Subscribe to Updates
Get the latest creative news from FooBar about art, design and business.
- ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
- ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
- ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
- ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
- ತಿಪಟೂರು: ಬೆಡ್ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
- ಅವೈಜ್ಞಾನಿಕ ಅಂಡರ್ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
- ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್ ಆರ್ ಟಿಸಿ ಅಧಿಕಾರಿಗೆ ಮನವಿ
- ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
Author: admin
ತುಮಕೂರು: ನಗರ ಮತ್ತು ತುಮಕೂರು ಗ್ರಾಮಾಂತರ ಅರ್ಹ ಫಲಾನುಭವಿಗಳಿಗೆ ನೋಂದಾಯಿತ ಫಲಾನುಭವಿಗಳನ್ನು ಗುಣವಾಗಿ ಇಂದು ತುಮಕೂರು ಕಾರ್ಮಿಕ ಇಲಾಖೆ ವತಿಯಿಂದ ಮೇಷನ್ ಕಿಟ್ ವಿತರಣಾ ಕಾರ್ಯಕ್ರಮ ನೆರವೇರಿಸಲಾಯಿತು ಈ ಸಂದರ್ಭ ತುಮಕೂರು ಜಿಲ್ಲಾ ಕಾರ್ಮಿಕ ಇಲಾಖೆಯ ಹೆಚ್.ಎನ್. ರಮೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ನೀಡುವ ಕಾರ್ಮಿಕ ಇಲಾಖೆಯ ಸವಲತ್ತುಗಳನ್ನು ಸದುಪಯೋಗ ಮಾಡಿಕೊಳ್ಳಬೇಕಾಗಿ ಅದೇ ರೀತಿ ಅರ್ಹ ಫಲಾನುಭವಿಗಳು ಅಲ್ಲದೆ ಇರುವ ಕಾರ್ಮಿಕರು ಸಹ ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಇದ್ದು, ಅಂತಹ ಫಲಾನುಭವಿಗಳನ್ನು ಕಾರ್ಮಿಕರ ಗಮನಕ್ಕೆ ಬಂದಲ್ಲಿ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕ್ರಮ ವಹಿಸುವುದಾಗಿ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ. ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಹೆಚ್.ಎನ್ . ರಮೇಶ್, ಕಾರ್ಮಿಕ ಇಲಾಖೆಯ ನಿರೂಪಕ ವೆಂಕಟೇಶ್ ಬಾಬು, ಕಾರ್ಮಿಕ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿ ಮೇಷನ್ ಕಿಟ್ ವಿತರಣೆ ಸಲಾಯಿತು ವರದಿ: ಸಿದ್ದೇಶ್ ಎನ್.