Subscribe to Updates
Get the latest creative news from FooBar about art, design and business.
- ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
- ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
- ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
- ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
- ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
- ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
- ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
- ತಿಪಟೂರು: ಬೆಡ್ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
Author: admin
ಚಿತ್ರದುರ್ಗ:ಐತಿಹಾಸಿಕ ಮೇಕೆದಾಟು ಪಾದಯಾತ್ರೆಯ ಎರಡನೇಯ ದಿನದ ಪಾದಯಾತ್ರೆಯಲ್ಲಿ ಕಾಂಗ್ರೆಸ್ ವಕ್ತರಾರು ಹಾಗೂ ಚಿತ್ರದುರ್ಗ ಜಿಲ್ಲೆಯ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ ಭಾಗವಹಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಚಳ್ಳಕೆರೆ ತಾಲೂಕಿನ ಶಾಸಕರಾದ ಟಿ. ರಘುಮೂರ್ತಿ, ವೆಂಕಟರಮಣಪ್ಪ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡರು. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾವೇರಿ: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾಗಿದ್ದಾರೆ. ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು, ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮದ ಕಲಿಕೆಗೆ ಬಹಳಷ್ಟು ಒತ್ತು ನೀಡಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ವರದಿ: ಮುರುಳಿಧರನ್ ಆರ್., ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಚಿತ್ರದುರ್ಗ: ಹೊಂಡಗುಂಡಿಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ದಂಪತಿ ರಸ್ತೆಗೆಸೆಯಲ್ಪಟ್ಟ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೈಸೂರು ಪ್ರಧಾನ ರಸ್ತೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಮೈಸೂರು ಹಾಗೂಬಳ್ಳಾರಿ , ಬಾಂಬೆಗೆಹೋಗುವ ಮುಖ್ಯರಸ್ತೆ ಇದಾಗಿದ್ದು, ಈ ರಸ್ತೆ ದುರಸ್ತಿಗೊಂಡು ಸುಮಾರು ವರ್ಷಗಳೇ ಕಳೆದಿದ್ದು, ಹೊಂಡಹೊಂಡಿಗಳಿಂದ ತುಂಬಿದೆ. ಈ ಬಗ್ಗೆ ಸಾಕಷ್ಟು ಬಾರಿ ಸಾರ್ವಜನಿಕರು ದೂರು ನೀಡಿದರೂ ಸಂಬಂಧ ಪಟ್ಟ ಇಲಾಖೆಯಅಧಿಕಾರಿಗಳು ನಮಗೂಇದಕ್ಕೂ ಯಾವುದೇ ತರಹದ ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ ಎಂದು ಹಿರಿಯೂರು ತಾಲ್ಲೂಕಿನ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರಸ್ತೆಯು ಬಹಳ ಕಿರಿದಾಗಿದ್ದು, ಈ ರಸ್ತೆಯ ಮುಖಾಂತರವೇದಿನನಿತ್ಯ ಓಡಾಡುವ ವಾಹನಗಳ ಸಂಖ್ಯೆಯು ಸಹ ಹೆಚ್ಚಾಗುತ್ತಿದ್ದು ಹಾಗೂಶಾಲಾ- ಕಾಲೇಜುಗಳಿಗೆ ಹೋಗುವಂತಹವಿದ್ಯಾರ್ಥಿ/ ವಿದ್ಯಾರ್ಥಿನಿಯರೂ ಸಹ ವಾಹನಗಳ ಓಡಾಡುವಿಕೆಯಿಂದ ರಸ್ತೆಗಳನ್ನು ದಾಟಲು ತುಂಬಾ ಹರಸಾಹಸ ಪಡುವಂತಹ ಪರಸ್ಥಿತಿಗಳು, ಉಂಟಾಗಿದೆ,. ಒಂದಿನಲ್ಲ ಎರಡು ದಿನ ಅಲ್ಲಾ ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯ ವರೆಗೂ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಹ ತೀವ್ರ ಹೆಚ್ಚುತ್ತಿದ್ದು ಈ ಟ್ರಾಫಿಕ್…
ತಿಪಟೂರು: ನಗರದ ಹಾಸನ ವೃತ್ತದ ನಂದಿನಿ ಹಾಲಿನ ಮಳಿಗೆಯ ಆವರಣದಲ್ಲಿ ತಾಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಕನ್ನಡ ನಾಡಿನ ಕವಿಗಳು, ನಾಟಕಕಾರರು, ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್ ಪಾಟೀಲ್ ( ಚಂಪಾ ) ರವರಿಗೆ ನುಡಿನಮನ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರಸಭಾ ಸದಸ್ಯ ಮಹೇಶ್, ಜಯಕರ್ನಾಟಕ ಜನಪರ ವೇದಿಕೆ ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್ ಮತ್ತು ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್ ಮಾತನಾಡಿದರು. ಕಸಾಪ ಕಾರ್ಯದರ್ಶಿ ಮಂಜುನಾಥ್, ಹಿರಿಯ ಮುಖಂಡ ರಾಜಣ್ಣ, ವಿಶ್ವನಾಥ್ ನಿವೃತ್ತ ನೌಕರ ಜಯದೇವಪ್ಪ ಮತ್ತು ತುರುವೇಕೆರೆ ಪತ್ರಕರ್ತ ಪಾರ್ಥಸಾರಥಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಬಹುದಿನಗಳಿಂದ ಅಭಿವೃದ್ಧಿ ಕಾಣದೆ ಹಾಗೆಯೇ ಉಳಿದಿದ್ದ ಸುರಂಗ ಮಾರ್ಗ, ನಗರದ ಉಪ್ಪಾರಹಳ್ಳಿ ಗೇಟ್ ರೈಲ್ವೇ ಅಂಡರ್ ಪಾಸ್ ಇದೀಗ ಉದ್ಘಾಟನೆಗೊಂಡಿತು. ಶಾಸಕ ಜ್ಯೋತಿ ಗಣೇಶ್ ಅವರು ಉಪ್ಪಾರಹಳ್ಳಿ ಗೇಟ್ ರೈಲ್ವೇ ಅಂಡರ್ ಪಾಸ್ ಉದ್ಘಾಟನೆ ನೆರವೇರಿಸಿದರು. ಮೇಯರ್ ಬಿ.ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು. ಪಾಲಿಕೆ ಸದಸ್ಯರಾದ ಗಿರಿಜಾ ಧನಿಯಾಕುಮಾರ್ ರವರ ಅವಿರತ ಶ್ರಮದ ಫಲವಾಗಿ ಅಂಡರ್ ಪಾಸ್ ಸಾರ್ವಜನಿಕ ಸೇವೆ ಮುಕ್ತವಾಗಿದೆ. ಈ ಅಂಡರ್ ಪಾಸ್ ನಿಂದ ಎಸ್.ಎಸ್.ಪುರಂ, ಉಪ್ಪಾರಹಳ್ಳಿ, ವಿಜಯನಗರ ಶಿವಮೂಕಾಂಬಿಕಾ ನಗರ, ಮೊದಲಾದ ಬಡಾವಣೆಗಳ ನಾಗರಿಕರಿಗೆ ಅನುಕೂಲವಾಗಲಿದೆ. ವರದಿ: ರಾಜೇಶ್ ರಂಗನಾಥ್, ವಿಶೇಷ ಪ್ರತಿನಿಧಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ನಲಿ ಕಲಿ ಎಂಬ ನುಡಿಯನ್ನು ಪ್ರತಿಯೊಂದು ಶಾಲೆಗಳ ಮೇಲೂ ಬರೆದಿರುವುದನ್ನು ನಾವೆಲ್ಲರೂ ನೋಡಿರುತ್ತೇವೆ. ವಿಷಯ ಏನಪ್ಪ ಅಂದರೆ, ಇಂದಿನ ಈ ವ್ಯವಸ್ಥೆಯಲ್ಲಿ ಕಲಿಯಲು ಸರಿಯಾದ ಕಟ್ಟಡಗಳಿಲ್ಲ ಮತ್ತು ನಲಿಯಲು ಇರುವ ಆಟದ ಮೈದಾನವನ್ನು ಉಳಿಸಿಕೊಂಡು ಸುಸಜ್ಜಿತವಾಗಿ ಇಟ್ಟುಕೊಳ್ಳುವ ಬಗ್ಗೆ ಯಾವೊಬ್ಬ ಜನಪ್ರತಿನಿದಿಯೂ ತಲೆಕೆಡಿಸಿಕೊಂಡಿಲ್ಲ. ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದ ಸರ್ಕಾರಿ ಶಾಲಾ ಮೈದಾನವು ಸರಿಯಾದ ವ್ಯವಸ್ಥೆ ಇಲ್ಲದೇ ಮಕ್ಕಳ ಆಟೋಟಗಳಿಗೆ ತಡೆಯಾಗಿದೆ. ಕಾಲಕಾಲಕ್ಕೆ ಸರಿಯಾದ ನಿರ್ವಹಣೆ ಇಲ್ಲದೇ ಮೈದಾನದ ತುಂಬಾ ಗಿಡಗಂಟೆಗಳು ಬೆಳೆದುಕೊಂಡ ಕಾರಣ ಮೈದಾನವು ಆಡಲು ಯೋಗ್ಯವಲ್ಲದಂತಾಗಿದೆ. ಕಳೆದ ವರ್ಷ ಜನವರಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಗೆ ಆಗಮಿಸಿದ್ದ ಇಲ್ಲಿನ ಸ್ಥಳೀಯ ಶಾಸಕರಾದ ಮಸಾಲ ಜಯರಾಮ್’ರವರು ಈ ಕ್ರೀಡಾಂಗಣಕ್ಕೆ ಇನ್ನು 6 ತಿಂಗಳಿನಲ್ಲಿ ಈ ಮೈದಾನಕ್ಕೆ ಫೆಡ್ ಲೈಟ್ ವ್ಯವಸ್ಥೆ ಮಾಡಿಸಿಕೊಡುವ ಆಶ್ವಾಸನೆ ನೀಡಿದ್ದರು. ಆದರೆ, ಒಂದು ವರ್ಷ ಕಳೆದರೂ ಆ ಮಾತು ಕೇವಲ ಆಶ್ವಾಸನೆಯಾಗಿಯೇ ಉಳಿದುಕೊಂಡಿದೆ. ಇನ್ನಾದರೂ ಜನಪ್ರತಿನಿದಿಗಳು ಎಚ್ಚೆತ್ತುಕೊಂಡು ಈ ಕ್ರೀಡಾಂಗಣವನ್ನು ದುರಸ್ತಿಗೊಳಿಸಿ ಮಕ್ಕಳಿಗೆ ಆಡಲು ಅನುವು ಮಾಡಿಕೊಡಬೇಕಾಗಿದೆ…
ಬೆಂಗಳೂರು: ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆ್ಯಕ್ಟ್ (ವಿಪತ್ತು ನಿರ್ವಹಣಾ ಕಾಯ್ದೆ) 2005ರ ಐಪಿಸಿ ಸೆಕ್ಷನ್ 141, 143, 290, 336ರ ಅಡಿ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಈ ವೇಳೆ ಕಾಂಗ್ರೆಸ್ ನವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಾಗಲಕೋಟೆಯಲ್ಲಿ ಸಚಿವ ಗೋವಿಂದ ಕಾರಜೋಳ ಗರಂ ಆಗಿದ್ದಾರೆ. ಬಾಗಲಕೋಟೆಯಲ್ಲಿ ಈ ಸಂಬಂಧ ಹೇಳಿಕೆ ನೀಡಿದ ಸಚಿವ ಗೋವಿಂದ ಕಾರಜೋಳ, ಜನರ ಹಿತದೃಷ್ಟಿಯಿಂದ ನಡೆಯುತ್ತಿರುವ ಪಾದಯಾತ್ರೆ ಅಲ್ಲ. ಪಾದಯಾತ್ರೆಯಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಳ್ಳಲಿ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಎಲ್ಲರ ಹಕ್ಕು. ಅದನ್ನು ಮೊಟಕುಗೊಳಿಸಬಾರದೆಂದು ತೊಂದರೆ ಕೊಟ್ಟಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕೊವಿಡ್ 19 ನಡುವೆಯೇ ಸರ್ಕಾರದ ತೀವ್ರ ವಿರೋಧದ ನಡುವೆಯೇ ಮೇಕೆದಾಟು ಪಾದಯಾತ್ರೆ ಆರಂಭಗೊಂಡಿದೆ. ನಿನ್ನೆ ಸಾಗರೋಪಾದಿಯಲ್ಲಿ ಜನರು ಆಗಮಿಸಿ ಮೇಕೆದಾಟು ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ. ಮೇಕೆದಾಟು ಸಂದರ್ಭದಲ್ಲಿಯೇ ಇದೀಗ ಡಿ.ಕೆ.ಶಿವಕುಮಾರ್ ಅವರಿಗೆ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅಧಿಕಾರಿಗಳು ಹೇಳಿದ್ದು, ಅಧಿಕಾರಿಗಳಿಗೆ ಡಿ.ಕೆ.ಶಿವಕುಮಾರ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಎಡಿಸಿ ಜವರೇಗೌಡ, ಡಿಹೆಚ್ ಒ ನಿರಂಜನ್ , ಡಿ.ಕೆ.ಶಿವಕುಮಾರ್ ಗೆ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಸಲಹೆ ನೀಡಿದ್ದು, ಆದರೆ, ಡಿಕೆಶಿ ಕ್ಲಾಸ್ ತೆಗೆದುಕೊಂಡಿದ್ದಾರೆ. “ಐ ಆ್ಯಮ್ ಫಿಟ್ ಆ್ಯಂಡ್ ಫೈನ್” ನನಗೇ ಸಲಹೆ ಕೊಡಲು ಬಂದಿದ್ದೀರಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ನಾನೊಬ್ಬ ಜನಪ್ರತಿನಿಧಿ ನನಗೇ ಬ್ಲ್ಯಾಕ್ಮೇಲ್ ಮಾಡ್ತಿದ್ದೀರಾ? ನೀವು ನಿಮ್ಮ ಆರೋಗ್ಯ ಇಲಾಖೆ ಸಚಿವರಿಗೆ ಹೋಗಿ ಹೇಳಿ. ಬಚ್ಚಾಗಳ ಹತ್ತಿರ ಆಟ ಆಡಲು ಹೋಗಿ ಹೇಳಿ ಅಂತ ಡಿಕೆಶಿ ಹೇಳಿದ್ದಾರೆ. ನನಗೆ ಏನಾಗಿದೆ ಎಂದು ಟೆಸ್ಟ್ ಮಾಡಲು ಬಂದಿದ್ದೀರಾ. ಅಧಿಕಾರಿಗಳಿಗೆ ನಿಮ್ಮ ಹುದ್ದೆ ಯಾವುದು ಎಂದು ಪ್ರಶ್ನಿಸಿದ ಅವರು,…
ತುಮಕೂರು: ಕನ್ನಡ ಸಾಹಿತ್ಯ ಪರಿಷತ್ತಿಗೆ ಬಂಡಾಯ ಸಾಹಿತ್ಯ ಎಂದು ಪರಿಚಯವಾದ ರಂಗಾರೆಡ್ಡಿ ಕೋಡಿರಾಂಪುರ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ತುಮಕೂರು ಡಿಸಿಸಿ ಬ್ಯಾಂಕ್ ನಿರ್ದಶಕ ಬಿ ನಾಗೇಶ್ ಬಾಬು ಮತ್ತು ಪುಲಮ ಘಟ್ಟದ ಕರುನಾಡ ಬೆಳಕು ಫೌಂಡೇಶನ್ ಒತ್ತಾಯಿಸಿದೆ. ಹೆಸರಿನಲ್ಲಿ ಸ್ಮಾರಕ ಸ್ಮಾರಕ ನಿರ್ಮಿಸಬೇಕು ಅದೇ ರೀತಿ ಕೈಮರ ದೊಡ್ಡೇರಿ ರಂಟವಳಲು ರಸ್ತೆಗೆ ರಂಗಾರೆಡ್ಡಿ ಕೋಡಿರಾಂಪುರ ಹೆಸರನ್ನು ನಾಮಕರಣ ಮಾಡಬೇಕೆಂದು ಎಂದು ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಪುನಾ ಭರತ್ ತೆಗ್ಗಿನಮನೆ ರಂಗನಾಥ ಬಾಬು ಕವಿತಾ ಗೌಡ ಗುಟ್ಟೇ ರವಿ ಮತ್ತಿತರರು ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy