Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ಹಿರಿಯೂರು: ಕಳೆದ ಎರಡು ವರ್ಷಗಳಿಂದ ಕೊವಿಡ್ ಸಾಂಕ್ರಾಮಿಕ ರೋಗದಿಂದಾಗಿ ಯುಗಾದಿ ಹಬ್ಬವನ್ನು ಆಚರಿಸಲು ಸಾಧ್ಯವಾಗಿರಲಿಲ್ಲ . ಆದರೆ ಈ ಬಾರಿ ಯುಗಾದಿ ಹಬ್ಬವನ್ನು ಏಪ್ರಿಲ್ 2 ರಂದು ಆಚರಿಸಲು ಸಿದ್ಧತೆಗಳು ನಡೆದಿವೆ. ಸಾಂಕ್ರಾಮಿಕ ರೋಗಗಳಿಂದ ತತ್ತರಿಸಿ ಹೋಗಿದ್ದ ಜನತೆ, ಇದೀಗ ಕೊವಿಡ್ ಪ್ರಕರಣಗಳು ಇಳಿಕೆಯಾಗಿ ಸುಧಾರಿಸಿಕೊಂಡಿದ್ದರೂ, ಹಿರಿಯೂರು ನಗರದಲ್ಲಿ ಯುಗಾದಿ ಹಬ್ಬದ ಸಡಗರ ಈ ಹಿಂದಿನಷ್ಟು ಕಂಡು ಬರುತ್ತಿಲ್ಲ. ವ್ಯಾಪಾರಿಗಳು ಬಿಸಿಲಿನಲ್ಲಿ ನಿಂತು ಬಾಡಿ ಹೋಗುತ್ತಿದ್ದಾರೆಯೇ ವಿನಃ ಅಷ್ಟಾಗಿ ವ್ಯಾಪಾರವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿರಿಯೂರು ನಗರದ ಕೆಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ನ ಸುತ್ತಮುತ್ತ ಹಾಗೂ ನೆಹರು ಮಾರುಕಟ್ಟೆ ಸುತ್ತಮುತ್ತಲಿನಲ್ಲಿ ಈ ಹಿಂದೆ ಯುಗಾದಿ ಸಂದರ್ಭದಲ್ಲಿ ಸಾರ್ವಜನಿಕರು ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಮುಗಿ ಬೀಳುತ್ತಿದ್ದರು. ಆದರೆ, ಅಂದಿನ ಉತ್ಸಾಹ ಈ ಬಾರಿ ಕಂಡು ಬಂದಿಲ್ಲ. ಯುಗಾದಿ ಹಬ್ಬದ ಪ್ರಯುಕ್ತ ಹೆಚ್ಚು ಗ್ರಾಹಕರು ಇರುತ್ತಾರೆ ಎಂದು ವ್ಯಾಪಾರಿಗಳು ಹೆಚ್ಚು ಬಂಡವಾಳ ಹಾಕಿ ತರಕಾರಿ, ಹೂವು, ಹಣ್ಣುಗಳನ್ನು ತಂದು ಮಾರಾಟಕ್ಕೆ ಇಟ್ಟಿದ್ದಾರೆ.…
ತುಮಕೂರು: ತ್ರಿವಿಧ ದಾಸೋಹಿ, ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸುರುವ ‘ನಡೆದಾಡುವ ದೇವರ ಬಸವ ಭಾರತ’ ಕಾರ್ಯಕ್ರಮ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಕೆಲವೇ ಕ್ಷಣದಲ್ಲಿ ಸಿದ್ಧಗಂಗಾ ಮಠಕ್ಕೆ ಅಮಿತ್ ಷಾ ಆಗಮಿಸಲಿದ್ದಾರೆ. ಮೊದಲಿಗೆ ಲಿಂಗೈಕ್ಯರಾದ ಶಿವಕುಮಾರ ಶ್ರೀಗಳ ಗದ್ದುಗೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರೊಂದಿಗೆ ನಮನ ಸಲ್ಲಿಸಿ ಆ ನಂತರ ವೇದಿಕೆಗೆ ಆಗಮಿಸಲಿದ್ದಾರೆ. ನಾಡಿನಾದ್ಯಂತ ಮಠದ ಭಕ್ತರು, ಅಭಿಮಾನಿಗಳು ಸಾಗರೋಪಾದಿಯಲ್ಲಿ ಕಾರ್ಯಕ್ರಮಕ್ಕೆ ಆಮಿಸುತ್ತಿದ್ದು, ಅಪೂರ್ವ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದಾರೆ. ತುಮಕೂರು ಸೇರಿದಂತೆ ಮಠದ ಆವರಣದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಸಿದ್ಧಗಂಗಾ ಶ್ರೀಗಳ ನಾಮಸ್ಮರಣೆ, ಜಯಘೋಷ ಮೊಳಗಿದೆ. ಮಾಜಿ ಸಿಎಂ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಶೀಕ್ಷೇತ್ರದಲ್ಲೇ ಇದ್ದು, ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಗುಬ್ಬಿ: ತಾಲ್ಲೂಕಿನ ಇಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಮೀಳಾ ಅವರ ಮೇಲೆ ಗ್ರಾಮ ಪಂಚಾಯಿತಿ ಕೆಲ ಸದಸ್ಯರು ಭ್ರಷ್ಟಾಚಾರ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಚೇಳೂರು ಶಿವನಂಜಪ್ಪ ಆರೋಪ ವ್ಯಕ್ತಪಡಿಸಿದ್ದರು. ಇಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಆರೋಪ ಮಾಡಿರುವ ಬಗ್ಗೆ ದಲಿತ ಸಂಘರ್ಷ ಸಮಿತಿಯ ಮುಖಂಡರು ಗ್ರಾಮ ಪಂಚಾಯಿತಿ ಗೆ ಭೇಟಿ ನೀಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಇಡಗೂರು ಗ್ರಾಮ ಪಂಚಾಯಿತಿಗೆ ಮೀಸಲಾತಿ ಅಡಿಯಲ್ಲಿ ಆಯ್ಕೆಯಾದ ಪ್ರಮೀಳಾ ಅವರನ್ನು ಆಯ್ಕೆಯಾದ ದಿವಸದಿಂದ ಸಮರ್ಪಕವಾಗಿ ಅಧಿಕಾರ ನಡೆಸಲು ಬಿಡುತ್ತಿಲ್ಲ ಕೆಲ ಗ್ರಾಮ ಪಂಚಾಯಿತಿ ಸದಸ್ಯರು ತಮಗೆ ಬೇಕಾದ ರೀತಿಯಲ್ಲಿ ಸಭಾ ನಡವಳಿಕೆ ಬರೆಯುವಂತೆ ಒತ್ತಾಯ ಮಾಡುವುದು. ಅನುದಾನವನ್ನು ಅನಾವಶ್ಯಕವಾಗಿ ಬಳಕೆ ಮಾಡುವಂತೆ ಸಭೆಯಲ್ಲಿ ಗಲಾಟೆ ಮಾಡುವುದು ಸರಿಯಲ್ಲ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಭ್ರಷ್ಟಾಚಾರ ಮಾಡಿದ್ದರೆ ಕಾನೂನು ಹೋರಾಟ ಮಾಡಲಿ ಅದನ್ನು ಬಿಟ್ಟು ಒಬ್ಬ ದಲಿತ ಮಹಿಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಾಗಿರುವುದನ್ನು…
ತುಮಕೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ತುಮಕೂರು ಜಿಲ್ಲಾ ಘಟಕದ ನೇತೃತ್ವದಲ್ಲಿ ಭೂಮಿ ವಸತಿಗಾಗಿ ಅನಿರ್ದಿಷ್ಟಾವದಿ ಅಹೋರಾತ್ರಿ ಧರಣಿ ಮಾರ್ಚ್ 21 ರಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಇಂದು 11 ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಪತ್ರ ಚಳುವಳಿ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಭೂಮಿ ಮತ್ತು ವಸತಿ ಹಕ್ಕು ವಂಚಿತರು ಪತ್ರ ಬರೆಯುವ ಮುಖಾಂತರ, ಅವರ ಗಮನವನ್ನು ಸೆಳೆದು, ಆದಷ್ಟು ಬೇಗ ಸರ್ಕಾರದ ಮೇಲೆ ಒತ್ತಡ ತಂದು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಲಾಯಿತು ಎಂದು ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ. ಧರಣಿಯ ಹಕ್ಕೊತ್ತಾಯಗಳು: *ತುರ್ತಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ CEO , ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮೂರು ಬಾರಿ ನೀಡಿರುವ ಸಮಸ್ಯೆಗಳ ಪಟ್ಟಿಯನ್ನು ಪರಿಶೀಲಿಸಿ, ಬಗೆಹರಿಸಬೇಕು. * MLA ಗಳ ಅಧ್ಯಕ್ಷತೆಯಲ್ಲಿನ ಬಗರ್ ಹುಕ್ಕು ಸಮಿತಿಯು ಏಪ್ರಿಲ್…
ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ ಅವರ ಜಯಂತ್ಯೋತ್ಸವದ ಆಚರಣೆ ಅವರ ಬದುಕಿನ ಪ್ರೇರಣೆ ಇಂದಿನ ಯುವ ಪೀಳಿಗೆಗೆ ಬಹಳ ಅತ್ಯಗತ್ಯ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಅವರು ಶುಕ್ರವಾರ ನಡೆಯಲಿರುವ ಶಿವಕುಮಾರ ಶ್ರೀಗಳ ಜಯಂತೋತ್ಸವ ಕಾರ್ಯಕ್ರಮದ ರೂಪುರೇಷೆ ಹಾಗೂ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತುಮಕೂರಿನ ಸಿದ್ದಗಂಗಾ ಮಠದ ವತಿಯಿಂದ ಪ್ರತಿವರ್ಷ ಶ್ರೀಮಠದ ಪರಮಪೂಜ್ಯರಾದ ಶ್ರೀ ಶ್ರಿ ಶಿವಕುಮಾರ ಮಹಾಸ್ವಾಮಿಗಳವರು ಜಯಂತ್ಯೋತ್ಸವ ಪ್ರತಿವರ್ಷ ಆಚರಣೆ ಮಾಡಲಾಗುತ್ತಿದೆ ಅದರಂತೆ ಈ ಬಾರಿಯೂ ಸಹ ಶ್ರೀಗಳ 115ನೇ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲಾಗುತ್ತದೆ ಎಂದರು. ಶಿವಕುಮಾರ ಶ್ರೀಗಳ ಬದುಕಿನ ಪ್ರೇರಣೆ ಇಂದಿನ ಯುವಪೀಳಿಗೆಗೆ ಶ್ರೀಗಳ ವಿಚಾರಗಳನ್ನು ತಿಳಿಸುವ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ಆಗಲಿದೆ ಇನ್ನು ನಾಳೆ ನಡೆಯುವ ಕಾರ್ಯಕ್ರಮ ಅರ್ಥಪೂರ್ಣ ಕಾರ್ಯಕ್ರಮವಾಗಿರಬೇಕು ಇನ್ನು ಶ್ರೀಗಳ ಪರಂಪರೆ ,ಶಿಕ್ಷಣ,ದಾಸೋಹ ಮಾಡಿಕೊಂಡು ಬಂದಿದ್ದಾರೆ ಇದು ರಾಜ್ಯ ಹಾಗೂ ದೇಶಕ್ಕೆ…
ಕೊರಟಗೆರೆ: ತಾಲ್ಲೂಕು ಹೊಳವನಹಳ್ಳಿ ಹೋಬಳಿಯ ವೀರಯ್ಯನ ಪಾಳ್ಯ ಗ್ರಾಮದ ರತ್ನಮ್ಮ ಬಿನ್ ಅಂಜಿನಪ್ಪ ಎಂಬ ವೃದ್ಧೆಯ ಮೇಲೆ ವೈಯಕ್ತಿಕ ದ್ವೇಷದಿಂದ ಅದೇ ಊರಿನ ರವಿಕುಮಾರ್ ಬಿನ್ ನರಸಿಂಹಯ್ಯ, ನಾರಾಯಣ, ಶ್ವೇತಾ, ಲಕ್ಷ್ಮಮ್ಮ ಮತ್ತು ಸ್ವಪ್ನ ಎಂಬ ಆರೋಪಿಗಳು ದೊಣ್ಣೆ,ಕಲ್ಲು ಮತ್ತು ಮಚ್ಚಿನಿಂದ ತಲೆಯ ಭಾಗಕ್ಕೆ ಹೊಡೆದಿರುವ ಘಟನೆ ನಡೆದಿದೆ. ಘಟನೆ ನಡೆದ ಮಾಹಿತಿ ತಿಳಿದ ಕೂಡಲೇ ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್ ಐ ನಾಗರಾಜು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿ ಸ್ಥಳ ಪರಿಶೀಲಿಸಿ ವೃದ್ದೆಯ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 323, 324, 504, 307 ಕಾಲಂ ಅಡಿ ಎಫ್ ಐಆರ್ ದಾಖಲಿಸಿದ್ದಾರೆ. ಹಲ್ಲೆಗೊಳಗಾದ ವೃದ್ದೆ ರತ್ನಮ್ಮ ಬಿನ್ ಅಂಜಿನಪ್ಪ ಸದ್ಯ ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಒಬ್ಬಂಟಿ ವೃದ್ಧೆಯ ಮೇಲೆ ವಿನಾಕಾರಣ ಹಲ್ಲೆ ನಡೆಸಿ ವಿಕೃತಿ ಮೆರೆಯಲಾಗಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಆರೋಪಿಗಳ ಪತ್ತೆಗೆ ಕೊರಟಗೆರೆಯ ಪೊಲೀಸ್ ಅಧಿಕಾರಿಗಳು ಬಲೆ ಬೀಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…
ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಸಾಗಸಂದ್ರ ಶ್ರೀ ಕೆಂಪಮ್ಮ ದೇವಿ ದೇವಾಲಯಕ್ಕೆ ದಲಿತರ ಪ್ರವೇಶವನ್ನು ಅಲ್ಲಿನ ಅರ್ಚಕರು ನಿರ್ಬಂಧ ಹಾಕಿದ್ದಾರೆ ಎಂದು ತಹಶೀಲ್ದಾರ್ ಅವರಿಗೆ ದಲಿತ ಸೇನೆಯ ಮುಖಂಡರು ಸೋಮವಾರ ಮನವಿ ಕೊಟ್ಟ ಹಿನ್ನಲೆಯಲ್ಲಿ ಸಾಗಸಂದ್ರ ಶ್ರೀ ಕೆಂಪಮ್ಮ ದೇವಾಲಯಕ್ಕೆ ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ಶ್ರೀನಿವಾಸ್ ಬುಧವಾರ ಭೇಟಿ ನೀಡಿ ಸಾಗಸಂದ್ರ ದೇವಾಲಯದಲ್ಲಿ ಅರ್ಚಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಜತೆ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಅರ್ಚಕ ದೊಡ್ಡಕೆಂಪಯ್ಯ ಸುಮಾರು ವರ್ಷಗಳಿಂದ ದೇವಾಲಯಕ್ಕೆ ಸಾಕಷ್ವು ಭಕ್ತಾಧಿಗಳು ಬರುತ್ತಾರೆ ನಾವು ಯಾರನ್ನು ಕೂಢ ಗಲಾಟಿ ಮಾಡಿ ಹೊರಗಡೆ ನಿಲ್ಲಿಸಿಲ್ಲ ಇದರ ಹಿಂದೆ ಕಾಣದ ಕೈಗಳು ಉದ್ದೇಶ ಪೂರ್ವಕವಾಗಿ ಗಲಾಟೆ ಮಾಡಿಸಬೇಕು ಅಂಥ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ನಮ್ಮಲ್ಲಿ ಸಾಕಷ್ವು ದಲಿತರು ದೇವಾಲಯಕ್ಕೆ ಬರುತ್ತಾರೆ ನಮ್ಮಲ್ಲಿ ಯಾವುದೇ ಜಾತಿ ಭೆಧವಿಲ್ಲದೆ ಎಲ್ಲರಿಗೂ ಸಮಾನವಾಗಿ ಪೂಜೆಗಳನ್ನು ಅರ್ಚಕರು ಮಾಡಿಕೊಟ್ಟಿದ್ದಾರೆ. ದಲಿತರನ್ನು ನಾವು ಅವಮಾನಿಸಿಲ್ಲ ಎಂದರು. ದೇವಾಲಯ ಕಾರ್ಯದರ್ಶಿ ಅ.ನ.ಲಿಂಗಪ್ಪ ಮಾತನಾಡಿ, ನಾನು ಸುಮಾರು ವರ್ಷಗಳಿಂದ…
ತುರುವೇಕೆರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪ್ರತಿ ಹಳ್ಳಿಗಳಲ್ಲಿಯೂ ಮೂಲಭೂತ ಸೌಕರ್ಯ ಒದಗಿಸುವ ಮೂಲಕ ಗ್ರಾಮಗಳನ್ನು ಅಭಿವೃದ್ಧಿಪಡಿಸುವುದೇ ನಮ್ಮ ಗುರಿಯಾಗಿದೆ ಎಂದು ಮುತ್ತುಗದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ಆರ್.ಗಿರೀಶ್ ತಿಳಿಸಿದರು. ತಾಲೂಕಿನ ಮದ್ದನಹಳ್ಳಿ ಗೇಟ್ ಬಳಿ ಗ್ರಾಮ ಪಂಚಾಯಿತಿ ವತಿಯಿಂದ ಅಳವಡಿಸಿರುವ ಮಾರ್ಗಸೂಚಿ ಸೂಚನಾ ನಾಮಫಲಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಮುತ್ತುಗದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿ ಹಳ್ಳಿಗಳಿಗೂ ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹಲವು ಕಾರ್ಯಗಳನ್ನು ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ನಡೆಸಲಾಗಿದೆ. ಕೊಟ್ಟ ಮಾತಿನಂತೆ ಮುಂದೆಯೂ ಸಹ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೆರವೇರಿಸಲಿದ್ದು, ಮುಂದೆಯೂ ಸಹಾಯ ಎಲ್ಲರ ಸಹಕಾರ ಹೀಗೆ ಇರಲಿ ಎಂದು ಮನವಿ ಮಾಡಿದರು. ಮುಖಂಡರಾದ ಬಿ.ಎಂ.ಎಸ್.ಉಮೇಶ್ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಸಂತಸವಾಗಿದೆ. ಮುಂದೆಯೂ ಸಹ ಪಕ್ಷಾತೀತವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಜರುಗಬೇಕು ಎಂದರು. ಈ…
ತುರುವೇಕೆರೆ: ಏ.1ರಂದು ನಡೆಯಲಿರುವ, ಶ್ರೀ ಸಿದ್ದಗಂಗಾ ಕ್ಷೇತ್ರದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ 115ನೇ ಜಯಂತೋತ್ಸವಕ್ಕೆ, ತುರುವೇಕೆರೆ ತಾಲೂಕಿನ ಬಿಜೆಪಿ ಪಕ್ಷದ ಸುಮಾರು 5,000 ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಮಸಾಲ ಜಯರಾಮ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣ ಸಮೀಪದ ತಮ್ಮ ಸ್ವಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲಿಂಗೈಕ್ಯ ಸಿದ್ದಗಂಗಾ ಶ್ರೀಗಳ 115ನೇ ಜಯಂತೋತ್ಸವ ಕಾರ್ಯಕ್ರಮವು ತುಮಕೂರಿನಲ್ಲಿ ನೆರವೇರಲಿದ್ದು, ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಆಗಮಿಸಲಿದ್ದಾರೆ. ಇದರ ಹಿನ್ನೆಲೆಯಲ್ಲಿ ಕ್ಷೇತ್ರದಿಂದ 5,000 ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿರುವ ಬಿ.ಜೆ.ಪಿ ಪಕ್ಷದ ಕಾರ್ಯಕರ್ತರುಗಳು ತೆರಳಲು ಸೂಕ್ತ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕಾರ್ಯಕರ್ತರನ್ನು ಕರೆತರಲು ಗ್ರಾಮ ಪಂಚಾಯಿತಿ ಮಟ್ಟದ ಬಿಜೆಪಿ ಪಕ್ಷದ ಮುಖಂಡರುಗಳಿಗೆ ಹಾಗೂ ಪದಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ ಎಂದರು. ಅಲ್ಲದೆ ಅಂದು ಬೆಳಗ್ಗೆ 8 ಗಂಟೆಗೆ ಆಯಾ ಗ್ರಾಮ ಪಂಚಾಯಿತಿ ಪ್ರದೇಶಗಳಿಂದ ವಾಹನಗಳು ತುಮಕೂರಿನ ಶ್ರಮಕ್ಕೆ ತೆರಳಲಿವೆ. ಕ್ಷೇತ್ರದ ಸರ್ವರು ಸಹಾ ಕಾರ್ಯಕ್ರಮದ ಯಶಸ್ಸಿಗಾಗಿ…
ಸರಗೂರು: ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪಟ್ಟಣ ಪಂಚಾಯಿತಿಯ 2022-2023 ನೇ ಸಾಲಿನ ಬಜೆಟ್ 1,145.26 ಲಕ್ಷಗಳು ಮಂಡನೆಯಲ್ಲಿ, ಉಳಿತಾಯ 7.77 ಲಕ್ಷಗಳು ಅಯವ್ಯಯ ಮಂಡನೆಯನ್ನು ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾಡಿದ್ದರು. ಸರಗೂರು ಪಟ್ಟಣವನ್ನು ಅಭಿವೃದ್ಧಿ ಮಾಡಲು 2022 2023 ರ ಸಾಲಿನ ಉಳಿತಾಯ 7.77 ಲಕ್ಷವನ್ನು ಬಿಡುಗಡೆ ಮಾಡಿದ್ದಿವಿ. ಅನುದಾನವನ್ನು ಸರ್ಕಾರ ನೀಡಿದೆ ಪಟ್ಟಣವನ್ನು ಅಭಿವೃದ್ಧಿ ಪಡಿಸಲು ಇನ್ನೂ ಹೆಚ್ಚು ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸರಗೂರುಅಭಿವೃದ್ಧಿಗೆ ಮಾತುಕತೆ ನಡೆಸಿದ್ದೇವೆ ಎಂದು ಅಧ್ಯಕ್ಷೆ ರಾಧಿಕಾ ಶ್ರೀನಾಥ್ ತಿಳಿಸಿದರು. ನಂತರ ಪ.ಪಂ. ಸದಸ್ಯ ಶ್ರೀ ನಿವಾಸ್ ಮಾತನಾಡಿ, ಸರಗೂರು ಪಟ್ಟಣವನ್ನು ಅಭಿವೃದ್ಧಿ ಹೊಂದಲು ಶಾಸಕರು ಅನೀಲ್ ಚಿಕ್ಕಮಾದು ಕೈಜೋಡಿಸಿದ್ದಾರೆ. ಎಲ್ಲಾ ಸಚಿವರು ಹಾಗೂ ಮಂತ್ರಿಗಳು ಭೇಟಿ ಮಾಡಿ ಪಟ್ಟಣವನ್ನು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಸರಗೂರು ತುಂಬುಸೋಗೆ ಗ್ರಾಮದ ಸರಗೂರಿಗೆ ಬರುವ ಸೇತುವೆ ಬಳಿ ಹಾಗೂ ಎರಡು ಕಡೆ ಕಮನ್ ಗೇಟ್ ಯನ್ನು ಅಳವಡಿಸಿದ್ದೇವೆ ಎಂದು…