Subscribe to Updates
Get the latest creative news from FooBar about art, design and business.
- ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
- ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
- ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
- ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
- ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
- ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
- ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
- ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
Author: admin
ಮಧುಗಿರಿ: ತಾಲೂಕು ಪಂಚಾಯಿತಿ ಕಚೇರಿ ಆವರಣ ಸುತ್ತ ಮುತ್ತ ಹಲವು ವರ್ಷಗಳಿಂದ ಬೆಳೆದು ನಿಂತ ಗಿಡ ಗಂಟೆಗಳನ್ನು ನೂತನ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ್ ಸ್ವಚ್ಛ ಪಡಿಸಿದರು. ಈ ಸಂದರ್ಭ ಮಾತನಾಡಿದ ಅವರು, ವಿಜ್ಞಾನ, ತಂತ್ರಜ್ಞಾನಗಳ ಮುಖಾಂತರ ದೇಶ ಅಭಿವೃದ್ಧಿ ಹೊಂದುತ್ತಿರುವಾಗ ಮಾನವನು ಆರೋಗ್ಯವಂತನಾಗಿ ಉಳಿಯಬೇಕಾದರೆ ಸ್ವಚ್ಛ ಸುಂದರ ಪರಿಸರವನ್ನು ಉಳಿಸಿ, ಬೆಳೆಸಬೇಕಾದದ್ದು ಅತ್ಯಗತ್ಯ. ಆದ್ದರಿಂದ ಈ ದಿನ ನಮ್ಮ ಕಚೇರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸ್ವಚ್ಛ ಪರಿಸರ ನಿರ್ಮಾಣಕ್ಕೆ ಈ ಸ್ವಚ್ಛ ಕಾರ್ಯ ಅಗತ್ಯವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಂಚಾಯಿತಿ ಅಧಿಕಾರಿಗಳಾದ ಮಧುಸೂದನ್, ವಸಂತ್, ಅರ್ಷಾದ್ ಹುಸೇನ್ , ಅಲ್ಪಸಂಖ್ಯಾತರ ಅಧ್ಯಕ್ಷರಾದ ಸಯ್ಯದ್ ಅಲಾವುದ್ದೀನ್ , ದಾದಾಪೀರ್ ಹಾಜರಿದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ಕಿಬನಹಳ್ಳಿ ಹೋಬಳಿಯ ಯಗಚಿ ಗಟ್ಟಿ ಗ್ರಾಮದಲ್ಲಿ ಭಾರತದ ದೇಶದ ಪ್ರಥಮ ಮಹಿಳಾ ಶಿಕ್ಷಕಿ ಅಕ್ಷರ ಮಾತೆ ಸಾವಿತ್ರಿ ಬಾಫುಲೆ ಅವರ ಜಯಂತಿಯನ್ನು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ದಲಿತ ಯುವ ಮುಖಂಡ ಹರೀಶ್, ಭಾರತ ದೇಶದಲ್ಲಿ ಶೂದ್ರರಿಗೆ ಮತ್ತು ತಳಸಮುದಾಯದವರಿಗೆ ವಿದ್ಯೆಯನ್ನು ಕಲಿಸುವುದಕ್ಕೆ ಯಾವ ಗುರುಕುಲಗಳು ಮುಂದೆ ಬರದ ದಿನಗಳಲ್ಲಿ ಆ ದಿನದ ಕಾಲಘಟ್ಟದಲ್ಲಿ ಸಾವಿತ್ರಿ ಬಾಪುಲೆ ಹಾಗೂ ಜ್ಯೋತಿಬಾಪುಲೆಯವರ ಕೊಡುಗೆ ದೇಶದ ಜನತೆಗೆ ಅಪಾರವಾಗಿದೆ ತಳ ಸಮುದಾಯಗಳ ಮೇಲೆ ಅನೇಕ ಕಟ್ಟುಪಾಡುಗಳನ್ನು ಏರಿದ ಮನುವಾದಿಗಳ ಮಧ್ಯೆ ತಳಸಮುದಾಯಗಳಿಗೆ ಶಿಕ್ಷಣ ನೀಡುವಲ್ಲಿ ಅವರು ಮಾಡಿರುವ ಹೋರಾಟಗಳು ಕಾರ್ಯಗಳು ತುಂಬಾ ಕೊಡುಗೆ ಇದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಯ್ಯ ಶಾಲಾ ಶಿಕ್ಷಕಿ ಉಮಾ ಶಿಕ್ಷಕಿ ಶೈಲಜಾ ಅವರು ವಿದ್ಯಾರ್ಥಿಗಳು ಸೇರಿದಂತೆ ಪ್ರಮುಖ ಮುಖಂಡರುಗಳು ಹಾಜರಿದ್ದರು. ವರದಿ: ಮಂಜು ಗುರುಗದಹಳ್ಳಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಇದುವರೆಗೂ ಕೋವಿಡ್ ಲಸಿಕೆಯ ಅಭಿಯಾನ ಯಾವುದೇ ಲೋಪವಾಗದಂತೆ ಯಶಸ್ವಿಯಾಗಿದ್ದು, 15 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಹಮ್ಮಿಕೊಳ್ಳಲಾಗಿರುವ ಈ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಪೋಷಕರು ಹಾಗೂ ವಿದ್ಯಾರ್ಥಿಗಳು ಸಹಕರಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಜಿ.ವೆಂಕಟೇಶ್ ಮನವಿ ಮಾಡಿದರು. ಹಿರಿಯೂರು ನಗರದ ಪ್ರಧಾನ ರಸ್ತೆಯಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಚಿತ್ರದುರ್ಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಗರಸಭೆ ಅಧ್ಯಕ್ಷರಾದ ಶಂಷುನ್ನೀಸಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರವು ಲಸಿಕಾ ಕಾರ್ಯಕ್ರಮವನ್ನು ವಯಸ್ಸಿಗನುಸಾರವಾಗಿ ಹಂತಹಂತವಾಗಿ ಜಾರಿಗೊಳಿಸುತ್ತಿದ್ದು, ಇದೀಗ 15 ರಿಂದ 18 ವರ್ಷದ ಮಕ್ಕಳಿಗೆ ಅವಕಾಶ ಕಲ್ಪಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂಬುದಾಗಿ ತಿಳಿಸಿ ಮನವರಿಕೆ ಆಗುವಂತೆ ವಿವರಿಸಿದರು . ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಾಲ್ಲೂಕು ತಹಶೀಲ್ದಾರ್ ಎನ್ .…
