Author: admin

ಬೆಂಗಳೂರು: ಕೆಪಿಟಿಸಿಎಲ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಕ್ಕೆ ಇನ್ನೂ ಮುಂದೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಕಡ್ಡಾಯ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಅಪ್ಟಿಟ್ಯಾಡ್ ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಕನ್ನಡ ಪರೀಕ್ಷೆ ಬರೆಯಬೇಕು ಹಾಗೂ ಅದರಲ್ಲಿ ಕನಿಷ್ಠ 50 ಅಂಕವನ್ನು ಪಡೆಯಬೇಕು ಎಂದು ಆದೇಶಿಸಲಾಗಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಸಿದ್ದಾರೆ. ಈ ಹಿಂದೆ ನಡೆದ ನೇಮಕದಲ್ಲಿನ ವಿದ್ಯಮಾನದ ಮಾಹಿತಿ ಪಡೆದಿದ್ದ ಸಚಿವರು, ಮತ್ತೆ ಆ ರೀತಿ ಲೋಪ, ಅನ್ಯಾಯದ ಅಪಸ್ವರ ಮರುಕಳಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೆಪಿಟಿಸಿಎಲ್ ನೇಮಕದಲ್ಲಿ ಮತ್ತೆ ಕನ್ನಡ ಭಾಷಾ ಪರೀಕ್ಷಾ ಕಡ್ಡಾಯಗೊಳಿಸುವ ಮೂಲಕ ಕನ್ನಡಪರ ಸಂಘಟನೆಗಳ ಧ್ವನಿಗೂ ಸರಕಾರ ಸ್ಪಂದಿಸಿದೆ. ದೀರ್ಘಾವದಿ ನಂತರ ತುಂಬುತ್ತಿರುವ ಹುದ್ದೆಗಳು ಕನ್ನಡಿಗರು, ಕನ್ನಡ ಬಲ್ಲ ಅರ್ಹರಿಗೆ ದಕ್ಕುವ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಈ…

Read More

ತಿಪಟೂರು: ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ “ಮಹಿಳೆ ಮತ್ತು ಮಕ್ಕಳ ಅಪೌಷ್ಠಿಕತೆಯಲ್ಲಿ ಪೌಷ್ಠಿಕ ಆಹಾರದ ಮಹತ್ವ”ದ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿಯ ಮುಖ್ಯಸ್ಥರಾದ ಡಾ.ಗೋವಿಂದೇಗೌಡ ಉದ್ಘಾಟಿಸಿದರು. ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿಗಳಾದ ಡಾ.ರೂಪ ಬಿ. ಪಾಟೀಲ್ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ಬಿ.ಎನ್. ಪ್ರೇಮ ಡಾ.ಅನಿತಾ, ಅಂಜುಮನ್ ಬಾನು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತರು ತರಬೇತಿಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಅಥ್ಲೆಟಿಕ್‍ ನಲ್ಲಿ ಪ್ರಸಿದ್ಧ ಕ್ರೀಡಾಪಟುವಾಗಿ ಏಷ್ಯನ್ ಗೇಮ್ಸ ಚಿನ್ನದ ಪದಕ ಗೆದ್ದು ಬಣ್ಣದ ಲೋಕದಲ್ಲಿ ಮಿಂಚಿದ್ದ ನಟ ಪ್ರವೀಣ್ ಕುಮಾರ್ ಸೋಬ್ತಿ(74) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡಿದೆ.ನಂತರ ವೈದ್ಯರನ್ನು ಮನೆಗೆ ಕರೆಸಿ ಚಿಕಿತ್ಸೆ ನೀಡಲಾಯಿತು ಆದರೆ ರಾತ್ರಿ 10.30 ರಲ್ಲಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಪ್ರವೀಣ್ ಡಿಸ್ಕಸ್ ಥ್ರೋ ಸೇರಿದಂತೆ ಅಥ್ಲೆಟಿಕ್ ಕ್ರೀಡೆಯಲ್ಲಿ ಅಂತರಾಷ್ಟೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಸಿದರು. 1966 ಮತ್ತು 1970 ರಲ್ಲಿ ಎರಡು ಚಿನ್ನದ ಪದಕಗಳನ್ನು ಒಳಗೊಂಡಂತೆ ಏಷ್ಯನ್ ಗೇಮ್ಸನಲ್ಲಿ ನಾಲ್ಕು ಪದಕಗಳನ್ನು ಗೆದ್ದರು. ಅವರು 1966 ರ ಕಾಮನ್ವೆಲ್ತ್  ಕ್ರೀಡಾಕೂಟದಲ್ಲಿ ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕವನ್ನು ಗೆದ್ದರು. 1988 ರಲ್ಲಿ ಟಿವಿ ಪರದೆಯಲ್ಲಿ ಮೂಡಿ ಬಂದ ಮಹಾಭಾರತ ನಲ್ಲಿ ಭೀಮನ ಪಾತ್ರದಲ್ಲಿ ಮಿಂಚಿ ನಂತರ ಸಿನಿಮಾ ನಟನೆಯಲ್ಲಿ ಮತ್ತಷ್ಟು ಜನಪ್ರಿಯತೆಯನ್ನು ಗಳಿಸಿದರು.ಬಾಲಿವುಡ್‍ ನಲ್ಲಿ ತಮ್ಮ ದೇಹದಡ್ಯ ಮೂಲಕ ಸಾಹಸ ದೃಶ್ಯಗಳು ರಂಚಿಸಿತ್ತು ಕನ್ನಡದಲ್ಲೂ…

Read More

ಮೈಸೂರು: ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಕರೆ ಕೊಟ್ಟಿದ “ಮೈಸೂರ್ ಬಂದ್” ಬೆಂಬಲಿಸಿ, ಕರ್ನಾಟಕ ರಾಜ್ಯ ಸಂಶೋಧಕರ ಸಂಘ ಪ್ರತಿಭಟನೆ ನಡೆಸಿತು. ಘೋಷಣೆಗಳನ್ನು ಕೂಗುತ್ತಾ ಮೈಸೂರಿನ ಸಿ.ಟಿ.ಬಸ್ ನಿಲ್ದಾಣ, ಸೈಬರ್ ಬಸ್ ನಿಲ್ದಾಣ, ಅಶೋಕ ರಸ್ತೆ, ಸಯ್ಯಾಜಿರಾವ್ ರಸ್ತೆ, ಅರಸು ರಸ್ತೆ ಮೂಲಕ ಇಡೀ ಮೈಸೂರಿನ  ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ ನಡೆಸಲಾಯಿತು. ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಮರಿದೇವಯ್ಯ ಮಾತನಾಡಿ, ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸಿದ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುವುದಾಗಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಎರಡನೇ ಭೀಮಾಕೋರೆಂಗಾವ್ ಯುದ್ಧಕ್ಕೆ ಸಜ್ಜಾಗಬೇಕಿದೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪ್ರತಿಭಟನೆಯಲ್ಲಿ ಸಂಶೋಧಕರಾದ ನಂಜುಂಡಸ್ವಾಮಿ, ಪ್ರವೀಣ್ ಕುಮಾರ್, ಅಮ್ಮ ರಾಮಚಂದ್ರ, ರಾಜೇಂದ್ರ, ಮಾರುತಿ, ಬಳ್ಳಾರಿ ಹನುಮಂತಪ್ಪ ಮತ್ತು ವಿದ್ಯಾರ್ಥಿಗಳ ಕರುಣ, ಮನು ಕುಮಾರ್,  ಅಭಿಷೇಕ್, ರಾಹುಲ್, ಅಮಿತ್, ವಿಜಯ್, ಶಿವರಾಜ್, ಸಂತೋಷ್,  ಅರುಣ್ ಮಣಿ…

Read More

ಪಾವಗಡ:  ತಾಲೂಕು ನಿಡಿಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತೂರು ಶಾಲೆ ಭಾಗ ಗೋಪಾಲ್ ರೆಡ್ಡಿ ಮನೆಯವರಿಗೂ ಹಾದುಹೋಗಿರುವ ವಿದ್ಯುತ್ ತಂತಿ ಇಂದು ಕೆಳಗಡೆ ಬಿದ್ದಿದೆ ಘಟನೆ ಸಂಭಂಧ ಆಕ್ರೋಶ ವ್ಯಕ್ತಪಡಿಸಿ ಗ್ರಾಮಸ್ಥರು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಈ ವಿದ್ಯುತ್ ಸ್ಥಾವರವನ್ನು ಆದಷ್ಟು ಬೇಗ ಬದಲಾಯಿಸಬೇಕೆಂದು  ಒತ್ತಾಯಿಸಿದರು. ಈ ವೇಳೆ ಕೊತ್ತೂರು ಗ್ರಾಮಸ್ಥರಾದ ಗೋಪಾಲಪ್ಪ, ಹನುಮಕ್ಕ, ಈಶ್ವರಪ್ಪ, ರಾಮಕೃಷ್ಣಪ್ಪ ಇದ್ದರು. ವರದಿ: ನಂದೀಶ್ ಕೊತ್ತೂರು, ನಿಡಗಲ್ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಕೊರಟಗೆರೆ:  ಮಳೆಯನ್ನೇ ನಂಬಿ ಬದುಕು ಸಾಗಿಸುತ್ತಿರುವ ರೈತನಿಗೆ ಆಗಾಗ ಮಳೆ ಕೈಕೊಟ್ಟು ರೈತನನ್ನು ಸಂಕಷ್ಟಕ್ಕೆ ದೂಡುತ್ತಿದ್ದು, ಸರ್ಕಾರಗಳು ರೈತರಿಗೆ ಆಸರೆಯಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿ ಆರ್ಥಿಕವಾಗಿ ಮುಂದೆ ಬರಲು ಸಹಕಾರಿಯಾಗಬೇಕೆಂದು ವಡ್ಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತರಾಜು ಸಲಹೆ ನೀಡಿದರು. ಕೊರಟಗೆರೆ ತಾಲ್ಲೂಕು ಗರುಗದೊಡ್ಡಿ ಗ್ರಾಮದಲ್ಲಿ ನೆಹರು ಯುವಕೇಂದ್ರ ತುಮಕೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಮತ್ತು ವಲಯ ಸಂಶೋಧನಾ ಕೇಂದ್ರ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆತ್ಮನಿರ್ಭರ್ ಭಾರತ ಯೋಜನೆಯ ಕುರಿತು ಯುವಜನರಿಗೆ ಕಾರ್ಯಾಗಾರ ಹಾಗೂ ರೈತ ಫಲಾನುಭವಿಗಳಿಗೆ ಟಾರ್ಪಲ್ ವಿತರಣೆ , ಯುವಕ ಮತ್ತು ಯುವತಿ ಮಂಡಳಿಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರು ಸದಾಕಾಲ ಶ್ರಮಜೀವಿಗಳು ಆದರೆ ಮಳೆರಾಯ ರೈತರೊಂದಿಗೆ ಜೂಜಾಟವಾಡುತ್ತಿದ್ದಾನೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಹತಾಶನಾಗುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ಕೃಷಿ ಇಲಾಖೆ ರೈತರ ಸಂಕಷ್ಟವನ್ನು ದೂರ ಮಾಡಲು ಅಗತ್ಯ ಸಲಹೆ…

Read More

ರಾಜ್ಯದ ಪೊಲೀಸ್ ತರಬೇತಿ ಶಾಲೆಗಳಲ್ಲಿ ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ ನೀಡಲು ಗೃಹ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ವಿವಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಲೋಗೋ ಬಿಡುಗಡೆ ಮಾಡಿ ಅವರು ಮಾತನಾಡಿದರು. ರಾಜ್ಯದಲ್ಲಿ 12 ಪೊಲೀಸ್ ತರಬೇತಿ ಶಾಲೆಗಳಿದ್ದು, ವಿಶೇಷ ತರಬೇತಿ ನೀಡುವ ಮೂಲಕ ಮಹಿಳೆಯರ ಆತ್ಮರಕ್ಷಣೆಗೆ ಸನ್ನದ್ಧರನ್ನಾಗಿ ಮಾಡಲಾಗುವುದು. ಮಹಿಳೆಯರ ಬಗ್ಗೆ ಪೂಜ್ಯ ಭಾವನೆ ಹಾಗೂ ಗೌರವವಿದ್ದರೂ ದುಷ್ಟಶಕ್ತಿಗಳು ಅಮಾನುಷವಾಗಿ ನೋಡುವ ರೀತಿಯಿಂದ ಅಮಾಯಕ ಹೆಣ್ಣು ಮಕ್ಕಳು ನೋವು ಅನುಭವಿಸುತ್ತಿರುವುದನ್ನು ಇಡೀ ದೇಶವಲ್ಲ, ವಿಶ್ವದಲ್ಲೇ ನೋಡಿದ್ದೇವೆ. ಹಲವು ಕಾನೂನು ಹಾಗೂ ಕಾರ್ಯಕ್ರಮಗಳ ಮೂಲಕ ಇಂತಹ ದುಷ್ಟಶಕ್ತಿಗಳನ್ನು ತಡೆಯುವ ಪ್ರಯತ್ನ ಮತ್ತು ಆತ್ಮ ರಕ್ಷಣೆಗೆ ಆತ್ಮವಿಶ್ವಾಸ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾನೂನು, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಸರ್ಕಾರ…

Read More

ಅಂತರ ರಾಷ್ಟ್ರೀಯ ಸಮುದಾಯದ ಎಚ್ಚರಿಕೆಯ ನಡುವೆಯೂ ತಾಲಿಬಾನ್‍ಗಳ ಹಿಡಿತದಲ್ಲಿರುವ ಆಫ್ಘಾನಿಸ್ತಾನದಲ್ಲಿ ಭಯೋತ್ಪಾದನೆಗೆ ಉತ್ತೇಜನ ನೀಡುವ ಹಲವು ಬೆಳವಣಿಗೆಗಳಾಗುತ್ತಿದ್ದು, ದಿನೇ ದಿನೇ ಜಾಗತಿಕ ಮಟ್ಟದ ಬೆದರಿಕೆ ಹೆಚ್ಚಾಗುತ್ತಿದೆ.ಸುಮಾರು ಎರಡು ದಶಕಗಳ ಕಾಲ ಆಫ್ಘಾನಿಸ್ತಾನದಲ್ಲಿ ನಾಗರಿಕ ಯುದ್ಧದಲ್ಲಿ ಭಾಗಿಯಾಗಿದ್ದ ಅಮೆರಿಕಾ ಸೇನೆ ಸಂಘರ್ಷ ಸ್ಥಗಿತಗೊಳಿಸುವುದಾಗಿ ಘೋಷಿಸಿದ ಬೆನ್ನಲ್ಲೆ ತಾಲಿಬಾನ್‍ಗಳು ಕಳೆದ ವರ್ಷದ ಆಗಸ್ಟ್ 15ರಂದು ಕಾಬೂಲ್‍ ಗೆ ನುಗ್ಗಿ ರಾಜಧಾನಿಯನ್ನು ವಶ ಪಡಿಸಿಕೊಂಡಿದ್ದರು. ಆಗಿನ ಅಧ್ಯಕ್ಷರು ದೇಶ ಬಿಟ್ಟು ಪರಾರಿಯಾಗಿದ್ದರು. ಸ್ಥಳೀಯ ನಾಗರಿಕರು, ವಿದೇಶಿ ಪ್ರಜೆಗಳು ಸುಮಾರು ಒಂದು ತಿಂಗಳ ಕಾಲ ಆಫ್ಘಾನಿಸ್ತಾನದಿಂದ ಹೊರ ಹೋಗುವ ಪ್ರಹಸನ ನಡೆಯಿತು. ಅಮೆರಿಕಾ, ಭಾರತ ಸೇರಿ ಹಲವು ರಾಷ್ಟ್ರಗಳು ವಿಶೇಷ ವಿಮಾನಗಳ ಮೂಲಕ ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ಕರೆಸಿಕೊಂಡಿದ್ದವು.ಬಳಿಕ ತಾಲಿಬಾನ್‍ಗಳು ಆಡಳಿತದ ಚುಕ್ಕಾಣಿ ಹಿಡಿದಿದ್ದರು. ಪ್ರಜಾ ಸತಾತ್ಮಕವಾಗಿ ಚುನಾಯಿತವಾಗಿದ್ದ ಸರ್ಕಾರವನ್ನು ಒಳಗೊಂಡಂತೆ ಸಂಯುಕ್ತ ಸರ್ಕಾರ ರಚಿಸಬೇಕು ಎಂದು ವಿಶ್ವಸಂಸ್ಥೆ ಸೇರಿದಂತೆ ವಿವಿಧ ರಾಷ್ಟ್ರಗಳು ಒತ್ತಡ ಹೇರಿದ್ದರು. ಆದರೆ ತಾಲಿಬಾನಿಗಳು ಅದಕ್ಕೆ ಸೊಪ್ಪು ಹಾಕಿಲ್ಲ. ಜಾಗತಿಕ ರಾಷ್ಟ್ರಗಳು ಹಲವು…

Read More

ನವದೆಹಲಿ: ಕೊರೊನಾ ವಿರುದ್ಧ ಹೋರಾಡಲು ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್‌ನಿಂದ ‘ಸ್ಪುಟ್ನಿಕ್ ಲೈಟ್’ ಲಸಿಕೆ ಬಳಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ. ಸ್ಪುಟ್ನಿಕ್ ಲೈಟ್‌ ನ ಅನುಮತಿಯೊಂದಿಗೆ, ಈಗ ದೇಶದಲ್ಲಿ ಒಟ್ಟು 9 ಕೊರೊನಾ ಲಸಿಕೆಗಳನ್ನು ಬಳಸಲಾಗುತ್ತಿದೆ. ಸ್ಪುಟ್ನಿಕ್ ಲೈಟ್, ಸ್ಪುಟ್ನಿಕ್-ವಿ ಕಾಂಪೊನೆಂಟ್-1 ಅನ್ನು ಹೋಲುತ್ತದೆ. ಅಲ್ಲದೇ ಈ ಲಸಿಕೆಯು ಸೋಂಕಿನ ವಿರುದ್ಧ ರಾಷ್ಟ್ರದ ಸಾಮೂಹಿಕ ಹೋರಾಟವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ಡಾ. ರೆಡ್ಡೀಸ್ ಲ್ಯಾಬೋರೇಟರೀಸ್ ಅವರು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ ಅನುಮತಿ ಕೋರಿದ್ದರು. ಹೈದರಾಬಾದ್ ಮೂಲದ ಫಾರ್ಮಾ ಕಂಪನಿಯು ಸೆಪ್ಟೆಂಬರ್ 2020 ರಲ್ಲಿ ಸ್ಪುಟ್ನಿಕ್ V ಮತ್ತು ಭಾರತದಲ್ಲಿ ಅದರ ವಿತರಣೆಯ ಕ್ಲಿನಿಕಲ್ ಪ್ರಯೋಗ ನಡೆಸಲು ರಷ್ಯಾದ ನೇರ ಹೂಡಿಕೆ ನಿಧಿಯೊಂದಿಗೆ (RDIF) ಒಪ್ಪಂದ ಮಾಡಿಕೊಂಡಿತ್ತು. ಡಾ ರೆಡ್ಡೀಸ್ ಲ್ಯಾಬೊರೇಟರೀಸ್ ಪ್ರಕಾರ, ಅರ್ಜೆಂಟೀನಾ ಮತ್ತು ರಷ್ಯಾ ಸೇರಿದಂತೆ 29 ದೇಶಗಳಲ್ಲಿ ಸ್ಪುಟ್ನಿಕ್ ಲೈಟ್ ಅನ್ನು ಪ್ರಯೋಗಕ್ಕೆ…

Read More

ತ್ರಿಪುರಾ: ವ್ಯಕ್ತಿಯೊರ್ವ ಆಲ್ಕೋಹಾಲ್ ಎಂದು ತಪ್ಪಾಗಿ ಆಸಿಡ್ ಕುಡಿದು ಸಾವನ್ನಪ್ಪಿರುವ ಘಟನೆ ತ್ರಿಪುರಾದ ಖೋವೈ ಜಿಲ್ಲೆಯ ಲಂಕಾಪುರ ಎಡಿಸಿ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಕಾರ್ತಿಕ್ ಮೋಹನ್ ದೆಬ್ಬರ್ಮ ಮೃತಪಟ್ಟಿರುವ ವ್ಯಕ್ತಿ. ಕಾರ್ತಿಕ್ ಮೋಹನ್ ದೆಬ್ಬರ್ಮ ದಿನನಿತ್ಯ ಕುಡಿಯುವ ಅಭ್ಯಾಸ ಬೆಳೆಸಿಕೊಂಡಿದ್ದ. ಕುಡಿದ ಅಮಲಿನಲ್ಲಿ ಆಸಿಡ್ ತುಂಬಿದ ಬಾಟಲಿಯನ್ನು ಶುಕ್ರವಾರ ರಾತ್ರಿ ಕುಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ದೆಬ್ಬರ್ಮ ಸ್ಥಳೀಯ ಹಳ್ಳಿಗಾಡಿನ ಮದ್ಯದ ಅಂಗಡಿಯಲ್ಲಿ ಅತಿಯಾಗಿ ಕುಡಿದಿದ್ದು, ಮನೆಗೆ ಹೋಗಿ ಮಲಗಿಕೊಂಡಿದ್ದಾನೆ. ನಂತರ ಮಧ್ಯರಾತ್ರಿ ಎದ್ದು, ಮದ್ಯ ಕುಡಿಯಲು ಹುಡುಕಾಡಿದ್ದಾನೆ. ಆದರೆ ಆತನ ಕೈಗೆ ಮನೆಯಲ್ಲಿದ್ದ ಆಸಿಡ್ ಬಾಟಲಿ ಸಿಕ್ಕಿದೆ. ಅದನ್ನೇ ಮದ್ಯ ಎಂದು ತಿಳಿದ ದೆಬ್ಬರ್ಮ ಆಸಿಡ್ ಕುಡಿದಿದ್ದಾನೆ ಎಂದು ತಿಳಿದುಬಂದಿದೆ. ಆಸಿಡ್ ಕುಡಿದ ತಕ್ಷಣ ದೆಬ್ಬರ್ಮ ಪ್ರಜ್ಞಾಹೀನನಾಗಿದ್ದಾನೆ. ದೆಬ್ಬರ್ಮ ಕುಟುಂಬ ಸದಸ್ಯರು ಆತ ಪ್ರಜ್ಞಾಹೀನನಾಗಿರುವುದನ್ನು ನೋಡಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ಆತ ಮೃತಪಟ್ಟಿದ್ದಾನೆ ಎಂದು ತಿಳಿಸಿದರು ಎಂದು ಮೂಲಗಳು…

Read More