Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ತುರುವೇಕೆರೆ: ಪಟ್ಟಣದಲ್ಲಿ ಸಿ.ಐ.ಟಿ.ಯು. ಕಾರ್ಮಿಕ ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಸತೀಶ್ ನೇತೃತ್ವದಲ್ಲಿ, ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ‘ಸರ್ಕಾರಿ ಉದ್ದಿಮೆಗಳ ಖಾಸಗೀಕರಣ’ವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಬಾಲಕರ ಪ್ರಾಥಮಿಕ ಶಾಲೆಯ ಬಳಿ ಸೇರಿದ ಪ್ರತಿಭಟನಾಕಾರರು ಬಳಿಕ, ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪಾದಯಾತ್ರೆಯಲ್ಲಿ ಸಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಾಲ್ಲೂಕು ಕಚೇರಿಯ ಮುಂಭಾಗದ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿ.ಐ.ಟಿ. ಯು.ಸತೀಶ್ , ಇದೆ ತಿಂಗಳ 28 ಮತ್ತು 29 ರಂದು, ಸಿ.ಐ.ಟಿ.ಯು. ಸಂಘಟನೆಯ ಕರೆಯ ಮೇರೆಗೆ, ಸರ್ಕಾರಿ ಉದ್ದಿಮೆಗಳನ್ನು ಖಾಸಗೀಕರಣವನ್ನು ವಿರೋದಿಧಿಸಿ ದೇಶವ್ಯಾಪಿ ಮುಷ್ಕರ, ಹಮ್ಮಿಕೊಂಡಿದ್ದು ,ಇದಕ್ಕೆ ಗ್ರಾಮ ಪಂಚಾಯಿತಿ ನೌಕರರ ಸಂಘಟನೆ, ಅಕ್ಷರ ದಾಸೋಹದ , ಸಂಘಟನೆ, ಅಂಗನವಾಡಿ ನೌಕರರ ಸಂಘದ ಸಂಘಟನೆ, ಕಟ್ಟಡ ಕಾರ್ಮಿಕರ ಸಂಘಟನೆ, ರಾಜ್ಯ ರೈತ ಸಂಘಟನೆಗಳು, ವಿವಿಧ ಪ್ರಗತಿಪರ ಸಂಘಟನೆಗಳು ,ನಮಗೆ ಬೆಂಬಲಿಸಿವೆ ಎಂದರು. ಈಗಾಗಲೇ ಕೇಂದ್ರ ಸರ್ಕಾರ, ಬಿ.ಎಸ್.ಎನ್. ಎಲ್. , ಪೆಟ್ರೋಲಿಯಮ್…
ಬೆಂಗಳೂರು: ನಗರದ ಕೋರಮಂಗಲ ಪೊಲೀಸರು ಈಗ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ವಿಶಾಖಪಟ್ಟಣಂನಿಂದ ಗಾಂಜಾ ತಂದು ರಾಜಧಾನಿಯಲ್ಲಿ ಸಪ್ಲೈ ಮಾಡ್ತಿದ್ದ ಸಂದರ್ಭದಲ್ಲಿ ಪೋಲೀಸರ ಕೈಗೆ ಸಿಕ್ಕಿದ್ದಾರೆ ಎನ್ನಲಾಗಿದೆ. ನಗರದ ಕೋರಮಂಗಲ ವ್ಯಾಪ್ತಿಯ ಪೋಲಿಸ್ ಠಾಣೆಯಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 40 ಲಕ್ಷ ಮೌಲ್ಯದ 102 ಕೆ.ಜಿ 200 ಗ್ರಾಂ ಗಾಂಜಾ, ಬೈಕ್ ಜಪ್ತಿ ಮಾಡಲಾಗಿದೆ. ಬಂಧಿತ ವ್ಯಕ್ತಿಗಳನ್ನು ರಮೇಶ್, ಮಂಜುನಾಥ್, ಅಭಿಲಾಶ್, ಮೂರ್ತಿ,ಶಿವರಾಜ್ ಎಂದು ತಿಳಿದುಬಂದಿದೆ.ಈಗ ಬಂಧಿತರ ವಿರುದ್ಧ ಕೋರಮಂಗಲ, ಹೆಚ್ ಎಸ್ ಆರ್ ಲೇಔಟ್, ಬೇಗೂರು, ಕೋಣನಕುಂಟೆ, ಕೆಆರ್ ಪುರಂ ಠಾಣೆಗಳಲ್ಲಿ ಗಾಂಜಾ, ಕೊಲೆ ಯತ್ನ, ಸರಗಳ್ಳತನ ಪ್ರಕರಣಗಳು ದಾಖಲಾಗಿವೆ. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಚೆನ್ನೈ : ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (DMK) ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿರುದ್ಧ ಮಾನಹಾನಿಕರ, ಸುಳ್ಳು, ಹಗರಣ ಮತ್ತು ನೀಚ ಹೇಳಿಕೆಗಳನ್ನು ನೀಡಿದ ರಾಜ್ಯ ಬಿಜೆಪಿ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈಗೆ ಶನಿವಾರ ಲೀಗಲ್ ನೋಟಿಸ್ ನೀಡಿದೆ. ನೋಟಿಸ್ ಅನ್ನು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್ಎಸ್ ಭಾರತಿ ನೀಡಿದ್ದಾರೆ, ಅಣ್ಣಾಮಲೈ(K Annamalai) 24 ಗಂಟೆಗಳ ಒಳಗೆ ಸಾರ್ವಜನಿಕ ಕ್ಷಮೆಯಾಚಿಸಬೇಕು, ಇಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ ಮತ್ತು ನಷ್ಟವನ್ನು ಪಾವತಿಸದಿದ್ದರೆ ಅವರ ವಿರುದ್ಧ “ಸೂಕ್ತ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಲಾಗುತ್ತದೆ” ಎಂದು ತಿಳಿಸಲಾಗಿದೆ. ಎರಡು ದಿನಗಳಲ್ಲಿ ಸಿಎಂ ಸಾರ್ವಜನಿಕ ಪರಿಹಾರ ನಿಧಿಗೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೀಡಬೇಕು ಎಂದು ತಿಳಿಸಿದ್ದಾರೆ. ದುಬೈ ಎಕ್ಸ್ಪೋ 2020(Dubai Expo 2020) ರಲ್ಲಿ ಭಾಗವಹಿಸಲು ಮತ್ತು ತಮಿಳುನಾಡಿನಲ್ಲಿ ಹೂಡಿಕೆ ಮಾಡಲು ಗಲ್ಫ್ ರಾಷ್ಟ್ರದ ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಲು ಸ್ಟಾಲಿನ್ ಪ್ರಸ್ತುತ ಯುಎಇಗೆ ಅಧಿಕೃತ ಭೇಟಿಯಲ್ಲಿದ್ದಾರೆ. ಮಾರ್ಚ್ 24 ಮತ್ತು 25…
ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನವನ್ನು ಸರ್ಕಾರ ಘೋಷಿಸಿದೆ. ಅವರ ಕುಟುಂಬದವರ ಬಳಿ ಮಾತನಾಡಿ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ನಿಗದಿ ಮಾಡಲಾಗುವುದು. ಪುನೀತ್ ರಾಜ್ಕುಮಾರ್ ಅವರ ಪ್ರತಿಭೆ ಹಾಗೂ ಮಾನವೀಯ ಗುಣಗಳಿಗೆ ತಕ್ಕ ರೀತಿಯಲ್ಲಿ ಅರ್ಥಪೂರ್ಣವಾಗಿ ದೊಡ್ಡ ಪ್ರಮಾಣದಲ್ಲಿ ಕರ್ನಾಟಕ ರತ್ನ ನೀಡಲು ಚಿಂತನೆ ಮಾಡಿದ್ದು, ತಯಾರಿಯನ್ನೂ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು. ಅವರು ಇಂದು ಬಿಬಿಎಂಪಿ ನೌಕರರ ಕನ್ನಡ ಸಂಘ ಆಯೋಜಿಸಿದ್ದ ಡಾ: ರಾಜ್ ಕುಮಾರ್ ಗಾಜಿನ ಮನೆ, ಬಿಬಿಎಂಪಿ ಕಚೇರಿ ಆವರಣದಲ್ಲಿ ಡಾ: ಪುನೀತ್ ರಾಜ್ಕುಮಾರ್ ಅವರ ಕಂಚಿನ ಪುತ್ಥಳಿಯ ಅನಾವರಣ ಹಾಗೂ ಗಂಧದಗುಡಿ ಉದ್ಯಾನವನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪುನೀತ್ ರಾಜ್ಕುಮಾರ್ ನಿಜವಾಗಿಯೂ ನಮ್ಮ ಕರ್ನಾಟಕದ ರತ್ನ (Karnataka Ratna award ).ಈ ರತ್ನದ ಪುತ್ಥಳಿಯನ್ನು ಬಿಬಿಎಂಪಿ ಕನ್ನಡ ನೌಕರರ ಸಂಘ ಅನಾವರಣ ಮಾಡಿರುವುದು ನಿಜವಾಗಿಯೂ ಪುನೀತ್ ರಾಜ್ ಕುಮಾರ್ ಅವರ ಬಗೆಗಿನ ಪ್ರೀತಿ ಬಹಳ ದೊಡ್ಡದು. ಅದರಲ್ಲಿ…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಆನಡುಗು ಗ್ರಾಮದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕರಾದ ಎಂ.ಜಿ. ಶಿವಶಂಕರ್ ರವರ ಮಾಯಸಂದ್ರ ಗ್ರಾಮದಲ್ಲಿನ ತಮ್ಮ ಸ್ವಗೃಹದ ಅಂಗಳದಲ್ಲಿ 7 ಅಡಿ ಎತ್ತರದ, ಎರಡೂವರೆ ವರ್ಷದ, ಅಪರೂಪದ “ತುಳಸಿ ಗಿಡ” ಬೆಳೆದಿದ್ದು, ಗ್ರಾಮದ ಸಾರ್ವಜನಿಕರಲ್ಲಿ ಆಕರ್ಷಣೀಯವಾಗಿದೆ. ಸುಮಾರು ಎರಡೂವರೆ ವರ್ಷ ಪೂರೈಸಿರುವ ತುಳಸಿ ಗಿಡವು ದಿನೇ-ದಿನೇ ಅತಿ ಉದ್ದವಾಗಿ ಬೆಳೆಯುತ್ತಿರುವುದು, ಆಶ್ಚರ್ಯಕರ ಸಂಗತಿಯಾಗಿದೆ. ತುಳಸಿ ಗಿಡದ ಪಾಲನೆ -ಪೋಷಣೆಗಾಗಿ ಯಾವುದೇ ಗೊಬ್ಬರಗಳು ಅಥಾವ ಕೆಮಿಕಲ್ ಗಳನ್ನು ಬಳಸದೆ, ನೈಸರ್ಗಿಕವಾಗಿ ತುಳಸಿ ಗಿಡವು ಬೆಳೆಯುತ್ತಿದೆ ಎಂದು ಶಿಕ್ಷಕರಾದ ಎಂ.ಜಿ.ಶಿವಶಂಕರ್ ಅವರ ಪತ್ನಿ ಶ್ರೀಮತಿ ನೇತ್ರಾವತಿ ತಿಳಿಸಿದ್ದಾರೆ. ಶ್ರೀ ಕಾಲಭೈರವೇಶ್ವರ ಸ್ವಾಮಿಯನ್ನು ಸದಾ ನೆನೆಯುತ್ತ, ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಅವರ, ಸ್ಮರಣೆಯೊಂದಿಗೆ, ಸರ್ವೇ ಜನ: ಸುಖಿನೋ ಭವಂತು, ಎಂದು ಮನೆಯ ಅಂಗಳದಲ್ಲಿರುವ ತುಳಸಿ ಗಿಡಕ್ಕೆ ಹಾಗೂ ಭಗವಂತನಿಗೆ ಪ್ರತಿನಿತ್ಯ ಪೂಜೆ ಸಲ್ಲಿಸಿ ಪ್ರಾರ್ಥಿಸುವುದಾಗಿ, ಮೂಲತಃ ಮಾವಿನಕೆರೆಯ ಲಕ್ಷ್ಮಮ್ಮ ಗಂಗಾಧರಯ್ಯ ನವರ ಪುತ್ರ ಶಿಕ್ಷಕರಾದ ಎಂ.ಜಿ. ಶಿವಶಂಕರ್…
ನರಸೀಪುರ: ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಪಟ್ಟಣದ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ತಾಲ್ಲೂಕಿನ ಅಕ್ಕೂರು ಗ್ರಾಮದ ಕೆಂಪರಾಜು ಎಂಬುವರ ಪುತ್ರಿ ಅನುಶ್ರೀ(16) ಎಂಬಾಕೆಯೇ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದು ಸಾವನ್ನಪ್ಪಿದ ವಿದ್ಯಾರ್ಥಿನಿ. ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಇಂದು ಪಟ್ಟಣದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಿದ್ದಳು. ತಾನು ಪರೀಕ್ಷೆ ಬರೆಯಬೇಕಾಗಿದ್ದ ಕೇಂದ್ರಕ್ಕೆ ಹಾಜರಾಗಬೇಕಾದ ಆಕೆ ಗೊಂದಲ ಮಾಡಿಕೊಂಡು ಪಕ್ಕದಲ್ಲೇ ಇದ್ದ ಶಿವಾನಂದ ಶರ್ಮ ಆಂಗ್ಲ ಮಾಧ್ಯಮ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಮುಂದಾಗಿ ಸುಮಾರು ಹದಿನೈದು ನಿಮಿಷಗಳ ಕಾಲ ಪರೀಕ್ಷೆ ಬರೆದಿದ್ದಳು ಎನ್ನಲಾಗಿದೆ. ಆದರೆ ಆಕೆ ಕುಳಿತು ಪರೀಕ್ಷೆ ಬರೆಯುತ್ತಿದ್ದ ಹಾಲ್ ಟಿಕೆಟ್ ನಂಬರ್ ವಿದ್ಯಾರ್ಥಿಯೊಬ್ಬರದ್ದಾಗಿದ್ದು, ಇದನ್ನು ಗಮನಿಸಿದ ಪರೀಕ್ಷಾ ಮೇಲ್ವಿಚಾರಕರು ಆಕೆಗೆ ಮನವರಿಕೆ ಮಾಡಿ ಪಕ್ಕದ ಸೆಂಟರ್ ಕರೆದೊಯ್ಯುತ್ತಿದ್ದ ಸಂಧರ್ಭ…
ಮುಂಬೈ: ಇಲ್ಲಿನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಐಪಿಎಲ್ (Indian Premier League 2022) ಟೂರ್ನಿಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಪಂಜಾಬ್ ಕಿಂಗ್ಸ್ ತಂಡವು ಬೆಂಗಳೂರು ತಂಡವನ್ನು 20 ಓವರ್ ಗಳಲ್ಲಿ ಕೇವಲ ಎರಡು ವಿಕೆಟ್ ಪಡೆಯುವ ಮೂಲಕ 205 ರನ್ ಗಳಿಗೆ ನಿಯಂತ್ರಿಸಿತು. ಬೆಂಗಳೂರು ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ ದುಫ್ಲೆಸಿಸ್ ನಾಯಕನ ಆಟವನ್ನು ಆಡಿದರು.ಕೇವಲ 57 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಏಳು ಸಿಕ್ಸರ್ ಗಳ ನೆರವಿನಿಂದ 88 ರನ್ ಗಳನ್ನು ಗಳಿಸಿದರು. ಇದಾದ ನಂತರ ಅನುಜ್ ರಾವತ್ 21 ರನ್ ಗಳಿಸಿ ಔಟಾದಾಗ ಕ್ರೀಸ್ ಗೆ ಬಂದಂತಹ ಕೊಹ್ಲಿ ಹಾಗೂ ಕಾರ್ತಿಕ್ ಕ್ರಮವಾಗಿ 41 ಹಾಗೂ 32 ರನ್ ಗಳಿಸುವ ಮೂಲಕ ತಂಡದ ಮೊತ್ತವು 200 ರ ಗಡಿಯನ್ನು ದಾಟಲು ನೆರವಾದರು. ರಾಯಲ್ ಚಾಲೆಂಜರ್ಸ್…
ಬೆಂಗಳೂರು: 1970 ಮತ್ತು 80ರ ದಶಕದಲ್ಲಿ ಕನ್ನಡ ಚಿತ್ರರಂಗವನ್ನು ಆಳಿದ ನಟಿ ಮಂಜುಳ ಬದುಕಿದ್ದು ಕೇವಲ 34 ವರ್ಷ ಮಾತ್ರ. ಪ್ರತಿಭಾವಂತ ನಟಿ ಮಂಜುಳ ಇಲ್ಲ ಅನ್ನೋದನ್ನಇಂದಿಗೂ ನಂಬೋದಕ್ಕೆ ಆಗುತ್ತಿಲ್ಲ. ಅವರ ಸಾವು ಆಕಸ್ಮಿಕ ಅಲ್ಲ, ಆತ್ಮಹತ್ಯೆ ಅನ್ನೋ ಮಾತು ಮತ್ತೇ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಇಂಟ್ರಸ್ಟಿಂಗ್ ವಿಚಾರ ನಿಮ್ಮ ಮುಂದೆ. ‘ಸಂಪತ್ತಿಗೆ ಸವಾಲ್’, ‘ಎರಡು ಕನಸು’, ‘ಬೆಸುಗೆ’, ‘ಭಕ್ತ ಕುಂಬಾರ’, ‘ಮೂರೂವರೆ ವಜ್ರಗಳು’, ‘ಮಯೂರ’, ‘ದಾರಿ ತಪ್ಪಿದ ಮಗ’, ‘ನೀ ನನ್ನ ಗೆಲ್ಲಲಾರೆ’, ‘ತಾಯಿಗಿಂತ ದೇವರಿಲ್ಲ’, ‘ಎರಡು ಮುಖ’, ‘ಯಾರ ಸಾಕ್ಷಿ?’ ಈ ಸಿನಿಮಾಗಳನ್ನು ಯಾರು ನೋಡಿಲ್ಲ ಹೇಳಿ. ಪ್ರತಿಯೊಬ್ಬರೂ ಕೂಡ ಹಂಡ್ರೆಡ್ ಪರ್ಸೆಂಟ್ ನೋಡರ್ತೀರಿ. ಯಾಕಂದ್ರೆ ಇವೆಲ್ಲವೂ ನಟಿ ಮಂಜುಳ ಅವರು ಮುಖ್ಯಭೂಮಿಕೆಯಲ್ಲಿ ಅಭಿನಯಿರೋ ಆಗಿನ ಸೂಪರ್ ಡೂಪರ್ ಹಿಟ್ ಸಿನಿಮಾಗಳು. ಸುಮಾರು 54ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ನಟಿ ಮಂಜುಳ ಅವರ ಜೀವನವೇ ರೋಚಕ. ಏಕೆಂದರೆ ಸಣ್ಣ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ನಟಿ ಮಂಜುಳ…
ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಇನ್ನು ಕಳೆದ 7 ದಿನಗಳಲ್ಲಿ 6 ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳವಾಗಿದ್ದು, ಒಟ್ಟು 4 ರೂಪಾಯಿ 10 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ಪೆಟ್ರೋಲ್ ಡೀಸೆಲ್ ದರ ನೂರರ ಗಡಿ ಮುಟ್ಟುತ್ತಿದೆ. ಸೋಮವಾರ ಬೆಳಗ್ಗೆಯಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 30 ಪೈಸೆ ಹಾಗೂ ಡೀಸೆಲ್ ಬೆಲೆ 35 ಪೈಸೆ ಏರಿಕೆಯಾಗಿದೆ. ಈ ಏರಿಕೆ ಇಂದು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬಂದಿದೆ. ಇದಾದ ಬಳಿಕ ಇಂದು ಪೆಟ್ರೋಲ್ ಬೆಲೆ ಲೀಟರ್ ಗೆ 99.41 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 90.77 ರೂ.ಗೆ ಏರಿಕೆಯಾಗಿದೆ. ದೇಶದಲ್ಲಿ ಮಾರ್ಚ್ 22 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಒಂದು ವಾರದಲ್ಲಿ ತೈಲ ಬೆಲೆ 4.10 ರೂ. ಹೆಚ್ಚಳಗೊಂಡಿದೆ. ಆರ್ಥಿಕ ತಜ್ಞರ ಪ್ರಕಾರ ರಷ್ಯಾ-ಉಕ್ರೇನ್ ಯುದ್ಧವು ಕೊನೆಗೊಳ್ಳುವವರೆಗೆ, ಈ ಬೆಳವಣಿಗೆಯು ಇದೇ ರೀತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ನಂಬಲಾಗಿದೆ. ಸಾರ್ವಜನಿಕ…
ತಿಪಟೂರು: ಅತಿ ಹೆಚ್ಚು ವಿದ್ಯಾಭ್ಯಾಸ ಮಾಡಿದವರು ತಂದೆ ತಾಯಂದಿರ ನಿರ್ಲಕ್ಷ ಮಾಡಿ ಪಾಲನೆ-ಪೋಷಣೆ ಮಾಡುವುದನ್ನು ಬಿಟ್ಟು ದುಬಾರಿ ನಾಯಿಗಳ ಪಾಲನೆ-ಪೋಷಣೆ ಮಾಡುವತ್ತ ಜಗತ್ತು ಮಾರ್ಪಾಡು ಆಗುತ್ತಿದೆ ಎಂದು ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ ಅವರು ಕಳವಳ ವ್ಯಕ್ತಪಡಿಸಿದರು. ನಗರದ ಗೊರಗೊಂಡನಹಳ್ಳಿ ಕುಪ್ಪೂರು ತಮ್ಮಡಿಹಳ್ಳಿ ಅಭಿನವ ಮಲ್ಲಿಕಾರ್ಜುನಾ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡ ಅಭಿನವ ಸದನ ಕಟ್ಟಡದ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಜಗತ್ತಿನಲ್ಲಿ ಅಶಾಂತಿ ಅಧರ್ಮ ತಾಂಡವಾಡುತ್ತಿದ್ದು, ಒಂದು ಅಣುಬಾಂಬ್ ಹಾಕಿದರೆ ಇಡೀ ವಿಶ್ವವೇ ಸರ್ವನಾಶ ಆಗುತ್ತದೆ. ಇಡೀ ವಿಶ್ವವೇ ಮನುಕುಲ ಜಗತ್ತು ಶಾಂತಿ ನೆಮ್ಮದಿಯಿಂದ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾವಂತರು ಯುವಕರು ತಮ್ಮ ತಂದೆ-ತಾಯಿ ನಿರ್ಲಕ್ಷ ಮಾಡುತ್ತಿದ್ದು, ವಿದ್ಯೆಯ ಜೊತೆಗೆ ಅವರಿಗೆ ಸಂಸ್ಕಾರವನ್ನೂ ಕೊಡಬೇಕು. ಸಂಸ್ಕಾರ ಕೊರತೆಯಿಂದಾಗಿ ಮಕ್ಕಳು ತಂದೆತಾಯಿಯನ್ನು ನಿರ್ಲಕ್ಷ ಮಾಡುತ್ತಿದ್ದಾರೆ. ಮಠ ಮಾನ್ಯಗಳಿಗಿಂತ ಹೆತ್ತ ತಂದೆ-ತಾಯಿಗಳೇ ದೇವರು. ತಂದೆ ತಾಯಿಯವರನ್ನು ಅನಾಥಾಶ್ರಮಗಳಿಗೆ ಕಳುಹಿಸಿ ಮಠಮಾನ್ಯಗಳಿಗೆ ಬಂದು ಕಾಲಿಗೆ ಬೀಳುವುದು ಬಿಟ್ಟು ತಂದೆ ತಾಯಿಯವರನ್ನು ಪತಿ ಜಾಗೃತೆಯಿಂದ…