ಮಹಾರಾಷ್ಟ: ಇಲ್ಲಿನ ಥಾಣೆ ಜಿಲ್ಲೆಯ ಅಂಬರನಾಥದಲ್ಲಿ 21 ವರ್ಷದ ಯುವತಿ ಮೇಲೆ ಸ್ನೇಹಿತರೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಪ್ರಕರಣದ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಶಿವಾಜಿನಗರ ಪೊಲೀಸರು ತಕ್ಷಣ ಕೈಕೋಳ ಹಾಕಿದ್ದಾರೆ. ಭಾನುವಾರ ಮಧ್ಯಾಹ್ನ ಥಾಣೆ ಜಿಲ್ಲೆಯ ಅಂಬರನಾಥ್ನ ಜಿಐಪಿ ಅಣೆಕಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ಅಂಬರನಾಥದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಆಕೆಯ ಸ್ನೇಹಿತ ಹನುಮಾನ್ ಹಿಲಮ್ ತನ್ನ ಸ್ನೇಹಿತರಾದ ವಿಶ್ವಾಸ್ ಮಾಧವಿ ಮತ್ತು ಜಾವೇದ್ ಅನ್ಸಾರಿ ಅವರೊಂದಿಗೆ ಭಾನುವಾರ ಜಿಐಪಿ ಅಣೆಕಟ್ಟು ಪ್ರದೇಶದಲ್ಲಿ ಕುಡಿದು ಪಾರ್ಟಿ ಮಾಡುತ್ತಿದ್ದರು. ಇದೇ ವೇಳೆ ಹನುಮಂತ, ಜಿಐಪಿ ಅಣೆಕಟ್ಟೆ ಪ್ರದೇಶದಲ್ಲಿ ಸ್ನೇಹಿತೆಯನ್ನ ಅಲ್ಲಿಗೆ ಬರುವಂತೆ ಕರೆದಿದ್ದಾನೆ. ಕುಡಿದ ಮತ್ತಿನಲ್ಲಿ ಹನುಮಂತ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಸ್ನೇಹಿತರಾದ ವಿಶ್ವಾಸ್ ಮತ್ತು ಜಾವೇದ್ ರ ಸಹ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಘಟನೆಯ ನಂತರ ಯುವತಿ ಶಿವಾಜಿನಗರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಆಕೆಯ ದೂರಿನ ಮೇರೆಗೆ…
ಚೆನ್ನೈ : ತಮಿಳು, ತೆಲುಗು ಸಿನಿಮಾರಂಗದ ಸ್ಟಾರ್ ನಿರ್ದೇಶಕ ಪಿ.ಚಂದ್ರಶೇಖರ್ ರೆಡ್ಡಿ ಅವರು ಸೋಮವಾರ ನಿಧನರಾಗಿದ್ದಾರೆ. ಹಿರಿಯ ಸ್ಟಾರ್ ನಟರಾದ NTR , ನಾಗೇಶ್ವರ್ ರಾವ್ ರಂತಹವರಿಗೆ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ರೆಡ್ಡಿ ಅವರ ನಿಧನದಿಂದ ಸಿನಿಮಾರಂಗಕ್ಕೆ ಆಘಾತವಾಗಿದೆ. ಚಂದ್ರಶೇಖರ್ ರೆಡ್ಡಿ ಅವರು ಹಲವು ದಿನಗಳಿಂದಲೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. 86 ವರ್ಷ ವಯಸ್ಸಾಗಿದ್ದ ಚಂದ್ರಶೇಖರ್ ರೆಡ್ಡಿ ಚೆನ್ನೈನಲ್ಲಿ ವಾಸವಾಗಿದ್ದರು. ಅಲ್ಲಿಯೇ ತಮ್ಮ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. 1959ರಲ್ಲಿ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದ ಚಂದ್ರಶೇಖರ್ ರೆಡ್ಡಿ ಅವರು ತೆಲುಗು , ತಮಿಳಿನಲ್ಲಿ ಸಾಕಷ್ಟು ಹಿಟ್ ಸಿನಿಮಾಗಳಿಗೆ, ಸ್ಟಾರ್ ನಟರಿಗೆ ಆಕ್ಷನ್ ಕಟ್ ಹೇಳಿದ್ರು. ಚಂದ್ರಶೇಖರ್ ನಿರ್ದೇಶನದ ಮೊದಲ ಸಿನಿಮಾ ‘ಅನುರಾಧ’. 1971ರಲ್ಲಿ ತೆರೆಕಂಡಿತ್ತು. ಭಲೇ ಅಲ್ಲುಡು , ಮಾನವಡು ದಾನವುಡು , ರಗಿಲೇ ಗುಂಡೆಲು, ವಿಚಿತ್ರ ದಾಂಪತ್ಯಂ ಹೀಗೆ ಸುಮಾರು 80ಕ್ಕೂ ಹೆಚ್ಚು ಸಿನಿಮಾಗಳನ್ನ ಚಂದ್ರಶೇಖರ್ ರೆಡ್ಡಿ ನಿರ್ದೇಶಿಸಿದ್ದಾರೆ. 2014ರಲ್ಲಿ ಬಂದ ಜಗನ್ನಾಯಕುಡು ಚಂದ್ರಶೇಖರ್ ರೆಡ್ಡಿ ಅವರ ನಿರ್ದೇಶನದ ಕಡೆಯ ಸಿನಿಮಾ.…
ತುಮಕೂರು: ಈ ಮಣ್ಣಲ್ಲಿ ಹುಟ್ಟಿದ ಪ್ರತಿಯೊಬ್ಬ ಕ್ರೀಡಾ ಪಟುವಿನ ಮಹದಾಸೆ ಏನೆಂದರೆ ಒಂದಲ್ಲ ಒಂದು ದಿನ ದೇಶದ ಪರವಾಗಿ ಆಡಬೇಕು ಎಂಬುದು. ಇಂತಹ ಆಸೆಗಳು ಬಹಳಷ್ಟು ಮಂದಿಗೆ ಈಡೇರುವುದಿಲ್ಲ.ಅದಕ್ಕೆ ತಕ್ಕಂತೆ ಪರಿಶ್ರಮ , ತಪಸ್ಸು ಮತ್ತು ಕೆಲವೊಂದು ಸಲ ಅದೃಷ್ಟವೂ ಬೇಕು. ಆದರೆ ಇಂತಹ ಮಹದಾಸೆಯನ್ನು ಈಡೇರಿಸಿಕೊಂಡು ಭಾರತ ದೇಶವನ್ನು ಪ್ರತಿನಿಧಿಸಲು ಹೊರಟಿದೆ. ತುಮಕೂರು ಜಿಲ್ಲೆಯ ಹ್ಯಾಂಡ್ ಬಾಲ್ ವಿದ್ಯಾರ್ಥಿಗಳ ತಂಡ. ನೇಪಾಳದ ಕಠ್ಮಂಡುವಿನಲ್ಲಿ ” The Association For Traditional Youth Games And Sports ” ವತಿಯಿಂದ ನಡೆಯುತ್ತಿರುವ 5 ನೇವರ್ಷದ ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿ ( 2021-2022 )ಯಲ್ಲಿ ಭಾಗವಹಿಸಲು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಟಿ.ಬಿ.ಯ SBG ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಹೊರಟಿದೆ. ಹೊರಡುವ ಮುನ್ನ ಶ್ರೀ ನಿರ್ಮಲಾನಂದ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ಪಡೆದ ತಂಡ , ಇಂದು ಸಂಜೆ ಹೊರಡಲಿದೆ. ಈ ಬಗ್ಗೆ ಮಾತನಾಡಿದ ವಿದ್ಯಾಲಯದ ದೈಹಿಕ ಶಿಕ್ಷಕರಾದ…
ಮಧುಗಿರಿ: ತಾಲೂಕಿನಲ್ಲಿ ಕೃಷಿ ಇಲಾಖೆಯ ಬಗ್ಗೆ ಹಲವಾರು ಆರೋಪಗಳಿದ್ದು, ರೈತರ ಪರ ಕೆಲಸ ನಿರ್ವಹಿಸಬೇಕಾದ ಇಲಾಖೆಯೇ ರೈತರಿಗೆ ತಲೆ ನೋವಾಗಿದೆ. ನಿಮಗೆ ನಿಭಾಯಿಸಲು ಸಾಧ್ಯ ವಾಗದ್ದಿದ್ದರೆ ವರ್ಗಾವಣೆ ಪಡೆದುಕೊಂಡು ಹೋಗಬಹುದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ ಅವರ ಬಗ್ಗೆ ಶಾಸಕ ಎಂ.ವಿ.ವೀರಭದ್ರಯ್ಯ ಕೆ.ಡಿ.ಪಿ.ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದಲ್ಲಿರುವ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಶಾಸಕ ಎಂ.ವಿ.ವೀರಭದ್ರಯ್ಯ ನವರ ಅಧ್ಯಕ್ಷತೆಯಲ್ಲಿ ನಡೆದ ಕೆ.ಡಿ.