Author: admin

ತುಮಕೂರು: ತಾಲ್ಲೂಕಿನ ಕಸಬಾ ಹೋಬಳಿ ಹಾಲನೂರು ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಮಲ್ಲೇಶ್ವರ ಸ್ವಾಮಿ, ಪಾರ್ವತಾದೇವಿ ಜಾತ್ರಾ ಮಹೋತ್ಸವ ಏ.8 ರಿಂದ ಏ.16ರವರೆಗೆ 9 ದಿನಗಳ ಕಾಲ ನಡೆಯಲಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್,ತಹಶೀಲ್ದಾರ್ ರಾಜೇಶ್ವರಿ,ಮುಜರಾಯಿ ಇಲಾಖೆ ಹಾಗೂ ಭಕ್ತಮಂಡಲಿ,ಹಾಲನೂರು ಗ್ರಾಮದ ಯಜಮಾನರು,ಗ್ರಾಮಸ್ಥರ ನೇತೃತ್ವದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವ ಏ.8 ರಂದು ಮಂಗಳವಾರ ಸಂಜೆ ಧ್ವಜಾರೋಹಣದೊಂದಿಗೆ ಚಾಲನೆಗೊಳ್ಳಲಿದೆ. ಏ.9 ರಂದು ಗ್ರಾಮದ ಎಲ್ಲಾ ಮನೆಗಳಿಂದ ಆರತಿಗಳು ಬರಲಿವೆ.ನಂತರ ಗಿರಿಜಾ ಕಲ್ಯಾಣ ನಡೆಯಲಿದೆ. ಏ.10 ತ್ರಯೋದಶಿ ಗುರುವಾರ ಮಧ್ಯಾಹ್ನ 12:45 ಕ್ಕೆ ಬ್ರಹ್ಮ ರಥೋತ್ಸವ ನಡೆಯಲಿದೆ.ಬೆಳ್ಳಾವಿ ಮಠದ ಶ್ರೀ ಕಾರದ ವೀರಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.ಏ.11 ರಂದು ಸಂಜೆ ಅಡ್ಡ ಪಲ್ಲಕ್ಕಿ ಉತ್ಸವ ಹಾಗೂ ಅದಲಾಪುರ ಮಹಾಲಕ್ಷ್ಮೀ ದೇವಿ ಮೆರವಣಿಗೆ ನೆರವೇರಲಿದೆ.ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿದೆ. ಏ.12 ರಂದು ಹುಣ್ಣಿಮೆ ಶನಿವಾರದಂದು ಜಾತ್ರೆಯ ಮುಖ್ಯ ಆಕರ್ಷಣೆ ಉಪ್ಪರಿಗೆ ವಾಹನ ಉತ್ಸವ ನಡೆಯಲಿದ್ದು,ಅಂದು ರಾತ್ರಿ ಶ್ರೀ ಮಲ್ಲೇಶ್ವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಕುರುಕ್ಷೇತ್ರ ನಾಟಕ…

