Subscribe to Updates
Get the latest creative news from FooBar about art, design and business.
- 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
- ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
- ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
- ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
- ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
- ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
- ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
Author: admin
ಬೆಂಗಳೂರು: ರಾಜ್ಯಾದ್ಯಂತ ಹೆಚ್ಚಾಗುತ್ತಿರುವ ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು, ಪರಿಸರ ತಜ್ಞರು ಹಾಗೂ ಎನ್ ಜಿಒಗಳ ಸಹಭಾಗಿತ್ವದೊಂದಿಗೆ ರಾಜ್ಯಮಟ್ಟದ ವನ್ಯಜೀವಿ–ಮಾನವ ಸಂಘರ್ಷ ನಿರ್ವಹಣಾ ಕಾರ್ಯಪಡೆ ರಚಿಸುವಂತೆ ಸೂಚನೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಹುಲಿ, ಕಾಡಾನೆ, ಚಿರತೆ ಮುಂತಾದ ವನ್ಯಜೀವಿಗಳು ವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಸಂದರ್ಭಗಳಲ್ಲಿ ಜನರ ಭದ್ರತೆಗಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರಮಾಣಿತ ಕಾರ್ಯಪದ್ಧತಿ (SOP) ಅನುಸರಿಸಿ ಕಾರ್ಯಾಚರಣೆ ನಡೆಸುವ ವೇಳೆ 155 ಸೆಕ್ಷನ್ ಅಡಿಯಲ್ಲಿ ನಿರ್ಬಂಧಕಾಜ್ಞೆ ವಿಧಿಸಲು ಸೂಚಿಸಿದರು. ಈ ಕಾರ್ಯಪಡೆ ಕಾಡಿನಂಚಿನ ಗ್ರಾಮಗಳಲ್ಲಿ ಜನರಿಗೆ ಜಾಗೃತಿ ಮೂಡಿಸಲು, ವಿದ್ಯಾರ್ಥಿಗಳಿಗೆ ವನ್ಯಜೀವಿ ಸಂರಕ್ಷಣೆಯ ಮಹತ್ವ ತಿಳಿಸಲು ಮತ್ತು ಅಧಿಕಾರಿಗಳು–ಗ್ರಾಮಸ್ಥರ ನಡುವೆ ಸ್ನೇಹಸೇತುವೆ ಆಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಥರ್ಮಲ್ ಕ್ಯಾಮರಾ, ಡ್ರೋನ್, ವಾಟ್ಸ್ ಅಪ್ ಎಚ್ಚರಿಕೆ ವ್ಯವಸ್ಥೆ ಮತ್ತು ಕಮಾಂಡ್ ಸೆಂಟರ್ ಮೂಲಕ ತ್ವರಿತ ಮಾಹಿತಿ ನೀಡಲು ಕ್ರಮ…
ತುಮಕೂರು: ಗುಬ್ಬಿ ತಾಲ್ಲೂಕಿನಲ್ಲಿ ಹಾದು ಹೋಗಿರುವ ರಾಜ್ಯಹೆದ್ದಾರಿ 84ರಲ್ಲಿ ಕಸಬಾ ಹೋಬಳಿ ಜಿ.ಹೊಸಹಳ್ಳಿ ಸಮೀಪ ನಿರ್ಮಿಸಿರುವ ಟೋಲ್ ಸಂಗ್ರಹ ಕೇಂದ್ರವು ಅವೈಜ್ಞಾನಿಕವಾಗಿದೆ. ಇದನ್ನು ತೆರವುಗೊಳಿಸಬೇಕು ಎಂದು ಸೋಮವಾರ ರೈತ ಸಂಘ, ಸ್ಥಳೀಯ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಸಾರ್ವಜನಿಕರ ತೆರಿಗೆ ಹಣದಿಂದಲೇ ರಸ್ತೆ ನಿರ್ಮಿಸಲಾಗಿದ್ದರೂ ಕಾರ್ಪೊರೇಟ್ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಕಾರಣಕ್ಕಾಗಿ ಟೋಲ್ ಸಂಗ್ರಹ ಕೇಂದ್ರ ಸ್ಥಾಪಿಸಿರುವುದು ದುರದೃಷ್ಟಕರ ಎಂದು ಪ್ರತಿಭಟನಾ ನಿರತರು ಆರೋಪಿಸಿದರು. ಟೋಲ್ ಸಂಗ್ರಹ ಕೇಂದ್ರ ನಿರ್ಮಿಸಿದಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಕ್ರಮಕೈಗೊಳ್ಳದೆ ಇರುವುದು ಖಂಡನೀಯ. ಅಧಿಕಾರಿಗಳು ರೈತರ ಮನವಿಗೆ ಬೆಲೆ ನೀಡದೆ ನಿರ್ಲಕ್ಷಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಶಾಸಕ ಸರ್ಕಾರದ ಮೇಲೆ ಒತ್ತಡ ಹಾಕಿ ಟೋಲ್ ಸಂಗ್ರಹ ಕೇಂದ್ರವನ್ನು ತೆರವುಗೊಳಿಸಬೇಕು. ಅಧಿಕಾರಿಗಳು ಹಾಗೂ ಶಾಸಕರು ಸ್ಥಳೀಯರ ಸಮಸ್ಯೆಗಳಿಗೆ ಕಿವಿಗೊಡದಿದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸುತ್ತೇವೆ. ಪ್ರತಿಭಟನೆ ನಡೆಸುವುದು ಜನಸಾಮಾನ್ಯರ ಹಕ್ಕು.ಇದನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು. ಸ್ಥಳಕ್ಕೆ ಆಗಮಿಸಿದ ಶಾಸಕ…
ಬೀದರ್: ಹೆಚ್ಚುವರಿ ಬಸ್ ಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಸರ್ಕಾರಿ ಬಸ್ ನ ಫುಟ್ ಬೋರ್ಡ್ ನಲ್ಲಿ ನೇತಾಡುತ್ತಾ ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವ ದೃಶ್ಯ ಕಂಡು ಬಂದಿದೆ. ಬೀದರ್ ಜಿಲ್ಲೆಯ ಔರಾದ್ ನಿಂದ ಭಾಲ್ಕಿಕಡೆಗೆ ತೆರಳುವ ಸರ್ಕಾರಿ ಬಸ್ ನಲ್ಲಿ ಈ ದೃಶ್ಯ ಕಂಡು ಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ವಿದ್ಯಾರ್ಥಿಗಳು ಬಸ್ ನಿಂದ ಬಿದ್ದು ಅನಾಹುತ ಸಂಭವಿಸಿದರೆ ಹೊಣೆ ಯಾರೂ ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ. ಕಲ್ಯಾಣ ಕರ್ನಾಟಕ ಸಾರಿಗೆ KA 38, F1239 ಸಂಖ್ಯೆಯ ಬಸ್ ನಲ್ಲಿ ವಿದ್ಯಾರ್ಥಿಗಳು ಫುಟ್ ಬೋರ್ಡ್ ನಲ್ಲೇ ನೇತಾಡುತ್ತಾ ಪ್ರಯಾಣಿಸುತ್ತಿದ್ದಾರೆ. ಶಾಲಾ ಸಮಯದಲ್ಲಿ ಬಸ್ ಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಸಿಕ್ಕಿದ ಬಸ್ ನಲ್ಲೇ ನೇತಾಡಿಕೊಂಡು ಪ್ರಯಾಣಿಸುವ ದುಸ್ಥಿತಿ ಕಂಡು ಬಂದಿದೆ. ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ತಂದಿದೆ. ಆದರೆ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಸುರಕ್ಷಿತ ವ್ಯವಸ್ಥೆಯೇ ಇಲ್ಲದಿರುವುದು ದುರಂತವೇ ಸರಿ, ಸಂಬಂಧಪಟ್ಟವರು ಇನ್ನಾದರೂ ಎಚ್ಚೆತ್ತುಕೊಂಡು ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುತ್ತಾರಾ ಎನ್ನುವುದನ್ನು…
ತಿಪಟೂರು: ನಗರದಲ್ಲಿ ಯುಜಿಡಿ ಅವ್ಯವಸ್ಥೆ ಹಾಗೂ ತಿಪಟೂರು ಮತ್ತು ಈಚನೂರು ಕೆರೆಗೆ ನೀರು ತುಂಬಿಸಲು ಒತ್ತಾಯಿಸಿ ನಗರದ ಕೆಂಪಮ್ಮದೇವಿ ದೇವಸ್ಥಾನದಿಂದ ಸಿಂಗೀ ನಂಜಪ್ಪ ವೃತ್ತದವರೆಗೆ ಸೋಮವಾರ ಪಾದಯಾತ್ರೆ ನಡೆಸಿ ಪ್ರತಿಭಟಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಮಾತನಾಡಿ, ತಾಲ್ಲೂಕಿನ ಜನರಿಗೆ ಕಂಟಕವಾಗಿರುವ ಯುಜಿಡಿ ಕೊಳಚೆ ನೀರಿನಿಂದ ಈಚನೂರು ಕೆರೆ ಕಲುಷಿತವಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ. ತಿಪಟೂರು ಅಮಾನಿಕೆರೆಗೆ ನೀರು ತುಂಬದ ಕಾರಣ ಕುಡಿಯುವ ನೀರಿಗೆ ಹೆಚ್ಚಿನ ಸಮಸ್ಯೆ ಉಂಟಾಗಿದೆ. ತಾಲ್ಲೂಕು ಅಭಿವೃದ್ಧಿ ಶೂನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುಜಿಡಿ ಕೊಳಚೆ ನೀರಿನಿಂದ ನಗರ ರಾಜ್ಯದಾದ್ಯಂತ ಅಪಖ್ಯಾತಿ ಪಡೆಯುತ್ತಿದೆ. ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈಡೇನಹಳ್ಳಿ ವೆಟ್ ವೆಲ್ ಹಾಗೂ ಗೊರಗೊಂಡನಹಳ್ಳಿ ವೆಟ್ವೆಲ್ ಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡದ ಕಾರಣ ಕೋಡಿಸರ್ಕಲ್ ಬಳಿ ಯುಜಿಡಿ ನೀರು ಉಕ್ಕಿಹರಿಯುತ್ತಿದೆ. ಜನಸಾಮಾನ್ಯರು ಸಂಚಾರ ಕಷ್ಟಕರವಾಗಿದೆ. ಕೊಳಚೆ ನೀರು ಹಳ್ಳಗಳ ಮೂಲಕ ಹಿಂಡಿಸ್ಕೆರೆ ನಂತರ ಈಚನೂರು ಕೆರೆ ಸೇರುತ್ತದೆ. ನಗರದ…
ಬೀದರ್ : ಔರಾದ್ ತಾಲೂಕಿನ ನಾಗೂರ್ (ಬಿ) ಗ್ರಾಮದಲ್ಲಿ ರೈತರೊಬ್ಬರು ತಮ್ಮ ಹೊಲದಲ್ಲಿ ಸೋಯಾ ಬೆಳೆ ಕಟಾವು ಮಾಡಿ ರಾಶಿ ಮಾಡುವುದಕ್ಕಾಗಿ ಬಣವೆ ಹಾಕಿ ಕೂಡಿಟ್ಟಿದ್ದರು. ಆ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸಂಪೂರ್ಣವಾಗಿ ಸೋಯಾಬಿನ್ ಸುಟ್ಟು ಹೋಗಿದೆ. ನಾಗೂರ್ (ಬಿ) ಗ್ರಾಮದ ನಿವಾಸಿಯಾದ ಶಿವಕುಮಾರ್ ಎನ್ನುವ ರೈತರಿಗೆ ಈ ಸೋಯಾ ಬೆಳೆ ಸೇರಿದೆ. ಸುಮಾರು 3.25 ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾ ಸಂಗ್ರಹಿಸಿಡಲು ರಾಶಿ ಹಾಕಿದ್ದರು. ಈ ಬಣವೆಗೆ ರವಿವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದರಿಂದ ಸುಮಾರು 1 ಲಕ್ಷ ದಿಂದ 1.50 ಲಕ್ಷ ರೂ. ಮೌಲ್ಯದ ಸುಮಾರು 30 ಕ್ವಿಂಟಲ್ ಗಳಿಗೂ ಹೆಚ್ಚಿನ ಸೋಯಾಬೀನ್ ಬೆಳೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅ.23 ರಂದು ಔರಾದ್ ತಾಲೂಕಿನ ಜೋಜನಾ ಗ್ರಾಮದ ರೈತ ಹನುಮಂತ್ ಅವರಿಗೆ ಸೇರಿದ ಸೋಯಾ ಬಣವೆಗೂ ಕೂಡ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಅದಾದ ಕೆಲ ದಿನಗಳ ನಂತರ ರವಿವಾರ ನಾಗೂರ್ (ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ.…
ಕೊರಟಗೆರೆ: ಡಾ.ಜಿ.ಪರಮೇಶ್ವರ್ ರವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಬರಲಿದ್ದು, ರಾಜ್ಯದ ಹಲವರ ಆಶಯದಂತೆ ಹಾಗೂ ತುಮಕೂರು ಜಿಲ್ಲೆಯ ಹಲವು ದಶಕಗಳ ಕನಸಿನಂತೆ ಅವರು ಮುಖ್ಯಮಂತ್ರಿಯಾಗಲಿ ಎನ್ನುವುದು ನಮ್ಮೆಲ್ಲರ ಹಲವು ವರ್ಷಗಳ ಬೇಡಿಕೆಯಾಗಿದೆ ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಟ್ಟೆನಹಳ್ಳಿ ಗ್ರಾಮದಲ್ಲಿ ಶ್ರೀ ಗಂಗಮಾಳಮ್ಮ ಮತ್ತು ಮೈಲಾರಲಿಂಗೇಶ್ವರ ಸ್ವಾಮಿ ದೇವಾಲಯದ ಪ್ರಾಣ ಮತ್ತು ಕಳಸ ಪ್ರತಿಷ್ಠಾಪನೆ, ಹಾಗೂ ದೇವಾಲಯ ಜೀರ್ಣೋದ್ದಾರ ಧಾರ್ಮಿಕ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ನಾವು ಇತ್ತೀಚೆಗೆ ಪತ್ರಿಕೆಗಳಲ್ಲಿ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಚರ್ಚೆಗಳನ್ನು ನೋಡುತ್ತಿದ್ದೇವೆ ನಮ್ಮಗಳ ಹಾಗೂ ತುಮಕೂರು ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಂತೆ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾದಲ್ಲಿ ಅದು ಈಡೇರಲಿದೆ ಎಂದರು. ಈ ರಾಜ್ಯ ಕಂಡಂತಹ ಸಜ್ಜನರು, ಸಂಸ್ಕಾರವಂತರು, ವಿದ್ಯಾವಂತರು ಹಾಗೂ ರಾಜಕೀಯ ಜೀವನದಲ್ಲಿ ಅಗಾಧವಾದ ಅನುಭವವನ್ನು ಹೊಂದಿರುವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಯಾದರೆ ರಾಜ್ಯದಲ್ಲಿನ ಹಲವರ ದಶಕಗಳ ಕನಸು ನೆರವೇರಲಿದೆ, ಅದೇ ರೀತಿಯಾಗಿ ತುಮಕೂರು ಜಿಲ್ಲೆಯ…
ತುಮಕೂರು: ತುಮಕೂರಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ತುಮಕೂರು ನಗರದಲ್ಲಿ ಅಕ್ಟೋಬರ್ 25ರಿಂದ ನವೆಂಬರ್ 4ರವರೆಗೆ ಹಮ್ಮಿಕೊಂಡಿರುವ ಸಾಬೂನು ಮೇಳಕ್ಕೆ ಚಿಲುಮೆ ಸಮುದಾಯ ಭವನದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗಮಹಾಸ್ವಾಮಿಗಳವರ ಅಮೃತ ಹಸ್ತದಿಂದ ಚಾಲನೆ ನೀಡಲಾಯಿತು. ಪೂಜ್ಯರು ಮೈಸೂರು ಸ್ಯಾಂಡಲ್ ಸೋಪು ಮತ್ತು ಕೆಎಸ್ ಡಿಎಲ್ ಉತ್ಪನ್ನಗಳು ಗ್ರಾಹಕರ ಮನ್ನಣೆ ಗಳಿಸಿವೆ. ಯಾವ ಉತ್ಪನ್ನಗಳು ಗುಣಮಟ್ಟದಿಂದ ಕೂಡಿರುತ್ತವೆಯೋ ಅವುಗಳನ್ನು ಗ್ರಾಹಕರು ಕೊಳ್ಳುತ್ತಾರೆ ಎಂದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದಿಂದ ಸ್ಥಾಪಿತವಾದ ಈ ಸಂಸ್ಥೆ 100 ವರ್ಷಗಳ ಭವ್ಯ ಪರಂಪರೆಯನ್ನು ಹೊಂದಿದೆ. ಅಂದಿನಿಂದ ಇಂದಿನ ತನಕ ಸಂಸ್ಥೆಯು ಗುಣಮಟ್ಟ ಕಾಪಾಡಿಕೊಂಡು ಬಂದಿದೆ. ವಿಶೇಷತೆ ಎಂದರೆ, ವರ್ಷದಿಂದ ವರ್ಷಕ್ಕೆ ಈ ಸಂಸ್ಥೆ ಲಾಭದಾಯಕದತ್ತ ಮುನ್ನಡೆಯುತ್ತಿದೆ. ಸರ್ಕಾರಕ್ಕೆ ಡಿವಿಡೆಂಡ್ ಪಾವತಿಸಿದೆ. ಇವೆಲ್ಲವನ್ನೂ ಗಮನಿಸಿದರೆ ಗ್ರಾಹಕರು ಈ ಉತ್ಪನ್ನಗಳ ಬಗ್ಗೆ ಆಕರ್ಷಣೆ ಗೊಂಡಿದ್ದಾರೆ ಎಂಬುದನ್ನು ತಿಳಿಯಬಹುದು ಎಂದರು. ಕೆ.ಎಸ್.ಡಿ.ಎಲ್. ಸಂಸ್ಥೆಯು ಪರೋಕ್ಷವಾಗಿ ರೈತರಿಗೂ ಸಹಕಾರಿಯಾಗಿದೆ. ಶ್ರೀಗಂಧ ಮರ ಬೆಳೆಯಲು ಪ್ರೋತ್ಸಾ ಹಿಸುವುದು,…
ಸರಗೂರು: ಕಾಡಾನೆ ದಾಳಿಯಿಂದಾಗಿ ಸುಮಾರು 2 ಎಕರೆ ಬಾಳೆ ಕೃಷಿ ಸಂಪೂರ್ಣ ನಾಶಗೊಂಡ ಘಟನೆ ಹೂವಿನಕೊಳದಲ್ಲಿ ಭಾನುವಾರ ರಾತ್ರಿ ನಡೆದಿದೆ. ತಾಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಕೊಳ ಗ್ರಾಮದ ರೈತ ನಾಗೇಂದ್ರ ಎಚ್.ಎನ್. ಅವರಿಗೆ ಸೇರಿದ ಬಾಳೆ ತೋಟ ನಾಶವಾಗಿದೆ. ಸುಮಾರು 2 ಎಕರೆ ಜಮೀನಿನಲ್ಲಿ 2 ಸಾವಿರ ಬಾಳೆ ಬೆಳೆದಿದ್ದರು. ಕಾಡಾನೆಗಳ ದಾಳಿಗೆ ಸುಮಾರು 500 ಬಾಳೆ ಗಿಡಗಳು ನಾಶವಾಗಿದ್ದು, ₹ 5 ಲಕ್ಷ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಒಂದು ಬಾಳೆ ಸಸಿಗೆ ₹ 25 ಕೊಟ್ಟು ನರ್ಸರಿಯಿಂದ ತಂದು ಬೇಸಾಯ ಮಾಡಲಾಗಿದೆ. ಒಂದು ಗಿಡ ಬಾಳೆ ಬೆಳೆಯಲು ಸುಮಾರು ₹ 400 ಖರ್ಚಾಗಿದ್ದು, ಉತ್ತಮ ಫಸಲು ಬಂದಿದ್ದರಿಂದ ಒಂದು ಗೊನೆಗೆ ₹ 1,000 ಸಿಗುತ್ತಿತ್ತು. ಒಂದು ತಿಂಗಳ ಹಿಂದೆ ಇದೇ ಬಾಳೆ ತೊಟಕ್ಕೆ ಆನೆಗಳು ನುಗ್ಗಿ ಸ್ವಲ್ಪ ಬೆಳೆಯನ್ನು ನಾಶ ಮಾಡಿದ್ದವು. ಈಗ ಎರಡನೇ ಬಾರಿಗೆ ಮತ್ತೆ ದಾಳಿ ನಡೆಸಿವೆ. ಮುಂದೆಯೂ ಆನೆಗಳು ದಾಳಿ ಇಡುವ ಸಾಧ್ಯತೆಯಿದೆ…
ಸರಗೂರು: ತಾಲ್ಲೂಕಿನ ಹಲಸೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿರುವ ಗ್ರಾಮ ದೇವತೆ ಮಾರಮ್ಮ ದೇವಾಲಯದ ಉದ್ಘಾಟನೆ ಮತ್ತು ದೇವರ ಪ್ರತಿಷ್ಠಾಪನೆ ಕಾರ್ಯಕ್ರಮವು ಶುಕ್ರವಾರದಿಂದ ಭಾನುವಾರವರಗೂ ಹಮ್ಮಿಕೊಳ್ಳಲಾಯಿತು. 100 ವರ್ಷಗಳಷ್ಟು ಹಳೆಯದಾದ ಮಾರಮ್ಮ ದೇವಿಯ ದೇವಾಲಯವು ಶಿಥಿಲವಾಗಿತ್ತು. ಗ್ರಾಮಸ್ಥರ ಕೋರಿಕೆ ಮೇರೆಗೆ ಶಾಸಕ ಅನಿಲ್ ಚಿಕ್ಕಮಾದು, ದಾನಿಗಳ ನೆರವು ಮತ್ತು ಗ್ರಾಮಸ್ಥರ ಸಹಕಾರದಿಂದ ದೇವಸ್ಥಾನ ನಿರ್ಮಾಣವಾಗಿದೆ. ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಗ್ರಾಮಸ್ಥರ ಕೋರಿಕೆಯಂತೆ ದೇವಾಲಯ ನಿರ್ಮಿಸಲಾಗಿದ್ದು, ಎಲ್ಲರೂ ಸಹಬಾಳ್ವೆ, ಒಗ್ಗಟ್ಟಿನಿಂದ ಜಾತ್ರೆ ಮತ್ತು ಧಾರ್ಮಿಕ ಆಚರಣೆಗಳನ್ನು ನಡೆಸಿಕೊಂಡು ಹೋಗುವಂತೆ’ ಸಲಹೆ ನೀಡಿದರು. ಪಡುವಲು ವೀರಕ್ತ ಮಠದ ಮಹದೇವಸ್ವಾಮಿಗಳು.ಶಾಸಕರ ಅನೀಲ್ ಚಿಕ್ಕಮಾದು.ಜೆಡಿಎಸ್ ಪಕ್ಷದ ಮುಖಂಡ ಕೆ ಎಂ ಕೃಷ್ಣನಾಯಕ.ಜಯಪ್ರಕಾಶ್.ರವರು ತಾಯಿಯ ದರ್ಶನ ಪಡೆದು ಪುನೀತದರು. ಗ್ರಾಮದ ಎಲ್ಲಾ ಸಮುದಾಯದ ಮುಖಂಡರ ನೇತೃತ್ವದಲ್ಲಿ ಗ್ರಾಮಸ್ಥರು ಧಾರ್ಮಿಕ ಆಚರಣೆ ಮತ್ತು ಪೂಜೆ ಪುನಸ್ಕಾರಗಳನ್ನು ನೆರವೇರಿಸಿದರು. ಶುಕ್ರವಾರದಿಂದ ಭಾನುವಾರವರೆಗೂ ನಡೆದ ಉದ್ಘಾಟನೆ ಮತ್ತು ದೇವರ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮೂರು ದಿನಗಳ ಕಾಲ ಅನ್ನದಾಸೋಹ ನಡೆಯುತ್ತು.ಗ್ರಾಮದ ಗ್ರಾಮಸ್ಥರು ಹಾಗೂ ಸುತ್ತ…
ಸರಗೂರು: ಸಮಾಜದ ಅಭಿವೃದ್ಧಿಗೆ ಮಠ, ಮಾನ್ಯಗಳ ಕೊಡುಗೆ ಅಪಾರವಾಗಿದ್ದು, ಬಸವಾದಿ ಶರಣರ ಆದರ್ಶದಂತೆ ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ನೀಡಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ಪಟ್ಟಣದ ಜೆಎಸ್ ಎಸ್ ಕಾಲೇಜಿನ ಆವರಣದಲ್ಲಿ ಭಾನುವಾರ ಮೈಸೂರು–ಚಾಮರಾಜನಗರ ಜಿಲ್ಲಾ ವೀರಶೈವ ಲಿಂಗಾಯತ ಮಠಾಧಿಪತಿಗಳ ಗೋಷ್ಠಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ, ಶ್ರೀ ರಾಜೇಂದ್ರ ಸ್ವಾಮಿಗಳವರ ಭಕ್ತ ಬಳಗ, ಮೈಸೂರಿನ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವ ದೀಕ್ಷಾ ಸಂಸ್ಕಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ನವ ಭಾರತ ನಿರ್ಮಾಣದಲ್ಲಿ ಮಠ, ಮಾನ್ಯಗಳು ಸೇವೆ ಪ್ರಮುಖವಾಗಿದ್ದು, ಇಡೀ ವಿಶ್ವಕ್ಕೆ ಜ್ಞಾನ ಬೆಳಕು ನೀಡಿದ ಸುತ್ತೂರು ಗುರುಪರಂಪರೆ ಸೇವೆ ಕೊಡುಗೆ ಅವರು ನೀಡಿರುವ ತತ್ವ ಸಿದ್ಧಾಂತಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದೆ. ಇಂತಹ ಮಹನೀಯರ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಅರ್ಥ ಪೂರ್ಣವಾಗಿ ಆಚರಣೆ ಮಾಡುವ ಮೂಲಕ ಅವರ ಕೃಪೆಗೆ…