ಪಿ. ಸಭೆಯಲ್ಲಿ ಶಾಸಕರು ಕೃಷಿ ಇಲಾಖೆಯ ಕಾರ್ಯ ವೈಖರಿ ಬಗ್ಗೆ ತರಾಟೆಗೆತ್ತಿಕೊಂಡರು. ರಾಜಕೀಯ ಮಾಡುವುದನ್ನು ಬಿಟ್ಟು ರೈತರ ಪರ ಕೆಲಸ ನಿರ್ವಹಿಸಿ, ಇಲಾಖೆಯ ಸೌಲಭ್ಯಗಳನ್ನು ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ನಿರ್ವಹಿಸಿ ಇಲ್ಲದಿದ್ದರೆ ವರ್ಗಾವಣೆ ಪಡೆದು ಹೊರಟು ಹೋಗಿ ಬೇರೆಯವರು ಬಂದು ನಿಮ್ಮ ಇಲಾಖೆಯ ಕೆಲಸ ನಿರ್ವಹಿಸುತ್ತಾರೆ ಎಂದರು. ತಾಲೂಕಿನ ಪ್ರತಿ ಗ್ರಾಮಗಳ ಪೆಟ್ಟಿಗೆ ಅಂಗಡಿಗಳಲ್ಲೂ ಕೂಡ ಮದ್ಯ ದೊರೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಅಬಕಾರಿ ಇಲಾಖೆ ಏನು ಕ್ರಮ ತೆಗೆದುಕೊಂಡಿದೆ ಎಂದು ಅಬಕಾರಿ ನಿರೀಕ್ಷಕ…
ಸರಗೂರು: ಇಂದು ತಾಲ್ಲೂಕಿನ ಜೆ.ಎಸ್.ಎಸ್. ಪ್ರೌಢಶಾಲೆಯಲ್ಲಿ 15ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕಾಕರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ತಾಲೂಕು ತಹಶೀಲ್ದಾರ್ ಚಲುವರಾಜು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ಸರಗೂರು ತಾಲೂಕಿನ ವ್ಯಾಪ್ತಿಯಲ್ಲಿರುವ 15 ರಿಂದ 18 ವರ್ಷದ ಸುಮಾರು 2,450 ಮಕ್ಕಳಿಗೆ, 7 ರಿಂದ 10 ದಿನಗಳೊಳಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿದ್ದೇವೆ ಎಂದರು. ಜನವರಿ 3 ರಿಂದ ರಾಜ್ಯಾದ್ಯಂತ 15 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ಹಾಕಲಾಗುವುದು. ತಾಲೂಕಿನಲ್ಲಿ ಇಂದು 15 ರಿಂದ 18 ವರ್ಷದ ಹತ್ತನೇ ತರಗತಿ, ಪ್ರಥಮ ಪಿ.ಯು.ಸಿ. ಹಾಗೂ ದ್ವಿತೀಯ ಪಿಯುಸಿ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು. ತಾಲೂಕಿನ ಸಾಗರೆ, ಬಡಗಲಪುರ, ಮನುಗನಹಳ್ಳಿ ಹಾಗೂ ಶಾಂತಿಪುರ ಗ್ರಾಮಗಳಲ್ಲಿ ಲಸಿಕಾ ಹಾಕಲಾಗುತ್ತಿದೆ. ಲಸಿಕೆ ತೆಗೆದುಕೊಳ್ಳುವುದರಿಂದ ಯಾವುದೇ ಅಡ್ಡ ಪರಿಣಾಮಗಳೂ ಇರುವುದಿಲ್ಲ ಆದುದರಿಂದ ಎಲ್ಲಾ ಮಕ್ಕಳು ಲಸಿಕೆಯನ್ನೂ ತಪ್ಪದೇ…
