Subscribe to Updates
Get the latest creative news from FooBar about art, design and business.
- ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
- ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
- ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
- ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
- ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
- ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
- ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
- ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
Author: admin
ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನೆ ಕಳೆದ 11 ದಿನಗಳಿಂದ ತುಮಕೂರು ಜಿಲ್ಲಾಧಿಕಾರಿಯ ಕಛೇರಿ ಬಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅತಿಥಿ ಶಿಕ್ಷಕರ ಪ್ರತಿಭಟನೆಯ ವೇಳೆ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಬಳಿಗೆ ತೆರಳಿ, ಪ್ರತಿಭಟನಾಕಾರರ ಸಮಸ್ಯೆಯನ್ನು ಆಲಿಸಿದರು. ಇನ್ನೂ ಇದೇ ವೇಳೆ ಅತಿಥಿ ಶಿಕ್ಷಕರ ಹೋರಾಟಕ್ಕೆ ಬೆಂಬಲ ಘೋಷಿಸಿದ ಅವರು, ತಕ್ಷಣವೇ ಅತಿಥಿ ಶಿಕ್ಷಕರಿಗೆ ನ್ಯಾಯ ಒದಗಿಸಲು ಸರ್ಕಾರ ಮುಂದಾಗುವಂತೆ ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ: ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲ್ವೆ ಮಾರ್ಗದ ಕಾಮಗಾರಿಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲು ಗುರಿ ಹೊಂದಲಾಗಿದ್ದು, ಭೂಸ್ವಾಧೀನವಾದ ಎಲ್ಲ ರೈತರಿಗೆ ಫೆಬ್ರವರಿ 15ರೊಳಗೆ ಪರಿಹಾರ ಹಣ ಪಾವತಿಸಲು ಭೂಸ್ವಾಧೀನಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸೂಚಿಸಿದರು. ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸರ್ವೇ ಮಾಡಲಾದ ರೈಲ್ವೆ ಮಾರ್ಗದಲ್ಲಿ ಗುರಿತಿಸಲಾದ ಕಲ್ಲುಗಳನ್ನು ಕಿತ್ತು ಹಾಕಲಾಗಿದೆ. ಇದನ್ನು ಮುಂದಿನ ವಾರದಲ್ಲಿ ಸರ್ವೇ ಅಧಿಕಾರಿಗಳು, ರೈಲ್ವೆ ಇಂಜಿನಿಯರ್ಗಳು ಸೇರಿಕೊಂಡು ಬಾಂದ್ಗಲ್ಲುಗಳನ್ನು ಪುನರ್ ಸ್ಥಾಪಿಸಬೇಕು ಎಂದು ಸರ್ವೇ ಹಾಗೂ ರೈಲ್ವೆ ಇಂಜಿನಿಯರ್ಗಳಿಗೆ ಸಚಿವರು ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಸದಸ್ಯತ್ವ ನೋಂದಣಿ ಹಾಗೂ ಮೇಕೆದಾಟು ಯೋಜನೆಯ ಪಾದಯಾತ್ರೆಯನ್ನು ಯಶಸ್ವಿಯಾಗೊಳಿಸುವ ಬಗ್ಗೆ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಕಾಂಗ್ರೆಸ್ ನಾಯಕ ಡಾ. ಜಿ.ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ, ಶಫಿ ಅಹಮದ್, ತಿಪಟೂರು ಕ್ಷೇತ್ರ ಮಾಜಿ ಶಾಸಕರು ನಮ್ಮ ನಾಯಕರಾದ ಕೆ.ಷಡಕ್ಷರಿ, ಲಕ್ಷ್ಮೀನಾರಾಯಣ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಬೆಮೆಲ್ ಕಾಂತರಾಜು, ಕೆಪಿಸಿಸಿ ವೀಕ್ಷಕರಾದ ಚೆಲುವರಾಜು, ರಾಕ್ ಮಂಜುನಾಥ್, ವೀಣಾ ಕಾಶಪ್ಪ, ಕೆಪಿಸಿಸಿ ಕಾರ್ಯದರ್ಶಿಗಳಾದ ದಿನೇಶ್ ಬಿ.ಎಸ್. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ರಾಮಕೃಷ್ಣ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಶಿ ಹುಲಿಕುಂಟೆ, ಹಿರಿಯ ಮುಖಂಡರಾದ ಚೌದ್ರಿ ರಂಗಪ್ಪ, ಪಾವಗಡ ವೆಂಕಟೇಶ್, ಸೋಮಶೇಖರ್, ಹೊನ್ನಗಿರಿಗೌಡ ಹಾಗೂ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಮುಖ ಮುಖಂಡರುಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಸರಗೂರು: ಆಲನಹಳ್ಳಿ ಹಾಡಿಯ ಕುರುಬ ಜನಾಂಗದವರಿಗೆ ಸರಿಯಾದ ಮಸಣ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಮೃತದೇಹದ ಅಂತ್ಯಸಂಸ್ಕಾರಕ್ಕೂ ಪರದಾಡಿದ ಸ ಘಟನೆ ತಾಲ್ಲೂಕಿನ ಬಿ ಮಟಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 30 ವರ್ಷಗಳಿಂದಲೂ ಮಸಣ ಮಾಲ ಇಲ್ಲದೇ ಇಲ್ಲಿನ ಜನರು ಶವ ಸಂಸ್ಕಾರಕ್ಕೂ ಪರದಾಡುವಂತಾಗಿದೆ. ಇದಲ್ಲದೇ ಇಲ್ಲಿಗೆ ಕನಿಷ್ಠ ರಸ್ತೆ ವ್ಯವಸ್ಥೆ ಇಲ್ಲ. ಇಲ್ಲಿನ ಜನರಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಗಳು ಕೂಡ ಇಲ್ಲದಂತಹ ಸ್ಥಿತಿ ಇಲ್ಲಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮಾಹಿತಿ ನೀಡಿದ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಬೆಟ್ಟಸ್ವಾಮಿ ಕುರ್ಣೇಗಾಲ, 30-40 ವರ್ಷಗಳಿಂದ ಇಲ್ಲಿನ ಜನರಿಗೆ ಶವ ಸಂಸ್ಕಾರ ಮಾಡಲು ಜಾಗವಿಲ್ಲ. ತಿರುಗಾಡಲು ರಸ್ತೆಯ ಇಲ್ಲ. ಇವರ ತಾತ ಕಾಲದಿಂದಲ್ಲೂ ಕಾಡಿನಲ್ಲಿ ಶವ ಸಂಸ್ಕಾರ ಮಾಡಿದ್ದರು. ಆದರೆ ಈವಾಗ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿನ ಜಾಗಕ್ಕೆ ತಂತಿಯನ್ನು ನಿರ್ಮಾಣ ಮಾಡಿಕೊಂಡು ಹಾಡಿಯ ಜನರಿಗೆ ತುಂಬಾ ತೊಂದರೆಯನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಕಾಡು ಕುರುಬ ಜನರಿಗೆ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯದ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಶಿವಣ್ಣ ಕೋಟೆ ಅವರು ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರಿಗೆ, ನೀಡಲಾಗುತ್ತಿರುವ ಸೌಲಭ್ಯಗಳನ್ನು ಹಾಗೂ ಪೌರಕಾರ್ಮಿಕರ ಒಟ್ಟು ವಿವರ ಹಾಗೂ ಖಾಲಿ ಇರುವ ಹುದ್ದೆಗಳ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗಳೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯೂರು ನಗರಸಭೆ ಪೌರ ಕಾರ್ಮಿಕರು ಹಾಗೂ ಅಧಿಕಾರಿಗಳಿಗೂ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಶಂಶುನ್ನಿಸಾ ರವರು ನಗರಸಭಾ ಸದಸ್ಯರಾದ ಜಬೀವುಲ್ಲಾರವರು ಮೊದಲ ಮೇರಿ ತಹಸಿಲ್ದಾರರಾದ ಶಿವಕುಮಾರ್ ರವರು ಆಯುಕ್ತರಾದ ಡಿ.ಉಮೇಶ್ ರವರು ಹಾಗೂ ಜಿಲ್ಲೆಯ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…
ತುಮಕೂರು: ತಮ್ಮ ಒತ್ತಡದ ಕೆಲಸದ ನಡುವೆ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ರವರು ಮಗುವಿನೊಂದಿಗೆ ಮಗುವಾಗಿ ಕೆಲಹೊತ್ತು ಕಾಲಕಳೆದ ಘಟನೆ ತಾಲ್ಲೂಕಿನ ಹರಿವಾಣಪುರದಲ್ಲಿ ನಡೆಯಿತು. ಶುಕ್ರವಾರ ಗ್ರಾಮದ ಅಂಗನವಾಡಿ ಕಟ್ಟಡ ಉದ್ಘಾಟನೆಗಾಗಿ ಗ್ರಾಮಕ್ಜೆ ತೆರಳಿದ್ದ ಶಾಸಕರು ಕಾರ್ಯಕ್ರಮದ ನಂತರ, ಅರಳೀಕಟ್ಟೆಯ ಕೆಳಗೆ ಕುಳಿತು ಗ್ರಾಮಸ್ಥರ ಕುಂದು ಕೊರತೆ ಆಲಿಸುತ್ತಿದ್ದರು. ಈ ವೇಳೆ ವೇಳೆ ಅಲ್ಲಿಯೇ ಇದ್ದ ಮೂರು ವರ್ಷದ ಮಗುವಿನೊಂದಿಗೆ ಆನಂದವಾಗಿ ಮಾತನಾಡಿ ಮುಗ್ದ ಮಗುವಿನ ಮಾತಿಗೆ ನಕ್ಕು ನಲಿದರು. “ನಿನ್ನ ವಯಸ್ಸೆಷ್ಟು?” ಎಂದು ಕೇಳಿದಾಗ “ನನಗೆ ಇನ್ನು ವಯಸ್ಸಾಗಿಲ್ಲ” ಎಂದು ಮಗು ಹೇಳಿದಾಗ ಶಾಸಕ ಗೌರಿಶಂಕರ್ ಬಿದ್ದು ಬಿದ್ದು ನಕ್ಕರು. ಈ ವೇಳೆ ಅವರ ಜೊತೆಗಿದ್ದವರು ಕೂಡ ಜೋರಾಗಿ ನಕ್ಕರು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು ಜಿಲ್ಲೆಯ ಹಿರಿಯ ಹೋರಾಟಗಾರಾದ ಎಂ. ರಾಮಯ್ಯನವರ “ಮನುವಾದಿಗಳ ಚೆಲ್ಲಾಟ ದಲಿತರ ಕಿತ್ತಾಟ” ಎನ್ನುವ ಬೆಂಕಿ ಬರಹದ ಶೀರ್ಷಿಕೆ ಹೊಂದಿರುವ ಪುಸ್ತಕ. ಹಿರಿಯ ಹೋರಾಟಗಾರರು ಹಳಿ ತಪ್ಪಿದ ದಲಿತ ಚಳುವಳಿಗಳನ್ನು ತಹಬಂದಿಗೆ ತಂದು ದಿಕ್ಕುತೋರುವ ಅಂಬೇಡ್ಕರ್ ವಾದಿಗಳು. ಬರಹ ಮತ್ತು ಸಾಮಾಜಿಕ ಚಿಂತನೆಯಲ್ಲಿ ಪ್ರಭುದ್ಧತೆ ಬೆಳೆಸಿಕೊಂಡ ಹಿರಿಯರು ನಮ್ಮದೆ ತುಮಕೂರು ಜಿಲ್ಲೆಯ ಎಲೆಮರೆಯಕಾಯಿ. ಸಾಮಾನ್ಯವಾಗಿ ಬರೆಯುವ ಗೋಜಿಗೆ ಹೋದವರು ಭ್ರಮೆಯನ್ನೋ ಅದ್ಭುತವನ್ನೂ ಅಥವಾ ಯಾವುದೋ ಬಲಿತ ವ್ಯಕ್ತಿಯನ್ನೋ ಗುರಿಯಾಗಿಸಿ ಗೀಚುತ್ತ ವಿಸ್ತರಿಸಿ ಬರೆಯುತ್ತಾ ಹೋಗುವವರ ಸಾಲಿನಲ್ಲಿ ಎಂ ರಾಮಯ್ಯನವರು ವಿಶೇಷವಾಗಿ ಯಾರು ಮುಟ್ಟದ ವಿಷಯವಿಡಿದು ಶ್ರೇಷ್ಠ ವ್ಯಕ್ತಿಯಾಗಿ ಈ ಪುಸ್ತಕದಲ್ಲಿ ಎದುರುಗೊಳ್ಳುತ್ತಾರೆ. ಅದು ಶೋಷಿತರ ಪರ ದುಡಿತ ಮಿಡಿತ ನಿತ್ಯ ಹರಿದ್ವರ್ಣದ ಚಿಂತನೆ. ಅವರು ತಮ್ಮ ಬಗ್ಗೆ ಹೀಗೆ ಹೇಳುತ್ತಾರೆ. “ನನ್ನ ಜೀವನದ ಬದುಕಿನಲ್ಲಿ ಅಲ್ಲಲ್ಲಿ ಬರೆದ ನನ್ನ ಹೆಸರನ್ನು ಪಾಪಿ ಇಲಿಗಳು ಚೂರು ಚೂರು ಮಾಡಿ ಬಿಟ್ಟಿವೆ” ಎನ್ನುವ ವಿಷಾದ ನುಡಿಯ ಹಿಂದೆ ಒಂದು ಆಕ್ರಂದನವಿದೆ.ಅಲ್ಲಿಂದ ಶುರುವಾಗಿ ಅದು ತನ್ನದೆ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಳಿಯಾರ್ ರಸ್ತೆಯಲ್ಲಿನ ಪೌದಿಯಮ್ಮ(ಭಗವತಿ) ಅಮ್ಮನ ದೇವಸ್ಥಾನಕ್ಕೆ ತಿರುಗುವ ತಿರುವಿನಲ್ಲಿರುವ ಸೇತುವೆ ಭೂಮಿಯಿಂದ ಬೇರ್ಪಟ್ಟಿದ್ದು , ಇನ್ನೇನು ಆಗಲೋ , ಈಗಲೋ ಕಳಚಿ ಬೀಳುವಂತಿದೆ. ಈ ರಸ್ತೆಯು ಮೈಸೂರಿಗೆ ತೆರಳುವ ಪ್ರಧಾನ ರಸ್ತೆಯಾಗಿದ್ದು , ಈ ರಸ್ತೆಯಲ್ಲಿನ ಬದಿಯಲ್ಲಿರುವ ಸೇತುವೆ ಶಿಥಿಲಾವಸ್ಥೆ ಗೆ ತಲುಪಿ ವರ್ಷಗಳೇ ಕಳೆದವು . ಈ ರಸ್ತೆಯಲ್ಲಿನ ಬೀದಿ ದೀಪಗಳು ಕೂಡ ಸಹ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ರಸ್ತೆಯು ಬಹಳ ಕಿರಿದಾಗಿದ್ದು, ಇಲ್ಲಿ ಬಹಳಷ್ಟು ಅಪಘಾತಗಳು ಕೂಡ ನಡೆಯುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸೇತುವೆಯನ್ನು ಸರಿಪಡಿಸಿ ಎಂದು ತಾಲ್ಲೂಕಿನ ಸಾರ್ವಜನಿಕರು ಹಲವು ಭಾರಿ ದೂರು ನೀಡಿದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಂಡು ಕಾಣದಂತಿದ್ದಾರೆ. ಇದರಿಂದ ನೊಂದ ಸಾರ್ವಜನಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಈ ಸೇತುವೆಯು ಇನ್ನೇನೂ ಇವಾಗಲೋ ಅವಾಗಲೋ ಕಳಚಿ ಬೀಳುವ ಸ್ಥಿತಿಯಲ್ಲಿರುವುದರಿಂದ ತಾಲ್ಲೂಕಿನ ಶಾಸಕರು ಈ ತಕ್ಷಣವೇ ಈ ಬಗ್ಗೆ ಗಮನ ಹರಿಸಿ ಸಂಬಂಧಪಟ್ಟವರನ್ನು ಎಚ್ಚರಿಸುವ ಕೆಲಸಕ್ಕೆ ಮುಂದಾಗಬೇಕು ಎಂದು…
ತಿಪಟೂರು: ತಾಲ್ಲೂಕಿನ ಬಳ್ಳೆಕಟ್ಟೆ ಗ್ರಾಮದ ರೈತ ಕವಿ ಪಿ.ಶಂಕ್ರಪ್ಪ ಅವರಿಗೆ ವಿದ್ಯಾ ವಿಭೂಷಣ ಹಾಗೂ ರಾಜ್ಯ ಮಟ್ಟದ ರೈತ ಕೃಷಿ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಇವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಸಂಘದ ತಾಲೂಕು ಮಧುಗಿರಿ ವತಿಯಿಂದ ವಿಶೇಷ ಅತಿಥಿಯಾಗಿ ಆಹ್ವಾನಿಸಿ ಗೌರವಿಸಿ ಸನ್ಮಾನಿಸಲಾಯಿತು ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ರೈತ ಕವಿ ಪಿ.