Subscribe to Updates
Get the latest creative news from FooBar about art, design and business.
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
- ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
Author: admin
ಮಧುಗಿರಿ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೃತಪಟ್ಟಿರುವ ದಾರುಣ ಘಟನೆ ಮಧುಗಿರಿ ತಾಲೂಕಿನ ಕಸಬಾ ವ್ಯಾಪ್ತಿಯಲ್ಲಿ ನಡೆದಿದೆ. ಕವಾಡಿಗರ ಪಾಳ್ಯ ನಿವಾಸಿ, ಚಿಕ್ಕವಜ್ರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವೀರಭದ್ರಯ್ಯ(55) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಕವಾಡಿಗರ ಪಾಳ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ವೀರಭದ್ರಯ್ಯನವರಿಗೆ ಡಿಕ್ಕಿ ಹೊಡೆದಿದೆ.. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಗುರುವಾರ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪರಿಚಿತ ವಾಹನದ ಪತ್ತೆಗೆ ಮುಂದಾಗಿದ್ದು, ತನಿಖೆ ಮುಂದುವರಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಹಕಾರ ಕೃಷಿ ಪತ್ತಿನ ಸಹಕಾರ ಸಂಘ ನಿ.(ವಿ ಎಸ್ ಎಸ್ ಎನ್) ನಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಸುಮಾರು 50ಕ್ಕೂ ಹೆಚ್ಚು ಮುಗ್ಧ ಬಡ ಜನರಿಗೆ ಸಹಕಾರ ಸಂಘದ ನಿಯಮ ಮೀರಿ ನಕಲಿ ನಿಶ್ಚಿತ ಠೇವಣಿ ಬಾಂಡ್ ವಿತರಿಸಿ ವಂಚನೆ ಮಾಡಿರುವ ಘಟನೆ ನಡೆದಿದೆ.. ಬೆಂಡೋಣೆ ವಿ ಎಸ್ ಎಸ್ ಎನ್ ವ್ಯಾಪ್ತಿಯಲ್ಲಿ ಸುಮಾರು ಅಂದಾಜು 70 ಲಕ್ಷ ರೂಪಾಯಿ ವಂಚನೆ ಆಗಿರುವುದು ಸಾಬೀತಾಗಿದ್ದು. ಸಹಕಾರ ಕ್ಷೇತ್ರಕ್ಕೆ ಕಪ್ಪುಮಸಿ ಬಳಿಯುವ ಹುನ್ನಾರ ನಡೆದಿದೆ ಎನ್ನಲಾಗಿದೆ. ತುಮಕೂರು ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಇದೆ ಮೊದಲ ಬಾರಿಗೆ ಇಂತಹ ದೊಡ್ಡ ಮಟ್ಟದ ಹಣದ ಮಹಾ ವಂಚನೆ ನಡೆದುರುವುದು ಸಹಕಾರ ಕ್ಷೇತ್ರಕ್ಕೆ ಅವಮಾನ ತಂದಿದೆ. ಬೆಂಡೋಣೆ ವಿ ಎಸ್ ಎಸ್ ಎನ್ ವ್ಯಾಪ್ತಿಯಲ್ಲಿನ ಗ್ರಾಮಿಣ ಭಾಗದ ಬಡ ಜನರಿಗೆ ಸಹಕಾರ ಸಂಘದ ನಿಯಮಗಳನ್ನು ಗಾಳಿಗೆ ತೂರಿ ಸುಮಾರು 50ಕ್ಕೂ ಹೆಚ್ಚು ನಕಲಿ…
ಬೆಂಗಳೂರು: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಸಿಎಂ ಸಂತಾಪ: ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೀದರ್: ಜಿಲ್ಲೆಯ ಔರಾದ ತಾಲೂಕಿನಲ್ಲಿ ನಿರಂತರವಾಗಿ ಸುರುತ್ತಿರುವ ಮಳೆಯಿಂದಾಗಿ ಸಾಕಷ್ಟು ಹಾನಿ ಸಂಭವಿಸಿದೆ. ತಾಲೂಕಿನ ಬೋರಾಳ ಗ್ರಾಮದಿಂದ ಮುಂಗನಾಳ ಗ್ರಾಮಕ್ಕೆ ಸಂಪರ್ಕ ಕಲಿಸುವ ರಸ್ತೆ ಮಧ್ಯ ಸೇತುವೆ ಮಳೆ ನೀರಿಗೆ ಕೊಚ್ಚಿ ಹೋಗಿದೆ. ಮತ್ತು ಸೇತುವೆ ಅಕ್ಕ–ಪಕ್ಕದ ಹೊಲಗಳಿಗೆ ನೀರು ನುಗ್ಗಿ ರೈತರ ಬೆಳೆನಾಶ ಆಗಿದೆ. ಜೊತೆಗೆ ಹೊಲದಲ್ಲಿರುವ ಮಣ್ಣು ಹರಿದುಕೊಂಡು ಹೋಗಿದೆ. ಈ ಹಿನ್ನೆಲೆಯಲ್ಲಿ ಬೋರಳ ಗ್ರಾಮಕ್ಕೆ ಕಾಂಗ್ರೆಸ್ ಯುವ ಮುಖಂಡರಾದ ಸುಧಾಕರ್ ಕೊಳ್ಳುರ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ರಸ್ತೆ ಸೇತುವೆ ಸರಿ ಮಾಡುವ ತಿಳಿಸಿದರು. ತಾಲೂಕಿನಲ್ಲಿ ಭಾರೀ ಮಳೆಯಿಂದ ರೈತರ ಹೊಲಗಳಿಗೆ ಹಾನಿಯಾಗಿದೆ. ಆದರೂ ಅಧಿಕಾರಿಗಳು ತಮಗೂ ಇದಕ್ಕೂ ಸಂಬಂಧ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಸರಿಯಾದ ಸಮೀಕ್ಷೆ ನಡೆಸುತ್ತಿಲ್ಲ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಸುಧಾಕರ್ ಕೊಳ್ಳುರ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಿವಶಂಕರ ಮಣಿಗಂಪುರೆ, ಉಮಾಕಾಂತ ಸೋನೆ, ಮಾಧವ್ , ಸಮೃದ್ ಪಾಟೀಲ್,…
ಮಧುಗಿರಿ: ಪಟ್ಟಣದ ಗೊಬ್ಬರ ಅಂಗಡಿ ಮುಂಭಾಗ ಮಂಗಳವಾರ ತಾಲ್ಲೂಕಿನ ರೈತರು ಮುಗಿಬಿದ್ದು ಯೂರಿಯಾ ಖರೀದಿಸಿದರು. ಪಟ್ಟಣದ ಗೊಬ್ಬರದ ಅಂಗಡಿಗಳಿಗೆ ಯೂರಿಯಾ ಪೂರೈಕೆಯಾಗಿರುವ ವಿಷಯ ತಿಳಿದ ರೈತರು ತಮ್ಮ ಆಧಾರ್ ಕಾರ್ಡ್ಗಳನ್ನು ಕೈಯಲ್ಲಿ ಹಿಡಿದು ಸಾಲಿನಲ್ಲಿ ನಿಂತು ಖರೀದಿಗೆ ಮುಂದಾದರು. ಮಳೆ ಬಂದಾಗ ಯೂರಿಯಾಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಬೇಕಾಗುವಷ್ಟು ಗೊಬ್ಬರ ಕೊಡಬೇಕು. ಆದರೆ ಗೊಬ್ಬರದ ಅಂಗಡಿಗಳಲ್ಲಿ ಯೂರಿಯಾ ಗೊಬ್ಬರವೇ ಸಿಗುತ್ತಿಲ್ಲ. ಇದರಿಂದಾಗಿ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರೈತ ಕೃಷ್ಣಪ್ಪ ಆಗ್ರಹಿಸಿದರು. ರೈತರಿಗೆ ಅಗತ್ಯವಿರುವ ಬೀಜ ಮತ್ತು ಯೂರಿಯಾ ಗೊಬ್ಬರಕ್ಕೆ ಸಾಕಷ್ಟು ಬೇಡಿಕೆಯಿದ್ದರೂ, ಸರ್ಕಾರ ಪೂರೈಸದೇ ನಿರ್ಲಕ್ಷ್ಯ ವಹಿಸಿರುವುದರಿಂದ ಈ ರೀತಿಯ ಸಮಸ್ಯೆ ಎದುರಾಗಿದೆ. ತಕ್ಷಣ ಸರ್ಕಾರವೇ ಈ ಸಮಸ್ಯೆ ತಿಳಿಗೊಳಿಸಬೇಕು ಎಂದು ರೈತ ರಂಗನಾಥಪ್ಪ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕುಣಿಗಲ್: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ನಾಗರಿಕರು ಗೌರವಿಸಬೇಕು. ಅಂತೆಯೇ ಪೌರಕಾರ್ಮಿಕರು ಪೌರರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕಿದೆ ಎಂದು ಶಾಸಕ ರಂಗನಾಥ್ ತಿಳಿಸಿದರು. ಪುರಸಭೆಯಲ್ಲಿ ಮಂಗಳವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ನಿವೇಶನ ನೀಡಲು ಮೂರು ಎಕರೆ ಜಮೀನು ಗುರುತಿಸಲಾಗಿದ್ದು, ರಸ್ತೆ ಸಮಸ್ಯೆ ಬಗೆಹರಿಯದ ಕಾರಣ ವಿತರಣೆ ತಡವಾಗಿದ್ದು, ಸಮಸ್ಯೆ ಬಗೆಹರಿಸಲು ತಹಶೀಲ್ದಾರ್ ಅರವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸಿ ನಿವೇಶನ ಹಂಚಿಕೆ ಕ್ರಮ ಕೈಗೊಳ್ಳಲಾಗುವುದು. ಎಲ್ಲೆಂದರಲ್ಲಿ ಕಸ ಸುರಿಯುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಜಾಗೃತಿ ಮೂಡಿಸಬೇಕಿದೆ, ದುಶ್ಚಟಗಳಿಂದ ದೂರವಿದ್ದು,, ಕೀಳರಿಮೆ ಬಿಟ್ಟು ಕರ್ತವ್ಯ ನಿರ್ವಹಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಲು ಸಲಹೆ ನೀಡಿದರು. ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮೆ ಉಪವಾಸ ಮಾಡಿ, ದುಶ್ಚಟಗಳಿಂದ ದೂರವಿರಿ. ಪ್ರತಿವರ್ಷ ಉತ್ತಮ ಪೌರ ಕಾರ್ಮಿಕರಿಗೆ 25 ಸಾವಿರ ಬಹುಮಾನ ಘೋಷಣೆ ಮಾಡಿದರು. ಪುರಸಭೆ ಅಧ್ಯಕ್ಷೆ ಮಂಜುಳಾ ನಾಗರಾಜು, ಸ್ಥಾಯಿ ಸಮಿತಿ ಅಧ್ಯಕ್ಷೆ ಅಸ್ಮಾ, ಪುರಸಭೆ ಸದಸ್ಯರು,…
ತುಮಕೂರು: ಪೌರ ಕಾರ್ಮಿಕರಿಗೆ ವಸತಿ ನಿರ್ಮಿಸಲು ಹೆಬ್ಬಾಕ ಬಳಿ 15 ಎಕರೆ ಜಾಗ ಗುರುತಿಸಲಾಗಿದ್ದು, ಜಿಲ್ಲಾಧಿಕಾರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ಮಂಗಳವಾರ ಮಹಾನಗರ ಪಾಲಿಕೆಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ, ಕಾರ್ಮಿಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಅನುಮತಿ ನೀಡಿದ ನಂತರ ಪಾಲಿಕೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಹತ್ತಾರು ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರು ಅನಾರೋಗ್ಯದಿಂದ ಸಾವನ್ನಪ್ಪುವ ಸಾಧ್ಯತೆ ಹೆಚ್ಚಿವೆ. ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು. ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಜ, ‘ಗೃಹ ಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಶೀಘ್ರದಲ್ಲಿಯೇ ಪೌರ ಕಾರ್ಮಿಕರಿಗೆ ಆರೋಗ್ಯ, ಜೀವ ಹಾಗೂ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗುವುದು. ಕಸ ಬಿಸಾಡುವ ನಾಗರಿಕರಿಂದ 710 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದರು. ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್ ಗಳಾದ…
ಶಿರಾ: ನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. ಮಹಮದ್ ರಫೀ (19) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ಮಹಮದ್ ರಫೀ ನಗರದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಸಿವಿಲ್ ವಿಭಾಗದಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದು, ಒಂದು ವಾರದಿಂದ ಸ್ವಗ್ರಾಮಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದ. ಮಂಗಳವಾರ ವಿದ್ಯಾರ್ಥಿ ನಿಲಯಕ್ಕೆ ವಾಪಸ್ ಬಂದಿದ್ದು. ರಾತ್ರಿ ಊಟ ಮಾಡಿ ಮಲಗಿದ್ದಾನೆ. ಬುಧವಾರ ಮುಂಜಾನೆ ಶೌಚಾಲಯಕ್ಕೆ ಹೋಗಿ ಬಾಗಿಲು ಹಾಕಿಕೊಂಡಿದ್ದು ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಎಷ್ಟು ಸಮಯವಾದರೂ ಶೌಚಾಲಯದಿಂದ ಹೊರಕ್ಕೆ ಬರದ ಕಾರಣ ಇತರೇ ವಿದ್ಯಾರ್ಥಿಗಳು ಕೂಗಿದರು ಒಳಗಿನಿಂದ ಯಾವುದೇ ಶಬ್ದ ಬರದ ಕಾರಣ ಬಾಗಿಲನ್ನು ಹತ್ತಿ ನೋಡಿದಾಗ ಮಹಮದ್ ರಫೀ ಬಿದ್ದಿರುವುದನ್ನು ನೋಡಿ ವಾರ್ಡನ್ ಅವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಬಾಗಿಲು ತೆರೆದು ನೋಡುವ ವೇಳೆಗೆ ರಫೀ ಮೃತ ಪಟ್ಟಿದ್ದಾನೆ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ…
ತುಮಕೂರು: ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಹಣಕಾಸು ವಿಭಾಗದ ಆಡಳಿತ ಅಧೀಕ್ಷಕ ಆರ್.ಎಸ್.ವಿನಯ್ ಕೆಲವು ದಿನಗಳಿಂದ ಕಚೇರಿಯಲ್ಲಿ ನೆಲದ ಮೇಲೆ ಕುಳಿತು ಕೆಲಸ ಮಾಡುತ್ತಿದ್ದಾರೆ. ನಾನು ದಲಿತ ಎಂಬ ಕಾರಣಕ್ಕೆ ಕಚೇರಿಯಲ್ಲಿ ಕುರ್ಚಿ, ಟೇಬಲ್ ಕೊಡುತ್ತಿಲ್ಲ. ಡೇರಿ ಮೇಲ್ವಿಚಾರಕ ಎಸ್.ಉಮೇಶ್, ಆಡಳಿತ ವಿಭಾಗದ ವ್ಯವಸ್ಥಾಪಕ ಮಂಜುನಾಥ್ ನಾಯಕ ಎಂಬುವರು ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ತಿಂಗಳ ಹಿಂದೆ ಆಡಳಿತ ವಿಭಾಗದಿಂದ ಹಣಕಾಸು ವಿಭಾಗಕ್ಕೆ ವರ್ಗಾವಣೆಯಾಗಿದ್ದು, ವಿಭಾಗದಲ್ಲಿ ಕೂಡಲು ಸ್ಥಳ ಕೊಡದೆ ಅವಮಾನಿಸಿದ್ದರು. ಬಳಿಕ ಹಣಕಾಸು ವಿಭಾಗದ ವ್ಯವಸ್ಥಾಪಕರು ಕಚೇರಿ ಮೂಲೆಯಲ್ಲಿದ್ದ ಕಿರಿದಾದ ಕಂಪ್ಯೂಟರ್, ಫೈಲ್ ತುಂಬಿದ್ದ ಕೊಠಡಿಯಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಿದ್ದರು ಎಂದಿದ್ದಾರೆ. ಕಿರಿದಾದ ಕೊಠಡಿ ಸ್ವಚ್ಛಗೊಳಿಸಿ ಕೆಲಸ ಮಾಡುತ್ತಿದ್ದೆ. ಬಳಿಕ ಕೊಠಡಿ ಖಾಲಿ ಮಾಡಿಸಿದರು. ಇದರಿಂದ ಬೇಸತ್ತು ನೆಲದ ಮೇಲೆ ಕುಳಿತು ಕೆಲಸ ಮಾಡುತ್ತಿದ್ದೇನೆ. ಪರಿಶಿಷ್ಟ ಜಾತಿಗೆ ಸೇರಿದವನು ಎಂಬ ಕಾರಣಕ್ಕೆ ಈ ರೀತಿ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ಕಿರುಕುಳ ನೀಡುತ್ತಿರುವ…
ಸರಗೂರು: ತಾಲ್ಲೂಕಿನಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ರೈತರ ಜೀವನ ಕಷ್ಟಕರವಾಗಿದೆ, ಆದರೂ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರ ನೆರವಿಗೆ ಬರುತ್ತಿಲ್ಲ’ ಹಾಗೂ ರೈತರ ಬಗ್ಗೆ ಅವಹೇಳನಾಕಾರಿ ಮಾತನಾಡಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ.ಸತೀಶ್ ವಿರುದ್ಧ ರೈತ ಸಂಘ ಮತ್ತು ಪ್ರಗತಿಪರ ಸಂಘಟನೆ ಮಂಗಳವಾರದಂದು ಅರಣ್ಯ ಇಲಾಖೆ ಕಚೇರಿ ಮುಂಭಾಗ ವಿವಿಧ ಘೋಷಣೆ ಕೂಗಿ ಎಸಿಎಫ್ ಸತೀಶ್ ರವರನ್ನು ವರ್ಗಾವಣೆ ಮಾಡಬೇಕು ಪ್ರತಿಭಟನೆ ಒತ್ತಾಯಿಸಿದರು. ನಂತರ ಸಭೆ ಕುರಿತು ಮಾತನಾಡಿದ ರೈತ ಸಂಘದ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಹಳೆಹೆಗ್ಗುಡಿಲು ನವೀನ್, ಸೆ.10ರಂದು ರೈತ ಸಭೆಯಲ್ಲಿ “ರೈತರು ನಿಮಗೆ ನಾಚಿಕೆಯಾಗಬೇಕು” ಎಂದು ಅವಹೇಳನಾಕಾರಿಯಾಗಿ ಮಾತನಾಡಿರುವ ಈ ಭಾಗದ ಸಹಾಯಕ ಸಂರಕ್ಷಣಾಧಿಕಾರಿ ರೈತರ ಬಗ್ಗೆ ಅರಿವು ಇಲ್ಲದಂತೆ ಮಾತನಾಡಿದ ವ್ಯಕ್ತಿಯನ್ನು ಅಮಾನತು ಮತ್ತು ವರ್ಗಾವಣೆ ಮಾಡಿ ಎಂದು ಅರಣ್ಯ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು. ದಸಂಸ ಮುಖಂಡ ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎ.ಎಸ್.ಡಿ.ಸಣ್ಣಸ್ವಾಮಿ ಮಾತನಾಡಿ, ಕಾಡು ಪ್ರಾಣಿಗಳು ಮತ್ತು ಕಾಡಾನೆಗಳು ನಿರಂತರವಾಗಿ…