Author: admin

ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ತಿಪಟೂರು: ಪ್ರಪಂಚದಲ್ಲಿಯೇ‌ ಮೊದಲ ವಿಶ್ವವಿದ್ಯಾಲಯ ಪ್ರಾರಂಭವಾಗಿದ್ದು ನಮ್ಮ ದೇಶದಲ್ಲೇ ( ನಳಂದ ವಿಶ್ವವಿದ್ಯಾಲಯ ಕ್ರಿ.ಶ. 427) ಎಂಬ ಹೆಗ್ಗಳಿಕೆ ಎಲ್ಲಾ ಭಾರತೀಯರಿಗು ಹೆಮ್ಮೆಯ ವಿಷಯ. ಆದರೆ ಇಂದಿನ ನಮ್ಮ ದೇಶದ ಕೆಲವು ಸರ್ಕಾರಿ ಶಾಲೆಗಳ ಕಟ್ಟಡಗಳ ಅವಸ್ಥೆಯನ್ನು ನೋಡಿ ಸ್ವತಃ ಭಾರತೀಯರಿಗೆ ನಾಚಿಕೆ ಆಗುತ್ತಿದೆ. ಇದಕ್ಕೆ ಕಾರಣ ಶಾಸಕಾಂಗವೋ, ಕಾರ್ಯಾಂಗವೋ ಇಲ್ಲ ಪ್ರಜೆಗಳೋ ಎಂಬ ಒಂದಕ್ಕೊಂದು ಸರಪಳಿ ಕಾರಣಗಳು ನಮ್ಮ ಕಣ್ಣೆದುರಿಗೆ ಕಾಣುತ್ತವೆ. ತಿಪಟೂರು ತಾಲ್ಲೂಕಿನ ಕೋಟೆನಾಯಕನಹಳ್ಳಿಯ ಸರ್ಕಾರಿ “ಮಾದರಿ” ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ನೋಡಿದರೆ ಇಲ್ಲಿನ ಜನಪ್ರತಿನಿದಿಗಳು ಮತ್ತು ಸರ್ಕಾರಿ‌ ಅಧಿಕಾರಿಗಳ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಹೆಸರಲ್ಲಿ ಮಾತ್ರ ” ಮಾದರಿ ” ಎಂಬುದು ಕಾಣುತ್ತಿದೆ. ಆದರೆ, ಇಂತಹ ಅಪಾಯಕಾರಿ ಕಟ್ಟಡವನ್ನು ವಿದ್ಯಾರ್ಥಿಗಳಿಗೆ ಕೊಟ್ಟ ಸರ್ಕಾರದ ನಡೆ ಮಾದರಿಯೇ? ಇಲ್ಲಿನ ಜನಪ್ರತಿನಿಧಿಗಳು ಮಾದರಿಯೇ ಎಂದು ಇಲ್ಲಿನ ಜನರು ಪ್ರಶ್ನಿಸುವಂತಾಗಿದೆ. ಕೇವಲ 15 ವರ್ಷಗಳ ಹಿಂದೆ ಉದ್ಘಾಟನೆಯಾದ ಶಾಲಾ ಕಟ್ಟಡ…

Read More

ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಸಿಮೆಂಟ್ ಬೆಲೆಯಲ್ಲಿ ಇಳಿಕೆಯಾಗಿದ್ದು, ಹೀಗಾಗಿ ಮನೆ ಕಟ್ಟುವವರಿಗೆ ಇದೊಂದು ಸಂತಸದ ಸುದ್ದಿಯಾಗಿ ಪರಿಣಮಿಸಿದೆ. 50 ಕೆಜಿ ಸಿಮೆಂಟ್ ಚೀಲದ ಬೆಲೆಯಲ್ಲಿ 20-40 ರೂ. ವರೆಗೆ ಇಳಿಕೆಯಾಗಿದೆ. ಕರ್ನಾಟಕದಲ್ಲಿ 20-40 ರೂ. ನಷ್ಟು ಇಳಿಕೆಯಾಗಿದ್ದರೆ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಪ್ರತಿ ಚೀಲಕ್ಕೆ 40 ರೂ. ತಮಿಳುನಾಡಿನಲ್ಲಿ 20 ರೂ.ಗಳವರೆಗೆ ಕಡಿತವಾಗಿದೆ ಎಂದು ವರದಿಯಾಗಿದೆ. ಬೆಲೆ ಇಳಿಕೆಯ ಪರಿಣಾಮ ಕರ್ನಾಟಕದಲ್ಲಿ 50 ಕೆ.ಜಿ. ಸಿಮೆಂಟ್ ಚೀಲದ ಬೆಲೆ 340 ರೂ.ನಿಂದ 380 ರೂ.ಗೆ ಇಳಿಕೆಯಾಗಿದೆ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ 280 ರೂ.ನಿಂದ 320 ರೂ. ಇಳಿಕೆಯಾಗಿದೆ. ಕೇರಳದಲ್ಲಿ 340 ರೂ.ನಿಂದ 380 ರೂ.ಗೆ ಇಳಿಕೆಯಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬುಧವಾರ ಮಧ್ಯಾಹ್ನ ಹೆಲಿಕಾಪ್ಟರ್ ಅಪಘಾತದ ಸುದ್ದಿ ಕೇಳಿ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಕೆಲವು ಗಂಟೆಗಳ ನಂತರ ದಟ್ಟ ಮಂಜು, ಹೊಗೆ  ತೆರವುಗೊಂಡಿತು. ಸತ್ಯ ಹೊರಬಂದ ನಂತರ ದೇಶದ ಜನರ ಕಣ್ಣಾಲಿಗಳು ತೇವವಾದವು. ಭಾರತೀಯ ಸೇನೆಗೆ ಸೇರಿದ  ಎಂಐ-17 ಹೆಲಿಕಾಪ್ಟರ್ ತಮಿಳುನಾಡಿನ ಕಣ್ಣೂರಿನ ಅರಣ್ಯದಲ್ಲಿ ಪತನಗೊಂಡಿತು. ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಮತ್ತು ಪತ್ನಿ ಮಧುಲಿಕಾ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಬಿಪಿನ್ ಲಕ್ಷ್ಮಣ್ ಸಿಂಗ್ ರಾವತ್. ಜನರಲ್ ಬಿಪಿನ್ ರಾವತ್ ಎಂದು ನಮಗೆಲ್ಲ ಪರಿಚಯ.. ಜನರಲ್ ರಾವತ್ ಅವರು ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಚೌಹಾನ್ ರಜಪೂತ್ ಕುಟುಂಬದಲ್ಲಿ 16 ಮಾರ್ಚ್ 1958 ರಂದು ಜನಿಸಿದರು. ಜನರಲ್ ರಾವತ್ ಅವರ ತಾಯಿ ಪರ್ಮಾರ್ ರಾಜವಂಶದವರು. ಬಿಪಿನ್ ರಾವತ್ ಪೂರ್ವಜರು ಮಾಯಾಪುರ/ಹರಿದ್ದಾರ್‌ ನಿಂದ ಬಂದು ಗರ್ವಾಲ್‌ ನ ಪರ್ಸಾಯಿ ಗ್ರಾಮದಲ್ಲಿ ನೆಲೆಸಿದ್ದರು. ಅವರನ್ನು ಪರಸರ ರಾವತ್ ಎಂದು ಕರೆಯಲಾಗುತ್ತಿತ್ತು.…

