Author: admin

ಪಾವಡಗ: ತಾಲೂಕು ನಿಡಿಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಹರಿಹರ ಪುರದಿಂದ ಸಿರಾ ಮುಖ್ಯರಸ್ತೆ ಸುಮಾರು ನಾಲ್ಕೈದು ಕಿ.ಮೀ. ದೂರದವರೆಗೆ ರಸ್ತೆಗಳು ಹೊಂಡಗುಂಡಿಗಳಿಂದ ಕೂಡಿದೆ. ಈ ಹೊಂಡ ಗುಂಡಿಯ ರಸ್ತೆಯಿಂದಾಗಿ ದ್ವಿಚಕ್ರ ವಾಹನ ಸವಾರರ ಪ್ರಾಣಕ್ಕೆ ಗ್ಯಾರೆಂಟಿ ಇಲ್ಲದಂತಾಗಿದೆ. ಮಳೆ ನಿಂತರೂ ಇನ್ನೂ ಹೊಂಡ ಗುಂಡಿಗಳ ರಸ್ತೆಗಳನ್ನು ದುರಸ್ತಿ ಮಾಡದೇ ಸಂಬಂಧಪಟ್ಟವರು ನಿರ್ಲಕ್ಷ್ಯ ವಹಿಸಿದ್ದು, ಸಾರ್ವಜನಿಕರ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ. ತಕ್ಷಣವೇ ರಸ್ತೆಯನ್ನು ಸರಿಪಡಿಸಿ, ಸಾರ್ವಜನಿಕರಿಗೆ ಸುರಕ್ಷತೆ ಒದಗಿಸಬೇಕು ಎಂದು ಗ್ರಾಮಸ್ಥರಾದ ನಾಗರಾಜಪ್ಪ, ನಾಗೇಂದ್ರ ಮತ್ತಿತರು ಒತ್ತಾಯಿಸಿದರು. ವರದಿ: ನಂದೀಶ್ ಕೊತ್ತೂರು, ನಿಡಗಲ್ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಚಲನಚಿತ್ರದ  ಮುಹೂರ್ತ ಸಮಾರಂಭ ನಗರದ ರೇಣುಕಾಂಬ ಸ್ಟುಡಿಯೋ ದಲ್ಲಿ ನೆರೆವೇರಿತು. ತಂಡಕ್ಕೆ ಆಶೀರ್ವದಿಸಲು ನಿರೀಕ್ಷೆಗಿಂತ ಜನ ಸೇರಿದ್ದು ಚಿತ್ರತಂಡಕ್ಕೆ ಸಂತಸ ತಂದು ಕೊಟ್ಟಿದೆ. ಎಲ್ಲಾ ಮಾಧ್ಯಮ ಮಿತ್ರರು ಶುಭಕೋರಿದರು ತಮ್ಮ ಚಿತ್ರದ ಪೋಸ್ಟರ್ ಗಳಿಂದ  ಗಾಂಧಿ ನಗರದಲ್ಲಿ ಭಾರಿ ಸದ್ದು ಮಾಡುತ್ತಿದ್ದು ಹಿಂದೆಂದೂ ಕಾಣ ಸಿಗದ ಸಸ್ಪೆನ್ಸ್ ಕ್ರೈಂ ಥ್ರಿಲರ್ ಕಥೆ ಇದಾಗಿದೆ. ಸಿನಿಮಾ ನೋಡುವ ಪ್ರೇಕ್ಷಕ ಪ್ರಭುವಿಗೆ ಮನೋರಂಜನೆ ಕಟ್ಟಿಟ್ಟ ಬುತ್ತಿ ಜೊತೆಗೆ ಪ್ರತಿಯೊಂದು ದೃಶ್ಯದಲ್ಲೂ ಟ್ವಿಸ್ಟ್ ಇರುತ್ತೆ ಎಂಬುದು ಚಾರ್ಜ್ ಶೀಟ್ ನಿರ್ದೇಶಕರಾದ ಗುರುರಾಜ್ ಕುಲಕರ್ಣಿಯವರ ಅನಿಸಿಕೆ. ಅಂದಹಾಗೆ ಚಾರ್ಜ್ ಶೀಟ್ ಚಿತ್ರವನ್ನು ಡಾ.ಸುನೀಲ್ ಕುಂಬಾರ್ ಮತ್ತು ಚೆನ್ನೈನ S R ರಾಜನ್ ನಿರ್ಮಿಸುತ್ತಿದ್ದು ಪಶ್ಚಿಮ ಬಂಗಾಳದ ಉಮಾ ಚಕ್ರಬೋರ್ತಿ ಸಹ ನಿರ್ಮಾಪಕರಾಗಿದ್ದಾರೆ. ಕಥೆ ಸ್ವತಃ ನಿರ್ಮಾಪಕರಾದ ಡಾ. ಸುನೀಲ್ ಕುಂಬಾರ್ ಬರೆದಿದ್ದು ಚಿತ್ರಕತೆ ಸಂಭಾಷಣೆ ಸಾಹಿತ್ಯ ನಿರ್ದೇಶನ ಗುರುರಾಜ್ ಕುಲಕರ್ಣಿ ಮಾಡುತ್ತಿದ್ದಾರೆ. ರಂಗಸ್ವಾಮಿ ಛಾಯಾಗ್ರಾಹಣ, M ತಿರ್ಥ್ತೋ ಸಂಗೀತ, ಥ್ರಿಲರ್ ಮಂಜು ಸಾಹಸ ಚಿತ್ರಕ್ಕಿದ್ದು ಪ್ರಮುಖ ಪಾತ್ರದಲ್ಲಿ…

Read More

ಬೆಂಗಳೂರು: ಮೇಕೆದಾಟು ಯೋಜನೆ, ಗಡಿ ಬಿಕ್ಕಟ್ಟು ಸೇರಿದಂತೆ ರಾಜ್ಯ ಎದುರಿಸುತ್ತಿರುವ ನೆಲ, ಜಲ, ಭಾಷೆ ವಿಚಾರದಲ್ಲಿ ನಮ್ಮ ಹಕ್ಕುಗಳನ್ನು ಸಾಧಿಸಿಕೊಳ್ಳಬೇಕಾದರೆ 2023ರಲ್ಲಿ ರಾಷ್ಟ್ರೀಯ ಪಕ್ಷಗಳಿಲ್ಲಲ್ಲದ, ಕನ್ನಡಿಗರದ್ದೇ ಸರಕಾರ ಬರಬೇಕಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬಲವಾಗಿ ಪ್ರತಿಪಾದಿಸಿದರು. ಬೆಂಗಳೂರಿನಲ್ಲಿ ಬುಧವಾರ ಕನ್ನಡಪರ ಹೋರಾಟಗಾರರ ಜತೆ ನಾಡು ನುಡಿ ನೆಲ ಜಲ ಇತ್ಯಾದಿ ಸವಾಲುಗಳಿಗೆ  ಬಗ್ಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಕ್ತ ಮಾತುಕತೆ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ನ್ಯಾಯಯುತ ಹಕ್ಕುಗಳನ್ನು ಸಾಧಿಸಿಕೊಳ್ಳಲು ಹಾಗೂ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಕನ್ನಡಪರ ಹೋರಾಟಗಾರರು ಕೂಡ ವಿಧಾನಮಂಡಲಕ್ಕೆ ಬರಲೇಬೇಕು” ಎಂದು ಕರೆ ನೀಡಿದರು. ಕನ್ನಡಪರ ಸಂಘಟನೆಗಳನ್ನು ರಾಜಕೀಯಕ್ಕೆ ಆಹ್ವಾನಿಸುವ ಬಗ್ಗೆ ತಮ್ಮದೇ ಆದ ವಿಚಾರ ಸರಣಿ ಮಂಡಿಸಿದ ಮಾಜಿ ಮುಖ್ಯಮಂತ್ರಿಗಳು, ಕನ್ನಡಕ್ಕೆ ಅಪಮಾನವಾದಾಗ ಮಾತ್ರ ನೀವು ಬೀದಿಗೆ ಇಳಿಯುವುದಲ್ಲ. ಪ್ರತಿನಿತ್ಯ ಜನರೊಂದಿಗೆ ಬೆರೆಯಿರಿ. ಅವರ ಸಮಸ್ಯೆಗಳಿಗೆ ದನಿಯಾಗಿ. ಆ ಮೂಲಕವೇ ರಾಜಕೀಯಕ್ಕೂ ಬನ್ನಿ ಎಂದು ಹೇಳಿದರು. ರಾಜ್ಯದ ಸಂಪನ್ಮೂಲ ಲೂಟಿಯಾಗುತ್ತಿದೆ. ನೂರಕ್ಕೆ ಶೇ.70ರಷ್ಟು…

Read More

ಪಾವಗಡ: ಪಟ್ಟಣದಲ್ಲಿ 7 ವರ್ಷಗಳಿಂದ ಪತ್ರಿಕೆ ವಿತರಣೆಯಲ್ಲಿ ತೊಡಗಿದಂತಹ ಅನಿಲ್ ಕುಮಾರ್ ಅವರಿಗೆ ಹೆಲ್ಪ್ ಸೊಸೈಟಿ ವತಿಯಿಂದ ಆರ್ಥಿಕ ಸಹಾಯ ಮಾಡಲಾಯಿತು. ಈ ವೇಳೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂಶಶಿಕಿರಣ್ ಅವರು ಮಾತನಾಡಿ, ಪಾವಗಡ ತಾಲೂಕಿನಲ್ಲಿ ಇಂತಹ ಹಲವು ಪ್ರತಿಭೆಗಳಿವೆ, ಪ್ರತಿಭೆಗಳನ್ನು ಗುರುತಿಸುವಂತಹ ಕೆಲಸವನ್ನು ಮಾಡುತ್ತಿದ್ದೇವೆ ಎಂದರು. ಇನ್ನು ಆರ್ಥಿಕ ನೆರವನ್ನು ಪಡೆದ ಅನಿಲ್ ಕುಮಾರ್ ಮಾತನಾಡಿ, ನಮ್ಮನ್ನು ಗುರುತಿಸಿ ಈಗ ವಿದ್ಯಾಭ್ಯಾಸಕ್ಕೆ ನೆರವು ನೀಡಿದಂತೆ ಹೆಲ್ಪ್ ಸೊಸೈಟಿಯವರಿಗೆ ಅಭಾರಿಯಾಗಿರುತ್ತೇನೆ ಎಂದು ತಿಳಿಸಿದರು. ಇದೇ ವೇಳೆ ಹೆಲ್ಪ್ ಸೊಸೈಟಿ ಯ ಪದಾಧಿಕರಿಗಳಾದ ರಾಕೇಶ, ಮಂಜುನಾಥ್,  ಅನಿಲ್ ಕುಮಾರ್ ಆದಿ ಕೇಶವ, ಸಾಗರ, ಸೇರಿ ಹಲವರು ಇದೇ ವೇಳೆ ಹಾಜರಿದ್ದರು.  ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB  

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರದ ನಗರಸಭೆಯ ಆಡಳಿತ ವರ್ಗ ಹಾಗು ನಗರಸಭೆಯ ಅಧಿಕಾರಿಗಳು ಸಾರ್ವಜನಿಕರ ಅಹವಾಲು ಹಾಗೂ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷರಾದ ವಿಶ್ವನಾಥ್ ನಗರಸಭೆ  ಪೌರಾಯುಕ್ತರ ಆಡಳಿತ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರಸಭೆ ಮುಂಭಾಗದಲ್ಲಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ತಾಲ್ಲೂಕು ಘಟಕ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಗರಸಭೆ ಪೌರಾಯುಕ್ತರ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರಿಂದ ಚುನಾಯಿತಗೊಂಡ ಸದಸ್ಯರಿಗೆ ಮಾಹಿತಿ  ನೀಡದೇ ಕೆ.ಎಂ.ಕೊಟ್ಟಿಗೆಯಿಂದ ನಂಜಯ್ಯನ ಕೊಟ್ಟಿಗೆ ಹತ್ತಿರ ರಸ್ತೆ ಮರುಡಾಂಬರೀಕರಣ ಕಾಮಗಾರಿ ನಡೆಸುತ್ತಿದ್ದು, ಈ ಬಗ್ಗೆ ಮಾಹಿತಿ ಕೇಳಲು ನಗರಸಭೆ ಸದಸ್ಯರಾದ ಅಂಬಿಕಾ ಅವರ ಪತಿಯಾದ ಬಿಜೆಪಿ ಪಕ್ಷದ ತಾಲ್ಲೂಕಿನ ಪ್ರಧಾನ ಕಾರ್ಯದರ್ಶಿ  ಸಿದ್ದು ಆರಾಧ್ಯ ರವರು ನಗರದ ಆಡಳಿತ ಅಧಿಕಾರಿಗಳ ಬಳಿ ತೆರಳಿದಾಗ, ನಿಮಗೆ ಏಕೆ ನಾವು ಮಾಹಿತಿ  ನೀಡಬೇಕು? ನಿಮಗೂ ಇದಕ್ಕೂ ಯಾವ ಸಂಬಂಧವೂ ಇಲ್ಲ, ಎಂದು ಉತ್ತರ ನೀಡಿದ್ದಾರೆ…

Read More

ತುಮಕೂರು: ನಗರದ 16ನೇ ಮತ್ತು 5 ವಾರ್ಡ್ ನಲ್ಲಿ ಮೇಘ ಗ್ಯಾಸ್ ಹೈಡ್ರೋಕಾರ್ಬನ್ ವಿಭಾಗದ ವತಿಯಿಂದ ನೈಸರ್ಗಿಕ ಅನಿಲ ಗ್ಯಾಸ್ ಸೋರಿಕೆಯಾದಾಗ ಅಪಾಯದಿಂದ ಹೇಗೆ ಪಾರಾಗುವುದು ಎನ್ನುವುದನ್ನು ಪ್ರಾತ್ಯಕ್ಷಿಕೆ ಮೂಲಕ ಪ್ರದರ್ಶನ ಮಾಡಲಾಯಿತು. ಮ್ಯಾಕ್ ಡ್ರೀಲ್ ಲೆವಲ್  3 ಹಂತದ  ಗ್ಯಾಸ್ ಸೋರಿಕೆಯ ಪ್ರತ್ಯಾಕ್ಷಿಕೆಯನ್ನು ಜುಡಿಷಿಯಲ್ ಹೆಡ್ ಮುನ್ಸಿ, ಡಿಸ್ಟ್ರಿಕ್ಟ್ ಫೈಯರ್ ಆಫೀಸರ್, ಸಿದ್ಧಾರ್ಥ ಮೆಡಿಕಲ್ ಕಾಲೇಜು, ಮೇಘಾ ಗ್ಯಾಸ್ ನಿಯಂತ್ರಣ ಘಟಕ ಇವರ ಸಹಯೋಗದೊಂದಿಗೆ ನಡೆಸಲಾಯಿತು.  ಯಾವುದೇ ಅಹಿತಕರ ಘಟನೆ ನಡೆದರೆ ಈ ವೇಳೆ ಮೇಘ ಗ್ಯಾಸ್ ನ ದೂರವಾಣಿ ಸಂಪರ್ಕ ಸಂಖ್ಯೆ 9100031303 ಮತ್ತು ಟೋಲ್ ಫ್ರೀ ಸಂಖ್ಯೆ 1800123180 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಮೇಘ ಗ್ಯಾಸ್ ನ ಲಿಂಗರಾಜು ತಿಳಿಸಿದ್ದಾರೆ. ವರದಿ: ಮಾರುತಿ ಪ್ರಸಾದ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು: ಕರ್ನಾಟಕ ವಿದ್ಯುತ್  ಪ್ರಸರಣ ನಿಗಮ ನಿಯಮಿತ ವತಿಯಿಂದ ವಿಶೇಷಾಧಿಕ ವೋಲ್ಟೇಜ್ ವಿದ್ಯುತ್ ಮಾರ್ಗಗಳ ಸಮೀಪದಲ್ಲಿ ಅಥವಾ ಕೆಳಗೆ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಗರದ ಗೆದ್ದಲಹಳ್ಳಿ ಪ್ರಮುಖ ರಸ್ತೆಯಲ್ಲಿ  ಸಾರ್ವಜನಿಕ ಹಿತಾಸಕ್ತಿಗಾಗಿ  ಹೈಟೆನ್ಷನ್ ವಿದ್ಯುತ್  ತಂತಿಯಿಂದಾಗಬಹುದಾದ ಅನಾಹುಗಳ ಬಗ್ಗೆ ಅರಿವು ಮೂಡಿಸಲಾಯಿತು. ನಿಮ್ಮ ಸುರಕ್ಷತೆಯೇ ನಮ್ಮ ಪ್ರಥಮ ಆದ್ಯತೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಾರ್ವಜನಿಕರಿಗೆ ಕರ ಪತ್ರ ವಿತರಣೆ ಮಾಡಿ ಅರಿವು ಮೂಡಿಸಲಾಯಿತು. ಈ ಕುರಿತು ಮಾತನಾಡಿದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್, ನಗರದ ಮೇಳೆಕೋಟೆಯಿಂದ ಬಡ್ಡಿಹಳ್ಳಿಯ ವರೆಗೂ ಇರುವ ಹೈಟೆನ್ಷನ್ ವಿದ್ಯುತ್ ತಂತಿ ಯ ಕೆಳಗೆ ಯಾವುದೇ ರೀತಿಯ ಕಟ್ಟಡ ನಿರ್ಮಾಣ, ಬಟ್ಟೆ ಒಣಗಿಸುವುದು ಸೇರಿದಂತೆ ಇತರೆ ಕಾರ್ಯಗಳನ್ನು ಲೈನ್ ಕೆಳಗೆ ನಿರ್ವಹಿಸದಂತೆ ನೋಟಿಸ್ ಜಾರಿ ಮಾಡಿ ತಿಳಿಹೇಳಿ ಅರಿವು ಮೂಡಿಸಲಾಗುತ್ತಿದೆ ಎಂದರು. ನಗರದಲ್ಲಿ ಎಲ್ಲಿ ಹೈಟೆನ್ಷನ್ ವಿದ್ಯುತ್ ಪೂರೈಕೆಯಾಗುತ್ತಿದೆಯೋ  ಆ ಭಾಗದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಹೈಟೆನ್ಷನ್ ವಿದ್ಯುತ್ ತಂತಿಯ…

Read More

ಕೊರಟಗೆರೆ: ತಾಲ್ಲೂಕಿನ ಕ್ಯಾಮೇನಹಳ್ಳಿ ಶ್ರೀಆಂಜನೇಯ ಗರ್ಭಗುಡಿಯ ಪ್ರಾಣದೇವರ ಪೂಜೆಗೆ ಪರಿಚಾರಕ ಕೃಷ್ಣಚಾರ್ ಅವರಿಗೆ ಅವಕಾಶ ನೀಡಲಾಗಿದ್ದು, ಬ್ರಹ್ಮರಥೋತ್ಸವದ ಉತ್ಸವಮೂರ್ತಿಗೆ ದೇವರಾಯನ ದುರ್ಗದ ಅರ್ಚಕ ಲಕ್ಷ್ಮೀನಾರಾಯಣ್‍ ಗೆ  ಅವಕಾಶ ಕಲ್ಪಿಸಲಾಗಿದೆ.  ಇದರಿಂದಾಗಿ ಮುಜರಾಯಿ ಇಲಾಖೆ, ಆಂಜನೇಯ ವ್ಯವಸ್ಥಾಪನಾ ಸಮಿತಿ ಮತ್ತು ಸ್ಥಳೀಯ ಭಕ್ತರ ಭಾವನೆಗಳಿಗೆ ತಾತ್ಕಾಲಿಕವಾಗಿ ಸಮಾಧಾನ ಪಡಿಸುವ ಕೆಲಸ ಮಾಡಿದೆ. ಕೊರಟಗೆರೆ ತಾಲ್ಲೂಕಿನ ಸುಪ್ರಸಿದ್ದ ಪುಣ್ಯಕ್ಷೇತ್ರ ಕ್ಯಾಮೇನಹಳ್ಳಿಯ ಶ್ರೀಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ನೇಮಕಾತಿ ವಿಚಾರದಲ್ಲಿ ಸೃಷ್ಟಿಯಾಗಿದ್ದ ಗೊಂದಲ ತಾತ್ಕಾಲಿಕವಾಗಿ ಮುಕ್ತಾಯವಾಗಿದೆ. ಬ್ರಹ್ಮ ರಥೋತ್ಸವ ಕಾರ್ಯಕ್ರಮ ಮುಗಿದ ಬಳಿಕ ದೇವರಾಯನ ದುರ್ಗದ ಅರ್ಚಕ ಲಕ್ಷ್ಮೀನಾರಾಯಣ್ ಮತ್ತೆ ಹಿಂದಕ್ಕೆ ತೆರಳಿದ್ದಾರೆ. ಪ್ರಸ್ತುತ ಇರುವ ಪರಿಚಾರಕರೇ ಆಂಜನೇಯ ಪ್ರಾಣದೇವರ ಅರ್ಚಕರಾಗಿ ಪೂಜಾ ಕಾರ್ಯಕ್ರಮ ನೇರವೆರಿಸಲಿದ್ದಾರೆ. 5 ಸಾವಿರ ವರ್ಷಗಳ ಇತಿಹಾಸವುಳ್ಳ ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಮತ್ತು ಉತ್ಸವ ಕಾರ್ಯಕ್ರಮಗಳು ಸ್ಥಗೀತ ಆಗಿರುವ ಇತಿಹಾಸವೇ ಇಲ್ಲ. ಕೊರೊನಾ ರೋಗದ ನೆಪದಿಂದ ಈಗ ಮೊದಲ ಸಲ ಬ್ರಹ್ಮ ರಥೋತ್ಸವ ಸರಕಾರದ ಆದೇಶದಂತೆ ರದ್ದಾಗಿ ಕೊರೊನಾ ನಿಯಮ…

Read More

ಮಧುಗಿರಿ: ಯುವಕರು ರಾಜಕೀಯದಲ್ಲಿ ಸಕ್ರಿಯರಾಗಿರಬೇಕು ಎಂದು ವಿಧಾನ ಪರಿಷತ್ ಸದಸ್ಯೆ ರಾಜೇಂದ್ರ ರಾಜಣ್ಣ ಕರೆ ನೀಡಿದರು. ಪಟ್ಟಣದ ಎಂ.ಎನ್.ಕೆ. ಸಮುದಾಯಭವನದಲ್ಲಿ ಬ್ಲಾಕ್ ಕಾಂಗ್ರೇಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಇಂದು ಮಾಹಿತಿ ತಂತ್ರಜ್ಞಾನ ಪ್ರಗತಿಯಲ್ಲಿದ್ದು, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಮಾಹಿತಿ ತಕ್ಷಣ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಡಿಜಿಟಲ್ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಜಿಲ್ಲೆಯಲ್ಲಿಯೇ ಪ್ರಥಮವಾಗಿ ಮಧುಗಿರಿಯಲ್ಲಿ ಪ್ರಾರಂಭಿಸಲಾಗಿದ್ದು, 252 ಬೂತ್‍ಗಳಿಂದ 70 ಸಾವಿರ ಸದಸ್ಯರನ್ನು ನೋಂದಣಿ ಮಾಡಿಸುವ ಗುರಿ ಹೊಂದಲಾಗಿದೆ ಎಂದರು. ಬಿ.ಜೆ.ಪಿ ಪಕ್ಷದ ಜನ ವಿರೋಧಿ ನೀತಿಯಿಂದಾಗಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆ.ಎನ್.ರಾಜಣ್ಣ ಅವರನ್ನು ಗೆಲ್ಲಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ. ಕೆ.ಎನ್.ರಾಜಣ್ಣ ಸಚಿವರಾಗಲಿದ್ದಾರೆ ಎಂದ ಅವರು, ನನ್ನನ್ನು ವಿಧಾನಪರಿಷತ್ ಸದಸ್ಯನ್ನನ್ನಾಗಿ ಮಾಡಲು ಕ್ಷೇತ್ರದ ಎಲ್ಲಾ ಮುಖಂಡರು ಕಾರ್ಯಕರ್ತರು ಶ್ರಮಿಸಿದ್ದು, ನಾನು ಅವರೆಲ್ಲರಿಗೂ ಆಭಾರಿಯಾಗಿದ್ದೇನೆ ಎಂದರು. ಹಿಜಾಬ್ ವಿಚಾರದಲ್ಲಿ ಬಿಜೆಪಿ ಪಕ್ಷದವರು ಯುವ ಜನತೆಯನ್ನು…