Read More

ತುಮಕೂರು: ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಪ್ರಾರಂಭಿಕವಾಗಿ ನೋಂದಾಯಿಸಲಾಗುತ್ತಿದ್ದ 26 ಅಸಂಘಟಿತ ಕಾರ್ಮಿಕರ ಪಟ್ಟಿಗೆ ಹೊಸದಾಗಿ 65 ವರ್ಗಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ ತೇಜಾವತಿ ತಿಳಿಸಿದ್ದಾರೆ. ಈ ಹಿಂದೆ ಪ್ರಾರಂಭಿಕವಾಗಿ ಹಮಾಲ, ಟೈಲರ್, ಗೃಹ ಕಾರ್ಮಿಕ, ಅಗಸ, ಚಿಂದಿ ಆಯುವ, ಅಕ್ಕಸಾಲಿಗ, ಕಮ್ಮಾರ, ಕುಂಬಾರ, ಕ್ಷೌರಿಕ, ಭಟ್ಟಿಕಾರ್ಮಿಕ, ಸಿನಿ ಕಾರ್ಮಿಕ, ನೇಕಾರ, ಬೀದಿಬದಿ ವ್ಯಾಪಾರಿ, ಹೋಟೆಲ್ ಕಾರ್ಮಿಕ, ಫೋಟೋಗ್ರಾಫರ್, ಸ್ವತಂತ್ರ ಲೇಖನ ಬರಹಗಾರ, ಬೀಡಿ ಕಾರ್ಮಿಕ, ಅಸಂಘಟಿತ ವಿಕಲಚೇತನ ಕಾರ್ಮಿಕ, ಅಲೆಮಾರಿ ಪಂಗಡದ ಕಾರ್ಮಿಕ, ಹಗ್ಗ ಸಿದ್ದಪಡಿಸುವ (ಬೈಜಂತ್ರಿ) ಕಾರ್ಮಿಕ, ಉಪ್ಪನ್ನು ತಯಾರಿಸುವ ಉಪ್ಪಾರ, ಬಿದಿರು ವೃತ್ತಿಯಲ್ಲಿರುವ ಮೇದಾರ, ಚಪ್ಪಲಿ ತಯಾರಿಕೆ ಮತ್ತು ರಿಪೇರಿ ಮಾಡುವ ಕಾರ್ಮಿಕ, ಕೇಬಲ್ ಕಾರ್ಮಿಕ, ಕಲ್ಯಾಣ ಮಂಟಪ/ ಸಭಾ ಭವನ/ ಟೆಂಟ್/ ಪೆಂಡಾಲ್ಗಳ ಕಾರ್ಮಿಕ, ಗಾದಿ/ ಹಾಸಿಗೆ/ ದಿಂಬು ತಯಾರಿಕಾ ಕಾರ್ಮಿಕ(ಪಿಂಜಾರರು/ ನದಾಫರು)ರು ಸೇರಿ 26 ಅಸಂಘಟಿತ ಕಾರ್ಮಿಕರನ್ನಾಗಿ ನೋಂದಾಯಿಸಲಾಗುತ್ತಿತ್ತು. ಇದರೊಂದಿಗೆ ಪ್ರಸ್ತುತ ಅಸಂಘಟಿತ ಕಾರ್ಮಿಕರ ಪಟ್ಟಿಗೆ ಹೊಸದಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1,…

Read More

ತುಮಕೂರು:  ಪ್ರವಾಸೋದ್ಯಮ ಇಲಾಖೆಯು ಜಿಲ್ಲೆಯ ಪ್ರವಾಸಿ ತಾಣಗಳಿಗೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಚಾರವನ್ನು ನೀಡಲು ದೇಖೋ ಅಪ್ನಾ ದೇಶ್ ಫೋಟೋ ಸ್ಪರ್ಧೆ–2025ನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಛಾಯಾಗ್ರಾಹಕರು/ ಸಾರ್ವಜನಿಕರು/ಪ್ರವಾಸಿಗರಿಂದ ಛಾಯಾಚಿತ್ರಗಳನ್ನು ಆಹ್ವಾನಿಸಿದೆ. ಆಸಕ್ತರು ತುಮಕೂರು ಜಿಲ್ಲೆಯ ಪ್ರಮುಖ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸಿರ್ಗಿಕ ಹಾಗೂ ವನ್ಯ ಜೀವಗಳು ಮತ್ತು ಇತರೆ ಪ್ರವಾಸಿ ತಾಣಗಳ ಅತ್ಯಾಕರ್ಷಕ ಛಾಯಚಿತ್ರಗಳನ್ನು ಸೆರೆಹಿಡಿದು, ಪ್ರವಾಸಿ ತಾಣಗಳ ಕಿರು ವಿವರಣೆಯೊಂದಿಗೆ ವಿ–ಅಂಚೆ Dekhoapnadeshphotos@gmail.com ಮೂಲಕ ಏಪ್ರಿಲ್ 7ರೊಳಗೆ ನೇರವಾಗಿ ಕಳುಹಿಸಬಹುದಾಗಿದೆ. ಆಸಕ್ತರು ಸ್ಮಾರಕ (Monument)), ವನ್ಯಜೀವಿ (Wild life), ಜಿಐ ಟ್ಯಾಗ್ ಹಾಗೂ ಕರಕುಶಲ ವಸ್ತುಗಳು ಮತ್ತು ಕೈಮಗ್ಗಗಳು (GI tag handicraft & handlooms) ಭೂದೃಶ್ಯ ((Landscape) ಹಾಗೂ ಸಾಹಸ (Adventure) ವಿಭಾಗಗಳ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ವರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುಮಕೂರು: ನಗರದ ರೈಲ್ವೇ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತ ಹಾಗೂ ವಿಜ್ಞಾನ ವಿಭಾಗದ ಸಂಯೋಗದೊಂದಿಗೆ ತುಮಕೂರು ವಿಶ್ವವಿದ್ಯಾನಿಲಯ ಮಟ್ಟದ ಒಂದು ದಿನದ ಜಾಮ್ ಮತ್ತು ಐ.ಬಿ.ಪಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗಲು ವಿವಿಧ ಕಾಲೇಜು ಪದವಿ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದ ತುಮಕೂರು ವಿ.ವಿ. ಪರೀಕ್ಷಾಂಗದ ಉಪ ಕುಲಸಚಿವರಾದ ಡಾ.ನರಹರಿ ಎನ್. ಅವರು ಮಾತನಾಡಿ, ದೇಶದಲ್ಲಿ ಇಂದು ಒಂದು ಸರ್ಕಾರಿ ಉದ್ಯೋಗ ಪಡೆಯಲು ಹರಸಾಹಸ ಪಡುವಂತಾಗಿದೆ. ಜನಸಂಖ್ಯಾ ಸ್ಪೋಟದಿಂದ ಉದ್ಯೋಗಾಂಕ್ಷಿಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿರುವದರಿಂದ ಹಾಗೂ ಒಂದು ಹುದ್ದೆಗೆ ಸಾವಿರಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದಾಗ ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಸಾಹಸದ ಕೆಲಸವಾಗಿದೆ. ಆದ್ದರಿಂದ ಸರ್ಕಾರಗಳು ವಿವಿಧ ಉದ್ಯೋಗ ಪಡೆಯಬಯಸುವವರಿಗಾಗಿ ಜಾಮ್ ಮತ್ತು ಐ.ಬಿ.ಪಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದು ಇಂದು ಅನಿವಾರ್ಯವೂ ಆಗಿದೆ. ವಿವಿಧ ಕಾಲೇಜು ಪದವಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಈ ಕಾರ್ಯಾಗಾರವನ್ನು ಏರ್ಪಡಿಸಿರುವುದು ನನಗೆ ಸಂತಸ ತಂದಿದೆ. ವಿದ್ಯಾರ್ಥಿಗಳು…

Read More

ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ಬೆಂಗಳೂರಿನ ನಾಗವಾರದ ಬಿಜೆಪಿ ಪಕ್ಷದ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತರಾಗಿದ್ದು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ವಿರುದ್ಧ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದ ವಿನಯ್ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಇದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಎ ಎಸ್ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದ ವಿನಯ್ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು. ಬಂಧನದ ಬಳಿಕ ಈ ಘಟನೆಯಿಂದ ವಿನಯ್ ಬಹಳ ನೊಂದಿದ್ದರು ಎನ್ನಲಾಗಿದೆ. ಕಾರ್ಯಕರ್ತನ ಸಾವಿನ ಬಗ್ಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ಪಡೆದುಕೊಂಡಿದ್ದು, ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ…

Read More

ಒಂದು ಊರಿನಲ್ಲಿ ಒಬ್ಬ ರಾಜನು, ಮಂತ್ರಿಯನ್ನು ಕರೆದು ರಾಜ್ಯದಲ್ಲಿ ನಿಜವಾದ ದಾನಿ ಯಾರೆಂದು ಗುರುತಿಸಿ ಅವರಿಗೆ ಬಹು ಮೌಲ್ಯದ ಬಹುಮಾನ ಕೊಡಲಾಗುವುದೆಂದು ಡಂಗುರ ಸಾರಿಸಿದನು. ಅದಕ್ಕಾಗಿ ಒಂದು ದಿನ ನಿಗದಿ ಮಾಡಿ ಹಲವು ರಾಜ ಭಟರನ್ನು ರಾಜ್ಯದಲ್ಲೆಲ್ಲಾ ಗಸ್ತು ತಿರುಗುತ್ತಾ ನಿಜವಾದ ದಾನಿಯನ್ನು ಪತ್ತೆ ಮಾಡುವ ಕಾರ್ಯ ವಹಿಸಿದನು. ಇದರ ಮುಂದಾಳತ್ವ ಮತ್ತು ಜವಾಬ್ದಾರಿಯನ್ನು ಮಂತ್ರಿಗೆ ವಹಿಸಿದನು. ಹಲವು ಶ್ರೀಮಂತರು ಅತಿ ಶ್ರೀಮಂತರು ಚಿನ್ನ, ಬೆಳ್ಳಿ, ವಜ್ರ ವೈಡೂರ್ಯಗಳನ್ನು ಯಥೇಚ್ಛವಾಗಿ ದಾನ ಮಾಡಿದರೆ, ಮತ್ತೆ ಕೆಲವು ಶ್ರೀಮಂತರು ಸಾರ್ವಜನಿಕ ಭೋಜನ ವಿತರಣೆಯಂತಹ ದೊಡ್ಡ ದೊಡ್ಡ ಕಾರ್ಯಗಳನ್ನು ಮಾಡತೊಡಗಿದರು, ಮತ್ತೆ ಕೆಲವರು ಭೂದಾನಗಳನ್ನೂ ಮಾಡಿದರು. ಅಂದು ರಾಜ್ಯದಲ್ಲೆಲ್ಲಾ ದಾನ ಧರ್ಮಗಳದೇ ಕಾರುಬಾರು. ಇವೆಲ್ಲವನ್ನು ಯಾರು  ಹೆಚ್ಚು ಯಾರು ಕಡಿಮೆ ಎಂಬ ಲೆಕ್ಕಾಚಾರವನ್ನೆಲ್ಲಾ ರಾಜಭಟರು ಬರೆದುಕೊಳ್ಳುತ್ತಿದ್ದರು. ಅಂದು ಸಾಯಂಕಾಲ ಕಾರ್ಯಕ್ರಮದ ಅವಧಿ ಮುಗಿಯುತು. ಮಂತ್ರಿ, ರಾಜಭಟರು ಮತ್ತು ದಾನ ಮಾಡಿದ ಎಲ್ಲ ಶ್ರೀಮಂತರು ನಿಯೋಜಿಸಿದ್ದ ಅರಮನೆಯ ಮೈದಾನಕ್ಕೆ ಬಂದರು. ಎಲ್ಲರಿಗೂ ಒಂದೇ ಕುತೂಹಲ ಯಾರು…

Read More

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ಏಪ್ರಿಲ್ 5ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. ಮಹಾರಥೋತ್ಸವ ಅಂಗವಾಗಿ ಏಪ್ರಿಲ್ 12ರವರೆಗೆ ಜಾತ್ರಾ ಕಾರ್ಯಕ್ರಮಗಳು ನಡೆಯಲಿದ್ದು, ಏಪ್ರಿಲ್ 6ರಂದು ರಾತ್ರಿ 10 ಗಂಟೆಗೆ ಬಿಲ್ವವೃಕ್ಷ ವಾಹನೋತ್ಸವ, ಏಪ್ರಿಲ್ 7ರಂದು ರಾತ್ರಿ 10 ಗಂಟೆಗೆ ಬೆಳ್ಳಿಪಲ್ಲಕ್ಕಿ ಉತ್ಸವ ಜರುಗಲಿವೆ. ಪ್ರತಿ ವರ್ಷದಂತೆ ದನಗಳ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಬರುವ ರಾಸುಗಳಿಗೆ ನೀರು ಮತ್ತು ನೆರಳಿನ ಸೌಲಭ್ಯ ಕಲ್ಪಿಸಲಾಗುವುದು. ಜಾತ್ರೆಯಲ್ಲಿ ಆಯ್ಕೆ ಮಾಡುವ ಉತ್ತಮ ರಾಸುಗಳಿಗೆ ಏಪ್ರಿಲ್ 5ರ ಸಂಜೆ 5 ಗಂಟೆಗೆ ಬಹುಮಾನ ವಿತರಿಸಲಾಗುವುದು. ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತಾದಿಗಳು ಜಾತ್ರೆಗೆ ಆಗಮಿಸಲಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ಸೌಕರ್ಯ ಲಭ್ಯವಿರುತ್ತದೆ. ಜಾತ್ರಾ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ತಾನೂ ಕೂಡ ನೇಣಿಗೆ ಶರಣಾಗಿರೋ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ. ಮಹದೇವಯ್ಯ ಎಂಬುವರ ಪತ್ನಿ ವಿಜಯಲಕ್ಷ್ಮೀ(45), ತನ್ನ ಮಗಳು ಚೂಡಾಮಣಿ(18) ಹಾಗೂ ನರಸಿಂಹಮೂರ್ತಿ(14) ಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ತನ್ನ ಇಬ್ಬರು ಮಕ್ಕಳ ಸ್ಥಿತಿ ಕಂಡು ಮಹಿಳೆ ಮಾನಸಿಕವಾಗಿ ರೋಸಿಹೋಗಿದ್ದರು. ಅಲ್ಲದೆ ಇತ್ತೀಚೆಗೆ ತಾಯಿಯ ಆರೋಗ್ಯದಲ್ಲಿ ಏರು ಪೇರು ಆಗುತ್ತಿತ್ತು. ತನ್ನ ಗಂಡ ಮನೆಯಲ್ಲಿ ಇಲ್ಲದ ಸಮಯದಲ್ಲಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಚೇಳೂರು ಪೊಲೀಸರು, ಸಿಪಿಐ ರಾಘವೇಂದ್ರ ಭೇಟಿ ನೀಡಿದರು. ಈ ಸಂಬಂಧ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೀದರ್ : ಯಾರೇ ಒತ್ತಾಯಿಸಿದರು ಕೂಡ ಅವರ ಮಾತಿಗೆ ಕಿವಿಗೊಡದೆ ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಕಾಲಂ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಉಪಜಾತಿ ಕಲಂನಲ್ಲಿ ಕಡ್ಡಾಯವಾಗಿ ಮಾದಿಗ ಎಂದು ಬರೆಯಿಸಿ ಎಂದು ಮಾದಿಗ ಸಮನ್ವಯ ಸಮಿತಿಯ ಪ್ರಮುಖ ಫರ್ನಾಂಡಿಸ್ ಹಿಪ್ಪಳಗಾಂವ್ ತಿಳಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮ ಎಂದರೆ ನಮ್ಮ ಅಂಗಿ ಇದ್ದಂತೆ, ಜಾತಿ ಎಂದರೆ ಚರ್ಮ ಇದ್ದಂತೆ. ಧರ್ಮ ಹಾಗೂ ಜಾತಿ ನಮಗೆ ಕಡ್ಡಾಯವಾಗಿಬೇಕು. ನಾವು ಮೂಲತಃ ಹಿಂದೂಗಳೇ ಹೊರತು ಕ್ರಿಶ್ಚಿಯನ್ ರಲ್ಲ ಇದನ್ನು ಈ ಜಿಲ್ಲೆಯ ಪ್ರತಿಯೊಬ್ಬ ನಮ್ಮ ಸಮಾಜದವರು ಅರ್ಥಮಾಡಿಕೊಳ್ಳಬೇಕು ಎಂದರು. ನಮ್ಮ ಜಿಲ್ಲೆಯ ಔರಾದ್, ಕಮಲನಗರ, ಭಾಲ್ಕಿ, ಹುಲಸೂರ್ ಹಾಗೂ ಬಸವಕಲ್ಯಾಣ ತಾಲೂಕುಗಳಿಗೆ ಮಹಾರಾಷ್ಟ್ರ ರಾಜ್ಯದ ಪ್ರಭಾವ ಇರುವ ಕಾರಣ ಅಲ್ಲಿಯ ನಮ್ಮ ಸಮಾಜದವರು ಹೆಚ್ಚಾಗಿ ಮರಾಠಿ ಮಾತಾಡುತ್ತಾರೆ . ಅಲ್ಲಿ ನಮ್ಮ ಸಮಾಜದವರು ಮಾಂಗ್ ಎಂದು ಕರೆಯಿಸಿಕೊಳ್ಳುತ್ತಾರೆ. ಆದರೆ, ಈ ತಿಂಗಳ 6 ರಿಂದ ಒಂದು…

Read More

ತುಮಕೂರು: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು. ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು. 1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More