Subscribe to Updates
Get the latest creative news from FooBar about art, design and business.
- ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
- ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
- ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
- ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
- ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
- ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
- ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
- ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
Author: admin
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಟಿ.ಟಿ.ರಸ್ತೆಯಲ್ಲಿರುವ ಹಿರಿಯೂರು ತಾಲ್ಲೂಕಿನ ಹೆಸರು ವಾಸಿಯಾದ ದಕ್ಷಿಣಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ಜಾತ್ರೆಯನ್ನು ಪ್ರತಿ ವರ್ಷದಂತೆ ಈ ವರ್ಷವು ಸಹ ನಡೆಸುವಂತೆ ಹಿರಿಯೂರು ನಗರದ ನಗರಸಭೆ ಕಾರ್ಯಾಲಯದ ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಹಿರಿಯೂರು ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ, ಉಪಾಧ್ಯಕ್ಷರಾದ ಬಿ.ಎನ್. ಪ್ರಕಾಶ್ , ಪೌರಾಯುಕ್ತರಾದ ಡಿ.ಉಮೇಶ್ , ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ , ನಗರ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶಿವಕುಮಾರ್ ವಿ., ಗ್ರಾಮ ಲೆಕ್ಕಾಧಿಕಾರಿಗಳಾದ ಮಾಯವರ್ , ಗಿರೀಶ್, ರಾಜು, ಮಂಜುನಾಥ್, ಉಪತಹಶೀಲ್ದಾರರಾದ ಮಂಜಪ್ಪ, ರಾಜಸ್ವ ನಿರೀಕ್ಷಕರಾದ ಗೋಪಿ, ಶಿವಮೂರ್ತಿ ಎನ್.ಸಿ., ಹಾಗೂ ನಗರಸಭೆ ಸದಸ್ಯರುಗಳಾದ ಜಗದೀಶ್, ಸೊಸೈಟಿ ಸಣ್ಣಪ್ಪ , ದಿವು ಶಂಕರ್ , ಚಿಕ್ಕಲ್ಲಿನಾಯಕ, ಪತ್ರಕರ್ತರ ಸಂಘದ ಅಧ್ಯಕ್ಷ ರಾದ ಜಿ ಎಲ್ ಮೂರ್ತಿ, ಲಕ್ಷ್ಮಿಕಾಂತ್ ವೆಬ್, ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. ವರದಿ:…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರದಲ್ಲಿರುವ ಬಸವನಕಟ್ಡೆ ವಾಸಿ ಲಕ್ಷ್ಮಣಪ್ಪ ನವರ ಸೊಸೆಯಾದ 29 ವರ್ಷ ವಯಸ್ಸಿನ ವಿದ್ಯಾಶ್ರೀ ಕೋಂ ನಾಗರಾಜ ಅವರು ಕಾಣೆಯಾಗಿರುವ ಪ್ರಕರಣ ಹಿರಿಯೂರು ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ . ವಿದ್ಯಾಶ್ರಿ ಅವರಿಗೂ ಲಕ್ಷ್ಮಣಪ್ಪ ನವರ ಮಗನಾದ ನಾಗರಾಜ , ನಿಗೂ ಹಿರಿಯರ ಸಮ್ಮಖದಲ್ಲಿ ವಿವಾಹವಾಗಿ ಇವರ ಸಂಸಾರವು ಸುಖಸಂಸಾರವಾಗಿದ್ದು , ಇವರಿಗೆ ಎಂಟು ವರ್ಷದ ಮಗನು ಸಹ ಇದ್ದು ಇಂತಹ ಸುಖ ಸಂಸಾರದಲ್ಲಿ ಕಳೆದಂತಹ ಎರಡು ವರ್ಷಗಳಿಂದ ಸಂಸಾರದಲ್ಲಿ ಗಂಡ – ಹೆಂಡ್ತಿರ ಮಧ್ಯೆ ಸಣ್ಣಪುಟ್ಟ ಗಲಾಟೆಗಳು, ಇಂದು ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿತ್ತು . ಹಲವಾರು ಭಾರಿ ಗಂಡ – ಹೆಂಡತಿ ಮಧ್ಯೆ ವಿರಾಸ ಉಂಟಾಗಿ ಹಿರಿಯರ ಸಮಕ್ಷಮದಲ್ಲಿ ಪಂಚಾಯತಿ ಮಾಡಿಸಿ ಹೊಂದಾಣಿಕೆ ಮಾಡಿಕೊಂಡು ಹೋಗುವಂತೆ ತಿಳಿಸಿದ್ದರು . ಸಹ ಸಮೇತ ಗಂಡ – ಹೆಂಡತಿ ಜಗಳಗಳು ದಿನಕ್ಕಿಂತ ದಿನ ಹೆಮ್ಮರವಾಗಿ ಬೆಳೆದು ನಿಂತಾಗಿದೆ . ಹೀಗಿರುವ ಸಂದರ್ಭದಲ್ಲಿ ದಿನಾಂಕ 29-12-2021…
ತಿಪಟೂರು: ತಾಲೂಕಿನ ವಿವೇಕಾನಂದ ಬಡಾವಣೆಯಲ್ಲಿ ಆಯೋಜನೆ ಮಾಡಲಾಗಿದ್ದ ಕಟ್ಟಡ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಟಿ ಶಾಂತಕುಮಾರ್ ಭಾಗವಹಿಸಿ ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ಚರ್ಚಿಸಿ ದರು. ಕಾರ್ಮಿಕರಿಗೆ ಲೇಬರ್ ಕಾರ್ಡ್ ಮಾಡಿಸುವಲ್ಲಿ ಬ್ರೋಕರ್ ಗಳ ಹಾವಳಿ ಹಾಗೂ ಸರ್ಕಾರದಿಂದ ಸಿಗುವ ಸವಲತ್ತು ವಿಳಂಬಗಳ ಬಗ್ಗೆ ಮಾತನಾಡಿದ ಶಾಂತ ಕುಮಾರ್, ಇನ್ನು ಮುಂದೆ ಈ ರೀತಿಯಾಗದಂತೆ ಸರ್ಕಾರಕ್ಕೆ ಗಮನ ತರುತ್ತೇವೆ. ಎಲ್ಲಾ ಕಾರ್ಮಿಕರು ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸೊಪ್ಪು ಗಣೇಶ್ ಬಸವರಾಜ್ ಅಧ್ಯಕ್ಷರಾದ ಹನುಮಂತಪ್ಪ ಹೊನ್ನಪ್ಪ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು ವರದಿ: ಮಂಜು ಗುರುಗದಹಳ್ಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಅತಿಥಿ ಉಪನ್ಯಾಸಕರ ಹೋರಾಟದ ಅಂಗವಾಗಿ ಹರ್ಷ ಶಾನಭೋಗರವರ ಮನೆಯಿಂದ ಬೆಂಗಳೂರಿನ ವಿಧಾನ ಸೌಧಕ್ಕೆ ಪಾದಯಾತ್ರೆ ನಡೆಯುತ್ತಿದ್ದು, ಈ ಪಾದಯಾತ್ರೆ ಕಡೂರಿನಿಂದ ಬಾಣವಾರಕ್ಕೆ ಆಗಮಿಸಿತು. ಈ ವೇಳೆ ಹರ್ಷ ಶಾನಭೋಗರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಾರ್ವಜನಿಕರು ಪ್ರಾರ್ಥಿಸಿ, ಕ್ಯಾಂಡಲ್ ಹಿಡಿದು ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಪಾದಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಸಂಚಾಲಕ ಲೋಕೇಶ್ ಬಿ.ಸಿ., ಉಪನ್ಯಾಸಕರಿಗೆ ಬಾಕಿ ಇರುವ 12 ತಿಂಗಳುಗಳ ವೇತನ ನೀಡಬೇಕು. ಅತಿಥಿ ಶಿಕ್ಷಕರನ್ನು 60 ವರ್ಷದವರೆಗೂ ಕೆಲಸದಲ್ಲಿ ಮುಂದುವರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪಾದಯಾತ್ರೆಯಲ್ಲಿ ಚಿಕ್ಕಮಗಳೂರು, ಹಾಸನ, ಹಾವೇರಿ, ಶಿವಮೊಗ್ಗ, ತುಮಕೂರು, ಬೆಂಗಳೂರು ನಗರ ಹಾಗೂ ಗದಗ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು. ವರದಿ: ಸೌಮ್ಯ ಎಸ್.ಬಿ. ಸಿರಾ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮತ್ತೊಮ್ಮೆ ದೇಶಕ್ಕೆ ಮಹಾಮಾರಿಯ ಕಂಟವೆದುರಾಗಿದೆ.. ಕೋವಿಡ್ 3 ನೇ ಅಲೆ ಜೊತೆಗೆ ಒಮಿಕ್ರಾನ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗ್ತಲೇ ಇದೆ.. ಹೀಗಿರೋವಾಗ್ಲೇ ಮತ್ತೆ ಲಾಕ್ ಡೌನ್ ಮಾಡಲಾಗುತ್ತದೆ ಎನ್ನಲಾಗ್ತಿದೆ.. ಜೊತೆಗೆ ನೈಟ್ ಕರ್ಫ್ಯೂ , ವೀಕೆಂಡ್ ಕರ್ಫ್ಯೂಗಳು ಸಹ ಜಾರಿಯಾಗ್ತಿರೋದು ಗೊತ್ತೇ ಇದೆ.. ಇದೀಗ ನಿರೀಕ್ಷೆ ಮಾಡಿದ್ದಂತೆಯೇ ಥಿಯೇಟರ್ ಗಳಲ್ಲಿ ಶೇ.50 ಸೀಟಿಂಗ್ ಆದೇಶ ಹೊರಡಿಸಲಾಗಿದೆ.. ಈಗಾಗಲೇ RRR ನಂತಹ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಡೇಟ್ ಗಳನ್ನ ಮುಂದೂಡಿಕೆ ಮಾಡಿವೆ. ಈ ನಡುವೆ ಕೆಲ ಸಿನಿಮಾಗಳು RRR ಹಿಂದೆ ಸರಿದ ಖುಷಿಯಲ್ಲಿ ರಿಲೀಸ್ ಗೆ ರೆಡಿಯಾಗಿರೋವಾಗಲೇ ಸಿನಿಮಾಮಂದಿರಗಳಲ್ಲಿ ಶೇ.50 ಸೀಟಿಂಗ್ ವಿಧಿಸಲಾಗಿದೆ. ಅಷ್ಟೇ ಅಲ್ಲ ಶನಿವಾರ, ಭಾನುವಾರ ಥಿಯೇಟರ್ ಗಳು ಸಂಪೂರ್ಣವಾಗಿ ಬಂದ್ ಆಗಿರಲಿವೆ. ಇದ್ರಿಂದಾಗಿ ಸಿನಿಮಾರಂಗಕ್ಕೆ ಮತ್ತೆ ಆಘಾತ ಎದುರಾಗಿದೆ. ಇದ್ರಿಂದಾಗಿ ಜನವರಿ 14 ಕ್ಕೆ ರಿಲೀಸ್ ಆಗಬೇಕಿದ್ದ ರಾಧೆ ಶ್ಯಾಮ್ ನಂತಹ ಸಿನಿಮಾಗಳು ಕೂಡ ಪೋಸ್ಟ್ ಪೋನ್ ಮಾಡಲಾಗಿದೆ. ಇನ್ನೂ ಫೆಬ್ರವರಿಯಲ್ಲಿ ರಿಲೀಸ್ ಆಗಬೇಕಿರುವ ಕಿಚ್ಚ…
ಚಿತ್ರದುರ್ಗ: ಜಿಲ್ಲೆಯಹಿರಿಯೂರು ತಾಲ್ಲೂಕಿನ ಹಿರಿಯೂರು ನಗರದಲ್ಲಿನ ನಗರಸಭೆ ಜಾಗಗಳನ್ನು ಗುರುತಿಸಿ, ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಿರುವಂತಹ ಅನೇಕ ಉತ್ತಮ ಕೆಲಸ ಕೈಗೊಳ್ಳಲಾಗಿದ್ದು, ಈ ಬಗ್ಗೆ ಮೊನ್ನೆ ಚಿತ್ರದುರ್ಗದಲ್ಲಿ ನಡೆದ ಮೀಟಿಂಗ್ ನಲ್ಲಿ ಜಿಲ್ಲಾಧಿಕಾರಿಗಳು, ಹಿರಿಯೂರು ನಗರಸಭೆ ಉತ್ತಮ ಕೆಲಸ-ಕಾರ್ಯಗಳನ್ನು ಮಾಡುತ್ತಿದೆ, ಎಂಬುದಾಗಿ ಸರ್ಟಿಫಿಕೇಟ್ ಸಹ ನೀಡಿದ್ದಾರೆ ಆದರೆ ಕ್ಷೇತ್ರದ ಶಾಸಕರು ನಗರಸಭೆ ಆಡಳಿತ ಮಂಡಳಿ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿರುವುದು ನಿಜಕ್ಕೂ ಸತ್ಯಕ್ಕೆ ದೂರವಾದ ಮಾತು ಎಂಬುದಾಗಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಶಂಷುನ್ನೀಸಾ ಹೇಳಿದರು. ಹಿರಿಯೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಗರಸಭೆ ವತಿಯಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಂಷುನ್ನೀಸಾ, ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಮಾಧ್ಯಮಗಳಲ್ಲಿ ಮಾಡಿರುವ ಭ್ರಷ್ಟಾಚಾರದ ಆರೋಪಗಳ ಕುರಿತಂತೆ ಸ್ಪಷ್ಟೀಕರಣ ನೀಡಿದರು. ನಗರಸಭೆ ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್ ಮಾತನಾಡಿ, ನಗರಸಭೆ ವತಿಯಿಂದ ಸ್ಯಾನಿಟೈಸರ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಶಾಸಕರ ಆರೋಪಕ್ಕೆ ಉತ್ತರಿಸಿ, ನಾವು ನಗರಸಭೆಗೆ ಬರುವುದಕ್ಕಿಂತ ಮುಂಚಿತವಾಗಿ ಅಂದಿನ ಜಿಲ್ಲಾಧಿಕಾರಿಗಳೇ ಈ ಟೆಂಡರ್ ಕರೆದಿದ್ದು, ಅವರ ಕಾಲದಲ್ಲಿಯೇ ಅದರ…
ತುಮಕೂರು: ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಹಾಗೂ ಸೇವೆ ವಿಲೀನಗೊಳಿಸುವ ಸಲುವಾಗಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಶಾಸಕ ಡಿ.ಸಿ. ಗೌರಿಶಂಕರ್ ಭಾಗಿಯಾದರು. ಈ ವೇಳೆ ಮಾತನಾಡಿದ ಶಾಸಕರು, ದೇಶದಲ್ಲಿ ಮನುಷ್ಯನಿಗೆ ಗಾಳಿ, ನೀರು, ಆಹಾರ ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದ ವಿಷಯ ಎಂದರೆ ಅದುವೇ ಶಿಕ್ಷಣ. ಅಂತಹ ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಿಕ್ಷಕರನ್ನು ಬೀದಿಗೆ ಬರುವಂತೆ ಮಾಡಿದ ಸರ್ಕಾರಕ್ಕೆ ನಾಚಿಕೆಯಾಗಬೇಕು . ಶಿಕ್ಷಣ ಶಿಕ್ಷಣ ಎಂದು ಅಬ್ಬರಿಸುವ ಸರ್ಕಾರ ಶಿಕ್ಷಕರನ್ನೆ ಕಡೆಗಣಿಸಿ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಶಾಸಕ ಡಿ.ಸಿ.ಗೌರಿಶಂಕರ್ ವಾಗ್ದಾಳಿ ನಡೆಸಿದರು. ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಜೆಡಿಎಸ್ ಪಕ್ಷದ ವತಿಯಿಂದ ನಿರಂತರವಾಗಿ ನಮ್ಮ ಬೆಂಬಲವಿದೆ. ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕಿದೆ ಎಂದು ಅವರು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಿದರು. ಪ್ರಾದೇಶಿಕ…
ತುಮಕೂರು: ಸುರೇಶ್ ಗೌಡ ರಾಜೀನಾಮೆ ನೀಡಿದ ನಂತರ ಖಾಲಿಯಿದ್ದ ಸ್ಥಾನಕ್ಕೆ ತಿಗಳ ಸಮುದಾಯದ ಲಕ್ಷ್ಮೀಶ್, ಕುರುಬ ಸಮುದಾಯದ ಬಿ.ಕೆ.ಮಂಜುನಾಥ್ ಅವರನ್ನು ಜಿಲ್ಲಾಧ್ಯಕ್ಷರಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಜಿಲ್ಲೆಗೆ ಇಬ್ಬರು ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಇದು ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರಲ್ಲಿ ಹಲವು ಗೊಂದಲಗಳಿಗೆ ಕಾರಣವಾಗಿದೆ. ಲಕ್ಷ್ಮೀಶ್ ಅವರಿಗೆ 7 ತಾಲೂಕುಗಳು: ತುಮಕೂರು ನಗರ, ಗ್ರಾಮಾಂತರ, ಕುಣಿಗಲ್, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಗುಬ್ಬಿ ತಾಲೂಕಿನ ಜವಾಬ್ದಾರಿ ವಹಿಸಲಾಗಿದೆ. ಬಿ ಕೆ ಮಂಜುನಾಥ್ ರವರಿಗೆ ಮಧುಗಿರಿ, ಕೊರಟಗೆರೆ, ಶಿರಾ, ಪಾವಗಡ 4 ತಾಲೂಕಿನ ಉಸ್ತುವಾರಿಯನ್ನು ನೀಡಲಾಗಿದೆ. ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿರುವ ಲಕ್ಷ್ಮೀಶ್ ಅವರು ಅಧ್ಯಕ್ಷ ಸ್ಥಾನದ ಮೇಲೆ ಬಹಳ ದಿನಗಳಿಂದ ಕಣ್ಣಿಟ್ಟಿದ್ದರು. ಶಿರಾ ಭಾಗದಲ್ಲಿ ಬಿಜೆಪಿಯನ್ನು ಸಂಘಟಿಸುತ್ತಿರುವ ಮಂಜುನಾಥ್ ಅವರಿಗೆ ಬಯಸದೆ ಬಂದ ಭಾಗ್ಯ ಎಂಬಂತೆ ಅಧ್ಯಕ್ಷ ಹುದ್ದೆ ಒಲಿದು ಬಂದಿದೆ. ಮಧುಗಿರಿ ಜಿಲ್ಲೆ ಯಾವಾಗ ಆಯ್ತು? ಒಂದು ಪಕ್ಷಕ್ಕೆ ಒಂದು ಜಿಲ್ಲೆಗೆ…
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರು ಇಂದು ಹೆಬ್ಬೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗಂಗೋನಹಳ್ಳಿ ಪಂಚಾಯಿತಿಯ ಕೆಂಬಳಲು ಗ್ರಾಮದಲ್ಲಿ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಇದೇ ವೇಳೆ ಸಾರ್ವಜನಿಕರ ಅನೇಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್ ವೈರಸ್ ಬಗ್ಗೆ ಎಚ್ಚರದಿಂದಿರಲು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಹೆಬ್ಬೂರು ಜಿಲ್ಲಾ ಪಂಚಾಯತಿ ಜೆಡಿಎಸ್ ಮುಖಂಡರಾದ ಸೀರಾಕ್ ರವೀಶ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ರಾಮಚಂದ್ರಪ್ಪ, ಕೋಡಿಮುದ್ದನಹಳ್ಳಿ ಪ್ರಕಾಶ್, ಪಾಂಡುರಂಗ ಹಾಗೂ ಅನೇಕ ಜೆಡಿಎಸ್ ಕಾರ್ಯಕರ್ತರುಗಳು ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಅತಿ ವೇಗವಾಗಿ ಹರಡುತ್ತಿರುವುದು ಆತಂಕಕಾರಿಯಾಗಿದ್ದು, ಜನವರಿ ಕೊನೆಯ ಅಥವಾ ಫೆಬ್ರವರಿ ಮೂರನೇ ಅಲೆ ಅಪ್ಪಳಿಸುವ ಬಗ್ಗೆ ಈಗಾಗಲೇ ಕಾನ್ಪುರದ ಐಐಟಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಗರದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹಮದ್ ಮನವಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೊರೊನಾ ಎರಡನೇ ಅಲೆಯ ಬಗ್ಗೆ ತಜ್ಞರ ವರದಿಯನ್ನು ಕಡೆಗಣಿಸಿತ್ತು. ಅದರ ಪರಿಣಾಮ ಲಕ್ಷಾಂತರ ಜನ ಜೀವ ಕಳೆದುಕೊಳ್ಳುವಂತಾಗಿದ್ದು ದುರಂತ ಇತಿಹಾಸ ಎಂದರು. ಓಮಿಕ್ರಾನ್ ಕೊರೊನಾ ರೂಪಾಂತರ ತಳಿಗಳಲ್ಲೇ ಅತಿ ಕ್ಷಿಪ್ರವಾಗಿ ಹರಡುವ ಗುಣ ಹೊಂದಿದೆ. ಭಾರತದಂತಹ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಸೋಂಕು ಹರಡುವ ಸಾಧ್ಯತೆ ಇನ್ನೂ ಹೆಚ್ಚು. ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೋಂಕು ತಡೆಗೆ ಈಗಾಗಲೇ ಮುಂದಾಗಬೇಕು. ಆಕ್ಸಿಜನ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳಿಗೆ ಈಗಿನಿಂದಲೇ ಆದ್ಯತೆ ನೀಡಬೇಕು ಎಂದಿ…