Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ತುಮಕೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನು ಸ್ಕ್ರೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ಕೆಂಬಳಲು ಗ್ರಾಮದಲ್ಲಿ ನಡೆದಿದೆ. ಗಾರೆ ಕೆಲಸ ಮಾಡುತ್ತಿದ್ದ ಪತಿ ನಾಗರಾಜು ಎಂಬಾತ ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿ ನಂತರ ಮೃತಾದೇಹವನ್ನು ಬಾತ್ರೂಮ್ ಪಿಟ್ ಗುಂಡಿಯಲ್ಲಿ ಎಸೆದಿದ್ದಾನೆ ಎನ್ನಲಾಗಿದೆ. ಜಯಮ್ಮ (52) ಹತ್ಯೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಬುಧವಾರ ರಾತ್ರಿ ಪ್ರಕರಣ ಬಯಲಿಗೆ ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪತಿ ನಾಗರಾಜುನನ್ನು ವಶಕ್ಕೆ ಪಡೆದಿದ್ದಾರೆ. ಮೃತಪಟ್ಟ ಮಹಿಳೆಯ ಮೃತ ದೇಹವನ್ನು ಫಿಟ್ ಗುಂಡಿಯಿಂದ ಹೊರತೆಗೆಯಲಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ. ವರದಿ: ಮಾರುತಿ ಪ್ರಸಾದ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಬಜೆಟ್ ಎಂದಾಕ್ಷಣ ಜನ ಸಾಮಾನ್ಯರಿಂದ ಹಿಡಿದು ಉದ್ಯಮಿಗಳ ತನಕ ಹತ್ತು ಹಲವು ನಿರೀಕ್ಷೆಗಳು ಗರಿಗೆದ ರುವುದು ಸಹಜ. ಇಂಥದ್ದೆ ನಿರೀಕ್ಷೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ಬಜೆಟ್ ಮೇಲೂ ಇದೆ. ಮೊದಲಿಂದಲೂ ರೈತ ಸಮುದಾಯಕ್ಕೆ ಬಜೆಟ್ನಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬಂಗಾರಪ್ಪ, ಎಸ್.ಎಂ.ಕೃಷ್ಣ ಮತ್ತು ಸಿದ್ದರಾಮಯ್ಯ, ಜೆಡಿಎಸ್ ಅಧಿಕಾರದಲ್ಲಿದ್ದಾಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪ ವಿಶೇಷ ಕಾಳಜಿ ವಹಿಸಿದ್ದಾರೆ. ಉಚಿತ ವಿದ್ಯುತ್, ಗ್ರಾಮೀಣ ಕೃಪಾಂಕ, ಸಬ್ಸಿಡಿ ನೀಡುವ ಕಾರ್ಯಕ್ರಮ, ಸಾಲಮನ್ನಾ ಯೋಜನೆಗಳು ಆಯಾ ಕಾಲಘಟ್ಟಕ್ಕೆ ಸರ್ಕಾರದ ಜನಪ್ರಿಯತೆ ಹೆಚ್ಚಿಸಲು ಕಾರಣವಾಗಿವೆ. ವಿದ್ಯಾರ್ಥಿಗಳಿಗಾಗಿ ತಂದ ಯೋಜನೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಸೈಕಲ್, ಲ್ಯಾಪ್ಟಾಪ್ ಉಚಿತ ವಿತರಣೆ ಯೋಜನೆಗಳು ಪ್ರಮುಖ ವಾದವು. ತಳ ಸಮುದಾಯಗಳು, ಹಿಂದುಳಿದ ವರ್ಗಗಳು, ಎಸ್ಸಿ,ಎಸ್ಟಿ, ನಾನಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿಯೂ ಹಲವು ಯೋಜನೆಗಳು ರೂಪು ಗೊಂಡಿದ್ದು ಬಜೆಟ್ನಲ್ಲಿ ಘೋಷಣೆ ಮಾಡಿ, ಅದನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡ ನಿದರ್ಶನಗಳು ಇವೆ. ಆಯಾ ಸಂದ ರ್ಭಕ್ಕೆ…