ಎಸ್. ನೇಗಲಾಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಹರಿಹರ: ಪಂಚಮಸಾಲಿ ಸಮಾಜದವರು ಮತಾಂತರ ಆಗುತ್ತಿದ್ದಾರೆ. ಆದಕಾರಣ ಧಾರ್ಮಿಕವಾಗಿ ಸಂಘಟನೆಯ ಮೂಲಕ ಸಮಾಜದಲ್ಲಿ ಮತಾಂತರ ಕಾರ್ಯ ನಿಲ್ಲಬೇಕು ಎಂದು ಪಂಚಮಸಾಲಿ ಮಠದ ಶ್ರೀ ವಚನಾನಂದ ಸ್ವಾಮೀಜಿ ಹೇಳಿದರು. ತಾಲೂಕಿನ ಹನಗವಾಡಿ ಗ್ರಾಮದ ಹೊರವಲಯದಲ್ಲಿರುವ ಪಂಚಮಸಾಲಿ ಮಠದಲ್ಲಿ ಮೂರನೇ ಮಠ ಸ್ಥಾಪನೆ ವಿಚಾರದ ಗೊಂದಲದ ಹಿನ್ನಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ನಾಡಿನಲ್ಲಿ ಪಂಚಮಸಾಲಿ ಮಠಗಳು ಹೆಚ್ಚಾದರೆ ನಮ್ಮ ಪೀಠಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತದೆ ಎನ್ನುವ ಭೀತಿ ನಮಗೆ ಇಲ್ಲ. ಮಠಗಳು ಹೆಚ್ಚಾದರೆ ನಮ್ಮ ಸಮಾಜ ಹೆಚ್ಚು ಸಂಘಟನೆಯಾಗುತ್ತದೆ ಎಂದರು. ಹರಿಹರ ತಾಲೂಕಿನಲ್ಲಿರುವ ಪಂಚಮಸಾಲಿ ಪೀಠವು 20 ವರ್ಷಗಳಿಂದ ಸಂಘಟನೆ ಮಾಡಿಕೊಂಡು ಬಂದಿದೆ. ಈ ಹಿಂದೆ ಮಠಕ್ಕೆ ಭೇಟಿ ನೀಡಿದ್ದ ವೀರಶೈವ ಪಂಚಮಸಾಲಿ ಒಕ್ಕೂಟದ ಪದಾಧಿಕಾರಿಗಳು, ಪಂಚಮಸಾಲಿ ಸಮಾಜದ ಮೂಲ ಪೀಠ ಎಂದರೆ ಅದು ಹರಿಹರದ ಪಂಚಮಸಾಲಿ ಪೀಠ ಎಂದು ತಿಳಿಸಿದ್ದಾರೆ. ಮೂರನೆ ಪೀಠದ ನಿರ್ಮಾಣಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದರು, ನಾವು ಸಹಕಾರ ಕೊಡುತ್ತೇವೆ ಎಂದು ಭರವಸೆ ನೀಡಿದ್ದೇವೆ…
ಹೆಣ್ಣು ಎಂದರೆ ತಾಯಿ. ಹೆಣ್ಣು ಎಂದರೆ ಸಹೋದರಿ. ಹೆಣ್ಣು ಎಂದರೆ ಗೆಳತಿ. ಹೆಣ್ಣು ಎಂದರೆ ಪತ್ನಿ. ಹೆಣ್ಣು ಎಂದರೆ ಮಗಳು. ಹೀಗೆ ಪ್ರತಿಯೊಬ್ಬರ ಪುರುಷನ ಬದುಕಿನಲ್ಲಿ ಅವಿಭಾಜ್ಯ ಅಂಗವಾಗಿ ಪ್ರಮುಖ ಪಾತ್ರ ವಹಿಸುತ್ತಿರುವ ಹೆಣ್ಣನ್ನು ಗೌರವಿಸುವುದಕ್ಕಾಗಿ ವಿಶೇಷ ದಿನವನ್ನು ನಿಗದಿಪಡಿಸಲಾಗಿದೆ. ಅದುವೇ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. ಭಾರತದಲ್ಲಿ ಜನವರಿ 24 ಅನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಹೆಣ್ಣು ಮಕ್ಕಳ ದಿನದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಹೆಣ್ಣು ಮಕ್ಕಳ ಹಕ್ಕುಗಳು, ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಕಳೆದ 2008ರಲ್ಲಿ ಮೊದಲ ಬಾರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವಾಲಯವು ಜನವರಿ 24 ಅನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಹೆಣ್ಣು ಶಿಶುಹತ್ಯೆ, ಲಿಂಗ ಅಸಮಾನತೆ ಮತ್ತು ದೈಹಿಕ ದೌರ್ಜನ್ಯದಂತಹ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಗುರಿಯನ್ನು ಹೊಂದಲಾಗಿದೆ. ಹೆಣ್ಣು ಮಕ್ಕಳು ಎದುರಿಸುತ್ತಿರುವ…
ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (ಎನ್ಡಿಆರ್ ಎಫ್)ಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಹ್ಯಾಕ್ ಮಾಡುವ ಯತ್ನ ತಡರಾತ್ರಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಣತರು ಈ ವಿಷಯವನ್ನು ಪರಿಶೀಲಿಸುತ್ತಿದ್ದು, ಹ್ಯಾಂಡಲ್ ಅನ್ನು ಶೀಘ್ರವೇ ಪುನರ್ ಸ್ಥಾಪನೆ ಮಾಡಲಾಗುವುದು ಎಂದು ಪಡೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಹ್ಯಾಂಡಲ್ @NDRFHQ ಸಂಕ್ಷಿಪ್ತವಾಗಿ ಕೆಲವು ತತ್ ಕ್ಷಣದ ಸಂದೇಶಗಳನ್ನು ಪೋಸ್ಟ್ ಮಾಡಿದ್ದು, ಈಗಾಗಲೇ ಪ್ರಕಟಿಸಿದ ಮೆಸೇಜ್ ಗಳು ಲೋಡ್ ಆಗುತ್ತಿರಲಿಲ್ಲ. ಹೀಗಿದ್ದರೂ ಕೇಂದ್ರೀಯ ಪಡೆಯ ಅಧಿಕೃತ ಫೋಟೋ ಮತ್ತು ಬಯೋ ಡಿಸ್ ಪ್ಲೇ ಗೋಚರವಾಗಿತ್ತು. ಎನ್ ಡಿಆರ್ ಎಫ್ ಮಾನವ ನಿರ್ಮಿತ ಹಾಗೂ ನೈಸರ್ಗಿಕ ವಿಕೋಪಗಳ ವಿರುದ್ಧದ ಕೇಂದ್ರೀಯ ಸಂಯುಕ್ತ ಪಡೆಯಾಗಿ 2006ರಲ್ಲಿ ಸ್ಥಾಪನೆಗೊಂಡಿತು ಮತ್ತು ಜನವರಿ 19ರಂದು 17ನೇ ಸಂಸ್ಥಾಪನಾ ದಿನವನ್ನು ಆಚರಿಸಿತ್ತು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಪ್ರತಿಷ್ಠಿತ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಬೆಂಗಳೂರಿನ ಸೈಯದ್ ಫತೀನ್ ಅಹ್ಮದ್ ಅವರಿಗೆ ಲಭಿಸಿದೆ. ಪ್ರತಿವರ್ಷದಂತೆ ಈ ಬಾರಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದೆ. ದೇಶದ 29 ಮಕ್ಕಳಿಗೆ ಪುರಸ್ಕಾರ ಲಭಿಸಿದ್ದು, ಸಂಗೀತ-ಮನರಂಜನೆಯಲ್ಲಿ ಸೈಯದ್ ಫತೀನ್ ಅಹ್ಮದ್ ಆಯ್ಕೆಯಾಗಿದ್ದಾರೆ. ಪಿಯಾನೋ ನುಡಿಸೋದರಲ್ಲಿ 16 ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಫತೀನ್ ಪಡೆದಿದ್ದಾರೆ. ಇವರು ಬೆಂಗಳೂರಿನ ಜಯನಗರದ ನಿವಾಸಿ ಡಾ. ಅಸ್ಮಾ ಅವರ ಪುತ್ರನಾಗಿದ್ದಾರೆ. ಈ ಪ್ರಶಸ್ತಿಯನ್ನು 5 ವರ್ಷಕ್ಕಿಂತ ಮೇಲ್ಪಟ್ಟ 18 ವರ್ಷ ಮೀರಿರದ ಬಾಲಕರು ಮತ್ತು ಪ್ರೌಢಾವಸ್ಥೆಯಲ್ಲಿರುವವರ ಅಸಾಧಾರಣ ಸಾಧನೆ ಗುರುತಿಸಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ನೀಡಲಾಗುತ್ತದೆ. ಸಮಾಜ ಸೇವೆ, ಪಾಂಡಿತ್ಯ, ಕ್ರೀಡೆ, ಕಲೆ, ಸಂಸ್ಕೃತಿ, ಶೌರ್ಯ ಮತ್ತು ನಾವೀನ್ಯತೆ ಎಂಬ ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆಗಾಗಿ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ 1 ಲಕ್ಷ ರೂ ನಗದು ಬಹುಮಾನ, ಪದಕ ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ಪ್ರಶಸ್ತಿಯನ್ನು ಪ್ರದಾನ ಮಾಡುತ್ತಾರೆ. ಇನ್ನೂ…
ಬಲ್ಗೇರಿಯಾ… ಯೂರೋಪ್ ಅತ್ಯಂತ ಪ್ರಾಚೀನ ಹಾಗೂ ಸುಂದರ ದೇಶ…!! ಅಧಿಕೃತ ಹೆಸರು ಬರಿಪಬ್ಲಿಕ್ ಆಫ್ ಬಲ್ಗೇರಿಯಾ.. ಬಲ್ಗೇರಿಯಾದ ರಾಜಧಾನಿ – ಸೋಫಿಯಾ ಸಿಟಿ ರಷ್ಯಾ, ಟರ್ಕಿ , ಉಕ್ರೇನ್ , ರೊಮಾನಿಯಾದ ಜೊತೆಗೆ ಈ ದೇಶ ತನ್ನ ಗಡಿ ಹಂಚಿಕೊಂಡಿದೆ. ಬಲ್ಗೇರಿಯಾ ( ವಿಸ್ತೀರ್ಣದಲ್ಲಿ ) ವಿಶ್ವದ 105 ಹಾಗೂ ಯೂರೋಪ್ ನ 16 ನೇ ದೊಡ್ಡ ದೇಶ. ಆಕಾರ ವಿಸ್ತೀರ್ಣದಲ್ಲಿ ನೋಡುವುದಾದ್ರೆ ತಮ್ಮ ದೇಶದ ತೆಲಂಗಾಣಾ ರಾಜ್ಯದಷ್ಟು ಈ ದೇಶ ದೊಡ್ಡದಿದೆ. ಸುಮಾರು 70 ಲಕ್ಷ ಜನಸಂಖ್ಯೆ ಹೊಂದಿರುವ ದೇಶ. ಕಡಿಮೆ ಜನಸಂಖ್ಯೆ ಹೊಂದಿರುವುದು ಈ ದೇಶ ಶ್ರೀಮಂತ ಹಾಗೂ ಅಭಿವೃದ್ಧಿ ದೇಶ ಎನಿಸಿಕೊಳ್ಳಲು ಪ್ರಮುಖ ಕಾರಣ. ಈ ದೇಶದ ಲಿಟ್ರೆಸಿ ರೇಟ್ 92 % ಸ್ಥಾಪನೆಯಾದಾಗಿನಿಂದ ಹಿಡಿದು ಇಲ್ಲಿಯ ವರೆಗೂ ಸಹ ಹೆಸರು ಬದಲಾಯಿಸಿದ ವಿಶ್ವದ ಏಕಮಾತ್ರ ರಾಷ್ಟ್ರ ಬಲ್ಗೇರಿಯಾ. ಈ ದೇಶದಲ್ಲಿ 80 % ರಷ್ಟು ಜನ ಕ್ರೈಸ್ತರು , ಸುಮಾರು 10 ರಷ್ಟು ಮುಸ್ಲಿಮರು ,…
ರಾತ್ರಿ ವೇಳೆ ನಿದ್ರೆ ಬರುತ್ತಿಲ್ಲವೇ..? ಬೆಡ್ ಮೇಲೆ ಆ ಕಡೆ ಈ ಕಡೆ ಒದ್ದಾಡಿದ್ರೂ ಕಣ್ಣು ಮುಚ್ಚುತ್ತಿಲ್ಲವೇ..? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ ಚೆನ್ನಾಗಿ ನಿದ್ರೆ ಮಾಡಿ.. * ಮಲಗುವ ಮುನ್ನ ನಾಟಿ ಹಸುವಿನ ತುಪ್ಪವನ್ನು ಉಗುರುಬೆಚ್ಚಗೆ ಮಾಡಿ ಮೂಗಿನ ರಂಧ್ರಗಳಲ್ಲಿ ಎರಡು ಹನಿಗಳನ್ನು ಹಾಕಿಕೊಳ್ಳಬೇಕು. *ಗಸಗಸೆಯನ್ನು ಹುರಿದು ತೆಳುವಾದ ಬಟ್ಟೆಯಲ್ಲಿ ಸುತ್ತಿ ಮಲಗುವ ಮುನ್ನ ಅದರ ವಾಸನೆಯನ್ನು ಎಳೆದುಕೊಳ್ಳಬೇಕು. *ನಿಮ್ಮ ಬೆರಳುಗಳಿಂದ ಅಥವಾ ಬಾಚಣಿಗೆಯಿಂದ ಕೂದಲನ್ನು ನಿಧಾನವಾಗಿ ಬಾಚಿಕೊಳ್ಳಿ. * ಕಾಲುಗಳ ಅಡಿಭಾಗವನ್ನು ಕೈಗಳಿಂದ ಮೃದುವಾಗಿ ಮಸಾಜ್ ಮಾಡಿಕೊಳ್ಳಿ. ರಾತ್ರಿ ಮಲಗುವ ಮುನ್ನ ಪಾದದ ಅಡಿಭಾಗಕ್ಕೆ ಕ್ಯಾಸ್ಟರ್ ಆಯಿಲ್ ಅಥವಾ ಎಳ್ಳೆಣ್ಣೆ ಅಥವಾ ತೆಂಗಿನೆಣ್ಣೆಯಿಂದ ಮಸಾಜ್ ಮಾಡಿ. *ರಾತ್ರಿಯಲ್ಲಿ ಉಗುರುಬೆಚ್ಚಗಿನ ಹಾಲನ್ನು ಕುಡಿಯಿರಿ. *ಮಲಗುವ ಎರಡು ಗಂಟೆಗಳ ಮೊದಲು ಮೊಬೈಲ್ ಫೋನ್ ನೋಡುವುದನ್ನು ನಿಲ್ಲಿಸಿ. ಜೊತೆಗೆ ರಾತ್ರಿ ವೇಳೆ ಮೊಬೈಲ್ ಫೋನ್ ಅನ್ನು ತಲೆಯ ಪಕ್ಕದಲ್ಲಿಟ್ಟರೆ ವಿಕಿರಣದ ಪ್ರಭಾವದಿಂದ ಸರಿಯಾಗಿ ನಿದ್ದೆ ಬರುವುದಿಲ್ಲ. ಹಾಗಾಗಿ ಮೊಬೈಲ್ ಅನ್ನು ದೂರ…
ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಕೆ.ಪಿ.ಸಿ.ಸಿ. ಹಿಂದುಳಿದ ವಿಭಾಗದ ರಾಜ್ಯಾಧ್ಯಕ್ಷರಾದ ಎಂ.ಡಿ. ಲಕ್ಷ್ಮೀನಾರಾಯಣ್ ಹಾಗೂ ಜಿಲ್ಲಾಧ್ಯಕ್ಷರಾದ ಪುಟ್ಟರಾಜು ನೇತೃತ್ವದಲ್ಲಿ ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ಕೆ.ಪಿ.ಸಿ.ಸಿ ಹಿಂದುಳಿದ ವರ್ಗಗಳ ವಿಭಾಗದ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ವಿಭಾಗದ ನಗರ ಅಧ್ಯಕ್ಷರಾಗಿ ವಿನೋದ್ ಚಂದ್ರ ರವರನ್ನು ಆಯ್ಕೆ ಮಾಡಿ, ಆದೇಶ ಪತ್ರವನ್ನು ನೀಡಲಾಯಿತು. ನೂತನ ಪದಾಧಿಕಾರಿಗಳನ್ನು ತಾಲೂಕಿನ ಹಿರಿಯ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿನಂದಿಸಿ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಚೌದ್ರಿ ರಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನಕುಮಾರ್, ಎಚ್ ಕೆ ನಾಗೇಶ್, ನಂಜುಂಡಪ್ಪ, ಮುಖಂಡರುಗಳಾದ ಸ್ವರ್ಣ ಕುಮಾರ್, ಮಹೇಂದ್ರ ವಿಶ್ವಕರ್ಮ, ವಿನಯ್ ಎಂ.ಗೌಡ, ಡಿ.ಪಿ.ವೇಣುಗೋಪಾಲ್, ಪುಟ್ಟರಾಜು. ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ವರದಿ: ಸಚಿನ್ ಮಾಯಸಂದ್ರ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಗೆ ಉತ್ತೇಜನ ನೀಡಲು ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ, ಔಷಧಿ ಸಿಂಪಡಣೆ, ಸರಕು ಸಾಗಾಣಿಕೆ ಸೇರಿದಂತೆ ಹಲವು ಕೃಷಿ ಕೆಲಸಗಳಿಗೆ ಬಳಕೆಯಾಗುವ ಡ್ರೋನ್ಗಳ ಖರೀದಿಗೆ ಆರ್ಥಿಕ ನೆರವು ಘೋಷಣೆ ಮಾಡಿದೆ. ಭಾರತದಲ್ಲಿ ಕರಾರುವಾಕ್ಕಾದ ಆಧುನಿಕ ಕೃಷಿ ಪದ್ಧತಿಯ ಉತ್ತೇಜನಕ್ಕೆ ಬಲ ನೀಡುವ ಭಾಗವಾಗಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಕೃಷಿ ವಲಯದ ಪಾಲುದಾರರಿಗೆ ಡ್ರೋನ್ ತಂತ್ರಜ್ಞಾನವನ್ನು ಕೈಗೆಟುಕುವ ಬೆಲೆಗೆ ಸಿಗುವಂತೆ ಮಾಡಲು ಪ್ರಮುಖ ಮಾರ್ಗ ಸೂಚಿಗಳನ್ನು ಪ್ರಕಟಿಸಿದೆ.ಕೃಷಿ ಯಾಂತ್ರೀಕರಣ ಉಪಮಿಷನ್ (ಎಸ್ಎಂಎಎಂ)ನ ಮಾರ್ಗಸೂಚಿಗಳಿಗೆ ತಿದ್ದುಪಡಿ ಮಾಡಲಾಗಿದೆ. ಇದರಿಂದ ಕೃಷಿ ಡ್ರೋನ್ ವೆಚ್ಚದ ಶೇ.100ವರೆಗೆ ಅಥವಾ 10 ಲಕ್ಷ ರೂ. ಇವೆರಡರಲ್ಲಿ ಯಾವುದು ಕಡಿಮೆಯೋ ಅದನ್ನು ಅನುದಾನವಾಗಿ ನೀಡಲು ನಿರ್ಧರಿಸಿದೆ.ಕೃಷಿ ಯಂತ್ರೋಪಕರಣಗಳ ತರಬೇತಿ ಮತ್ತು ಪರೀಕ್ಷಾ ಸಂಸ್ಥೆಗಳು, ಐಸಿಎಆರ್ ಸಂಸ್ಥೆಗಳು, ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ರಾಜ್ಯ ಕೃಷಿ ವಿಶ್ವವಿದ್ಯಾನಿಲಯಗಳಿಗೆ ನೀಡಲಾಗುತ್ತದೆ. ಈ ಸಂಸ್ಥೆಗಳು ರೈತರ ಹೊಲಗಳಲ್ಲಿ ಡ್ರೋನ್ ತಂತ್ರಜ್ಞಾನದ ದೊಡ್ಡ ಪ್ರಮಾಣದ ಪ್ರಾತ್ಯಕ್ಷಿಕೆಗಳನ್ನು ನಡೆಸಲು…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಚಿಕ್ಕಬೀರನಕೆರೆ ಗ್ರಾಮದ ರೈತಪುಟ್ಟಸ್ವಾಮಿಯವರಿಗೆ ಸೇರಿದ ತೋಟದ ಪಂಪ್ ಹೌಸ್ ನಲ್ಲಿ, ವಿದ್ಯುತ್ ಅವಘಡದಿಂದ 4,000ಕ್ಕೂ ಹೆಚ್ಚು ಕೊಬ್ಬರಿ ಗಳು ಬೆಂಕಿಗಾಹುತಿಯಾಗಿವೆ. ರೈತ ಪುಟ್ಟಸ್ವಾಮಿ ತಂದೆ ಬೆಟ್ಟಯ್ಯ ನವರು ತಮ್ಮ ತೋಟದ ಸಾವಿರಾರು ಕೊಬ್ಬರಿಗಳನ್ನು ತಮ್ಮ ತೋಟದ ಪಂಪ್ ಹೌಸ್ ನಲ್ಲಿ ಶೇಖರಿಸಿದರು. ಭಾನುವಾರ ಬೆಳಗಿನ ಜಾವದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪಂಪ್ ಹೌಸ್ ನಲ್ಲಿದ್ದ ಸಾವಿರಾರು ಕೊಬ್ಬರಿಗಳು ಸೇರಿದಂತೆ ಹಲವಾರು ವಸ್ತುಗಳು ಸೇರಿದಂತೆ ಮೇಲ್ಛಾವಣಿಯ ಭಾಗವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಈ ಸಂಬಂಧ ರೈತ ಪುಟ್ಟಸ್ವಾಮಿ ಅವರು ಸ್ಥಳೀಯ ಕಂದಾಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ ಬೆಸ್ಕಾಂ ಇಲಾಖೆಗೆ ದೂರು ನೀಡಿದ್ದು, ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ವರದಿ: ಸಚಿನ್, ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…