Subscribe to Updates
Get the latest creative news from FooBar about art, design and business.
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
- ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
Author: admin
ಕುಮಟಾ: ಕರ್ನಾಟಕ ರಣಧೀರ ವೇದಿಕೆ ಕುಮಟಾ ಹಾಗೂ ಭಟ್ಕಳ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಕುಮಟಾದ ಮಿರ್ಜಾನ್ ನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭವ್ಯವಾಗಿ ನೆರವೇರಿತು. ಕಾರ್ಯಕ್ರಮಕ್ಕೆ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ಜೊತೆಗೆ ರಾಜ್ಯ ಸಮಿತಿಯ ಹಲವು ಸದಸ್ಯರು ಬೆಂಗಳೂರಿನಿಂದ ಆಗಮಿಸಿದ್ದರು. ಮಹೇಶ್ ಗೌಡ ಅವರ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಉತ್ತರ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ಕುಮಾರಿ ಸುಪ್ರಿಯಾ ವಿಷ್ಣು ನಾಯ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ನಮಗೆ ಸದಾ ಅಭಿಮಾನ ಇರಬೇಕು. ಅವಕ್ಕೆ ಧಕ್ಕೆ ಉಂಟಾದಾಗ ಧ್ವನಿ ಎತ್ತುವುದು ನಮ್ಮ ಕರ್ತವ್ಯ. ಜೊತೆಗೆ ಶೋಷಿತರ ಪರವಾಗಿ ನಿಲ್ಲುವ ಸಂಘಟನೆ ಆಗಬೇಕಿದೆ” ಎಂದು ಹೇಳಿದರು. ನಂತರ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ದೀಪ ಬೆಳಗಿಸಿ ಘಟಕವನ್ನು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಕರ್ನಾಟಕ ರಣಧೀರರ ವೇದಿಕೆಯು ಕೇವಲ…
ಬೀದರ್: ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 8 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಕಮಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಔರಾದ್–ಕಮಲನಗರ್ ರಸ್ತೆ ಮೂಲಕ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿರುವ ಮಾಹಿತಿ ಮೇರೆಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಅವರ ನಿರ್ದೇಶನದಲ್ಲಿ, ಪಿಎಸ್ ಐ ಆಶಾ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ದಾಳಿಯ ವೇಳೆ 8 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಿದ ವಾಹನವನ್ನು ವಶಕ್ಕೆ ಪಡೆಯಲಾಯಿತು. ಆದರೆ, ವಾಹನ ಚಾಲಕ ಪೊಲೀಸ್ ವಾಹನವನ್ನು ಕಂಡ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವಿವೇಕಾನಂದ. ಎಚ್.ಕೆ. ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಭೇದವಿಲ್ಲದೆ ಬಹುತೇಕರ ಮನೆಯಲ್ಲಿ ಆಚರಿಸುವ ಒಂದು ಹಬ್ಬ… ತೀರಿಹೋದ ಹಿರಿಯರ ನೆನಪಿನಲ್ಲಿ, ಅವರ ಇಷ್ಟದ ಊಟ, ಬಟ್ಟೆ, ವಸ್ತುಗಳು ಇತ್ಯಾದಿಗಳನ್ನು ಇಟ್ಟು ಅವರಿಗೆ ಅರ್ಪಿಸಿದಂತೆ ಮಾಡಿ ನಾವೇ ಉಪಯೋಗಿಸುವುದು…! ಜ್ಯೋತಿಷಿಗಳಂತು ಟಿವಿಗಳಲ್ಲಿ ಇದರ ಬಗ್ಗೆ ಇಲ್ಲಸಲ್ಲದ ಅನೇಕ ಮೌಢ್ಯಗಳನ್ನು ಹೇಳಿ ಜನರನ್ನು ಮತ್ತಷ್ಟು ದಿಕ್ಕು ತಪ್ಪಿಸುತ್ತಿದ್ದಾರೆ. ಪುನರ್ ಜನ್ಮ, ಆತ್ಮಗಳ ಅಲೆದಾಟ, ಶವಗಳ ಕನಸುಗಳು.. ಇನ್ನೂ ಮುಂತಾದ ಭಯಂಕರ ವಿಷಯಗಳನ್ನು ಪ್ರಸ್ತಾಪಿಸಿ ಜನರನ್ನು ಭಯಗೊಳಿಸಿ ಹಬ್ಬದ ತೀವ್ರತೆ ಹೆಚ್ಚಿಸುತ್ತಿದ್ದಾರೆ. ಒಂದೇ ಒಂದು ಟಿವಿ ವಾಹಿನಿ ವಿವೇಚನೆಯಿಂದ ಈ ಹಬ್ಬದ ವಿಮರ್ಶೆ ಮಾಡುತ್ತಿಲ್ಲ. ಊಹಾತ್ಮಕ ಮೂಡನಂಬಿಕೆಯನ್ನೇ ಮತ್ತಷ್ಟು ಆಳಕ್ಕೆ ಇಳಿಸುತ್ತಿದ್ದಾರೆ. ಬದಲಾದ ಕಾಲಮಾನದಲ್ಲಿ ಈ ಹಬ್ಬದ ಆಚರಣೆಯನ್ನು ಮತ್ತಷ್ಟು ವಿಶಾಲ, ಸರಳ, ಅರ್ಥಪೂರ್ಣ, ಪ್ರಾಯೋಗಿಕ ಮತ್ತು ಮಾನವೀಯಗೊಳಿಸಬಹುದಾದ ಒಂದು ಸಲಹೆ ಮತ್ತು ಮನವಿ… ವ್ಯಕ್ತಿಯ ಸಾವೇ ಆತನ ಕೊನೆ. ಬದುಕಿದ್ದಾಗ ಎಷ್ಟೇ ಪ್ರಮುಖನಾಗಿದ್ದರೂ ಉಸಿರು ನಿಂತ ನಂತರ ಆತನ ದೇಹ ಪ್ರಕೃತಿಯಲ್ಲಿ ಲೀನವಾಗುತ್ತದೆ.…
ತುಮಕೂರು: ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆ ಮಾಡಿಸಲು 3 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞೆಯಾದ ಡಾ.ಸಿ.ಎನ್.ಮಹಾಲಕ್ಷ್ಮಮ್ಮ ಎಂಬವರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಇಲ್ಲಿನ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾಸ್ಮೀನ ಪರವೀನ ಲಾಡಖಾನ ಅವರು ತೀರ್ಪು ಪ್ರಕಟಿಸಿದರು. ನಗರದ ಕೋತಿತೋಪು ನಿವಾಸಿ ಮುಕುಂದ ಎಂಬವರು ನಾದಿನಿ ಸವಿತಾ ಎಂಬವರನ್ನು 2021 ಫೆಬ್ರವರಿ 2ರಂದು ಹೆರಿಗೆ ನೋವಿನ ಕಾರಣ ತುಮಕೂರಿನ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಇವರಿಗೆ ಹೆರಿಗೆ ಮಾಡಿಸಲು ಡಾ.ಸಿ.ಎನ್.ಮಹಾಲಕ್ಷ್ಮಮ್ಮ 3 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ನಾದಿನಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಅನಿವಾರ್ಯವಾಗಿ 2 ಸಾವಿರ ರೂ. ಲಂಚ ನೀಡಲು ಒಪ್ಪಿ ರಾತ್ರಿ 9.30 ಗಂಟೆಗೆ ‘ಡಿ’ ಗ್ರೂಪ್ ನೌಕರ…
ತುಮಕೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತಪಟ್ಟ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇನ್ನಿಬ್ಬರು ಮಕ್ಕಳ ಜೊತೆಗೆ ಸರಿತಾ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದರು. ಕಡಪಲಕೆರೆ ಗ್ರಾಮದ ಸರಿತಾ ಅವರು 6 ವರ್ಷಗಳ ಹಿಂದೆ ಅದೇ ಗ್ರಾಮದ ಸಂತೋಷ ಎಂಬಾತನನ್ನು ವಿವಾಹವಾಗಿದ್ದರು. ಸಂತೋಷ್ ಆಟೋ ಚಾಲಕನಾಗಿದ್ದ. ಮದುವೆಯಾದ ದಿನದಿಂದಲೂ ಸಂತೋಷ್ ಮತ್ತು ಆತನ ತಾಯಿ, ಅಜ್ಜಿ ಸರಿತಾಳಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಇಬ್ಬರು ಮಕ್ಕಳ ಜೊತೆಗೆ ಮಹಿಳೆ ಸರಿತಾ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಪತಿ, ಪತಿಯ ತಾಯಿ ಹಾಗೂ ಅಜ್ಜಿಯ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಪೊಲೀಸರ ತನಿಖೆಯ ನಂತರ ಹೆಚ್ಚಿನ ಮಾಹಿತಿಗಳು…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಜಂಬಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾರಾಜವಾಡಿ ಗ್ರಾಮದಲ್ಲಿ ಜೆಜೆಎಂ ಯೋಜನೆಯ ಅಡಿಯಲ್ಲಿ ಹೊಸ ಬೋರ್ವೆಲ್ ಹಾಕದೆ ಹಳೆಯ ಬೋರ್ವೆಲ್ ಪೈಪ್ ಲೈನ್ ನ ನೀರು ಸರಬರಾಜು ಮಾಡುತ್ತಿದ್ದಾರೆಂದು ಆರೋಪಿಸಿ ಗ್ರಾಮದ ಮುಖಂಡರಾದ ಪ್ರಜಯ್ ಪಾಟೀಲ್ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಜಂಬಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾರಾಜವಾಡಿ ಗ್ರಾಮದಲ್ಲಿ ಗುತ್ತಿಗೆದಾರ ಸರಿಯಾಗಿ ಕೆಲಸ ಮಾಡಿರುವುದಿಲ್ಲ. ಹೊಸ ಬೋರ್ವೆಲ್ ತೋಡಲಾರದೆ ಗ್ರಾಮದ ಹಳೆಯ ಬೋರ್ವೆಲ್ ಗಳಿಗೆ ಪೈಪಲೈನ್ ಅಳವಡಿಸಿ ನೀರು ಸರಬರಾಜು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಗ್ರಾಮದ ಜನರಿಗೆ ಗೊತ್ತಿಲ್ಲದೆ ಸಂಪೂರ್ಣ ಕಾಮಗಾರಿ ಮುಗಿದಿದೆ ಅಂತ ಪಂಚಾಯತ ಪಿ.ಡಿ.ಓ. ಅಧಿಕಾರಿಗೆ ಒಪ್ಪಿಸಿರುತ್ತಾರೆ. ಮೇಲಾಧಿಕಾರಿಗಳು ಗ್ರಾಮದಲ್ಲಿ ಹೊಸ ಬೋರ್ವೆಲ್ ಅಳವಡಿಸಿ ಹಳೆ ಬೋರ್ವೆಲ್ ಕನೆಕ್ಷನ್ ಕೊಟ್ಟಿರುವುದನ್ನು ರದ್ದು ಮಾಡಿ ಹೊಸ ಬೋರ್ವೆಲ್ ಗಳಿಗೆ ಕನೆಕ್ಷನ್ ಮಾಡಿಕೊಡಬೇಕು ಮತ್ತು ಮಹಾದೇವ ಮಂದಿರದ ಕಾಂಪೌಂಡ್ ವಾಲ್ ಕಟ್ಟಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ…