2020-21ರಲ್ಲಿ ರಾಜ್ಯ ಸರ್ಕಾರ ಒಟ್ಟು ಋಣ ಭಾರ 3,98,219 ಕೋಟಿ ರೂ. ತಲುಪಿತ್ತು. ಇನ್ನು ಪ್ರಸಕ್ತ 2021-22 ಸಾಲಿನಲ್ಲಿ ರಾಜ್ಯ ಸರ್ಕಾರ 71,332 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ.ರಾಜ್ಯದ ಒಟ್ಟು ಸಾಲ ಹಾಗೂ ಋಣಭಾರ ಮಾರ್ಚ್ ಅಂತ್ಯಕ್ಕೆ 4,57,899 ಕೋಟಿ ರೂ.ಗೆ ಏರಿಕೆಯಾಗಲಿದೆ. ಇಂತಹ ಸಾಲದ ಮಧ್ಯೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬಜೆಟ್ ಮಂಡನೆಗೆ ಅಂತಿಮ ಸಭೆಗಳನ್ನ ನಡೆಸುತ್ತಿದ್ದಾರೆ.ಸಂಪನ್ಮೂಲ ಕೊರತೆಯ ಮಧ್ಯೆ ಬಜೆಟ್ ಮಂಡನೆ ಮಾಡಬೇಕಾಗಿದ್ದು, ಈ ಬಾರಿ ಬಜೆಟ್ ನಿರ್ವಹಣೆಗಾಗಿ ಇನ್ನಷ್ಟು ಸಾಲದ ಮೊರೆ ಹೋಗುವುದು ಅನಿವಾರ್ಯವಾಗಿದೆ.ಮಾರ್ಚ್ 4ಕ್ಕೆ ಸಿಎಂ ಬೊಮ್ಮಾಯಿ ಮದ್ಯಾಹ್ನ 12:30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ.ಈ ಬಾರಿಯೂ ಬಂಡವಾಳ ವೆಚ್ಚವನ್ನು ಭರಿಸಲು ಸಾಲದ ಮೊರೆಹೋಗುವ ಪರಿಸ್ಥಿತಿ ಎದುರಾಗಿದೆ.ಕಳೆದ ಎರಡು ವರ್ಷದಿಂದ ಕೋವಿಡ್ ಲಾಕ್ಡೌನ್ ಹೇರಿದ ಆರ್ಥಿಕ ಸಂಕಷ್ಟಕ್ಕೆ ಆದಾಯ ಮೂಲ ಕುಗ್ಗಿದೆ.ಕೇಂದ್ರ ಸರ್ಕಾರವೂ ರಾಜ್ಯಗಳಿಗೆ ಕಳೆದ ವರ್ಷದಿಂದ ಹೆಚ್ಚುವರಿ ಸಾಲ ಪಡೆಯಲು ಅನುಮತಿ ನೀಡಿದೆ. 2022-23 ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ…
ಯುಕ್ರೇನ್ ಮೇಲೆ ರಷ್ಯಾ ನಡೆಸಿರುವ ಯುದ್ದದಿಂದ ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮುಂದುವರೆದಿರುವ ನಡುವೆ ಕಚ್ಚಾ ತೈಲ ಬೆಲೆಗಳು ಪ್ರತಿ ಬ್ಯಾರೆಲ್ಗೆ ಇಂದು 5 ಡಾಲರ್ ಏರಿಕೆಯಾಗಿದೆ. ನ್ಯೂಯಾರ್ಕ್ ಮಾರ್ಕೆಟ್ ಆಯಿಲ್ ಎಕ್ಸೆಚೇಂಜ್ನ ಎಲೆಕ್ಟ್ರಾನಿಕ್ ವಹಿವಾಟಿನಲ್ಲಿ ಬೆಂಚ್ಮಾರ್ಕ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ 5.24 ಡಾಲರ್ ಏರಿಕೆಯಾಗಿ 108.60 ಕ್ಕೆ ಮುಟ್ಟಿದೆ. ಬ್ರೆಂಟ್ ಕಚ್ಚಾ ತೈಲ ಅಂತರಾಷ್ಟ್ರೀಯ ಬೆಲೆ ಮಾನದಂಡವು ಲಂಡನ್ನಲ್ಲಿ ಪ್ರತಿ ಬ್ಯಾರೆಲ್ 110.40 ಡಾಲರ್ಗೆ ಏರಿದೆ.ಪ್ರಮುಖ ತೈಲ ಗ್ರಾಹಕರ ಕ್ಲಬ್ ಇಂಟನ್ಯಾಷನಲ್ ಎನರ್ಜಿ ಏಜೆನ್ಸಿಯ 31 ಸದಸ್ಯರು ನಿನ್ನೆ 60 ಮಿಲಿಯನ್ ಬ್ಯಾರೆಲ್ಗಳ ಕಚ್ಚಾ ತೈಲವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಒಪ್ಪಿಕೊಂಡರು. ಪರಿಸ್ಥಿತಿ ಶಾಂತಗೊಳಿಸುವ ಕಸರತ್ತು ನಡೆಯಿತು.ಎರಡನೇ ಅತಿ ದೊಡ್ಡ ತೈಲ ರಫ್ತುದಾರರಾದ ಸೌದಿ ಅರೇಬಿಯಾದ ನಂತರ ರಷ್ಯಾದಿಂದ ಪೂರೈಕೆಯಲ್ಲಿನ ಅಡಚಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ನೀಟ್, ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಮರಣಶಾಸನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಟೀಕಿಸಿದ್ದಾರೆ. ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ಅರ್ಹತೆ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ಅನ್ಯಾಯಕ್ಕೆ ಅಂತ್ಯ ಹಾಡಬೇಕಿದೆ ಎಂದಿದ್ದಾರೆ. 10ನೇ ತರಗತಿಯಲ್ಲಿ ಶೇ.96, 2ನೇ ಪಿಯುಸಿಯಲ್ಲಿ ಶೇ. 97 ಅಂಕ ಗಳಿಸಿದ್ದರೂ ನವೀನ್ʼಗೆ ಜಗತ್ತಿನ ಶಿಕ್ಷಣ ಕಾಶಿ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ.ಭಾರತದಲ್ಲಿ…
ಕಳೆದ 24 ಗಂಟೆ ಗಳಲ್ಲಿ ಭಾರತ 1,377 ನಾಗರಿಕರನ್ನು ಯುದ್ಧಪೀಡಿತ ಉಕ್ರೇನ್ನಿಂದ ಸ್ಥಳಾಂತರಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಪೋಲೆಂಡ್ನಿಂದ ಮೊದಲ ವಿಮಾನಗಳು ಸೇರಿದಂತೆ ಆರು ವಿಮಾನಗಳು ಈಗ ಭಾರತಕ್ಕೆ ಹೊರಟಿವೆ. ಉಕ್ರೇನಿಂದ 1377 ಭಾರತೀಯ ಪ್ರಜೆಗಳನ್ನು ವಾಪಸ್ ಕರೆದೊಯ್ದಿದ್ದಾರೆ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಉಕ್ರೇನ್ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಪ್ರಾರಂಭಿಸಲಾದ ಆಪರೇಷನ್ ಗಂಗಾ ಅಡಿಯಲ್ಲಿ, ಭಾರತವು ಮುಂದಿನ ಮೂರು ದಿನಗಳಲ್ಲಿ 26 ಕ್ಕೂ ಹೆಚ್ಚು ವಿಮಾನಗಳನ್ನು ಕಾರ್ಯ ನಿರ್ವಹಿಸಲಿದೆ. ಉಕ್ರೇನ್ ವಾಯುಪ್ರದೇಶವನ್ನು ಮುಚ್ಚಿರುವುದರಿಂದ, ರೊಮೇನಿಯಾ, ಹಂಗೇರಿ, ಪೋಲೆಂಡ್ ಮತ್ತು ಸ್ಲೋವಾಕ್ ರಿಪಬ್ಲಿಕ್ ವಿಮಾನ ನಿಲ್ದಾಣಗಳನ್ನು ಬಳಸಲಾಗುತ್ತಿದೆ. ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಉಕ್ರೇನ್ ರಾಜಧಾನಿ ಕ್ವಿವ್ ನಲ್ಲಿ ಯಾವುದೇ ಭಾರತೀಯ ಉಳಿದಿಲ್ಲ ಎಂದಿದ್ದಾರೆ. ರಷ್ಯಾ ಹಲವಾರು ನಗರಗಳಲ್ಲಿ ನಾಗರಿಕ ಪ್ರದೇಶಗಳ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದೆ ಉಕ್ರೇನ್ನಲ್ಲಿ ಸುಮಾರು 16,000 ಭಾರತೀಯ ವಿದ್ಯಾರ್ಥಿಗಳು ಇನ್ನೂ ಸಿಲುಕಿಕೊಂಡಿದ್ದಾರೆ. ರಷ್ಯಾದ ಪಡೆಗಳು ಗುರುವಾರ…
