Author: admin

ಮುಂದಿನ ಜೂನ್ ವೇಳೆಗೆ 8 ಲಕ್ಷ ಬಿಪಿಎಲ್ ಕಾರ್ಡ್‍ಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವ ಉಮೇಶ್ ಕತ್ತಿ ತಿಳಿಸಿದರು. ವಿಧಾನಪರಿಷತ್‍ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಬಿಪಿಎಲ್ ಕಾರ್ಡ್‍ಗಾಗಿ 15,53,745 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 8,03,782 ಅರ್ಜಿದಾರರಿಗೆ ಪಡಿತರಚೀಟಿ ನೀಡಲಾಗಿದೆ. 3,24,601 ಅರ್ಜಿಗಳು ತಿರಸ್ಕøತವಾಗಿದೆ. ಒಟ್ಟು 11,28,383 ಅರ್ಜಿಗಳು ವಿಲೇವಾರಿಯಾಗಿವೆ. 4,25,362 ಅರ್ಜಿಗಳು ಬಾಕಿ ಇವೆ ಎಂದು ವಿವರಿಸಿದರು. ರಾಜ್ಯದಲ್ಲಿ ಅನರ್ಹರು ಪಡೆದಿದ್ದ 13 ಲಕ್ಷ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ. ಅವುಗಳಲ್ಲಿ ಜಿಲ್ಲಾವಾರು ಹಂಚಿಕೆ ಮಾಡಿ ಅರ್ಹರಿಗೆ ಕಾರ್ಡ್ ವಿತರಿಸಲಾಗುತ್ತಿದ್ದು, ಒಟ್ಟು 8 ಲಕ್ಷ ಕಾರ್ಡ್ ನೀಡುವ ಗುರಿ ಹೊಂದಲಾಗಿದೆ. ಈ ತಿಂಗಳ ಅಂತ್ಯಕ್ಕೆ 4 ಲಕ್ಷ ಉಳಿದ ಮೂರು ತಿಂಗಳಲ್ಲಿ 4 ಲಕ್ಷ ಕಾರ್ಡ್‍ಗಳನ್ನು ನೀಡಲಾಗುವುದು ಎಂದು ತಿಳಿಸಿದರು. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ತಿಪಟೂರು: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಅಖಿಲ ಭಾರತೀಯ ಅಂಚೆನೌಕರರ ಸಂಘ ಹಾಗೂ ಗ್ರಾಮೀಣ ಅಂಚೆ ನೌಕರರ ಸಂಘದಿಂದ ತಿಪಟೂರು ನಗರದ ನಗರದ ಸಭಾ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ನೌಕರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ನಿರತರನ್ನ ಉದೇಶಿಸಿ ಅಖಿಲಭಾರತೀಯ ಅಂಚೆ ನೌಕರರ ಸಂಘದ ಕಾರ್ಯದರ್ಶಿ ವಿಶ್ವೇಶ್ವರಯ್ಯ  ಮಾತನಾಡಿ,  ಕೇಂದ್ರ ಸರ್ಕಾರ ಅಂಚೆ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿರುವುದು ಖಂಡನೀಯ.  ಅಂಚೆ ಇಲಾಖೆ ಸುಧಾರಣೆಗಾಗಿ ಕಮಲೇಶ್ ಚಂದ್ರ  ವರದಿಯನ್ನು ಜಾರಿಗೊಳಿಸಬೇಕು, ಎನ್ ಪಿಎಸ್ ಪದ್ದತಿ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಜಿಡಿಎಸ್ ನೌಕರರಿಗೆ ವೇತನ ಹೆಚ್ಚಳ ಮಾಡಬೇಕು. ಬ್ರಾಂಚ್ ಆಫೀಸ್ ನಲ್ಲಿ ಇರುವ ನೆಟ್ ವರ್ಕ್ ಸಮಸ್ಯೆ ಸರಿಪಡಿಸಬೇಕು. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಅಂಚೆ ನೌಕರರ ಸಂಘದ ಸಹ ಕಾರ್ಯದರ್ಶಿ ವಿಜಯ್ ಕುಮಾರ್ , ದಸ್ತಗೀರ್ ಮುಂತಾದವರು ಉಪಸ್ಥಿತರಿದರು.  ವರದಿ: ಆನಂದ ತಿಪಟೂರು…

Read More

ತಿಪಟೂರು: ತಾಲೂಕು ಹಾಲು ಉತ್ಪಾದಕರ ಸಂಘಗಳ ಸಂಖ್ಯೆ 145 ಏರಿಕೆಯಾಗಿದ್ದು ಪ್ರತಿನಿತ್ಯ 1.30 ಲಕ್ಷ ಲೀಟರ್ ಹಾಲು ತುಮಕೂರಿಗೆ ಸರಬರಾಜು ಆಗುತ್ತಿದೆ ಒಕ್ಕೂಟದಿಂದ ನಿತ್ಯ 1.30 ಲಕ್ಷ ಲೀಟರ್ ಮುಂಬೈಗೆ ರವಾನೆಯಾಗುತ್ತಿದೆ ಎಂದು ಕೆಎಂಎಫ್ ಹಾಗೂ ತುಮುಲ ನಿರ್ದೇಶಕ ಎಂ.ಪಿ. ಪ್ರಕಾಶ್ ತಿಳಿಸಿದರು. ಜಿಲ್ಲಾ ಒಕ್ಕೂಟಕ್ಕೆ ಐದು ಕೋಟಿ ರೂಪಾಯಿ ಲಾಭ ಬಂದಿದೆ. ನಂತರ ಪ್ರತಿ ಲೀಟರ್ ಗೆ ರೈತರಿಗೆ 2.5 ರೂ. ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಕೊರೊನಾದಿಂದ ಮೃತಪಟ್ಟ ರೈತರಿಗೆ 1 ಲಕ್ಷ ರೂ. ಪರಿಹಾರವನ್ನು ನೀಡಲಾಗಿದೆ ಎಂದು ಅವರು ಹೇಳಿದರು. ಇನ್ನೂ ಹೊನ್ನವಳ್ಳಿ ತುಮುಲ್ ಕಲ್ಯಾಣ ಟ್ರಸ್ಟ್ ವತಿಯಿಂದ ತಿಪಟೂರು ತಾಲೂಕು ಹಾಲು ಉತ್ಪಾದಕ ಸಂಘಗಳ ರೈತರಿಗೆ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಮಾರ್ಚ್ 31ರಂದು ಬೃಹತ್ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಇದೇ ವೇಳೆ ಅವರು ಇದೇ ವೇಳೆ ತಿಳಿಸಿದರು. ಆರೋಗ್ಯ ಶಿಬಿರವನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಗ್ಯ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ತುಮುಲ…

Read More

ಬೆಂಗಳೂರಿನ ಟಿನ್ ಫ್ಯಾಕ್ಟ್ರಿ ಜಂಕ್ಷನ್‍ನಿಂದ ಹೊಸಕೋಟೆಯ ಕಾಟನ್‍ನಲ್ಲೂರುವರೆಗೆ ಎತ್ತರಿಸಿದ ಮೇಲ್ಸೇತುವೆ ಸಂಬಂಧ ಎರಡುಮೂರು ದಿನಗಳಲ್ಲಿ ಸಚಿವರು, ಶಾಸಕರು, ಅಕಾರಿಗಳನ್ನೊಳಗೊಂಡ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ವಿಧಾನಸಭೆಗೆ ತಿಳಿಸಿದರು. 2022-23ನೇ ಸಾಲಿನ ಲೋಕೋಪಯೋಗಿ ಇಲಾಖೆ ಅನುದಾನ ಬೇಡಿಕೆಗಳ ಮೇಲಿನ ನಡೆದ ಚರ್ಚೆಗೆ ಉತ್ತರಿಸಿದ ಅವರು, ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜು, ಕೃಷ್ಣಭೈರೇಗೌಡ ಅವರನ್ನು ಒಳಗೊಂಡಂತೆ ಸಭೆ ನಡೆಸಲಾಗುವುದು. ಅಗತ್ಯಬಿದ್ದರೆ ಮುಖ್ಯಮಂತ್ರಿಯೊಂದಿಗೆ ಕೇಂದ್ರ ಸಚಿವರ ಭೇಟಿ ಮಾಡಲಾಗುವುದು ಎಂದರು. ಇದಕ್ಕೂ ಮುನ್ನ ಮಾತನಾಡಿದ ಶಾಸಕ ಕೃಷ್ಣಭೈರೇಗೌಡ ಮಾತನಾಡಿ, ಹಳೆ ಮದ್ರಾಸ್ ರಸ್ತೆಯಲ್ಲಿ ಮೇಲ್ಸೇತುವೆ ಇಲ್ಲ. ಟಿನ್‍ಫ್ಯಾಕ್ಟ್ರಿ ಬಳಿಯಿಂದ ಎಲಿವೆಟೆಡ್ ಫ್ಲೈಓವರ್ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ದನಿಗೂಡಿಸಿದ ಭೈರತಿ ಬಸವರಾಜ್, ಇಂದಿರಾ ನಗರದ ಬಿಡಿಎ ಕಾಂಪ್ಲೆಕ್ಸ್ ಬಳಿಯಿಂದಲೇ ನಿರ್ಮಾಣ ಮಾಡಬೇಕಾಗುತ್ತದೆ. ಮಧ್ಯಪ್ರವೇಶಿಸಿದ ಜೆಡಿಎಸ್ ಬಂಡೆಪ್ಪ ಕಾಶಂಪರ್, ಇಂದು ಕೆಂಪೇಗೌಡ ಏರ್‍ಪೆಪೋಟ್‍ನಿಂದ ವಿಧಾನಸೌಧಕ್ಕೆ ಬರಲು 1 ಗಂಟೆ 45 ನಿಮಿಷ ಆಯ್ತು. ಟ್ರಾಫಿಕ್ ಸಮಸ್ಯೆ ಬಗೆಹರಿಸಿ ಎಂದರು. ವರದಿ:…

Read More

ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾಜ್ ಟೈಟಾನ್ಸ್ ಐಪಿಎಲ್ ಟೂರ್ನಿಯಲ್ಲಿ ಗೆಲುವಿನ ಜರ್ನಿ ಆರಂಭಿಸಿದೆ. ರಾಹುಲ್ ತೇವಾಟಿಯಾ ಅಬ್ಬರದ ಬ್ಯಾಟಿಂಗ್ ಸಹಾಯದಿಂದ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ 4ನೇ ಪಂದ್ಯದಲ್ಲಿ ಗುಜರಾತ್ ಚೊಚ್ಚಲ ಗೆಲುವಿನ ನಗೆ ಬೀರಿತು. ಟಾಸ್ ಗೆದ್ದ ಗುಜರಾತ್ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಲಕ್ನೋ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಸುಲಭ ಗೆಲುವಿನ ಗುರಿ ಬೆನ್ನತ್ತಿದ ಗುಜರಾತ್ ಆರಂಭದಲ್ಲಿ ಆಘಾತ ಅನುಭವಿಸಿದರೂ ನಂತರ ಚೇತರಿಸಿಕೊಂಡು ಜಯಭೇರಿ ಭಾರಿಸಿತು. ಟಾಸ್ ಸೋತರೂ ಲಕ್ನೋ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಮೊಹಮ್ಮದ್ ಶಮಿ ಎಸೆದ ಮೊದಲ ಎಸೆತದಲ್ಲೇ ಕೆ.ಎಲ್.ರಾಹುಲ್ ಪೆವಿಲಿಯನ್ ಸೇರಿದರು. 3ನೇ ಓವರ್​ನ 2ನೇ ಎಸೆತದಲ್ಲಿ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್(7) ಕ್ಲೀನ್ ಬೌಲ್ಡ್ ಆದರು. ರಾಹುಲ್ ಬಳಿಕ…

Read More

ಮಂಡ್ಯ: ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಕೊಂಡೋತ್ಸವ ನೋಡುವ ಸಲುವಾಗಿ ಮನೆಯ ತಾರಸಿ ಏರಿದ್ದ ವೇಳೆ ಮನೆಯ ತಾರಸಿ ಕುಸಿದು ಇಬ್ಬರು ಮಹಿಳೆಯರು ಮೃತಪಟ್ಟು 50 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಹುಲಿಗೆರೆಪುರ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಬಸವೇಶ್ಚರ ದೇವರ ಕೊಂಡೋತ್ಸವ (Basaveshwara Devara Konda) ನೋಡಲು ದೇವಸ್ಥಾನ ಮುಂದೆ ಇದ್ದ ಮಾದೇಗೌಡರ ಮನೆಯ ತಾರಸಿ ಮೇಲೆ 100 ಕ್ಕೂ ಜನರು ಜಮಾಯಿಸಿದ್ದರು. ಈ ವೇಳೆ ತಾರಸಿ ಕುಸಿದಿದ್ದು, ಅದೇ ಗ್ರಾಮದ ಸರಸ್ವತಿ ಹಾಗೂ ಪುಟ್ಟಲಿಂಗಮ್ಮ ಎನ್ನುವ ಇಬ್ಬರು ಮಹಿಳೆಯರು ತಾರಸಿ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಈ ಘಟನೆಯಲ್ಲಿ ತಾರಸಿ ಮೇಲಿದ್ದ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಮದ್ದೂರಿನ ಆಸ್ಪತ್ರೆಗೆ (Hospital) ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಇದಲ್ಲದೆ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ‌. ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ…

Read More

ಬೆಂಗಳೂರು : ಟೀಮ್ ಭಾಸ್ಕರ್ ರಾವ್ ತಂಡದ ವತಿಯಿಂದ ಕೋವಿಡ್ ಕಾಲಘಟ್ಟದಲ್ಲಿ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಜನರ ಜೀವ ಉಳಿಸಿದಂತಹ (covid warriors)  ಕೋವಿಡ್ ಸೇನಾನಿಗಳಿಗೆ ಪ್ರಶಂಸನ ಪತ್ರಗಳನ್ನು ಸೋಮವಾರ ವಿತರಿಸಲಾಯಿತು. ಕರ್ನಾಟಕ ರಾಜ್ಯ ರೈಲ್ವೆ ADGP, ಮಾಜಿ ಬೆಂಗಳೂರು ಪೊಲೀಸ್ ಕಮಿಷನರ್ ದಕ್ಷ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಪ್ರಶಂಸನ ಪತ್ರ  ವಿತರಿಸಿ ಮಾತನಾಡಿ,  ನಿಮ್ಮ ಸೇವೆ ಅನನ್ಯವಾದದ್ದು, ನೂರಾರು ಸಾವಿರಾರು ಜನರಲ್ಲಿ ಆತ್ಮಸ್ಥೈರ್ಯ ತುಂಬುತ್ತಾ, ತಮ್ಮ ಜೀವವನ್ನೇ ಮೂಡಿಪಾಗಿಟ್ಟು, ಜನರ ಜೀವ ಉಳಿಸಿದ್ದಾರೆ.ಇವರೆಲ್ಲರಿಂದಲೇ ಕೋವಿಡ್ ನಂತಹ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಯಿತು ಎಂದು ಹೇಳಿದರು. ಜಾತಿ, ಧರ್ಮ, ಮೇಲು, ಕೀಳು ಎಂಬ ಭಾವನೆ ಇಲ್ಲದೇ ಎಲ್ಲದಿಕ್ಕಿಂತ ಮನುಷ್ಯಧರ್ಮ ಮುಖ್ಯ ಸಹಾಯ ಮಾಡುವ ಗುಣವನ್ನು ರೂಢಿಸಿಕೊಳ್ಳಿ ಪರರ ಕಷ್ಟಗಳಿಗೆ ಸ್ಪಂದಿಸಿ ಎಂದು ಅವರು ಇದೇ ವೇಳೆ ಅವರು ಮನವಿ ಮಾಡಿಕೊಂಡರು. ಇದೇ ವೇಳೆ ನಮ್ಮ ತುಮಕೂರು ಮಾಧ್ಯಮದ ವಿಶೇಷ ವರದಿಗಾರರು, ಪತ್ರಕರ್ತರಾದ ಆಂಟೋನಿ ಅವರಿಗೂ ಪ್ರಶಂಸನ ಪತ್ರ ನೀಡಿ ಗೌರವಿಸಲಾಯಿತು.…

Read More

ತುಮಕೂರು: ನಮ್ಮ ಭಾರತೀಯ ಸಂಪ್ರದಾಯ ಮತ್ತು ಜ್ಞಾನವು ಅತ್ಯಂತ ಉತ್ಕೃಷ್ಟವಾದದ್ದು, ಜೊತೆಗೆ ವೈಜ್ಞಾನಿಕತೆಯನ್ನು ಹೊಂದಿರುವಂತಹದು, ಇಂತಹ ಉತ್ಕೃಷ್ಟವಾದ ಜ್ಞಾನವನ್ನು ಜನರಿಗೆ ತಲುಪಿಸಬೇಕು ಎಂಬ ಉದ್ದೇಶದಿಂದ ಹಾಗೂ ಈ ಭಾರತೀಯ ಸಂಸ್ಕೃತಿಯ ಅನಾವರಣಕ್ಕಾಗಿ ಒಂದು ಆಶ್ರಮವನ್ನು ಸ್ಥಾಪನೆ ಮಾಡಬೇಕು ಎನ್ನುವ ಉದ್ದೇಶದಿಂದ 21 ದಿನಗಳ ಕಾಲ ಉಪವಾಸ ಮತ್ತು ಧ್ಯಾನ ಅನುಷ್ಠಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಬಸವ ಯೋಗಿ ತಿಳಿಸಿದರು. ಮಾಚ್೯ 10 ರಿಂದ 30 ರವರಿಗೆ ನಿರಂತರವಾಗಿ 21 ದಿನಗಳ ಈ ವಿಶೇಷ ಅನುಷ್ಠಾನ ಇರುತ್ತದೆ. ಈ ಅನುಷ್ಠಾನದ ನಂತರ ಮಾಚ್೯ 31 ಮತ್ತು ಏಪ್ರಿಲ್ 1 ಮತ್ತು 2 ರಂದು ಈ 3 ದಿನಗಳ ಕಾಲ ಸಂಪೂರ್ಣ ನಿಸರ್ಗದಲ್ಲಿ ಅಗಾಧವಾದ ಬದಲಾವಣೆ ಆಗುವಂತಹದು. ಏಕೆಂದರೆ ನಮ್ಮ ಭಾರತೀಯ ಸಂಪ್ರದಾಯದ ಪ್ರಕಾರ ಯುಗಾದಿಯೇ ನಮಗೆಲ್ಲ ಹೊಸ ವಷ೯ ಅಂದು ಸಂಪೂರ್ಣ ನಿಸರ್ಗವೇ ಬದಲಾವಣೆಯನ್ನು ಹೊಂದುತ್ತಿರುವ ಸಮಯ ಅಂತಹ ಸಮಯದಲ್ಲಿ ಅತ್ಯಂತ ಉತ್ಕೃಷ್ಟವಾದ ಶಕ್ತಿ ಈ ನಿಸರ್ಗದಲ್ಲಿ ಇರುವಂತಹದು. ಹೀಗಾಗಿ ಈ…

Read More

ತುಮಕೂರು:  ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ (ರಿ) ವತಿಯಿಂದ ಇಂದು ನಗರ ವಂಚಿತ ಯುವಜನ ಸಂಪನ್ಮೂಲ ಕೇಂದ್ರದಲ್ಲಿ ಕಾರ್ಯಕಾರಿಣಿ ಸಭೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ , ಏಪ್ರಿಲ್ 14 ರಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 131ನೇ ಜಯಂತಿ  ಹಾಗೂ ಡಾ.ಬಾಬು ಜಗಜೀವನ್ ರಾಮ್ ರವರ 114ನೇ ಜಯಂತಿ ಅಂಗವಾಗಿ ಭಾರತ ಸಂವಿಧಾನ ಪೀಠಿಕೆಯನ್ನು ಮನೆಮನೆಗೂ ತಲುಪಿಸಿ ಅಂಬೇಡ್ಕರ್ ಹಬ್ಬ ಆಚರಿಸುವ ಮೂಲಕ ಪ್ರಬುದ್ಧ ಭಾರತದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸಿ ಭಾರತವನ್ನು ರಕ್ಷಿಸುವ ಕೆಲಸ ಮಾಡಬೇಕಿದೆ ಎಂದರು. ಮನೆ ಮನೆಗೆ ಸಂವಿಧಾನ ಪೀಠಿಕೆಯ ಒಂದು ಸಾವಿರ ಪ್ರತಿಯನ್ನು ನೀಡಿ ಸಂವಿಧಾನದ ಅರಿವನ್ನು ಸಾಮಾನ್ಯ ಜನರಿಗೆ ತಿಳಿಸುವ ಮೂಲಕ ಅಂಬೇಡ್ಕರ್ ಚಿಂತನೆಯನ್ನು ಈ ಅಭಿಯಾನದ ಮೂಲಕ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತಕರಕ್ಷಣಾ ಸಮಿತಿಯಿಂದ ವಿಶೇಷವಾಗಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಂದು ಬೆಳಗ್ಗೆ  ನಗರದ ಎಳ್ಳರಬಂಡೆಗೆ ಸಮಯ ಬೆಳಗ್ಗೆ 8…

Read More

ಗುಬ್ಬಿ:  ತಾಲೂಕಿನ ನಿಟ್ಟೂರು ಹೋಬಳಿಯ ಸಾಗಸಂದ್ರ  ಗ್ರಾಮದ    ಶ್ರೀ ಕೆಂಪಮ್ಮ ದೇವಿಯ ದೇವಸ್ಥಾನಕ್ಕೆ ದಲಿತ ಸಮುದಾಯದವರಿಗೆ ಪ್ರವೇಶ ನಿರಾಕರಣೆ ಮಾಡುತ್ತಿರುವ ದೇವಾಲಯದ ಅರ್ಚಕರ ವಿರುದ್ಧ ಕ್ರಮ ವಹಿಸುವಂತೆ ಗುಬ್ಬಿ ತಾಲೂಕು ದಂಡಾಧಿಕಾರಿಗಳಿಗೆ  ದಲಿತ ಸೇನೆ ಜಿಲ್ಲಾಧ್ಯಕ್ಷ ಗೂಳೂರು ಸಿದ್ದರಾಜು  ಹಾಗೂ ಮುಖಂಡರು ಮನವಿ ಸಲ್ಲಿಸಿದರು. ತಾಲೂಕು ದಂಡಾಧಿಕಾರಿಗಳಿಗೆ ಭೇಟಿಯಾಗಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ  ಅವರು, ಮುಜರಾಯಿ ಇಲಾಖೆಯ ದೇವಾಲಯಗಳಿಗೆ ಎಲ್ಲ ಜನಾಂಗದವರಿಗೂ ಮುಕ್ತ ಪ್ರವೇಶ ಕಲ್ಪಿಸಿದ್ದರೂ ದಲಿತ ಸಮುದಾಯದವರನ್ನು ಪ್ರವೇಶ ನಿರಾಕರಣೆ ಮಾಡುತ್ತಿರುವುದು ಸರಿಯಲ್ಲ. ಸಂವಿಧಾನದಡಿಯಲ್ಲಿ ಎಲ್ಲಾ ಸಾರ್ವಜನಿಕ ಸ್ಥಳಗಳಿಗೆ ಮುಕ್ತ ಪ್ರವೇಶ ಕಲ್ಪಿಸಿದ್ದರೂ ಸಹ ಉದ್ದೇಶಪೂರ್ವಕವಾಗಿ ಅಸ್ಪೃಷ್ಯತೆ ಆಚರಿಸಲಾಗುತ್ತಿದೆ.  ಸಾಗಸಂದ್ರ ಗ್ರಾಮದ ಶ್ರೀ ಕೆಂಪಮ್ಮದೇವಿ ದೇವಾಲಯದಲ್ಲಿ ಅಸ್ಪೃಶ್ಯತೆ  ಇನ್ನೂ ಜೀವಂತವಾಗಿದ್ದು,  ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಇದಾಗಿದೆ ಎಂದರು. ಇಂದು ತಾಲೂಕು ದಂಡಾಧಿಕಾರಿಗಳಿಗೆ ಘಟನೆ ಕುರಿತು ಮನವಿಯನ್ನು ಸಲ್ಲಿಸಿದ್ದು, ತಾಲ್ಲೂಕು ದಂಡಾಧಿಕಾರಿಗಳು ದಲಿತ ಸಮುದಾಯದವರಿಗೆ ದೇವಾಲಯದಲ್ಲಿ ಆಗಿರುವ ಘಟನೆಯ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದು ದೇವಾಲಯದ…

Read More