Read More

ಬೆಂಗಳೂರು : ನಗರದ ಅರಕೆರೆ ವಾರ್ಡಿನ ಮಾಜಿ ಬಿಬಿಎಂಪಿ ಸದಸ್ಯರಾದ ಮುರಳಿ ಅವರ ಹುಟ್ಟುಹಬ್ಬದ ಪ್ರಯುಕ್ತ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಬಡಬಗ್ಗರಿಗೆ ಸಹಾಯವನ್ನು ಹಾಗೂ ಅವರಿಗೆ ಬೇಕಾದ ಆಹಾರದ ಸಾಮಗ್ರಿಗಳನ್ನು ಹಂಚಲಾಯಿತು. ಬೆಂಗಳೂರು ಡಿ ಎಸ್ ಎಸ್ ಅಲ್ಪಸಂಖ್ಯಾತ ಅಧ್ಯಕ್ಷರಾದ ಬೇಗೂರು ಅಬ್ದುಲ್, ರಮೇಶ್ ಬಾಬು  ( ಹುಳಿಮಾವು ಬಿಜೆಪಿ ಮುಖಂಡರು) ಹಾಗೂ ಸ್ನೇಹಿತರಾದ ಉಪೇಂದ್ರ, ರಾಮಕೃಷ್ಣ ರೆಡ್ಡಿ, ರಘು, ಶಾಜಿರ್, ಅನ್ಸರ್, ಶ್ರೀಧರ್ ಇನ್ನಿತರ  ಶುಭಾಶಯಗಳನ್ನು ಕೋರಿದರು. ಡಿ ಎಸ್ ಎಸ್ ನಾಯಕರಾದ ಅಲ್ಪಸಂಖ್ಯಾತ ಅಧ್ಯಕ್ಷರು ಬೇಗೂರು ಅಬ್ದುಲ್ ಮಾತನಾಡಿ,  ಮಾಜಿ ಬಿಬಿಎಂಪಿ ಸದಸ್ಯರಾದ ಮುರಳಿ ಅನೇಕ ರೀತಿಯಲ್ಲಿ ಜನರಿಗೆ ನೆರವಾಗುತ್ತಿದ್ದಾರೆ, ಇವರ ಜೊತೆ ಹುಳಿಮಾವು ಬಿಜೆಪಿ ಮುಖಂಡರಾದ ರಮೇಶ್ ಬಾಬು ರವರು ಸಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಪರ ಕಾರ್ಯಕ್ರಮಗಳನ್ನು ಅವರಿಗೆ ಅನುಕೂಲವಾಗುವಂತೆ ಸಹಾಯವನ್ನು ಮಾಡುತ್ತಿದ್ದಾರೆ. ಮುರಳಿ ಅವರಿಗೆ ಇನ್ನಷ್ಟು ಜನರ ಸೇವೆಯನ್ನು ಮಾಡಲು ಅವರಿಗೆ ಬೇಕಾದ ಎಲ್ಲಾ ರೀತಿಯ ಬೆಂಬಲವನ್ನು ವ್ಯಕ್ತಪಡಿಸುವುದಾಗಿ ಹೇಳಿದ…

Read More