Subscribe to Updates
Get the latest creative news from FooBar about art, design and business.
- ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
- ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
- ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
- ತಿಪಟೂರು: ಬೆಡ್ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
- ಅವೈಜ್ಞಾನಿಕ ಅಂಡರ್ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
- ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್ ಆರ್ ಟಿಸಿ ಅಧಿಕಾರಿಗೆ ಮನವಿ
- ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
- ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
Author: admin
ನವದೆಹಲಿ : ಇದೇ ತಿಂಗಳ 31 ರಿಂದ ಸಂಸತ್ ನ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ. ಸಂಸತ್ ನ ಬಜೆಟ್ ಅಧಿವೇಶದ ಮೊದಲ ದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಮರು ದಿನ ಕೇಂದ್ರ ಬಜೆಟ್ ಮಂಡನೆ ಆಗಲಿದೆ. ಇನ್ನು ಈ ಬಾರಿಯ ಸಂಸತ್ ಅಧಿವೇಶನ 2 ಭಾಗಗಳಲ್ಲಿ ನಡೆಯಲಿದೆ. ಮೊದಲ ಭಾಗ ಫೆಬ್ರವರಿ 11 ರಂದು ಮುಕ್ತಾಯವಾಗಲಿದ್ದು, 2ನೇ ಭಾಗ ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದೆ ಎಂದು ವರದಿಯಾಗಿದೆ. ವರದಿ :ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಡ್ಯ : ಹಾಲಿನ ಕ್ಯಾಂಟರ್ ರಸ್ತೆಯಲ್ಲಿ ಪಲ್ಟಿಯಾಗುತ್ತಿದ್ದಂತೆ ಹಾಲಿಗಾಗಿ ಜನರು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ರಾಗಿಮುದ್ದನಹಳ್ಳಿ ಗ್ರಾಮದಿಂದ ಹಾಲಿನ ಕ್ಯಾಂಟರ್ ಹಾಲನ್ನು ತುಂಬಿಕೊಂಡು ಬರುತ್ತಿತ್ತು. ಹೀಗೆ ಬರುತ್ತಿದ್ದ ಟ್ಯಾಂಕರ್, ಇಂಡುವಾಳು ಗ್ರಾಮದ ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಟ್ಯಾಂಕರ್ ಪಟ್ಟಿಯಾದ ಕೂಡಲೇ ಹಾಲು ರಸ್ತೆಪಾಲಾಗಿದೆ. ಇದನ್ನು ಕಂಡ ಸ್ಥಳೀಯರು ಬಿಂದಿಗೆ, ಕ್ಯಾನ್, ಪಾತ್ರೆಯನ್ನು ತಂದು ಹಾಲನ್ನು ತುಂಬಿಕೊಳ್ಳಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ. ವರದಿ :ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದಾವಣಗೆರೆ: ಸೋಮವಾರ ತಡರಾತ್ರಿ ವೃದ್ಧ ದಂಪತಿಗಳನ್ನು ಕೊಲೆ ಮಾಡಿರುವ ಘಟನೆ ಎಲೆಬೇತೂರು ಗ್ರಾಮದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಮದ ಮನೆಯೊಂದರಲ್ಲಿ 80 ವರ್ಷದ ಗುರುಸಿದ್ದಯ್ಯ ಮತ್ತು ಇವರ ಪತ್ನಿ 75 ವರ್ಷದ ಸರೋಜಮ್ಮ ವಾಸವಾಗಿದ್ದರು. ಇವರಿಗೆ ಇಬ್ಬರೂ ಹೆಣ್ಣುಮಕ್ಕಳಿದ್ದು, ಮದುವೆ ಮಾಡಿದ್ದರು. ಹಾಗಾಗಿ ಇವರು ಇಬ್ಬರೇ ವಾಸವಾಗಿದ್ದರು. ಸೋಮವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ದಂಪತಿಗಳು ಕೊಲೆಯಾಗಿರುವುದು ಯಾರಿಗೂ ತಿಳಿಯದಂತೆ ಆರೋಪಿಗಳು ಹೊರಗಿನಿಂದ ಮನೆ ಬಾಗಿಲನ್ನು ಹಾಕಿಕೊ0ಡು ಪರಾರಿಯಾಗಿದ್ದಾರೆ. ಇಂದು ಬೆಳೆಗ್ಗೆ ಪಕ್ಕದ ಮನೆಯವರು ಸರೋಜಮ್ಮರಿಗೆ ಭೇಟಿಯಾಗಲೆಂದು ಬಂದಿದ್ದಾರೆ. ಮನೆಯ ಬಾಗಿಲು ಹೊರಗಿನಿಂದ ಹಾಕಿರುವುದನ್ನು ಕಂಡು ಬಾಗಿಲನ್ನು ತೆಗೆದು ಒಳಗೆ ಹೋಗಿದ್ದಾರೆ. ಆಗ ವೃದ್ಧ ದಂಪತಿಗಳು ಕೊಲೆಯಾಗಿದ್ದು, ರಕ್ತದ ಮಡುವಿನಲ್ಲಿದ್ದಿದ್ದನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಇನ್ನೂ ದಂಪತಿ ಹತ್ಯೆ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ವರದಿ…
ನವದೆಹಲಿ : ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಫೋಟೋಗಳ ಬದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಅವರ ಫೋಟೋಗಳನ್ನು ಮಾತ್ರ ಅಳವಡಿಸಲಾಗುವುದು ಎಂದು ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮಯೊಂದರಲ್ಲಿ ಮಾತನಾಡಿದ ಅರವಿಂದ ಕೇಜ್ರಿವಾಲ್, ಇನ್ಮುಂದೆ ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಮುಖ್ಯಮಂತ್ರಿ ಅಥವಾ ರಾಜಕಾರಣಿಗಳ ಫೋಟೋಗಳನ್ನು ಹಾಕುವುದಿಲ್ಲ. ಬದಲಿಗೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಫೋಟೋಗಳು ಮಾತ್ರ ಅಳವಡಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಅಂಬೇಡ್ಕರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರಿಂದ ಸ್ಫೂರ್ತಿ ಪಡೆದಿದ್ದೇನೆ. ಅಂಬೇಡ್ಕರರು ಭಾರತ ಸಂವಿಧಾನ ಶಿಲ್ಪಿ ಮತ್ತು ಮೊದಲ ಕಾನೂನು ಮಂತ್ರಿ ಎಂಬುದು ನಮಗೆಲ್ಲ ತಿಳಿದಿದೆ. ಬಡವರಾಗಲಿ ಅಥವಾ ಶ್ರೀಮಂತರಾಗಿರಲಿ ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬುದು ಅವರ ಕನಸಾಗಿತ್ತು. ಆ ಕನಸನ್ನು ನಮ್ಮ ಸರ್ಕಾರದಲ್ಲಿ ನನಸು ಮಾಡಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ವರದಿ :ಆಂಟೋನಿ ಬೇಗೂರು
ಮಧುಗಿರಿ : ತಾಲ್ಲೂಕಿನಲ್ಲಿ ಅತೀ ಹೆಚ್ಚು ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಅದನ್ನು ತಪ್ಪಿಸುವಂತೆ ಅನೇಕ ಬಾರಿ ಕರ್ನಾಟಕ ರಣಧೀರರ ವೇದಿಕೆ ಮನವಿಯನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ನೀಡಿದ್ದರು. ಆದರೆ ಆರೋಗ್ಯಾಧಿಕಾರಿಗಳು ನೆಪ ಮಾತ್ರಕ್ಕೆ 4-5 ನಕಲಿ ವೈದ್ಯರನ್ನು ಭೇಟಿ ಮಾಡಿ ನೋಟಿಸ್ ಕೊಟ್ಟು ಕಾನೂನು ಕ್ರಮ ಜರುಗಿಸಿದ್ದಾರೆ. ಇನ್ನುಳಿದ ನಕಲಿ ವೈದ್ಯರಿಗೆ ಅಭಯ ನೀಡಿ ಪೋಷಿಸುತ್ತಿರುವ ತಾಲ್ಲೂಕು ಆರೋಗ್ಯಾಧಿಕಾರಿಗಳು ಎಂದು ಸಾರ್ವಜನಿಕರೂ ಆರೋಪಿಸುತ್ತಿದ್ದಾರೆ. ಈ ವಿಚಾರವಾಗಿ ಮೇಲ್ನೋಟಕ್ಕೆ ನಮ್ಮಗಳಿಗೂ ಇದು ಸತ್ಯವೆನಿಸುತ್ತಿದೆ ಆದ ಕಾರಣ ಇಂದು ಮಧುಗಿರಿ ತಾಲ್ಲೂಕು ತಹಸೀಲ್ದಾರ್ ರವರು ರಜೆಯಲ್ಲಿ ಇರುವ ಕಾರಣ ಗ್ರೇಡ್ 2 ತಹಸೀಲ್ದಾರ್ ರಾದ ಪಿ.ಎಂ ಕಮಲಮ್ಮ ರವರನ್ನು ಭೇಟಿ ಮಾಡಿ ತಾಲ್ಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಹಾಗೂ ನಕಲಿ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದೇವೆ ಹಾಗೂ ಮುಂದಿನ ದಿನದಲ್ಲಿ ರಾಜ್ಯಾದ್ಯಂತ ನಕಲಿ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಬೃಹತ್ ಮಟ್ಟದ ಹೋರಾಟ ಮಾಡುತ್ತೇವೆ ಎಂದು…
ಪಾವಗಡ: ಯ ನಾ ಹೊಸಕೋಟೆ ಹೋಬಳಿಯ ದೊಡ್ಡಲಂಬಾಣಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಶಾಲೆಯ ಮುಖ್ಯಶಿಕ್ಷಕ ಆಂಜನೇಯಲು ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ, ಭಾರತದಲ್ಲಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯ ದಿನವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಂವಿಧಾನ ಜಾರಿಗೆ ಬಂದ ಈ ದಿನ ಬಹಳ ವಿಶೇಷವಾಗಿದ್ದು, ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಹಲವು ಪ್ರಮುಖ ನಾಯಕರನ್ನು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿದಂತಹ ಪ್ರತಿಯೊಬ್ಬರು ನಮಗೆ ಸ್ಪೂರ್ತಿಯಾಗಿದ್ದಾರೆ. ಈ ದಿನ ಧ್ವಜಾರೋಹಣ ಮಾಡಿದ ನನಗೆ ಹೆಮ್ಮೆಯಿದೆ ಎಂದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕರಾದ ಆಂಜನೇಯಲು, SDMC ಅಧ್ಯಕ್ಷ ಸೀನ ನಾಯ್ಕ, ಅಂಗವಾಡಿ ಶಿಕ್ಷಕಿ ಶಾನಮ್ಮ, ಊರಿನ ಗ್ರಾಮಸ್ಥರಾದ ಹನುಮಂತ ನಾಯ್ಕ, ಲಾಲ ನಾಯ್ಕ, ಹಳೆಯ ವಿದ್ಯಾರ್ಥಿಗಳಾದ ಹರೀಶ್ ನಾಯ್ಕ, ನಾರಾಯಣ ನಾಯ್ಕ, ಚೇತನ್, ನಂದೀಶ್ ನಾಯ್ಕ, ಶ್ರೀಕಾಂತ್ ನಾಯ್ಕ, ಹಾಜರಿದ್ದರು, ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ತುಮಕೂರು: ಪಟ್ಟಣದ ಅಶೋಕ ನಗರದಲ್ಲಿರುವ ಮಹೇಶ್ ಪಿ.ಯು ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಹಾಗೂ ಸಂಭ್ರಮದಿಂದ ಕಾಲೇಜಿನ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಆಚರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ವಿದ್ಯಾ ಪಾಟೀಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದಲ್ಲಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯ ದಿನವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಂವಿಧಾನ ಜಾರಿಗೆ ಬಂದ ಈ ದಿನ ಬಹಳ ವಿಶೇಷವಾಗಿದ್ದು, ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಹಲವು ಪ್ರಮುಖ ನಾಯಕರನ್ನು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿದಂತಹ ಪ್ರತಿಯೊಬ್ಬರು ನಮಗೆ ಸ್ಪೂರ್ತಿಯಾಗಿದ್ದಾರೆ. ಈ ದಿನ ಪ್ರಾಂಶುಪಾಲರಾಗಿ ಧ್ವಜಾರೋಹಣ ಮಾಡಿದ ನನಗೆ ಹೆಮ್ಮೆಯಿದೆ ಎಂದರು. ಉಪನ್ಯಾಸಕ ಶ್ರೀನಿವಾಸ್ ಕಲ್ಲೂರು ಮಾತನಾಡಿ, ಗಣರಾಜ್ಯೋತ್ಸವ ದಿನವನ್ನು ಭಾರತದ ಪ್ರತಿ ಸರ್ಕಾರಿ ಕಚೇರಿಗಳು, ಇಲಾಖೆಗಳು ಮತ್ತು ಸಂಸ್ಥೆಗಳು, ಹಾಗೂ ಎಲ್ಲಾ ಶಾಲಾ, ಕಾಲೇಜುಗಳು ಸೇರಿದಂತೆ ವಿಶ್ವವಿದ್ಯಾಲಯಗಳಲ್ಲಿ ಅತ್ಯಂತ ವಿಶೇಷವಾಗಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಭಾರತದ ಸರ್ವ ಪ್ರಜೆಗೂ ಸಮಾನ ಶಿಕ್ಷಣ, ಸರ್ವರಿಗೂ ಹಕ್ಕುಗಳನ್ನು ನೀಡಿರುವ ಸಂವಿಧಾನ ಜಾರಿಗೆ ತಂದ ಈ ದಿನವನ್ನು…
ತಿಪಟೂರು: ತುಮಕೂರು ಜಿಲ್ಲೆ ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಸರಳ ಹಾಗೂ ಸಂಭ್ರಮದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ತಿಪಟೂರು ಉಪವಿಭಾಗಾಧಿಕಾರಿ ದಿಗ್ವಿಜಯ್ ಬೋಡ್ಕೆ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಎನ್.ಸಿ.ಸಿ ತುಕ್ಕಡಿಗಳಿಂದ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಅವರು, ದೇಶದ ಸಮಗ್ರ ಅಭಿವೃದ್ದಿ ಹಾಗೂ ಐಕ್ಯತೆಯ ವಿಷಯದಲ್ಲಿ ಪ್ರತಿಯೊಬ್ಬ ಭಾರತೀಯನು ಸ್ವಾಭಿಮಾನ ಬೆಳಸಿಕೊಳ್ಳಬೇಕು. ಭಾರತಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳು ಕಳೆಯುತ್ತಿದ್ದರೂ ನಮ್ಮ ನಡುವೆಯೇ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದೇವೆ ಎಂದರು. ಜಾತಿಯತೆ, ಮಾತಾಂಧತೆ, ಭಯೋತ್ವಾದನೆ, ಬಡತನದಂತೆ ಸಮಸ್ಯೆಗಳನ್ನು ದೇಶ ಎದುರಿಸುತ್ತಿದ್ದು, ಪ್ರತಿಯೊಬ್ಬ ಭಾರತೀಯ ತಮ್ಮ ಹಕ್ಕು ಕರ್ತವ್ಯಗಳ ಜವಾಬ್ದಾರಿ ಅರಿತು ದೇಶಕ್ಕಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು .ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸಿದರು. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಡಿವೈಎಸ್ಪಿ ಸಿದ್ದಾರ್ಥ್ ಗೋಯಲ್, ನಗರಸಭಾ ಅಧ್ಯಕ್ಷ ರಾಮ್ ಮೋಹನ್ ಪೌರಾಯುಕ್ತ ಉಮಾಕಾಂತ್, ಬಿಇಒ ಪ್ರಭುಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೃಷಿ ಇಲಾಖೆಗಳಲ್ಲಿ ರೈತರು ಸ್ಪ್ಲಿಂಕ್ಲರ್ ( Splinkler ) ಸೆಟ್ ಆಗಲಿ ಮತ್ತೊಂದುಕ್ಕಾಗಲಿ ದಿನನಿತ್ಯ ಅನಾವಶ್ಯಕವಾಗಿ ರೈತರನ್ನು ಅಲೆದಾಡಿಸುತ್ತಿದ್ದು , ಸಂಬಂಧಪಟ್ಟ ರೇಷ್ಮೆ ಇಲಾಖೆಯ ಅಧಿಕಾರಿಯನ್ನು ವಿಚಾರಿಸಿದಾಗ ರೇಷ್ಮೆ ಇಲಾಖೆಯ ಅಧಿಕಾರಿ ಸರ್ವೇಶ್ ಬಾವಿ ಕಟ್ಟಿ ಮಾಹಿತಿ ನೀಡಿದರು. ಈಗಾಗಲೇ ಸಂಬಂಧಪಟ್ಟ ಕೃಷಿ ಇಲಾಖೆಯ ಅಧಿಕಾರಿಯವರಿಗೆ ನಾವು ಈಗಾಗಲೇ ಕೃಷಿ ಇಲಾಖೆಯಲ್ಲಿ ಕೃಷಿ ಉಪಕರಣಗಳನ್ನು ಪಡೆದುಕೊಳ್ಳಲು ಬರುವಂತಹ ರೈತರ ಸಮಯವನ್ನು ವ್ಯರ್ಥ ಮಾಡಿಸಬೇಡಿ ಎಂದು ಹೇಳಿದ್ದೇವೆ ಎಂದು ಅವರು ಹೇಳಿದರು. ಕೋವಿಡ್ ೩ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ದೃಷ್ಟಿಯಿಂದ ರೈತರಿಗೆ ತಾವುಗಳು ಕೃಷಿ ಉಪಕರಣಗಳನ್ನು ನೀಡಬಹುದಾಗಿಯೂ ಸಹ ತಿಳಿಸಿದರು . ಹಾಗೂ ಅದಕ್ಕೆ ಸಂಬಂಧ ಪಟ್ಟಂತ ವಿತರಣ ನಿರಪೇಕ್ಷಣ ಪತ್ರವನ್ನು ಸಹ ಈಗಾಗಲೇ ಕೃಷಿ ಇಲಾಖೆಯ ಅಧಿಕಾರಿಗಳಿಗೆ ನೀಡಿದಾಗಿಯೂ ಸಹ ಸರ್ವೇಶ್ ಬಾವಿ ಕಟ್ಟಿ ಅವರು ತಿಳಿಸಿದ್ದಾರೆ. ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ)
1932 ಸೆಪ್ಟೆಂಬರ್ 17 ಇಂಗ್ಲೆಂಡ್ ನ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ನಡೆದ ವಾಗ್ವಾದ. ಅಂಬೇಡ್ಕರ್: ಭಾರತದಲ್ಲಿರುವ 18 ವರ್ಷ ತುಂಬಿದ ಗಂಡು ಮತ್ತು ಹೆಣ್ಣು, ಪ್ರತಿಯೊಬ್ಬರಿಗೆ ಓಟು ಹಾಕುವ ಹಕ್ಕು ಇರಲಿ. ಗಾಂಧೀಜಿ: ನಾನು ಒಪ್ಪುವುದಿಲ್ಲ. ಜಮೀನ್ದಾರರಿಗೆ, ಉದ್ಯಮಿದಾರರಿಗೆ, ಡಿಗ್ರಿ, ಎಂ ಎ ಓದಿರುವವರಿಗೆ ಗಿರಣಿ ಮಾಲಿಕರಿಗೆ, ಓಟ್ ಮಾಡುವ ಹಕ್ಕಿರಲಿ. ಅಸ್ಪೃಶ್ಯರಿಗೆ ಓಟ್ ಮಾಡುವ ತಿಳುವಳಿಕೆ ಇಲ್ಲಾ. ಅವರು ಅನಕ್ಷರಸ್ಥರು ಅವರಿಗೆ ಓಟ್ ಅಗತ್ಯವಿಲ್ಲ. ಬೇಕಾದರೆ ಅವರಿಗಾಗಿ ಶಾಲೆಗಳನ್ನ ತೆಗೆದು ಶಿಕ್ಷಣ ಕೊಡಿ ಮತ್ತು ಅಂಬೇಡ್ಕರ್, ಮಹಿಳೆಯರಿಗಾಗಿ ಓಟಿನಹಕ್ಕು ಕೇಳುತ್ತಿರುವುದು ಹಾಸ್ಯಾಸ್ಪದ. ನಾನು ಇದನ್ನ ಖಡಾಖಂಡಿತವಾಗಿ ವಿರೋಧಿಸುತ್ತೇನೆ. ಅಂಬೇಡ್ಕರ್ : ಓಟ್ ಹಾಕಲು ಸಾಮಾನ್ಯ ತಿಳಿವಳಿಕೆ ಇದ್ದರೆ ಸಾಕು. ಡಿಗ್ರಿ, ಎಂ.ಎ. ಓದಿರುವವರು ಇರಬೇಕೆಂದೆನಿಲ್ಲಾ. ಮೇಲಾಗಿ ಭಾರತದಲ್ಲಿ ಬಹುಸಂಖ್ಯಾತ ಎಸ್ ಸಿ, ಎಸ್ ಟಿ, ಮತ್ತು ಓ ಬಿ ಸಿ ಗಳು ಯಾರೂ ಶಿಕ್ಷಣ ಪಡೆದಿಲ್ಲ . ಇವರಿಗೆ ಧರ್ಮಶಾಸ್ತ್ರದ ಅನುಸಾರವಾಗಿ ಶಿಕ್ಷಣ ಮತ್ತು ಆಸ್ತಿ ಹೊಂದುವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ.…