Author: admin

ಪಾವಗಡ: ಅಸಂಘಟಿತ ಕಾರ್ಮಿಕರ ಶ್ರೇಯಸ್ಸಿಗೆ ಹೆಲ್ಪ್ ಸೊಸೈಟಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಸರ್ಕಾರಿ ಆಸ್ಪತ್ರೆ ಮೂಳೆ ರೋಗ ತಜ್ಞರಾದ ಡಾ.ರಮೇಶ್ ತಿಳಿಸಿದರು. ಸಿದ್ದಗಂಗಾ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 115 ನೇ ಜನುಮ ದಿನದ ಅಂಗವಾಗಿ ಹಾಗೂ ಯುಗಾದಿ ಹಬ್ಬದ ಉಡುಗೊರೆಯಾಗಿ ಪಟ್ಟಣದ ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕ ವರ್ಗಾವಾದ ಬಡಗಿ ಕಾರ್ಮಿಕರು, ಚಲನ ಚಿತ್ರ ಮಂದಿರ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಕ್ತಿ ಕ್ಲಿನಿಕ್ ವೈದ್ಯರಾದ ಶಕ್ತಿ ಮೇಡಂ ರವರು ಮಾತನಾಡುತ್ತಾ ಕಾಯಕ ಯೋಗಿ,ತ್ರಿವಿದ ದಾಸೋಹಿ,ಆದುನಿಕ ಬಸವಣ್ಣ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನುಮ ದಿನಕ್ಕೆ ಹೆಲ್ಪ್ ಸೊಸೈಟಿ ಸಂಸ್ಥೆ ಅಸಂಘಟಿ ತ ಕಾರ್ಮಿಕರನ್ನು ಗುರುತಿಸಿ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸುತ್ತಿರುವುದು ಅಭಿನಂದನಿಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಶ್ರೀಮತಿ ಸಂದ್ಯಾ ಮಾನಂ ಶಶಿಕಿರಣ್,ಕಾರ್ಮಿಕ ಸಂಘಟನೆಯ ನಜೀರ್,…

Read More

ತಿಪಟೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕಲ್ಪತರು ನಾಡು ತಿಪಟೂರಿನಲ್ಲಿ ಹಬ್ಬದ ಖರೀದಿ ಜೋರಾಗಿದೆ. ನಗರದ ಮಾರುಕಟ್ಟೆಗಳಲ್ಲಿ ಹಬ್ಬದ ಸಾಮಗ್ರಿಗಳನ್ನು ಕೊಳ್ಳಲು ಜನ ಮುಗಿಬಿದ್ದಿದ್ದಾರೆ. ನಗರದ ಕೃಷಿ ಉನ್ನತ ಮಾರುಕಟ್ಟೆ , ಸೂಪರ್ ಮಾರ್ಕೆಟ್ ಸೇರಿದಂತೆ ಹಲವು ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ಬರದಿಂದ ಸಾಗಿದೆ. ಕೊವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಯುಗಾದಿ ಹಬ್ಬ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಲಾಗಿತ್ತು. ಈ ವರ್ಷ ಕೊರೊನಾ ಆರ್ಭಟ ತಣ್ಣಗಾದ ಹಿನ್ನೆಲೆ ಜಿಲ್ಲೆಯಾದ್ಯಂತ ಹಬ್ಬದ ಸಡಗರ ಸಂಭ್ರಮ ಕಳೆಗಟ್ಟಿದೆ. ಇನ್ನು ಬೆಲೆ ಏರಿಕೆ ಬಿಸಿ ಜನಸಾಮಾನ್ಯರಿಗೆ ತಟ್ಟಿದ್ದು, ಇದರ ನಡುವೆಯೂ ಹಬ್ಬ ಆಚರಿಸುವ ಜೋಶ್ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಹೂವು ಹಣ್ಣು ತರಕಾರಿ ಬೆಲೆಯಲ್ಲಿ ಏರಿಕೆಯಾಗಿದೆ. ಆದರೂ ತಿಪಟೂರು ಜನರು ಯುಗಾದಿ ಹಬ್ಬ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.. ವರದಿ: ಮಂಜು ಗುರುಗದಹಳ್ಳಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ಲಿಂಗೈಕ್ಯ ಡಾ.ಶಿವಕುಮಾರ ಮಹಾಸ್ವಾಮಿಜಿಗಳು ಈ ದೇಶ ಕಂಡ ಮಹಾನ್ ಮಾನವತಾವಾದಿ ಎಂದು ಮಾಜಿ ಕೆಪಿಸಿಸಿ ಕಾರ್ಯದರ್ಶಿ ಅಹಮದ್ ನುಡಿದರು. ನಗರದ ಬಿ.ಜಿ.ಪಾಳ್ಯ ವೃತ್ತದಲ್ಲಿ ಇಕ್ಬಾಲ್ ಅಹಮದ್ ಅಭಿಮಾನಿಗಳ ಬಳಗದ ವತಿಯಿಂದ ಪರಮಪೂಜ್ಯ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 115ನೇ ಜಯಂತ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಕಾಯಕಯೋಗಿ ಹಾಗೂ ತ್ರಿವಿಧ ದಾಸೋಹದಲ್ಲಿ ಇಡೀ ಪ್ರಪಂಚಕ್ಕೆ ಸಿದ್ದಗಂಗಾ ಶ್ರೀಗಳು ಮಾದರಿಯಾಗಿದ್ದಾರೆ ಪರಮ ಪೂಜ್ಯರ ಜೀವನವೇ ಈ ನಾಡಿನ ಜನರಿಗೆ ಸಂದೇಶವಾಗಿದ್ದು ಹಾಗೂ ಮಾದರಿಯಾಗಿದ್ದು, ಹಸಿದ ಒಡಲಿಗೆ ಅನ್ನ ನೀಡುವುದರೊಂದಿಗೆ ಜ್ಞಾನದಾಸೋಹ ವನ್ನು ಸಹ ಮಾಡಿದವರು ಪರಮಪೂಜ್ಯರು. ಪರಮಪೂಜ್ಯರ ಜನ್ಮದಿನದಂದು ಅನ್ನಸಂತರ್ಪಣೆಯನ್ನು ಮಾಡುವುದು ಅತ್ಯಂತ ಶ್ರೇಷ್ಠವಾದ ಕಾರ್ಯವಾಗಿದ್ದು, ಅನ್ನ ದಾಸೋಹ ಕಾರ್ಯಕ್ರಮವನ್ನು ಅವರ ಸ್ಮರಣಾರ್ಥ ಮಾಡುವುದು ಅತ್ಯಂತ ಸಂತೋಷಕರ ವಿಚಾರವಾಗಿದೆ. ಶ್ರೀಗಳು ಜಾತ್ಯತೀತರಾಗಿ ಸರ್ವ ಧರ್ಮಗಳ ಜನರಿಗೂ ಶಾಂತಿ, ಸಹಬಾಳ್ವೆಯನ್ನು ತಮ್ಮ ಜೀವಾತಾವಧಿಯುದ್ದಕ್ಕೂ ಬೋಧಿಸುತ್ತಾ ಬಂದವರು. ಶ್ರೀ ಮಠದಲ್ಲಿ ಅದೆಷ್ಟೋ ಮಂದಿ ಹಿಂದುಯೇತರ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಇಂದು ಉನ್ನತ…

Read More

ಹಿರಿಯೂರು: ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿವೆ, ಕೊರೊನಾ ಸಂಕಷ್ಟದಿಂದ ಇದೀಗ ತಾನೇ ಸುಧಾರಿಸಿಕೊಳ್ಳುತ್ತಿರುವ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿಹೋಗಿದ್ದಾರೆ ಎಂದು ಡಾ.ಸುಜಾತಾ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಚಿವ  ಡಿ.ಸುಧಾಕರ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಕೇಂದ್ರ – ರಾಜ್ಯ ಸರ್ಕಾರದ ಬೆಲೆ ಏರಿಕೆಯನ್ನು ಖಂಡಿಸಿ ನಡೆಸಿದ  ವಿನೂತನ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ  ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ನಂತಹ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗುತ್ತಲೇ ಇದ್ದು, ಇದರಿಂದ ಸಾಮಾನ್ಯ ಜನರು ಪರದಾಡುವಂತಾಗಿದೆ. ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಬೇಕಾದ ಸರ್ಕಾರವೇ ಜನರಿಗೆ ಸಂಕಷ್ಟವನ್ನು ನೀಡುತ್ತಿರುವುದು ನಿಜಕ್ಕೂ ಖಂಡನೀಯ ಎಂದರು. ಕಾಂಗ್ರೆಸ್ ಕಚೇರಿಯ ವೇಳೆ ಗ್ಯಾಸ್ ಸಿಲಿಂಡರ್ ಮತ್ತು ಬೈಕಿಗೆ ಹಾರ ಹಾಕುವ ಜೊತೆಗೆ ತಟ್ಟೆಯನ್ನು ಸೌಟಿನಿಂದ ಬಾರಿಸಿ, ಧಿಕ್ಕಾರ ಕೂಗುವ ಮೂಲಕ ಬೆಲೆ ಏರಿಕೆ ವಿರುದ್ಧ ವಿನೂತನ…

Read More

ತುಮಕೂರು: ಶಿವಕುಮಾರ ಸ್ವಾಮೀಜಿಗಳ ಜಯಂತಿಯನ್ನು ದಾಸೋಹ ದಿನ ಎಂದು  ಈಗಾಗಲೇ ಸರ್ಕಾರ ಆಚರಿಸುತ್ತಿದೆ. ಮಧ್ಯಾಹ್ನದ ಬಿಸಿ ಊಟದ ಯೋಜನೆಗೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರನ್ನಿಡಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಿದ್ದ  ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳ  115ನೇ ಜಯಂತೋತ್ಸವ  ಹಾಗೂ “ ಗುರುವಂದನಾ ಮಹೋತ್ಸವದಲ್ಲಿ  ಕೇಂದ್ರದ ಗೃಹ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರೊಂದಿಗೆ  ಪಾಲ್ಗೊಂಡು  ಮಾತನಾಡಿದರು. ಆಡಳಿತಗಾರರು ಶ್ರೀ ಮಠವನ್ನು ಶ್ರದ್ಧಾ ಭಕ್ತಿಯಿಂದ ಕಂಡಿದ್ದಾರೆ. ನಮ್ಮ ಸರ್ಕಾರವೂ ಅತ್ಯಂತ ಶ್ರದ್ಧೆಯಿಂದ ಕಾಣುತ್ತಿದೆ. ಭಕ್ತಿಯಿಂದ ಬಸವಣ್ಣನವರ ದಾಸೋಹ, ಶಿಕ್ಷಣ, ಆರೋಗ್ಯ ತತ್ವಗಳಿಗೆ ನಮ್ಮ ಸರ್ಕಾರ ಮಹತ್ವ ನೀಡಿದೆ. ಸರ್ವೋದಯ ಕಾರ್ಯಕ್ರಮಕ್ಕೆ 60 ಸಾವಿರ ಕೋಟಿ ರೂ.ಗಳಿಗಿಂತ  ಹೆಚ್ಚು ಅನುದಾನವನ್ನು ಈ ವರ್ಷದ ಬಜೆಟ್ ನಲ್ಲಿ ಮೀಸಲಿರಿಸಿದೆ.  ಜನಕಲ್ಯಾಣಕ್ಕಾಗಿ ಹಾಗೂ ಜನರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ನಿಮ್ಮ ವಿಶ್ವಾಸ ಗಳಿಸುವ ರೀತಿಯಲ್ಲಿ  ಕೆಲಸ ಮಾಡುತ್ತದೆ…

Read More

ಚಿತ್ರದುರ್ಗ:  ಏಪ್ರಿಲ್ 5ರಂದು ಮಾಜಿ ಉಪ-ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 115ನೇ ಜಯಂತಿಯ ಕಾರ್ಯಕ್ರಮವನ್ನು ಕೆಪಿಸಿಸಿ ವತಿಯಿಂದ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದರು.  ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸಚಿವ ಡಿ ಸುಧಾಕರ್ ರವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆಂಜನೇಯ,  ಕೆಪಿಸಿಸಿ ವತಿಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸುಮಾರು 25ರಿಂದ 30 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.  ಈ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದ ಅಂಬೇಡ್ಕರ್ ಜಯಂತಿ ಹಾಗೂ ಡಾ.ಬಾಬು ಜಗಜೀವನ್ ರಾಮ್ ರವರ ಜಯಂತಿ ಆಚರಣೆಗಳನ್ನು ಜಿಲ್ಲೆಗಳಿಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ.  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದೇವೆ . ಪ್ರತಿ ವರ್ಷ ಸಹ ಒಂದೊಂದು ಜಿಲ್ಲೆಗಳಲ್ಲಿ ಈ ರೀತಿಯಲ್ಲಿಯೇ ಆಚರಣೆಗಳು ನಡೆಯುತ್ತವೆ ಎಂದರು.  ಡಾ.ಬಾಬು ಜಗಜೀವನ್ ರಾಮ್ ರವರ ಜಯಂತಿಗೆ ಕೇವಲ ಐದು ದಿನಗಳು ಮಾತ್ರವೇ  ಬಾಕಿ ಉಳಿದಿದ್ದು, ಹಗಲು…

Read More

ತುಮಕೂರು: ಇತ್ತೀಚೆಗಷ್ಟೆ ಭ್ರಷ್ಟ ಅಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಬೆನ್ನಲ್ಲೇ ಇದೀಗ ಮತ್ತೊರ್ವ ಭ್ರಷ್ಟ ಅಧಿಕಾರಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿಯೇ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ತುಮಕೂರು ಬೆಳ್ಳಾವಿ ಹೋಬಳಿ ಚಿನ್ನೇನಹಳ್ಳಿ  ಗ್ರಾಮ ಲೆಕ್ಕಾಧಿಕಾರಿ (VA) ನಟರಾಜ್ ಎಸಿಬಿ ಬಲೆಗೆ ಬಿದ್ದಿದ್ದು,   ತುಮಕೂರು ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.   ಪಹಣಿ ತಿದ್ದುಪಡಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಾಧಿಕಾರಿ ನಟರಾಜ್ 20 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ.  ಮುಂಗಡವಾಗಿ 5,000 ಪಡೆದು, ಉಳಿದ  15 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಕಾರ್ಯಾಚರಣೆ ವೇಳೆ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿ ಇನ್ಸ್ಪೆಕ್ಟರ್ ವಿಜಯಲಕ್ಷ್ಮಿ ನರಸಿಂಹರಾಜು ಚಂದ್ರು ಶಿವಣ್ಣ ಇನ್ನಿತರರಿದ್ದರು ವರದಿ: ಜೆಟ್ಟಿ ಅಗ್ರಹಾರ, ನಾಗರಾಜು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ಶಾಲಾ ಮಕ್ಕಳ‌ ಬಿಸಿಯೂಟದ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಇಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸಿರುವ ’ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ಮಾಡಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಲಕ್ಷಾಂತರ ಮಕ್ಕಳಿಗೆ ನೀಡುತ್ತಿರುವ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರಿಡಬೇಕು ಎಂದು ಸಿಎಂಗೆ ಮನವಿ ಮಾಡಿದರು.  ಈ ಮನವಿ ಪರಿಗಣಿಸಿದ ಸಿಎಂ, ಮಕ್ಕಳ ಬಿಸಿಯೂಟದ ಯೋಜನೆಗೆ ಸಿದ್ಧಗಂಗಾ ಶ್ರೀಗಳ ಹೆಸರು ಇಡುವುದಾಗಿ ವೇದಿಕೆಯಲ್ಲೇ ಘೋಷಿಸಿದರು. ಸಾವಿನ ನಂತರವೂ ಬದುಕಿರುವುದು ನೈಜ ಸಾಧಕನಿಂದ ಮಾತ್ರ ಸಾಧ್ಯ. ಡಾ.ಶಿವಕುಮಾರ ಸ್ವಾಮೀಜಿ ಕೇವಲ ಪರಮಪೂಜ್ಯರಾಗಿಲ್ಲ, ಬದುಕಿಗೆ ದಾರಿ ತೋರಿದ ಹಾಗೂ ಬದುಕು ಕಟ್ಟಿ ಕೊಟ್ಟ ಮಹಾನ್ ಸಾಧಕರು. ಸ್ವಾಮೀಜಿ ಅವರಲ್ಲಿ ದೈವಶಕ್ತಿ ಇತ್ತು. ಅವರ ಶ್ರದ್ಧೆ, ನಿಷ್ಠೆ ಹಾಗೂ ಪರಿಶ್ರಮ ಅವರ ಧ್ಯೇಯವಾಗಿತ್ತು. ಅದನ್ನು ಪರಿಪಾಲನೆ ಮಾಡುವುದು ನಮ್ಮ ಕರ್ತವ್ಯ. ಎಲ್ಲಾ ಸಮುದಾಯ, ವರ್ಗದ ಜನರನ್ನು ಪ್ರೀತಿಸಿ,…

Read More

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯ ಜನ್ಮದಿನೋತ್ಸವ ಹಿನ್ನೆಲೆ ನಿನ್ನೆ ಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಮಗೆ ಮತ್ತು ಸಿದ್ದಗಂಗಾ ಮಠಕ್ಕೆ ಹಳೆಯ ಸಂಬಂಧ ಇದೆ ಎಂದು ಹೇಳಿದರು. ನನ್ನ ಅಜ್ಜಿ, ತಂದೆ, ತಾಯಿ ಇಲ್ಲಿಗೆ ಭೇಟಿ ನೀಡಿದ್ದರು. ಹಾಗಾಗಿ, ನಮ್ಮದು ಮತ್ತು ಮಠದ್ದು ಬಹಳ ಹಳೆಯ ಸಂಬಂಧ. ಇಲ್ಲಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯವಾಗುತ್ತಿದೆ ಎಂದರು. ಮಠದ ಸೇವೆ, ದಾಸೋಹ ಬಹಳಷ್ಟು ಸಂತೋಷ ಉಂಟು ಮಾಡುವಂಥದ್ದು. ಬಸವಣ್ಣನವರು ನೀಡಿದ ಜಾತಿ, ಧರ್ಮ, ದ್ವೇಷ ಹಾಗೂ ಅಸೂಹೆ ಇಲ್ಲದ ಜೀವನವೇ ನಮಗೆ ಮಂತ್ರವಾಗಿದೆ ಎಂದು ಹೇಳಿದರು. ಶಿವಕುಮಾರ ಸ್ವಾಮೀಜಿಗಳು ಸುಮಾರು ವರ್ಷಗಳ ಕಾಲ ನಮಗೆ ದಾರಿದೀಪವಾಗಿದ್ದರು. ನಾನು ಹಿಂದೆ ಮಠಕ್ಕೆ ಭೇಟಿ ಕೊಟ್ಟಾಗ ಶ್ರೀಗಳನ್ನು ಭೇಟಿ ಮಾಡಿದ್ದೆ. ಇಂದು ಸ್ವಾಮೀಜಿ ನಮ್ಮೊಂದಿಗಿಲ್ಲ, ಆದರೆ ನಮಗೆ ಅವರು ಬದುಕುವ ಮಾರ್ಗ ತೋರಿದ್ದಾರೆ. ಆ ಮಾರ್ಗದಲ್ಲಿ ನಾವು ನಡೆಯಬೇಕು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇಜಯಂತ್ಯುತ್ಸವ  ಪ್ರಯುಕ್ತ  ಶುಕ್ರವಾರ ಬೆಳಗ್ಗೆ  ಮಠದ ಆವರಣದಲ್ಲಿ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡಲಾಯಿತು.  ಇದೇ ಸಂದರ್ಭದಲ್ಲಿ ತುಮಕೂರು ತಾಲೂಕಿನ ಕ್ಯಾತ್ಸಂದ್ರದ ನಿವಾಸಿ ಶಾಹಿಸ್ತಾ ಹಾಗೂ ಜಮೀರ್ ದಂಪತಿ ತಮ್ಮ ಮಗಳಿಗೆ ಶಿವಮಣಿ ಎಂದು ಹೆಸರಿಡಲಾಯಿತು.  ಡಾ. ಶಿವಕುಮಾರ ಮಹಾಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್​ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು. ರಾಜ್ಯದ ನಾನಾ ಭಾಗಗಳಿಂದ ಮಠಕ್ಕೆ ಆಗಮಿಸಿದ್ದ ಮಕ್ಕಳಿಗೆ ಶಿವಕುಮಾರಸ್ವಾಮೀಜಿಯ ನಾಮಕರಣ ಮಾಡಲಾಯಿತು. ಇದೊಂದು ವಿಭಿನ್ನ ಕಾರ್ಯಕ್ರಮವಾಗಿದ್ದು,  ಮೂರ್ನಾಲ್ಕು ವರ್ಷಗಳಿಂದ ಈ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಜಯಣ್ಣ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5  

Read More