಲಿಂಗಯ್ಯ ರಾಜ್ಯ ಕಾರ್ಯದರ್ಶಿಯಾದ ಜೀವಿಕ ಮಂಜುನಾಥ್ ರೈತ ಸಂಘದ ಜಿಲ್ಲಾಧ್ಯಕ್ಷರಾದ ಸುನಿಲ್ ದೊಡ್ಡೇರಿ ಗ್ರಂಥಾಲಯ ಶಿವಣ್ಣನವರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಊರಿನ ಗ್ರಾಮಸ್ಥರು ಮುಖಂಡರು ಯುವಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಡಾ.ವಡ್ಡಗೆರೆ ನಾಗರಾಜಯ್ಯ ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದ ಉಡುಸಲಮ್ಮ ದೇವಿ ಜಾತ್ರೆಯಲ್ಲಿ ನಿನ್ನೆ ದಿನ (16-04-2022) ನಡೆದಿರುವ ಸಿಡಿ ಉತ್ಸವದ ವಿಡಿಯೋ ತುಣುಕು ಇದು. ಇಂತಹ ಸಿಡಿ ಆಚರಣೆಯನ್ನು ಕುರಿತು ಜನ್ನ ಕವಿ ‘ಯಶೋಧರ ಚರಿತೆ’ ಕಾವ್ಯದಲ್ಲಿ ಹೀಗೆ ಹೇಳಿದ್ದಾನೆ : ಆ ದೇವಿಯ ಜಾತ್ರೆಗೆ ಮೊಳೆ| ವೋದೆಳವೆರೆ ಸಿರದ ಗಾಳಮುರಿಯುಯ್ಯಲೆ ಕೈ|| ವೋದಸುಕೆ ಕೋಕಿಲಧ್ವನಿ| ಮೂದಲೆಯುಲಿಯಾಗೆ ಬಂದನಂದು ವಸಂತಂ|| ತಾಳುಗೆಯ ನುರ್ಚಿ ನೆತ್ತಿಯ ಗಾಳಂ ಗಗನದೊವಿಲ್ವ ವಾರಿಯ ಬೀರರ್| ಪಾಳಿಯೊಳೆಸೆದರ್ ಪಾಪದ ಜೋಳದ ಬೆಳಸಿಂಗೆ ಬೆರ್ಚುಗಟ್ಟಿದ ತೆರೆದಿಂ|| ವಸಂತ ಮಾಸದಲ್ಲಿ ಬರುವ ಮಾರಿಜಾತ್ರೆಯ ಸಂದರ್ಭದಲ್ಲಿ ಚಂಡಮಾರಿ ದೇವತೆಗೆ ಅದೇ ದೇವಮಂದಿರದ ಆವರಣದಲ್ಲಿ ನಡೆಯುವ ಸಿಡಿ ಆಚರಣೆಯನ್ನು ಜನ್ನ ಕವಿ ವಿವರಿಸುತ್ತಾನೆ. ಬಾಲಚಂದ್ರನು ಸಿರದ ಗಾಳದಂತೆ (ಸಿಡಿ ಆಚರಣೆಯಲ್ಲಿ ಬಳಸುವ ಕಬ್ಬಿಣದ ಕೊಕ್ಕೆಯಂತೆ), ಚಿಗುರಿದ ಅಶೋಕ ವೃಕ್ಷವು ಉರಿಯ ಉಯ್ಯಾಲೆಯಂತೆ, ಕೋಕಿಲಧ್ವನಿಯು ಮೂದಲೆಯ ಉಲಿಯಂತೆ ತೋರುತ್ತಿರಲು ವಸಂತಮಾಸ ಆಗಮಿಸುತ್ತದೆ. ಇದೇ ವಸಂತ ಮಾಸದಲ್ಲಿ ನಡೆಯುವ ಮಾರಿ ಜಾತ್ರೆಯ ಆಚರಣಾ ವಿಧಿಗಳಾದ…
ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಅಳಲಸಂದ್ರ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಫೋಟೋದಲ್ಲಿ ಕಾಣುವ ಯುವಕ ನೇಣಿಗೆ ಶರಣಾಗಿದ್ದ ಆದರೆ ಕುಟುಂಬಸ್ಥರು ಹೇಳುವ ಹಾಗೆ ನಮ್ಮ ಹುಡುಗ ನೇಣು ಹಾಕಿಕೊಳ್ಳುವ ಹೇಡಿಯಲ್ಲ. ಹುಡುಗನ ಸಹೋದರಿ ಲಕ್ಷ್ಮೀ ಮಾತನಾಡಿ, ಕೋಳಲ ಪೊಲೀಸ್ ಠಾಣೆಯ ಅಧಿಕಾರಿ ಮಹಾಲಕ್ಷ್ಮಿ ಹಾಗೂ ಕೊರಟಗೆರೆ ಪೋಲಿಸ್ ಅಧಿಕಾರಿಗಳು ನಮಗೆ ನ್ಯಾಯ ದೊರಕಿಸುತ್ತಿಲ್ಲ. ಎಷ್ಟು ಬಾರಿ ಮನವಿ ಮಾಡಿದರೂ ಅದು ಕೊಲೆಯಲ್ಲ ಆತ್ಮಹತ್ಯೆ ಎಂದು ಹೇಳುತ್ತಾರೆ. ಯಾರಾದರೂ ಕೈ ಕಾಲುಗಳನ್ನು ಹಿಂದಕ್ಕೆ ಕಟ್ಟಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಎಂದು ಕೇಳಿದರೆ ನೀವು ಲಾಯರ್ ಗಳ ಎಂದು ನಮಗೆ ಪ್ರಶ್ನಿಸುತ್ತಾರೆ. ನಮ್ಮ ತಮ್ಮನ ನೇಣು ಬಿಗಿದಿರುವ ಮರದಲ್ಲಿ ಕಣ್ಣಾರೆ ಕಾಣಬಹುದು. ಅದು ಕೊಲೆಯೋ ಆತ್ಮಹತ್ಯೆಯೋ ಎಂದು ಈ ಅಧಿಕಾರಿಗಳು ಏಕೆ ಈ ರೀತಿ ಮಾತನಾಡುತ್ತಿದ್ದಾರೆ ಎಂದು ನಮಗೆ ಅರ್ಥವಾಗುತ್ತಿಲ್ಲ. ನಮ್ಮ ತಮ್ಮನ ಕೊಲೆಗೆ ಕಾರಣರಾದ ನಮ್ಮ ಚಿಕ್ಕಪ್ಪ ನರಸಿಂಹಯ್ಯ ,ಅದೇ ಗ್ರಾಮದವರಾದ ಗೌರಮ್ಮ ಗಂಗರಾಜು ಮೂರ್ತಿ ಶಿವರಾಜ್ ಪುನೀತ್ ಇವರುಗಳೇ ನನ್ನ…
ಪಾವಗಡ: ತಾಲ್ಲೂಕು ನಿಡಗಲು ಹೋಬಳಿಯ ವಾಪ್ತಿಯಲಿ ಬರುವ ಚನ್ನಕೇಶವಪುರ ಗ್ರಾಮದಲ್ಲಿ ನೆಲೆಸಿರುವ ಶ್ರೀ ಚನ್ನಕೇಶವಸ್ವಾಮಿ ಮತ್ತು ಶ್ರೀ ಆಂಜನೇಯ ಸ್ವಾಮಿಯ ದೊಡ್ಡ ತೇರು ಉತ್ಸವ ಬಹಳ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ನಡೆಯಿತು. ಈ ಜಾತ್ರೆಯ ವಿಶೇಷವೇನೆಂದರೆ. ಪ್ರತಿವರ್ಷವೂ ಅಕ್ಕಪಕ್ಕದ ಗ್ರಾಮಸ್ಥರು ಈ ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.ಹಾಗೂ ಬಂದಿರುವಂತಹ ಭಕ್ತಾದಿಗಳಿಗೆ ಮಜ್ಜಿಗೆ. ಪಾನಕ. ಹೆಸರುಬೇಳೆ ಅನ್ನ ದಾಸೋಹ. ಪ್ರಸಾದವಾಗಿ ಭಕ್ತಾದಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ವೆಂಕಟಭೀಮ ರಾವ್ ವಂಶಸ್ಥರು ಆದಂತಹ ಸಿ.ಎನ್ ಆನಂದರಾವ್. ಗೋಪಾಲ್ ರಾವ್. ಮಾಜಿ ಪುರಸಭೆ ಅಧ್ಯಕ್ಷರು ಮಾನಂ ವೆಂಕಟಸ್ವಾಮಿ. Dr.ವೆಂಕ್ರಾಮಯ್ಯ. ನಾಗರಾಜ ಸ್ವಾಮಿ .ಅಜಯ್ ನಾಗೇಶ್. ಬಿಂದು ಮಾಧವ ರಾವ್. ಶೇಷಗಿರಿರಾವ್ ಮತ್ತು ಊರಿನ ಕೈವಾಡಸ್ಥರು. ಭಕ್ತಾದಿಗಳು ಪಾಲ್ಗೊಂಡಿದ್ದರು ವರದಿ :ದೇವರಹಟ್ಟಿ ನಾಗರಾಜ, ಪಾವಗಡ ತಾಲೂಕು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ನಂದಿಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ಜಾತ್ರೋತ್ಸವ ನಡೆಯಿತು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸೋಮಶೇಖರ್ ಬಿ. ಜಾತ್ರೋತ್ಸವದಲ್ಲಿ ಭಾಗವಹಿಸಿ, ರಂಗನಾಥಸ್ವಾಮಿಯ ಗಂಗಾಪೂಜೆಗೆ ಪೂಜೆ ಸಲ್ಲಿಸಿದರು. ಬಳಿಕ ಪಟಾಕಿ ಹಚ್ಚುವ ಮೂಲಕ ಪಟಾಕಿ ಉತ್ಸವಕ್ಕೆ ಚಾಲನೆ ನೀಡಿದರು. ಶ್ರೀ ರಂಗನಾಥಸ್ವಾಮಿಯ ಜಾತ್ರೆ ಮಹೋತ್ಸವದ ಪಟಾಕಿ ಕಾರ್ಯಕ್ರಮವು ಸಹ ಹಲವಾರು ವಿಧವಿಧವಾದ ಬಣ್ಣಗಳ ಹರುಷದಿಂದ ಪಟಾಕಿ ಉತ್ಸವವು ಸಹ ಬಹಳ ವಿಜೃಂಭಣೆಯಿಂದ ನಡೆಯಿತು. ಶ್ರೀ ರಂಗನಾಥಸ್ವಾಮಿಯ ಪಟಾಕಿ ಕಾರ್ಯಕ್ರಮವನ್ನು ವೀಕ್ಷಿಸಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ನಂದಿಹಳ್ಳಿ ಗ್ರಾಮದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಮಂಡಳಿಯ ಅಧಿಕಾರಿಗಳು , ದೇವಸ್ಥಾನದ ಅರ್ಚಕರು ಸೋಮಶೇಖರ್ ಬಿ ಅವರಿಗೆ ದೇವಾಲಯದ ಸನ್ನಿಧಿಯಲ್ಲಿ ಸನ್ಮಾನಿಸಿ ಗೌರವಿಸಿದರು. ಕಾಂಗ್ರೆಸ್ ಹಿರಿಯ ಮುಖಂಡ ಸೋಮಶೇಖರ್ ಅವರು ಇದೇ ವೇಳೆ ನಮ್ಮತುಮಕೂರು ಜೊತೆಗೆ ಮಾತನಾಡಿ, ರಂಗನಾಥ ಸ್ವಾಮಿ ದೇವರ ದರ್ಶನ ಪಡೆದುಕೊಂಡಿದ್ದು ನಿಜಕ್ಕೂ ನನ್ನ ಸೌಭಾಗ್ಯ. ಅದಲ್ಲದೇ ಇಂದು ಈ ರಂಗನಾಥಸ್ವಾಮಿ…
ಗುಬ್ಬಿ: ಸಮಸ್ಯೆಗಳ ಅರ್ಜಿ ನೀಡುವ ಮುಗ್ದ ಜನರಿಗೆ ನಿಮ್ಮ ಹಂತದಲ್ಲಿ ಇತ್ಯರ್ಥವಾಗದ ಬಗ್ಗೆ ಮಾಹಿತಿ ನೀಡಿ ಸೂಕ್ತ ಮಾರ್ಗದರ್ಶನ ನೀಡುವ ಕೆಲಸ ಈ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮಾಡಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಧಿಕಾರಿಗಳಿಗೆ ಸಲಹೆ ನೀಡಿದರು. ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಹು ನಿರೀಕ್ಷೆಯ ಈ ಕಾರ್ಯಕ್ರಮ ಯಶಸ್ಸು ಕಾಣಲು ಮೊದಲು ರೈತರ ಅರ್ಜಿಗೆ ಸ್ಥಳದಲ್ಲೇ ಪರಿಹಾರ ಕೊಡಬೇಕು. ನಿಗದಿತ 30 ದಿನದಲ್ಲಿ ಸಾರ್ವಜನಿಕ ಕೆಲಸ ಮಾಡಲೇಬೇಕು ಎಂದರು. ಹಿಂದೆ ಸರ್ಕಾರಿ ಕಾರ್ಯಕ್ರಮ ಯಶಸ್ವಿ ಸಾಧಿಸುವಲ್ಲಿ ವಿಫಲವಾದ ನಿದರ್ಶನವಿದೆ. ಇಡೀ ತಾಲ್ಲೂಕು ಆಡಳಿತವೇ ಹಳ್ಳಿಯಲ್ಲಿ ವಾಸ್ತವ್ಯ ಹೂಡುವ ವೇದಿಕೆಯಲ್ಲಿ ಸಮಸ್ಯೆಗೆ ಉತ್ತರ ನೀಡಿ ತಾಂತ್ರಿಕ ಸಮಸ್ಯೆ ಇದ್ದಲ್ಲಿ ಬಗೆಹರಿಸುವ ಕೆಲಸ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಕಾರ್ಯಕ್ರಮ ಸದ್ಬಳಕೆ ಮಾಡಿಕೊಂಡು ಜನರು ತಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಕರೆ ನೀಡಿದ ಅವರು ಈ ಹಿಂದೆ…
ಸರಗೂರು: ರಾಜ್ಯದಲ್ಲಿ ಜಲ ಸಂಪನ್ಮೂಲಕ್ಕೆ ಕೊರತೆ ಇಲ್ಲ. ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಬಿಜೆಪಿ- ಕಾಂಗ್ರೆಸ್ ಸಹಕಾರ ಕೊಡುತ್ತಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು. ಬೀಚನಹಳ್ಳಿಯಲ್ಲಿ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾವೇರಿ, ಕಬಿನಿ, ಕೃಷ್ಣ ಸೇರಿದಂತೆ ಬಹುತೇಕ ಅಂತಾರಾಜ್ಯ ನದಿಗಳ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ ಅಂತ ನಾನು ರಾಜ್ಯಸಭೆಯಲ್ಲಿ ಕೈಮುಗಿದು ಮನವಿ ಮಾಡಿದೆ. ಯಾವ ಪಕ್ಷದವರೂ ಸಹಕಾರ ಕೊಡಲಿಲ್ಲ. ನಮ್ಮದು ಪ್ರಾದೇಶಿಕ ಪಕ್ಷ. ಜನರಿಗೆ ಜಾಗೃತಿ ಬಂದರೆ ಸಹಜವಾಗಿ ಒಳ್ಳೆಯ ಆಯ್ಕೆ ಮಾಡುತ್ತಾರೆ. ಆದ್ದರಿಂದ ಜಲಧಾರೆ ಯಾತ್ರೆ ಮೂಲಕ ಜನ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಬೀಚನಹಳ್ಳಿಯಲ್ಲಿ ಎಚ್.ಡಿ.ದೇವೇಗೌಡ ಹೇಳಿಕೆ ನೀಡಿದರು. ನೀರಿನ ವಿಚಾರ ಬಂದಾಗ ತಮಿಳುನಾಡಿನ ಎಲ್ಲ ಪಕ್ಷಗಳೂ ಒಂದಾಗುತ್ತವೆ. ಆದರೆ ನಮ್ಮ ರಾಜ್ಯದಲ್ಲಿ ಯಾರೂ ಒಂದಾಗಲ್ಲ. ಪಂಚ ರತ್ನ, ಮಹದಾಯಿ ಸಾಕಷ್ಟು ನೋವಿದೆ. ಜಲ ಸಂಪನ್ಮೂಲ ಸಚಿವರು ನನಗೆ ಮೂರು ಬಾರಿ ಅಪಾಯಿಂಟ್ಮೆಂಟ್ ಕೊಟ್ಟರು. ಮನೆಗೆ ಹೋದಾಗ ಚಕ್ಕರ್ ಎಂದು ಅವರು ಹೇಳಿದರು. ಪರ್ಸೆಂಟೇಜ್ ಚರ್ಚೆ…