Subscribe to Updates
Get the latest creative news from FooBar about art, design and business.
- ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
- ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
- ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
- ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
- ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
- ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
- ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
- ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
Author: admin
ಬುದ್ಧಗುರುವಿನ ಪಂಚಶೀಲ ತತ್ವಗಳು ಬಸವಾದಿ ಪ್ರಮಥ ಶರಣರಲ್ಲೂ ರೂಪಧಾರಣೆ ಮಾಡಿಕೊಂಡಿರುವುದನ್ನು ಗಮನಿಸಬಹುದು. ಬಸವಣ್ಣನವರು ರೂಪಿಸಿದ ಶರಣ ಚಳವಳಿ ಧಮ್ಮ ತತ್ವಾಧಾರಿತವಾದದ್ದು. ‘ಬಹುಜನ ಹಿತಾಯ, ಬಹುಜನ ಸುಖಾಯ’ ಎಂದ ಬುಧ್ಧ ಗುರುವು ಸಮಾಜದ ಎಲ್ಲಾ ವರ್ಗಗಗಳ ಜನರನ್ನು ಧಮ್ಮ ರಕ್ಷಕರನ್ನಾಗಿ- ಸಂಘರಕ್ಷಕರನ್ನಾಗಿ ಪ್ರಜ್ಞೆ- ಶೀಲ- ಸಮಾಧಿಗಳ ವಿಗ್ಗ ಪಜ್ಞಾ ತತ್ವದಲ್ಲಿ ನಿಯಮಿಸುವಂತೆ, ಬಸವಣ್ಣನವರೂ ಸಹ ‘ಅನ್ನ ದಾಸೋಹ ಕಾಯಕ ದಾಸೋಹ- ಜ್ಞಾನ ದಾಸೋಹ’ ಎಂಬ ತ್ರಿವಿಧ ದಾಸೋಹ ಪರಿಕಲ್ಪನೆಯಲ್ಲಿ ಸಮಾಜದ ಎಲ್ಲಾ ವರ್ಗಗಳ ಜನರನ್ನು ಸಮಾನತೆ ಭಾವದಲ್ಲಿ ಲಿಂಗ ದೀಕ್ಷೆ ತತ್ವಾನುಸಾರ ಲಿಂಗಾಯತರನ್ನಾಗಿಸುತ್ತಾರೆ. ಬುದ್ಧ ಮತ್ತು ಬಸವಣ್ಣ ಇಬ್ಬರೂ ತಮ್ಮ ಜನರನ್ನು ದೈವಾರಾಧನೆ ಧಾರ್ಮಿಕ ಶ್ರದ್ದೆಯಿಂದ ನಿಸರ್ಗಾರಾಧನೆಯ ಜೀವ ಪ್ರೀತಿಯ ಮಾನವನ ಶ್ರದ್ಧೆಗೆ ಒಲಿಸಿ ದಯಾದರ್ಶನ ಮೌಲ್ಯಗಳನ್ನು ತಿಳಿಸಿಕೊಡುತ್ತಾರೆ. ಬುದ್ಧ ಗುರುವಿನ ಪ್ರಕಾರ ಯಾವುದು ಜೀವೋತ್ಪತ್ತಿಯೋ ಅದಕ್ಕೆ ಹುಟ್ಟು ಇರುವಂತೆ ಸಾವು ಇದೆಯೋ ಹಾಗೆ, ಬಸವಣ್ಣನವರ ಪ್ರಕಾರ ಯಾವುದು ಸ್ಥಾವರವೋ ಅದು ಅಳಿಯುತ್ತದೆ. ಅದರ ಉಬಯ ಭೇದಗಳನ್ನು ಅರಿಯಲೆಂದೇ ಸ್ಥಾವರ ಲಿಂಗ ಮತ್ತು…
ತುಮಕೂರು: ಕೊವಿಡ್ ಹಾಗೂ ಓಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ಕಟ್ಟುನಿಟ್ಟಿನ ವಿಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ತುಮಕೂರು ಶನಿವಾರ ಮಧ್ಯಾಹ್ನದ ಸುಮಾರಿಗೆ ಸಂಪೂರ್ಣ ಸ್ಥಬ್ದವಾಗಿದ್ದು, ನಗರವೇ ಸಂಪೂರ್ಣ ಖಾಲಿ ಖಾಲಿಯಾಗಿತ್ತು. ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕೆಲವೇ ಕೆಲವು ಮಂದಿ ದೂರದ ಊರುಗಳಿಂದ ಬಂದು ಬೇರೆಡೆಗೆ ಪ್ರಯಾಣಿಸಲು ಬಸ್ಸಿಗಾಗಿ ಕಾಯುತ್ತಾ ಕುಳಿತಿರುವುದು ಕಂಡು ಬಂತು. ತುಮಕೂರು ನಗರದ ಹೃದಯ ಭಾಗದಲ್ಲಿರುವ ಎಂ.ಜಿ. ರಸ್ತೆಯಲ್ಲಿ ಸದಾ ಜನ ಜಂಗುಳಿಯಿಂದ ಇರುತ್ತಿದ್ದ ಎಂ.ಜಿ.ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರಿಂದ ರಸ್ತೆ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ದೃಶ್ಯ ಕಂಡುಬಂತು. ತುಮಕೂರು ನಗರಕ್ಕೆ ಬರುವ ಹಾಗೂ ತುಮಕೂರು ನಗರದಿಂದ ಹೊರ ಹೋಗುವ ಜನಸಾಮಾನ್ಯರನ್ನು ಪೋಲಿಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವುದು ಕಂಡುಬಂತು. ತುಮಕೂರಿನ ಮಾರುಕಟ್ಟೆಯಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು ಗ್ರಾಹಕರಿಲ್ಲದೆ ವರ್ತಕರು ಗ್ರಾಹಕರಿಗಾಗಿ ಕಾದು ಕುಳಿತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಮಾರುಕಟ್ಟೆಯಲ್ಲಿ ಜನರಿಲ್ಲದೆ ಖಾಲಿ ಖಾಲಿಯಾಗಿ ಕಾಣತೊಡಗಿತು. ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ…
ಸರಗೂರು: ಆಲನಹಳ್ಳಿ ಹಾಡಿಯ ಕುರುಬ ಜನಾಂಗದವರಿಗೆ ಸರಿಯಾದ ಮಸಣ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಮೃತದೇಹದ ಅಂತ್ಯಸಂಸ್ಕಾರಕ್ಕೂ ಪರದಾಡಿದ ಘಟನೆಗೆ ಸಂಬಂಧಿಸಿದಂತೆ ‘ನಮ್ಮತುಮಕೂರು.ಕಾಂ ವರದಿಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. “ಮಸಣಕ್ಕೂ ಜಾಗ ಇಲ್ಲ: ಆಲನಹಳ್ಳಿ ಹಾಡಿಯ ಜನರ ಕಷ್ಟ ಕೇಳುವವರು ಯಾರು?” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟವಾದ ಸುದ್ದಿಯ ಬೆನ್ನಲ್ಲೇ ತಾಲ್ಲೂಕಿನ ತಹಶೀಲ್ದಾರ್ ಚಲುವರಾಜು ಮತ್ತು ಸಿಬ್ಬಂದಿ ಹಾಡಿಗೆ ಭೇಟಿ ನೀಡಿ ಕುರುಬ ಜನಾಂಗದ ಸಮಸ್ಯೆಯನ್ನು ಆಲಿಸಿದ್ದಾರೆ. ಹಾಡಿಗೆ ಆಗಮಿಸಿದ ತಹಶೀಲ್ದಾರ್ ಅವರಿಗೆ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿ, ಇವರು ಕಾಡು ಕುರುಬರು, ಕಾಡಿನಿಂದ ನಾಡಿಗೆ ಬಂದು ಜೀವನವನ್ನು ಸಾಗಿಸುತ್ತಿದ್ದಾರೆ. ಇವರಿಗೆ ಸರ್ಕಾರ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡಿಲ್ಲ. ಇವರು ಜೀವನ ಮಾಡಬೇಕಾದರೆ ಕಾಡಿನಿಂದ ಸೌಧೆ ಇತರ ಪದಾರ್ಥಗಳನ್ನು ತೆಗೆದುಕೊಂಡು ಬರುವುದು ಅನಿವಾರ್ಯವಾಗಿದೆ ಎಂದರು. ಹಾಡಿ ಮಹಿಳೆಯೊಬ್ಬರು ಮಾತನಾಡಿ, “ನಮಗೆ ಬಾಳ ತೊಂದ್ರಿ ಕೊಡ್ತಾರ. ಈ ಸೋಲರ್ ತಂತಿ ಇರಕೂಡದು ಇಲ್ಲಿ. ನಾವು ಹಿಂಗೆ ಮೃತದೇಹ…
ಹಿರಿಯೂರು: ಇತ್ತೀಚಿನ ದಿನಗಳಲ್ಲಿ ಕರ್ನಾಟಕ ರಾಜ್ಯದಾದ್ಯಂತ ಆವರಿಸಿಕೊಂಡಿರುವ ಒಮಿಕ್ರಾನ್ ನಿಂದಾಗಿ ಜನ ಸಾಮಾನ್ಯರ ಜೀವನ ಚಿಂತಾಜನಕವಾಗಿದೆ ಎಂದು ವೀಕೆಂಡ್ ಕರ್ಫ್ಯೂ ನಿಂದ ಬೇಸತ್ತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು ಬಿಜೆಪಿ ಸರ್ಕಾರದ ಆಡಳಿತದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಜನ ಸಾಮಾನ್ಯರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ದುಡಿದು ತಿನ್ನುವ ಕೈಗಳು ಇದೀಗ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಕೂಲಿಯಿಂದ ಜೀವನ ಸಾಗಿಸುತ್ತಿದ್ದು ಈ ಬಿಜೆಪಿ ಸರ್ಕಾರದ ದುರಾಡಳಿತದ ವ್ಯವಸ್ಥೆಯಿಂದ ಬೀದಿ ವ್ಯಾಪಾರಿಗಳು ಒಂದು ಹೊತ್ತು ಊಟಕ್ಕೂ ಸಹ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ಸರ್ಕಾರವು ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ ಪರಿಣಾಮ ಕೂಲಿ ನಾಲಿ ಮಾಡಿ, ಜೀವನ ಸಾಗಿಸುತ್ತಿರುವ ಕುಟುಂಬಗಳು ಬೀದಿ ಪಾಲಾಗುತ್ತಿದೆ. ಈ ಬಗ್ಗೆ ಸರ್ಕಾರಕ್ಕೆ ಯಾವುದೇ ಪಶ್ಚಾತಾಪ ಇಲ್ಲದಂತೆ ವರ್ತಿಸುತ್ತಿದೆ ಎಂದು ಸಾರ್ವಜನಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ . ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ತುರುವೇಕೆರೆ: ತುರುವೇಕೆರೆ ವೃತ್ತ ನಿರೀಕ್ಷ ರಾದ ನವೀನ್ ಕುಮಾರ್ ಹಾಗೂ ಪಿ.ಎಸ್.ಐ. ಕೇಶವಮೂರ್ತಿ ಅವರ ಮಾರ್ಗದರ್ಶನದೊಂದಿಗೆ ತುರುವೇಕೆರೆ ಪಟ್ಟಣದಲ್ಲಿರುವ ಸಾರ್ವಜನಿಕ ತಾಲ್ಲೂಕು ಆಸ್ಪತ್ರೆಯಲ್ಲಿ ತುರುವೇಕೆರೆ ಪೊಲೀಸ್ ಠಾಣೆಯ ಸಿಬ್ಬಂದಿ ಮೊದಲ ವಾರದ ಕರ್ಫ್ಯೂ ಪ್ರಯುಕ್ತ ಕೊರೊನಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಸ್ವಯಂ ಪ್ರೇರಿತರಾಗಿ ಪರೀಕ್ಷೆ ಮಾಡಿಸಿಕೊಂಡರು ಈ ಸಂದರ್ಭದಲ್ಲಿ ತುರುವೇಕೆರೆಯ ಪೊಲೀಸ್ ಠಾಣೆಯ ಎ.ಎಸ್.ಐ. ಶಿವಲಿಂಗಪ್ಪ., ಎ. ಎಸ್.ಐ. ನಾಗರಾಜ್, ಮುಖ್ಯಪೇದೆಗಳಾದ ಉಮೇಶ್, ಶಂಭುಲಿಂಗಯ್ಯ, ಗುರುಮೂರ್ತಿ, ಪೋಲೀಸ್ ಗಳಾದ ಸುಪ್ರೀತ್, ಜಯರಾಮ್ ಹಾಗೂ ಮಹಿಳಾ ಸಿಬ್ಬಂದಿ ಜಲಜಾಕ್ಷಿ ಮುಂತಾದವರು ಹಾಜರಿದ್ದರು. ವರದಿ: ಸುರೇಶ್ ಬಾಬು.ಎಂ., ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೋಟೆ/ಸರಗೂರು: ಸರ್ವಧರ್ಮದ ಹೃದಯವಂತರು ಸೇವಾಸಂಸ್ಥೆಯ ಕಚೇರಿಯಲ್ಲಿ ಸೇವಾಸಂಸ್ಥೆಯ ಕ್ಯಾಲೆಂಡರ್ ಅನ್ನು ಶಾಸಕರಾದ ಅನಿಲ್ ಚಿಕ್ಕಮಾದು ಬಿಡುಗಡೆ ಮಾಡಿದರು, ಬಳಿಕ ಮಾತನಾಡಿದ ಅವರು, ಸೇವಾಸಂಸ್ಥೆಯು ಚಿಕ್ಕದೇವ್ ಹೆಚ್. ಜಿ. ಹೆಗ್ಗಡಾಪುರ ರವರ ನೇತೃತ್ವದಲ್ಲಿ ನೂರಾರು ಸರ್ವಧರ್ಮದ ಸ್ನೇಹಿತರು ಸೇರಿ ಸರ್ವಧರ್ಮದ ಮಹಾನ್ ನಾಯಕರ ಆದರ್ಶಗಳನ್ನು ಇಟ್ಟುಕೊಂಡು ಉತ್ತಮವಾದ ಸಾಮಾಜಿಕ ಕಳಕಳಿಯ ಸೇವಾಕಾರ್ಯಗಳನ್ನು ಮಾಡುತ್ತಿರುವುದು ಸಮಾಜದಲ್ಲಿ ಉತ್ತಮ ಬೆಳವಣಿಗೆ ಆಗಿದೆ. ಇಂತಹ ಉತ್ತಮ ಕಾರ್ಯಗಳು ಹೆಚ್ಚೆಚ್ಚು ಆಗಬೇಕು. ಮುಂದಿನ ದಿನಗಳಲ್ಲಿ ಸೇವಾಸಂಸ್ಥೆಗೆ ಕೈಲಾದ ಸಹಕಾರ ನೀಡುವುದಾಗಿ ತಿಳಿಸುತ್ತಾ,ಈ ಸೇವಾಸಂಸ್ಥೆಯನ್ನು ಉಳಿಸಿ ಬೆಳೆಸಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸತೀಶ್ ಆರಾಧ್ಯ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಮೌಲ್ಯಗಳು ಕಡಿಮೆ ಆಗುತ್ತಿದ್ದು ಸರ್ವಧರ್ಮದವರು ಸೇರಿ ಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು ನೀಡುತ್ತಾ, ಮಾನವೀಯತೆ ಮೆರೆಯುತ್ತಿರುವ ಹೃದಯವಂತರು ಸೇವಾಸಂಸ್ಥೆಯ ಕಾರ್ಯವನ್ನು ಪ್ರಶಂಶಿಸಿದರು. ಪತ್ರಕರ್ತರು ಬಸವರಾಜು, ಚಾ.ಶಿವಕುಮಾರ್, ಅಧ್ಯಕ್ಷ ಡಾ.ಜವರನಾಯಕ ಆಗತ್ತೂರು ರವರು ಮಾತಾನಾಡಿದರು. ಇದೇ ಸಂಧರ್ಭದಲ್ಲಿ ಸೇವಾಸಂಸ್ಥೆಯ ವತಿಯಿಂದ ಶಾಸಕರಾದ ಅನಿಲ್ ಚಿಕ್ಕಮಾದು, ಪತ್ರಕರ್ತರ ಸಂಘದ…
ಹಿರಿಯೂರು: ಕರ್ನಾಟಕ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಮಂಡಳಿಯು ಸೌಲಭ್ಯಗಳನ್ನು ಪಡೆಯಲು ಸಿ ಎಸ್ ಸಿ ( ಕಾಮನ್ ಸರ್ವಿಸ್ ಸೆಂಟರ್ ) ನ ಆನ್ ಲೈನ್ ನ ಮುಖಾಂತರ ಮಧ್ಯವರ್ತಿಗಳ ಮುಖಾಂತರ ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ಕಟ್ಟಡ ಕಾರ್ಮಿಕರ ಕಾರ್ಡ್ ಗಳು ನೋಂದಣಿಯಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಹ ಇದರ ಬಗ್ಗೆ ತೀವ್ರವಾಗಿ ಗಮನ ನೀಡದೆ ಇರುವುದು ಬೇಸರದ ಸಂಗತಿಯಾಗಿದೆ ಎಂದು ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶಿವಕುಮಾರ್ ವಿ. ಹೇಳಿದ್ದಾರೆ. ಕಟ್ಟಡ ಕಾರ್ಮಿಕರ ಇಲಾಖೆ ದೊರೆಯುವ ಸೌಲಭ್ಯಗಳು ಯಾವುದು ಸಹ ನಿಜವಾದ ಕಟ್ಟಡ ಕಾರ್ಮಿಕರಿಗೆ ದೊರೆಯದ ರೀತಿಯಲ್ಲಿ ಮಧ್ಯವರ್ತಿಗಳ ಕಾಟ ಹೆಚ್ಚುತ್ತಿದ್ದರೂ ಸಹ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಶಿವಕುಮಾರ್ ಆರೋಪಿಸಿದರು. ಸುಪ್ರಿಂ ಕೋರ್ಟ್ ಆದೇಶದಂತೆ ನಿಗದಿಪಡಿಸಿರುವಂತಹ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆಂದೇ ಇರುವಂತಹ ಸೆಸ್ ಹಣವನ್ನು ಅವರಿಗಾಗಿಯೇ ಬಳಸಬೇಕು ಎಂಬ ನಿರ್ದೇಶನವಿದ್ದರೂ ಸಮೇತ ಇದ್ಯಾವುದಕ್ಕೂ ಸಹ ಮನ್ನಣೆ ಕೊಡದ ಸರ್ಕಾರ…
ಮಧುಗಿರಿ: ಭಾರತೀಯ ಜನತಾ ಪಾರ್ಟಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ಬಿ.ಕೆ.ಮಂಜುನಾಥ್ ರವರು ಮಧುಗಿರಿ ನಗರದ ಗ್ರಾಮದೇವತೆ ಶ್ರೀ ದಂಡಿನ ಮಾರಮ್ಮ ದೇವಿಗೆ ಪೂಜಿ ಸಲ್ಲಿಸಿ, ನಗರದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಎರಡು ವಿಭಾಗಗಳನ್ನಾಗಿ ಮಾಡಲಾಗಿದೆ. ಶಿರಾ ಕ್ಷೇತ್ರದಲ್ಲಿ ನಮ್ಮ ಪಕ್ಷ ಮೊದಲ ಬಾರಿಗೆ ರಾಜೇಶ್ ಗೌಡ ರವರ ಆಯ್ಕೆಯಿಂದಾಗಿ ಬಿಜೆಪಿ ಪಕ್ಷವು ಖಾತೆ ತೆರೆದಿದೆ. ಮೋದಿಯವರು ,ಯಡಿಯೂರಪ್ಪ ಮತ್ತು ಬೊಮ್ಮಾಯಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು ಅವರಿಗೆ ಶಕ್ತಿ ತುಂಬಬೇಕಿದೆ ಎಂದರು. ಇತ್ತೀಚಿಗೆ ಸಂಸದರಾದ ಜಿ.ಎಸ್. ಬಸವರಾಜು ರವರು ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿಯವರ ಬಗ್ಗೆ ಮಾತನಾಡಿದ್ದು ಸಂಸದರಿಗೆ ಕಾಂಗ್ರೆಸ್ ಪಕ್ಷದಂತೆ ವಯಸ್ಸಾಗಿ ಅರಳು-ಮರಲಾಗಿದೆ. ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಇವರಿಬ್ಬರಲ್ಲಿ ಇರುವ ಅಸಮಾಧಾನವನ್ನು ಸರಿಪಡಿಸಲಾಗುವುದು. ಹಿಂದುಳಿದ ವರ್ಗಕ್ಕೆ ಸೇರಿದ ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷವು ಗುರುತಿಸಿದ್ದು, ಜ್ವಬ್ದಾರಿಯುತ ಸ್ಥಾನವನ್ನು ನೀಡಿ ಗೌರವಿಸಿದೆ ಕಾರ್ಯಕರ್ತರು…
ಗುಬ್ಬಿ: ತಾಲ್ಲೂಕಿನ ಬಾನಿಹಟ್ಟಿ ಗ್ರಾಮದಲ್ಲಿ ರಾಗಿ ಕಣದಲ್ಲಿ ಸಂಗ್ರಹಿಸಿದ ರಾಗಿ ಬಣವೆಗೆ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಶುಕ್ರವಾರ ಜರುಗಿದೆ. ಬಾನಿಹಟ್ಟಿ ಗ್ರಾಮದ ರೈತರಾದ ನಾಗಣ್ಣ, ಬಲ್ಲಯ್ಯ, ಶಾರದಮ್ಮ ಎಂಬುವರು, ತಮ್ಮ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 4 ಟ್ರಾಕ್ಟರ್ ರಾಗಿ ತೆನೆಯನ್ನು, ಕಣ ಮಾಡಲು ಸಂಗ್ರಹಿಸಿದ್ದ ಬಣವೆಗೆ ಬೆಂಕಿ ಹಚ್ಚಿದ್ದಾರೆ ಎಂದು ರೈತರು ಅಳಲನ್ನು ತೋಡಿಕೊಂಡಿದ್ದಾರೆ. ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಅಗ್ನಿ ನಂದಿಸುವ ಕಾರ್ಯಕ್ಕೆ ಮುಂದಾದರು ಆದರೆ, ಅಷ್ಟರಲ್ಲೇ ಭಾರೀ ಪ್ರಮಾಣದಲ್ಲಿ ಹಾನಿ ನಡೆದಿತ್ತು. ಗ್ರಾಮಸ್ಥರು ಕೊಡ ಗಳಲ್ಲಿ ನೀರು ತಂದು ಬೆಂಕಿ ನಂದಿಸಲು ಸಾಕಷ್ಟು ಪರದಾಟ ನಡೆಸಿದರೂ, ಯಾವುದೇ ಪ್ರಯೋಜನ ವಾಗಲಿಲ್ಲ. ಘಟನೆ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲೆ ಜಯರಾಂ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿ ಪರಿಹಾರ ನೀಡುವ ಭರವಸೆ ನೀಡಿದ್ದು, ಈ ಮೂರು ಕುಟುಂಬಕ್ಕೆ ಒಂದು ವರ್ಷಕ್ಕೆ…
ತುಮಕೂರು: ಛಲವಾದಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ದ 2022ನೇ ನೂತನ ವರ್ಷದ ಕ್ಯಾಲೆಂಡರ್ ನ್ನು ಮಾಜಿ ಸಚಿವರಾದ ಡಾ.H. C.ಮಹದೇವಪ್ಪನವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸಹಕಾರಿಯ ಅಭಿವೃದ್ಧಿಗೆ ಷೇರುದಾರರು ಮತ್ತು ಆಡಳಿತ ಮಂಡಳಿ ಜೊತೆಯಾಗಿ ಸ್ಪಂದಿಸಿದಲ್ಲಿ ಸಹಕಾರಿ ಅಭಿವೃದ್ಧಿ ಹೊಂದಲು ಸಹಕಾರಿಯಾಗುತ್ತದೆ ಎಂದು ಸೌಹಾರ್ದ ಸಹಕಾರಿಗೆ ಶುಭ ಹಾರೈಸಿದರು . ಇದೇ ಸಂದರ್ಭದಲ್ಲಿ ನೆಲಮಂಗಲ ಕ್ಷೇತ್ರದ ಶಾಸಕರಾದ ಡಾ.ಶ್ರೀನಿವಾಸಮೂರ್ತಿ ರವರು ಮಾತನಾಡಿ, ಛಲವಾದಿ ಪತ್ತಿನ ಸೌಹಾರ್ದ ಸಹಕಾರಿಯು ಎರಡನೇ ವರ್ಷ ದಲ್ಲಿ ಮುನ್ನೆಡೆಯುತ್ತಿರುವ ಬ್ಯಾಂಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬ್ಯಾಂಕ್ ಅಭಿವೃದ್ಧಿಗೆ ಸಮುದಾಯ ಸಹಕಾರ ಪಡೆದು ಮುನ್ನೆಡೆಯಿರಿ ಎಂದು ಸಲಹೆ ನೀಡಿ ಶುಭ ಕೋರಿದರು . ಮಾಜಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ತುಮಕೂರು ಛಲವಾದಿ ಪತ್ತಿನ ಸೌಹಾರ್ದ ಸಹಕಾರಿ ನಿ.ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು . ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…