Subscribe to Updates
Get the latest creative news from FooBar about art, design and business.
- ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
- ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
- ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
- ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ: 201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
- ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
- ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
- ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
- ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
Author: admin
ತಿಪಟೂರು : ತಾಲ್ಲೂಕಿನ ಹಾಲ್ಕುರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವಸದಸ್ಯರ ಮಹಾಸಭೆ ನಡೆಸಲಾಯಿತು. ಸಂಘದ ಆವರಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಬಸವರಾಜು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಂಘದ ಸದಸ್ಯರು ಹಾಗೂ ಶೇರುದಾರರ ಸಹಕಾರದಿಂದ ನಮ್ಮ ಸಹಕಾರ ಸಂಘ ಉತ್ತಮವಾಗಿ ನಡೆಯುತ್ತಿದೆ. ಸದಸ್ಯರು ಹಾಗೂ ಶೇರುದಾರರು ಪರಸ್ಪರ ಸಹಕಾರವೇ ನಮ್ಮ ಯಶಸ್ಸು. ಸಂಘದ ಬೆಳವಣಿಗೆಗೆ ಸದಸ್ಯರು ರೈತರು ಹಾಗೂ ಸಾರ್ವಜನಿಕರು ಹೆಚ್ಚುಹೆಚ್ಚು ವಹಿವಾಟು ನಡೆಸಿ ಸಂಘದ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಪಿ ನಾಗರಾಜು ಸಂಘದ ಅಯವ್ಯಯ ಮಂಡಿಸಿದರು. ಸಭೆಯಲ್ಲಿ ನಿರ್ದೇಶಕರಾದ ಎಂ.ಬಿ.ಉಮಾಮಹೇಶ್, ರೇವಣ್ಣ, ಸೋಮಶೇಖರ್ ಹೆಚ್.ಪಿ., ಜಯಂತಿ, ಸಾವಿತ್ರಮ್ಮ, ಮೋಹನ್ ಕುಮಾರ್ ಆಡಳಿತಾದಿಕಾರಿ ಟಿ.ಪಿ.ಉಮಾಮಹೇಶ್ ಉಪಸ್ಥಿತರಿದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ಇನ್ನರ್ ವೀಲ್ ಕ್ಲಬ್ ಸೆಂಟ್ರಲ್ ಬೆಂಗಳೂರು ಸಂಸ್ಥೆಯು, ತಾಲೂಕಿನ ಕಾಟಗೊಂಡನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀಶಿರಡಿ ಸಾಯಿ ವೃದ್ಧಾಶ್ರಮಕ್ಕೆ ಭೇಟಿ ಕೊಟ್ಟು ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿರುವ ವೃದ್ಧರಿಗೆ ಹೊದಿಕೆ, ವೃದ್ಧರಿಗೆ ನೆಲೆಯಾದ ಮತ್ತು ದಿನಬಳಕೆ ವಸ್ತುಗಳು ಹಾಗೂ ಇನ್ನಿತರೆ ಉಪಯುಕ್ತ ವಸ್ತುಗಳನ್ನು ವಿತರಿಸಲಾಯಿತು. ಕ್ಲಬ್ ಸದಸ್ಯರಾದ ಗುಣಂಬ ಸಿರವಳ್ಳಿ ಅಧ್ಯಕ್ಷರಾದ ರಶ್ಮಿ ಅಜಿತ್, ಖಜಾಂಚಿಯಾದ ಹೇಮಾ ಶರವಣ್, ಡಾ.ನಿರ್ಮಲ ದಿನೇಶ್, ವೃದ್ದಾಶ್ರಮದ ಅಧ್ಯಕ್ಷರಾದ ಗೋಪಾಲಯ್ಯ ಉಪಸ್ಥಿತರಿದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ಸಿನಿಮಾ ನಿರ್ದೇಶಕ ಕೆ.ವಿ. ರಾಜು ಇಂದು ಬೆಳಗ್ಗೆ ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ವಿ. ರಾಜು ಅವರು ಇಂದು ಬೆಂಗಳೂರಿನ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ನಿಧನರಾಗಿದ್ದಾರೆ. ಹುಲಿಯಾ, ಬೆಳ್ಳಿಮೋಡಗಳು, ಇಂದ್ರಜಿತ್, ಬೆಳ್ಳಿ ಕಾಲುಂಗರ, ಯುದ್ದಕಾಂಡ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಕೆ.ವಿ.ರಾಜು ಅವರು ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯಗಳು ದಿನೇದಿನೇ ಹೆಚ್ಚಾಗುತ್ತಿವೆ. ತಾಯ್ನೆಲಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಲಾಗಿದೆ, ಇಡೀ ಮನುಕುಲಕ್ಕೆ ಕಾಯಕ ಧರ್ಮವನ್ನು ನೀಡಿದ ಮಹಾಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸೆಗಣಿ ಬಳಿಯಲಾಗಿದೆ. ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಆತ್ಮಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ಚಜಕ್ಕೆ ಬೆಂಕಿ ಇಡಲಾಗಿದೆ. ಇದಕ್ಕೆಲ್ಲ ಕಾರಣಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಎಂಬ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳು. ಈ ಕಾರಣಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಈ ಎರಡೂ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಸತತ ಹೋರಾಟ ನಡೆಸುತ್ತಿದೆ ಎಂದು ಟಿ.ಎ.ನಾರಾಯಣಗೌಡ ಅವರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ತಿಳಿಸಿದ್ದು, ಈ ಸಂಬಂಧ ಹಲವು ನಿರ್ಣಯಗಳನ್ನು ಸಂಘಟನೆ ಕೈಗೊಂಡಿದೆ. ಕಳೆದ ಡಿಸೆಂಬರ್ 20ರಂದು ಬೆಳಗಾವಿಯಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಸುಮಾರು ಐದು ಸಾವಿರಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು. ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕುಗಳಲ್ಲೂ ಕರ್ನಾಟಕ ರಕ್ಷಣಾ ವೇದಿಕೆಯ…
ಕೋಲಾರ : ಸರ್ಕಾರಿ ಗೋಮಾಳ ಜಮೀನಿನಲ್ಲಿ ಸ್ಮಶಾನಕ್ಕೆ ಜಮೀನು ಮಂಜೂರು ಮಾಡಲು ತಹಶಿಲ್ದಾರ್ ಹಾಗೂ ಆರ್ ಐ ಅಡ್ಡಗಾಲು ಹಾಕುತ್ತಿದ್ದಾರೆಂದು ಆರೋಪಿಸಿ ಕೆಜಿಎಫ್ ತಾಲೂಕಿನ ದಾಸೇನಹಳ್ಳಿ ಗ್ರಾಮಸ್ಥರು ಕೋಲಾರ ಜಿಲ್ಲಾಧಿಕಾರಿ ಸೆಲ್ವಮಣಿ ಅವರಿಗೆ ದೂರು ನೀಡಿದ್ದಾರೆ. ಕೊಡಿಗೇಪಲ್ಲಿ ಗ್ರಾಮದ ಸರ್ವೆ ನಂಬರ್ 109 ರಲ್ಲಿ 3 ಎಕರೆ 23 ಗುಂಟೆ ಗೋಮಾಳ ಜಮೀನಿನಲ್ಲಿ ಸ್ಮಶಾನಕ್ಕೆ ಹಾಗೂ ನಿವೇಶನ ರಹಿತರಿಗೆ ಜಾಗವನ್ನು ಮಂಜೂರು ಮಾಡುವಂತೆ ಕಳೆದ ಒಂದುವರೆ ವರ್ಷದಿಂದ ಸಂಬಂಧಪಟ್ಟ ವಿಎ, ಆರ್ ಐ ಹಾಗೂ ತಹಶಿಲ್ದಾರ್ ಅವರಿಗೆ ಮನವಿ ಮಾಡಿದ್ದರು. ಆದ್ರೆ ಯಾವುದೇ ಪ್ರಯೋಜನವಾಗಿಲ್ಲ. ಇತ್ತೀಚೆಗೆ ಗ್ರಾಮದ ಜನ ತಹಶಿಲ್ದಾರ್ ಅವರ ಕಚೇರಿಗೆ ತೆರಳಿ ತಮ್ಮ ಕಷ್ಟ ಹೇಳಿಕೊಂಡ ಹಿನ್ನೆಲೆ ನೆಪಮಾತ್ರಕ್ಕೆ ತಹಶಿಲ್ದಾರ್ ಹಾಗೂ ಕೆಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.ಆ ಬಳಿಕ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಪ್ರವೇಶಿಸಿರುವ ವ್ಯಕ್ತಿಗಳಿಂದ ಹಣ ಪಡೆದು ಅವರ ತಹಶೀಲ್ದಾರ್ ಶಾಮಿಲಾಗಿದ್ದಾರೆಂದು ಗ್ರಾಮಸ್ಥರು ಆರೋಸಿದ್ದಾರೆ. ಅಲ್ಲದೇ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ತಕ್ಷಣ ಗ್ರಾಮಸ್ಥರ ಕಷ್ಟಕ್ಕೆ…
ತಿಪಟೂರು: ರೈತ ದಿನಾಚರಣೆಯ ಪ್ರಯುಕ್ತ ವಿಜಯಕರ್ನಾಟಕ ತುಮಕೂರು ಪತ್ರಿಕಾ ಬಳಗದಿಂದ ಸೂಪರ್ ಸ್ಟಾರ್ ರೈತ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಬತ್ತ ಕುಟ್ಟುವ ಮೂಲಕ ಉದ್ಘಾಟನೆ ಮಾಡಿದರು. ಸೂಪರ್ ಸ್ಟಾರ್ ರೈತ ಕಾರ್ಯಕ್ರಮಕ್ಕೆಮುಖ್ಯ ಅತಿಥಿಗಳಾಗಿ ತಿಪಟೂರು ತಾಲೂಕಿನ ಸಮಾಜ ಸೇವಕರು, ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ಶಾಂತಕುಮಾರ್ ಭಾಗವಹಿಸಿದ್ದು, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಸಾಧಕ ರೈತರನ್ನು ಗುರುತಿಸಿ ವಿಜಯಕರ್ನಾಟಕ ಸೂಪರ್ ಸ್ಟಾರ್ ರೈತ ಕಾರ್ಯಕ್ರಮದಲ್ಲಿ ಸನ್ಮಾನಿಸುವ ಮೂಲಕ ಸಮಾಜಮುಖಿ ಕೆಲಸಕ್ಕೆ ಮುನ್ನುಡಿ ಇಟ್ಟಿದೆ ಮತ್ತು ರೈತರು ಕೃಷಿ ಉಪಕರಣಗಳನ್ನು ಪರಿಣಾಮಕಾರಿಗಳಾಗಿ ಉಪಯೋಗಿಸಿಕೊಂಡು ರೈತರು ಹೆಚ್ಚು ಇಳುವರಿ ತೆಗೆಯುವ ಕ್ರಮವನ್ನು ರೈತರು ಅಳವಡಿಸಿಕೊಳ್ಳಬೇಕು ಎಂದರು. ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಜಿಲ್ಲಾ ಪಂಚಾಯಿತಿ ಸಿಇಒ ಡಾ.ವಿದ್ಯಾಕುಮಾರಿ ಕೃಷಿ ನಿರ್ದೇಶಕ ಅಶೋಕ್ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ಡಿ ಎಸ್ ಎಸ್ ಜಿಲ್ಲಾ ಸಂಚಾಲಕರು ನಿಟ್ಟೂರು ರಂಗಸ್ವಾಮಿ, ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಸೇರಿದಂತೆ…
ಸಿರಾ: ರಾಜ್ಯ ಬಿಜೆಪಿ ಮೋರ್ಚಾ ಅಲ್ಪಸಂಖ್ಯಾತರ ರಾಜ್ಯ ಅಧ್ಯಕ್ಷರಾದ ಸಯ್ಯದ್ ಮುಝಮ್ಮಿಲ್ ಬಾಬುರವರು ನಗರದ ಐತಿಹಾಸಿಕ ಹಜರತ್ ಮಲ್ಲಿಕ್ ರೆಹಮಾನ್ ದರ್ಗಾ ಶರೀಫ್ ಗೆ ತೆರಳಿ ಸಿರಾ ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಹಜ್ ಭವನವನ್ನು ನಿರ್ಮಿಸಿತು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನದಾಗಿ ಅನುದಾನ ನೀಡುತ್ತಾ ಬಂದಿದೆ. ಇದರಿಂದ ತೀರ ಹಿಂದುಳಿದ ಅಲ್ಪಸಂಖ್ಯಾತರಿಗೆ ತಮ್ಮ ಸ್ವಯಂ ಉದ್ಯೋಗ ನಿರ್ವಹಣೆಗೆ ತುಂಬಾ ಅನುಕೂಲವಾಗಿದೆ. ಕೇಂದ್ರ ಬಿಜೆಪಿ ಸರ್ಕಾರವಾಗಲಿ ಅಥವಾ ರಾಜ್ಯ ಬಿಜೆಪಿ ಸರ್ಕಾರ ಆಗಲಿ ಅಲ್ಪಸಂಖ್ಯಾತರ ಪರವಾಗಿದೆ ನಾವು ಕಾಣಬಹುದು. ಆದ್ದರಿಂದ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಣಬೇಕಾದರೆ, ನಮ್ಮ ಬಿಜೆಪಿ ಪಕ್ಷದ ವತಿಯಿಂದ ಸ್ಥಳೀಯ ನಗರ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಗೆಲುವು ಮುಖ್ಯವಾಗಿದೆ ಎಂದರು. ಕೆ.ಎಂ.ಡಿ.ಸಿ. ನಜೀರ್ ಪಾಷಾ, ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನದೀಮ್, ಇಮ್ತಿಯಾಜ್ ಪಾಶ (ಅಲ್ಪಸಂಖ್ಯಾತರ ಮಧುಗಿರಿ ತಾಲ್ಲೂಕು…
ತುಮಕೂರು: ಜಿಲ್ಲೆ ಸಿರಾ ತಾಲೂಕಿನ ನಗರಸಭೆ ಚುನಾವಣೆಗೆ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಗಳ ಪರವಾಗಿ ಆದ್ಮಿ ಪಾರ್ಟಿ ಸ್ಟೇಟ್ ಕನ್ವೀನರ್ ಜಗದೀಶ್ ಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಿದರು. ಒಂದನೇ ವಾರ್ಡಿನ ಮಾಗೋಡು ರಂಗ ವೈ. ಯು. ಮತ್ತು 4ನೇ ವಾರ್ಡಿನ ಆದಿಲಕ್ಷ್ಮಿ ಭೀಮರಾಜು ಮೂರನೇ ವಾರ್ಡಿನ ಭೀಮರಾಜು, 7ನೇ ವಾರ್ಡಿನ ಬಸವರಾಜು ಆಡಿಟರ್, 15 ನೇ ವಾರ್ಡಿನ ತರನುಂ ಸುಲ್ತಾನ್ ಸಾಧಿಕ್, 9ನೇ ವಾರ್ಡಿನ ಪ್ರವೀಣ್ ಕುಮಾರ್, 21 ನೇ ವಾರ್ಡಿನ ಉತ್ ಫುಲ್ಲಾ, 25ನೇ ವಾರ್ಡಿನ ಜಗದಾಂಬ ವಿ, 22 ನೇ ವಾರ್ಡಿನ ಅಬ್ದುಲ್ ರಹಮಾನ್ ಪಾಷ ರವರ ಪರವಾಗಿ ಜಗದೀಶ್ ರವರು ಮತಯಾಚನೆ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರಗೂರು: ಚರಂಡಿ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು ಪ್ರತಿ ದಿನ ತೊಂದರೆಗೀಡಾಗುತ್ತಿರುವ ಘಟನೆ ಸರಗೂರಿನ ಮುಖ್ಯ ರಸ್ತೆಯಲ್ಲಿರುವ ಶಿವಲೀಲಾ ಗೊಬ್ಬರ ಅಂಗಡಿಯ ಮುಂಭಾಗದಲ್ಲಿ ನಡೆಯುತ್ತಿದ್ದು, ಅಂಗಡಿ ಮಾಲಿಕರು, ಸಾರ್ವಜನಿಕರು ಹಲವಾರು ವರ್ಷಗಳಿಂದ ಈ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಅಂಗಡಿಯ ಮುಂಭಾಗದಲ್ಲಿಯೇ ಚರಂಡಿಯ ನೀರು ಹರಿಯುತ್ತಿದೆ. ಈ ಭಾಗ ಹೆಚ್ಚಾಗಿ ಜನ ಸಂಚಾರದ ಪ್ರದೇಶವಾಗಿದ್ದು, ಮಕ್ಕಳು, ಮಹಿಳೆಯರು, ವೃದ್ಧರು ಎನ್ನದೇ ಎಲ್ಲರೂ ಇದೇ ಕೊಳಚೆ ನೀರನ್ನು ತುಳಿದುಕೊಂಡು ನಡೆದುಕೊಂಡು ಹೋಗುವಂತಾಗಿದೆ. ಇನ್ನೊಂದೆಡೆ ಅಂಗಡಿಗೆ ಆಗಮಿಸುವ ಗ್ರಾಮಸ್ಥರ ಪಾಡು ಹೇಳತೀರದು. ಇದೇ ಚರಂಡಿ ನೀರನ್ನು ತುಳಿದುಕೊಂಡು ಬರುವ ದುಸ್ಥಿತಿ ಗ್ರಾಹಕರದ್ದಾಗಿದೆ. ಚರಂಡಿಯ ದುರ್ವಾಸನೆಯಿಂದಾಗಿ ಈ ಭಾಗಕ್ಕೆ ಗ್ರಾಹಕರು ಬರಲು ಹಿಂದೇಟು ಹಾಕುತ್ತಿದ್ದು, ಇದರಿಂದಾಗಿ ಅಂಗಡಿ ಮಾಲಿಕರಿಗೆ ನಷ್ಟ ಉಂಟಾಗುತ್ತಿದೆ. ಈ ವಿಚಾರವಾಗಿ ಮಾತನಾಡಿದ ಶಿವಲೀಲಾ ಗೊಬ್ಬರದ ಅಂಗಡಿಯ ಮಾಲೀಕ ಮಂಜು ಪ್ರಸಾದ್, ಮುಖ್ಯ ರಸ್ತೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿಯೇ ಸರಿಯಾದ ಒಳಚರಂಡಿ ನಿರ್ಮಾಣ ಮಾಡಿ ಎಂದು ಮನವಿ ಮಾಡಿದರು ಸಹ ಇದರ ಬಗ್ಗೆ ಗಮನ ಹರಿಸಲಿಲ್ಲ. ಹೀಗಾಗಿ ಸತತ…
ತುರುವೇಕೆರೆ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚುನಾವಣೆಯಲ್ಲಿ ತುರುವೇಕೆರೆ ತಾಲೂಕಿನ ಕಸಬಾ ಹೋಬಳಿಯ ಡೊಂಕಿಹಳ್ಳಿ ಗ್ರಾಮದ ಡಿ.ಪಿ.ರಾಜು ಆಯ್ಕೆಯಾಗಿದ್ದು, ಅವರ ಪದಗ್ರಹಣ ಸಮಾರಂಭವನ್ನು ತುರುವೇಕೆರೆ, ಪಟ್ಟಣದ ಸರಸ್ವತಿ ಕಾಲೇಜಿನಲ್ಲಿ ನಡೆಸಲಾಯಿತು. ಈ ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ನಂರಾಜು ಅವರಿಂದ ಕನ್ನಡ ಬಾವುಟ ಪಡೆಯುವುದರೊಂದಿಗೆ ಅಧಿಕಾರ ಸ್ವೀಕರಿಸಿದರು ಸಮಾರಂಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಆರ್.ಜಯರಾಮ್ ವಕೀಲರಾದ ಧನಪಾಲ್, ಕೃಷ್ಣಮೂರ್ತಿ ಮತ್ತಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy