Subscribe to Updates
Get the latest creative news from FooBar about art, design and business.
- ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
- ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ: 201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
- ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
- ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
- ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
- ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
- ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
- ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
Author: admin
ತಿಪಟೂರು: ತಾಲ್ಲೂಕಿನ ಸೂಗೂರು ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ತಿಪಟೂರು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘ, ಸೂಗೂರುವತಿಯಿಂದ ಮಿಶ್ರತಳಿ ಹಸು ಮತ್ತು ಕರುಗಳ ಪ್ರದರ್ಶನ ಮತ್ತು ಉಚಿತ ಚಿಕಿತ್ಸಾ ಶಿಬಿರ ನಡೆಸಲಾಯಿತು. ಶಿಬಿರದಲ್ಲಿ ಸುಮಾರು 300 ಜಾನುವಾರುಗಳಿಗೆ ಆರೋಗ್ಯ ತಪಾಸಣೆ, ಜಂತು ನಾಶಕ ವಿತರಣೆ, ಖನಿಜ ಮಿಶ್ರಣ ವಿತರಣೆ ನಡೆಸಲಾಯಿತು. ಶಿಬಿರದಲ್ಲಿ ಪ್ರದರ್ಶಿಸಲಾದ ಅತ್ಯುತ್ತಮ ಮಿಶ್ರತಳಿ ಹಸುಗಳಿಗೆ ಮತ್ತು ಕರುಗಳಿಗೆ ಬಹುಮಾನ ವಿತರಿಸಲಾಯಿತು. ಹುಣಸೇಘಟ್ಟ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ದಕ್ಷಿಣ ಮೂರ್ತಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಶುಆಸ್ಪತ್ರೆ, ತಿಪಟೂರಿನ ಸಹಾಯಕ ನಿರ್ದೇಶಕರಾದ ಡಾ. ನಂದೀಶ್ ಕೆ.ಜೆ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು, ಪಶುಪಾಲಕರಿಗೆ ಜಾನುವಾರುಗಳಲ್ಲಿ ಲಸಿಕೆಯ ಮಹತ್ವ ಮತ್ತು ಕರುಗಳ ಪಾಲನೆ ಬಗ್ಗೆ ತಿಳಿಸಿದರು. ಸಭೆಯಲ್ಲಿ ಸೂಗೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಸೋಮಶೇಖರ್, ಕಾರ್ಯದರ್ಶಿ ಸುರೇಶ್, ಗ್ರಾಮಪಂಚಾಯತಿ ಉಪಾದ್ಯಕ್ಷರಾದ ಜಯಂತಿ, ಸದಸ್ಯರಾದ ಮಾದೇವಯ್ಯ, ಶಿವಗಂಗಮ್ಮ, ಕವಿತ, ಮುಖಂಡರಾದ ದೇವರಾಜು ಉಪಸ್ಥಿತರಿದ್ದರು. ಪಶುವೈದ್ಯರಾದ ಡಾ.ಮೃತ್ಯುಂಜಯ, ಡಾ.ಪರ್ವೇಜ್ ಪಾಶ,…
ತುಮಕೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ಶುಕ್ರವಾರ ಪ್ರತಿಭಟನೆ ನಡೆಸಿ, ತುಮಕೂರಿನ ಪ್ರಭಾರ ಜಿಲ್ಲಾಧಿಕಾರಿಯವರಿಗೆ ಮನವಿ ನೀಡಲಾಯಿತು. ರಾಜ್ಯಾಧ್ಯಕ್ಷ ರಂಗನಾಥ್ ತುಮಕೂರು, ಡಿಎಸ್ ಎಸ್ ಮುಖ್ಯಸ್ಥರಾದ ನಿಧಿಕುಮಾರ್ ಹಾಗೂ ಗೋವಿಂದಣ್ಣ ರಾಜ್ಯ ಕಾರ್ಯದರ್ಶಿ ರಮೇಶ G R , ಪ್ರಧಾನ ಕಾರ್ಯದರ್ಶಿ ರಘು ತುಮಕೂರು, ಜಿಲ್ಲಾ ಗೌರವಾಧ್ಯಕ್ಷರಾದ ರಮೇಶ್ N, ತುಮಕೂರು ಜಿಲ್ಲಾಧ್ಯಕ್ಷರಾದ ನರಸಿಂಹಮೂರ್ತಿ, ಉಪಾಧ್ಯಕ್ಷರಾದ ಜ.ಬಿ. ಗ್ರಾಮಾಂತರ ಅಧ್ಯಕ್ಷರಾದ ಗಿರಿ ಸ್ವಾಮಿ, ಕಾನೂನು ಸಲಹೆಗಾರರ ರಜನಿಕಾಂತ್, ಕೊರಟಗೆರೆ ಕಾರ್ಯದರ್ಶಿ ರಾಜಣ್ಣ, ಕುಣಿಗಲ್ ತಾಲೂಕ್ ಅಧ್ಯಕ್ಷರಾದ ವರದರಾಜ್ , ಹೆಬ್ಬೂರು ಹೋಬಳಿ ಅಧ್ಯಕ್ಷರಾದ ಚೇತನ್ ಕುಮಾರ್ ಹಾಗೂ ತುಮಕೂರು ಜಿಲ್ಲೆ ಪರಮೇಶ್ವರ್ ಯುವ ಸೈನ್ಯ ಮುಖಂಡರು ಭಾಗವಹಿಸಿದ್ದರು. ವಿಡಿಯೋ ನೋಡಿ: ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಗೌಜಗಲ್ ಗ್ರಾಮದ ಚಿಕ್ಕಬಸವಯ್ಯ ಬಿನ್ ಚನ್ನಬಸವಯ್ಯ ಎಂಬವರ ಮನೆಗೆ ದಾಳಿ ನಡೆಸಿದ ಕೊರಟಗೆರೆ ಅರಣ್ಯಧಿಕಾರಿಗಳು ಒಂದು ಕೆ.ಜಿ. 50 ಗ್ರಾಂ. ಕರಡಿಯ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಕೃತ್ಯಕ್ಕ ಬಳಸಿರುವ ಆಯುಧ ಹಾಗೂ ಕರಡಿಯ ದೇಹದ ಭಾಗಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಡಿಸೆಂಬರ್ 10ರಂದು ಬೆಳಗ್ಗೆ 9 ಗಂಟೆಯ ವೇಳೆಗೆ ಗೌಜಗಲ್ ಗ್ರಾಮದ ಚನ್ನಬಸವಯ್ಯ ಎಂಬವರ ಮನೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕರಡಿ ಮಾಂಸ ವಶಪಡಿಸಿಕೊಂಡಿದ್ದು, ಬಳಿಕ 11ರಂದು ಇಲ್ಲಿಮ ಗೌಜಕಲ್ಲು ಎಂಬಲ್ಲಿನ ಖಾಸಗಿ ಜಮೀನಿನ ಬಂಡೆಯ ಮೇಲೆ ಕರಡಿಯ ದೇಹವನ್ನು ಕತ್ತರಿಸಿರುವುದನ್ನು ಪತ್ತೆ ಹಚ್ಚಲಾಗಿದ್ದು, ಕರಡಿಯ ಇತರ ದೇಹದ ಭಾಗಗಳು ಅಲ್ಲಿ ದೊರೆತಿದ್ದು, ಕೃತ್ಯಕ್ಕೆ ಬಳಸಿರುವ ಮಚ್ಚು ಕೂಡ ಸ್ಥಳದಲ್ಲಿ ದೊರೆತಿತ್ತು. ಘಟನೆಗೆ ಸಂಬಂಧಿಸಿದಂತೆ ಚನ್ನಬಸಯ್ಯ ಸೇರಿದಂತೆ 6ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯಿದೆಯಡಿ ದೂರು ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮಕೈಗೊಳ್ಳಲಾಗಿದೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಿಮ್ಮ…
ಮಧುಗಿರಿ: ಪಟ್ಟಣದ ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ಕನ್ನಡ ಜಾಗೃತಿ ವೇದಿಕೆ, ಮಧುಗಿರಿ ತಾಲೂಕು ಘಟಕ ವತಿಯಿಂದ ನಾಡಧ್ವಜ ಕನ್ನಡ ಬಾವುಟವನ್ನು ಸುಟ್ಟ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ ಮಾತನಾಡಿ, ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂ.ಇ.ಎಸ್. ಮತ್ತು ಶಿವಸೇನೆಯ ಪುಂಡರು ನಾಡಧ್ವಜ ಕನ್ನಡ ಬಾವುಟವನ್ನು ಸುಟ್ಟಿರುತ್ತಾರೆ, ಇಂತಹ ಕಿಡಿಗೇಡಿಗಳ ಮೇಲೆ ಸರ್ಕಾರ ಕೂಡಲೇ ಕಾನೂನು ರೀತಿಯಲ್ಲಿ ಕ್ರಮಕೈಗೊಂಡು ರಾಜ್ಯದಲ್ಲಿ ಎಂ.ಇ.ಎಸ್. ಮತ್ತು ಶಿವಸೇನೆಯ ಸಂಘಟನೆಯನ್ನು ನಿಷೇಧಿಸಬೇಕು. ಈ ಕೃತ್ಯ ಎಸಗಿದ ಶಿವಸೇನೆ ಮತ್ತು ಎಂ.ಇ.ಎಸ್. ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ಇಲ್ಲವಾದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಪ್ರಸಾದ್, ಶಿವಲಿಂಗಯ್ಯ, ರಾಮಾಂಜಿನಮ್ಮ, ರತ್ನಮ್ಮ, ಐಡಿಹಳ್ಳಿ ಬಾಲು, ರಾಜು ರೋಹಿತ್, ಮಹೇಶ್, ಇಲಿಯಸ್, ಪ್ರಭು ಮತ್ತಿತರು ಹಾಜರಿದ್ದರು. ವರದಿ: ಅಬಿದ್ ಮಧುಗಿರಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ:…
ತುಮಕೂರು: ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಅದನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಕ್ಯಾತ್ಸಂದ್ರ ಟೋಲ್ ಗೇಟ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು. ನಗರದ ಊರುಕೆರೆಯ ಬಳಿಯಿಂದ ಕ್ಯಾತ್ಸಂದ್ರ ಟೋಲ್ ನ ವರೆಗೂ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಹಾಳಾಗಿದ್ದು, ವಾಹನ ಸವಾರರು ಸಂಚರಿಸಲು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದನ್ನು ಖಂಡಿಸಿ ಹಾಗೂ ಉತ್ತಮ ರಸ್ತೆ ನಿರ್ಮಾಣ ಮಾಡಿಕೊಡಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೇಮಠ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಅಡ್ಡಲಾಗಿ ಕೂತು ಪ್ರತಿಭಟನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆಮಠ್, ಪ್ರತಿ ದಿನ ಈ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆ ಅವ್ಯವಸ್ಥೆಯಿಂದ ವಾಹನ ಸವಾರರ ಗೋಳು ಹೇಳತೀರದ್ದಾಗಿದೆ. ಇದೇ…
ಬೆಳಗಾವಿ: ಎಸ್ಸಿ, ಎಸ್ಟಿ ಜನಾಂಗಗಳ ಭೂಮಿ ಹಕ್ಕು ಹೋರಾಟಕ್ಕೆ ಮರು ಚಾಲನೆ ದೊರೆತಿದ್ದು, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಹಾಗೂ ದಲಿತ ಸಂಘಗಳ ಜಂಟಿ ಆಶ್ರಯದಲ್ಲಿ, ಡಾ.ವೆಂಕಟಸ್ವಾಮಿ ನೇತೃತ್ವದಲ್ಲಿ ಬೆಳಗಾವಿ ಚಲೋ ನಡೆಯಿತು. ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪಾರ್ಕ್ ನಿಂದ ಮೆರವಣಿಗೆ ನಡೆಸಿ, ಕರ್ನಾಟಕ ಪರಿಶಿಷ್ಟ ಜಾತಿ, ಪಂಗಡಗಳ ಭೂ ಪರಭಾರೆ ನಿಷೇಧ(PTCL Act-1978) ಕಾಯ್ದೆಯ ಸಮಗ್ರ ತಿದ್ದುಪಡಿ ಮಸೂದೆ ಅಂಗೀಕರಿಸಲು ಒತ್ತಾಯಿಸಲಾಯಿತು. ಬೃಹತ್ ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು, ಭೂಮಿ ಹಕ್ಕು ಕೇಳಿ ಘೋಷಣೆ ಕೂಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಡಾ.ವೆಂಕಟಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಯಲದಬಾಗಿ ರಾಜಣ್ಣ ಮತ್ತು ಸಂಘದ ಪದಾಧಿಕಾರಿಗಳು ಭಾಗಿಯಾಗಿಯಾಗಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ದಾವಣಗೆರೆ: ಕಾರು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಎಂಸಿಸಿ ‘ಬಿ’ ಬ್ಲಾಕ್ನ ಈಜುಕೊಳದ ಬಳಿಯಲ್ಲಿ ಗುರುವಾರ ನಡೆದಿದ್ದು, ಘಟನೆ ಸಂಬಂಧ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಜರಾತ್ ನ ಉಂಬೆರ್ ಗಾವ್ ನಿವಾಸಿ ವಾಸುದೇವಾ ಮೊದಾನಿ ಅವರ ಪುತ್ರಿ 25 ವರ್ಷ ವಯಸ್ಸಿನ ಪ್ರಿಯಾಂಕ ಮೊದಾನಿ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪ್ರಿಯಾಂಕ ಗುರುವಾರ ಬೆಳಿಗ್ಗೆ ಎಂದಿನಿಂತೆ ವಸತಿನಿಲಯದಿಂದ ಕಾಲೇಜಿಗೆ ಹೊರಟಿದ್ದರು. ಪಿ.ಜಿ. ವಿದ್ಯಾರ್ಥಿ ವಿಷ್ಣು ಎಂಬುವರು ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದಿದೆ ಎಂದ ತಿಳಿದು ಬಂದಿದೆ. ಪ್ರಿಯಾಂಕ ಹೆಲ್ಮೆಟ್ ಧರಿಸಿದ್ದರು. ಆದರೆ ಅದರ ಬೆಲ್ಟ್ ಅನ್ನು ಸಿಕ್ಕಿಸಿರಲಿಲ್ಲ. ಹಾಗಾಗಿ ಕಾರು ಡಿಕ್ಕಿಯಾದ ರಭಸಕ್ಕೆ ತಲೆಯಿಂದ ಹೆಲ್ಮೆಟ್ ಹಾರಿ ಹೋಗಿದೆ. ಹೀಗಾಗಿ ಅವರ ಪ್ರಾಣವೇ ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿದಾಗ, ಈ ರಸ್ತೆಯಲ್ಲಿ ಯುವಕರು ವೇಗವಾಗಿ ಬೈಕ್, ಕಾರು ಚಲಾಯಿಸಿಕೊಂಡು ಬರುತ್ತಿದ್ದು, ಇಲ್ಲಿ…
ಅಡಿಲೇಡ್’ನಾ ಓವಲ್ ಕ್ರೀಡಾಂಗಣದಲ್ಲಿ ಪ್ರಾರಂಭವಾದ ಆಶಸ್ ಸರಣಿಯ ಎರಡನೇ ಪಂದ್ಯದ ಮೊದಲನೇ ದಿನದ ಮೊದಲ ಇನ್ನಿಂಗ್ಸ್’ನಲ್ಲಿ ಆಸ್ಟ್ರೇಲಿಯಾ ದಿನದಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 221 ರನ್ಗಳ ಸಾಧಾರಣ ಮೊತ್ತ ಗಳಿಸಿ ಸುಸ್ಥಿತಿಯಲ್ಲಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದಯಕೊಂಡ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್’ರವರ ನಿರ್ಧಾರವನ್ನು ತಪ್ಪು ಎಂದೆನಿಸುವಂತೆ ಆಸ್ಟ್ರೇಲಿಯಾ ಆರಂಭಿಕ ಆಘಾತ ಎದುರಿಸಿತು. ಆಸ್ಟ್ರೇಲಿಯಾ ತಂಡದ ಮೊತ್ತ 4 ಆಗಿದ್ದಾಗ ಬ್ಯಾಟಿಂಗ್ ಮಾಡುತ್ತಿದ್ದ ಮಾರ್ಕಸ್ ಹ್ಯಾರಿಸ್ 3 (28) ರವರು ಸ್ಟುವರ್ಟ್ ಬ್ರಾಡ್’ರವರ ಬೌಲಿಂಗ್’ನಲ್ಲಿ ಜೋಸ್ ಬಟ್ಲರ್ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿಕೊಂಡರ. ನಂತರ ಒಂದಾದ ವಾರ್ನರ್ 95(167) ಮತ್ತು ಲ್ಯಾಬಶೇನ್ 102(299)* ಜೋಡಿ ಆಸಿಸ್’ನಾ ಆರಂಭಿಕ ಆಘಾತದಿಂದ ಪಾರು ಮಾಡಿ ತಂಡದ ಮೊತ್ತ ಸುಸ್ಥಿತಿಗೆ ತರುವಲ್ಲಿ ಯಶಸ್ವಿಯಾದರು. ಈ ಜೋಡಿ ಬರೋಬ್ಬರಿ 172 ರನ್’ಗಳ ಜೊತೆಯಾಟವಾಡಿತು. ಇತ್ತೀಚಿನ ವರದಿ ಬಂದಾಗ ಆಸ್ಟ್ರೇಲಿಯಾ 240 ಕ್ಕೆ 2 ವಿಕೆಟ್ ಕಳೆದುಕೊಂಡು ಸುಸ್ಥಿಯಲ್ಲಿದೆ. ಕ್ರೀಸ್ನಲ್ಲಿರುವ ಲ್ಯಾಬಶೇನ್ ಶತಕ 102(299)* ಪೂರೈಸಿದ್ದಾರೆ.ಇವರಿಗೆ ಜೊತೆಯಾಗಿ ನಾಯಕ…
ಕಲಬುರ್ಗಿ: ಶಾಲೆಗೆ ಹೊರಟಿದ್ದ ಇಬ್ಬರು ಶಿಕ್ಷಕರು ಅಪಘಾತಕ್ಕೀಡಾಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯಲ್ಲಿ ನಡೆದಿದೆ. ಸಿದ್ದರಾಮಪ್ಪ(60), ನಾನಾಗೌಡ ಪಾಟೀಲ್ (55) ಮೃತಪಟ್ಟವರು ಎಂದು ವರದಿಯಾಗಿದೆ. ಶಿಕ್ಷಕರಿಬ್ಬರು ಶಾಲೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಿಮೆಂಟ್ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ಶಿಕ್ಷಕರು ಕೂಡ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ, ಮುಂದಿನ ಕ್ರಮಕೈಗೊಂಡಿದ್ದು, ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ಹೇಮಾವತಿ ನಾಲಾ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಪತ್ನಿ, ಪುತ್ರಿಯೊಂದಿಗೆ ನಾಲೆಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುಬ್ಬಿ ತಾಲ್ಲೂಕಿನ ಸಾಗರನಹಳ್ಳಿ ಗೇಟ್ ಸಮೀಪ ನಡೆದಿದೆ. ಎಂಜಿನಿಯರ್ 55 ವರ್ಷ ವಯಸ್ಸಿನ ರಮೇಶ್ ಹಾಗೂ ಅವರ ಪತ್ನಿ 45 ವರ್ಷ ವಯಸ್ಸಿನ ಮಮತಾ ಮತ್ತು 25 ವರ್ಷ ವಯಸ್ಸಿನ ಪುತ್ರಿ ಶುಭಾ ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಮಮತಾ ಹಾಗೂ ಶುಭಾ ಅವರ ಮೃತದೇಹ ಪತ್ತೆಯಾಗಿದೆ. ರಮೇಶ್ ಮೃತದೇಹಕ್ಕಾಗಿ ಶೋಧ ನಡೆಯುತ್ತಿದೆ. ಸದ್ಯದ ಮಾಹಿತಿಗಳ ಪ್ರಕಾರ ಶುಭಾಗೆ ಕಳೆದ ತಿಂಗಳಷ್ಟೇ ಮದುವೆ ಮಾಡಿಕೊಡಲಾಗಿತ್ತು. ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪೊಲೀಸರ ತನಿಖೆಯ ಬಳಿಕವೇ ಹೆಚ್ಚಿನ ಮಾಹಿತಿ ದೊರಕಬೇಕಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700