Read More

ಭಾರತೀಯ ಸೇನೆಗೆ ಸೇರಿದ  ಎಂಐ-17 ಹೆಲಿಕಾಪ್ಟರ್ ತಮಿಳುನಾಡಿನ ಕಣ್ಣೂರಿನ ಅರಣ್ಯದಲ್ಲಿ ಪತನಗೊಂಡಿತು. ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಮತ್ತು ಪತ್ನಿ ಮಧುಲಿಕಾ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಸಂಜಯ್ ಗಾಂಧಿ ಇಂದಿರಾ ಗಾಂಧಿಯವರ ಕಿರಿಯ ಮಗ. ಅವರ ತಾಯಿಯಂತೆಯೇ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ನಿಜವಾದ ಅರ್ಥದಲ್ಲಿ, ಅವರನ್ನು ಇಂದಿರಾ ಗಾಂಧಿಯವರ ಉತ್ತರಾಧಿಕಾರಿ ಎಂದು ಪರಿಗಣಿಸಲಾಗಿದೆ. ಆದರೆ ಜೂನ್ 1980 ರಲ್ಲಿ ಸಂಜಯ್ ಗಾಂಧಿ ವಿಮಾನ ಅಪಘಾತದಲ್ಲಿ ನಿಧನರಾದರು. ಸೆಪ್ಟೆಂಬರ್ 2001 ರಲ್ಲಿ, ಮೈನ್‌ ಪುರಿ ಜಿಲ್ಲೆಯಲ್ಲಿ ಖಾಸಗಿ ವಿಮಾನವೊಂದು ಪತನಗೊಂಡಿತು. ಈ ಅಪಘಾತದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ತಂದೆ ಮಾಧವರಾವ್ ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದರು. ತಂದೆಯ ಮರಣದ ನಂತರವೇ ಜ್ಯೋತಿರಾದಿತ್ಯ ರಾಜಕೀಯ ಪ್ರವೇಶಿಸಿದರು. ವೈ.ಎಸ್. ರಾಜಶೇಖರ ರೆಡ್ಡಿ ಎರಡು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2009ರಲ್ಲಿ, ಅವರ ಹೆಲಿಕಾಪ್ಟರ್ ರಾಜ್ಯದ ರುದ್ರಕೊಂಡ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು. ಅದರಲ್ಲಿ ಅವರು ನಿಧನರಾದರು.…

Read More

ಮೈಸೂರು: ದೇವೇಗೌಡರ ಕುಟುಂಬದವರ ಜೊತೆಗೆ ನನ್ನದು ಸೈದ್ಧಾಂತಿಕ ವಿರೋಧವಷ್ಟೆ, ಆರ್‌ಎಸ್‌ಎಸ್‌ ಅನ್ನು ಟೀಕಿಸುವ ಕುಮಾರಸ್ವಾಮಿ ಅವರು ಬಿಜೆಪಿ ಜೊತೆಗೆ ಸರ್ಕಾರ ರಚಿಸಿದ್ದನ್ನು ಹಾಗೂ ಚುನಾವಣೆಯಲ್ಲಿ ಒಳ ಒಪ್ಪಂದ ಮಾಡಿಕೊಳ್ಳುವುದನ್ನು ವಿರೋಧಿಸಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯು ಮುಸ್ಲಿಮರು ಮತ್ತು ಕ್ರೈಸ್ತರನ್ನು ಗುರಿಯಾಗಿಟ್ಟುಕೊಂಡ ಹುನ್ನಾರ. ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಆಕ್ರೋಶವಿರುವುದರಿಂದ ಹಿಂದುತ್ವದ ಪ್ರತಿಪಾದನೆ ಮೂಲಕ ಮತಗಳಿಸುವ ಪ್ರಯತ್ನಕ್ಕೆ ನಡೆದಿದೆ ಎಂದು ಅವರು ಆರೋಪಿಸಿದರು. ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದೇ ನಮ್ಮ ಸರ್ಕಾರ. ಯೋಜನೆಯ ಶೀಘ್ರ ಜಾರಿಗೆ ಒತ್ತಾಯಿಸಿ ಡಿ.ಕೆ.ಶಿವಕುಮಾರ್‌ ಜತೆ ನಾನೂ ಪಾದಯಾತ್ರೆಗೆ ಹೋಗುತ್ತೇನೆ. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯವಿದೆ ಎಂದು ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಹೇಳುತ್ತಾರಷ್ಟೇ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ನೆಲ್ಲಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಗ್ಗಾವೆ ಗ್ರಾಮದ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಗಿಡಗಂಟೆಗಳ ಮಧ್ಯೆ ಮುಚ್ಚಿ ಹೋದ ಸ್ಥಿತಿಯಲ್ಲಿದ್ದ ಬಗ್ಗೆ ‘ನಮ್ಮ ತುಮಕೂರು.ಕಾಂ’ ವರದಿ ಪ್ರಕಟಿಸಿತ್ತು. ವರದಿ ಪ್ರಕಟಿಸಿ ಕೇವಲ ಎರಡೇ ದಿನದಲ್ಲಿ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತ್ ಅಧಿಕಾರಿಗಳು ಗಿಡಗಂಟಿಗಳಿಂದ ಅಂಬೇಡ್ಕರ್ ಭವನಕ್ಕೆ ಮುಕ್ತಿ ನೀಡಿದ್ದಾರೆ. “ಗಿಡಗಂಟಿಗಳ ಮಧ್ಯೆ ‘ಕಾಣದಂತೆ ಮಾಯವಾದ ಅಂಬೇಡ್ಕರ್ ಭವನ’” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ ಇಲ್ಲಿನ ಅಂಬೇಡ್ಕರ್ ಭವನದ ದುಸ್ಥಿತಿಯನ್ನು ತೆರೆದಿಟ್ಟಿದ್ದು, ಈ ವರದಿ ಪ್ರಕಟಗೊಂಡ ತಕ್ಷಣವೇ ಎಚ್ಚೆತ್ತುಕೊಂಡ ಅಧಿಕಾರಿಗಳು ಜೆಸಿಬಿ ಮೂಲಕ ಗಿಡಗಂಟಿಗಳನ್ನು ತೆರವುಗೊಳಿಸಿ, ಸಾರ್ವಜನಿಕ ಉಪಯೋಗಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಾ.ಎನ್.ಮೂರ್ತಿ ಸ್ಥಾಪಿತ)ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಗ್ಗಾವೆ ಪುಟ್ಟಸ್ವಾಮಿ, ನ್ಯಾಯದ ಪರವಾಗಿ ಹೋರಾಟ ಮಾಡಿ, ಅಧಿಕಾರಿಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದ ನಮ್ಮ ತುಮಕೂರು.ಕಾಂ ಮಾಧ್ಯಮಕ್ಕೆ ನಮ್ಮ ಸಮುದಾಯ ಹಾಗೂ ಸಂಘಟನೆ ಎಂದೆಂದಿಗೂ ಆಭಾರಿಯಾಗಿದ್ದೇವೆ ಎಂದು ಧನ್ಯವಾದಗಳನ್ನು ತಿಳಿಸಿದರು. ವರದಿ: ಮಂಜು…

