Author: admin

ತುಮಕೂರು: ಗುಬ್ಬಿ ವಿಧಾನಸಭಾ ಕ್ಷೇತ್ರ ಕ್ಕೆ ಬಿ.ಎಸ್.ನಾಗರಾಜ್ ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ ಅದರಂತೆ ಸ್ಥಳೀಯ ಮುಖಂಡರ ಜೊತೆ ಗೂಡಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಜಿಲ್ಲೆ ಗುಬ್ಬಿ ತಾಲ್ಲೂಕಿನ ಕಳ್ಳಿಪಾಳ್ಯ ಗ್ರಾಮದಲ್ಲಿ ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮಕ್ಕೆ ಭಾಗವಹಿಸಿ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ಈ ಬಾರಿ 2023  ಯಾವುದೇ ಪಕ್ಷದ ಅಂಗಿಲ್ಲದೆ ಸ್ವಾತಂತ್ರ್ಯವಾಗಿ ಪಕ್ಷ ಅಧಿಕಾರಕ್ಕೆ ತರಲು ರಾಜ್ಯದ ಎಲ್ಲಾ ಭಾಗದಲ್ಲಿ ಸಂಘಟನೆ ಮಾಡಲು ಬದ್ದರಾಗಿದ್ದೇವೆ ಎಂದರು. ನೀರಾವರಿ ಯೋಜನೆ ಅನುಷ್ಠಾನ ದ  ಸಲುವಾಗಿ 180 ಕ್ಷೇತ್ರ ಗಳಲ್ಲಿ ಪಂಚರತ್ನ ಮತ್ತು ಜನತಾ ಜನಧಾರೆ  ಯೋಜನೆಗಳನ್ನು ಜನತೆಗೆ ಪರಿಚಯಿಸುವ ಮೂಲಕ ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ತರಲಾಗುವುದು ಎಂದರು. ಪಾವಗಡದಲ್ಲಿ ನಡೆದ ಖಾಸಗಿ ಬಸ್ ಅಫಘಾತ ನೊಂದ ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ಕುಟುಂಬಕ್ಕೆ ಧೈರ್ಯ ತುಂಬಲು ತೆರಳಿದ್ದೇನೆ ಎಂದರು. ಇದೇ ವೇಳೆಯಲ್ಲಿ ಜೆಡಿಎಸ್ ಪಕ್ಷದ…

Read More

ಗುಬ್ಬಿ: ಗುಬ್ಬಿಯ ಪದವಿಪೂರ್ವ ಕಾಲೇಜು ಅವ್ಯವಸ್ಥೆಯ ಅಗರವಾಗಿದ್ದು, ಎಲ್ಲಿ ನೋಡಿದರಲ್ಲಿ ಕಸಕಡ್ಡಿಗಳು ತುಂಬಿದೆ. ನೀರಿನ ಟ್ಯಾಂಕ್ ಬಳಿಯೇ ನಳ್ಳಿ ಇದ್ದು, ಇಲ್ಲಿಯೇ ವಿದ್ಯಾರ್ಥಿಗಳು ತಟ್ಟೆ ಕೂಡ ತೊಳೆಯುತ್ತಿದ್ದಾರೆ. ಈ ಪ್ರದೇಶ ಕೆಸರಿನಿಂದ ಕೂಡಿದ್ದು, ಕೊಳಚೆಯಾಗಿ ಮಾರ್ಪಟ್ಟಿದೆ. ಶಾಲೆಯ ನೈರ್ಮಲ್ಯದ ಬಗ್ಗೆ ಗಮನ ಹರಿಸಬೇಕಾದ ಶಾಲೆಯ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತಿದ್ದಾರೆ. ಅಷ್ಟೇ ಏಕೆ, ಇದೇ ಪದವಿಪೂರ್ವ ಕಾಲೇಜಿಗೆ ಅಧ್ಯಕ್ಷರಾಗಿರುವ ಸ್ಥಳೀಯ ಶಾಸಕ ಎಸ್.ಆರ್.ಶ್ರೀನಿವಾಸ್ ಇದೇ ಪ್ರದೇಶದಲ್ಲಿ ಕಾರಿನಲ್ಲಿ ಓಡಾಡುತ್ತಿದ್ದರೂ, ಇದೊಂದು ಗಂಭೀರವಾದ ಸಮಸ್ಯೆ ಎನ್ನುವುದು ಅವರಿಗೆ ತಿಳಿಯದಿರುವುದು ದುರಂತವೇ ಸರಿ. ಈ ಶಾಲೆಯು ಶಾಲಾ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 204 ರಲ್ಲಿ ರಾಜ್ಯ ನಾಯಕರುಗಳು ಈ ದಾರಿಯಲ್ಲಿ ಓಡಾಡುತ್ತಿದ್ದಾರೆ. ಆದರೆ ಬಿದ್ದು ಹೋಗಿರುವ ಶಾಲೆಯ ಕಾಂಪೌಂಡ್ ಸರಿಪಡಿಸಲು ಇಲ್ಲಿಯವರೆಗೂ ಶಾಲಾ ಆಡಳಿತ ಮಂಡಳಿ ಯಾವುದೇ ಕ್ರಮ ಕಗೊಳ್ಳದೇ ಇರುವುದು ಒಂದೆಡೆಯಾದರೆ, ರಾತ್ರಿ ವೇಳೆಯಲ್ಲಿ ಈ ಶಾಲೆ…

Read More

ತುಮಕೂರು: ವಾಹನ ತಪಾಸಣೆ ವೇಳೆ ಎ.ಎಸ್.ಐಗೆ ಬೈಕ್ ಸವಾರನೊಬ್ಬ ಗುದ್ದಿದ ಘಟನೆ ನಡೆದಿದ್ದು, ಪರಿಣಾಮವಾಗಿ ಎ.ಎಸ್. ಐ ನಂಜೇಗೌಡ ಹಾಗೂ ಬೈಕ್ ಸವಾರನಿಗೆ ಗಾಯವಾಗಿದೆ. ಬೆಳ್ಳಾವಿ ಬಳಿಯ ಚನ್ನೆನಹಳ್ಳಿ ಗೇಟ್ ಬಳಿ ಎ.ಎಸ್. ಐ ನಂಜೇಗೌಡ ಹಾಗೂ ಸಿಬ್ಬಂದಿ  ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಸವಾರನೊಬ್ಬ ಪೊಲೀಸರನ್ನು ಕಂಡು ಗಾಬರಿಗೊಂಡಿದ್ದು, ಪರಿಣಾಮವಾಗಿ ಬೈಕ್ ನಿಯಂತ್ರಣ ಕಳೆದುಕೊಂಡು ನಂಜೇಗೌಡ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮವಾಗಿ ಎ.ಎಸ್.ಐ ನಂಜೇಗೌಡ ಹಾಗೂ ಬೈಕ್ ಸವಾರ  ಇಬ್ಬರು ಕೂಡ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎ.ಎಸ್. ಐ ನಂಜೇಗೌಡ ಅವರಿಗೆ ಗಂಭೀರವಾಗಿ ಗಾಯವಾಗಿದೆ. ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಬೈಕ್ ಸವಾರ ಕೂಡ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಿ: ಉದಯ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು:  ತಾಲ್ಲೂಕು ದೊಡ್ಡಸಾರಂಗಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಶುದ್ಧಗಂಗಾ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗೂಳೂರು ಜಿ.ಪಂ. ಉಸ್ತುವಾರಿ ಅಧ್ಯಕ್ಷ ಹಾಗೂ ಜೆಡಿಎಸ್ ನಾಯಕ ಜಿ. ಫಾಲನೇತ್ರಯ್ಯ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಎಪಿಎಂಸಿ ಉಪಾಧ್ಯಕ್ಷೆ ವಿಜಯಕುಮಾರಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ತುಮಕೂರು ಗ್ರಾಮಾಂತರ ವಿಸ್ತರಣಾಧಿಕಾರಿ  ಸುನಿತಾ ಪ್ರಭು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು‌. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು: ನಗರದಲ್ಲಿ ಮುಸ್ಲಿಂ ಸಮುದಾಯದ ಶಬ್-ಎ-ಬಾರಾತ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಯಿತು.  ಈ ವೇಳೆ ಸಮಾಜ ಸೇವಕರಾದ ಮುಹಮ್ಮದ್ ಇಷ್ಟಿಯಾಕ್ (ಬಾಬು) ರವರು ಸುದ್ದಿಗಾರರ ಜೊತೆ ಮಾತನಾಡಿ,  ತುಮಕೂರು ನಗರ ಹಾಗೂ ಜಿಲ್ಲಾದ್ಯಂತ ಶಾಂತಿಯುತವಾಗಿ ಹಬ್ಬವನ್ನು ಆಚರಿಸಲಾಗಿದೆ. ಹಬ್ಬವನ್ನು ಆಚರಿಸಲು ಸಹಕಾರ ನೀಡಿದ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು. ನಾಡಿನ ಸಮಸ್ತ ಜನರಿಗೆ ಶಬ್-ಎ-ಬಾರಾತ್ ಹಬ್ಬದ ಶುಭಾಶಯಗಳನ್ನು ಕೋರುತ್ತೇನೆ  ಎಂದು ಇದೇ ವೇಳೆ ಅವರು ಹಬ್ಬದಸ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜ ಸೇವಕ ಸಯ್ಯದ್ ವಾಸೀಂ, ಫಯಾಜ್ ಪಾಷಾ, ಮತ್ತು ಇತರರು ಜೊತೆಗಿದ್ದರು. ವರದಿ : ಉದಯ್ (ಫೋಟೋಗ್ರಾಫರ್) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ವಾಣಿವಿಲಾಸ ಸಾಗರಕ್ಕೆ 10 ಟಿ ಎಂ ಸಿ ನೀರು ಮೀಸಲಿಟ್ಟು, ಧರ್ಮಪುರ ಮತ್ತು ಜೆಜಿ ಹಳ್ಳಿ ಹೋಬಳಿಗಳ ಎಲ್ಲಾ ಕೆರೆಗಳನ್ನು ತುಂಬಿಸಬೇಕು ಎಂದು ತಾಲ್ಲೂಕು ರೈತಸಂಘದ  ಅಧ್ಯಕ್ಷರಾದ  ಕೆ.ಟಿ.ತಿಪ್ಪೇಸ್ವಾಮಿ ಒತ್ತಾಯಿಸಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಗೆ ಸೇರಿಸಲು ಹಾಗೂ ಹಿರಿಯೂರು ನಗರದ ಸಕ್ಕರೆ ಕಾರ್ಖಾನೆಯನ್ನು ಪುನಃ  ಪ್ರಾರಂಭಿಸಲು ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಭದ್ರಾ ಮೇಲ್ದಂಡೆ ಯೋಜನೆ ಈ ಹಿಂದಿನ ಬಿಜೆಪಿ ಸರ್ಕಾರ ತಾತ್ಕಾಲಿಕವಾಗಿ 5 ಟಿಎಂಸಿ ನೀರನ್ನು ಮಂಜೂರು ಮಾಡಲಾಗಿತ್ತು. ಆದರೆ ತದ ನಂತರ ಬಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇದನ್ನು 2ಟಿಎಂಸಿ ನೀರಿಗೆ ಸೀಮಿತಗೊಳಿಸಲಾಯಿತು. ಈಗಾಗಲೇ ಸರ್ಕಾರ ಕುಡಿಯುವ ಸಲುವಾಗಿ ಹಿರಿಯೂರು ನಗರಕ್ಕೆ ಹಾಗೂ ತಾಲೂಕಿನ 168 ಗ್ರಾಮಗಳಿಗೆ, ಚಳ್ಳಕೆರೆನಗರಕ್ಕೆ ಹಾಗು ಹಳ್ಳಿಗಳಿಗೆ ಡಿ.ಆರ್.ಡಿ.ಓ ಹಾಗೂ ಚಿತ್ರದುರ್ಗ ನಗರಕ್ಕೆ ಹೊಳಲ್ಕೆರೆ ಗ್ರಾಮ ಮತ್ತು ತಾಲ್ಲೂಕಿನ 198 ಗ್ರಾಮಗಳಿಗೆ ಕುಡಿಯುವ ನೀರು ಹರಿಸಬೇಕಿದೆ.  ಅಲ್ಲದೆ ತಾಲ್ಲೂಕಿನ…

Read More

ಬೆಂಗಳೂರು: ಶ್ರೀ ಪ್ರಸನ್ನ ನಂದ ವಾಲ್ಮೀಕಿ ಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸಿ ಧರಣಿ ಸತ್ಯಾಗ್ರಹ 37 ನೇ ದಿನಕ್ಕೆ ಮುಂದುವರಿದಿದೆ. ಬೆಂಗಳೂರು ಸ್ವಾತಂತ್ರ ಉದ್ಯಾನವನ ಆವರಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಕೊರಟಗೆರೆ ತಾಲೂಕು ಬಹುಜನ ಜನ ಸಮಾಜ ಪಾರ್ಟಿ ಕಾರ್ಯಕರ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಾಲ್ಮೀಕಿ ಶ್ರೀಗಳಿಗೆ ಬೆಂಬಲ ಸೂಚಿಸಿದರು. ಈ ವೇಳೆ ಮಾತನಾಡಿದ ಬಹುಜನ ಸಮಾಜ ಪಕ್ಷದ ತಾಲ್ಲೂಕು ಅಧ್ಯಕ್ಷ ಅಭ್ಯರ್ಥಿ ಜೆಟ್ಟಿ ಅಗ್ರಹಾರ ನಾಗರಾಜ್, ಸರ್ಕಾರ ಕೂಡಲೇ ನಾಗಮೋಹನದಾಸ್ ಆಯೋಗದ ವರದಿಯನ್ನು ಜಾರಿ ಮಾಡಬೇಕು. ಸಂವಿಧಾನ, ರಾಮಾಯಣ ಬರೆದ ವಂಶ ನಮ್ಮದು. ನಾವಿಂದು ರಸ್ತೆಗಿಳಿದು ಹೋರಾಟ ಮಾಡುವ ಅನಿವಾರ್ಯ ಎದುರಾಗಿದೆ. ಶ್ರೀಗಳ ಧರಣಿ ಸತ್ಯಾಗ್ರಹ ಇಂದಿಗೆ 37ನೇ ದಿನಕ್ಕೆ ತಲುಪಿದೆ. ಸರ್ಕಾರದ ಮಂತ್ರಿಗಳಾಗಲಿ, ಮುಖ್ಯಮಂತ್ರಿಗಳಾಗಲಿ, ಸ್ಥಳಕ್ಕಾಗಮಿಸಿ ವರದಿ ಜಾರಿಗೊಳಿಸುವ ಭರವಸೆ ನೀಡಿಲ್ಲ. ಪ್ರತಿಭಟನೆ 37 ಸಂಖ್ಯೆ 336 ಆದರೂ ಸರಿಯೇ ಈ ಹೋರಾಟ ನಿರಂತರ ಇವರೊಂದಿಗೆ ಬಹುಜನ…

Read More

ಸರಗೂರು: ಉನ್ನತ ಮಟ್ಟದ ಚಿಕಿತ್ಸೆ ನೀಡುವುದೇ ನಮ್ಮ ಸಂಸ್ಥೆಯ ಗುರಿ ಎಂದು ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಮುಖ್ಯಾಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಜಿ.ಎಸ್ ಅವರು ತಿಳಿಸಿದರು. ಇಂದು ಹೆಚ್.ಡಿ.ಬಿ ಫೈನಾನ್ಸ್ ವತಿಯಿಂದ ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ನೀಡಿದ ಆರೋಗ್ಯ ತಪಾಸಣಾ ಯಂತ್ರೋಪಕರಣಗಳಿಗೆ ಚಾಲನೆ ನೀಡಿ ಅವರು ಮಾತನಾಡಿ,  ಆಸ್ಪತ್ರೆಯ ನಿರಂತರ ಬೆಳವಣಿಗೆಯಿಂದ ಮುಂದಿನ ದಿನಗಳಲ್ಲಿಯೂ ಸಹ ಗ್ರಾಮೀಣಾ ಭಾಗದ ಜನರಿಗೆ ಉನ್ನತ ಮಟ್ಟದ ಸೇವೆಯನ್ನು ನೀಡಲಾಗುವುದು ಎಂದರು. ಹಾಗೆಯೇ ಗ್ರಾಮೀಣಾಭಿವೃದ್ಧಿಯಲ್ಲಿ ಉಂಟಾಗುವ ಸಮಸ್ಯೆಗಳನ್ನು ತಟೆಗಟ್ಟಲು ಐ.ಸಿ.ಓ. ವನ್ನು ಸಹ ಶುರು ಮಾಡಲಾಗುವುದು. ಹಾಗೂ ಸರ್ಜಿಕಲ್ ಸ್ಪೇಷಲಿಟಿ ಒಳಗೊಂಡಂತೆ ಕಣ್ಣಿನ ಸಮಸ್ಯೆ ಮತ್ತು ದಂತದ ಸಮಸ್ಯೆಗಳಿಗೆ ವಿವೇಕಾನಂದ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಒದಗಿಸಲಾಗುವುದು ಎಂದು ತಿಳಿಸಿದರು. ಗ್ರಾಮೀಣ ವ್ಯವಸ್ಥೆಗೆ ಬೇಕಾದ ವ್ಯಕ್ತಿಗಳನ್ನು ತಯಾರಿಸಲು ಪೂರ್ಣ ಪ್ರಮಾಣದ ನರ್ಸಿಂಗ್ ಕಾಲೇಜ್, ಮತ್ತು ಟಿ.ಎನ್.ಬಿ ಕೋರ್ಸ್ಗಳನ್ನು ತೆರೆಯಲಾಗುವುದು ಹಾಗೂ ಹೆಚ್.ಡಿ.ಬಿ ಫೈನಾನ್ಸ್ ಕಂಪನಿಯು ಆಸ್ಪತ್ರೆಗೆ ಒತ್ತು ನೀಡಿದಂತೆ, ಗ್ರಾಮೀಣಾ ಭಾಗದಲ್ಲಿ ಶಿಕ್ಷಣವನ್ನು ಅಭಿವೃದ್ಧಿಪಡಿಸಲು ಹೊಸ ಹೊಸ ಯೋಜನೆಗಳನ್ನು…

Read More

ಬಳ್ಳಾರಿ:  ಜಿಲ್ಲೆಯ ಬಿಟಿಪಿಎಸ್(Ballary Thermal Power Station) ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ. ಬಳ್ಳಾರಿಯ ಕುಡತಿನಿ ಬಳಿಯ ಬಿಟಿಪಿಎಸ್​ ಆಕ್ಸಿಜನ್ ಪ್ಲ್ಯಾಂಟ್​ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಆಕ್ಸಿಜನ್ ಫಿಲ್ ಮಾಡುವ ವೇಳೆ ದುರ್ಘಟನೆ ಸಂಭವಿಸಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡು ಕಾರ್ಮಿಕರ‌ ಮೈಗೆಲ್ಲ ಹತ್ತಿಕೊಂಡಿದೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಕಾರ್ಮಿಕರಿಗೆ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕುಡತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವರದಿ:  ಮುರುಳಿಧರನ್ ಆರ್.,  ಹಿರಿಯೂರು.. ( ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು: ಶನಿವಾರ ಪಾವಗಡದಲ್ಲಿ ನಡೆದ ಬಸ್ ದುರಂತಕ್ಕೆ ಚಾಲಕನ ಅಜಾಗರೂಕತೆ ಹಾಗೂ ಬಸ್ ಓವರ್ಲೋಡ್ ಕಾರಣ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಶನಿವಾರ ಸಂಜೆ ಶ್ರೀರಾಮುಲು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು ಇದೇ ಸಂದರ್ಭದಲ್ಲಿ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಸಚಿವ ಶ್ರೀರಾಮುಲು ರವರು ವೈಯಕ್ತಿಕವಾಗಿ ತಲಾ 25 ಸಾವಿರ ರೂ. ನೆರವು ನೀಡಿದರು. ಇದೇ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದು, ಘಟನೆ ನಡೆದ ಸ್ಥಳವನ್ನು ಕೂಡಲೇ ಅಪಘಾತ ವಲಯ(BLACK SPOT) ಎಂದು ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಘಟನೆಯಲ್ಲಿ ಈಗಾಗಲೇ ಆರು ಮಂದಿ ಮೃತಪಟ್ಟಿದ್ದು ಅಪಘಾತದಲ್ಲಿ ಮೃತಪಟ್ಟ ಗಾಯಾಳುಗಳಿಗೆ ಸರ್ಕಾರದಿಂದ ತಲಾ ಐದು ಲಕ್ಷ ರೂಗಳ ಪರಿಹಾರವನ್ನು ನೀಡಲಾಗುವುದು ಎಂದರು. ಇನ್ನು ರಾಜ್ಯದಲ್ಲಿ ಇರುವ ಅಪಘಾತ ವಲಯಗಳನ್ನು ಗುರುತಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ರಸ್ತೆ ಸುರಕ್ಷತಾ ಅನುದಾನದಡಿ ಅಪಘಾತ ವಲಯಗಳನ್ನು ಗುರುತಿಸಿ…

Read More