Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ವಿಜಯವಾಡ: ಕೃಷ್ಣಾ ಜಿಲ್ಲೆಯಲ್ಲಿ ಹುಚ್ಚು ಬೆಕ್ಕು (Cat) ಕಚ್ಚಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಎರಡು ತಿಂಗಳ ಹಿಂದೆ ಬೆಕ್ಕಿನಿಂದ ಕಚ್ಚಿಸಿಕೊಂಡಿದ್ದ ಮಹಿಳೆಯರು ಶನಿವಾರ ಸಾವನ್ನಪ್ಪಿದ್ದಾರೆ.ರೇಬಿಸ್ನಿಂದಾಗಿ (rabies) ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ವೈದ್ಯರು ಹೇಳಿದ್ದಾರೆ. ಬೆಕ್ಕುಗಳು ತಮ್ಮಲ್ಲಿ ರೇಬೀಸ್ ಸೂಕ್ಷ್ಮಾಣುಗಳನ್ನು ಹೊಂದಿರುತ್ತವೆ. ಬೆಕ್ಕು ಕಡಿತದಿಂದ ಜನರು ರೇಬೀಸ್ನಿಂದ ಸಾಯುವುದು ಅಪರೂಪ. ಮಾನವರಲ್ಲಿ ರೇಬೀಸ್ಗೆ ಸಾಮಾನ್ಯ ಕಾರಣವೆಂದರೆ ಹುಚ್ಚು ನಾಯಿಗಳ ಕಡಿತ. ಮೃತರನ್ನು ಆರ್ಟಿಸಿ ಬಸ್ ಕಂಡಕ್ಟರ್ ಸಾಲಿ ಭಾಗ್ಯರಾವ್ ಅವರ ಪತ್ನಿ ಕಮಲಾ (64) ಮತ್ತು ಗ್ರಾಮೀಣ ವೈದ್ಯಾಧಿಕಾರಿ ಬೊಡ್ಡು ಬಾಬು ರಾವ್ ಅವರ ಪತ್ನಿ ನಾಗಮಣಿ (43) ಎಂದು ಪೊಲೀಸರು ಗುರುತಿಸಿದ್ದಾರೆ. ಇವರು ಕೃಷ್ಣಾ ಜಿಲ್ಲೆಯ ವೇಮುಲಮಾಡ ಕಾಲೋನಿಯ ನಿವಾಸಿಗಲಾಗಿದ್ದರು. ಬೆಕ್ಕಿನ ಕಡಿತದ (Cat Bite) ನಂತರ, ಅವರು ಆಸ್ಪತ್ರೆಗೆ ಹೋದರು, ಅಲ್ಲಿ ವೈದ್ಯರು ಆಂಟಿ ಟೆಟನಸ್ ಶಾಟ್ ನೀಡಿದರು. ಆದರೆ ಬೆಕ್ಕಿಗೆ ಹುಚ್ಚು ಹಿಡಿದಿದೆ ಎಂದು ವೈದ್ಯರು ನಿರೀಕ್ಷಿಸಿರಲಿಲ್ಲ. ಬಳಿಕ ನಾಲ್ಕು ದಿನಗಳ ಹಿಂದೆ ಕಮಲಾ ಮತ್ತು ನಾಗಮಣಿ…
ಬೆಂಗಳೂರು: ತಮಿಳುನಾಡಿನಲ್ಲಿ ಪ್ರಿಯಕರನೊಂದಿಗೆ ಮಂತ್ರಿ ಮಗಳು(TamilNadu Minister Daughter) ಎಸ್ಕೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನ್ನ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿದ್ದ ತಮಿಳುನಾಡು ಮುಜರಾಯಿ ಇಲಾಖೆ ಸಚಿವ ಶೇಖರ್ ಬಾಬು ಪುತ್ರಿ ಕರ್ನಾಕಟಕಕ್ಕೆ ಬಂದು ಮದುವೆಯಾಗಿದ್ದಾರೆ. ಪ್ರಿಯಕರ ಸತೀಶ್ ಕುಮಾರ್ ಜೊತೆಗೆ ಎಸ್ಕೇಪ್ ಆಗಿದ್ದ ಶೇಖರ್ ಬಾಬು ಮಗಳು ಜಯಕಲ್ಯಾಣಿ(Jayakalyani) ಕರ್ನಾಟಕದಲ್ಲಿ ಮದುವೆಯಾಗಿದ್ದು, ತಮಗೆ ಭದ್ರತೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಇರುವ ಈ ಜೋಡಿಗೆ ಜೀವಬೆದರಿಕೆ ಇದೆಯಂತೆ. ಹೀಗಾಗಿ ಕಮಿಷನರ್ ಕಚೇರಿಗೆ ತೆರಳಿದ ಜೋಡಿ ತಮಗೆ ಜೀವ ಬೆದರಿಕೆ ಇದೆ, ರಕ್ಷಣೆ ನೀಡಿ ಎಂದು ಕೋರಿಕೊಂಡಿದೆ. ಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಈ ಜೋಡಿಗೆ ಮದುವೆ ಮಾಡಿಸಲಾಗಿದೆ ಎಂದು ತಿಳಿದುಬಂದಿದೆ. ತಮಿಳುನಾಡು ಪೊಲೀಸರ(Tamil Nadu Police) ಮೇಲೆ ತಮಗೆ ನಂಬಿಕೆ ಇಲ್ಲವೆಂದು ಕರ್ನಾಟಕ ಪೊಲೀಸರ ಮೊರೆ ಹೋಗಿರುವುದಾಗಿ ಜೋಡಿ ತಿಳಿಸಿದೆ. ತಮಿಳುನಾಡಿಗೆ ಹೋದರೆ ನಮ್ಮನ್ನು ಕೊಲೆ ಮಾಡುತ್ತಾರೆಂದು ಯುವತಿ ಹೇಳಿಕೊಂಡಿದ್ದಾಳೆ. ತಾನು ಯೂಟ್ಯೂಬ್ ನಲ್ಲಿ ಕನ್ನಡ ಸಂಘಟನೆ…
ಮಧುಗಿರಿ: ಬಿಸಿಯೂಟ ತಿಂದ ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಕಾಣಿಸಿಕೊಂಡು ವಾಂತಿಯಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನ ಹೊನ್ನಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮಧ್ಯಾಹ್ನದ ಊಟದ ಸಮಯದಲ್ಲಿ ತಟ್ಟೆಯಲ್ಲಿದ್ದ ಸಾರಿನಲ್ಲಿ ಹುಳಗಳು ಕಂಡುಬಂದಿದೆ. ಇದನ್ನು ವಿದ್ಯಾರ್ಥಿಗಳು ಶಿಕ್ಷಕರಿಗೆ ತೋರಿಸಿದ್ದಾರೆ. ಇದೇ ಸಂದರ್ಭದಲ್ಲಿ ಊಟ ಮಾಡಿದ್ದವರಿಗೆ ಹೊಟ್ಟೆನೋವು, ವಾಂತಿಯಾಗಿದೆ. ತಕ್ಷಣವೇ ನೆರಳೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವೈದ್ಯರು ಬಂದು ಚಿಕಿತ್ಸೆ ನೀಡಿದ್ದಾರೆ. ಆಂಬ್ಯುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಸುಮಾರು ಹದಿನೈದು ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಲವಲವಿಕೆಯಿಂದ ಇದ್ದರು. ಸ್ಥಳಕ್ಕೆ ಡಿಡಿಪಿಐ ಎಂ.ರೇವಣಸಿದ್ದಪ್ಪ, ಬಿಇಒ, ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ವಿ.ಹೆಚ್.ವೆಂಕಟೇಶಯ್ಯ, ಶಿಕ್ಷಣ ಇಲಾಖೆಯ ಅಧಿಕಾರಿಗಳು,ಶಾಲೆಯ ಶಿಕ್ಷಕರು ಮತ್ತು ಪೋಷಕರು ಇದ್ದರು. ವರದಿ: ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಹುಬ್ಬಳ್ಳಿ: ಹುಬ್ಬಳ್ಳಿಯ KHB ಕಾಲೋನಿಯಲ್ಲಿ ಶ್ರೀಗಂಧದ ಮರ(Sandalwood Trees)ವನ್ನು ಕಡಿದು ಕದ್ದೊಯ್ಯಲಾಗಿದೆ. ರಾತ್ರಿ ವೇಳೆ ಯಾರೂ ಇಲ್ಲದ ಸಮಯವನ್ನು ಗಮನಿಸಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೆಳೆದು ನಿಂತಿದ್ದ ಗಂಧದ ಮರವನ್ನು ಮಂಗಮಾಯ ಮಾಡಿದ್ದಾರೆ. ಶಿವಶಂಕರ್ ಐಹೊಳೆ ಎಂಬುವರ ಮನೆ ಆವರಣದಲ್ಲಿ ಬೆಳೆದು ನಿಂತಿದ್ದ ಲಕ್ಷಾಂತರ ರೂ. ಮೌಲ್ಯದ ಶ್ರೀಗಂಧದ ಮರ(Sandalwood Theft)ಕ್ಕೆ ಖತರ್ನಾಕ್ ಖದೀಮರು ಕೊಡಲಿಪೆಟ್ಟು ಹಾಕಿದ್ದಾರೆ. ಕಡಿದ ಶ್ರೀಗಂಧದ ಮರವನ್ನು ಕಡಿದು ಕಳ್ಳರು ಸಾಗಿಸುತ್ತಿರುವ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾ(CCTV Footage)ದಲ್ಲಿ ಸೆರೆಯಾಗಿದೆ. ಬುಡಸಮೇತ ಗಂಧದ ಮರವನ್ನು ಕಡಿದಿರುವ ಕಳ್ಳರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಘಟನೆ ಕುರಿತು ಹುಬ್ಬಳ್ಳಿ ಕಸಬಾ ಠಾಣೆ (Hubli Kasaba Police Station)ಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸುತ್ತಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಶ್ರೀಗಂಧದ ಮರ ಕಳ್ಳತನ(Sandalwood Trees Stolen)ಮಾಡಿರುವ ಕಳ್ಳರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ಕೊಡಿಸಬೇಕೆಂದು ಮನೆ ಮಾಲೀಕ ಶಿವಶಂಕರ್ ಐಹೊಳೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ. ಅನೇಕ ವರ್ಷಗಳಿಂದ…
ಕೋಲಾರ: ಮಕ್ಕಳಿಗೆ ಶ್ರೀಮಂತಿಕೆ ತೋರಿಸಲು ಹೋಗಿ ತಂದೆಯೊಬ್ಬ ಕಳ್ಳನಾಗಿದ್ದಾನೆ. ತನ್ನ ಮಕ್ಕಳಿಗೆ ಬಡತನದ ಅರಿವಾಗದಂತೆ ನೋಡಿಕೊಳ್ಳಲು ಕೋಲಾರ(Kolar) ಮೂಲದ ಸಂತೋಷ್ ಕಳ್ಳತಕ್ಕೆ ಕೈಹಾಕಿ ಸಿಕ್ಕಿಬಿದ್ದಿದ್ದಾನೆ. ಸಂತೋಷ್ ಗೆ ಇಬ್ಬರು ಮಕ್ಕಳಿದ್ದಾರೆ. ಈ ಮಕ್ಕಳ ಐಷಾರಾಮಿ ಜೀವನ(Rich Lifestyle)ಕ್ಕೆ ಸಂತೋಷ್ ಮನೆಗಳ್ಳತನವನ್ನೇ ತನ್ನ ವೃತ್ತಿ ಮಾಡಿಕೊಂಡಿದ್ದ. ರಾತ್ರಿ ಊಟ ಮುಗಿಸಿಕೊಂಡು ಏರಿಯಾದಲ್ಲಿ ಆರೋಪಿ ಬೀಟ್ ಹಾಕಿ ಕಳ್ಳತನಕ್ಕೆ ಮಾಸ್ಟರ್ ಪ್ಲಾನ್ ಮಾಡುತ್ತಿದ್ದ. ರಾತ್ರಿ 9 ಗಂಟೆಗೆ ಯಾವ ಮನೆಯಲ್ಲಿ ಲೈಟ್ ಆಫ್ ಆಗಿದೆ ಎಂದು ಆರೋಪಿ ಪರಿಶೀಲಿಸುತ್ತಿದ್ದ. ಬಳಿಕ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಕಳ್ಳತನ ಮಾಡುತ್ತಿದ್ದ. ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಸಂತೋಷ್ ಸಕಲ ಸಿದ್ಧತೆ ಮಾಡಿಕೊಂಡೇ ರೋಡಿಗಿಳಿಯುತ್ತಿದ್ದ. ಬೆಳಗಿನ ಜಾವ ಪೊಲೀಸ್ ಬೀಟ್ ಮುಗಿಯೋದನ್ನೇ ಆರೋಪಿ ಕಾಯುತಿದ್ದ. ಖಾಕಿಪಡೆ(Kolar Police)ಯ ಬೀಟ್ ಮುಗಿದ ಬಳಿಕ ಮನೆಯಲ್ಲಿ ಕಳ್ಳತನ ಮಾಡಿರುವ ಚಿನ್ನ-ಬೆಳ್ಳ, ಹಣ ಸೇರಿದಂತೆ ಬೆಲೆ ಬಾಳುವ ವಸ್ತುಗಳೊಂದಿಗೆ ಆರೋಪಿ ಎಸ್ಕೇಪ್ ಆಗುತ್ತಿದ್ದ. ಹೀಗೆ ಕಳ್ಳತನ ಮಾಡಿದ ಬೆಲೆಬಾಳುವ ವಸ್ತುಗಳನ್ನು ತನ್ನ ಸಂಬಂಧಿಗಳಿಗೆ…
International Women’s Day 2022: ಪ್ರತಿ ವರ್ಷ ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಮಹಿಳೆಯರ ಸಾಂಸ್ಕೃತಿಕ, ರಾಜಕೀಯ ಮತ್ತು ಸಾಮಾಜಿಕ ಆರ್ಥಿಕ ಸಾಧನೆಗಳನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಲಿಂಗ ಸಮಾನತೆಯ ಸಂದೇಶವನ್ನು ಹರಡುವುದು ಮತ್ತು ಉತ್ತಮ ಸಮಾಜವನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ, ಅಲ್ಲಿ ಯಾವುದೇ ಲಿಂಗ ಪಕ್ಷಪಾತವಿಲ್ಲ. ಈ ವರ್ಷ, ವಿಶ್ವಸಂಸ್ಥೆಯು ಅಂತರರಾಷ್ಟ್ರೀಯ ಮಹಿಳಾ ದಿನದ ಥೀಮ್ (International Women’s Day 2022 Theme) ಅನ್ನು ‘ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ’ ಎಂದು ಘೋಷಿಸಿತು . ಮಹಿಳಾ ಸಮಾನತೆಯ ಬಗ್ಗೆ ಮಾತನಾಡುತ್ತಿರುವ 21ನೇ ಶತಮಾನದಲ್ಲಿ ಅನೇಕ ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಸರಿಯಾಗಿ ತಿಳಿಯದೆ ಮನೆ, ಕಚೇರಿ ಎಲ್ಲೆಡೆ ಮಾನಸಿಕ, ದೈಹಿಕ ಹಿಂಸೆಗೆ ಬಲಿಯಾಗುತ್ತಿದ್ದಾರೆ. ಇಲ್ಲಿ ನಾವು ಅಂತಹ ಕೆಲವು ಹಕ್ಕುಗಳ ಬಗ್ಗೆ ಹೇಳುತ್ತಿದ್ದೇವೆ, ಅದರ ಬಗ್ಗೆ ಪ್ರತಿಯೊಬ್ಬ ಮಹಿಳೆಯೂ ಕೂಡ ತಿಳಿದಿರುವುದು ಅತ್ಯವಶ್ಯಕ. ಪ್ರತಿ ಮಹಿಳೆಯು ತಿಳಿದಿರಲೇಬೇಕಾದ 5 ಪ್ರಮುಖ ನಾಗರಿಕ ಹಕ್ಕುಗಳಿವು…
ಕೊರಟಗೆರೆ : ತಾಲ್ಲೂಕಿನ ಕಸಬಾ ಹೋಬಳಿಯ ಮಲ್ಲೇಶ್ವರ ಗ್ರಾಮದಲ್ಲಿ ತಡರಾತ್ರಿ 12 ರಿಂದ 1ಗಂಟೆ ಸಮಯದ ಒಳಗೆ ಕಳ್ಳರ ತಂಡವೊಂದು ಊರಿನ ಒಳಗೆ ನುಗ್ಗಿ ಅಕ್ಕಪಕ್ಕದ ಮನೆಗಳಿಗೆ ಹೊರಗಿನಿಂದ ಲಾಕ್ ಮಾಡಿ ಮನೆಯ ಪಕ್ಕದಲ್ಲಿದ್ದ ಕುರಿಗಳ ದೊಡ್ಡಿಯಲ್ಲಿ 16 ಕುರಿಗಳನ್ನು ಕದ್ದೊಯ್ದಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಕುರಿಗಳ ಮಾಲಿಕ ಮುದ್ದಪ್ಪ ಮಾತನಾಡಿ, ರಾತ್ರಿ ಹೊಲಕ್ಕೆ ನೀರು ಹಾಯಿಸಲು ಹೋಗಿದ್ದೆವು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿರುವ ದರೋಡೆಕೋರರು ಅಕ್ಕ ಅಕ್ಕ ಪಕ್ಕದ ಮನೆಗಳಿಗೆ ಹೊರಗಿನಿಂದ ಲಾಕ್ ಮಾಡಿ ಸುಮಾರು ಒಂದೂವರೆ ಲಕ್ಷ ಬೆಲೆಬಾಳುವಂತಹ 16 ಕುರಿಗಳನ್ನು ಕದ್ದೊಯ್ದಿದ್ದಾರೆ . ದಯಮಾಡಿ ಅಧಿಕಾರಿಗಳು ಕಳ್ಳರನ್ನು ಆದಷ್ಟು ಬೇಗ ಬಂಧಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಬೇಡಿಕೊಂಡಿದ್ದಾರೆ. ಸದ್ಯ ಈ ಪ್ರಕರಣ ಕೊರಟಗೆರೆ ಪೋಲಿಸ್ ಠಾಣೆಯ ಪಿ ಎಸ್ ಐ ಮಂಜುಳ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ . ವರದಿ: ಮಂಜುಸ್ವಾಮಿ…
ಗುಬ್ಬಿ: ತಾಲ್ಲೂಕಿನ ಅಮ್ಮನಘಟ್ಟ ಅರಣ್ಯ ಪ್ರದೇಶದ ಗಡಿ ನಿರ್ಧರಿಸಲು ಮುಂದಾದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಏಕಾಏಕಿ ರೈತರ ಕೃಷಿ ಜಮೀನಿಗೆ ಅತಿಕ್ರಮಣ ಮಾಡಿದ್ದಲ್ಲದೇ, ರೈತರ ವಿರುದ್ಧ ದೌರ್ಜನ್ಯದ ಮಾತುಗಳಾಡಿದ್ದಾರೆ. ಫಲ ನೀಡುತ್ತಿದ್ದ 30 ವರ್ಷದ ಅಡಕೆ, ತೆಂಗು ಮತ್ತು ಎಳೆ ಅಂಬು ಮಣ್ಣು ಪಾಲು ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಸಂಜೆ ಸಿಟ್ಟಿಗೆದ್ದ ರೈತ ಸಂಘದ ಸದಸ್ಯರು ಹಾಗೂ ಸಂತ್ರಸ್ತ ರೈತರು ತಾಲ್ಲೂಕು ಕಛೇರಿ ಮುಂದೆ ಅನಿರ್ಧಿಷ್ಟಾವಧಿ ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಮರಗಿಡಗಳನ್ನು ಬೆಳೆಸಿ ಪೋಷಿಸುವ ಕಾಯಕ ಮಾಡುವ ಅರಣ್ಯ ಇಲಾಖೆ ಕೃಷಿಕನ ಜಮೀನಿಗೆ ಹಿಟಾಜಿ ಯಂತ್ರ ನುಗ್ಗಿಸಿ ಫಲ ನೀಡುತ್ತಿದ್ದ 200ಕ್ಕೂ ಅಧಿಕ ಅಡಕೆ ಮರಗಳು, 10 ತೆಂಗಿನಮರಗಳು ಹಾಗೂ ವಿಳೇದೆಲೆ ಅಂಬುಗಳನ್ನು ಕತ್ತರಿಸಿ ಕಟುಕತನ ಪ್ರದರ್ಶಿಸಿದ್ದಾರೆ. ನಮ್ಮ ಜಮೀನಿನ ಬೆಳೆ ನಾಶ ಮಾಡದಂತೆ ಅಂಗಲಾಚಿದರೂ ಕಿಂಚಿತ್ತೂ ಕರುಣೆ ತೋರದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ.…
ಗುಬ್ಬಿ: ತಾಲೂಕಿನ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿರುವ ಗುಬ್ಬಿ ವಲಯ ಅರಣ್ಯಾಧಿಕಾರಿ ದುಗ್ಗಪ್ಪನವರ ದರ್ಪ ತಾಲೂಕಿನಲ್ಲಿ ಹೆಚ್ಚಾಗಿದ್ದು, ಇವರ ದರ್ಪದ ಆಡಳಿತವನ್ನು ನಿಯಂತ್ರಿಸುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿರುವುದು ತಾಲೂಕಿನ ರೈತರ ದುರಾದೃಷ್ಟಕರವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಅಮ್ಮನಘಟ್ಟ ಗ್ರಾಮದ ಸರ್ವೆ ನಂಬರ್ 164ರಲ್ಲಿ ಸುಮಾರು 2-34 ಗುಂಟೆ ಜಮೀನನ್ನು ಬಡ ರೈತ ದೊಡ್ಡ ತಿಮ್ಮಯ್ಯ ಹೊಂದಿದ್ದು, ಸುಮಾರು 30 – 40 ವರ್ಷಗಳಿಂದ ಈ ಜಮೀನನ್ನು ನಂಬಿ ಸಂಸಾರವನ್ನು ನಡೆಸುತ್ತಿದ್ದಾರೆ. ಈ ನಡುವೆ ಏಕಾಏಕಿ ಅರಣ್ಯಾಧಿಕಾರಿ ದುರ್ಗಪ್ಪ ಯಾವುದೇ ಮುನ್ಸೂಚನೆ ನೀಡದೆ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಯೊಡನೆ ಜಮೀನಿಗೆ ಧಾವಿಸಿ, ಅಲ್ಲಿ ಬೆಳೆದಿದ್ದ ಸುಮಾರು 50 ರಿಂದ 60 ಫಸಲು ಬಿಡುತ್ತಿರುವ ಅಡಿಕೆ ಮರ ಹಾಗೂ ಮೂವತ್ತು ವರ್ಷದಿಂದ ಕಾಪಾಡಿಕೊಂಡು ಬಂದಂತಹ 15 ತೆಂಗಿನ ಮರಗಳನ್ನು ಧರೆಗೆ ಉರುಳಿಸಿ ತನ್ನ ಅಹಂಕಾರವನ್ನು ಕುಟುಂಬದ ಮೇಲೆ ತೋರಿಸಿದ್ದು, ಬಡ ಕುಟುಂಬಗಳು ಇವರ ಆಡಳಿತದಿಂದ ಕಂಗಾಲಾಗಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ…
ಮಧುಗಿರಿ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗಗಳಿಸಲು ಮೃದುಕೌಶಲ್ಯಗಳು ಪೂರಕವಾಗಿವೆ. ವಿದ್ಯಾರ್ಥಿಗಳು ಪಠ್ಯ ವಿಷಯಗಳ ಕುರಿತು ಅಧ್ಯಯನ ಮಾಡುವ ಜೊತೆಗೆ ಮೃದುಕೌಶಲ್ಯಗಳನ್ನು ಕಲಿತು ಉತ್ತಮ ಉದ್ಯೋಗಗಳನ್ನು ಗಳಿಸಬಹುದು. ಮೃದುಕೌಶಲ್ಯ ಕಲಿತವರಿಗೆ ಹೇರಳ ಉದ್ಯೋಗಾವಕಾಶಗಳು ಲಭ್ಯವಿದೆ. ಆದುದರಿಂದ ಮೃದುಕೌಶಲ್ಯಗಳ ಕಲಿಕೆಗೆ ವಿಶೇಷ ಒತ್ತು ನೀಡಬೇಕು ಎಂದು ಪ್ರಾಂಶುಪಾಲರಾದ ಪ್ರೊ.ಡಿ.ಎಸ್.ಮುನೀಂದ್ರಕುಮಾರ್ ಅಭಿಪ್ರಾಯಪಟ್ಟರು. ಅವರು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಮತ್ತು ಉದ್ಯೋಗ ಕೋಶದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಮೃದುಕೌಶಲ್ಯಗಳು ಮತ್ತು ಉದ್ಯೋಗ ಮಾರ್ಗದರ್ಶನ ಕುರಿತಾಗಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸದ ಅಧ್ಯಕ್ಷತೆ ವಹಿಸಿ ಮಾತನಾಡಿ ಕಂಪ್ಯೂಟರ್ ಜ್ಞಾನ, ಸಂವಹನ ಕಲೆ, ಸಮಯ ನಿರ್ವಹಣೆ, ವಿವಿಧ ಭಾಷೆಗಳನ್ನು ಕಲಿಯುವ ಮೂಲಕ ಮೃದುಕೌಶಲ್ಯಗಳನ್ನು ಕರಗತ ಮಾಡಿಕೊಂಡು ಸ್ಪರ್ಧಾತ್ಮಕ ಜಗತ್ತಿನಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಬಹುದು. ಪದವಿಯ ಜೊತೆಗೆ ಮೃದುಕೌಶಲ್ಯಕಲಿಕೆಗೆ ಕಾಲೇಜು ಶಿಕ್ಷಣ ಇಲಾಖೆ ವಿಶೇಷ ಆಸಕ್ತಿ ವಹಿಸಿದ್ದು, ಎಲ್ಲ ಕಾಲೇಜುಗಳಲ್ಲಿ ಉದ್ಯೋಗ ತರಬೇತಿ ಸ್ಥಾಪಿಸಿ, ಮೃದು ಕೌಶಲ್ಯಗಳತರಬೇತಿ ನೀಡಲು ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಸಂಪದ್ಭರಿತ ಮಾನವ…