Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಪ್ರತಿ ಬುಧವಾರ ಹಾಗೂ ಶನಿವಾರದ ಸಂತೆಗಳು ನಡೆಯುತ್ತಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಕೊವಿಡ್ ಹಿನ್ನೆಲೆಯಲ್ಲಿ ವಾರದ ಸಂತೆಗಳನ್ನು ರದ್ದುಪಡಿಸಲಾಗಿತ್ತು. ಇದೀಗ ಕೊವಿಡ್ ನಿಯಂತ್ರಣಕ್ಕೆ ಬಂದಿರುವ ಸಂತೆಯನ್ನು ಮತ್ತೆ ಆರಂಭ ಮಾಡಲಾಗಿದೆ. ಹಿರಿಯೂರು ನಗರಸಭೆ ಆಡಳಿತದ ಅಧಿಕಾರಿಗಳ ಆದೇಶದ ಸಂಖ್ಯೆ ನ. ಸ.ಹಿ.ಕ. ಶಾ. ಸಿ . ಆರ್ ೧/೨೦೨೧-೨೨ ನಗರಸಭೆ ಕಾರ್ಯಾಲಯದ ಆದೇಶದ ಪ್ರಕಾರ ಕೋವಿಡ್ ಮತ್ತು ಓಮಿಕ್ರೋನ್ ಸಾಂಕ್ರಾಮಿಕ ರೋಗವು ಸಹಜ ಸ್ಥಿತಿಗೆ ತಲುಪಿರುವುದರಿಂದ ನಗರಸಭೆ ಕಾರ್ಯಾಲಯದ ಆಡಳಿತ ಅಧಿಕಾರಿಗಳ ಆದೇಶದ ಮೇರೆಗೆ ವಾರದ ಸಂತೆಯನ್ನು ಎ ಪಿ ಎಂಸಿ ಮಾರ್ಕೆಟ್ ನಿಂದ ಮೊದಲಿನಂತೆ ಶನಿವಾರ ಹಿರಿಯೂರು ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗದಲ್ಲಿನ ಬನ್ನಿಮಂಟಪ ಸಂತೇಪೇಟೆಯಲ್ಲಿ ಹಾಗೂ ಬುಧವಾರದ ಟಿ.ಬಿ.ಸರ್ಕಲ್ ಬಳಿ ಮೊದಲಿನಂತೆ ಸಂತೆಯನ್ನು ಮಾಡುವಂತೆ ನಗರಸಭೆ ಆದೇಶ ಮಾಡಿತ್ತು. ಕಳೆದ ಎರಡು ಮೂರು ವರ್ಷಗಳಿಂದ ಕೊರೊಣ ಹಾಗೂ ಓಮಿಕ್ರೋನ್ ಸಾಂಕ್ರಾಮಿಕ ರೋಗದಿಂದ ತರಕಾರಿ ವ್ಯಾಪಾರಿಗಳ ಪರಿಸ್ಥಿತಿ ಗಳು ನೆಲಗುಂದಿದ್ದವು. ನಗರಸಭೆ ಆಡಳಿತ…
ತುಮಕೂರು: ಪದ್ಮಶ್ರೀ ಪುರಸ್ಕೃತ ಡಾ.ಸೂಲಗಿತ್ತಿ ನರಸಮ್ಮನವರ 101ನೇ ಜನ್ಮ ದಿನಾಚರಣೆಯು ಮಾರ್ಚ್ 6ರಂದು ಆಚರಿಸಲು ಉದ್ದೇಶಿಸಿದ್ದು, 101ನೇ ಜನ್ಮ ದಿನದ ಆಚರಣೆ ಸಮಿತಿಯು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ತುಮಕೂರಿನ ಎಂ.ಜಿ.ರಸ್ತೆಯ ಬಾಲ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ ಅವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ್ದಾರೆ. ಬೆಳಗ್ಗೆ 9 ಗಂಟೆಗೆ ಸ್ಥಳದಲ್ಲೇ ಡಾ.ಸೂಲಗಿತ್ತಿ ನರಸಮ್ಮನವರ ಭಾವಚಿತ್ರ ಕಲಾಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಸ್ಪರ್ಧೆಯಲ್ಲಿ ಆಯ್ಕೆಯಾದವರಿಗೆ ಪ್ರಥಮ ಬಹುಮಾನ 5 ಸಾವಿರ ರೂ. ದ್ವಿತೀಯ ಬಹುಮಾನ 3 ಸಾವಿರ ರೂಪಾಯಿ, ತೃತೀಯ ಬಹುಮಾನವಾಗಿ 2 ಸಾವಿರ ರೂಪಾಯಿ ನಗದು ಘೋಷಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಗಂಗಸಂದ್ರದ ಸ್ಮಾರಕ ಸ್ಥಳದಲ್ಲಿ ಗದ್ದಿಗೆ ಪೂಜೆ ನೆರವೇರಲಿದೆ. 11:30ಕ್ಕೆ ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ರಾಷ್ಟ್ರೀಯ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು 101 ಗರ್ಭಿಣಿಯರಿಗೆ ಸೀಮಂತ ಕಾರ್ಯ ಮತ್ತು ಮಡಿಲು ತುಂಬುವ ಕಾರ್ಯಕ್ರಮ ಹಾಗೂ 180 ಸೂಲಗಿತ್ತಿಯರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ…
ಗುಬ್ಬಿ: ಚೀರನಹಳ್ಳಿ ಮತ್ತು ಬೆಳ್ಳಳ್ಳಿ ಗ್ರಾಮದಲ್ಲಿ ದುರಸ್ತಿ ಮತ್ತು ಪರಿವರ್ತಕ ಸ್ಥಳಾಂತರಕ್ಕೆ ಸೂಚಿಸಿದ್ದರೂ ಬೇಜವಾಬ್ದಾರಿ ತೋರಿದ ಬೆಸ್ಕಾಂ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಅವರು ಬೆಸ್ಕಾಂ ಮುಖ್ಯ ಎಂಜಿನಿಯರ್ ಲೋಕೇಶ್ ಅವರಿಗೆ ಮೊಬೈಲ್ ಮೂಲಕ ತರಾಟೆಗೆ ತೆಗೆದುಕೊಂಡ ಘಟನೆ ಇಂದು ಚೀರನಹಳ್ಳಿ ಗ್ರಾಮದ ವಿವಿಧ ಕಾಮಗಾರಿ ಪೂಜಾ ಕಾಮಗಾರಿಗೆ ಆಗಮಿಸಿದ ಸಂದರ್ಭದಲ್ಲಿ ಜರುಗಿತು . ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆ ಎದುರಾದ ಹಿನ್ನೆಲೆ ಗದ್ದೆಹಳ್ಳಿ ಗ್ರಾಮದಲ್ಲಿ ಕಳೆದ 15 ವರ್ಷಗಳಿಂದಲೂ ಕೆಲ ಕುಟುಂಬಗಳ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದಿರುವ ಬಗ್ಗೆ ತುಮಕೂರು ಜಿಪಂ ಕೆಡಿಪಿ ಸಭೆಯಲ್ಲಿ ಬೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ಬಗ್ಗೆ ಪ್ರಸ್ತಾಪಿಸಿ ಕೂಡಲೇ ಚೀರನಹಳ್ಳಿಯಲ್ಲಿ ವಿದ್ಯುತ್ ದುರಸ್ಥಿ ಹಾಗೂ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿ ಹಲವು ಮನೆಗಳ ಕತ್ತಲು ನಿವಾರಿಸಲು ಸೂಚಿಸಿದ್ದರೂ, ಜಿಲ್ಲಾ ಸಚಿವರ ಮುಂದೆ ಕೆಲಸ ಮಾಡುವ ಮಾತು ಆಡಿದ ಸಿಬ್ಬಂದಿ ಈಗ ಕಾಲ ಕಳೆಯುತ್ತಿರುವುದು ಅವರ…
ಗುಬ್ಬಿ: ನಾನು ಶಾಸಕನಾಗಿ ಅಧಿಕಾರವಹಿಸಿಕೊಂಡ ನಂತರ ರೈತರ ಮನೆ ಬಾಗಿಲಿಗೆ ತೆರಳಿ ಅವರ ಕಷ್ಟ ಸುಖದಲ್ಲಿ ಭಾಗಿಯಾಗಿ ಜನಸೇವಕನಾಗಿ ಕೆಲಸಮಾಡಿದ್ದೇನೆ ಎಂದು ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ತಿಳಿಸಿದರು. ಸಿ.ಎಸ್.ಪುರ ಹೋಬಳಿಯಲ್ಲಿ ಸುಮಾರು 4 ಕೋಟಿ ವೆಚ್ಚದಲ್ಲಿ ಹಲವು ಗ್ರಾಮಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಸಿ.ಎಸ್. ಪುರ ದಲ್ಲಿರುವ ನಮ್ಮ ದೇವಸ್ಥಾನದ ಆವರಣದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ಸಿ.ಎಸ್. ಪುರ ಕೆರೆಯು ತುಂಬದೇ ಇದ್ದು, ಈ ಬಾರಿ ಕೆರೆ ತುಂಬಿ ಹರಿದಿತ್ತು, ಈ ಕೆರೆಯ ನೀರನ್ನು ಮಿತವಾಗಿ ಬಳಸುವ ಸಲುವಾಗಿ ಸಿಎಸ್ ಪುರ ಹೋಬಳಿ ರೈತರನ್ನು ಒಂದೆಡೆ ಸೇರಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೀರನ್ನು ಬಳಕೆ ಮಾಡಿಕೊಳ್ಳುವ ಬಗ್ಗೆ ರೈತರೊಂದಿಗೆ ಚರ್ಚಿಸಲು ಈ ಸಭೆಯನ್ನು ಕರೆಯಲಾಗಿತ್ತು ಎಂದರು. ವಿದ್ಯುಚ್ಛಕ್ತಿ ಸಮಸ್ಯೆ ಹೆಚ್ಚಾಗಲು ರಾಯಚೂರು ತರ್ಮಲ್ ಕೇಂದ್ರದಲ್ಲಿ ತೊಂದರೆಯಾಗಿದ್ದು, ಸಮಸ್ಯೆ ಈಗಾಗಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಬಗೆಹರಿಸಿದ್ದು ಇನ್ನುಮುಂದೆ ಯಾವುದೇ ರೀತಿಯ ತೊಂದರೆಯಾಗದಂತೆ ಐದು ಗಂಟೆಗಳ…
ಚಿಕ್ಕನಾಯಕನಹಳ್ಳಿ : ತಾಲ್ಲೂಕು ಹಂದನಕೆರೆ ಹೋಬಳಿ ಬರಗೂರು ಗ್ರಾಮ ಪಂಚಾಯಿತಿ ಗದ್ದೆಗೆ ರಟ್ಟಿ ಗ್ರಾಮದಲ್ಲಿ ಪಂಚಾಯಿತಿ ವತಿಯಿಂದ ಸರಬರಾಜು ಆಗುವ ಓವರ್ ಟ್ಯಾಂಕ್ ನೀರನ್ನು ಕುಡಿದು ಜನರು ಅಸ್ವಸ್ಥರಾದ ಘಟನೆ ನಡೆದಿದೆ. ಟ್ಯಾಂಕ್ ನೀರು ಸೇವಿಸಿದ ಪರಿಣಾಮ ಜನರಿಗೆ ವಾಂತಿ ಭೇದಿ ಆರಂಭವಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಜನರು ನರಳಿದ ಘಟನೆ ನಡೆದಿದೆ. ವಿಷಯ ತಿಳಿದ ಸಚಿವರಾದ ಮಾಧುಸ್ವಾಮಿ ಗ್ರಾಮಕ್ಕೆ ಆಗಮಿಸಿ, ಆರೋಗ್ಯ ಇಲಾಖೆಯವರನ್ನು ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದರು. ಕಳೆದ ಮೂರು ದಿನಗಳಿಂದ ಗ್ರಾಮದ ದೇವಾಲಯದ ಆವರಣದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ ಹಾಗೂ ಕೆಲವರು ಹಾಸನ ಆಸ್ಪತ್ರೆಗೆ ದಾಖಲಾಗಿದ್ದಾರೆ . ಕಳೆದ ನಾಲ್ಕು ವರ್ಷಗಳಿಂದ ಓವರ್ ಟ್ಯಾಂಕ್ ಸ್ವಚ್ಛಗೊಳಿಸದಿರುವುದರಿಂದಾಗಿ ಈ ಸಮಸ್ಯೆ ಆರಂಭವಾಗಿದ್ದು, ಅಧಿಕಾರಿಗಳು ಈ ಬಗ್ಗೆ ತೀವ್ರವಾಗಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ಪಿಡಿಓ ನೀರುಗಂಟಿ ಗಮನಕ್ಕೆ ತಂದರೆ ಉಡಾಫೆ ಮಾತನಾಡುತ್ತಾರೆ ಎಂಬ ಆರೋಪ ಕೇಳಿ ಬಂದಿದೆ. ಈ…
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ತಾಲ್ಲೂಕು ಕಛೇರಿಯ ಆವರಣದಲ್ಲಿರುವ ಪಿ ಬಿ ರೋಡ್ ಶಾಖೆಯಲ್ಲಿ ಶನಿವಾರದಂದು ಬ್ಯಾಂಕ್ ನಲ್ಲಿ ವಿಪರೀತವಾಗಿ ಜನಜಂಗುಳಿ ಇದ್ದು, ಈ ಶಾಖೆಯಲ್ಲಿ ಐದು ಕೌಂಟರ್ ಗಳು ಇದ್ದರೂ ಸಹ ಸಿಬ್ಬಂದಿ ವರ್ಗದ ಕೊರತೆಯಿಂದ ದಿನನಿತ್ಯ ಈ ಬ್ಯಾಂಕಿಗೆ ಬರುವ ಸಾರ್ವಜನಿಕರು ಘಂಟನುಘಂಟಲೇ ಕಾಯುವಂತ ಪರಿಸ್ಥಿತಿ ಉಂಟಾಗಿದೆ . ಸಾರ್ವಜನಿಕರು ದಿನನಿತ್ಯದ ತಮ್ಮ ಒತ್ತಡದ ನಡುವೆ ಬೇಗನೆ ತಮ್ಮ ವ್ಯವಹಾರ ಮಾಡಿಕೊಂಡು ಹೋಗೋಣ ಎಂದು ಬಂದರೆ, ಯಾವುದೇ ಕೆಲಸಗಳಿಗೂ ಬ್ಯಾಂಕ್ ನಲ್ಲಿ ಘಂಟನುಘಂಟಲೇ ಕಾಯಬೇಕಾದ ಪರಿಸ್ಥಿತಿಯಾಗಿದೆ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸಿದರು. ಸಂಬಂಧಪಟ್ಟ ಶಾಖಾ ವ್ಯವಸ್ಥಾಪಕರು ಈ ಕೂಡಲೇ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ಶಾಖೆಗೆ ದಿನನಿತ್ಯ ಬರುವ ಸಾರ್ವಜನಿಕರಿಗೆ ಅನುಕೂಲಮಾಡಿಕೊಡುವಂತೆ ಹಾಗೂ ಈ ಶಾಖೆಯಲ್ಲಿ ಸಿಬ್ಬಂದಿ ವರ್ಗದವರ ಕೊರತೆ ಇರುವುದರಿಂದ ಮೇಲ್ಪಾಟ್ಟ ಶಾಖಾ ವ್ಯವಸ್ಥಾಪಕರು ಈ ಕೂಡಲೇ ಈ ಶಾಖೆಗೆ ಸಿಬ್ಬಂದಿ ವರ್ಗದವರನ್ನು ನೇಮಕಮಾಡಿಕೊಂಡು ದಿನನಿತ್ಯ ವ್ಯವಹಾರ ಮಾಡಲು ಬರುವಂತಹ ಸಾರ್ವಜನಿಕರಿಗೆ ಅನುಕೂಲಮಾಡಿಕೊಡುವಂತೆ ಸಾರ್ವಜನಿಕರು ಮನವಿ…
ಹೆಣ್ಣು ಮಕ್ಕಳ ಚಟಕ್ಕೆ ಬಿದ್ದು ಕಳ್ಳತನ ಮಾಡುತ್ತಿದ್ದ ವೃದ್ಧನನ್ನ ಸುದ್ದುಗುಂಟೆ ಪೊಲೀಸರು ಬಂಧಿಸಿದ್ದಾರೆ. 70 ವರ್ಷದ ರಮೇಶ್ ಬಂಧಿತ ಆರೋಪಿ ಎಂದು ಆಗ್ನೇಯ ವಿಭಾಗ ಡಿಸಿಪಿ ಶ್ರೀನಾಥ್ ಜೋಶಿ ತಿಳಿಸಿದ್ದಾರೆ. ಸಿಸಿಟಿವಿ ಆಧರಿಸಿ ಮನೆಗಳ್ಳತನ ಪ್ರಕರಣಗಳ ಸಂಬಂಧಗಳ ತನಿಖೆಯ ವಿಚಾರಣೆ ವೇಳೆ ಆರೋಪಿ ರಮೇಶ್ ಗೆ ಹೆಣ್ಣು ಮಕ್ಕಳ ಚಟ ಇರುವ ಬಗ್ಗೆ ಬಯಲಿಗೆ ಬಂದಿದೆ. ಆರೋಪಿ ರಮೇಶ್(Ramesh) ಎರಡು ಮದುವೆ, ಮೂರು ಮಕ್ಕಳಾಗಿದ್ದರು ಆಸೆ ಕಡಿಮೆಯಾಗಿಲ್ಲ. ಆರೋಪಿ ಮೂಲತಃ ಚಿಕ್ಕಮಗಳೂರಿನವ, ತನ್ನ ಚಟಕ್ಕೆ ಮನೆಯಲ್ಲಿ ಹಣ ಕೊಡಲಿಲ್ಲ ಎಂದು ಮನೆ ಕಳ್ಳತನ ಮಾಡಲು ಆರಂಭಿಸಿದ್ದ. ಆರೋಪಿ ರಮೇಶ್ ಕಳೆದ 12 ವರ್ಷಗಳ ಹಿಂದೆ ಮನೆ ತೊರೆದು ತಮಿಳುನಾಡಿಗೆ(Tamilunadu) ತೆರಳಿದ್ದ. ಅಲ್ಲಿ ಸಣ್ಣಪುಟ್ಟ ಕಳ್ಳತನ ಮಾಡಿಕೊಂಡು ಬಂದ ಹಣದಲ್ಲಿ ವ್ಯಾಮೊಹ ತೀರಿಸಿಕೊಳ್ಳುತಿದ್ದ. ಆದ್ರೆ ಯಾವಾಗ ತಮಿಳುನಾಡು ಪೊಲೀಸರು ಬಂಧಿಸಿದ್ರೊ ಬಿಡುಗಡೆಯಾದ ಬಳಿಕ ಬೆಂಗಳೂರಿಗೆ ಶಿಫ್ಟ್ ಆಗಿದ್ದ. ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಮನೆಗಳ್ಳತನ ಮಾಡಲು ಆರಂಭಿಸಿದ್ದ. ಸಧ್ಯ ಸುದ್ದುಗುಂಟೆ ಪಾಳ್ಯ…
ಪ್ರತಿ ವರ್ಷದಂದು ಮಂಡನೆಯಾಗಲಿರುವ ಬಜೆಟ್ ಗೆ ಜನ ಸಾಮಾನ್ಯರಿಂದ ಹಿಡಿದು ಬೃಹತ್ ಕೈಗಾರಿಕೋದ್ಯಮಿಗಳವರೆಗೆ ಎಲ್ಲರೂ ಕಾತುರದಿಂದ ಕಾಯ್ದು ಕುಳಿತಿರುತ್ತಾರೆ. ಬಜೆಟ್ ಆಧಾರದ ಮೇಲೆ ದೇಶದ, ರಾಜ್ಯದ, ಜಿಲ್ಲೆ, ತಾಲೂಕುಗಳ ಆಯವ್ಯಯ ನಿರ್ಧರಿತವಾಗುತ್ತದೆ ಅಷ್ಟೇ ಅಲ್ಲದೆ ಇದು ಆರ್ಥಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಮಂಡಿಸುತ್ತಿರುವ ಬಜೆಟ್ ಮೇಲೆ ಸಹಜವಾಗಿ ಹೆಚ್ಚಿನ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಈಗ ನಾವು ಬಜೆಟ್ ಪರಿಕಲ್ಪನೆ ಬಗ್ಗೆ ಸಂಕ್ಷಿಪ್ತವಾಗಿ ತಿಳಿದುಕೊಳ್ಳಬೇಕಾಗಿದೆ.ಭಾರತದಲ್ಲಿ ಬಜೆಟ್ ಪರಿಕಲ್ಪನೆ ಬೆಳೆದು ಬಂದ ಬಗೆ.. ಪ್ರತಿ ವರ್ಷದ ಆಯವ್ಯಯದ ಲೆಕ್ಕವನ್ನು ಮಂಡಿಸಲಿರುವ ಬಜೆಟ್ ಭವಿಷ್ಯದ ಬೆಳವಣಿಗೆಗೆ ಸಂಬಂಧಿಸಿದಂತೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಇಂತಹ ಬಜೆಟ್ ಪರಿಕಲ್ಪನೆ ಭಾರತದಲ್ಲಿ ಮೊದಲ ಬಾರಿಗೆ ಈಸ್ಟ್ ಇಂಡಿಯಾ ಕಂಪನಿಯ ಸ್ಕಾಟಿಷ್ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿ ಜೇಮ್ಸ್ ವಿಲ್ಸನ್ ಅದನ್ನು ಬ್ರಿಟಿಷ್ ರಾಣಿಗೆ ಏಪ್ರಿಲ್ 7, 1860 ರಂದು ಬಜೆಟ್ ಮಂಡಿಸುವ ಮೂಲಕ ಚಾಲನೆಗೆ ಬಂದಿತು. ಇದಾದ ನಂತರ ಸ್ವತಂತ್ರ ಭಾರತದ…
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಗುರಿ ಹೊಂದಿರುವ ಮೇಕೆದಾಟು ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲು ಒತ್ತಾಯಿಸಿ ಪ್ರತಿಪಕ್ಷ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಕರ್ನಾಟಕ ಹೈಕೋರ್ಟ್ ಗುರುವಾರದಂದು ಆಕ್ಷೇಪ ವ್ಯಕ್ತಪಡಿಸಿದೆ. ಇನ್ನು ಮುಂದೆ ಬೆಂಗಳೂರಿನಲ್ಲಿ ಯಾವುದೇ ಪ್ರತಿಭಟನೆ ನಡೆಸದಂತೆ ಕಾಂಗ್ರೆಸ್ಗೆ ನ್ಯಾಯಾಲಯ ಆದೇಶಿಸಿದೆ.ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪ್ರತಿಭಟನೆಗಳು ಮತ್ತು ಆಂದೋಲನಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣಕ್ಕೆ ಸೀಮಿತವಾಗಿದ್ದು, ವಾಹನ ಸವಾರರು ಮತ್ತು ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪೀಠವು ಸರ್ಕಾರಕ್ಕೆ ತಿಳಿಸಿದೆ “ನಾವು ಹೈಕೋರ್ಟ್ (Karnataka High Court) ತಲುಪಲು ಒಂದು ಗಂಟೆ ತೆಗೆದುಕೊಂಡಿದ್ದೇವೆ.ಸಾಮಾನ್ಯ ಜನರು ಹೇಗೆ ಪ್ರಯಾಣಿಸಬೇಕು ಹೇಳಿ ? ಸರ್ಕಾರ ಈ ಬಗ್ಗೆ ನಿರ್ಬಂಧಗಳನ್ನು ಹೊರಡಿಸಬೇಕು,”ಎಂದು ಪೀಠ ಹೇಳಿದೆ.ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅಸಹಕಾರ) ಮತ್ತು ಕರ್ನಾಟಕ ಪೊಲೀಸ್ ಕಾಯಿದೆ, 1963 ರ ಅಡಿಯಲ್ಲಿ ಕಾನೂನು…
ಚಾಮರಾಜನಗರ: ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಗುಡ್ಡ ಕುಸಿದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಸಮೀಪವಿರುವ ಬಿಳಿಕಲ್ಲು ಕ್ವಾರಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಸಾವಿನ ಬಗ್ಗೆ ನಿಖರ ಮಾಹಿತಿ ಇನ್ನೂ ಅಧಿಕಾರಿಗಳು ತಿಳಿಸಿಲ್ಲ, ಸದ್ಯಕ್ಕೆ, ಇಬ್ಬರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.ಈ ಕುರಿತು ಎಸ್ಪಿ ಟಿ.ಪಿ.ಶಿವಕುಮಾರ್ ಮಾಹಿತಿ ನೀಡಿದ್ದು, ಮಹೇಂದ್ರಪ್ಪ ಎಂಬವರ ಹೆಸರಿನಲ್ಲಿ ಗಣಿಗಾರಿಕೆ ಪರವಾನಗಿ ಇದೆ, ಅದು ಕಾನೂನುಬದ್ಧವಾಗಿ ನಡೆಯುತ್ತಿದೆ.ಕ್ವಾರಿ ಸಿಬ್ಬಂದಿ ಹೇಳಿದ ಪ್ರಕಾರ ಆರು ಜನರು ಗುಡ್ಡದಡಿ ಸಿಲುಕಿದ್ದರು.ನಾವು ಈಗಾಗಲೇ ಅಶ್ರಫ್, ಪ್ರಾನ್ಸಿಸ್ ಎಂಬಿಬ್ಬರನ್ನು ರಕ್ಷಿಸಿದ್ದೇವೆ.ಮಹಾರಾಷ್ಟ್ರ (Maharashtra) ಮೂಲದ ಕಾರ್ಮಿಕರಾದ ಇಮ್ರಾನ್ ಮತ್ತು ಬಬ್ಲು ಎಂಬವರು ಗುಡ್ಡದಡಿ ನಾಪತ್ತೆಯಾಗಿದ್ದಾರೆ.ಸದ್ಯ, ಕ್ವಾರಿಯ ಮ್ಯಾನೇಜರ್ ನವೀದ್ ಎಂಬಾತನನ್ನು ಬಂಧಿಸಿದ್ದೇವೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಬಿಳಿಕಲ್ಲುಗಳನ್ನು ತೆಗೆಯಲು ಬ್ಲಾಸ್ಟ್ ಮಾಡಿದ ವೇಳೆ ಹಂತಹಂತವಾಗಿ ಗುಡ್ಡ ಕುಸಿಯಲು ಪ್ರಾರಂಭಿಸಿದ್ದರಿಂದ ಎಲ್ಲರೂ ಓಡಿಹೋಗಿದ್ದಾರೆ ಎನ್ನಲಾಗಿದ್ದು ನಾಲ್ಕು ಟಿಪ್ಪರ್, ಮೂರು ಹಿಟಾಚಿ, ಮೂರು ಕಂಪ್ರೆಸ್ಸರ್,ಎರಡು ಟ್ರಾಕ್ಟರ್ ಗಳು ಗುಡ್ಡದ ಕೆಳಗೆ ಸಿಲುಕಿವೆ. ಜೊತೆಗೆ, ಘಟನೆಯಲ್ಲಿ 8 ಕ್ಕೂ…