Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ಸರಗೂರು: ಲಂಕೆ ಗ್ರಾಮದಲ್ಲಿ ಚರಂಡಿ ನೀರು ಮನೆಗೆ ನುಗ್ಗುತ್ತಿರುವ ವಿಚಾರವಾಗಿ ನಮ್ಮತುಮಕೂರು ಮಾಧ್ಯಮದ ವರದಿಯ ಬೆನ್ನಲ್ಲೇ ಗ್ರಾಮ ಪಂಚಾಯತ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಚರಂಡಿ ಸ್ವಚ್ಛತೆಗೊಳಿಸಿದ್ದಾರೆ. ಸರಗೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಪಂ ವ್ಯಾಪ್ತಿಯ ಬರುವ ಲಂಕೆ ಗ್ರಾಮದಲ್ಲಿ ವರ್ಷದ ಆರಂಭದಲ್ಲಿ ಮಳೆಯಾದ ಕಾರಣ, ಚರಂಡಿಯಲ್ಲಿ ನೀರು ನಿಂತು ಮನೆಗಳಿಗೆ ನುಗ್ಗಿದ್ದವು. ಈ ಸಂಬಂಧ ವಿವರವಾದ ವರದಿಯನ್ನು ನಮ್ಮ ತುಮಕೂರು ಪ್ರಕಟಿಸಿತ್ತು. ವರದಿಯಿಂದ ಎಚ್ಚೆತ್ತ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಚರಂಡಿ ಸ್ವಚ್ಛಗೊಳಿಸಿದ್ದಾರೆ. ಪಂಚಾಯತ್ ಕೈಗೊಂಡಿರುವ ಕ್ರಮದಿಂದಾಗಿ ಇದೀಗ ಗ್ರಾಮದ ಜನರು ನಿಟ್ಟುಸಿರುವ ಬಿಟ್ಟಿದ್ದು, ಇದೇ ವೇಳೆ ಸಮಸ್ಯೆಯನ್ನು ವರದಿ ಮಾಡಿ, ಅಧಿಕಾರಿ, ಜನಪ್ರತಿನಿಧಿಗಳಿಗೆ ತಲುಪಿಸಿದ ನಮ್ಮ ತುಮಕೂರು ಮಾಧ್ಯಮಕ್ಕೆ ಸ್ಥಳೀಯ ಯುವ ಮುಖಂಡ ಶಿವರಾಜ್ ಧನ್ಯವಾದ ತಿಳಿಸಿದ್ದಾರೆ. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಾವಗಡ: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ತಾಲೂಕು ನಿಡಗಲ್ಲು ಹೋಬಳಿಯ ಸಿ.ಕೆ.ಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸಿ.ಕೆ.ಪುರ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿ.ಡಿ.ಪಿ.ಒ ಅಧಿಕಾರಿಗಳಾದ ನಾರಾಯಣ್, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಅವರ ಭವಿಷ್ಯ ರೂಪಿಸಿಕೊಳ್ಳುವುದಕ್ಕೆ ನಾವೆಲ್ಲರೂ ಸಹಕಾರ ಕೊಡಬೇಕು. ಪ್ರಜೆಗಳು, ತಾಯಂದಿರು, ಪೋಷಕರು ಎಲ್ಲರೂ ಸೇರಿ ಬಾಲ್ಯವಿವಾಹ ನಿಷೇಧದ ಬಗ್ಗೆ ಅರಿವು ಮೂಡಿಸಬೇಕು. ಈ ಮೂಲಕ ಬಾಲ್ಯ ವಿವಾಹವನ್ನು ತಡೆಯಬೇಕು ಎಂದರು. ನಾವು ಅಧಿಕಾರಿಗಳು ಪಿಡಿಒ ಆರ್ ಐ ಗಳ ಜೊತೆಗೆ ನಾವು ಇರುತ್ತೇವೆ. ಶಾಲಾ ಮುಖ್ಯೋಪಾಧ್ಯಾಯರು ಎಲ್ಲರೂ ಸೇರಿ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಾಗಿರುತ್ತಾರೆ. ಬಾಲ್ಯ ವಿವಾಹ ಮಾಡಿದರೆ ಕನಿಷ್ಠ ಎರಡು ವರ್ಷ ಜೈಲು ಶಿಕ್ಷೆಯಾಗುತ್ತದೆ. ಸಣ್ಣ ವಯಸ್ಸಿನಲ್ಲಿಯೇ ಮದುವೆ ಮಾಡಿದರೆ, ಹೆಣ್ಣು ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಅನಾರೋಗ್ಯಕ್ಕೊಳಗಬಹುದು. ತಾಯಂದಿರ ಮರಣ ಕೂಡ ಹೆಚ್ಚಾಗಿ ಸಂಭವಿಸುತ್ತಿದೆ. ಬಾಲ್ಯ ವಿವಾಹ ಮಾಡಿದರೆ, ಕಾನೂನಿನಿಂದ ತಪ್ಪಿಸಿಕೊಳ್ಳಲು…
ಪಾವಗಡ: ತಾಲೂಕು ನಿಡಗಲ್ ಹೋಬಳಿಯ ಸಿ.ಕೆ.ಪುರ ಗ್ರಾಮ ಪಂಚಾಯತಿಯಲ್ಲಿ ನೂತನ ಘನತ್ಯಾಜ್ಯ ವಾಹನಕ್ಕೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಮಂಜುನಾಥ ಅಧ್ಯಕ್ಷರಾದ ಲಕ್ಷ್ಮಮ್ಮಈರಣ್ಣ ಚಾಲನೆ ನೀಡಿದರು. ಉಪಾಧ್ಯಕ್ಷರಾದ ಮಮತಾ ನಾಗರಾಜುರವರು. ಗ್ರಾಮ ಪಂಚಾಯಿತಿ ಸದಸ್ಯರುಗಳು. ಕೆಇಬಿ ಯರಪ್ಪ ನವರು. ಕಾಂಗ್ರೆಸ್ ಯುವ ಮುಖಂಡ ಬಿಂದು ಮಾಧವ ರಾವ್. ಪಂಚಾಯತಿಯ ಸಿಬ್ಬಂದಿ ವರ್ಗದವರು ಈ ವೇಳೆ ಇದ್ದರು. ಹೊಸದಾಗಿ ವಾಹನ ಆಗಮಿಸಿರುವ ವಾಹನವನ್ನು ಸದ್ಬಳಕೆ ಮಾಡಬೇಕು. ಬೀದಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಹಸಿ ಕಸ ಮತ್ತು ಒಣ ಕಸ ಸ್ವಚ್ಛತೆ ಮಾಡಿಕೊಂಡು ಆದರ್ಶ ಗ್ರಾಮಗಳನ್ನಾಗಿ ಮಾಡಬೇಕು ಇದೇ ವೇಳೆ ಸ್ವಚ್ಛತಾ ಜಾಗೃತಿ ಮೂಡಿಸಲಾಯಿತು. ವರದಿ: ನಂದೀಶ ಕೊತ್ತೂರು, ನಿಡಗಲ್ ಹೋಬಳಿ ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಾವಗಡ: ತಾಲ್ಲೂಕಿನ ಕೆಪಿಸಿಸಿ ಓಬಿಸಿ ಘಟಕದ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಮೈಲಾರರೆಡ್ಡಿರವರ 43ನೇ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದಿಂದ ಆಚರಿಸಲಾಯಿತು. ಪಟ್ಟಣದ ನಿರೀಕ್ಷಣ ಮಂದಿರದಲ್ಲಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಸೇರಿ ಮೈಲಾರ ರೆಡ್ಡಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಪುರಸಭೆ ಅಧ್ಯಕ್ಷರು ಮಾನಂ ವೆಂಕಟಸ್ವಾಮಿ, ಪಾಂಡು ಯಾದವ್, ಅಕ್ಲಪ್ಪ, ಭರತ್ ಯಾದವ್, ರಘುವೀರ್ ರೆಡ್ಡಿ, ದಿವ್ಯತೇಜ್ ಯಾದವ್, ಕೃಷ್ಣಗಿರಿ ಶಿವಕುಮಾರ್, ದೇವರಹಟ್ಟಿ ನಾಗರಾಜು ಇನ್ನೂ ಅನೇಕ ಅಭಿಮಾನಿಗಳು ಭಾಗವಹಿಸಿದ್ದರು. ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ತಾಲೂಕು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಸರಗೂರು: ತಾಲೂಕಿನ ಮೊಳೆಯೂರು ಗ್ರಾಮದಲ್ಲಿ ಕುರುಬ ಸಮಾಜದಿಂದ ಶುಕ್ರವಾರ ನಡೆದ ಶ್ರೀ ಬಿಲ್ ಕುಮಾರಸ್ವಾಮಿ, ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕನಕ ಭವನವನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಜನಪರ ಯೋಜನೆಗಳನ್ನು ಆಡಳಿತರೂಢ ಬಿಜೆಪಿ ಸರಕಾರ ಮೊಟುಕುಗೊಳಿಸಿದ್ದು, ಜನ ವಿರೋಧಿ ಆಡಳಿತ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ 165 ಭರವಸೆಗಳನ್ನು ಈಡೇರಿಸಿದ್ದೇನೆ. ಶ್ರೀ ಸಾಮಾನ್ಯನ ಅನುಕೂಲಕ್ಕಾಗಿ ಕಾಂಗ್ರೆಸ್ ಜಾರಿಗೊಳಿಸಿದ ಇಂದಿರಾ ಕ್ಯಾಂಟಿನ್, ಪಶು ಭಾಗ್ಯ, ಶೋ ಭಾಗ್ಯ ಸೇರಿದಂತೆ ಇನ್ನಿತರ ಯೋಜನೆಗಳನ್ನು ನಿಷೇಧಿಸಿ, ಇನ್ನು ಕೆಲವು ಯೋಜನೆಗಳನ್ನು ಕಡಿತಗೊಳಿಸುವ ಮೂಲಕ ಬಿಜೆಪಿ ಜನ ವಿರೋಧಿ ಆಡಳಿತ ನೀಡುತ್ತಿದೆ. ಎಸ್ ಸಿ, ಎಸ್ಟಿ ಅನುದಾನ ಕಡಿತಗೊಳಿಸಿ, ಮೋಸ ಮಾಡುತ್ತಿದ್ದಾರೆ. ರೈತರಿಗೆ ಕನಿಷ್ಠ ಬೆಂಬಲ ನೀಡುವಲ್ಲಿ ವಿಫಲವಾಗಿದ್ದಾರೆ. ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಪ್ರಧಾನಿ ನರೇಂದ್ರ ಮೋದಿ ರೈತರ ಮನೆ ಹಾಳು ಮಾಡಿದ್ದಾರೆ ಎಂದು ಅವರು ಟೀಕಿಸಿದರು.…
ಗುಬ್ಬಿ: ಆಕಸ್ಮಿವಾಗಿ ದನದ ಕೊಟ್ಟಿಗೆಗೆ ಬೆಂಕಿ ಬಿದ್ದು 3 ಹಸುಗಳ ಸಜೀವ ದಹನವಾದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಹೊದಲೂರು ಗ್ರಾಮದಲ್ಲಿ ನಡೆದಿದೆ. ಹೊದಲೂರು ಗ್ರಾಮದ ರೈತ ಚಂದ್ರಯ್ಯ ಎಂಬುವರಿಗೆ ಸೇರಿದ ಕೊಟ್ಟಿಗೆಗೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಕೊಟ್ಟಿಗೆಯಲ್ಲಿದ್ದ 2 ಹಸು 1 ಕರು ಸಜೀವವಾಗಿ ದಹನವಾಘಿದೆ. ಜೀವನಾಧಾರವಾಗಿದ್ದ ಹಸುಗಳು ಸಂಪೂರ್ಣ ಸುಟ್ಟ ಕರಕಲಾಗಿದ್ದು, ರೈತ ಕುಟುಂಬ ದವರ ಆಕ್ರಂದನ ಮುಗಿಲು ಮುಟ್ಟಿದೆ. ರೈತ ಚಂದ್ರಯ್ಯನಿಗೆ ಪರಿಹಾರ ನೀಡುವಂತೆ ಗುಬ್ಬಿ ತಾಲೂಕು ಆಡಳಿತಕ್ಕೆ ಗ್ರಾಮಸ್ಥರು ಇದೇ ವೇಳೆ ಒತ್ತಾಯಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ಆರತಿ ಹಾಗೂ ಗುಬ್ಬಿ ಪೊಲೀಸ್ ಭೇಟಿ ನೀಡಿದ್ದು, ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ದಕ್ಕಲ ಆದಿಜಾಂಬವ ಪುರಾಣವನ್ನು ಹಾಡುವ ಕಿನ್ನರಿ ಕಲಾವಿದ ದೊಡ್ಡಬಳ್ಳಾಪುರದ ಮುನಿಸ್ವಾಮಿ ಅವರಿಗೆ ಕರ್ನಾಟಕ ಸರ್ಕಾರ ಡಾ.ಬಾಬು ಜಗಜೀವನರಾಂ ಅವರ 115 ನೇ ಜಯಂತಿಯ ದಿನ, ₹.500000 ನಗದು, ಸ್ಮರಣಿಕೆಗಳೊಂದಿಗೆ ಡಾ.ಬಾಬು ಜಗಜೀವನರಾಂ ಪ್ರಶಸ್ತಿಯನ್ನು ನೀಡಿ ಗೌರವಿಸಿರುತ್ತದೆ. ದಕ್ಕಲ ಆದಿಜಾಂಬವ ಪುರಾಣ ಕಾವ್ಯವನ್ನು ಹಾಡುವ ಅಪರೂಪದ ಏಕೈಕ ಕಲಾವಿದ ಮುನಿಸ್ವಾಮಿ. ಈ ಪರಂಪರೆಯನ್ನು ಉಳಿಸಿ ಬೆಳೆಸಬೇಕೆಂಬ ಹಂಬಲದಿಂದ ಮತ್ತು ಅಪರೂಪದ ಕಲಾವಿದ ಮುನಿಸ್ವಾಮಿಯವರ ಬದುಕನ್ನು ಕಟ್ಟಿಕೊಡಬೇಕೆಂಬ ಕಳಕಳಿಯಿಂದ ಪತ್ರಕರ್ತ ಮಿತ್ರ ಡಿ.ಎಂ.ಘನಶ್ಯಾಮ ಅವರು 13-11-2017 ರ ಪ್ರಜಾವಾಣಿ ಪತ್ರಿಕೆಯಲ್ಲಿ ಪರಿಚಯ ಲೇಖನ ಬರೆದು ಪ್ರಕಟಿಸಿದ್ದರು. ಇದಾದ ನಂತರದಲ್ಲಿ ಹಲವಾರು ಸಭೆ ಸಮಾರಂಭಗಳಲ್ಲಿ ವಿಚಾರ ಸಂಕಿರಣ ಹಾಗೂ ನಾಯಕತ್ವ ತರಬೇತಿ ಕಾರ್ಯಾಗಾರಗಳಲ್ಲಿ ನಾನು ದಕ್ಕಲ ಕಲಾವಿದ ಮುನಿಸ್ವಾಮಿಯನ್ನು ಕುರಿತು ಹಾಗೂ ಆದಿಜಾಂಬವ ಪುರಾಣವನ್ನು ಕುರಿತು ಚಿಂತನೆಗಳನ್ನು ಮಂಡಿಸಿರುತ್ತೇನೆ. ಆದಿಜಾಂಬವ ಪುರಾಣ ಅತ್ಯಂತ ಅಗತ್ಯವಾಗಿ ಸಂಗ್ರಹವಾಗಿ ಪ್ರಕಟವಾಗಬೇಕಾದ ಜನಪದ ಮಹಾಕಾವ್ಯ. ಜಂಬೂದ್ವೀಪದ ಆದಿಮ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬರುತ್ತಿರುವವರು ಮುನಿಸ್ವಾಮಿಯಂತಹ ಅಸಲಿ…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಪರಿಷ್ಕರಿಸಿದ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಬದಲಾವಣೆ ಮಾಡಲಾಗಿದೆ ಎಂದು ಇಲಾಖೆ ಹೇಳಿಕೊಂಡಿದೆ. ಬದಲಾದ ಪರೀಕ್ಷಾ ದಿನಾಂಕ ಇಂತಿವೆ ಏಪ್ರಿಲ್ 22 ರಿಂದ ಪರೀಕ್ಷೆ ಆರಂಭವಾಗಲಿದ್ದು . ಮೊದಲ ದಿನ(22) ಲಾಜಿಕ್ , ಬ್ಯುಸಿನೆಸ್ ಸ್ಟಡೀಸ್. 23 ರಂದು ಗಣಿತ ಶಾಸ್ತ್ರ , ಶಿಕ್ಷಣ ಶಾಸ್ತ್ರ. 25ರಂದು ಎಕನಾಮಿಕ್ಸ್ . 26 ರಂದು ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ಕೆಮೆಸ್ಟ್ರಿ, ಬೇಸಿಕ್ ಮಾಥ್ಸ್. 27 ರಂದು ತಮಿಳು, ತೆಲುಗು, ಮಲಯಾಳಂ, ಉರ್ದು, ಮರಾಠಿ, ಸಂಸ್ಕ್ರತ ಮತ್ತು ಫ್ರೆಂಚ್ ಭಾಷೆಗಳ ಪರೀಕ್ಷೆ. 28 ರಂದು ಕನ್ನಡ , ಅರೇಬಿಕ್ ಭಾಷೆ ಪರೀಕ್ಷೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತದಲ್ಲಿ ಜನಸಾಮಾನ್ಯರ ಬದುಕು, ಅಗತ್ಯ ವಸ್ತುಗಳ ಬೆಲೆ ಏರಿಕೆ ಗಳ ನಡುವೆ ಬೀದಿಗೆ ಬೀಳುವಂತಾಗಿದೆ ಎಂದು ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಮಠಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ಇಂಧನ ಬೆಲೆ, ಗ್ಯಾಸ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಜನಸಾಮಾನ್ಯರ ಬದುಕು ತೀರ ಕಷ್ಟದಲ್ಲಿದೆ ಆದರೂ ಸಹ ಇದನ್ನು ಅರಿಯದ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದೇ ಸಂದರ್ಭದಲ್ಲಿ ದ್ವಿಚಕ್ರವಾಹನ ಹಾಗೂ ಗ್ಯಾಸ್ ಸಿಲೆಂಡರ್ ಗಳನ್ನು ಕುದುರೆಗಾಡಿಯಲ್ಲಿ ಹೊತ್ತು ತಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಯುವ ಕಾಂಗ್ರೆಸ್ ಪದಾಧಿಕಾರಿಗಳು ಜಮಾಯಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ…
ತುಮಕೂರು: ಬಿಜೆಪಿಯನ್ನು ಕಟುವಾಗಿ ಖಂಡಿಸುವ ಧೈರ್ಯ ಕಾಂಗ್ರೆಸ್ ಗೆ ಇಲ್ಲ, ಆದರೆ ಆ ಧೈರ್ಯ ಕುಮಾರಸ್ವಾಮಿ ತೋರಿದ್ದಾರೆ. ಹಾಗಾಗಿ ಕುಮಾರಸ್ವಾಮಿಗೆ ನಾನು ಅಭಿನಂದಿಸುತ್ತೇನೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದಾರೆ. ತುಮಕೂರು ನಗರದ ಖಾಸಗಿ ಹೊಟೇಲ್ ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಮುಂದಿಟ್ಟುಕೊಂಡು ಬಿಜೆಪಿ ವಿನಾಕಾರಣ ವಿವಾದ ಸೃಷ್ಟಿಸುತ್ತಿದೆ. ಆಜಾನ್ ಕೂಗೋದು ನಿನ್ನೆ ಮೊನ್ನೆಯದಲ್ಲ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ನಾವೆಲ್ಲ ಭಾಷಣ ಮಾಡುವಾಗ ಆಜಾನ್ ಕೇಳಿದ್ರೆ ಮಧ್ಯ ಭಾಷಣ ನಿಲ್ಲಿಸಿ ಗೌರವಿಸುತ್ತೇವೆ. ಇಂಥಹುದರಲ್ಲಿ ಬಿಜೆಪಿ ವಿವಾದ ಸೃಷ್ಟಿಸಿದೆ. ಬಿಜೆಪಿ ಧೋರಣೆ ಖಂಡಿಸಲು ಕಾಂಗ್ರೆಸ್ ಗೆ ಧೈರ್ಯ ಇಲ್ಲ ಎಂದು ಅವರು ಸ್ವಪಕ್ಷವನ್ನು ಟೀಕಿಸಿದರು. ಎಚ್.ಡಿ.ಕುಮಾರ್ ಸ್ವಾಮಿ ಮಾತ್ರ ಮುಲಾಜಿಲ್ಲದೆ ಖಂಡಿಸ್ತಾರೆ. ಈ ವಿಚಾರಕ್ಕೆ ಕುಮಾರ್ ಸ್ವಾಮಿಯನ್ನು ಅಭಿನಂದಿಸುತ್ತೇನೆ. ಯಾರೋ ಪೊಲಿಗಳು ಭಿತ್ತಿಪತ್ರ ಹಂಚಿ ಬಿಡುತ್ತಾರೆ. ಅದಕ್ಕೆಲ್ಲಾ ಬೆಲೆ ಕೊಡೊಕಾಗುತ್ತಾ ಎಂದು ಕುಮಾರಸ್ವಾಮಿ ಹೇಳುವ ತಾಕತ್ತು ತೋರಿದ್ದಾರೆ. ಅವರಿಗೆ ಧನ್ಯವಾದಗಳು. ನಾವು…