ತುಮಕೂರು: ಜಿಲ್ಲಾ ಆಡಳಿತದಿಂದ ಹಮ್ಮಿಕೊಂಡಿರುವ ತುಮಕೂರು ದಸರಾಗೆ ಸೆ. 22ರಂದು ಚಾಲನೆ ನೀಡಲಾಗುತ್ತದೆ. ದಸರಾ ಉತ್ಸವಕ್ಕೆ ಆಗಮಿಸುವ ಜನರಿಗಾಗಿ ಜಿಲ್ಲೆಯಾದ್ಯಂತ ಪ್ರತಿ ದಿನ 250 ವಿಶೇಷ ಬಸ್ ಗಳು ಸಂಚರಿಸಲಿವೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ 11 ದಿನ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಲಿವೆ. ಅ. 2ರಂದು ನಡೆಯಲಿರುವ ಜಂಬೂ ಸವಾರಿಯಲ್ಲಿ 50 ಗ್ರಾಮ ದೇವತೆಗಳು ಸಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು. ದಸರಾ ಉತ್ಸವದ ಮೊದಲ ದಿನ ಸರ್ವೋದಯ ಪ್ರೌಢಶಾಲೆ ಮೈದಾನದಲ್ಲಿ ಬೆಳಿಗ್ಗೆ 8 ಗಂಟೆಗೆ ಹಾಟ್ ಏರ್ ಬಲೂನ್, ವಿಶ್ವವಿದ್ಯಾಲಯ ಹೆಲಿಪ್ಯಾಡ್ ನಲ್ಲಿ ಬೆಳಿಗ್ಗೆ 10.30 ಗಂಟೆಗೆ ಹೆಲಿ ರೈಡ್ ಗೆ ಚಾಲನೆ ಸಿಗಲಿದೆ. ಸಂಜೆ 4.30 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸೆ. 27ರಂದು ಫಲಪುಷ್ಪ, ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ, ಆಹಾರ ಮೇಳ, ಮಹಿಳಾ ಕೌಶಲ ಮೇಳ ಮತ್ತು ಮಹಿಳೆಯರ ಬೈಕ್ ರೈಡ್ ಏರ್ಪಡಿಸಲಾಗಿದೆ.…
ಸರಗೂರು: ರಾಜ್ಯ ಸರಕಾರ ಸೆ.22 ರಿಂದ ಅ.7 ರವರೆಗೆ ನಡೆಸಲಿರುವ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಅಭಿಮಾನಿ ಹಾಗೂ ಅನುಯಾಯಿಗಳು ಧರ್ಮದ ಕಲಂನಲ್ಲಿ ಬೌದ್ಧ ಹಾಗೂ ಜಾತಿ ಕಾಲಂನಲ್ಲಿ ಹೊಲಯ ಎಂದು ಬರೆಸುವಂತೆ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ವಿನಂತಿಸಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮುದಾಯದ ಭವನದಲ್ಲಿ ಭಾನುವಾರದಂದು ಬಲಗೈ ಸಮಾಜದ ಪರಿಶಿಷ್ಟ ಜಾತಿ ಪೂರ್ವಭಾವಿ ಸಭೆಯಲ್ಲಿ ಧರ್ಮದಲ್ಲಿ ಬೌದ್ಧ ಎಂದು ನಮೋದಿಸಿ ಹಾಗೂ ಅ.14 ರಂದು ಬೌದ್ಧ ಸಮ್ಮೇಳನ ಕುರಿತು ಮಾತನಾಡಿದರು. ಪರಿಶಿಷ್ಟ ಜಾತಿಯವರು ಬೌದ್ಧ ಎಂದು ಬರೆಸಿದಲ್ಲಿ ಕೇಂದ್ರ ಸರಕಾರದ ಆದೇಶದಂತೆ ಮೀಸಲಾತಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈ ಬಗ್ಗೆ ದಲಿತಪರ ಸಂಘಟನೆಗಳು ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ಮಾಡಿ ಸಮೀಕ್ಷೆಯ ಕಲಂ 8 ರಲ್ಲಿನ 6ನೇ ಕ್ರಮ ಸಂಖ್ಯೆಯಲ್ಲಿ ಬೌದ್ಧ ಎಂದು ತಪ್ಪದೇ ಬರೆಸಲು ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು. ಇದೇ ತಿಂಗಳ 22 ರಿಂದ ಸಮೀಕ್ಷೆ ನಡೆಸಲಾಗುತ್ತಿದ್ದು, ಅಂಬೇಡ್ಕರ್ ಅವರ ಅನುಯಾಯಿಗಳಾದ ನಾವು ಅಂಬೇಡ್ಕರ್…