ಶಂಕ್ರಪ್ಪ ಬಳ್ಳೆಕಟ್ಟೆ ಅವರು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳು, ಗ್ರಾಮೀಣ ಭಾಗದ ಜನಸಾಮಾನ್ಯರದೇವರ ದೇವಾಲಯಗಳು ಬಡಮಕ್ಕಳ ಸೌಭಾಗ್ಯ ಜ್ಞಾನ ನಿಧಿಗಳಾಗಿಕಾರ್ಯನಿರ್ವಹಿಸುತ್ತಿವೆ. ಸರ್ಕಾರ ಗ್ರಾಮೀಣ ಭಾಗದ ಗ್ರಂಥಾಲಯಗಳನ್ನು ಡಿಜಿಟಲೀಕರಣ ಗೋಳಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು ಹಾಗೂ ಸಂಘ-ಸಂಸ್ಥೆಗಳು ಜೇನುಗೂಡಿನಂತೆ ಒಗ್ಗೂಡಿ ಕೆಲಸ ಮಾಡಿದರೆ ಫಲಜಗಕರ್ಪಿತವಾಗುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ರಾಜ್ಯ ಪದಾಧಿಕಾರಿಗಳಾದ ಬಾಲ್ಯ ಗಂಗಾಧರ್, ಸಿರಿವಾರ ಶಿವಮೂರ್ತಿ, ಜಿಲ್ಲಾ ಉಪಾಧ್ಯಕ್ಷರಾದ ಸಾವಿತ್ರಮ್ಮ, ನಿಕಟಪೂರ್ವಅಧ್ಯಕ್ಷರಾದ ನಟರಾಜ್, ನೂತನ ತಾಲೂಕು ಅಧ್ಯಕ್ಷರಾದ ಹನುಮಂತರಾಜು, ಉಪಾಧ್ಯಕ್ಷರಾದ ಅನಿತಾ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ, ಶಿವಣ್ಣ, ಕಮಲ, ರಂಗಮ್ಮ ಮಮತಾ ಸೇರಿದಂತೆ…
ಹೆಚ್ ಡಿ ಕೋಟೆ/ ಸರಗೂರು: ಕೊವಿಡ್ ಹಿನ್ನೆಲೆಯಲ್ಲಿ ಗಡಿ ಪ್ರದೇಶವಾದ ಬಾವಲಿ ಚೆಕ್ ಪೋಸ್ಟ್ ಗೆ ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಭೇಟಿ ನೀಡಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಡಿ.ಪಿ. ಕುಪ್ಪೇಗೆ ವ್ಯಾಪ್ತಿಗೆ ಬರುವ ಬಾವಲಿ ಚೆಕ್ ಪೋಸ್ಟ್ ಬಳಿ ಕೇರಳದಿಂದ ಹೆಚ್.ಡಿ. ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್ ಮೂಲಕ ಕರ್ನಾಟಕ್ಕೆ ಆಗಮಿಸುವವರ ಮೇಲೆ ಕಣ್ಣಿಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಆರೋಗ್ಯಾಧಿಕಾರಿ ಕೊವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಮೇರೆಗೆ ಕೇರಳದಿಂದ ಬರುವ ಜನರನ್ನು ಪರಿಶೀಲನೆ ನಡೆಸಿ, ನೆಗೆಟಿವ್ ರಿಪೋರ್ಟ್ ನೋಡಿ ಪ್ರವೇಶ ನೀಡಬೇಕು ಎಂದು ಸೂಚನೆ ನೀಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊವಿಡ್ ವೈರಸ್ ಮತ್ತು ಒಮಿಕ್ರಾನ್ ಬಗ್ಗೆ ಎಚ್ಚರಿಕೆ ವಹಿಸುತ್ತಿದ್ದೇವೆ. 72 ಗಂಟೆಗಳಲ್ಲಿ ಕೊವಿಡ್ ಟೆಸ್ಟ್ ಆಗಿ ನೆಗೆಟಿವ್ ರಿಪೋರ್ಟ್ ಇರುವವರನ್ನು Q R ಬಾರ್ ಕೋಡಿಂಗ್ ನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಬೆಳ್ಳಗೆ 6 ಗಂಟೆಯಿಂದ ಸಂಜೆ 6 ತನಕ ಎಲ್ಲಾ ವಾಹನಗಳನ್ನು…