ಮತ್ತೆ ಮತ್ತೆ ಲಾಕ್ ಡೌನ್ ಸಾಧ್ಯತೆ ಬಗ್ಗೆ ಹೆದರಿಸುತ್ತಿರುವ ಸರ್ಕಾರ ಮತ್ತು ಮಾಧ್ಯಮಗಳೇ ಇಲ್ಲಿದೆ ನೋಡಿ ಲಾಕ್ ಡೌನ್ ಪರಿಣಾಮ…! ಲಾಕ್ ಡೌನ್ ನುಂಗಿದ ಬದುಕು ರಾತ್ರಿ ಸುಮಾರು 11 ಗಂಟೆ… ನಮ್ಮ ರಸ್ತೆ ಬದಿ ” ಊಟದ ಮನೆ ” ತಳ್ಳುಗಾಡಿಯ ಆಹಾರವೆಲ್ಲ ಮುಗಿದು ಅಮ್ಮ ತಟ್ಟೆ ಲೋಟ ಪಾತ್ರೆಗಳನ್ನು ತೊಳೆಯುತ್ತಿದ್ದರು. ಅಪ್ಪ ಗ್ಯಾಸ್ ಸ್ಟವ್ ಆರಿಸಿ, ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಕುರ್ಚಿಗಳನ್ನು ಎತ್ತಿ ಗಾಡಿಯ ಮೇಲಿಡುತ್ತಿದ್ದರೆ. ಎಂದಿನಂತೆ ಅಂದಿನ ಸಂಪಾದನೆಯ ಗಲ್ಲಾ ಪೆಟ್ಟಿಗೆಯ ನೋಟು – ನಾಣ್ಯಗಳನ್ನು ಒಂದು ತಟ್ಟೆಯಲ್ಲಿ ಹಾಕಿ ನಾನು ಎಣಿಸುತ್ತಾ ಲೆಕ್ಕದ ಪುಸ್ತಕದಲ್ಲಿ ಬರೆದಿಡುತ್ತಿದ್ದೆ. ಈಗ ಮೊದಲಿನಂತಿಲ್ಲ. ಕ್ಯಾಷ್ ಸ್ವಲ್ಪ ಕಡಿಮೆ. ಮೊಬೈಲ್ ಗೂಗಲ್ ಅಕೌಂಟಿಗೂ ಒಂದಷ್ಟು ಹಣ ಬರುತ್ತದೆ. ಅದನ್ನು ಮನೆಗೆ ಹೋಗಿ ಲೆಕ್ಕ ಹಾಕುತ್ತೇನೆ. ನಾನು ಪಿಯುಸಿ ಸೇರಿದ ಮೇಲೆ ಕಳೆದ ಎರಡು ವರ್ಷದಿಂದ ನಮ್ಮ ತಳ್ಳುಗಾಡಿಯ ಲೆಕ್ಕವನ್ನು ಇಷ್ಟ ಪಟ್ಟು ನೋಡುತ್ತಿದ್ದೇನೆ. ಅಮ್ಮನಿಗೆ ಲೆಕ್ಕ ಬರುವುದಿಲ್ಲ. ಅಪ್ಪನಿಗೆ ಸ್ವಲ್ಪ ಮಟ್ಟಿಗೆ…
ತುಮಕೂರು: ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ವತಿಯಿಂದ ಸಾವಿತ್ರಿ ಬಾಯಿಪುಲೆ 191 ನೇ ಜಯಂತೋತ್ಸವವನ್ನು ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು. ಇದೇ ವೇಳೆ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ರಾಜ್ಯ ಅಧ್ಯಕ್ಷರಾದ ನಗುತಾರಂಗನಾಥ್, ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರಸಮಿತಿ ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷರು ಶ್ರೀನಿವಾಸ್.ಎನ್., ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ತುಮಕೂರು ಜಿಲ್ಲಾ ಅಧ್ಯಕ್ಷ ಎನ್ .ಕೆ. ನಿಧಿಕುಮಾರ್, ಡಾ.ಅಂಬೇಡ್ಕರ್ ಪ್ರಚಾರಸಮಿತಿ ಯುವ ಘಟಕದ ಜಿಲ್ಲಾ ಅಧ್ಯಕ್ಷ ಗೋವಿಂದರಾಜ ಕೆ., ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ರಾಜೇಶ್ ಹೆಚ್.ಬಿ., ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಕಾರ್ಯದರ್ಶಿ ಶಿವರಾಜ್ ಕುಚಂಗಿ, ಕರ್ನಾಟಕದಲ್ಲಿ ಸಂಘರ್ಷ ಸಮಿತಿ ವಿದ್ಯಾರ್ಥಿ ಘಟಕದ ಜಿಲ್ಲಾ ಅಧ್ಯಕ್ಷರು ಮಧು ಟಿ.ಎನ್., ನರಸಿಂಹರಾಜ ಜೆ.ಸಿ, ಕವಿತಾ, ದಿವ್ಯ, ಅಶ್ವಿನಿ, ಮಮತಾ, ಹೇಮಾ, ಮನು ಟಿ., ಸಿದ್ದಲಿಂಗಯ್ಯ ಕೆ.ಎನ್, ರಜನಿಕಾಂತ್, ನರಸಿಂಹರಾಜ ಎ.ಡಿ, ನರಸಿಂಹಮೂರ್ತಿ,…