Read More

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಬಳಿ ಹಾದು ಹೋಗುವ ಚಾಮರಾಜನಗರ , ಜೀವರ್ಗಿ ರಾಷ್ಟ್ರೀಯ ಹೆದ್ದಾರಿ 150 A ರಲ್ಲಿ ಮಾಯಸಂದ್ರ, ಟಿ.ಬಿ.ಕ್ರಾಸ್ ನ ಮಧ್ಯದಲ್ಲಿ  ಚೆಕ್ ಪೋಸ್ಟ್ ನಿಂದ ಟಿ.ಬಿ.ಕ್ರಾಸ್  ಕಾಲುವೆಯವರೆವಿಗೂ  ಆಳೆತ್ತರದ ಗಿಡಗಂಟಿ  ಬೆಳೆದು ನಿಂತಿದ್ದು, ಸಾರ್ವಜನಿಕರ ಹಿತಾ ದೃಷ್ಟಿಯಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಮತ್ತು ಸದಸ್ಯರು ಸ್ವಂತ ಖರ್ಚಿಯಿಂದ ದುರಸ್ತಿಗೊಳಿಸಿದ್ದಾರೆ. ಗಿಡಗಂಟಿಗಳು ಬೆಳೆದು ನಿಂತ ಪರಿಣಾಮ ಎದುರಿನಿಂದ ಬರುತ್ತಿರುವ ವಾಹನಗಳು ಕಾಣದೇ ಇಲ್ಲಿ ಸಾಕಷ್ಟು ಸಾವು ನೋವುಗಳು ಸಂಭವಿಸಿದ್ದವು. ಈ ಸಂಬಂಧ ಈ  ಭಾಗದ ಶಾಸಕರು,  ಜನಪ್ರತಿನಿಧಿಗಳಿಗೆ ಸಾರ್ವಜನಿಕರು ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಸಂಬಂಧ ಸ್ಥಳೀಯ ಸೊರವನಹಳ್ಳಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಜಾಬೀರ್ ಹುಸೇನ್ ಮತ್ತು ಉಪಾಧ್ಯಕ್ಷೆ ಶಶಿಕಲಾ  ಹನುಮೇಗೌಡ ಮತ್ತು ಸದಸ್ಯರೆಲ್ಲ ಒಟ್ಟುಗೂಡಿ ಸಮಾಲೋಚನೆ ನಡೆದಿ ಕೊನೆಗೆ ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು ಒಂದು ಕಿಲೋಮೀಟರ್ ಉದ್ದದ ರಸ್ತೆಯಲ್ಲಿ ಅಡ್ಡಲಾಗಿರುವ ಗಿಡಗಳನ್ನು ಹಿಟಾಚಿ ಸಹಾಯದಿಂದ …

Read More

ತುಮಕೂರು: ಕೆ.ಎಸ್.ಆರ್.ಟಿ.ಸಿ. ವಿಭಾಗದ ತುರುವೇಕೆರೆ ಘಟಕದ ಬಸ್ ನಿಲ್ದಾಣದಲ್ಲಿ ಸಂವಿಧಾನ ಶಿಲ್ಪಿ.ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪರಿನಿಬ್ಬಾಣ ದಿನ ನಮನ ಕಾರ್ಯಕ್ರಮ ನಡೆಸಲಾಯಿತು. ಬಸ್ ನಿಲ್ದಾಣದ ಮುಂಬಾಗಿಲಿನಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ಕಾಯಕ್ರಮದಲ್ಲಿ ಘಟಕದ ವ್ಯವಸ್ಥಾಪಕರಾದ  ತಮ್ಮಯ್ಯ ಸಂಚಾರ ನಿರೀಕ್ಷಕರಾದ  ಶ್ವೇತ, ಘಟಕದ ಎಸ್ಸಿ, ಎಸ್ಟಿ ಅಧ್ಯಕ್ಷರಾದ ಗಂಗಾಧರ್ ಬಿ.ವಿಭಾಗಮಟ್ಟದ  ಪ್ರಧಾನಕಾರ್ಯದರ್ಶಿ ಡಿ.ಸಿ.ವನರಂಗಪ್ಪ,ಹಿರಿಯ ಉಪಾಧ್ಯಕ್ಷರಾದ ಜಗಣ್ಣ, ಜಂಟಿ ಕಾರ್ಯದರ್ಶಿಯಾದ ಚಂದ್ರಶೇಖರ್ ಹಾಗೂ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

To understand the new smart watched and other pro devices of recent focus, we should look to Silicon Valley and the quantified movement of the latest generation. Apple’s Watch records exercise, tracks our moves throughout the day, assesses the amount of time we are stood up and reminds us to get up and move around if we have been sat for too long – let’s not forget Tim Cook’s “sitting is the new factor” line. Diana saves Steve Trevor who has crashed on Themyscira. He warns her of the great war, World War I, raging across the globe. Wonder Woman…

Read More

To understand the new smart watched and other pro devices of recent focus, we should look to Silicon Valley and the quantified movement of the latest generation. Apple’s Watch records exercise, tracks our moves throughout the day, assesses the amount of time we are stood up and reminds us to get up and move around if we have been sat for too long – let’s not forget Tim Cook’s “sitting is the new factor” line. Diana saves Steve Trevor who has crashed on Themyscira. He warns her of the great war, World War I, raging across the globe. Wonder Woman…

Read More