ತುಮಕೂರು: ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಡೀನ್ ಹಾಗೂ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಹೆಚ್. ನಾಗಭೂಷಣ ಅವರು ಮತ್ತೊಮ್ಮೆ ಜಾಗತಿಕ ಮಾನ್ಯತೆಯನ್ನು ಗಳಿಸಿದ್ದಾರೆ. ಅಮೆರಿಕದ ಸ್ಟಾನ್ಫೋರ್ಡ್ ವಿಶ್ವವಿದ್ಯಾಲಯ ಮತ್ತು ಎಲ್ಸೆವಿಯರ್ ಸಂಸ್ಥೆಗಳು ಸಂಯುಕ್ತವಾಗಿ ಪ್ರಕಟಿಸಿರುವ ವಿಶ್ವದ ಶ್ರೇಷ್ಠ 2% ವಿಜ್ಞಾನಿಗಳ ಪಟ್ಟಿಯಲ್ಲಿ ಅವರು ಸ್ಥಾನ ಪಡೆದಿದ್ದಾರೆ. ವಿಶೇಷವೆಂದರೆ, ಇದು ಡಾ. ನಾಗಭೂಷಣ ಅವರ ಸತತ ಆರನೇ ವರ್ಷವೂ ಈ ಪ್ರತಿಷ್ಠಿತ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಿರುವುದು. ಅವರ ಸಾಧನೆ ತುಮಕೂರು ವಿಶ್ವವಿದ್ಯಾಲಯಕ್ಕೂ, ದೇಶಕ್ಕೂ ಕೀರ್ತಿಯನ್ನು ತಂದಿದೆ. ಜಾಗತಿಕ ಮಟ್ಟದಲ್ಲಿ ಅತ್ಯಂತ ವಿಶ್ವಾಸಾರ್ಹವೆಂದು ಪರಿಗಣಿಸಲ್ಪಡುವ ಈ ಪಟ್ಟಿಯಲ್ಲಿ, ಒಟ್ಟು ಉಲ್ಲೇಖಗಳು (citations), H-ಇಂಡೆಕ್ಸ್, ಸಹಲೇಖಕರ ತಿದ್ದುಗೊಳಿಸಿದ ಅಳತೆಗಳು (co-authorship adjusted measures) ಮುಂತಾದ ಮಾನದಂಡಗಳ ಆಧಾರದ ಮೇಲೆ ವಿಜ್ಞಾನಿಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಇತ್ತೀಚಿನ ಪಟ್ಟಿಯಲ್ಲಿ, ಡಾ.ನಾಗಭೂಷಣ ಅವರು ವಿಶ್ವದ ಶ್ರೇಷ್ಠ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದು ವಿಶ್ವದ ಅತ್ಯಂತ ಪ್ರಭಾವಶಾಲಿ ಸಂಶೋಧಕರ ಪೈಕಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಭೌತಶಾಸ್ತ್ರ ಮತ್ತು ವಸ್ತು…
ಬೀದರ್: ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಂಪೌಂಡ್ ಗೆ ಕೆಕೆಆರ್ ಟಿಸಿ ಬಸ್ ವೊಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಇಂದು (ರವಿವಾರ) ಬೆಳಿಗ್ಗೆ ಬೀದರ್ ನಿಂದ ಮಹಾರಾಷ್ಟ್ರದ ಉದಗೀರ್ ಗೆ ಹೋಗುವ ಕೆಕೆಆರ್ ಟಿಸಿ ಬಸ್, ಬೀದರ್ ನಿಂದ ಪ್ರಯಾಣಿಕರನ್ನು ತುಂಬಿಕೊಂಡು ಉದಗೀರ್ ಕಡೆಗೆ ಹೊರಟಿತ್ತು. ಬಸ್ ನಿಲ್ದಾಣದ 6 ರಿಂದ 7 ಕಿ. ಮೀ. ದೂರದವರೆಗೆ ಬಂದ ಬಸ್ ಸಮಾಜ ಕಲ್ಯಾಣ ಇಲಾಖೆ ಕಚೇರಿಯ ಕಂಪೌಂಡ್ ಗೆ ಢಿಕ್ಕಿ ಹೊಡೆದಿದೆ. ಬಸ್ ನಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದರು. ಎಲ್ಲರೂ ಸುರಕ್ಷಿತರಾಗಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC