Subscribe to Updates
Get the latest creative news from FooBar about art, design and business.
- ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
- ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
- ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
- ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ: 201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
- ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
- ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
- ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
- ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
Author: admin
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಬೆಳಗ್ಗೆ 7 ಗಂಟೆಯಿಂದ 7.30ರೊಳಗೆ ಭೂಕಂಪನದ ಅನುಭವವಾಗಿದ್ದು, ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಉತ್ತರ, ಈಶಾನ್ಯ ಭಾಗದ 70 ಕಿ.ಮೀ. ದೂರದಲ್ಲಿ 11 ಕಿ.ಮೀ. ಆಳದಲ್ಲಿ ಭೂಕಂಪನ ಉಂಟಾಗಿದೆ’ ಎಂದು ಎನ್ಎಸ್ಸಿ ಟ್ವೀಟ್ ಮಾಡಿದೆ. ಇದಾಗಿ ಐದು ನಿಮಿಷದಲ್ಲಿಯೇ ಮತ್ತೊಮ್ಮೆ ಭೂಕಂಪನ ಉಂಟಾಗಿದ್ದು, ಈ ಬಾರಿ ತೀವ್ರತೆ ಕೊಂಚ ಹೆಚ್ಚಿತ್ತು. ಬೆಂಗಳೂರು ಉತ್ತರ- ಈಶಾನ್ಯ ಭಾಗದ 66 ಕಿ.ಮೀ. ದೂರದಲ್ಲಿ 23 ಕಿ.ಮೀ. ಆಳದಲ್ಲಿ ಬೆಳಿಗ್ಗೆ 7.14ರ ಸುಮಾರಿಗೆ 3.3 ತೀವ್ರತೆಯಲ್ಲಿ ಭೂಮಿ ನಡುಗಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ತುಮಕೂರು: ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಚಿತ್ರಕಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು “ಅಂತಿಮ ಆಯ್ಕೆಪಟ್ಟಿ”ಯನ್ನು ಜರೂರಾಗಿ ಪ್ರಕಟಿಸುವ ಮೂಲಕ, ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವಂತೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘ ಮನವಿ ಮಾಡಿಕೊಂಡಿದೆ. ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ರಾಜ್ಯ ಸರ್ಕಾರದ ಒಂದು ಅಂಗಸಂಸ್ಥೆಯಾದ “ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ”ವು ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ 2016ರಲ್ಲಿ ಚಿತ್ರಕಲಾ ಪದವೀಧರರಿಗೆ 230, ಚಿತ್ರಕಲಾ ಡಿಪ್ಲೋಮಾದವರಿಗೆ 230, ಒಟ್ಟು 460 ಚಿತ್ರಕಲಾ ಶಿಕ್ಷಕರ ಹುದ್ದೆಗೆ ಕರ್ನಾಟಕ ಲೋಕಸೇವಾ ಆಯೋಗ ದ ಮೂಲಕ ಅರ್ಜಿ ಯನ್ನು ಕರೆಯಲಾಗಿತ್ತು. ಅರ್ಜಿಗಳನ್ನು ಸ್ವೀಕರಿಸಿದ ನಂತರ ಅರ್ಹತಾ ಪಟ್ಟಿಯನ್ನು ಪ್ರಕಟಿಸಿ ದಾಖಲೆಗಳನ್ನು ಪರಿಶೀಲಿಸಿದ ನಂತರ ದಿನಾಂಕ:27-10-2021 ರಂದು ಚಿತ್ರಕಲಾ ಶಿಕ್ಷಕರು ಪದವೀಧರ 230 ಹುದ್ದೆಗಳ “ತಾತ್ಕಾಲಿಕ ಆಯ್ಕೆ ಪಟ್ಟಿ”ಯನ್ನು ಮತ್ತು ದಿನಾಂಕ:25-11-2021 ರಂದು ಚಿತ್ರಕಲಾ…
ಅರೆರೇ ಅಲ್ನೋಡೋ ಏಲಿಯನ್ಸು! ಅಲ್ಲ ಕಣೋ ಅದು ರಾಕೆಟ್’ಗಳು! ಅದು ಅಲ್ಲ ಕಣೋ ಯಾವ್ದೋ ದೇಶದವ್ರು ಇನ್ನೊಂದ್ ದೇಶದ ಮೇಲೆ ಬಾಂಬ್ ಹಾಕ್ತವ್ರೆ ಕಣೋ! ಹಾಗಂತೆ, ಹೀಗಂತೆ ಎಂದು ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದ ಜನತೆ ಡಿಸೆಂಬರ್ 20 ಸೋಮವಾರ ಸಂಜೆ ಈ ವಿದ್ಯಮಾನ ದ ಬಗ್ಗೆ ಏನೇನೋ ಮಾತುಕತೆಗಳು ಜನರ ಬಾಯಿಂದ ಬಾಯಿಗೆ ಹರಡಿತು. ಅಷ್ಟಲ್ಲದೇ ವಾಟ್ಸಪ್ ಫೇಸ್ಬುಕ್’ಗಳಲೆಲ್ಲಾ ಇದರ ಬಗ್ಗೆ ಬಾರಿ ಚರ್ಚೆಗಳಾಗಿತ್ತು. ಆದರೆ ವಾಸ್ತವವಾಗಿ ಇದು ಏಲಿಯನ್ಸ್ ಅಲ್ಲಾ, ರಾಕೆಟ್’ಗಳಲ್ಲ ಮತ್ತು ಬಾಂಬ್’ಗಳಂತೂ ಅಲ್ಲವೇ ಅಲ್ಲ. ಇವೆಲ್ಲಾ ಕೃತಕ ಉಪಗ್ರಹಗಳು. ಹೌದು ನೀವು ಕೇಳುತ್ತಿರುವುದು ನಿಜ. ಇವೆಲ್ಲಾ ಮಾನವ ನಿರ್ಮಿತ ಉಪಗ್ರಹಗಳು. ಐರನ್ ಮ್ಯಾನ್ ಎಂದೇ ಪ್ರಸಿದ್ಧಿಯಾಗಿರುವ ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್’ನಿಂದ ಭೂಮಿಯ ಕೆಳ ಕಕ್ಷೆಯಲ್ಲಿ ಸುತ್ತುತ್ತಿರುವ ” ಸ್ಟಾರ್ ಲಿಂಕ್ ” ಉಪಗ್ರಹಗಳು . ಈ ಉಪಗ್ರಹಗಳಲ್ಲಿ ಅಳವಡಿಸಿರುವ ಸೋಲಾರ್ ಪ್ಯಾನೆಲ್’ಗಳು ಸೂರ್ಯನ ಕಿರಣಗಳಿಗೆ ಪ್ರತಿಫಲನಗೊಂಡಾಗ ಕೆಲವು ಆಯ್ದ ಪ್ರದೇಶಗಳಲ್ಲಿ ಮಾತ್ರ…
ತಿಪಟೂರು: ಕಿಬ್ಬನಹಳ್ಳಿ ಹೋಬಳಿಯ ಹಟ್ನಾ ಗ್ರಾಮದ ದೇವತೆಗಳ ಕಾರ್ತಿಕ ಮಾಸದ ಜಾತ್ರಾ ಮಹೋತ್ಸವಕ್ಕೆ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ಶಾಂತಕುಮಾರ್ ಅವರು ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು. ಈ ಬಾರಿ ಹೆಚ್ಚು ಮಳೆಗಾಲವಾಗಿದ್ದು ಒಂದು ಕಡೆ ರಾಗಿ ಬೆಳೆದ ರೈತರು ನೆಲಕ್ಕುರುಳಿದ್ದಾರೆ. ಮುಂದಿನ ದಿನಗಳಲ್ಲಿ ದೇವರು ಒಳ್ಳೆಯ ಬೆಳೆ ಕೊಟ್ಟು ಅನ್ನದಾತರ ಕಷ್ಟ ಕಳೆಯಬೇಕಾಗಿದೆ ಎಂದು ದೇವರಲ್ಲಿ ಇದೇ ವೇಳೆ ಅವರು ಪ್ರಾರ್ಥನೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಸಮಾಜ ಸೇವಕ ಕೆ.ಟಿ.ಶಾಂತಕುಮಾರ್ ಗೊರಗೊಂಡನಹಳ್ಳಿ ಸುದರ್ಶನ್ ಸೇರಿದಂತೆ ಗ್ರಾಮಸ್ಥರು ಮುಖಂಡರು ಹಾಜರಿದ್ದರು. ವರದಿ: ಮಂಜು ಗುರುಗದಹಳ್ಳಿ
ಬೆಳಗಾವಿ: ಈ ಬಾರಿಯೂ ಹೊಸ ವರ್ಷಾಚರಣೆಗೆ ಕೊರೊನಾದ ಕರಿನೆರಳು ಬಿದ್ದಿದ್ದು, ರಾಜ್ಯದಾದ್ಯಂತ ಹೊಸ ವರ್ಷಾಚರಣೆಗೆ ಕೆಲವು ನಿರ್ಬಂಧ ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್ ನಿಯಂತ್ರಣ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಕೊವಿಡ್ ಹರಡುವಿಕೆ ತಡೆಯಲು ಸರ್ಕಾರ ಹಲವು ನಿರ್ಬಂಧಗಳನ್ನು ಹೇರುವ ಬಗ್ಗೆ ತಿಳಿಸಿದ್ದಾರೆ. ಡಿಸೆಂಬರ್ 30ರಿಂದ ಜನವರಿ 2ರವರೆಗೂ ರಾಜ್ಯದಾದ್ಯಂತ ನಿರ್ಬಂಧ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಬಹಿರಂಗ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಬಾರ್, ರೆಸ್ಟೋರೆಂಟ್ ಮತ್ತಿತರ ಸ್ಥಳಗಳಲ್ಲಿ ಒಟ್ಟು ಸಾಮರ್ಥ್ಯದ ಶೇಕಡ 50ರಷ್ಟು ಮಂದಿಗೆ ಮಾತ್ರ ಪ್ರವೇಶ ನೀಡಬೇಕು. ಅಲ್ಲಿನ ಎಲ್ಲ ಸಿಬ್ಬಂದಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವುದು ಕಡ್ಡಾಯ ಎಂದರು. ಬೆಂಗಳೂರಿನ ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಈ ಹಿಂದೆ ನಡೆಯುತ್ತಿದ್ದ ಮಾದರಿಯ ಹೊಸ ವರ್ಷಾಚರಣೆಗೆ ರಾಜ್ಯದ ಯಾವುದೇ ಭಾಗದಲ್ಲೂ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.
ಮಧುಗಿರಿ: ಬೆಳಗಾವಿಯಲ್ಲಿ ಪೊಲೀಸ್ ಜೀಪಿಗೆ ಬೆಂಕಿ ಹಚ್ಚಿರುವ ಹಾಗೂ ಕನ್ನಡ ಬಾವುಟಕ್ಕೆ ಅಪಮಾನ ಮಾಡಿರುವ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ತಾಲೂಕು ಕರುನಾಡ ವಿಜಯ ಸೇನೆ ಸಂಘಟನೆ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಂಘಟನೆಯ ನಗರ ಅಧ್ಯಕ್ಷ ರಾಜು, ಮಹಿಳಾ ಘಟಕ ಅಧ್ಯಕ್ಷೆ ಲತಾ ಗೋವಿಂದರಾಜು, ಗೌರವಾಧ್ಯಕ್ಷರಾದ ಲತಾ ನಾರಾಯಣ್, ಮಂಜುಳ ನಾಗಭೂಷಣ್, ಅಲ್ಪಸಂಖ್ಯಾತರ ಘಟಕದ ದಾಧಪೀರ್, ಯುವ ಘಟಕದ ಅಧ್ಯಕ್ಷ ಮಂಜುನಾಥ್, ಪದಾಧಿಕಾರಿಗಳಾದ ಸತೀಷ್, ಶ್ರೀನಿವಾಸ್, ದಾದು, ಅಶೋಕ, ವೀಣಾ, ಸವಿತಾ, ಶಾರದ ಹಾಗು ಮುಂತಾದವರು ಇದ್ದರು. ವರದಿ: ಅಬಿದ್ ಮಧುಗಿರಿ
ಸರಗೂರು: ಶ್ರೀ ಭೀಮಭಾಯಿ ವಿಶೇಷ ಚೇತನರ ಸ್ವಸಹಾಯ ಸಂಘ ಮತ್ತು ಮಹಾಲಿಂಗೇಶ್ವರ ಸ್ವಸಹಾಯ ಸಂಘದ ನಾಮಫಲಕವನ್ನು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಹಾಗೂ ಸಮುದಾಯದ ಸಹಕಾರದೊಂದಿಗೆ ಅನಾವರಣಗೊಳಿಸಲಾಯಿತು. ತಾಲ್ಲೂಕಿನ ಹೆಗ್ಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಲಾಪುರ ಗ್ರಾಮದ ಶಾಲೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಲೋಕೇಶ್ ಅವರು ಅಧ್ಯಕ್ಷತೆ ವಹಿಸಿದ್ದರು. ಹೆಗ್ಗನೂರು ಗ್ರಾ.ಪಂ.ನ ಉಪಾಧ್ಯಕ್ಷ ನಾಗಮ್ಮ ನಾಗೇಂದ್ರ ಅವರು, ಭೀಮಭಾಯಿ ಅಂಬೇಡ್ಕರ್ ಫೋಟೋಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ವಿವೇಕಾನಂದ ಆಸ್ಪತ್ರೆಯ ದೇವರಾಜಸ್ವಾಮಿ, ನಾಗೇಂದ್ರ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಗ್ರಾಮದ ಮುಖಂಡರು ಭಾಗಿಯಾಗಿದ್ದರು. ವರದಿ: ಚಂದ್ರಹಾದನೂರು
ತಿಪಟೂರು: ನೊಣವಿನಕೆರೆ ಹೋಬಳಿಯ ಬಜಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಳ್ಳೇಕೆರೆ ಗ್ರಾಮದಲ್ಲಿ ಇಂದು ‘ಮಹಾನಾಯಕ’ ಬ್ಯಾನರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಎನ್.ಮೂರ್ತಿ ಸ್ಥಾಪಿತ) ಸಂಘಟನೆಯ ತಾಲೂಕು ಅಧ್ಯಕ್ಷ ಅಶೋಕ್ ಗೌಡನಕಟ್ಟೆ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಕೊಟ್ಟಂತಹ ಸಂವಿಧಾನ ಬಡವರಿಗೆ ಅಸ್ಪಶ್ಯತರಿಗೆ ನಿರ್ಗತಿಕರಿಗೆ ಮಾತ್ರ ಕೊಟ್ಟಿಲ್ಲ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೊಟ್ಟಿದ್ದು, ಅದನ್ನು ನಾವೆಲ್ಲರೂ ಅರ್ಥೈಸಿಕೊಂಡು ಸಮಾಜದಲ್ಲಿ ಮುನ್ನಡೆಯಬೇಕಿದೆ ಎಂದು ಹೇಳಿದರು ತಾಲೂಕು ಉಪಾಧ್ಯಕ್ಷರಾದ ಮತಿಘಟ್ಟ ಶಿವಕುಮಾರ್ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್, ಕನಕದಾಸರು ಡಾ.ಬಾಬು ಜಗಜೀವನರಾಮ್ ಎಲ್ಲರೂ ನಮ್ಮ ದೇಶಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ ಮತ್ತು ನಮ್ಮ ದೇಶದ ಬಹುತೇಕ ಹಳ್ಳಿಗಳಲ್ಲಿ ಸವರ್ಣೀಯರಿಂದ ಶೋಷಿತವರ್ಗದ ಮೇಲೆ ಇನ್ನೂ ಅಸ್ಪೃಶ್ಯತೆ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ತಾಲೂಕು ಕಾರ್ಯದರ್ಶಿ ರಾಜು, ತಾಲೂಕು ಯುವ ಘಟಕ ಅಧ್ಯಕ್ಷರಾದ ಗುರುಗದಹಳ್ಳಿ ಮಂಜುನಾಥ್, ಪ್ರಸನ್ನ,…
ಬೆಳಗಾವಿ: ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಮಾರ್ಟ್ ಸಿಟಿ ಅನುದಾನ ಮಾತ್ರವಲ್ಲದೆ, ನಗರೋತ್ಥಾನ ಯೋಜನೆ, ಬಿಬಿಎಂಪಿ ಹಾಗೂ ಇತರ ಇಲಾಖೆಗಳ ಅನುದಾನವನ್ನು ಬಳಸಿಕೊಂಡು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅತ್ಯಾಧುನಿಕ ಸಿಗ್ನಲ್ ವ್ಯವಸ್ಥೆ, ಸುವ್ಯವಸ್ಥಿತ ಪಾರ್ಕಿಂಗ್ ಮಾತ್ರವಲ್ಲದೆ ಪೊಲೀಸರಿಗೆ ವಿಶೇಷ ಸಮಸ್ತ್ರ ಸೇರಿದಂತೆ ಸಣ್ಣಪುಟ್ಟ ವಿಷಯಗಳ ಬಗ್ಗೆಯೂ ಗಮನ ಹರಿಸಲಾಗುತ್ತಿದೆ ಎಂದರು. ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಅಭಿವೃದ್ಧಿಪಡಿಸಿ, ಇದೇ ಮಾದರಿಯಲ್ಲಿ ರಾಜ್ಯದ ಇತರ ಪ್ರಮುಖ ನಗರಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ತಿಪಟೂರು: ರಾಜ್ಯದ ನಾಡ ಧ್ವಜವಾದ ಕನ್ನಡ ಬಾವುಟವನ್ನು ಸುಟ್ಟು ಹಾಕಿರುವುದು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಮತ್ತು ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಸಗಣಿ ಎರಚಿರುವುದನ್ನು ಖಂಡಿಸಿ, ತಾಲ್ಲೂಕು ಜಯ ಕರ್ನಾಟಕ ಕರ್ನಾಟಕ ಜನಪರ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಕೃತ್ಯ ನಡೆಸಿದವರನ್ನು ತಕ್ಷಣವೇ ಗಡಿಪಾರು ಮಾಡಬೇಕು. ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯವರು ಪದೇ ಪದೇ ನಾಡದ್ರೋಹಿ ಕೆಲಸಗಳನ್ನು ಮಾಡುತ್ತಿದ್ದು, ಈ ಸಂಘಟನೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧ ಮಾಡುವಂತೆ ಹಾಗೂ ಎಂಇಎಸ್ ಸಂಘಟನೆಯ ಮುಖಂಡರ ಆಸ್ತಿಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕುವಂತೆ ಒತ್ತಾಯಿಸಿ ಉಪ ವಿಭಾಗಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಕೆ.ಎಲ್.ಪರಮೇಶ್ವರಯ್ಯ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಸಂಘಟನೆಯ ತಾಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ನಗರಸಭಾ ಸದಸ್ಯೆ ಡಾ.ಓಹೀಲಾ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಸಾರ್ಥವಳ್ಳಿ ಶಿವಕುಮಾರ್ ಮಾತನಾಡಿದರು. ಮಾಜಿ ನಗರಸಭಾ ಸದಸ್ಯ ತರಕಾರಿ ಗಂಗಾಧರ್, ಸಂಘಟನೆಯ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ.ಬಸವರಾಜ್, ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್, ಕಾರ್ಯದರ್ಶಿ ಲೋಕೇಶ್, ವಿದ್ಯಾರ್ಥಿ…