ಉಕ್ರೇನ್ ನ ಕರ್ಕೀವ್ ಪಟ್ಟಣದಲ್ಲಿ ರಕ್ಷಾ ಕ್ಷಿಪಣಿಗೆ ಸಾವನ್ನಪ್ಪಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಗ್ಯಾನಗೌಡರ್ ಕುಟುಂಬಕ್ಕೆ ಖಂಡಿತವಾಗಿಯೂ ಸರ್ಕಾರ ಪರಿಹಾರವನ್ನು ನೀಡಲಿದೆ. ಇದರ ಬಗ್ಗೆ ಯಾರಿಗೂ ಕೂಡ ಅನುಮಾನ ಬೇಡ. ಆದರೆ ನಮಗೆ ಮೊದಲು ಆತನ ಮೃತದೇಹವನ್ನು ಸ್ವದೇಶಕ್ಕೆ ತರುವುದು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು. ಪರಿಹಾರ ಕೊಡುವುದು ಸರ್ಕಾರದ ಕೈಯಲ್ಲಿದೆ. ಅದು ಕೂಡ ನನ್ನ ಗಮನದಲ್ಲೇ ಇದೆ. ಕುಟುಂಬಸ್ಥರ ಒತ್ತಾಸೆಯಂತೆ ಮೃತದೇಹವನ್ನು ತರಲು ನಮ್ಮ ಪ್ರಯತ್ನಗಳು ಮುಂದುವರೆದಿದೆ ಎಂದರು. ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ವಿದೇಶಾಂಗ ವ್ಯವಹಾಗಳ ಇಲಾಖೆ ಕಾರ್ಯದರ್ಶಿ, ಉಕ್ರೇನ್ ಮತ್ತು ರಷ್ಯಾದಲ್ಲಿರುವ ರಾಯಭಾರ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಮೃತದೇಹವನ್ನು ಭಾರತಕ್ಕೆ ತರಲು ನಾವು ಶಕ್ತಿಮೀರಿ ಪ್ರಯತ್ನವನ್ನು ಮಾಡುತ್ತಿದ್ದೇವೆ. ಉಕ್ರೇನ್ನಲ್ಲಿ ಪರಿಸ್ಥಿತಿ ಕೈ ಮೀರುತ್ತಿರುವುದರಿಂದ ವಿಳಂಬವಾಗಿದೆ. ಆದರೂ ನಮ್ಮ ಪ್ರಯತ್ನ ನಿಂತಿಲ್ಲ ಎಂದು ಸ್ಪಷ್ಟಪಡಿಸಿದರು.…
ಹಿರಿಯೂರು: ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ವಯೋನಿವೃತ್ತಿ ಹೊಂದಿದ್ದ ಪೋಲಿಸ್ ಎಎಸ್ ಐ ನಿರಂಜನಮೂರ್ತಿ ಹಾಗೂ ಪ್ರಭಾಕರರೆಡ್ಡಿ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಪೊಲೀಸರ ಕರ್ತವ್ಯದ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿಯುತ ಮತ್ತು ನೆಮ್ಮದಿ ಜೀವನ ನಡೆಸಲು ಸಾಧ್ಯವಾಗಿದೆ. ಹಬ್ಬಗಳನ್ನು ಸಂಭ್ರಮದಿಂದ ಯಾವ ರೀತಿ ಆಚರಿಸಬೇಕು? ಹಬ್ಬಕ್ಕೆ ಏನು ಸಿಹಿ ಮಾಡಬೇಕು? ಎಂದು ಎಲ್ಲರು ಯೋಚಿಸುವ ನಮ್ಮಗಳ ಮಧ್ಯೆಯೂ ಸಹ ಪೋಲಿಸ್ ಅಧಿಕಾರಿಗಳು ಹಬ್ಬ ಹರಿದಿನಗಳನ್ನು ಸಹ ಲೆಕ್ಕಿಸದೆ ಹಬ್ಬಗಳಲ್ಲಿಅಹಿತಕರ ಘಟನೆ ನಡೆಯದಂತೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು? ಯಾವ ಸ್ಥಳದಲ್ಲಿಕರ್ತವ್ಯ ನಿರ್ವಹಿಸಬೇಕು? ಎಂಬುದಾಗಿ ಪೊಲೀಸರು ಯೋಚಿಸುತ್ತಾರೆ. ಇಂತಹ ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿರುವುದರಿಂದಲೇ ಸಮಾಜದಲ್ಲಿ ಪ್ರತಿಯೊಬ್ಬ ನಾಗರಿಕರು ಸಹ ನೆಮ್ಮದಿಯ ಜೀವನ ಸಾಗಿಸುತ್ತಿದ್ದೆವೆ . ಸಾರ್ವಜನಿಕರು ಸಹ ಕಾನೂನು ಪಾಲಿಸುತ್ತಾ ಪೊಲೀಸರಿಗೆ ಅಗತ್ಯ ಸಹಕಾರ ನೀಡಬೇಕಾಗುರುವುದು ಪ್ರತಿಯೊಬ್ಬ ಭಾರತೀಯ ಆದ್ಯ ಕರ್ತವ್ಯವಾಗಿದೆ . ಇಂತಹ ಕರ್ತವ್ಯವನ್ನು ನಿರ್ವಹಿಸಿ ನಿವೃತ್ತಿ ಹೊಂದಿದ್ದಂತಹ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಪೋಲಿಸ್ ಠಾಣೆಯ ASI ಸಿಬ್ಬಂದಿಗಳಾದ ನಿರಂಜಮೂರ್ತಿ…
ನುಪಾಡಾ(ಒಡಿಶಾ): ಮಹಾಶಿವರಾತ್ರಿ ಅಂಗವಾಗಿ ಶಿವನ ದರ್ಶನ ಪಡೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಆರು ಮಂದಿ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಒಡಿಶಾದ ನುಪಾಡಾದಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಮಧ್ಯಾಹ್ನ ನುಪಾಡಾದ ನೃಸಿಂಹನಾಥ ದೇವಸ್ಥಾನದಿಂದ ವಾಪಸ್ ಬರುತ್ತಿದ್ದಾಗ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಛತ್ತೀಸ್ಗಢದವರಾಗಿರುವ ಇವರು ಶಿವರಾತ್ರಿ ಅಂಗವಾಗಿ ಪಕ್ಕದ ರಾಜ್ಯದ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಹೆಚ್ ಡಿ ಕೋಟೆ ಮತ್ತುಸರಗೂರು ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣ ಅವರ 78ನೇ ವರ್ಷದ ಹುಟ್ಟುಹಬ್ಬವನ್ನು ಜೈಪ್ರಕಾಶ್ ಅಭಿಮಾನಿಗಳ ಬಳಗದವತಿಯಿಂದ ಆಚರಣೆ ಮಾಡಲಾಯಿತು. ತಾಲ್ಲೂಕಿನ ನಾಡದೇವತೆ ಚಿಕ್ಕಮ್ಮತಾಯಿಯ ಆರ್ಶೀವಾದ ಪಡೆದು. ನಂತರ ಪಟ್ಟಣದ ಶ್ರೀ ಗಣಪತಿ ದೇವಾಲಯ ಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿ. ಪಟ್ಟಣ ಪಂಚಾಯ್ತಿ ಆವರಣದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ನಂತರ ಹುಟ್ಟು ಹಬ್ಬದ ಪ್ರಯುಕ್ತ ಚಿಕ್ಕಣ ಅವರ ಪುತ್ರ ಜೈಪ್ರಕಾಶ್ ಸೇರಿದಂತೆ ಹಲಾವಾರು ಮಂದಿ ರಕ್ತದಾನ ಮಾಡಿದರು. ಹ್ಯಾಂಡ್ ಪೋಸ್ಟ್ ಸರ್ಕಲ್ ಬಳಿ ಸೇಬಿನ ಹಾರವನ್ನು ಹಾಕಿ ಜೆಡಿಎಸ್ ಪಕ್ಕದ ಕಾರ್ಯಕರ್ತರು ಹಾಗೂ ಮುಖಂಡರು ಸೇರಿ ಹಾರವನ್ನು ಹಾಕಿದರು. ಹಾಗೂ ಹ್ಯಾಂಡ್ ಪೋಸ್ಟ್ ಅಲ್ಲಿಂದ ಕೋಟೆ ಅಂಬೇಡ್ಕರ್ ಭವನವರಗೆ ಮೆರವಣಿಗೆ ಮೂಲಕ ಚಿಕ್ಕಣ್ಣನವರಿಗೆ ಹೂವಿವನ್ನು ವಾದ್ಯಗಳ ಮೂಲಕ ಮೆರವಣಿಗೆ ಮಾಡಿಕೊಂಡು ಬಂದರು . ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿದ್ದು. ಮುಖಂಡರು ಮಾತನಾಡಿ, ಮಾಜಿ ಶಾಸಕ ಚಿಕ್ಕಣ್ಣವವರು ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು…