Subscribe to Updates
Get the latest creative news from FooBar about art, design and business.
- ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
- ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
- ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
- ತಿಪಟೂರು: ಬೆಡ್ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
- ಅವೈಜ್ಞಾನಿಕ ಅಂಡರ್ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
- ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್ ಆರ್ ಟಿಸಿ ಅಧಿಕಾರಿಗೆ ಮನವಿ
- ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
- ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
Author: admin
ಕೊರಟಗೆರೆ : ಯುಕ್ತ ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ಕೊರಟಗೆರೆ ತಾಲ್ಲೂಕು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದ ಮಧುಗಿರಿ ದಿಲೀಪ್, ಗ್ರಾಮೀಣ ಭಾಗದ ವಿದ್ಯಾರ್ಥಿಗಳು msyep (Multi skill youth empowerment programme) ಪಡೆಯುವ ಮೂಲಕ ಉದ್ಯೋಗಕ್ಕೆ ಸಹಕಾರಿಯಾಗಿದೆ ಎಂದು msyep ತರಬೇತಿಯ ಬಗ್ಗೆ ಅರಿವು ಮೂಡಿಸಿದರು. ತರಬೇತಿಯನ್ನು ಪಡೆದುಕೊಳ್ಳಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಒಂದು ಸುವರ್ಣ ಅವಕಾಶ. ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಧರ್ ರವರು ವಿದ್ಯಾರ್ಥಿಗಳಿಗೆ msyep ತರಬೇತಿಯನ್ನು ನಮ್ಮ ಕಾಲೇಜಿನಲ್ಲಿ ನೀಡಬೇಕೆಂದು ಮನವಿ ಮಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮುಖ್ಯ ಕಾರ್ಯಕ್ರಮ ಅಯೋಜಕರಾದ ದೀಪಿಕಾ ವೆಂಕಟೇಶ್ ರವರು ತರಬೇತಿ ಯ ಅವಧಿ ಮತ್ತು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಉಪವಿಭಾಗ ಆಯೋಜಕರು ತನುಜ, ಪೂಜಾ ಸಹನಾ, ಲೀಲಾವತಿ ಹಾಜರಿದ್ದರು. ಪ್ರಾಥಮಿಕ ಕೃಷಿ ಪತ್ತಿನ ಸಂಘ ಸಹಕಾರ ಸಂಘದ ಅಧ್ಯಕ್ಷರಾದ…
ಕೊರಟಗೆರೆ: ತಾಲ್ಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ನಾಹೀದ ಜಮ್ ಜಮ್ ಮೊದಲ ಬಾರಿಗೆ ಮತ ಚಲಾಯಿಸುವ 18 ವರ್ಷ ತುಂಬಿದ ಮತದಾರರಿಗೆ ಗುರುತಿನ ಚೀಟಿ ವಿತರಿಸಿದರು. ಬಳಿಕ ಮಾತನಾಡಿದ ಅವರು, ನಾಡಿನ ಭವಿಷ್ಯವೇ ವಿದ್ಯಾರ್ಥಿಗಳು, ನೀವು ಹಾಕುವ ಮತಕ್ಕೆ ಅಮೂಲ್ಯವಾದ ಭವಿಷ್ಯವಿದೆ. ಆದ್ದರಿಂದ ಯಾವ ಅಭ್ಯರ್ಥಿ ನಿಮಗೆ ಸೂಕ್ತ ಎಂಬುದನ್ನು ಯೋಚಿಸಿ ಮತ ನೀಡಿ, ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವುದು ನಮ್ಮೆಲ್ಲರ ಗುರಿಯಾಗಿರಬೇಕು ಎಂದು ಅರಿವು ಮೂಡಿಸಿದರು. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಸುಮಾರು 30 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ನೆರವಿಗೆ ಕೂಡಲೇ ಸರ್ಕಾರ ಧಾವಿಸಬೇಕು ಎಂದು ನಗರದ ಮಾಜಿ ಶಾಸಕ ರಫೀಕ್ ಅಹಮದ್ ಸರ್ಕಾರವನ್ನು ಆಗ್ರಹಿಸಿದರು. ನಗರದ ಜಿಲ್ಲಾಧಿಕಾರಿಗಳ ಎದುರು ಕಚೇರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿ ಮಾತನಾಡಿ, ಅತಿಥಿ ಉಪನ್ಯಾಸಕರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿದ್ದು, ಕನಿಷ್ಠ ಮಟ್ಟದ ಜೀವನ ಕಟ್ಟಿಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಸರ್ಕಾರಕ್ಕೆ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಹಾಗೂ ಸೇವಾ ವಿಲೀನಿಕರಣಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರೂ, ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳದೆ, ಅವರ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದು, ಏಳೂವರೆ ಸಾವಿರ ಜನ ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳುವ ಪ್ರಯತ್ನ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಾವು ಸಾಯಬಾರದು, ಕೋಲು ಮುರಿಯಬಾರದು ಎಂಬ ಗಾದೆಯಂತೆ ಸರಕಾರ ಅತಿಥಿ ಉಪನ್ಯಾಸಕರ ಹಿತರಕ್ಷಣೆಯಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದ್ದು, ಕೂಡಲೇ ಸರ್ಕಾರ ಇವರಿಗೆ ಸೇವಾ…
ತುರುವೇಕೆರೆ: ಬೇರೆ ಬೇರೆ ಊರುಗಳಿಂದ ಪಟ್ಟಣಕ್ಕೆ ಬರುವ ಸೀಟ್ ಆಟೋಗಳ ಕಿರಿಕಿರಿ ತಪ್ಪಿಸುವಂತೆ ಹಾಗೂ ಬಸ್ ಹತ್ತುವ ಪಾದಚಾರಿಗಳು ಅನುಭವಿಸುವ ತೊಂದರೆ ಮತ್ತು ಬೀದಿಬದಿ ವ್ಯಾಪಾರಿಗಳ ವ್ಯಾಪಾರಕ್ಕೆ ತೊಂದರೆ ತಪ್ಪಿಸುವಂತೆ ವಿವಿಧ ಸಂಘಟನೆಗಳು ಜಂಟಿಯಾಗಿ ಪಟ್ಟಣ ಪಂಚಾಯಿತಿ, ಅಧ್ಯಕ್ಷರಿಗೆ ಮನವಿ ಸಲ್ಲಿಸಿತು. ಕಾರ್ಮಿಕ ಸಂಘಟನೆಗಳು, ಬೀದಿಬದಿ ಆಟೋ ಮಾಲೀಕರು ಹಾಗೂ ಚಾಲಕರ ಸಂಘ , ವ್ಯಾಪಾರಿಗಳ ಸಂಘ ನಿಯೋಗ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಪಟ್ಟಣ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ಮಾಯಸಂದ್ರ ವೃತ್ತ, ದಬ್ಬೆಘಟ್ಟ ವೃತ್ತ ,ಬಾಣಸಂದ್ರ ರಸ್ತೆ, ತಿಪಟೂರು ರಸ್ತೆಯಲ್ಲಿ, ನಿರಂತರವಾಗಿ ಪೊಲೀಸರನ್ನು ನಿಯೋಜನೆ ಮಾಡಿಸಿಕೊಡುವಂತೆ ಹಾಗೂ ಸಾಮಾನ್ಯ ಜನರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸುವಂತೆ ಆಗ್ರಹಿಸಿದರು. ಈ ಬಗ್ಗೆ ಪ್ರತಿಕ್ರಿಯೆಯೆ ನೀಡಿದ, ನೂತನ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಿದಾನಂದ್ ಈ ಬಗ್ಗೆ ಸಭೆ ಕರೆದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳು ವಂತೆ ಸೂಚನೆ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಸಿ. ಐ. ಟಿ. ಯು.…
ಹೆಚ್.ಡಿ.ಕೋಟೆ/ಸರಗೂರು: ನೊಂದವರಿಗೆ ಶ್ರಮದಾನದ ಹಣದಿಂದ ಸಹಾಯ ಹಸ್ತ ಚಾಚುವ ಸರ್ವ ಧರ್ಮ ಸಮಾಜ ಸೇವೆ ಟ್ರಸ್ಟ್ ಜಿಲ್ಲೆ ಹಾಗೂ ರಾಜ್ಯದಲ್ಲೂ ಕಾರ್ಯಾಚರಿಸಲಿ ಎಂದು ಜೆಡಿಎಸ್ ಯುವ ಮುಖಂಡ ಜಯಪ್ರಕಾಶ್ ಹಾರೈಸಿದರು. ಪಟ್ಟಣದ ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ನಡೆದ ತಾಲೂಕು ಸರ್ವ ಧರ್ಮ ಸಮಾಜ ಸೇವಾ ಟ್ರಸ್ಟ್ ನ ಎರಡನೇ ವರ್ಷದ ವಾರ್ಷಿಕೋತ್ಸವ ಹಾಗೂ ಬಡವರಿಗೆ ನೆರವು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾನು ನನ್ನ ಕುಟುಂಬಕ್ಕೆಷ್ಟೇ ಸೀಮಿತ ಎಂಬ ಕಾಲದಲ್ಲಿ ಸರ್ವಧರ್ಮಿಯರನ್ನೂ ಒಗ್ಗೂಡಿಸಿ ರಚಿಸಿರುವ ಈ ಟ್ರಸ್ಟ್ , ನೊಂದವರಿಗೆ ಧ್ವನಿಯಾಗಿದೆ. ರಾಜಕೀಯ ರಹಿತವಾಗಿ ಜಾತ್ಯತೀತವಾಗಿ ಕಾರ್ಯನಿರ್ವಹಿಸುವ ಮೂಲಕ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು. ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಬುದ್ಧ ಮಾತನಾಡಿ, ತಾಲ್ಲೂಕಿನಲ್ಲಿ ಎರಡು ವರ್ಷ ಕಾಲ ಸಮಾಜಮುಖಿಯಾಗಿರುವ ಟ್ರಸ್ಟ್ ಗೆ ಪಟ್ಟಣದಲ್ಲಿ ನಿವೇಶನ ಮಂಜೂರು ಮಾಡಿ ಕೊಡಬೇಕು ಎಂದು ಕೋರಿದರು. ಟ್ರಸ್ಟ್ ಸಂಸ್ಥಾಪಕರಾದ ಕೃಷ್ಣರಾಜು ಹಳೆಹೆಗ್ಗುಡಿಲು ಅವರು ಟ್ರಸ್ಟ್ ನ ಕಾರ್ಯನಿರ್ವಹಣೆ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಗಾಂಜಾ ಮತ್ತು ಅಕ್ರಮ ಮದ್ಯ ದಂಧೆಗಳು ಎಗ್ಗಿಲ್ಲದೆ ಸಾಗುತ್ತಿದ್ದು ಎನ್ನುವ ಆರೋಪಗಳ ನಡುವೆಯೇ ವಾರ್ಡ್ ನಂ 19 ರ ಎ.ಕೆ. ಕಾಲೋನಿ ರಸ್ತೆಯಲ್ಲಿನ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಪಕ್ಕದಲ್ಲಿನ ಸುಂದರ್ ರಾಜ್ ಅವರ ಪತ್ನಿ ಮಂಜುಳ ಅವರು ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ವಿಷಯವನ್ನು ಸ್ಥಳೀಯ ಸಾರ್ವಜನಿಕರು ನಗರದ ಹಿರಿಯೂರು ಪೋಲಿಸ್ ಠಾಣೆಗೆ ಸುದ್ದಿಯನ್ನು ತಿಳಿಸಿದರು. ಸಾರ್ವಜನಿಕರ ದೂರನ್ನು ದಾಖಲಿಸಿಕೊಂಡ ನಗರ ಪೋಲಿಸ್ ಉಪನಿರೀಕ್ಷಕರು ( ಸರ್ಕಲ್ ಇನ್ಸ್ಪೆಕ್ಟರ್ ) ವಿ.ಎಸ್.ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಮದ್ಯವನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಬಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಉಪನಿರೀಕ್ಷಕರು ವಿ.ಎಸ್.ಶಿವಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದ ವೇಳೆ 3.6 ಲೀಟರ್ ಮದ್ಯ ಪತ್ತೆಯಾಗಿದ್ದು, ಮದ್ಯವನ್ನು ವಶ ಪಡಿಸಿಕೊಂಡಿರುವ ಪೊಲೀಸರು ಆರೋಪಿಯಾದ ಸುಂದರ್ ರಾಜ್ ಪತ್ನಿ ಮಂಜುಳ ಅವರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಕಲಂ…
ಮತ್ತಿಹಳ್ಳಿ:ವಸತಿ ಯೋಜನೆಯ ಸಂಬಂಧಪಟ್ಟಂತೆ ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಪಂಚಾಯಿತಿ ಅಧ್ಯಕ್ಷರಾದ ಚಿನ್ನಸ್ವಾಮಿಯವರ ಅಧ್ಯಕ್ಷತೆಯಲ್ಲಿ ವಿಶೇಷ ಗ್ರಾಮ ಸಭೆಯನ್ನು ಏರ್ಪಡಿಸಲಾಗಿತ್ತು. ಗ್ರಾಮಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ನವೀನ್ ಕುಮಾರ್ ಉಪಾಧ್ಯಕ್ಷೆ ತೇಜಾವತಿ ಮಾಜಿ ಅಧ್ಯಕ್ಷ ಮಾಧುಸ್ವಾಮಿ. ಸದಸ್ಯರು ಸೇರಿದಂತೆ ಪಾಲ್ಗೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಪರಿಟಾಲ ರವೀಂದ್ರ ಅವರ 17ನೇ ವರ್ಧಂತಿಯನ್ನು ಹೆಲ್ಪ್ ಸೊಸೈಟಿ ಕಾರ್ಯಾಲಯದಲ್ಲಿ ಸೋಮವಾರ ಆಚರಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹಿರಿಯ ರಾಜಕೀಯ ಮುಖಂಡರಾದ ಮಾನಂ ವೆಂಕಟಸ್ವಾಮಿ, ಪರಿಟಾಲ ರವೀಂದ್ರ ಅವರ ಜೊತೆಗಿನ ಒಡನಾಟವನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು. ಇದೇ ಸಮಯದಲ್ಲಿ ಪಾವಗಡ ಶಾಂತಿ ಮೆಡಿಕಲ್ ದೇವರಾಜ್ ಮಾತನಾಡಿ, ಪರಿಟಾಲ ರವೀಂದ್ರ ಅವರ ಸೇವಾ ಮನೋಭಾವವನ್ನು ಕೊಂಡಾಡಿದರು. ಪಾವಗಡ ತಾಲ್ಲೂಕು ಜೆಡಿಎಸ್ ರೈತ ಘಟಕದ ಅಧ್ಯಕ್ಷರಾದ ಗಂಗಾಧರ ನಾಯ್ಡು ಅವರು ಮಾತನಾಡಿ, ಪರಿಟಾಲ ರವೀಂದ್ರ ಅವರ ಮೇಲೆ ಇರುವಂತಹ ಅಭಿಮಾನಕ್ಕೆ ಪ್ರಾಂತೀಯತೆ ಇಲ್ಲ, ಜಾತಿ ಭೇದ ಇಲ್ಲ, ಪಕ್ಷ ಭೇದ ಇಲ್ಲ, ಭಾಷಾ ಭೇದ ಇಲ್ಲ ಇವೆಲ್ಲವನ್ನೂ ಮೀರಿ ಎಲ್ಲೆಲ್ಲಿ ತೆಲುಗು ಮಾತನಾಡುತ್ತಾರೆ, ಎಲ್ಲಾ ಕಡೆ ಪರಿಟಾಲ ರವೀಂದ್ರ ಅವರ ಅಭಿಮಾನಿಗಳೇ ಇರುತ್ತಾರೆ. ಅವರು ಬಡವರ ಪರ ಅನ್ಯಾಯಕ್ಕೊಳಗಾದವರ ಪರ ಹೋರಾಡಿ, ತನ್ನ ಪ್ರಾಣವನ್ನೆ ತ್ಯಾಗ ಮಾಡಿದಂತಹ ಮಹನೀಯರು ಎಂದು ಕೊಂಡಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಆಂಜನೇಯಲು, ನರಸಿಂಹ ಮೂರ್ತಿ,…
ತಿಪಟೂರು : ಬೆಸ್ಕಾಂ ಇಲಾಖೆಯ ಮಹಿಳಾ ಮಾಪಕ ಸಿಬ್ಬಂದಿಗಳಿಗೆ ಬೆಸ್ಕಾಂ ಇಲಾಖೆ ಕಂದಾಯ ಸಹಾಯಕ ಬಿ.ಕೆ.ಜಗದೀಶ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿ, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಅಹೋ ರಾತ್ರಿ ಧರಣಿ ನಡೆಸುತ್ತಿರುವ ಘಟನೆ ನಡೆದಿದೆ. ನಗರದ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಸೋಮವಾರ ಸಂಜೆಯಿಂದ ಪ್ರತಿಭಟನೆಗೆ ಸಿಬ್ಬಂದಿಗಳು ಮುಂದಾಗಿದ್ದಾರೆ. ಪ್ರತಿಭಟನೆಯಲ್ಲಿ ವಿಭಾಗೀಯ ಉಪಾಧ್ಯಕ್ಷ ವಿ.ನಂದೀಶ್, ಸಮಿತಿ ಸದಸ್ಯ ಎಂ.ಎಸ್. ಸೋಮಶೇಖರಯ್ಯ ಮತ್ತು ಮಹಿಳಾ ದೂರು ನಿರ್ವಹಣಾ ಸಮಿತಿ ಅಧ್ಯಕ್ಷೆ ವಿ.ಕೆ.ನೇತ್ರಾವತಿ ಮಾತನಾಡಿದರು. ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ರಾಜಶೇಖರಯ್ಯ, ವಿಭಾಗೀಯ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಕುಮಾರಸ್ವಾಮಿ,ಉಪ ವಿಭಾಗ ಸಮಿತಿ ಅಧ್ಯಕ್ಷ ನಾಗರಾಜ್, ಕಾರ್ಯದರ್ಶಿ ನವೀನ್ ಕುಮಾರ್, ಸಿಬ್ಬಂದಿಗಳಾದ ರವಿ ಕುಮಾರ್ ನಾಯ್ಕ್, ಚಂದ್ರಪ್ಪ ಮತ್ತು ಶಿವಲಿಂಗಸ್ವಾಮಿ ಸೇರಿದಂತೆ ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ನಗರ ಮತ್ತು ತುಮಕೂರು ಗ್ರಾಮಾಂತರ ಅರ್ಹ ಫಲಾನುಭವಿಗಳಿಗೆ ನೋಂದಾಯಿತ ಫಲಾನುಭವಿಗಳನ್ನು ಗುಣವಾಗಿ ಇಂದು ತುಮಕೂರು ಕಾರ್ಮಿಕ ಇಲಾಖೆ ವತಿಯಿಂದ ಮೇಷನ್ ಕಿಟ್ ವಿತರಣಾ ಕಾರ್ಯಕ್ರಮ ನೆರವೇರಿಸಲಾಯಿತು ಈ ಸಂದರ್ಭ ತುಮಕೂರು ಜಿಲ್ಲಾ ಕಾರ್ಮಿಕ ಇಲಾಖೆಯ ಹೆಚ್.ಎನ್. ರಮೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ನೀಡುವ ಕಾರ್ಮಿಕ ಇಲಾಖೆಯ ಸವಲತ್ತುಗಳನ್ನು ಸದುಪಯೋಗ ಮಾಡಿಕೊಳ್ಳಬೇಕಾಗಿ ಅದೇ ರೀತಿ ಅರ್ಹ ಫಲಾನುಭವಿಗಳು ಅಲ್ಲದೆ ಇರುವ ಕಾರ್ಮಿಕರು ಸಹ ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಇದ್ದು, ಅಂತಹ ಫಲಾನುಭವಿಗಳನ್ನು ಕಾರ್ಮಿಕರ ಗಮನಕ್ಕೆ ಬಂದಲ್ಲಿ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕ್ರಮ ವಹಿಸುವುದಾಗಿ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ. ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಹೆಚ್.ಎನ್ . ರಮೇಶ್, ಕಾರ್ಮಿಕ ಇಲಾಖೆಯ ನಿರೂಪಕ ವೆಂಕಟೇಶ್ ಬಾಬು, ಕಾರ್ಮಿಕ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿ ಮೇಷನ್ ಕಿಟ್ ವಿತರಣೆ ಸಲಾಯಿತು ವರದಿ: ಸಿದ್ದೇಶ್ ಎನ್.ಎಸ್. ನೇಗಲಾಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…